Subscribe to Updates
Get the latest creative news from FooBar about art, design and business.
Author: kannadanewsnow09
ಭುವನೇಶ್ವರ: ಒಡಿಶಾದ ಭುವನೇಶ್ವರದ ಅಪಾರ್ಟ್ಮೆಂಟ್ನಲ್ಲಿ ಸೋಮವಾರ ಇಬ್ಬರು ಕಳ್ಳರು ಚಾಕು ತೋರಿಸಿ ಆಭರಣಗಳನ್ನು ದೋಚಿ ನಂತರ 27 ವರ್ಷದ ಮಹಿಳೆಯ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ. ಭುವನೇಶ್ವರದ ಮೈತ್ರಿ ವಿಹಾರ್ನಲ್ಲಿ ಸೆಪ್ಟೆಂಬರ್ 30 ರಂದು ಮುಂಜಾನೆ 2 ಗಂಟೆ ಸುಮಾರಿಗೆ ಈ ಅಪರಾಧ ನಡೆದಿದೆ. ಪೊಲೀಸರಿಗೆ ನೀಡಿದ ದೂರಿನ ಪ್ರಕಾರ, ಕಳ್ಳರು ಮೊದಲು ಚಾಕು ತೋರಿಸಿ ಆಕೆಯ ಆಭರಣಗಳು ಮತ್ತು ಮೊಬೈಲ್ ಫೋನ್ ಅನ್ನು ಲೂಟಿ ಮಾಡಿದರು ಮತ್ತು ನಂತರ ಸಹಾಯಕ್ಕಾಗಿ ಕಿರುಚಿದರೆ ಅವಳ 2 ವರ್ಷದ ಮಗಳನ್ನು ಕೊಲ್ಲುವುದಾಗಿ ಬೆದರಿಸುವ ಮೂಲಕ ಮಹಿಳೆಯರ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ. ಮಹಿಳೆ ಭುವನೇಶ್ವರದ ಖಾಸಗಿ ಆಸ್ಪತ್ರೆಯಲ್ಲಿ ಕೆಲಸ ಮಾಡುತ್ತಿದ್ದು, ಕೇವಲ 10 ದಿನಗಳ ಹಿಂದೆ ಫ್ಲ್ಯಾಟ್ಗೆ ತೆರಳಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ಕಳ್ಳರು ಮನೆಯನ್ನು ತಲುಪಲು ಬಿದಿರಿನ ಕಂಬಗಳನ್ನು ಬಳಸಿ ಕಟ್ಟಡವನ್ನು ಪ್ರವೇಶಿಸಿರಬಹುದು ಎಂದು ಅವರು ಶಂಕಿಸಿದ್ದಾರೆ. ಅಪರಾಧಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ವಶಕ್ಕೆ…
ಬೆಂಗಳೂರು: ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯಾಭಿವೃದ್ಧಿ ನಿಗಮ (ಕೆಆರ್ಐಡಿಎಲ್) ನಿರ್ವಹಿಸುವ ಕಾಮಗಾರಿಗಳ ಪ್ರಗತಿಯ ಸಂಪೂರ್ಣ ಮಾಹಿತಿಗಳು, ಕಾಮಗಾರಿಗಳನ್ನು ವಹಿಸುವ ಇಲಾಖೆಗಳಿಂದ ಬಿಡುಗಡೆಯಾಗುವ ಅನುದಾನದ ಸ್ವೀಕೃತಿ ಹಾಗೂ ಬಳಕೆ, ಸೂಕ್ತ ರೀತಿಯಲ್ಲಿ ಲೆಕ್ಕಪತ್ರಗಳ ನಿರ್ವಹಣೆ ಮುಂತಾದ ವಿವಿಧ ಅಂಶಗಳನ್ನು ಪರಿಣಾಮಕಾರಿಯಾಗಿ ನಿರ್ವಹಿಸಲು ಅನುಕೂಲವಾಗುವಂತೆ ಗಾಂಧಿ ಸಾಕ್ಷಿ ಕಾಯಕ 2.0 (ವರ್ಕ್ ಮಾನಿಟರಿಂಗ್ ಸಿಸ್ಟಂ) ತಂತ್ರಾಂಶವನ್ನು ಅಭಿವೃದ್ಧಿಪಡಿಸಲಾಗಿದ್ದು ಗಾಂಧಿ ಜಯಂತಿ ದಿನದಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಅವರು ಲೋಕಾರ್ಪಣೆಗೊಳಿಸಿದರು. ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯಾಭಿವೃದ್ಧಿ ನಿಗಮ (ಕೆಆರ್ಐಡಿಎಲ್) ಕರ್ನಾಟಕ ಸರ್ಕಾರದ ಅಂಗಸAಸ್ಥೆಯಾಗಿದ್ದು, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿದೆ. ನಿರ್ಮಾಣ ಕ್ಷೇತ್ರದಲ್ಲಿ ತೊಡಗಿಸಿಕೊಂಡಿರುವ ಈ ಸಂಸ್ಥೆಯು ರಾಜ್ಯಾದ್ಯಂತ ತನ್ನ ಜಾಲವನ್ನು ಹೊಂದಿದ್ದು, ಸರ್ಕಾರದ ವತಿಯಿಂದ ಕೈಗೊಳ್ಳಲಾಗುವ ನಿರ್ಮಾಣ ಯೋಜನೆಗಳು ಹಾಗೂ ವಿವಿಧ ಇಲಾಖೆಗಳು ವಹಿಸುವ ಕಟ್ಟಡಗಳು, ರಸ್ತೆ ಅಭಿವೃದ್ಧಿ ಮೊದಲಾದ ಕಾಮಗಾರಿಗಳನ್ನು ಕಳೆದ 51 ವರ್ಷಗಳಿಂದ ನಿಗದಿತ ಕಾಲಾವಧಿಯಲ್ಲಿ ಉತ್ತಮ ಗುಣಮಟ್ಟದಿಂದ ಅನುಷ್ಠಾನಗೊಳಿಸುತ್ತಿದೆ.…
ನವದೆಹಲಿ: ಕೇಂದ್ರೀಯ ನೇರ ತೆರಿಗೆ ಮಂಡಳಿ (Central Board of Direct Taxes – CBDT) 2024-25ರ ಮೌಲ್ಯಮಾಪನ ವರ್ಷಕ್ಕೆ ತೆರಿಗೆ ಲೆಕ್ಕಪರಿಶೋಧನಾ ವರದಿಗಳನ್ನು ಸಲ್ಲಿಸುವ ಗಡುವನ್ನು ವಿಸ್ತರಿಸಿದೆ. ಅಕ್ಟೋಬರ್.7ರ ಒಳಗಾಗಿ ಆದಾಯ ತೆರಿಗೆಗೆ ಸಂಬಂಧಿಸಿದಂತೆ ಈ ಕೆಲಸ ಮಾಡದೇ ಇದ್ದರೇ 1.5 ಲಕ್ಷ ದಂಡವನ್ನು ಕಟ್ಟೋದಕ್ಕೆ ರೆಡಿಯಾಗಿ. ಹೌದು. ಮೂಲತಃ ಸೆಪ್ಟೆಂಬರ್ 30, 2024 ಕ್ಕೆ ನಿಗದಿಪಡಿಸಲಾಗಿತ್ತು, ಹೊಸ ಗಡುವು ಈಗ ಅಕ್ಟೋಬರ್ 7, 2024 ಆಗಿದೆ. ಆದಾಯ ತೆರಿಗೆ ಕಾಯ್ದೆಯಡಿ ( Income Tax Act ) ಎಲೆಕ್ಟ್ರಾನಿಕ್ ಸಲ್ಲಿಕೆಗಳೊಂದಿಗೆ ತೆರಿಗೆದಾರರು ಎದುರಿಸುತ್ತಿರುವ ಸವಾಲುಗಳಿಗೆ ಪ್ರತಿಕ್ರಿಯೆಯಾಗಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ, ವಿಶೇಷವಾಗಿ ಇ-ಫೈಲಿಂಗ್ ಪೋರ್ಟಲ್ನಲ್ಲಿನ ಸಮಸ್ಯೆಗಳಿಂದಾಗಿ ವಿಸ್ತರಿಸಿತ್ತು. ಈ ವಿಸ್ತರಣೆಯು ಅಕ್ಟೋಬರ್ 31, 2024 ರೊಳಗೆ ತಮ್ಮ ಆದಾಯ ತೆರಿಗೆ ರಿಟರ್ನ್ಸ್ ಸಲ್ಲಿಸಬೇಕಾದ ವ್ಯಕ್ತಿಗಳು, ಕಂಪನಿಗಳು ಮತ್ತು ಇತರ ಮೌಲ್ಯಮಾಪಕರು ಸೇರಿದಂತೆ ವ್ಯಾಪಕ ಶ್ರೇಣಿಯ ತೆರಿಗೆದಾರರಿಗೆ ಪ್ರಯೋಜನವನ್ನು ನೀಡುತ್ತದೆ. ಆರಂಭದಲ್ಲಿ ಮೂಲ ಸೆಪ್ಟೆಂಬರ್ ಗಡುವಿನೊಳಗೆ ತಮ್ಮ ತೆರಿಗೆ ಲೆಕ್ಕಪರಿಶೋಧನಾ ವರದಿಗಳನ್ನು ಸಲ್ಲಿಸಲು…
ಬೀದರ್ : ದಿನೇ ದಿನೇ ಹೃದಯಾಘಾತದಂತ ಪ್ರಕರಣಗಳು ಹೆಚ್ಚಾಗುತ್ತಿವೆ. ಬೀದರ್ ನಲ್ಲಿ ಕರ್ತವ್ಯ ನಿರತಂತ ಸಂದರ್ಭದಲ್ಲೇ ಪೊಲೀಸ್ ಪೇದೆಯೊಬ್ಬ ಹೃದಯಾಘಾತಕ್ಕೆ ಒಳಗಾಗಿ, ಚಿಕಿತ್ಸೆ ಫಲಿಸದೇ ಸಾವನ್ನಪ್ಪಿರುವಂತ ಘಟನೆ ನಡೆದಿದೆ. ಬೀದರ್ ನ್ಯೂ ಟೌನ್ ಪೊಲೀಸ್ ಠಾಮೆಯಲ್ಲಿ ಪೊಲೀಸ್ ಪೇದೆಯಾಗಿ ಐದು ವರ್ಷದಿಂದ ಚಂದ್ರಶೇಖರ್(28) ಕರ್ತವ್ಯ ನಿರ್ವಹಿಸುತ್ತಿದ್ದರು. ಇಂದು ಗಾಂಧಿ ಜಯಂತಿಯ ಅಂಗವಾಗಿ ಕರ್ತವ್ಯ ನಿರತಂತ ವೇಳೆಯಲ್ಲಿ ದಿಢೀರ್ ಹೃದಯಾಘಾತ ಸಂಭವಿಸಿದೆ. ಕೂಡಲೇ ಅವರನ್ನು ಸಮೀಪದ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಆದರೇ ಚಿಕಿತ್ಸೆ ಫಲಿಸದೇ 28 ವರ್ಷದ ಪೊಲೀಸ್ ಪೇದೆ ಚಂದ್ರಶೇಖರ್ ಸಾವನ್ನಪ್ಪಿದ್ದಾರೆ. ಅಂದಹಾಗೇ ಮೃತ ಪೊಲೀಸ್ ಪೇದೆ ಚಂದ್ರಶೇಖರ್ ರಾಯಚೂರು ಮೂಲದವರು. ಕಳೆದ 5 ವರ್ಷದ ಹಿಂದೆ ಪೊಲೀಸ್ ಪೇದೆಯಾಗಿ ಬೀದರ್ ಗೆ ನೇಮಕಗೊಂಡು, ಸೇವೆ ಸಲ್ಲಿಸುತ್ತಿದ್ದರು. ತಂದೆ-ತಾಯಿ ಕುಟುಂಬದವರೆಲ್ಲಾ ರಾಯಚೂರಲ್ಲಿ ಬಿಡ್ಡು, ಒಬ್ಬರೇ ಬೀದರ್ ನಲ್ಲಿ ಪೊಲೀಸ್ ಪೇದೆಯಾಗಿ ಕೆಲಸ ಮಾಡುತ್ತಿದ್ದರು. ಇಂತಹ ಅವರು ಇಂದು ದಿಢೀರ್ ಹೃದಯಾಘಾತಕ್ಕೆ ಒಳಗಾಗಿ ನಿಧನರಾಗಿದ್ದಾರೆ. https://kannadanewsnow.com/kannada/in-yet-another-controversy-siddaramaiah-said-india-flag-in-hand-of-congress-worker-who-tied-cms-shoelaces/ https://kannadanewsnow.com/kannada/note-how-many-times-can-the-address-be-changed-in-the-aadhaar-card-heres-the-information/
ಬೆಂಗಳೂರು: ಮುಡಾ ಹಗರಣದ ಸಂಕಷ್ಟದಲ್ಲಿರುವಂತ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು, ಈಗ ಮತ್ತೊಂದು ವಿವಾದದಲ್ಲಿ ಸಿಲುಕಿದ್ದಾರೆ. ಅದೇ ರಾಷ್ಟ್ರಧ್ವಜ ಹಿಡಿದಿದ್ದಂತ ಕಾಂಗ್ರೆಸ್ ಕಾರ್ಯಕರ್ತನೊಬ್ಬನಿಂದ ತಮ್ಮ ಶೂ ಲೇಸ್ ಕಟ್ಟಿಸಿಕೊಂಡು ವಿವಾದವನ್ನು ಮೈಮೇಲೆ ಎಳೆದುಕೊಂಡಿದ್ದಾರೆ. ಈ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದು, ಗುಲಾಮಗಿರಿಯ ದವಡೆಯಿಂದ ಮುಕ್ತವಾದ ಭಾರತ, ಇಂದು ವಿಶ್ವದ ಮುಂಚೂಣಿ ರಾಷ್ಟ್ರವಾಗಿದೆ. ರಾಷ್ಟ್ರಭಕ್ತಿ, ರಾಷ್ಟ್ರಧ್ವಜ, ರಾಷ್ಟ್ರ ಭಕ್ತರು ಎಂದರೆ ಕಾಂಗ್ರೆಸ್’ಗೆ ಯಾವಾಗಲೂ ಕಾಲ ಕಸ ಎಂಬುದಾಗಿ ಕಿಡಿಕಾರಿದ್ದಾರೆ. ಗುಲಾಮಗಿರಿಯನ್ನು ಆರಾಧಿಸಿಕೊಂಡು ಬಂದ ಕಾಂಗ್ರೆಸ್ಸಿಗರು ರಾಷ್ಟ್ರಧ್ವಜವನ್ನು ಗಾಂಧಿ ಜಯಂತಿಯಂದೇ ಗುಲಾಮಗಿರಿಯ ಸಂಕೇತದಂತೆ ಕಾಲಕಸವಾಗಿ ಕಂಡಿರುವುದು, ಸ್ವತಃ ಮುಖ್ಯಮಂತ್ರಿಗಳು ಅದನ್ನು ಆಕ್ಷೇಪಿಸದೆ ಉತ್ತೇಜಿಸುವ ಮಾದರಿಯಲ್ಲಿ ಉಡಾಫೆ ಪ್ರದರ್ಶಿಸಿರುವುದು ರಾಷ್ಟ್ರ ಹಾಗೂ ರಾಷ್ಟ್ರಧ್ವಜಕ್ಕೆ ಮಾಡಿದ ಅಪಮಾನವಾಗಿದೆ ಎಂಬುದಾಗಿ ವಾಗ್ಧಾಳಿ ನಡೆಸಿದ್ದಾರೆ. ಈ ಕೂಡಲೇ ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾಗೂ ಕಾಂಗ್ರೆಸ್ ಭಾರತೀಯರ ಕ್ಷಮೆ ಕೇಳುವಂತೆ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಆಗ್ರಹಿಸಿದ್ದಾರೆ. https://twitter.com/BYVijayendra/status/1841396912039383104 https://kannadanewsnow.com/kannada/note-how-many-times-can-the-address-be-changed-in-the-aadhaar-card-heres-the-information/ https://kannadanewsnow.com/kannada/gandhiji-is-the-leader-of-the-garden-of-peace-for-all-races-dk-shivakumar/
ಬೆಂಗಳೂರು : “ಮಹಾತ್ಮ ಗಾಂಧೀಜಿ ಅವರು ಸರ್ವ ಜನಾಂಗದ ಶಾಂತಿಯ ತೋಟದ ನಾಯಕ. ಇವರು ಕೇವಲ ವ್ಯಕ್ತಿಯಲ್ಲ, ಶಕ್ತಿ ಮತ್ತು ಸ್ಪೂರ್ತಿ. ರಾಷ್ಟ್ರಪಿತ ದೇಶದ ಧೀಮಂತ, ಇಡೀ ವಿಶ್ವಕ್ಕೆ ಶಾಂತಿ ಮಂತ್ರ ಹೇಳಿಕೊಟ್ಟ ಮಹಾನ್ ನಾಯಕ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಅಭಿಪ್ರಾಯಪಟ್ಟರು. ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆದ ಮಹಾತ್ಮ ಗಾಂಧಿ ಅವರ 155 ನೇ ಜನ್ಮದಿನದ ಅಂಗವಾಗಿ ಸ್ವಚ್ಛತಾ ಆಂದೋಲನದ ಪ್ರತಿಜ್ಞಾವಿಧಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, “ಉಪವಾಸ, ಸತ್ಯಾಗ್ರಹವೇ ಇವರ ಆಯುಧ. ಬಾಂಬು, ಬಂದೂಕುಗಳಿಲ್ಲದೆ ಅಹಿಂಸೆಯ ಮೂಲಕ ಹೋರಾಟದ ಹಾದಿಯನ್ನು ಹೇಳಿಕೊಟ್ಟವರು. ಮುಂದಿನ ಒಂದು ವರ್ಷಗಳ ಕಾಲ ಮಹಾತ್ಮನನ್ನು ಸ್ಮರಿಸಲು ‘ಗಾಂಧಿ ಭಾರತ’ ಎನ್ನುವ ಕಾರ್ಯಕ್ರಮ ರೂಪಿಸಲಾಗಿದೆ” ಎಂದರು. “ಶಿವನ ಧ್ಯಾನ, ರಾಮನ ತ್ಯಾಗ, ಬುದ್ಧನ ಪ್ರೀತಿ, ಏಸುವಿನ ಸಹನೆ, ಮಹಮದ್ ಪೈಗಂಬರ್ ಅವರ ಮಾನವೀಯತೆಯನ್ನು ಒಳಗೊಂಡ ಸ್ವರೂಪವೇ ಮಹಾತ್ಮಾ ಗಾಂಧಿ” ಎಂದರು. “ನನ್ನ ಜೀವನವೇ ನನ್ನ ಸಂದೇಶ ಎಂದು ನುಡಿದಂತೆ ನಡೆದವರು ಗಾಂಧಿ. ಇವರ ಆಚಾರ, ವಿಚಾರ, ತತ್ವ,…
ಬೆಂಗಳೂರು: ಮೈಸೂರು ದಸರಾ ಉದ್ಘಾಟನಾ ಸಂದರ್ಭದಲ್ಲಿ ಪ್ರತಿ ವರ್ಷವೂ ಅರಮನೆ ಆವರಣದಲ್ಲಿ ನಡೆಯುವ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ರಾಜ್ಯ ಸಂಗೀತ ವಿದ್ವಾನ್ ಪ್ರಶಸ್ತಿ ಪ್ರದಾನ ಮಾಡುವುದು ಸಂಪ್ರದಾಯ. ಅದರಂತೆ ಈ ವರ್ಷ ಈ ಪ್ರತಿಷ್ಠಿತ ಪ್ರಶಸ್ತಿಗೆ ಹಾವೇರಿ ಜಿಲ್ಲೆಯ ಖ್ಯಾತ ಶಹನಾಯಿ ವಾದಕ ಪಂಡಿತ್ ಬಸವರಾಜ ಭಜಂತ್ರಿ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ ಎಸ್ ತಂಗಡಗಿ ಹೇಳಿದ್ದಾರೆ. ಪಂಡಿತ್ ಎಂ . ವೆಂಕಟೇಶ ಕುಮಾರ್ ಅವರ ಅಧ್ಯಕ್ಷತೆಯಲ್ಲಿ ರಚಿಸಲಾದ ಆಯ್ಕೆ ಸಮಿತಿ ಇವರನ್ನು ಆಯ್ಕೆ ಮಾಡಿದೆ. ನಾಳೆ ಸಂಜೆ ಮೈಸೂರು ಅರಮನೆ ಆವರಣದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಸನ್ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈ ಪ್ರತಿಷ್ಠಿತ ಸಂಗೀತ ವಿದ್ವಾನ್ ಪ್ರಶಸ್ತಿಯನ್ನು ಪಂಡಿತ್ ಬಸವರಾಜ ಭಜಂತ್ರಿ ಅವರಿಗೆ ಪ್ರದಾನ ಮಾಡಲಿದ್ದಾರೆ ಎಂದು ಅವರು ತಿಳಿಸಿದರು. ಈ ಪ್ರಶಸ್ತಿಯು 5 ಲಕ್ಷ ರೂಪಾಯಿ ನಗದು, ಪ್ರಶಸ್ತಿಫಲಕ ಹಾಗೂ ಸ್ಮರಣಿಕೆಯನ್ನು ಒಳಗೊಂಡಿದೆ…
ಬೆಂಗಳೂರು : ಎಲ್ಲಾ ನ್ಯಾಯಾಲಯಗಳಿಗಿಂತ ಮೇಲೆ ಅತ್ಯುನ್ನತವಾದ ಆತ್ಮಸಾಕ್ಷಿಯ ನ್ಯಾಯಾಲಯವಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಹಾತ್ಮ ಗಾಂಧಿಯವರ ಮಾತನ್ನು ಪುನರುಚ್ಚರಿಸಿದರು. ಕರ್ನಾಟಕ ಗಾಂಧೀ ಸ್ಮಾರಕ ನಿಧಿ ಗಾಂಧಿ ಭವನದಲ್ಲಿ ಹಮ್ಮಿಕೊಂಡಿದ್ದ ಗಾಂಧಿ ಜಯಂತಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಪ್ರಶಸ್ತಿ ಪ್ರದಾನ ಮಾಡಿ ಮಾತನಾಡಿದರು. ಈಗಿನ ನ್ಯಾಯಲಯಗಳಲ್ಲಿ ನ್ಯಾಯ ಸಿಗದೇ ಹೋಗಬಹುದು. ಈಗಿನ ನ್ಯಾಯಾಲಯಗಳಿಂದ ಎಲ್ಲರಿಗೂ ನ್ಯಾಯ ಸಿಗದೇ ಹೋಗಬಹುದು. ಆದರೆ ನಾವು ಆತ್ಮಸಾಕ್ಷಿಗೆ ತಕ್ಕಂತೆ ನಡೆದುಕೊಳ್ಳಬೇಕು ಎಂದು ಕರೆ ನೀಡಿದರು. ಯಾರಾದರೂ ಹೊಗಳಲಿ, ತೆಗಳಲಿ. ಟೀಕೆ ಮಾಡಲಿ, ಬಿಡಲಿ. ಉಳಿದವರು ಗುರುತಿಸಲಿ ಬಿಡಲಿ ನಾವು ಪ್ರತಿಯೊಬ್ಬರೂ ಆತ್ಮಸಾಕ್ಷಿಯ ನ್ಯಾಯಾಲಯದಲ್ಲಿ ಆತ್ಮಸಾಕ್ಷಿಗೆ ತಕ್ಕಂತೆ ನಡೆದುಕೊಳ್ಳಬೇಕು ಎಂದರು. ಕೇವಲ ಭಾಷಣದಿಂದ ಮಹಾತ್ಮಗಾಂಧಿ ಮತ್ತು ಅಂಬೇಡ್ಕರ್ ಅವರ ಆಶಯಗಳು ಈಡೇರುವುದಿಲ. ಇವರಿಬ್ಬರ ಬದುಕಿನ ಮೌಲ್ಯ ಮತ್ತು ಸಂದೇಶಗಳನ್ನು ಜನ ಮಾನಸದಲ್ಲಿ ವಿಸ್ತರಿಸುತ್ತಲೇ ಸರ್ಕಾರ ಸಮ ಸಮಾಜ ನಿರ್ಮಿಸಲು ಪೂರಕವಾದ ಕಾರ್ಯಕ್ರಮಗಳನ್ನು ರೂಪಿಸಬೇಕಾಗುತ್ತದೆ. ನಾನು ಮತ್ತು ನಮ್ಮ ಸರ್ಕಾರ ಈ ದಿಕ್ಕಿನಲ್ಲಿ ಸಾಗುತ್ತಿದ್ದೇವೆ ಎಂದರು. ಲಾಲ್ ಬಹದ್ದೂರ್…
ಬೆಂಗಳೂರು : ಗಾಂಧಿಯವರ ಸರ್ವೋದಯ, ಅಂಬೇಡ್ಕರ್ ಅವರ ಅಂತ್ಯೋದಯ ನಮ್ಮ ಸರ್ಕಾರದ ಧ್ಯೇಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದರು. ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ BBMP ಆಯೋಜಿಸಿದ್ದ ರಾಷ್ಟ್ರಪಿತ ಮಹಾತ್ಮಗಾಂಧೀಜಿಯವರ ಜನ್ಮ ದಿನಾಚರಣೆ ಮತ್ತು ಸ್ವಚ್ಚತಾ ಆಂದೋಲನಾ ಪ್ರತಿಜ್ಞಾ ವಿಧಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ಮಹಾತ್ಮಗಾಂಧಿ ಮೊದಲು ಇಡೀ ಗ್ರಾಮೀಣ ಭಾರತವನ್ನು ಸುತ್ತಾಡಿ ನಮ್ಮ ಜನರ ಬದುಕು ಮತ್ತು ಬವಣೆಯನ್ನು ಅರ್ಥ ಮಾಡಿಕೊಂಡು ಬಳಿಕ ಅದಕ್ಕೆ ತಕ್ಕಂತೆ ಸ್ವಾತಂತ್ರ್ಯ ಹೋರಾಟ ಸಂಘಟಿಸಿ ಸ್ವತಃ ಜೈಲು ಸೇರಿ ಹೋರಾಟ ಮುಂದುವರೆಸಿ ದೇಶಕ್ಕೆ ಸ್ವಾತಂತ್ರ್ಯ ದೊರಕಿಸಿಕೊಟ್ಟರು ಎಂದು ವಿವರಿಸಿದರು. ಬ್ರಿಟೀಷರೇ ಭಾರತ ಬಿಟ್ಟು ತೊಲಗಿ ಎಂದು ಕರೆ ನೀಡಿ 1947 ರಲ್ಲಿ ಬ್ರಿಟೀಷರು ಭಾರತದಿಂದ ತೊಲಗುವಂತೆ ಮಾಡಿದರು. ಸ್ವಾತಂತ್ರ್ಯ ಭಾರತದಲ್ಲಿ ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರು ನೀಡಿದ ಸಂವಿಧಾನದ ಆಶಯಗಳನ್ನು ಈಡೇರಿಸುವ ಸಾಮಾಜಿಕ, ಆರ್ಥಿಕ ಕಾರ್ಯಕ್ರಮಗಳನ್ನು ನಾವು ರೂಪಿಸಿ ಜಾರಿ ಮಾಡಿದ್ದೇವೆ. ನಮ್ಮ ಗ್ಯಾರಂಟಿ ಕಾರ್ಯಕ್ರಮಗಳೂ ಕೂಡ ಬಡವರಿಗೆ ಆರ್ಥಿಕ ಸ್ವಾತಂತ್ರ್ಯ ಒದಗಿಸಿಕೊಡುವುದಾಗಿದೆ ಎಂದರು.…
ಶಿವಮೊಗ್ಗ: ಜಿಲ್ಲೆಯ ಸಾಗರದ ತಾಯಿ ಮತ್ತು ಮಕ್ಕಳ ಆಸ್ಪತ್ರೆಯ ಈ ವೈದ್ಯನ ಎಡವಟ್ಟು ಒಂದಾ ಎರಡಾ? ಸರಿಯಾಗಿ ಹೆರಿಗೆ ಮಾಡದೇ ಇರೋದು, ಹೆರಿಗೆ ಮಾಡಿದ ಮೇಲೆ ಹೊಲಿಗೆ ಸರಿಯಾಗಿ ಹಾಕದೇ ನಿರ್ಲಕ್ಷ್ಯ ತೋರಿಸೋದು ಸೇರಿದಂತೆ ಹಲವಾರು. ಡಾಕ್ಟರ್ ಮಾಡೋ ಎಡವಟ್ಟಿನಿಂದಾಗಿ ಶಿಕ್ಷೆ ಅನುಭವಿಸಿದವರು ನೂರಾರು ಗರ್ಭಿಣಿಯರು, ಬಾಣಂತಿಯರು, ಮಹಿಳೆಯರು. ಈಗ ಮುಂದುವರೆದು ಈ ಸರ್ಕಾರಿ ವೈದ್ಯ ಬಾಣಂತಿಗೆ ಕಪಾಳಮೋಕ್ಷ ಮಾಡಿದ್ದಾರೆ. ಈ ಮೂಲಕ ಗೂಂಡಾ ವರ್ತನೆ ತೋರಿದ್ದಾರೆ. ಕಳೆದ ಕೆಲ ತಿಂಗಳ ಹಿಂದಷ್ಟೇ ಶಿವಮೊಗ್ಗ ಜಿಲ್ಲೆಯ ಸಾಗರ ನಗರದಲ್ಲಿನ ತಾಯಿ ಮತ್ತು ಮಕ್ಕಳ ಆಸ್ಪತ್ರೆಗೆ ತೆರಳಿದ್ದಂತ ಗರ್ಭಿಣಿಯೊಬ್ಬರಿಗೆ ಪ್ರಸೂತಿ ಮತ್ತು ಸ್ರೀರೋಗ ತಜ್ಞ ಡಾ.ನಾಗೇಂದ್ರಪ್ಪ ಸಿಜೇರಿಯನ್ ಹೆರಿಗೆ ಮಾಡಿಸಿದ್ದರು. ಹೆರಿಗೆಯ ನಂತ್ರ ರಕ್ತ ಸ್ತ್ರಾವ ನಿಯಂತ್ರಣಕ್ಕೆ ಕ್ರಮವಹಿಸಿ ಹೊಲಿಗೆ ಹಾಕಬೇಕಿದ್ದಂತ ಡಾ.ನಾಗೇಂದ್ರಪ್ಪ, ಅದ್ಯಾವುದನ್ನು ಮಾಡದೇ ಹಾಗೆಯೇ ಹೊಲಿಗೆ ಹಾಕಿದ್ದರು. ಡಾ.ನಾಗೇಂದ್ರಪ್ಪ ಎಡವಟ್ಟಿನ ಕಾರಣ ಬಾಣಂತಿಯೊಬ್ಬರು ಹೆರಿಗೆಯ ನಂತ್ರ ಹೊಟ್ಟೆ ಊತ ಬಂದು, ಹೊಟ್ಟೆಯೊಳಗಡೆ ರಕ್ತ್ರಸ್ತ್ರಾವ ಉಂಟಾಗಿ ಶಿವಮೊಗ್ಗದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು.…