Author: kannadanewsnow09

ಪಶ್ಚಿಮ ಬಂಗಾಳ: ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮುಖಂಡ ಸ್ಟೇಯಾನ್ ಚೌಧರಿ ಅವರನ್ನು ಅಪರಿಚಿತ ದುಷ್ಕರ್ಮಿಗಳು ಭಾನುವಾರ ಗುಂಡಿಕ್ಕಿ ಕೊಂದಿದ್ದಾರೆ. ಹಾಡಹಗಲೇ ನಡೆದಂತ ಈ ಘಟನೆಯಿಂದ ಜನರು ಬೆಚ್ಚಿ ಬೀಳುವಂತೆ ಆಗಿದೆ. ಪಶ್ಚಿಮ ಬಂಗಾಳದ ಮುರ್ಷಿದಾಬಾದ್ ನಲ್ಲಿ ಟಿಎಂಸಿ ಪಕ್ಷದ ಪ್ರಧಾನ ಕಾರ್ಯದರ್ಶಿಯನ್ನು ಹಾಡ ಹಗಲೇ ಬೈಕ್ ನಲ್ಲಿ ಬಂದಂತ ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆಗೈದಿದ್ದಾರೆ. ಗುಂಡೇಟಿನಿಂದ ಗಾಯಗೊಂಡಿದ್ದಂತ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ, ತೀವ್ರ ರಕ್ತಸ್ತ್ರಾವದಿಂದ ಅವರು ಆಸ್ಪತ್ರೆಗೆ ಸಾಗಿಸೋ ಮುನ್ನವೇ ಸಾವನ್ನಪ್ಪಿರೋದಾಗಿ ತಿಳಿದು ಬಂದಿದೆ. ಪಶ್ಚಿಮ ಬಂಗಾಳದ ಬಹರಾಂಪುರದಲ್ಲಿ ಭಾನುವಾರ ಮಧ್ಯಾಹ್ನ ಈ ಘಟನೆ ನಡೆದಿದೆ. ಬೈಕುಗಳಲ್ಲಿ ಬಂದ ವ್ಯಕ್ತಿಗಳ ಗುಂಪು ಚೌಧರಿಯ ಮೇಲೆ ಹತ್ತಿರದಿಂದ ಗುಂಡು ಹಾರಿಸಿದ್ದಾರೆ. ಈ ಘಟನೆಯಲ್ಲಿ ತೀವ್ರವಾಗಿ ಗಾಯಗೊಂಡಿದ್ದಂತ ಟಿಎಂಸಿ ಮುಖಂಡ ಸ್ಟೇಯಾನ್ ಚೌಧರಿ ಆಸ್ಪತ್ರೆಗೆ ಸಾಗಿಸೋ ಮಾರ್ಗಮಧ್ಯೆ ಸಾವನ್ನಪ್ಪಿರೋದಾಗಿ ತಿಳಿದು ಬಂದಿದೆ. https://kannadanewsnow.com/kannada/rafael-nadal-to-skip-australian-open-2024-due-to-micro-tear-on-muscle/ https://kannadanewsnow.com/kannada/cm-siddaramaiah-orders-investment-in-construction-of-silk-bhavan-in-bengaluru/

Read More

ಕೆಎನ್ಎನ್ ಸ್ಪೋರ್ಟ್ಸ್ ಡೆಸ್ಕ್: ಸ್ನಾಯು ಸೆಳೆತದಿಂದಾಗಿ ಮುಂಬರುವ ಆಸ್ಟ್ರೇಲಿಯನ್ ಓಪನ್ ಟೆನಿಸ್ ಟೂರ್ನಿಯಿಂದ ರಾಫೆಲ್ ನಡಾಲ್ ಹಿಂದೆ ಸರಿದಿದ್ದಾರೆ. 22 ಬಾರಿ ಗ್ರ್ಯಾಂಡ್ ಸ್ಲಾಮ್ ಚಾಂಪಿಯನ್ ಆಗಿರುವ ನಡಾಲ್, ಇತ್ತೀಚೆಗೆ ಬ್ರಿಸ್ಬೇನ್ ಇಂಟರ್ನ್ಯಾಷನಲ್ನಲ್ಲಿ ಒಂದು ವರ್ಷದ ಅನುಪಸ್ಥಿತಿಯ ನಂತರ ಪುನರಾಗಮನ ಮಾಡಿದ್ದರು. ಸ್ಪ್ಯಾನಿಷ್ ಟೆನಿಸ್ ಐಕಾನ್ ಪುನರಾಗಮನದ ನಂತರ ಡಬಲ್ಸ್ ಪಂದ್ಯವನ್ನು ಕಳೆದುಕೊಂಡರು. ಆದರೆ ಜೋರ್ಡಾನ್ ಥಾಂಪ್ಸನ್ ವಿರುದ್ಧದ ಮ್ಯಾರಥಾನ್ ಮುಖಾಮುಖಿಯಲ್ಲಿ 5-7, 7-6 (8/6), 6-3 ಸೆಟ್ ಗಳಿಂದ ಸೋಲುವ ಮೊದಲು ಸಿಂಗಲ್ಸ್ ಸ್ಪರ್ಧೆಯಲ್ಲಿ ಕ್ವಾರ್ಟರ್ ಫೈನಲ್ ವರೆಗೆ ಹೋದರು. ಥಾಂಪ್ಸನ್ ಅವರೊಂದಿಗಿನ ಕ್ವಾರ್ಟರ್ ಫೈನಲ್ ಸಭೆಯಲ್ಲಿ ನಡಾಲ್ ಗಾಯದ ಭೀತಿಯಿಂದ ಬಳಲುತ್ತಿದ್ದರು. ಮೂರನೇ ಸೆಟ್ ನಲ್ಲಿ ವೈದ್ಯಕೀಯ ಸಮಯದ ಅಗತ್ಯವಿತ್ತು. 37 ವರ್ಷದ ಆಟಗಾರ ನಂತರ ಮೆಲ್ಬೋರ್ನ್ನಲ್ಲಿ ಎಂಆರ್ಐ ಸ್ಕ್ಯಾನ್ಗೆ ಒಳಗಾಗಿದ್ದರು. ಅಲ್ಲಿ ಸ್ನಾಯುವಿನ ಮೇಲೆ ಸೂಕ್ಷ್ಮ ನೀರು ಕಂಡುಬಂದಿದೆ. ಇದು ಈ ತಿಂಗಳ ಕೊನೆಯಲ್ಲಿ ಪ್ರಾರಂಭವಾಗಲಿರುವ ಆಸ್ಟ್ರೇಲಿಯನ್ ಓಪನ್ನಲ್ಲಿ ಐದು ಸೆಟ್ಗಳ ಮುಖಾಮುಖಿಗಳನ್ನು ಆಡುವ ಸಾಧ್ಯತೆಯನ್ನು ತಳ್ಳಿಹಾಕಿದೆ.…

Read More

ಬೆಂಗಳೂರು: ನಮ್ಮ ಮೆಟ್ರೋ ರೈಲಿನಲ್ಲಿ ಮತ್ತೊಬ್ಬ ಯುವತಿಗೆ ಯುವಕನೋರ್ವನಿಂದ ಲೈಂಗಿಕ ಕಿರುಕುಳ ನೀಡಿದಂತ ಆರೋಪ ಕೇಳಿ ಬಂದಿದೆ. ಯುವತಿ ಭದ್ರತಾ ಸಿಬ್ಬಂದಿಗಳಿಗೆ ನೀಡಿದಂತ ಮಾಹಿತಿ ಮೇರೆಗೆ ಆತನನ್ನು ವಶಕ್ಕೆ ಪಡೆದು ಪೊಲೀಸರಿಗೆ ಒಪ್ಪಿಸಲಾಗಿರೋದಾಗಿ ತಿಳಿದು ಬಂದಿದೆ. ಜನವರಿ.1ರಂದು ನಮ್ಮ ಮೆಟ್ರೋ ರೈಲಿನಲ್ಲಿ ಯುವತಿಯೊಬ್ಬಳಿಗೆ ಲೈಂಗಿಕ ಕಿರುಕುಳ ನೀಡಿರೋ ಆರೋಪ ಕೇಳಿ ಬಂದಿದೆ. ಯುವತಿಯ ಖಾಸಗಿ ಅಂಗಾಂಗವನ್ನು ಮುಟ್ಟಿ ಲೈಂಗಿಕ ಕಿರುಕುಳ ನೀಡಿರೋದಾಗಿ ಯುವತಿ ಮೆಟ್ರೋ ಭದ್ರತಾ ಸಿಬ್ಬಂದಿಗೆ ದೂರು ನೀಡಿದ್ದಾಳೆ. ಯುವತಿ ನೀಡಿದಂತ ದೂರನ್ನು ಆಧರಿಸಿ, ಕೂಡಲೇ ಆ ಯುವಕನನ್ನು ವಶಕ್ಕೆ ಪಡೆದು, ಪೊಲೀಸರಿಗೆ ಒಪ್ಪಿಸಲಾಗಿದೆ. ಆ ಯುವಕನನ್ನು ವಿಚಾರಣೆ ನಡೆಸಿದಾಗ, ತಾನು ಲೈಂಗಿಕ ಕಿರುಕುಳ ನೀಡಿದಂತ ತಪ್ಪನ್ನು ಒಪ್ಪಿಕೊಂಡಿದ್ದಾನೆ ಎನ್ನಲಾಗಿದೆ. ಅಲ್ಲದೇ ತಪ್ಪಾಯ್ತು ಮತ್ತೆ ಹೀಗೆ ಮಾಡೋದಿಲ್ಲ ಅಂತ ಪೊಲೀಸರು, ಯುವತಿಯ ಮುಂದೆ ಕ್ಷಮೆಯಾಚಿಸಿದ್ದಾನೆ ಎಂಬುದಾಗಿ ತಿಳಿದು ಬಂದಿದೆ. https://kannadanewsnow.com/kannada/congress-govt-has-declared-undeclared-emergency-in-karnataka-former-cm-basavaraj-bommai/ https://kannadanewsnow.com/kannada/cm-siddaramaiah-orders-investment-in-construction-of-silk-bhavan-in-bengaluru/

Read More

ಬೆಳಗಾವಿ: ನಗರದಲ್ಲಿ ಇಂದು ನೈತಿಕ ಪೊಲೀಸ್ ಗಿರಿ ಪ್ರಕರಣ ನಡೆದಿದೆ. ಈ ಘಟನೆಯಲ್ಲಿ ಇಬ್ಬರು ಹಲ್ಲೆಗೆ ಒಳಗಾಗಿದ್ದು, ಬಿಮ್ಸ್ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ನೈತಿಕ ಪೊಲೀಸ್ ಗಿರಿ ಪ್ರಕರಣ ಸಂಬಂಧ ಪೊಲೀಸರು 7 ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ಈ ಕುರಿತಂತೆ ಬೆಳಗಾವಿ ನಗರದಲ್ಲಿ ಡಿಸಿಪಿ ರೋಹನ್ ಜಗದೀಶ್ ಮಾತನಾಡಿ, ಸಂಬಂಧಿ ಮುಸ್ಕಾನ್ ಜೊತೆ ಸಚಿನ್ ಲಮಾಣಿ ಓಡಾಡುತ್ತಿದ್ರು. ಈ ವೇಳೆ ಯುವಕ ಗುಂಪು ಹಲ್ಲೆ ನಡೆಸಿದ್ದಾರೆ. ಹಲ್ಲೆಗೊಳಗಾದಂತ ಇಬ್ಬರು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದರು. ಈ ಪ್ರಕರಣದಲ್ಲಿ ಈಗಾಗಲೇ 7 ಆರೋಪಿಗಳನ್ನು ಬಂಧಿಸಲಾಗಿದೆ. ಮೊಹಮ್ಮದ್ ಇನಾಂದಾರ್, ಆತೀಫ್ ಅಹ್ಮದ್ ಶೇಖ್, ಸೈಫ್ ಆಲಿ ಮುಗ್ದುಮ್, ಉಮರ್ ಬಡೇಗರ್, ಆಜಾನ್, ರಿಯಾನ್ ರೋಟವಾಲೆಯನ್ನು ಬಂಧಿಸಲಾಗಿದೆ ಎಂದು ತಿಳಿಸಿದ್ದಾರೆ. ಮತ್ತೊಂದೆಡೆ ಬೆಳಗಾವಿ ನೈತಿಕ ಪೊಲೀಸ್ ಗಿರಿ ಪ್ರಕರಣದಲ್ಲಿ ಹಲ್ಲೆಗೊಳಗಾದಂತ ಇಬ್ಬರನ್ನು ವಿಹೆಚ್ ಪಿ ಪ್ರಾಂತ ಕೋಶಾಧ್ಯಕ್ಷ ಕೃಷ್ಣಭಟ್ ಭೇಟಿಯಾಗಿ ಆರೋಗ್ಯ ವಿಚಾರಿಸಿದ್ದಾರೆ. ಅಲ್ಲದೇ ಕುಟುಂಬ ವರ್ಗದವರಿಗೂ ಧೈರ್ಯ ತುಂಬಿ ಆರ್ಥಿಕ ಸಹಾಯ…

Read More

ಬೆಂಗಳೂರು: 10 ರೂ ನಾಣ್ಯ ಚಲಾವಣೆಯಲ್ಲಿ ಇಲ್ಲ. ಯಾರು ತಗೊಳ್ಳೋದಿಲ್ಲ. ನಿಷೇಧಿಸಿದೆ ಹಾಗೆ, ಹೀಗೆ ಅಂತ ಸುದ್ದಿ ಹಬ್ಬಿತ್ತು. ಆದ್ರೇ ಭಾರತೀಯ ರಿಸರ್ವ್ ಬ್ಯಾಂಕ್ ಅಂತಹ ಯಾವುದೇ ನಿರ್ಧಾರವನ್ನು ಕೈಗೊಂಡಿಲ್ಲ. 10 ರೂ ನಾಣ್ಯ ಚಾಲನೆಯಲ್ಲಿದೆ ಅಂತ ಸ್ಪಷ್ಟ ಪಡಿಸಿತ್ತು. ಇದರ ಮಧ್ಯೆ KSRTC, BMTC ಬಸ್ಸುಗಳಲ್ಲಿ ಕಂಡಕ್ಟರ್ 10 ರೂ ನಾಣ್ಯ ಪಡೆಯೋದಕ್ಕೆ ನಿರಾಕರಿಸುತ್ತಿದ್ದರು. ಆದ್ರೇ ಹೀಗೆ ನಿರಾಕರಿಸುವಂತಿಲ್ಲ. ಕಡ್ಡಾಯವಾಗಿ ಪ್ರಯಾಣಿಕರಿಂದ ಪಡೆಯುವಂತೆ ಸಾರಿಗೆ ಇಲಾಖೆ ಖಡಕ್ ಸೂಚನೆ ನೀಡಿದೆ. ಕೆ ಎಸ್ ಆರ್ ಟಿಸಿ ಹಾಗೂ ಬಿಎಂಟಿಸಿ ಬಸ್ ಏರೋ ಅನೇಕ ಪ್ರಯಾಣಿಕರು ತಮ್ಮ ಬಳಿಯಿದ್ದಂತ 10 ರೂ ನಾಣ್ಯವನ್ನು ಟಿಕೆಟ್ ಖರೀದಿಸೋದಕ್ಕೆ ನೀಡಿದಾಗ ಕಂಡಕ್ಟರ್ ಪಡೆಯಲು ನಿರಾಕರಿಸುತ್ತಿದ್ದರು. ಈ ಬಗ್ಗೆ ಸಾರಿಗೆ ಇಲಾಖೆಗೆ ಹಲವು ಪ್ರಯಾಣಿಕರು ದೂರು ನೀಡಿದ್ದರು. ಆರ್ ಬಿಐ ಚಲಾವಣೆಯಲ್ಲಿದೆ ಅಂತ ಸ್ಪಷ್ಟ ಪಡಿಸಿದೆ. ಹೀಗಿದ್ದೂ ಕಂಡಕ್ಟರ್ ಪಡೆಯದೇ ಇರೋದು ಸರಿಯಲ್ಲ ಅಂತ ಆಕ್ಷೇಪಿಸಿದ್ದರು. ಈ ಹಿನ್ನಲೆಯಲ್ಲಿ ಪ್ರಯಾಣಿಕರು 10 ರೂ ನಾಣ್ಯವನ್ನು ನೀಡಿದ್ರೇ…

Read More

ತುಮಕೂರು: ಬಂಡೆನಾಗನ ಮೇಲೆ ಕೊಲೆಗೆ ಯತ್ನಿಸಿ ಮಚ್ಚು ಬಿಸಿ ಪಾರಿಯಾಗಿದ್ದಂತ ರೌಡಿ ಶೀಟರ್ ಮೇಲೆ ಪೊಲೀಸರು ಫೈರಿಂಗ್ ಮಾಡಿ ಬಂಧಿಸಿರೋ ಘಟನೆ ತುಮಕೂರಿನ ಒಕ್ಕೋಡಿ ಬಳಿಯಲ್ಲಿ ನಡೆದಿದೆ. ತುಮಕೂರು ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬೆಳಿಗ್ಗೆ ಬಂಡೆ ನಾಗನ ಮೇಲೆ ಕೊಲೆಗೆ ಮನೋಜ್ ಆಲಿಯಾಸ್ ಮಂಡೇಲಾ ಯತ್ನಿಸಿದ್ದನು. ರೌಡಿ ಶೀಟರ್ ಆಗಿದ್ದಂತ ಮನೋಜ್ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದರು. ಮನೋಜ್ ಬೀಸಿದಂತ ಮಚ್ಚೇಟಿನಿಂದ ತಪ್ಪಿಸಿಕೊಂಡು ಜೀವ ಉಳಿಸಿಕೊಂಡಿದ್ದಂತ ಬಂಡೆನಾಗ, ಮನೋಜ್ ತುಮಕೂರಿನ ಒಕ್ಕೋಡಿ ಬಳಿಯಲ್ಲಿ ತಲೆಮರೆಸಿಕೊಂಡಿರೋ ಮಾಹಿತಿಯನ್ನು ನೀಡಿದ್ದನು. ಈ ಮಾಹಿತಿ ಆಧರಿಸಿ ಮನೋಜ್ ಆಲಿಯಾಸ್ ಮಂಡೇಲಾ ಬಂಧನಕ್ಕೆ ಪೊಲೀಸರು ತೆರಳಿದ್ದರು. ಈ ವೇಳೆ ಪೊಲೀಸರಿಂದ ತಪ್ಪಿಸಿಕೊಳ್ಳೋದಕ್ಕೆ ಅವರ ಮೇಲೆಯೇ ಹಲ್ಲೆ ನಡೆಸಿ, ಪರಾರಿಯಾಗೋದಕ್ಕೆ ಯತ್ನಿಸಿದಾಗ ಪೊಲೀಸರು ಆತನ ಕಾಲಿಗೆ ಗುಂಡೇಟು ನೀಡಿ ಬಂಧಿಸಿದ್ದಾರೆ. ಈ ಸಂಬಂಧ ತುಮಕೂರು ಗ್ರಾಮಾಂತರ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. https://kannadanewsnow.com/kannada/good-news-for-state-government-employees-cm-siddaramaiah-announces-scrapping-of-nps/ https://kannadanewsnow.com/kannada/woman-ips-officer-arrested-for-threatening-woman-ips-officer-in-bengaluru-jailed/

Read More

ನವದೆಹಲಿ: ಭಾರತದ ಮೊದಲ ಮೀಸಲಾದ ಸೌರ ಮಿಷನ್ ಆದಿತ್ಯ -ಎಲ್ 1 ( Aditya-L1 ) ಶನಿವಾರ ಲ್ಯಾಗ್ರೇಂಜ್ ಪಾಯಿಂಟ್ 1 (ಎಲ್ 1) ಸುತ್ತಲೂ ಹ್ಯಾಲೋ ಕಕ್ಷೆಯನ್ನು ಯಶಸ್ವಿಯಾಗಿ ಪ್ರವೇಶಿಸಿದೆ. ಇದು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (Indian Space Research Organisation -ISRO) ಗೆ ಮಹತ್ವದ ಮೈಲಿಗಲ್ಲಾಗಿದೆ. ಹಾಗಾದ್ರೆ ಇಸ್ರೋ ಮುಂದೆ ಏನು ಮಾಡಲಿದೆ ಅನ್ನೋ ಮಾಹಿತಿ ಮುಂದೆ ಓದಿ. ಬಾಹ್ಯಾಕಾಶ ನೌಕೆಯು ಈಗ ಸೂರ್ಯನ ಸಮಗ್ರ ಅಧ್ಯಯನವನ್ನು ಪ್ರಾರಂಭಿಸಲು ಸಜ್ಜಾಗಿದೆ. ಆದರೆ ಅದು ಅಮೂಲ್ಯವಾದ ಸೌರ ವೀಕ್ಷಣೆಗಳನ್ನು ಪ್ರಸಾರ ಮಾಡಲು ಪ್ರಾರಂಭಿಸುವ ಮೊದಲು, ನಿರ್ಣಾಯಕ ಹಂತಗಳ ಸರಣಿಯನ್ನು ಪೂರ್ಣಗೊಳಿಸಬೇಕು. ಸೆಪ್ಟೆಂಬರ್ 2, 2023 ರಂದು ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಿಂದ ಉಡಾವಣೆಯಾದ ಆದಿತ್ಯ-ಎಲ್ 1 ಭೂಮಿಯ ಮೇಲಿನ ನಾಲ್ಕು ಕುಶಲತೆಗಳು ಮತ್ತು ಟ್ರಾನ್ಸ್-ಲ್ಯಾಗ್ರಾಂಜಿಯನ್ ಪಾಯಿಂಟ್ 1 ಸೇರ್ಪಡೆ ಕುಶಲತೆಯನ್ನು ಒಳಗೊಂಡ ಸಂಕೀರ್ಣ ಪ್ರಯಾಣಕ್ಕೆ ಒಳಗಾಗಿದೆ. ಭೂಮಿಯಿಂದ ಸುಮಾರು 1.5 ಮಿಲಿಯನ್ ಕಿಲೋಮೀಟರ್ ದೂರದಲ್ಲಿರುವ ಬಾಹ್ಯಾಕಾಶ ನೌಕೆಯನ್ನು ಅದರ…

Read More

ಬೆಂಗಳೂರು: ನಗರದಲ್ಲಿ ಬೈಕ್ ನಲ್ಲಿ ತೆರಳುತ್ತಿದ್ದಂತ ಸವಾರನೊಬ್ಬನಿಗೆ ಮಹಿಳಾ ಐಪಿಎಸ್ ಅಧಿಕಾರಿಯೊಬ್ಬರು ಬುದ್ಧಿವಾದ ಹೇಳಿದ್ದಾರೆ. ಇಷ್ಟಕ್ಕೇ ಸಿಟ್ಟಾದಂತ ಬೈಕ್ ಸವಾರ ಮಹಿಳಾ ಐಪಿಎಸ್ ಅಧಿಕಾರಿಗೆ ಬೆದರಿಕೆ ಹಾಕಿದ್ದಾನೆ. ಈ ಹಿನ್ನಲೆಯಲ್ಲಿ ಆತನ ವಿರುದ್ಧ ಪ್ರಕರಣ ದಾಖಲಿಸಿಕೊಂಡ ಪೊಲೀಸರು, ಬಂಧಿಸಿ ಜೈಲಿಗಟ್ಟಿದ್ದಾರೆ. ಬೆಂಗಳೂರಿನ ಆರ್ ಎಂ ಸಿ ಯಾರ್ಡ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಬಿಎಂಟಿಎಫ್ ಎಸ್.ಪಿಯಾಗಿರುವಂತ ಮಹಿಳಾ ಐಪಿಎಸ್ ಅಧಿಕಾರಿ ಶೋಭಾರಾಣಿಯವರು, ಬೈಕ್ ಸವಾರನೊಬ್ಬನಿಗೆ ಬುದ್ಧಿವಾದ ಹೇಳಿದ್ದರು. ಆ ವೇಳೆಯಲ್ಲಿ ಅವರಿಗೆ ಅವಾಜ್ ಹಾಕಿದ್ದಂತ ಆತ, ಬೆದರಿಕೆಯನ್ನು ಹಾಕಿದ್ದ ಎಂಬುದಾಗಿ ಆತನ ವಿರುದ್ಧ ದೂರು ದಾಖಲಾಗಿತ್ತು. ಬೆಂಗಳೂರಿನ ಆರ್ ಎಂ ಸಿ ಯಾರ್ಡ್ ಠಾಣೆಯ ಪೊಲೀಸರು ಬೈಕ್ ಸವಾರನ ವಿರುದ್ಧ ದೂರು ದಾಖಲಿಸಿಕೊಂಡು ಆತನನ್ನು ಬಂಧಿಸಿ, ಜೈಲಿಗಟ್ಟಿದ್ದಾರೆ. ಈ ಮೂಲಕ ಸರಿಯಾದ ದಾರಿಯಲ್ಲಿ ನಡೆಯಪ್ಪ, ಸರಿಯಾಗಿ ಬೈಕ್ ಓಡಿಸಪ್ಪ ಅಂತ ಹೇಳಿದ್ದಕ್ಕೆ ಬೆದರಿಕೆ ಹಾಕಿದಂತ ಬೈಕ್ ಸವಾರ ಈಗ ಬಂಧನಕ್ಕೆ ಒಳಗಾಗಿ ಜೈಲುಪಾಲಾಗಿದ್ದಾನೆ. https://kannadanewsnow.com/kannada/cm-siddaramaiah-agrees-to-pay-hike-guest-lecturers-call-off-strike/ https://kannadanewsnow.com/kannada/good-news-for-state-government-employees-cm-siddaramaiah-announces-scrapping-of-nps/

Read More

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ( Karnataka Government Employees ) ಬಹು ದಿನಗಳ ಬೇಡಿಕೆಯಲ್ಲಿ ಎನ್ ಪಿಎಸ್ ( NPS) ರದ್ದುಗೊಳಿಸಿ ಓಪಿಎಸ್(OPS) ಜಾರಿಗೊಳಿಸೋದಾಗಿದೆ. ಇಂತಹ ಬೇಡಿಕೆ ಈಡೇರಿಸೋ ಬಗ್ಗೆ ಸಿಎಂ ಸಿದ್ಧರಾಮಯ್ಯ ( CM Siddaramaiah ) ಇಂದು ಮಹತ್ವದ ಘೋಷಣೆ ಮಾಡಿದ್ದಾರೆ. ಅದು ಏನು ಅಂತ ಮುಂದೆ ಓದಿ. ಕರ್ನಾಟಕ ರಾಜ್ಯ ಸರ್ಕಾರಿ ಎನ್.ಪಿ.ಎಸ್ ನೌಕರರ ಸಂಘದ ಪದಾಧಿಕಾರಿಗಳು ಇಂದು ಅವರನ್ನು ಭೇಟಿಯಾಗಿ ಎನ್.ಪಿ.ಎಸ್ ರದ್ದತಿ ( Cancellation of NPS ) ಬಗ್ಗೆ ಚರ್ಚಿಸಿದರು. ಈ ಬಳಿಕ ಮಾತನಾಡಿದಂತ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು, ಎನ್.ಪಿ.ಎಸ್ ರದ್ದತಿ ಬಗ್ಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಸಚಿವ ಸಂಪುಟ ಸದಸ್ಯರೊಂದಿಗೆ ಚರ್ಚಿಸಿ ತೀರ್ಮಾನಿಸಲಾಗುವುದು ಎಂದು ತಿಳಿಸಿದರು. ಎನ್.ಪಿ.ಎಸ್ ರದ್ದತಿಯ ಸಾಧ್ಯಾಸಾಧ್ಯತೆಗಳ ಕುರಿತು ಚರ್ಚಿಸಿ ತೀರ್ಮಾನಕ್ಕೆ ಬರಲಾಗುವುದು. ಇದನ್ನು ರದ್ದು ಪಡಿಸಿದ ಇತರ ರಾಜ್ಯಗಳಲ್ಲಿ ಅನುಸರಿಸಿರುವ ಕ್ರಮಗಳ ಕುರಿತೂ ಸಹ ಪರಿಶೀಲಿಸಲಾಗುವುದು. ಆರ್ಥಿಕ ಇಲಾಖೆ ಕೂಡ ಈ ಬಗ್ಗೆ ಕೂಲಂಕುಷವಾಗಿ ಪರಿಶೀಲಿಸಲಿದೆ ಎಂದರು.…

Read More

ಬೆಂಗಳೂರು: ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳ ಸಂಬಂಧ ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರನ್ನು ಅತಿಥಿ ಉಪನ್ಯಾಸಕರ ನಿಯೋಗ ಭೇಟಿ ಮಾಡಿ, ಬೇಡಿಕೆಯ ಮನವಿ ಸಲ್ಲಿಸಿತ್ತು. ಅಲ್ಲದೇ ಈ ಸಂಬಂಧ ಮಹತ್ವದ ಚರ್ಚೆಯನ್ನು ಅವರೊಂದಿಗೆ ಮಾಡಿತ್ತು. ಇಂದಿನ ಸಭೆಯಲ್ಲಿ ಅತಿಥಿ ಉಪನ್ಯಾಸಕರ ಗೌರವಧನವನ್ನು 5,000ದಿಂದ 8,000ಕ್ಕೆ ಹೆಚ್ಚಳ ಮಾಡೋದಕ್ಕೆ ಸಿಎಂ ಸಿದ್ಧರಾಮಯ್ಯ ಸಮ್ಮತಿಸಿದ್ದಾರೆ. ಅಲ್ಲದೇ ಕೆಲ ಬೇಡಿಕೆ ಈಡೇರಿಕೆಗೂ ಭರವಸೆ ನೀಡಿದ್ದಾರೆ. ಈ ಹಿನ್ನಲೆಯಲ್ಲಿ ಅತಿಥಿ ಉಪನ್ಯಾಸಕರು ಮುಷ್ಕರವನ್ನು ವಾಪಾಸ್ ಪಡೆದಿರೋದಾಗಿ ತಿಳಿದು ಬಂದಿದೆ. ಅತಿಥಿ ಉಪನ್ಯಾಸಕರ ಬೇಡಿಕೆ ಕುರಿತಂತೆ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ,ಉನ್ನತ ಶಿಕ್ಷಣ ಸಚಿವ ಡಾಕ್ಟರ್ ಎಂ ಸಿ ಸುಧಾಕರ್ ಹಾಗೂ ಉನ್ನತ ಅಧಿಕಾರಿಗಳ ಸಭೆಯಲ್ಲಿ ಅತಿಥಿ ಉಪನ್ಯಾಸಕರ ಸಂಘಟನೆಗಳ ಮುಖಂಡರೊಂದಿಗೆ ನಡೆದ ಚರ್ಚೆಯ ನಂತರ ಸರ್ಕಾರ ಕೈಗೊಂಡ ನಿರ್ಧಾರಗಳು ಹೀಗಿವೆ. 1)ಮಹಿಳಾ ಅತಿಥಿ ಉಪನ್ಯಾಸಕರಿಗೆ ಇದೇ ಜನವರಿ ತಿಂಗಳಿನಿಂದ ಜಾರಿಗೆ ಬರುವಂತೆ ಮೂರು ತಿಂಗಳ ಕಾಲ ಹೆರಿಗೆ ರಜೆಯನ್ನು ಸಂಬಳ ಸಹಿತ ನೀಡಲು ನಿರ್ಧರಿಸಲಾಗಿದೆ. 2)…

Read More