Author: kannadanewsnow09

ಬೆಂಗಳೂರು: ಕೋವಿಡ್ ಭ್ರಷ್ಟಾಚಾರಗಳ ಕುರಿತು ಮೈಕಲ್ ಕುನ್ಹಾ ಅವರ ಆಯೋಗದ ವರದಿಯಲ್ಲಿ ಮಾಜಿ ಸಿಎಂ ಬಿಎಸ್ ವೈ ಹಾಗೂ ಶ್ರೀರಾಮುಲು ವಿರುದ್ಧ ಪ್ರಾಸಿಕ್ಯೂಷನ್ ಗೆ ಶಿಫಾರಸ್ಸು ಮಾಡಿರುವ ಬೆನ್ನಲ್ಲೇ ಜಸ್ಟೀಸ್ ಕುನ್ಹಾ ಅವರನ್ನ ಕಾಂಗ್ರೆಸ್ ಏಜೇಂಟ್ ಎಂದು ಕರೆದ ಪ್ರಲ್ಹಾದ್ ಜೋಶಿ ಹೇಳಿಕೆ ತೀವ್ರ ಖಂಡನೆ ವ್ಯಕ್ತವಾಗಿದೆ. ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ವಿರುದ್ಧ ಕಾನೂನು ಕ್ರಮಕ್ಕೆ ಒತ್ತಾಯಿಸಿ ರಾಜ್ಯ ಸರ್ಕಾರದ ಮುಖ್ಯ ವಕ್ತಾರ ದಿನೇಶ್ ಗುಂಡೂರಾವ್ ಹಾಗೂ ಕಂದಾಯ ಸಚಿವ ಕೃಷ್ಣಬೈರೇಗೌಡ ಅವರು ಇಂದು ರಾಜ್ಯಪಾಲರಿಗೆ ದೂರು ಸಲ್ಲಿಸಿದ್ದಾರೆ. ದೂರು ಸಲ್ಲಿಕೆ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ನಿವೃತ್ತ ನ್ಯಾಯಮೂರ್ತಿಯಾಗಿ ಜಸ್ಟೀಸ್ ಕುನ್ಹಾ ಅವರು ಅತ್ಯಂತ ಪ್ರಮಾಣಿಕವಾಗಿ ಕಾರ್ಯನಿರ್ವಹಿಸಿದವರು. ಗೌರವಾನ್ವಿತರ ಬಗ್ಗೆ ಕೇಂದ್ರ ಸಚಿವರಾಗಿ ಪ್ರಲ್ಹಾದ್ ಜೋಶಿ ವಯಕ್ತಿಕ ನಿಂದನೆ ಮಾಡಿ ಮಾತನಾಡಿದ್ದಾರೆ. ಜವಾಬ್ದಾರಿಯುತ ಸ್ಥಾನದಲ್ಲಿದ್ದು ಪ್ರಲ್ಹಾದ್ ಜೋಶಿ ಅವರು ಬೇಜವಾಬ್ದಾರಿ ಹೇಳಿಕೆ ನೀಡಿದ್ದಾರೆ. ತಮ್ಮ ಹೇಳಿಕೆಗೆ ಪ್ರಲ್ಹಾದ್ ಜೋಶಿ ಕ್ಷಮೆ ಕೇಳಬೇಕು ಎಂದು ಆಗ್ರಹಿದರು.…

Read More

ಬೆಂಗಳೂರು: ದಿನಾಂಕ 13.11.2024 (ಬುಧವಾರ) ಬೆಳಿಗ್ಗೆ 10:30 ಗಂಟೆಯಿಂದ ಮಧ್ಯಾಹ್ನ 03:30 ಗಂಟೆಯವರೆಗೆ “66/11 ಕೆ.ವಿ ಹೆಣ್ಣೂರು ರೋಡ ಉಪ-ಕೇಂದ್ರ” ದಲ್ಲಿ ತುರ್ತುನಿರ್ವಹಣಾ ಕೆಲಸಗಳನ್ನು ನಿರ್ವಹಿಸುವುದರಿಂದ ಈ ಕೆಳಗಿನ ಸ್ಥಳಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗುವುದು. ವಿದ್ಯುತ್ ವ್ಯತ್ಯಯವಾಗುವ ಸ್ಥಳಗಳು ಹೆಣ್ಣೂರು ಬಂಡೆ, ಸಮುದ್ರಿಕಾ ಎನ್‌ಕ್ಲೇವ್, ಗ್ರೇಸ್ ಗಾರ್ಡನ್, ಕ್ರಿಸ್ಟ್ ಜಯಂತಿ ಕಾಲೇಜ್, ಕೆ.ನಾರಾಯಣಪುರ, ಬಿಳಿಶಿವಾಲೆ, ಆಶಾ ಟೌನ್‌ಶಿಪ್, ಐಶ್ವರ್ಯ ಲೇಔಟ್, ಮಾರುತಿ ಟೌನ್‌ಶಿಪ್, ನಗರಗಿರಿ ಟೌನ್‌ಶಿಪ್, ಕೆ.ನಾರಾಯಣಪುರ ಕ್ರಾಸ್, ಬಿ.ಡಿ.ಎಸ್. ಗಾರ್ಡನ್, ಕೊತನೂರು, ಪಟೇಲ್ ರಾಮಯ್ಯ ಲೇಔಟ್, ಅಂಜನಪ್ಪ ಲೇಔಟ್, ಸಿ.ಎಸ್.ಐ ಗೇಟ್, ಬೈರತಿ ಕ್ರಾಸ್, ಬೈರತಿ ಹಳ್ಳಿ, ಎವರ್ ಗ್ರೀನ್ ಲೇಔಟ್, ಕನಕ ಶ್ರೀ ಲೇಔಟ್, ಗೆದ್ದಲ ಹಳ್ಳಿ, ಬ್ಲೆಸ್ಸಿಂಗ್ ಗಾರ್ಡನ್, ಮಂತ್ರಿ ಅಪಾರ್ಟ್ಮೆಂಟ್, ಹಿರೇಮಠ ಲೇಔಟ್, ಟ್ರಿನಿಟಿ ಫಾರ್ಚೂನ್, ಮೈಕಲ್ ಸ್ಕೂಲ್ ವ್ಯಾಪ್ತಿಯಲ್ಲಿ ಕರೆಂಟ್ ಇರೋದಿಲ್ಲ. ಇನ್ನೂ ಬಿ.ಹೆಚ್.ಕೆ. ಇಂಡಸ್ಟ್ರೀಸ್, ಜಾನಕೀ ರಾಮ್ ಲೇಔಟ್, ವಡ್ಡರ ಪಾಳ್ಯ, ಅನುಗ್ರಹ ಲೇಔಟ್, ಕಾವೇರಿ ಲೇಔಟ್, ಆತ್ಮ ವಿದ್ಯಾನಗರ, ಬೈರತಿ ಹಳ್ಳಿ,…

Read More

ಶಿವಮೊಗ್ಗ: ಹಾವೇರಿಯ ಸಿಇಎನ್ ಪೊಲೀಸ್ ಠಾಣೆಯಲ್ಲಿ ಕನ್ನಡ ನ್ಯೂಸ್ ಇ-ಪೇಪರ್ ಸಂಪಾದಕರ ವಿರುದ್ಧ ಸುಮೋಟೋ ಕೇಸ್ ದಾಖಲಿಸಲಾಗಿತ್ತು. ಈ ಪ್ರಕರಣವನ್ನು ಹಿಂಪಡೆಯುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘ, ಸಾಗರ ತಾಲ್ಲೂಕು ಶಾಖೆಯಿಂದ ಡಿವೈಎಸ್ಪಿ ಮೂಲಕ ಗೃಹಸಚಿವರಿಗೆ ಮನವಿ ಮಾಡಲಾಯಿತು. ಇಂದು ಶಿವಮೊಗ್ಗ ಜಿಲ್ಲೆಯ ಸಾಗರ ನಗರದ ಡಿವೈಎಸ್ಪಿ ಗೋಪಾಲಕೃಷ್ಣ ಟಿ ನಾಯಕ್ ಅವರನ್ನು ಭೇಟಿ ಮಾಡಿದಂತ ಸಾಗರ ತಾಲ್ಲೂಕು ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ತಾಲ್ಲೂಕು ಶಾಖೆಯ ಸದಸ್ಯರು, ನಮ್ಮ ಸಂಘದ ಸಕ್ರೀಯ ಸದಸ್ಯ, ಕನ್ನಡ ನ್ಯೂಸ್ ಇ-ಪೇಪರ್ ಸಂಪಾದಕ ವಸಂತ ಅವರ ಮೇಲೆ ಹಾವೇರಿಯ ಸಿಇಎನ್ ಠಾಣೆಯಲ್ಲಿ ಸುಮೋಟೋ ಪ್ರಕರಣ ದಾಖಲಿಸಲಾಗಿದೆ. ಕನ್ನಡ ನ್ಯೂಸ್ ಇ-ಪೇಪರ್ ನಲ್ಲಿ ಮೃತ ರೈತನ ಸಂಬಂಧಿಕರು ನೀಡಿದಂತ ಹೇಳಿಕೆಯನ್ನು, ನೀಡಿದ ಮನವಿ ಆಧರಿಸಿ ಸುದ್ದಿಯನ್ನು ಪ್ರಕಟಿಸಲಾಗಿದೆ. ಈ ಕೂಡಲೇ ನಮ್ಮ ಸಂಘದ ಸದಸ್ಯ ವಸಂತ ಮೇಲಿನ ಪ್ರಕರಣವನ್ನು ತಕ್ಷಣವೇ ಹಿಂಪಡೆಯುವಂತೆ ಮನವಿಯ ಮೂಲಕ ಒತ್ತಾಯಿಸಲಾಯಿತು. ಈ ವೇಳೆ ಮಾತನಾಡಿದಂತ ಸಾಗರ…

Read More

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಹೆಚ್ಚು ಬಾಕಿ ಆಸ್ತಿ ತೆರಿಗೆ ಉಳಿಸಿಕೊಂಡಿರುವ ವಸತಿಯೇತರ ಕಟ್ಟಡಗಳಿಗೆ ಬೀಗ ಮುದ್ರೆ ಹಾಕಿ ಬಾಕಿ ವಸೂಲಿ ಮಾಡಲು ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಪಾಲಿಕೆ ವ್ಯಾಪ್ತಿಯಲ್ಲಿ ವಿವಿಧ ವಿಷಯಗಳಿಗೆ ಸಂಬಂಧಿಸಿದಂತೆ ಇಂದು ಮಲ್ಲೇಶ್ವರಂ ಐಪಿಪಿ ಸಭಾಂಗಣ ಕೊಠಡಿಯಲ್ಲಿ ನಡೆದ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಹೆಚ್ಚು ಬಾಕಿ ಉಳಿಸಿಕೊಂಡಿರುವ ಸುಸ್ತಿದಾರರು ಹಾಗೂ ಪರಿಷ್ಕರಣೆ ಪ್ರಕರಣಗಳಿಗೆ ಸಂಬಂಧಿಸಿದಂತೆ ಆಯಾ ವಲಯ ವ್ಯಾಪ್ತಿಯಲ್ಲಿ ಸೂಕ್ತ ಕ್ರಮಗಳನ್ನು ಕೈಗೊಂಡು ಬಾಕಿ ಆಸ್ತಿ ತೆರಿಗೆಯನ್ನು ವಸೂಲಿ ಮಾಡಲು ಸೂಚನೆ ನೀಡಿದರು. ಆಯಾ ವಲಯಗಳ ಸಹಾಯಕ ಕಂದಾಯ ಅಧಿಕಾರಿ ವ್ಯಾಪ್ತಿವಾರು ಸಭೆ ನಡೆಸಿ, ಉಪ ವಿಭಾಗಗಳ ವ್ಯಾಪ್ತಿಯಲ್ಲಿ ಹೆಚ್ಚು ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿರುವ ಹಾಗೂ ಪರಿಷ್ಕರಣೆ ಪ್ರಕರಣಗಳ ಪಟ್ಟಿಯ ಅನುಸಾರ ಬಾಕಿ ಆಸ್ತಿ ತೆರಿಗೆ ವಸೂಲಿ ಮಾಡಲು ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಳ್ಳಲು ಸೂಚನೆ ನೀಡಿದರು. ಒಟಿಎಸ್ ಯೋಜನೆ ಬಗ್ಗೆ ಅರಿವು ಮೂಡಿಸಿ: ಬಿಬಿಎಂಪಿ ವ್ಯಾಪ್ತಿಯಲ್ಲಿ ಒಂದು ಬಾರಿ…

Read More

ಬೆಂಗಳೂರು: ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳಿಗೆ ನವೆಂಬರ್.13ರಂದು ಉಪ ಚುನಾವಣೆ ನಡೆಯಲಿದೆ. ಇಂದು ಬಹಿರಂಗ ಪ್ರಚಾರಕ್ಕೆ ಕೊನೆಯ ದಿನವಾಗಿದ್ದು, ತೆರೆ ಬಿದ್ದಿದೆ. ನಾಳೆಯಿಂದ 2 ದಿನಗಳ ಕಾಲ ಮನೆ ಮನೆ ಪ್ರಚಾರಕ್ಕೆ ಮಾತ್ರವೇ ಅವಕಾಶವಿದೆ. ರಾಜ್ಯದ ಸಂಡೂರು, ಶಿಗ್ಗಾಂವಿ ಹಾಗೂ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರಗಳಿಗೆ ನವೆಂಬರ್.13ರಂದು ಉಪ ಚುನಾವಣೆಗೆ ಮತದಾನ ನಡೆಯಲಿದೆ. ಮತದಾನಕ್ಕೆ ಅನುಕೂಲ ಕಲ್ಪಿಸಲು ರಾಜ್ಯ ಸರ್ಕಾರದಿಂದ ಎಲ್ಲಾ ನೌಕರರಿಗೆ ವೇತನ ಸಹಿತ ರಜೆಯನ್ನು ನೀಡಿ ಆದೇಶಿಸಿದೆ. ಇಂದು ಉಪ ಚುನಾವಣೆಯ ಬಹಿರಂಗ ಪ್ರಚಾರಕ್ಕೆ ಕೊನೆಯ ದಿನವಾಗಿತ್ತು. ರಾಜಕೀಯ ನಾಯಕರು ಅಬ್ಬರದ ಪ್ರಚಾರವನ್ನು ಮಾಡಿದರು. ಇದೀಗ ಬಹಿರಂಗ ಪ್ರಚಾರಕ್ಕೆ ತೆರೆ ಬಿದ್ದಿದ್ದು, ನಾಳೆಯಿಂದ ಮನೆ ಮನೆ ಪ್ರಚಾರಕ್ಕೆ ಮಾತ್ರವೇ ಅವಕಾಶವಿದೆ. ನಾಳೆಯಿಂದ ರಾಜಕೀಯ ನಾಯಕರು ಎರಡು ದಿನಗಳ ಕಾಲ ಮನೆ ಮನೆಗೆ ಭೇಟಿ ನೀಡಿ, ಕ್ಷೇತ್ರದ ಮತದಾರರಲ್ಲಿ ಮತಯಾಚನೆಯನ್ನು ಮಾಡಲಿದ್ದಾರೆ. https://kannadanewsnow.com/kannada/jet-airways-founder-naresh-goyal-granted-medical-bail-in-money-laundering-case/ https://kannadanewsnow.com/kannada/kumaraswamy-deve-gowda-making-personal-allegations-against-cm-deputy-cm-chaluvarayaswamy/

Read More

ನವದೆಹಲಿ: ಮನಿ ಲಾಂಡರಿಂಗ್ ಪ್ರಕರಣದಲ್ಲಿ ಆರೋಪಿಯಾಗಿರುವ ಜೆಟ್ ಏರ್ವೇಸ್ ಸಂಸ್ಥಾಪಕ ನರೇಶ್ ಗೋಯಲ್ ಅವರಿಗೆ ಬಾಂಬೆ ಹೈಕೋರ್ಟ್ ಸೋಮವಾರ ವೈದ್ಯಕೀಯ ಜಾಮೀನು ನೀಡಿದೆ. ಈ ವರ್ಷದ ಮೇ ತಿಂಗಳಲ್ಲಿ ನ್ಯಾಯಮೂರ್ತಿ ಎನ್.ಜೆ.ಜಮಾದಾರ್ ಅವರ ಏಕಸದಸ್ಯ ಪೀಠವು ವೈದ್ಯಕೀಯ ಆಧಾರದ ಮೇಲೆ ಗೋಯಲ್ ಅವರಿಗೆ ಮಧ್ಯಂತರ ಜಾಮೀನು ನೀಡಿತು. ನ್ಯಾಯಮೂರ್ತಿ ಜಮಾದಾರ್ ಸೋಮವಾರ ಮಧ್ಯಂತರ ಆದೇಶವನ್ನು ಶಾಶ್ವತಗೊಳಿಸಿದರು. ಗೋಯಲ್ (75) ಕ್ಯಾನ್ಸರ್ ನಿಂದ ಬಳಲುತ್ತಿದ್ದು, ಚಿಕಿತ್ಸೆ ಪಡೆಯಲು ಜಾಮೀನು ಕೋರಿದ್ದರು. ಜಾರಿ ನಿರ್ದೇಶನಾಲಯ (ಇಡಿ) ಅವರ ಮನವಿಯನ್ನು ವಿರೋಧಿಸಿತ್ತು ಮತ್ತು ಅವರನ್ನು ಅವರ ಆಯ್ಕೆಯ ಆಸ್ಪತ್ರೆಗೆ ದಾಖಲಿಸಬಹುದು ಮತ್ತು ಕಸ್ಟಡಿಯಲ್ಲಿದ್ದಾಗ ಚಿಕಿತ್ಸೆ ಪಡೆಯಬಹುದು ಎಂದು ಹೇಳಿತ್ತು. ಮೇ ತಿಂಗಳಲ್ಲಿ, ಹೈಕೋರ್ಟ್ ಗೋಯಲ್ ಅವರಿಗೆ ಎರಡು ತಿಂಗಳ ಅವಧಿಗೆ ಮಧ್ಯಂತರ ಜಾಮೀನು ನೀಡಿತು, ನಂತರ ಅದನ್ನು ನಾಲ್ಕು ವಾರಗಳವರೆಗೆ ಮತ್ತು ನಂತರ ಮತ್ತೆ ಎರಡು ತಿಂಗಳವರೆಗೆ ವಿಸ್ತರಿಸಲಾಯಿತು. ಕೆನರಾ ಬ್ಯಾಂಕ್ ಜೆಟ್ ಏರ್ವೇಸ್ಗೆ ನೀಡಿದ 538.62 ಕೋಟಿ ರೂ.ಗಳ ಸಾಲವನ್ನು ಲಾಂಡರಿಂಗ್ ಮಾಡಿದ ಆರೋಪದ…

Read More

ಚನ್ನಪಟ್ಟಣ: ನಾನು ಬೇರೆ ಪಕ್ಷದಲ್ಲಿ ಇರಬಹುದು. ಆದರೇ ನನ್ನ ಕುಮಾರಸ್ವಾಮಿ ಅವರ ಸಂಬಂಧ ಬದಲಾಗಿಲ್ಲ. ಈಗಲೂ ಅದೇ ಪ್ರೀತಿ ಇದೆ. ನನ್ನ ಅವರು ಕುಳ್ಳ ಅಂತ ಕರೆಯುತ್ತಾರೆ. ನಾನು ಅವತ್ತಿಂದಲೂ ಪ್ರೀತಿಯಿಂದ ಕುಮಾರಸ್ವಾಮಿಯನ್ನ ಕರಿಯಣ್ಣ ಅಂತಾನೇ ಕರೆಯೋದು ಎಂಬುದಾಗಿ ಸಚಿವ ಜಮೀರ್ ಅಹ್ಮದ್ ಖಾನ್ ಸ್ಪಷ್ಟ ಪಡಿಸಿದರು. ಇಂದು ಚನ್ನಪಟ್ಟಣದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಅವರು, ನನ್ನನ್ನು ಕುಮಾರಸ್ವಾಮಿ ಅವರು ಕುಳ್ಳ ಅಂತ ಕರೆಯುತ್ತಾರೆ. ನಾನು ಅವರನ್ನು ಪ್ರೀತಿಯಿಂದ ಕರಿಯಣ್ಣ ಅಂತಾನೇ ಕರೆಯೋದು ಎಂಬುದಾಗಿ ತಮ್ಮ ವಿವಾದಾತ್ಮಕ ಹೇಳಿಕೆಯ ಬಗ್ಗೆ ಸ್ಪಷ್ಟ ಪಡಿಸಿದ್ದಾರೆ. ನಾವು ಹಳೇ ಸ್ನೇಹಿತರು. ನಾನು ಕುಮಾರಸ್ವಾಮಿ ಆಸ್ತಿಯನ್ನು ಖರೀದಿಸುತ್ತೇನೆ ಎಂಬುದಾಗಿ ಎಲ್ಲಿಯೂ ಹೇಳಿಲ್ಲ. ಚನ್ನಪಟ್ಟಣ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಸಿ.ಪಿ ಯೋಗೇಶ್ವರ್ 20 ರಿಂದ 30 ಸಾವಿರ ಮತಗಳ ಅಂತರದಿಂದ ಗೆಲ್ಲಲಿದ್ದಾರೆ ಎಂಬುದಾಗಿ ಸಚಿವ ಜಮೀರ್ ಅಹ್ಮದ್ ಖಾನ್ ವಿಶ್ವಾಸ ವ್ಯಕ್ತ ಪಡಿಸಿದರು. https://kannadanewsnow.com/kannada/minister-to-chair-meeting-on-nov-13-to-discuss-e-account-issue-in-state/ https://kannadanewsnow.com/kannada/kumaraswamy-deve-gowda-making-personal-allegations-against-cm-deputy-cm-chaluvarayaswamy/

Read More

ಬೆಂಗಳೂರು: ರಾಜ್ಯದಲ್ಲಿ ಇ-ಖಾತಾ ವ್ಯವಸ್ಥೆ ಕಡ್ಡಾಯಗೊಳಿಸಿದ ನಂತ್ರ ಹಲವು ಸಮಸ್ಯೆಗೆ ಕಾರಣವಾಗಿತ್ತು. ಈ ಸಮಸ್ಯೆ ನಿವಾರಣೆಗಾಗಿ ನವೆಂಬರ್.13ರಂದು ಕಂದಾಯ, ಗ್ರಾಮೀಣಾಭಿವೃದ್ಧಿ ಹಾಗೂ ನಗರಾಭಿವೃದ್ಧಿ ಸಚಿವ ನೇತೃತ್ವದಲ್ಲಿ ಮಹತ್ವದ ಸಭೆಯನ್ನು ನಿಗದಿ ಪಡಿಸಲಾಗಿದೆ. ಈ ಸಭೆಯಲ್ಲಿ ಇ-ಖಾತಾ ಸಮಸ್ಯೆಯಲ್ಲಿನ ಹಲವು ವಿಷಯಗಳ ಬಗ್ಗೆ ಚರ್ಚೆ ನಡೆಯಲಿದೆ. ಇಂದು ಕಂದಾಯ ಸಚಿವ ವಿಶೇಷ ಕರ್ತವ್ಯಾಧಿಕಾರಿ ನಿಶ್ಚಯ್ ಎನ್.ಕೆ ಅವರು ಸಭಾ ಸೂಚನಾ ಪತ್ರವನ್ನು ಹೊರಡಿಸಿದದಾರೆ. ಅದರಲ್ಲಿ ಸ್ಥಿರಾಸ್ತಿಗಳ ನೋಂದಣಿಗಾಗಿ, ಗ್ರಾಮಪಂಚಾಯಿತಿ ಮತ್ತು ಸ್ಥಳೀಯ ನಗರ ಸಂಸ್ಥೆಗಳಲ್ಲಿ ಸಾರ್ವಜನಿಕರ ಅನುಕೂಲಕ್ಕಾಗಿ ಇ-ಖಾತೆಗಳನ್ನು ಶೀಘ್ರವಾಗಿ ವಿತರಿಸುವ ಕುರಿತು ಚರ್ಚಿಸಲು ಮಾನ್ಯ ಕಂದಾಯ ಸಚಿವರ ಅಧ್ಯಕ್ಷತೆಯಲ್ಲಿ ಮತ್ತು ಮಾನ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವರ, ಮಾನ್ಯ ನಗರಾಭಿವೃದ್ಧಿ ಸಚಿವರ ಹಾಗೂ ಪೌರಾಡಳಿತ ಮತ್ತು ಹಜ್ ಸಚಿವರ ಉಪಸ್ಥಿತಿಯಲ್ಲಿ ದಿನಾಂಕ:13/11/2024 ರಂದು ಬೆಳಿಗ್ಗೆ 11:00 ಗಂಟೆಗೆ ಕೊಠಡಿ ಸಂಖ್ಯೆ:222, ವಿಕಾಸ ಸೌಧ, ಬೆಂಗಳೂರು ಇಲ್ಲಿ ಸಭೆಯನ್ನು ಏರ್ಪಡಿಸಿದ್ದು, ಸದರಿ ಸಭೆಗೆ ಹಾಜರಾಗುವಂತೆ ತಮ್ಮನ್ನು ಕೋರಲು ಮಾನ್ಯ ಸಚಿವರಿಂದ ನಿರ್ದೇಶಿತನಾಗಿದ್ದೇನೆ…

Read More

ಬೆಂಗಳೂರು: ಶ್ರೀ ಸಿದ್ಧಾರೂಢ ಸ್ವಾಮೀಜಿ ಹುಬ್ಬಳ್ಳಿ ಮತ್ತು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಬೆಂಗಳೂರು ನಿಲ್ದಾಣಗಳ ನಡುವೆ ಪ್ರತಿದಿನ ಸಂಚರಿಸುವ ಸೂಪರ್ ಫಾಸ್ಟ್ ಎಕ್ಸ್ ಪ್ರೆಸ್ ವಿಶೇಷ (ರೈಲು ಸಂಖ್ಯೆ 07339/07340) ರೈಲುಗಳ ಅವಧಿಯನ್ನು ಈಗಿರುವ ನಿಲುಗಡೆ ಮತ್ತು ಸಮಯದೊಂದಿಗೆ ವಿಸ್ತರಿಸಲು ನೈಋತ್ಯ ರೈಲ್ವೆ ನಿರ್ಧರಿಸಿದೆ. ವಿವರಗಳು ಈ ಕೆಳಗಿನಂತಿವೆ: 1. ರೈಲು ಸಂಖ್ಯೆ 07339 ಎಸ್ಎಸ್ಎಸ್ ಹುಬ್ಬಳ್ಳಿ-ಕೆಎಸ್ಆರ್ಬೆಂಗಳೂರು ಡೈಲಿ ಸೂಪರ್ಫಾಸ್ಟ್ ಎಕ್ಸ್ಪ್ರೆಸ್ ವಿಶೇಷ ರೈಲು ಸೇವೆ ಈ ಮೊದಲು ಡಿಸೆಂಬರ್ 31, 2024 ರವರೆಗೆ ಓಡಿಸಲು ನಿಗದಿಪಡಿಸಲಾಗಿತ್ತು. ಈಗ ಜನವರಿ 1, 2025 ರಿಂದ ಜೂನ್ 30, 2025 ರವರೆಗೆ ವಿಸ್ತರಿಸಲಾಗಿದೆ. 2. ರೈಲು ಸಂಖ್ಯೆ 07340 ಕೆಎಸ್ಆರ್ ಬೆಂಗಳೂರು-ಎಸ್ಎಸ್ಎಸ್ ಹುಬ್ಬಳ್ಳಿ ಡೈಲಿ ಸೂಪರ್ಫಾಸ್ಟ್ ಎಕ್ಸ್ಪ್ರೆಸ್ ವಿಶೇಷ ರೈಲು ಸೇವೆ ಈ ಮೊದಲು ಜನವರಿ 1, 2025 ರವರೆಗೆ ಸಂಚರಿಸಲು ನಿಗದಿಪಡಿಸಲಾಗಿತ್ತು, ಈಗ ಜನವರಿ 2, 2025 ರಿಂದ ಜುಲೈ 1, 2025 ರವರೆಗೆ ವಿಸ್ತರಿಸಲಾಗಿದೆ. https://kannadanewsnow.com/kannada/guarantees-will-not-be-stopped-cm-siddaramaiah/ https://kannadanewsnow.com/kannada/big-news-trai-blocks-18-lakh-mobile-numbers-across-the-country/

Read More

ಚನ್ನಪಟ್ಟಣ : ಕ್ಷೇತ್ರದ ಅಭಿವೃದ್ಧಿಯಲ್ಲಿ-ರೈತರಿಗೆ ನೀರು ಕೊಡುವುದರಲ್ಲಿ ನಮ್ಮ ಯೋಗೇಶ್ವರ್ ಆಧುನಿಕ ಭಗೀರಥ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೆಚ್ಚುಗೆ ವ್ಯಕ್ತಪಡಿಸಿದರು. ಇಲ್ಲಿನ ದೊಡ್ಡ ಮಳೂರಿನಲ್ಲಿ ನಡೆದ ಬೃಹತ್ ಬಹಿರಂಗ ಸಭೆಯನ್ನು ಉದ್ದೇಶಿಸಿ ಮಾತನಾಡಿದರು. ಯೋಗೇಶ್ವರ್ ಅವರಿಗೆ ಚನ್ನಪಟ್ಟಣ ಮಣ್ಣಿನ ಬಗ್ಗೆ, ಇಲ್ಲಿನ ರೈತ ಸಮುದಾಯದ ಬಗ್ಗೆ, ಇಲ್ಲಿನ ಪಶುಪಾಲಕರು, ಗೋ ಸಾಕಾಣಿಕೆದಾರರ ಮೇಲೆ ಅಪಾರ ಪ್ರೀತಿ ಮತ್ತು ಗೌರವ ಹಾಗೂ ಕಾಳಜಿ ಇಟ್ಟುಕೊಂಡಿದ್ದಾರೆ. ಹೀಗಾಗಿ ರೈತ ಕುಲದ ಉದ್ದಾರಕ್ಕಾಗಿ ಕೆರೆಗಳನ್ನು ತುಂಬಿಸಿ ಪುಣ್ಯಾತ್ಮ‌ ಎನ್ನಿಸಿಕೊಂಡರು ಎಂದು ಮೆಚ್ಚುಗೆ ಸೂಚಿಸಿದರು. ಮಂಡ್ಯ ಲೋಕಸಭೆಯಲ್ಲಿ, ರಾಮನಗರ ವಿಧಾನಸಭೆಯಲ್ಲಿ ನಿಖಿಲ್ ಸೋತಿದ್ದಾರೆ. ಈಗ ಚನ್ನಪಟ್ಟಣಕ್ಕೆ ಕರೆತಂದು ನಿಲ್ಲಿಸಿದ್ದಾರೆ. ಲೋಕಸಭೆ ಚುನಾವಣೆಯಲ್ಲಿ ಕುಮಾರಸ್ವಾಮಿ ಅವರ ಭಾವ, ದೇವೇಗೌಡರ ಅಳಿಯ ಡಾ.ಮಂಜುನಾಥ್ ಅವರ ಗೆಲುವಿಗೆ ಯೋಗೇಶ್ವರ್ ಅವರು ಬಹಳ ಶ್ರಮಿಸಿದರು. ಆಗಲೇ ವಿಧಾನಸಭಾ ಚುನಾವಣೆಯಲ್ಲಿ ಯೋಗೇಶ್ವರ್ ಅವರಿಗೆ ಬೆಂಬಲಿಸಿ ಗೆಲ್ಲಿಸುವ ಭರವಸೆ ನೀಡಿದ್ದರು. ಆದರೆ ಚುನಾವಣೆ ಬಂದಾಗ ಕೈ ಕೊಟ್ಟರು ಎಂದು ವ್ಯಂಗ್ಯವಾಡಿದರು.‌ ದೇವೇಗೌಡರು ಮತ್ತು ಕುಮಾರಸ್ವಾಮಿ…

Read More