Author: kannadanewsnow09

ಬೆಂಗಳೂರು: ಗೋಲ್ಡನ್ ಚಾರಿಯಟ್ ರೈಲು ಯಾತ್ರೆ ಪುನಾರಾರಂಭವಾಗಿದ್ದು, ಡಿಸೆಂಬರ್ 21 ರಿಂದ 26 ರವರೆಗೆ ಜುವೆಲ್ ಆಫ್ ಸೌತ್ ಪ್ರವಾಸವು ಬೆಂಗಳೂರಿನಿಂದ ಆರಂಭಗೊಂಡು ಮೈಸೂರು, ಕಾಂಚಿಪುರಂ, ಮಹಾಬಲಿಪುರಂ, ತಂಜಾವೂರು, ಚೆಟ್ಟಿನಾಡು, ಕೊಚ್ಚಿ ಮಾರ್ಗವಾಗಿ ಸಂಚಾರ ಮಾಡಲಿದೆ. ಈ ರೈಲಿಗೆ 44 ಸುಸುಜ್ಜಿತ ಕ್ಯಾಬಿನ್‍ಗಳು, ಎನ್ ಸೂಟ್ ಸ್ನಾನಗೃಹ, ವೈಫೈ ಸಹ ಒಳಗೊಂಡಿದೆ. ರುಚಿ ಮತ್ತು ನಳಪಾಕ ಹೆಸರಿನ ಎರಡು ಹೋಟೆಲ್‍ಗಳು, ಲಾಂಜ್ ಬಾರ್, ಫಿಟ್‍ನೆಸ್ ಸೆಂಟರ್ ಇತರೆ ಸೌಕರ್ಯ ಕಲ್ಪಿಸಲಾಗಿದೆ. ಕರ್ನಾಟಕ ಮತ್ತು ದಕ್ಷಿಣ ಭಾರತದ ಸಾಂಸ್ಕೃತಿಕ ಶ್ರೀಮಂತಿಕೆಯನ್ನು ಇದು ಪ್ರತಿನಿಧಿಸಲಿದೆ. ಗೋಲ್ಡನ್ ಚಾರಿಯಟ್ ರೈಲು ಜಾಗತಿಕವಾಗಿ ಅತ್ಯುತ್ತಮ ಐಷಾರಾಮಿ ರೈಲು ಪ್ರಯಾಣಗಳಲ್ಲಿ ಒಂದಾಗಿದ್ದು ಅಂತಾರಾಷ್ಟ್ರೀಯ ಮೆಚ್ಚುಗೆಯನ್ನು ಗಳಿಸಲಿದೆ. https://twitter.com/KarnatakaVarthe/status/1870465103608553966 ಸುಪ್ರಸಿದ್ಧ ಗೋಲ್ಡನ್ ಚಾರಿಯಟ್ ರೈಲು ಪ್ರವಾಸವು ‘ಪ್ರೈಡ್ ಆಫ್ ಕರ್ನಾಟಕ’ ಹೆಸರಿನಲ್ಲಿ ಫೆಬ್ರವರಿ 1 ರಿಂದ 6 ರವರೆಗೆ ಸಂಚರಿಸಲಿದೆ. ಬೆಂಗಳೂರಿನಿಂದ ಆರಂಭಗೊಂಡು ನಂಜನಗೂಡು, ಮೈಸೂರು, ಹಳೇಬೀಡು, ಚಿಕ್ಕಮಗಳೂರು, ಹೊಸಪೇಟೆ, ಗೋವಾ ಮಾರ್ಗವಾಗಿ ಸಂಚಾರಿಸಿ ಬೆಂಗಳೂರಿಗೆ ಹಿಂತಿರುಗಲಿದೆ. ಪ್ರವಾಸದ ಬಗ್ಗೆ…

Read More

ಮುಂಬೈ: ವಂತಾರ ಎಂಬುದು ವನ್ಯಜೀವಿಗಳ ರಕ್ಷಣೆ ಹಾಗೂ ಪುನರ್ವಸತಿಗಾಗಿ ಸ್ಥಾಪಿಸಿರುವಂಥ ಸಂಸ್ಥೆಯಾಗಿದೆ. ಇದರ ಸ್ಥಾಪಕರು ಅನಂತ್ ಅಂಬಾನಿ. ವನ್ಯಜೀವಿಗಳ ರಕ್ಷಣೆ ಹಾಗೂ ನಂತರದಲ್ಲಿ ಅವುಗಳ ಪುನರ್ವಸತಿಗೆ ತುಂಬ ಒಳ್ಳೆಯ ವ್ಯವಸ್ಥೆ ಮಾಡಬೇಕು ಎಂಬ ದೃಷ್ಟಿಯಿಟ್ಟುಕೊಂಡು, ಬಹಳ ಕಾಳಜಿ ಮತ್ತು ಪ್ರೀತಿಯಿಂದ ಆರಂಭಿಸಿದ್ದು ‘ವಂತಾರ’. ಇದೀಗ ಆ ವಂತಾರದಿಂದ “ವಂತಾರಿಯನ್ ರೆಸ್ಕ್ಯೂ ರೇಂಜರ್ಸ್” ಎಂಬ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಯುವ ಮನಸ್ಸುಗಳು ಹಾಗೂ ಅವರ ಕುಟುಂಬವನ್ನು ಈ ಹೊಸ ಉಪಕ್ರಮದ ಮೂಲಕವಾಗಿ ಪ್ರೇರೇಪಿಸುವುದಕ್ಕೆ ಹಾಗೂ ಆಹ್ವಾನಿಸುವುದಕ್ಕೆ ಇದೊಂದು ಕಾರಣದಂತೆ ಆಗಿದೆ. ಮುಂಬೈನ ಹ್ಯಾಮ್ಲೇಸ್ ವಂಡರ್ ಲ್ಯಾಂಡ್ ಕಾರ್ನಿವಾಲ್ ಸಿದ್ಧವಾಗಿದ್ದು, ಇದೇ ಡಿಸೆಂಬರ್ 30ನೇ ತಾರೀಕಿನ ತನಕ ನಡೆಯುತ್ತದೆ. ಇಂಥ ಅದ್ಭುತವಾದ ಸಾಹಸವು ಮಕ್ಕಳು ಹಾಗೂ ಅವರ ಪೋಷಕರನ್ನು ಆಹ್ವಾನಿಸುತ್ತದೆ. ವನ್ಯಜೀವಿ ಸಂರಕ್ಷಣೆ ಮಾಡುವಂಥ ನಿಜವಾದ ಹೀರೋಗಳು ಎಷ್ಟೆಲ್ಲ ಶ್ರಮ ಹಾಕುತ್ತಾರೆ, ಸವಾಲುಗಳನ್ನು ಎದುರಿಸುತ್ತಾರೆ ಎಂಬುದನ್ನು ಅರಿತುಕೊಳ್ಳುವುದಕ್ಕೆ ಸಹಾಯ ಮಾಡುತ್ತದೆ. ಅಂದರೆ ಆ ಹುಡುಕಾಟ, ಸಹಾನುಭೂತಿ ಮತ್ತು ಕಾರ್ಯದಲ್ಲಿ ತೊಡಗಿಕೊಳ್ಳುವುದು ಈ ಪ್ರಯಾಣದ ಬಗ್ಗೆ ಸ್ವತಃ…

Read More

ಮಂಡ್ಯ: ಜಿಲ್ಲೆಯಲ್ಲಿ ನಡೆಯುತ್ತಿರುವಂತ ಸಾಹಿತ್ಯ ಸಮ್ಮೇಳನದಲ್ಲಿ ಮಳೆರಾಯನ ಅಡ್ಡಿಯಾಗಿದೆ. ಭಾರೀ ಮಳೆಯಿಂದಾಗಿ ಮಂಡ್ಯ ಸಾಹಿತ್ಯ ಸಮ್ಮೇಳನವೇ ಅಸ್ತವ್ಯಸ್ತಗೊಂಡಿದೆ. ಮಂಡ್ಯದಲ್ಲಿ ನಡೆಯುತ್ತಿರುವಂತ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ 2ನೇ ದಿನದಂದು ಸಂಜೆ 6.30ಗಂಟೆಗೆ ಶುರುವಾದಂತ ಮಳೆ, ಅರ್ಧಗಂಟೆಗೂ ಹೆಚ್ಚುಕಾಲ ಎಡಬಿಡದೇ ಸುರಿಯಿತು. ಮಳೆಯಿಂದಾಗಿ ವೇದಿಕೆಯ ಆಸುಪಾಸು ಸಂಪೂರ್ಣ ಕೆಲಸರು ಗದ್ದೆಯಂತಾಗಿದೆ. ಸಾಹಿತ್ಯ ಸಮ್ಮೇಳನಕ್ಕೆ ಮಳೆಯ ಸಿಂಚನದಿಂದ ಒಂದೆಡೆ ಅಡ್ಡಿಯಾದರೇ, ಮತ್ತೊಂದೆಡೆ ಬಿರುಬಿಸಿಲಿನಿಂದ ತತ್ತರಿಸಿದ್ದಂತ ಜನರಿಗೆ ತಂಪೆರೆದಂತೆ ಆಗಿದೆ. ಮಳೆಯಲ್ಲಿ ನನೆದು ಜನರು ಒದ್ದೆಯಾಗಿದ್ದಾರೆ. ಸನ್ಮಾನ, ಸಂಜೆಯ ಸಾಂಸ್ಕೃತಿಕ ಕಾರ್ಯಕ್ರಮ ವೀಕ್ಷಿಸಲು ಬಂದಿದ್ದಂತ ಜನರಿಗೆ ಭಾರೀ ಮಳೆಯಿಂದಾಗಿ ಅಡ್ಡಿಯಾದಂತೆ ಆಗಿದೆ. ವರದಿ: ಗಿರೀಶ್ ರಾಜ್, ಮಂಡ್ಯ https://kannadanewsnow.com/kannada/over-20-feared-trapped-as-six-storey-building-collapses-in-mohali/ https://kannadanewsnow.com/kannada/lecturer-brutally-assaulted-by-students-parents-in-sagar/ https://kannadanewsnow.com/kannada/over-20-feared-trapped-as-six-storey-building-collapses-in-mohali/

Read More

ಮೊಹಾಲಿ: ಪಂಜಾಬ್ನ ಮೊಹಾಲಿಯ ಸೊಹಾನಾ ಸೈನಿ ಬಾಗ್ ಬಳಿ ಶನಿವಾರ ಸಂಜೆ ಆರು ಅಂತಸ್ತಿನ ಕಟ್ಟಡ ಇದ್ದಕ್ಕಿದ್ದಂತೆ ಕುಸಿದಿದೆ. ಪ್ರಸ್ತುತ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿರುವುದರಿಂದ ಸುಮಾರು 20 ವ್ಯಕ್ತಿಗಳು ಅವಶೇಷಗಳ ಅಡಿಯಲ್ಲಿ ಸಿಲುಕಿರಬಹುದು ಎಂದು ವರದಿಗಳು ಸೂಚಿಸುತ್ತವೆ. ಪಕ್ಕದ ಕಟ್ಟಡದ ಅಡಿಪಾಯಕ್ಕಾಗಿ ಅತಿಯಾಗಿ ಅಗೆಯುವುದು ಕುಸಿತಕ್ಕೆ ಕಾರಣವಾಗಿದೆ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ. ಬಾಧಿತ ಕಟ್ಟಡವು ಮೇಲಿನ ಮಹಡಿಯಲ್ಲಿ ಜಿಮ್ ಮತ್ತು ಇತರ ಹಂತಗಳಲ್ಲಿ ವಿವಿಧ ಕಚೇರಿಗಳನ್ನು ಹೊಂದಿತ್ತು. ನೆಲಮಾಳಿಗೆಯ ಉತ್ಖನನದ ಸಮಯದಲ್ಲಿ ಕಟ್ಟಡವು ಅನಿರೀಕ್ಷಿತವಾಗಿ ಕುಸಿದಿದೆ ಎಂದು ಪ್ರತ್ಯಕ್ಷದರ್ಶಿಗಳು ವರದಿ ಮಾಡಿದ್ದಾರೆ. ಇದು ಘಟನಾ ಸ್ಥಳದಲ್ಲಿ ಭೀತಿಗೆ ಕಾರಣವಾಯಿತು. ತುರ್ತು ಸೇವೆಗಳು ಬಂದಿವೆ ಮತ್ತು ಅವಶೇಷಗಳ ಅಡಿಯಲ್ಲಿ ಸಿಲುಕಿರುವವರನ್ನು ಪತ್ತೆಹಚ್ಚಲು ಮತ್ತು ರಕ್ಷಿಸಲು ಶ್ರದ್ಧೆಯಿಂದ ಕೆಲಸ ಮಾಡುತ್ತಿವೆ. ರಕ್ಷಣಾ ಕಾರ್ಯಾಚರಣೆ ಮುಂದುವರೆದಂತೆ ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗಿದೆ. https://twitter.com/PTI_News/status/1870452040851501337 https://kannadanewsnow.com/kannada/important-information-for-those-who-applied-for-1000-va-posts-verification-of-original-documents-to-begin-from-january-1/ https://kannadanewsnow.com/kannada/lecturer-brutally-assaulted-by-students-parents-in-sagar/ https://kannadanewsnow.com/kannada/breaking-govt-school-headmistress-brutally-murdered-in-gadag/

Read More

ಬೆಂಗಳೂರು: ಕಂದಾಯ ಇಲಾಖೆಯಲ್ಲಿ ಖಾಲಿ ಇದ್ದಂತ 1000 ಗ್ರಾಮ ಆಡಳಿತಾಧಿಕಾರಿ ನೇಮಕಾತಿಗೆ ಸ್ಪರ್ಧಾತ್ಮಕ ಪರೀಕ್ಷೆಯ ನಂತ್ರ ಕೀ ಉತ್ತರ, ಕಟ್ ಆಫ್ ಅಂಕ, ತಾತ್ಕಾಲಿಕ ಆಯ್ಕೆ ಪಟ್ಟಿ, ಅಂತಿಮ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗಿತ್ತು. ಈ ಬಳಿಕ ಈಗ 1:3 ಅನುಪಾತದಡಿ ಮೂಲ ದಾಖಲಾತಿಗಳ ಪರಿಶೀಲನೆಯನ್ನು ಜ.6ರಿಂದ ಆರಂಭಗೊಳ್ಳಲಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಶಿವಮೊಗ್ಗದ ಜಿಲ್ಲಾಧಿಕಾರಿ ಹಾಗೂ ಅಧ್ಯಕ್ಷರು, ಗ್ರಾಮ ಆಡಳಿತ ಅಧಿಕಾರಿ, ನೇರನೇಮಕಾತಿ ಆಯ್ಕೆ ಸಮಿತಿಯವರು ಮಾಹಿತಿ ಹಂಚಿಕೊಂಡಿದ್ದಾರೆ. ಅದರಲ್ಲಿ ಕಂದಾಯ ಇಲಾಖೆಯಲ್ಲಿ ಖಾಲಿ ಇರುವ 1000 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳನ್ನು ಸ್ಪರ್ಧಾತ್ಮಕ ಪರೀಕ್ಷೆಯ ಮುಖೇನ ನೇಮಕಾತಿ ಮಾಡಲು ಅಧಿಸೂಚನೆ ಹೊರಡಿಸಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿರುತ್ತದೆ. ಅದರಂತೆ 1000 ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಸಲ್ಲಿಸಿರುವ ಅಭ್ಯರ್ಥಿಗಳಿಗೆ ದಿನಾಂಕ 29-09-2024, 26-10-2024 ಹಾಗೂ 27-10-2024 ರಂದು ಕಡ್ಡಾಯ ಕನ್ನಡ ಹಾಗೂ ಪತ್ರಿಕೆ-1 ಮತ್ತು ಪತ್ರಿಕೆ-2ರ ಸ್ಪರ್ಧಾತ್ಮಕ ಪರೀಕ್ಷೆಯನ್ನು ನಡೆಸಿ ಫಲಿತಾಂಶ ಪ್ರಕಟಿಸಲಾಗಿದೆ. ಅದರಂತೆ ಶಿವಮೊಗ್ಗ…

Read More

ಲವಂಗದಿಂದ ಈ ಪರಿಹಾರವನ್ನು ಮಾಡಿಕೊಳ್ಳಿ ಮೂರು ಶುಕ್ರ ವಾರ ಗಳ ಕಾಲ ಈ ಪರಿಹಾರವನ್ನು ನೀವು ಪಾಲಿಸಿಕೊಂಡು ಬಂದಿದೆ ಅದರೆ ನಿಮ್ಮ ಜೀವನದಲ್ಲಿ ಎದುರಾಗುತ್ತ ಇರುವಂತಹ ಹಣಕಾಸಿಗೆ ಸಂಬಂಧಪಟ್ಟ ವಿಚಾರಗಳು ಬೇಗ ಪರಿಹರವಾಗುತ್ತದೆ. ಪಂಡಿತ್  ವಿದ್ಯಾಧರ್ ನಕ್ಷತ್ರಿ ಪ್ರಧಾನ ಅರ್ಚಕರು ಹಾಗೂ ಮಾಂತ್ರಿಕರು 9686268564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತುಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇ ಘೋರ ನಿಗೂಢ ಗುಪ್ತಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ಶ್ರೀ ಕ್ಷೇತ್ರ ಕಟೀಲು ರಕ್ತೇಶ್ವರೀ ದೇವಿಯ ವಿಶೇಷ ಪೂಜಾದೈವಿಕ ವಿಧಿವಿಧಾನದಿಂದ ಪರಿಹಾರ ತಿಳಿಸುತ್ತಾರೆ ಶ್ರೀ ವಿದ್ಯಾಧರ್ ನಕ್ಷತ್ರಿ ಪ್ರಧಾನ್ ತಾಂತ್ರಿಕ್ 9686268564 ಅದು ಹೇಗೆ ಅಂತೀರಾ ಈ ಲವಂಗಕ್ಕೆ ಬಹಳ ವಿಶೇಷವಾದ ಶಕ್ತಿ ಇದೆ ಹಾಗೂ ದುಷ್ಟಶಕ್ತಿಯನ್ನು ದೂರ ಮಾಡುವಂತಹ…

Read More

ಬೆಂಗಳೂರು: ವಕ್ಫ್ ಮಂಡಳಿ ಹಿಂದೂಗಳು ಹಾಗೂ ರೈತರ ಆಸ್ತಿ ಕಬಳಿಕೆ ಮಾಡುತ್ತಿರುವ ಬಗ್ಗೆ ಸದನದಲ್ಲಿ ದಾಖಲೆ ಸಮೇತ ಮಾತನಾಡಿದ್ದು, ಈ ಹೋರಾಟಕ್ಕೆ ತಕ್ಕ ಮಟ್ಟಿನ ಜಯ ಸಿಕ್ಕಿದೆ. ಬಿಜೆಪಿಯ ಹೋರಾಟಕ್ಕೆ ಮಣಿದ ಸರ್ಕಾರ ಸಮಿತಿ ರಚನೆಗೆ ತೀರ್ಮಾನಿಸಿದೆ. ಜೊತೆಗೆ ಬಾಣಂತಿಯರ ಸಾವಿನ ಪ್ರಕರಣವನ್ನೂ ನ್ಯಾಯಾಂಗ ತನಿಖೆಗೆ ವಹಿಸಲಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಹೇಳಿದರು. ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬೆಳಗಾವಿ ಅಧಿವೇಶನ ಹತ್ತು ದಿನ ನಿಗದಿಯಾಗಿತ್ತು. ಆದರೆ ಕನ್ನಡ ಸಾಹಿತ್ಯ ಸಮ್ಮೇಳನ ಇದೆ ಎಂದು ಅದನ್ನು 9 ದಿನಕ್ಕೆ ಇಳಿಕೆ ಮಾಡಲಾಯಿತು. ಬಸವಣ್ಣನವರ ವರ್ಣಚಿತ್ರ ಅನಾವರಣ ಕಾರ್ಯಕ್ರಮದಲ್ಲಿ ಒಂದು ದಿನ ಕಳೆಯಿತು. ಉಳಿದಿದ್ದು ಏಳು ದಿನ ಮಾತ್ರ. ಮಾಜಿ ಸಿಎಂ ಎಸ್.ಎಂ.ಕೃಷ್ಣ ಅವರ ನಿಧನದಿಂದ ಎರಡು ದಿನ ಸದನ ನಡೆಯಲಿಲ್ಲ. ಉಳಿದಂತೆ ಬಿಜೆಪಿಗೆ ಚರ್ಚೆಗೆ ಕೇವಲ ಐದು ದಿನ ದೊರೆತಿದ್ದು, ವಕ್ಫ್‌ ಬೋರ್ಡ್, ಬಾಣಂತಿಯರ ಸಾವು, ಅನುದಾನ ತಾರತಮ್ಯ, ಉತ್ತರ ಕರ್ನಾಟಕದ ಸಮಸ್ಯೆಗಳಿಗೆ ಸಂಬಂಧಿಸಿದಂತೆ ಚರ್ಚಿಸಿ ಸರ್ಕಾರವನ್ನು ಕಟ್ಟಿ ಹಾಕುವ ಕೆಲಸ…

Read More

ಬೆಂಗಳೂರು: ಕುಂಭಮೇಳದ ಸಮಯದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿವಾರಿಸಲು ನೈಋತ್ಯ ರೈಲ್ವೆಯು ಮೈಸೂರಿನಿಂದ ಪ್ರಯಾಗ್ ರಾಜ್ ಗೆ ವಿಶೇಷ ಏಕಮುಖ ಎಕ್ಸ್ ಪ್ರೆಸ್ ರೈಲು (06215) ಓಡಿಸಲಿದೆ. ರೈಲು ಸಂಖ್ಯೆ 06215 ಮೈಸೂರು-ಪ್ರಯಾಗ್ ರಾಜ್ ಒನ್-ವೇ ಕುಂಭ ವಿಶೇಷ ಏಕಮುಖ ಎಕ್ಸ್ ಪ್ರೆಸ್ ರೈಲು ಡಿಸೆಂಬರ್ 23,2024 (ಸೋಮವಾರ) 00:30 ಗಂಟೆಗೆ ಮೈಸೂರಿನಿಂದ ಹೊರಟು, ಬುಧವಾರ 3:00 ಗಂಟೆಗೆ ಪ್ರಯಾಗ್ ರಾಜ್ ಜಂಕ್ಷನ್ ತಲುಪಲಿದೆ. ಮಾರ್ಗಮಧ್ಯದಲ್ಲಿ, ಈ ರೈಲು ಮಂಡ್ಯಾ, ಕೆಎಸ್ಆರ್. ಬೆಂಗಳೂರು, ಯಶವಂತಪುರ, ತುಮಕೂರು, ಅರಸೀಕೆರೆ, ಕಡೂರು, ಚಿಕ್ಕಜಾಜೂರು,ದಾವಣಗೆರೆ, ಎಸ್ಎಂಎಂ ಹಾವೇರಿ, ಎಸ್ಎಸ್ಎಸ್. ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ಘಟಪ್ರಭಾ, ಮಿರಜ್, ಸಾಂಗ್ಲಿ, ಕರಾಡ್, ಪುಣೆ, ದೌಂಡ್ ಚೋರ್ಡ್ ಲೈನ್, ಅಹ್ಮದ್ನಗರ, ಮನ್ಮಡ, ಭುಸಾವಲ್, ಖಾಂಡ್ವಾ, ತಲ್ವಾಡಿಯಾ, ಛಾನೆರಾ, ಖಿರ್ಕಿಯಾ, ಹರ್ದಾ, ಬನಪುರ, ಇಟಾರ್ಸಿ, ಪಿಪರಿಯಾ, ನರಸಿಂಗಪುರ, ಜಬಲ್ಪುರ, ಕಟ್ನಿ, ಮೈಹಾರ್, ಸತ್ನಾ ಮತ್ತು ಮಾಣಿಕ್ಪುರ ನಿಲ್ದಾಣಗಳಲ್ಲಿ ನಿಲ್ಲಲಿದೆ. ಈ ರೈಲಿನ ಆಗಮನ ಮತ್ತು ನಿರ್ಗಮನದ ಸಮಯವನ್ನು ತಿಳಿಯಲು, ಪ್ರಯಾಣಿಕರು ಭಾರತೀಯ ರೈಲ್ವೆಯ…

Read More

ಕುವೈತ್: ಎರಡು ದಿನಗಳ ಕುವೈತ್ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ಮಾಜಿ ಭಾರತೀಯ ವಿದೇಶಾಂಗ ಸೇವೆ (ಐಎಫ್ಎಸ್) ಅಧಿಕಾರಿ 101 ವರ್ಷದ ಮಂಗಲ್ ಸೈನ್ ಹಂಡಾ ಅವರನ್ನು ಹೃದಯಪೂರ್ವಕವಾಗಿ ಭೇಟಿಯಾದರು. ಹಂಡಾ ಅವರ ಮೊಮ್ಮಗಳು ಸಾಮಾಜಿಕ ಮಾಧ್ಯಮದಲ್ಲಿ ಮನವಿ ಮಾಡಿದ ನಂತರ ಸಂವಾದ ಸಾಧ್ಯವಾಯಿತು. ಕುವೈತ್ ಎಮಿರ್ ಶೇಖ್ ಮೆಶಾಲ್ ಅಲ್-ಅಹ್ಮದ್ ಅಲ್-ಜಾಬರ್ ಅಲ್-ಸಬಾಹ್ ಅವರ ಆಹ್ವಾನದ ಮೇರೆಗೆ ಪ್ರಧಾನಿ ಮೋದಿಯವರ ಕುವೈತ್ ಭೇಟಿ 43 ವರ್ಷಗಳಲ್ಲಿ ಮೊದಲ ಬಾರಿಗೆ ಭಾರತೀಯ ಪ್ರಧಾನಿಯಾಗಿದೆ. ಶನಿವಾರ ಕುವೈತ್ಗೆ ಬಂದಿಳಿದ ಪ್ರಧಾನಿ ಮೋದಿ ಭಾರತೀಯ ಸಮುದಾಯದೊಂದಿಗೆ ಸಂವಾದ ನಡೆಸಿದರು. ಆಗಮಿಸಿದ ನಂತರ, ಪಿಎಂ ಮೋದಿ ಹೋಟೆಲ್ ಗೆ ಭೇಟಿ ನೀಡಿದರು, ಅಲ್ಲಿ ಅವರು ಮಂಗಲ್ ಸೈನ್ ಹಂಡಾ ಅವರನ್ನು ವಿನಯದಿಂದ ಭೇಟಿಯಾದರು. ಹಂಡಾ ಅವರ ಮೊಮ್ಮಗಳು ಶ್ರೇಯಾ ಜುನೇಜಾ ಅವರು ಎಕ್ಸ್ (ಹಿಂದೆ ಟ್ವಿಟರ್) ನಲ್ಲಿ ಮಾಡಿದ ವಿನಂತಿಯ ಮೇರೆಗೆ ಈ ಸಭೆಯನ್ನು ಆಯೋಜಿಸಲಾಗಿತ್ತು, ಅವರು ತಮ್ಮ ಅಜ್ಜನನ್ನು ಪ್ರಧಾನಿಯ “ದೊಡ್ಡ ಅಭಿಮಾನಿ”…

Read More

ಧಾರವಾಡ: ಇಂದಿನ ರಾಜಕಾರಣ ಬಹಳ ಕಲುಷಿತಗೊಂಡು, ದ್ವೇಷದ ರಾಜಕಾರಣ ಹೆಚ್ಚಿದೆ. ಹಿಂದಿನ ಆದರ್ಶದ ರಾಜಕಾರಣಿಗಳು ಇಲ್ಲ. ರಾಜಕಾರಣ ಶುದ್ಧೀಕರಣಗೊಳ್ಳುವ ಅಗತ್ಯವಿದೆ ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದರು. ನಗರದ‌ ಕರ್ನಾಟಕ ವಿದ್ಯಾವರ್ಧಕ ಸಂಘದ ನಾಡೋಜ ಡಾ.ಪಾಟೀಲ ಪುಟ್ಟಪ್ಪ ಭವನದಲ್ಲಿ ಶುಕ್ರವಾರ ನಡೆದ ಪುಸ್ತಕ ಬಿಡುಗಡೆ ಸಮಾರಂಭದಲ್ಲಿ ಪತ್ರಕರ್ತರ ಶಂಕರ ಪಾಗೋಜಿ ವಿರಚಿತ ‘ಗಾಂಧಿ ಮಂದಿರ’ ಕಥಾ ಸಂಕಲನ ಬಿಡುಗಡೆಗೊಳಿಸಿ ಅವರು ಮಾತನಾಡಿದರು. ಸಾರ್ವಜನಿಕರು ಎಲಿಯವರೆಗೂ ಹಣ ಪಡೆದು ಓಟ್ ಹಾಕುತ್ತಿರೋ, ಅಲ್ಲಿಯವರೆಗೂ ವ್ಯವಸ್ಥೆಯನ್ನು ಬದಲಾಣೆ ಮಾಡುವುದು ಅಸಾಧ್ಯ. ಈ ವ್ಯವಸ್ಥೆಯೊಂದಿಗೆ ಬದುಕುವ ಸಂದಿಗ್ಧೆ ಎದುರಾಗಿದೆ. ಹೀಗಾಗಿ ಹಣ ಪಡೆದು ಮತ ಹಾಕುವ ಕೆಟ್ಟ ಪ್ರವೃತ್ತಿ ಬಿಡಬೇಕು ಎಂದು ನೆರದ ಜನರಿಗೆ ಸಲಹೆ ನೀಡಿದರು. ಜಗತ್ತಿನಲ್ಲಿ ಮಹಾತ್ಮ ಗಾಂಧೀಜಿ ಅತ್ಯಂತ ಶ್ರೇಷ್ಠ ವ್ಯಕ್ತಿ. ತಮ್ಮ ಮೈಮೇಲೆ ಬಟ್ಟೆ ಹಾಕದೆ, ಇಡೀ ದೇಶಕ್ಕಾಗಿ ಜೀವನ ಮುಡುಪು ಇಟ್ಟವರು. ಇಂತಹ ಅನೇಕ ಮಹನೀಯರ ಹೋರಾಟದ ಫಲದಿಂದ ಬಂದ ಸ್ವಾತಂತ್ರ್ಯ ದುರ್ಬಳಕೆಗೆ ವಿಷಾದಿಸಿದರಲ್ಲೇ, ಯುವಜನ…

Read More