Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ(KUWJ) ಮತ್ತು ಪ್ರೆಸ್ ಕ್ಲಬ್ ಆ್ ಬೆಂಗಳೂರು(PCB) ಇವರ ಸಂಯುಕ್ತಾಶ್ರದಲ್ಲಿ ಟಿಎಸ್ಆರ್ ಪತ್ರಿಕೋದ್ಯಮ ಪ್ರಶಸ್ತಿ ಮತ್ತು ಮೊಹರೆ ಹಣಮಂತರಾಯ ಪತ್ರಿಕೋದ್ಯಮ ಪ್ರಶಸ್ತಿಗೆ ಭಾಜನರಾಗಿರುವ ಪುರಸ್ಕೃತರಿಗೆ ಚಹಾಕೂಟ ಮತ್ತು ಅಭಿನಂದನಾ ಕಾರ್ಯಕ್ರಮ ಏರ್ಪಡಿಸಲಾಗಿದೆ. ದಿನಾಂಕ 3.10.2024 ರಂದು ಗುರುವಾರ ಬೆಳಿಗ್ಗೆ 11 ಗಂಟೆಗೆ ಬೆಂಗಳೂರು ಪ್ರೆಸ್ ಕ್ಲಬ್ ಸಭಾಂಗಣದಲ್ಲಿ ಅಭಿನಂದನಾ ಕಾರ್ಯಕ್ರಮ ನಡೆಯಲಿದ್ದು, ಟಿಎಸ್ಆರ್ ಪತ್ರಿಕೋದ್ಯಮ ಪ್ರಶಸ್ತಿಗೆ ಆಯ್ಕೆಯಾಗಿರುವ ಶಿವಾಜಿ ಎಸ್. ಗಣೇಶನ್, ಶ್ರೀಕಾಂತಾಚಾರ್ಯ.ಆರ್.ಮಣೂರ, ಡಾ.ಆರ್.ಪೂರ್ಣಿಮಾ, ಪದ್ಮರಾಜ ದಂಡಾವತಿ, ಡಾ.ಸರಜೂ ಕಾಟ್ಕರ್, ಮೊಹರೆ ಹಣಮಂತರಾಯ ಪತ್ರಿಕೋದ್ಯಮ ಪ್ರಶಸ್ತಿಗೆ ಆಯ್ಕೆಯಾಗಿರುವ ರಾಜೀವ್ ಕಿದಿಯೂರ, ಇಂದೂಧರ ಹೊನ್ನಾಪುರ, ಎನ್.ಮಂಜುನಾಥ, ಚಂದ್ರಶೇಖರ್ ಪಾಲೆತ್ತಾಡಿ, ಶಿವಲಿಂಗಪ್ಪ ದೊಡ್ಡಮನಿ ಅವರನ್ನು ಗೌರವಿಸಲಾಗುವುದು. ಇದೇ ಸಂದರ್ಭದಲ್ಲಿ ಕರ್ನಾಟಕ ಮಾಧ್ಯಮ ಅಕಾಡೆಮಿ ಅಧ್ಯಕ್ಷರು ಮತ್ತು ಸದಸ್ಯರುಗಳನ್ನು ಸನ್ಮಾನಿಸಲಾಗುವುದು. ಕಾರ್ಯಕ್ರಮದಲ್ಲಿ ವಿಶ್ವವಾಣಿ ಸಂಪಾದಕರಾದ ವಿಶ್ವೇಶ್ವರ ಭಟ್, ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು, ಪ್ರೆಸ್ ಕ್ಲಬ್ ಅಧ್ಯಕ್ಷ ಆರ್.ಶ್ರೀಧರ್, ಪ್ರಧಾನ ಕಾರ್ಯದರ್ಶಿ ಶಿವಕುಮಾರ…
ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವದ ಸಂದರ್ಭದಲ್ಲೇ ವಸ್ತು ಪ್ರದರ್ಶನವನ್ನು ಆಯೋಜಿಸಲಾಗುತ್ತದೆ. ಈ ವಸ್ತು ಪ್ರದರ್ಶನದಲ್ಲಿ ಭಾಗಿಯಾಗುವಂತ ಪ್ರವಾಸಿಗರಿಗೆ ಬಿಗ್ ಶಾಕ್ ಎನ್ನುವಂತೆ ಪ್ರವೇಶ ಶುಲ್ಕವನ್ನು ಹೆಚ್ಚಳ ಮಾಡಲಾಗಿದೆ. ಈ ಬಗ್ಗೆ ವಸ್ತು ಪ್ರದರ್ಶನ ಪ್ರಾಧಿಕಾರದ ಅಧ್ಯಕ್ಷ ಅಯೂಬ್ ಖಾನ್ ಸುದ್ದಿಗೋಷ್ಠಿ ಮಾತನಾಡಿ, ಅಕ್ಟೋಬರ್ 3 ರಂದು ದಸರಾ ವಸ್ತು ಪ್ರದರ್ಶನ ರಾತ್ರಿ 8 ಗಂಟೆಗೆ ಉದ್ಘಾಟನೆ ಆಗುತ್ತದೆ. ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ ಕೆ ಶಿವಕುಮಾರ್ ಸೇರಿದಂತೆ ಸ್ಥಳೀಯ ಜನಪ್ರನಿಧಿಗಳು, ಅಧಿಕಾರಗಳ ಸಮ್ಮುಖದಲ್ಲಿ ಉದ್ಘಾಟನೆ ಆಗಲಿದೆ. ಸುಮಾರು 90 ದಿನಗಳ ಕಾಲ ವಸ್ತು ಪ್ರದರ್ಶನವಿರುತ್ತದೆ ಎಂದಿದ್ದಾರೆ. ಈ ಬಾರಿ ಉದ್ಘಾಟನೆಗೂ ಮುನ್ನವೇ ಸರ್ಕಾರಿ ಮಳಿಗೆಗಳು ಭರ್ತಿಯಾಗುವಂತೆ ಸೂಚಿಸಲಾಗಿದೆ. ಈಗಾಗಲೇ 30 ಕ್ಕೂ ಹೆಚ್ಚು ಮಳಿಗೆಗಳು ತುಂಬಿವೆ. ಉಳಿದಂತೆ ಎಲ್ಲಾ ಖಾಸಗಿ ಮಳಿಗೆಗಳೂ ಕೂಡ ಅಂದೇ ಉದ್ಘಾಟನೆ ಆಗಲಿವೆ. ಬ್ರಾಂಡ್ ಮೈಸೂರು ಹೆಸರಿನಡಿ ಮೈಸೂರು ಬ್ರಾಂಡ್ ಪ್ರಾಡಕ್ಟ್ ಗಳೆಲ್ಲವೂ ಒಂದೇ ಸೂರಿನಡಿ ಸಿಗುವ ವ್ಯವಸ್ಥೆ ಮಾಡಲಾಗುತ್ತದೆ. ಈ ಬಾರಿ ಪ್ಲಾಸ್ಟಿಕ್ ಮುಕ್ತ ವಸ್ತು…
ಬೆಂಗಳೂರು: ಅಕ್ಟೋಬರ್.3ರಿಂದ 12ರವರೆಗೆ ನಡೆಯಲಿರುವಂತ ವಿಶ್ವ ವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದಲ್ಲಿ 508 ಕಲಾ ತಂಡಗಳು, 6,500 ಕಲಾವಿದರು ಭಾಗಿಯಾಗಲಿದ್ದಾರೆ. ಇದಕ್ಕಾಗಿ ವೇದಿಕೆ ಸಿದ್ಧಗೊಂಡಿದೆ ಎಂಬುದಾಗಿ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಹೆಚ್.ಸಿ ಮಹದೇವಪ್ಪ ತಿಳಿಸಿದ್ದಾರೆ. ಈಗಾಗಲೇ ದಸರಾ ಸಮೀಪಿಸುತ್ತಿದೆ. ಎಲ್ಲಾ ಸಿದ್ದತಾ ಕಾರ್ಯಗಳು ಹಂತಿಮ ಹಂತಕ್ಕೆ ಬಂದಿವೆ. ಅಕ್ಟೋಬರ್ 3ಕ್ಕೆ ದಸರಾ ಉದ್ಘಾಟನೆಯಾಗಲಿದೆ. ಬೆಳಿಗ್ಗೆ 9.15ರಿಂದ 9.40 ರೊಳಗಿನ ವೃಶ್ಚಿಕ ಲಗ್ನದಲ್ಲಿ ದಸರಾ ಉದ್ಘಾಟನೆಯಾಗಲಿದೆ. ಅಂದೇ ಎಲ್ಲಾ ಕಾರ್ಯಕ್ರಮಗಳು ಉದ್ಘಾಟನೆಗೊಳ್ಳಲಿವೆ ಎಂದರು. ಅಕ್ಟೋಬರ್ 3ರಂದು ಅರಮನೆ ಆವರಣದಲ್ಲಿ ದಸರಾ ಸಾಂಸ್ಕೃತಿಕ ಕಾರ್ಯಕ್ರಮಗಳ ಉದ್ಘಾಟನೆ ಆಗುತ್ತದೆ. ರಾಜ್ಯ ಸಂಗೀತ ವಿದ್ವಾನ್ ಪ್ರಶಸ್ತಿಯನ್ನು ಸಿಎಂ ನೀಡಲಿದ್ದಾರೆ. 11 ವೇದಿಕೆಗಳಲ್ಲಿ 508 ಕಲಾ ತಂಡಗಳ ಕಲಾವಿದರು ಟೌನ್ ಹಾಲ್ ನಲ್ಲಿ ನಾಟಕ ಪ್ರದರ್ಶನ ನೀಡಲಿದ್ದಾರೆ. ಅಕ್ಟೋಬರ್ 5ರಂದು ಪ್ರಭುತ್ವ ಮತ್ತು ಸಂವಿಧಾನ ಆಶಯದಲ್ಲಿ ಎರಡು ದಿನ ರಾಷ್ಟ್ರೀಯ ವಿಚಾರ ಸಂಕಿರಣ ನಡೆಯಲಿದೆ ಎಂದು ಹೇಳಿದರು. ದಸರಾ ವೇಳೆ ಏರ್ ಶೋ ವಿಚಾರವಾಗಿ ಮಾತನಾಡಿದಂತ…
ಮೈಸೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಪತ್ನಿ ಪಾರ್ವತಿ ಅವರು ತಮಗೆ ಕೊಟ್ಟಿದ್ದಂತ 14 ಸೈಟ್ ಗಳನ್ನು ಮುಡಾಗೆ ಮರಳಿ ನೀಡಿದ್ದರು. ಈ 14 ಮುಡಾ ಸೈಟ್ ಗಳ ಕ್ರಯಪತ್ರವನ್ನು ರದ್ದುಗೊಳಿಸಲಾಗಿದ್ದು, ಮುಡಾ ಮರಳಿ ವಾಪಾಸ್ ಪಡೆದಿದೆ. ಈ ಕುರಿತಂತೆ ಸುದ್ದಿಗಾರರೊಂದಿಗೆ ಮಾತನಾಡಿದಂತ ಮೈಸೂರು ಮುಡಾ ಆಯುಕ್ತ ರಘುನಂದನ್ ಅವರು, ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಪತ್ನಿ ಪಾರ್ವತಿಯವರು 14 ಸೈಟ್ ಗಳನ್ನು ಮುಡಾಗೆ ವಾಪಾಸ್ ಮಾಡಿದ್ದಾರೆ. ಅವುಗಳನ್ನು ಮುಡಾ ಪಡೆದಿದೆ ಎಂದರು. ಪಾರ್ವತಿಯವರು ಸ್ವಇಚ್ಛೆಯಿಂದ ತಮಗೆ ನೀಡಿದ್ದಂತ 14 ಸೈಟ್ ಗಳನ್ನು ವಾಪಾಸ್ ಮಾಡಿದ್ದಾರೆ. ಹೀಗಾಗಿ 14 ಮುಡಾ ಸೈಟ್ ಗಳ ಕ್ರಯಪತ್ರ ರದ್ದುಗೊಳಿಸಲಾಗಿದೆ ಎಂಬುದಾಗಿ ತಿಳಿಸಿದರು. ಸ್ವಇಚ್ಛೆಯಿಂದ ಸಿಎಂ ಸಿದ್ಧರಾಮಯ್ಯ ಪತ್ನಿ ಪಾರ್ವತಿ ಅವರು ಕೊಟ್ಟಿದ್ದಾರೆ. ನಾವು ಸ್ವೀಕರಿಸಿದ್ದೇವೆ. ಇದನ್ನು ಸರ್ಕಾರದ ಗಮನಕ್ಕೂ ತಂದಿದ್ದೇವೆ ಎಂಬುದಾಗಿ ಹೇಳಿದರು. https://kannadanewsnow.com/kannada/shivamogga-minister-madhu-bangarappa-launches-distribution-of-eggs-to-school-children-7-days-a-week-in-sagar/ https://kannadanewsnow.com/kannada/breaking-in-a-heart-rending-incident-in-belagavi-mother-commits-suicide-by-jumping-into-well-with-17-month-old-baby/ https://kannadanewsnow.com/kannada/accounts-of-14-muda-plots-allotted-to-cm-siddaramaiahs-wife-parvathi-cancelled/
ಶಿವಮೊಗ್ಗ: ಜಿಲ್ಲೆಯ ಸಾಗರ ನಗರದಲ್ಲಿ ಇಂದು 1-10ನೇ ತರಗತಿಯ ಸರ್ಕಾರಿ ಶಾಲಾ ಮಕ್ಕಳಿಗೆ ಮಧ್ಯಾಹ್ನದ ಬಿಸಿಯೂಟದ ಜೊತೆಗೆ ವಾರದ 7 ದಿನ ಪೌಷ್ಠಿಕಾಂಶ ಯುಕ್ತ ಆಹಾರ ಎನ್ನುವಂತೆ ಮೊಟ್ಟೆ ವಿತರಣೆಗೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಚಾಲನೆ ನೀಡಿದರು. ಅವರು ಇಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ರಾಜ್ಯ ಸರ್ಕಾರದ ಅಕ್ಷರ ದಾಸೋಹ- ಮಧ್ಯಾಹ್ನದ ಉಪಹಾರ ಯೋಜನೆಯಡಿ ಅಜೀಮ್ ಪ್ರೇಮ್ ಜಿ ಫೌಂಡೇಶನ್ ಬೆಂಗಳೂರು ಇವರ ಸಹಯೋಗದೊಂದಿಗೆ ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ ಜಿಲ್ಲೆಯ ಎಲ್ಲಾ ಸರ್ಕಾರಿ ಮತ್ತು ಅನುದಾನಿತ ಪ್ರಾಥಮಿಕ ಮತ್ತು ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ವಾರದಲ್ಲಿ ಆರು ದಿನಗಳ ಕಾಲ ಪೂರಕ ಪೌಷ್ಟಿಕ ಆಹಾರವನ್ನು ಉಚಿತವಾಗಿ ವಿತರಿಸುವ ಜಿಲ್ಲಾ ಮಟ್ಟದ ಕಾರ್ಯಕ್ರಮಕ್ಕೆ ಸಾಗರದ ಗಾಂಧೀ ಮೈದಾನದಲ್ಲಿ ಚಾಲನೆ ನೀಡಿ ಅವರು ಮಾತನಾಡುತ್ತಿದ್ದರು. ರಾಜ್ಯದಲ್ಲಿನ ಸರ್ಕಾರಿ ಮತ್ತು ಅನುದಾನಿತ ಶಾಲೆಗಳು ಸೇರಿದಂತೆ ಒಂದರಿಂದ 10ನೇ ತರಗತಿಯವರೆಗಿನ ಒಟ್ಟು 76,000 ಶಾಲೆಗಳ 57 ಲಕ್ಷ ಮಕ್ಕಳು ವಾರದ ಏಳು…
ಬೆಂಗಳೂರು: ರಾಜ್ಯದ ಗ್ರಾಮ ಆಡಳಿತಾಧಿಕಾರಿಗಳಿಗೆ ಭರ್ಜರಿ ಗುಡ್ ನ್ಯೂಸ್ ಎನ್ನುವಂತೆ ಎಲ್ಲಾ ವಿಎಗಳಿಗೆ ಟ್ಯಾಬ್ ವಿತರಣೆ ಮಾಡುವುದಾಗಿ ಕಂದಾಯ ಸಚಿವ ಕೃಷ್ಣಭೈರೇಗೌಡ ಘೋಷಿಸಿದ್ದಾರೆ. ಗ್ರಾಮ ಆಡಳಿತ ಅಧಿಕಾರಿಗಳ ಸಂಘದ ಅಧ್ಯಕ್ಷರು, ಕಾರ್ಯಾಧ್ಯಕ್ಷರು ಪದಾಧಿಕಾರಿಗಳನ್ನು ಇಂದು ನನ್ನನ್ನು ವಿಕಾಸಸೌಧದ ಕಚೇರಿಯಲ್ಲಿ ಭೇಟಿಯಾಗಿ ತಮ್ಮ ಬೇಡಿಕೆಯನ್ನು ಸಲ್ಲಿಸಿದ್ದಾರೆ. ಈ ವೇಳೆ ಗ್ರಾಮ ಆಡಳಿತ ಅಧಿಕಾರಿಗಳ ಬೇಡಿಕೆಗಳ ಈಡೇರಿಕೆಗೆ ಸಂಬಂಧಿಸಿದಂತೆ ಎರಡು ಗಂಟೆಗೂ ಅಧಿಕ ಸಮಯ ಚರ್ಚಿಸಲಾಯಿತು. ಗ್ರಾಮ ಆಡಳಿತ ಅಧಿಕಾರಿಗಳಿಗೆ ಕೆಲಸದ ಹೊರೆ ಅಧಿಕವಾಗಿದೆ ಎಂಬುದರಲ್ಲಿ ಎರಡು ಮಾತಿಲ್ಲ. ಅವರ ಶ್ರಮವಿಲ್ಲದೆ ಬರ ಸಂದರ್ಭದಲ್ಲಿ “ಫ್ರೂಟ್ಸ್ʼ ಮೂಲಕ ನೈಜ ದತ್ತಾಂಶಗಳನ್ನು ಪಡೆದು ರೈತರ ಖಾತೆಗೆ ನೇರವಾಗಿ ಬರ ಪರಿಹಾರ ತಲುಪಿಸುವುದು ಸಾಧ್ಯವಾಗುತ್ತಿರಲಿಲ್ಲ. ಸರ್ಕಾರದ ಮಹತ್ವಾಕಾಂಕ್ಷೆಯ ಯೋಜನೆಗಳಾದ ಬೀಟ್ ಆ್ಯಪ್ ಹಾಗೂ ಆಧಾರ್ ಸೀಡಿಂಗ್ ಹಾಗೂ ಫೌತಿ ಖಾತೆ ಅಭಿಯಾನದಲ್ಲೂ ಗ್ರಾಮ ಆಡಳಿತ ಅಧಿಕಾರಿಗಳ ಪಾತ್ರ ಮಹತ್ವವಾದದ್ದು. ಹೀಗಾಗಿ ಮುಂದಿನ ದಿನಗಳಲ್ಲಿ ಏಕ ಕಾಲದಲ್ಲಿ ಎಲ್ಲಾ ಅಭಿಯಾನಗಳಿಗೂ ಒಟ್ಟಿಗೆ ಚಾಲನೆ ನೀಡದೆ, ಅವರ ಕೆಲಸದ ಒತ್ತಡಗಳನ್ನು…
ಬೆಂಗಳೂರು: ಕೆಎಎಸ್ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಪೂರ್ವ ಭಾವಿ ಪರೀಕ್ಷೆಯನ್ನು ನಡೆಸಲು ದಿನಾಂಕ ನಿಗದಿಯಾಗಿದೆ. ದಿನಾಂಕ 29-12-2024ರಂದು ಕೆಎಎಸ್ ಪೂರ್ವಭಾವಿ ಮರು ಪರೀಕ್ಷೆ ನಡೆಸುವುದಾಗಿ ಕೆಪಿಎಸ್ಸಿ ಘೋಷಿಸಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಕರ್ನಾಟಕ ಲೋಕಸೇವಾ ಆಯೋಗದ ಕಾರ್ಯದರ್ಶಿ ಡಾ.ರಾಕೇಶ್ ಕುಮಾರ್.ಕೆ ಅವರು ಮಾಹಿತಿ ನೀಡಿದ್ದು, 2023-24ನೇ ಸಾಲಿನ ಗೆಜೆಟೆಡ್ ಪ್ರೊಬೇಷನ ಗ್ರೂಪ್-ಎ ಮತ್ತು ಗ್ರೂಪ್-ಬಿ ವೃಂದದ ಒಟ್ಟು 384 ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದಂತೆ ಅಧಿಸೂಚನೆ ಮತ್ತು ತಿದ್ದುಪಡಿ ಅಧಿಸೂಚನೆಗಳನ್ನು ಕ್ರಮವಾಗಿ 26-02-2024, 02-04-2024, 19-04-2024 ಮತ್ತು 06-07-2024ರಂದು ಹೊರಡಿಸಲಾಗಿರುತ್ತದೆ, ಸದರಿ ಹುದ್ದೆಗಳಿಗೆ ಪೂರ್ವಭಾವಿ ಮರುಪರೀಕ್ಷೆಯನ್ನು ದಿನಾಂಕ:29-12-2024ರಂದು ನಡೆಸಲು ನಿಗದಿಪಡಿಸಲಾಗಿರುತ್ತದೆ ಎಂದಿದ್ದಾರೆ. ಮುಂದುವರೆಸುತ್ತಾ, ಸದರಿ ದಿನಾಂಕದಂದು ಯಾವುದೇ ಪರೀಕ್ಷೆಯು ನಿಗದಿಯಾಗದಿರುವ ಕುರಿತು ಪರಿಶೀಲಿಸಲಾಗಿರುತ್ತದೆ. ಆದರೆ ಸದರಿ ತಿದ್ದುಪಡಿ ಅಧಿಸೂಚನೆ ಜಾರಿಯಾದ ನಂತರ ಇನ್ನಿತರೆ ಯಾವುದೇ ಪರೀಕ್ಷೆ ನಿಗದಿಯಾದಲಿ, ಅದಕ್ಕೆ ಆಯೋಗವು ಹೊಣೆಯಾಗುವುದಿಲ್ಲ ಹಾಗೂ ಯಾವುದೇ ಕಾರಣಕ್ಕೂ ಪರೀಕ್ಷೆಯನ್ನು ಮುಂದೂಡಲಾಗುವುದಿಲ್ಲ ಎಂದು ಸ್ಪಷ್ಟ ಪಡಿಸಿದ್ದಾರೆ. https://kannadanewsnow.com/kannada/horticulture-department-invites-applications-for-various-schemes/ https://kannadanewsnow.com/kannada/accounts-of-14-muda-plots-allotted-to-cm-siddaramaiahs-wife-parvathi-cancelled/ https://kannadanewsnow.com/kannada/breaking-in-a-heart-rending-incident-in-belagavi-mother-commits-suicide-by-jumping-into-well-with-17-month-old-baby/
ಚಿತ್ರದುರ್ಗ: ತೋಟಗಾರಿಕೆ ಇಲಾಖೆಯಡಿ ಚಿತ್ರದುರ್ಗ ತಾಲ್ಲೂಕಿನ ರೈತರಿಗೆ 2024-25ನೇ ಸಾಲಿಗೆ ವಿವಿಧ ಯೋಜನೆಗಳನ್ನು ಅನುಷ್ಠಾನಗೊಳಿಸುತ್ತಿದ್ದು, ಯೋಜನೆಗಳಲ್ಲಿ ಸಹಾಯಧನ ಪಡೆಯಲು ಅರ್ಹ ರೈತರಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಅ.15 ಕೊನೆಯ ದಿನವಾಗಿದೆ. ತೋಟಗಾರಿಕೆ ಇಲಾಖೆಯಡಿ ಸಮಗ್ರ ತೋಟಗಾರಿಕೆ ಅಭಿವೃದ್ಧಿ ಮಿಷನ್ (ರಾಷ್ಟಿçÃಯ ತೋಟಗಾರಿಕೆ ಮಿಷನ್), ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆ (ಹನಿ ನೀರಾವರಿ ಯೋಜನೆ), ರಾಷ್ಟಿçÃಯ ಕೃಷಿ ವಿಕಾಸ ಯೋಜನೆ, ಮಹಾತ್ಮಗಾಂಧಿ ರಾಷ್ಟಿçÃಯ ಉದ್ಯೋಗ ಖಾತ್ರಿ ಯೋಜನೆಗಳಿಗೆ ಅರ್ಹ ಫಲಾನುಭವಿಗಳು ಅರ್ಜಿ ಸಲ್ಲಿಸಬಹುದು. ಈ ಮೇಲ್ಕಂಡ ಯೋಜನೆಗಳಿಗೆ ಆಯಾ ಯೋಜನೆಗಳಲ್ಲಿ ನಿಗಧಿಪಡಿಸಿದ ಮಾರ್ಗಸೂಚಿಯಂತೆ ಅರ್ಹ ಫಲಾನುಭವಿಗಳು ಅರ್ಜಿ ಸಲ್ಲಿಸಬಹುದು. ಎಲ್ಲಾ ಯೋಜನೆಗಳಿಗೆ ಈ ಹಿಂದೆ ಇಲಾಖೆಯಿಂದ ಸಹಾಯಧನ ಪಡೆಯದೇ ಇರುವ ಫಲಾನುಭವಿಗಳಿಗೆ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಅತೀ ಸಣ್ಣ ರೈತರಿಗೆ, ಮಹಿಳೆಯರಿಗೆ, ಅಂಗವಿಕಲರಿಗೆ ಆದ್ಯತೆ ನೀಡಲಾಗುವುದು. ಅರ್ಜಿ ನಮೂನೆ, ಯೋಜನೆಗಳ ಬಗ್ಗೆ ಹೆಚ್ಚಿನ ಮಾಹಿತಿಗಾಗಿ ಚಿತ್ರದುರ್ಗ ತಾಲ್ಲೂಕು ತೋಟಗಾರಿಕೆ ಇಲಾಖೆಯನ್ನು ಸಂಪರ್ಕಿಸಬಹುದು ಎಂದು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು…
ಬೆಂಗಳೂರು; ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಪತ್ನಿ ಪಾರ್ವತಿ ಅವರು ತಮಗೆ ನೀಡಿದ್ದಂತ 14 ಮುಡಾ ಸೈಟ್ ಹಿಂದಿರುಗಿಸಿದ್ದರು. ಇಂತಹ ಸೈಟುಗಳ ಖಾತೆಯನ್ನು ಮುಡಾ ರದ್ದುಗೊಳಿಸಿ ಆದೇಶಿಸಿದೆ. ನಿನ್ನೆ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿಯವರು ನನ್ನ ಪತಿಯಾಗಿರುವ ರಾಜ್ಯದ ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಮ್ಮ 40 ವರ್ಷದ ಸುದೀರ್ಘ ರಾಜಕಾರಣದಲ್ಲಿ ಯಾವುದೇ ಸಣ್ಣ ಕಳಂಕವೂ ಅಂಟಿಕೊಳ್ಳದಂತಹ ನೈತಿಕತೆಯನ್ನು ವ್ರತದಂತೆ ಪಾಲಿಸಿಕೊಂಡು ಬಂದವರು. ರಾಜಕೀಯವೂ ಸೇರಿದಂತೆ ಸಾರ್ವಜನಿಕ ಜೀವನದಲ್ಲಿ ಕಾಣಿಸಿಕೊಂಡು ಅವರಿಗೆ ಮುಜುಗರ ಉಂಟು ಮಾಡಬಾರದು ಎಂಬ ನಿರ್ಧಾರಕ್ಕೆ ಬದ್ಧಳಾಗಿ ಬದುಕಿದವಳು ಎಂದಿದ್ದರು. ನಾನೆಂದೂ ಮನೆ, ಆಸ್ತಿ, ಚಿನ್ನ, ಸಂಪತ್ತನ್ನು ಬಯಸಿದವಳಲ್ಲ. ಯಾವುದೇ ಕಾರಣಕ್ಕೂ ನನ್ನಿಂದ ಅವರ ರಾಜಕೀಯ ಜೀವನಕ್ಕೆ ಒಂದು ಸಣ್ಣ ಹನಿಯಷ್ಟೂ ಕಳಂಕ ತಟ್ಟಬಾರದೆಂದು ಎಚ್ಚರಿಕೆಯಿಂದ ನಡೆದುಕೊಂಡವಳು ಎಂದು ತಿಳಿಸಿದ್ದರು. ನನ್ನ ಪತಿಗೆ ರಾಜ್ಯದ ಜನತೆ ಹರಿಸುತ್ತಾ ಬಂದ ಪ್ರೀತಿ ಅಭಿಮಾನಗಳನ್ನು ದೂರದಿಂದಲೇ ಕಂಡು ಸಂತೋಷ ಮತ್ತು ಹೆಮ್ಮೆ ಪಟ್ಟವಳು. ಹೀಗಿದ್ದರೂ ಮೈಸೂರಿನ ಮುಡಾ ನಿವೇಶನಕ್ಕೆ ಸಂಬಂಧಿಸಿದಂತೆ ಕೇಳಿಬಂದ ಆರೋಪಗಳಿಂದ ನಾನು ಘಾಸಿಗೊಂಡಿದ್ದೇನೆ.…
ಬೆಂಗಳೂರು: ಉದ್ಯೋಗ ನಗರಿಯ ಮುಟುಕ ಹೊತ್ತಿದ್ದಂತ ಬೆಂಗಳೂರಿಗೆ ಈಗ ಮತ್ತೊಂದು ಗರಿಮೆ ಸಂದಿದೆ. ಅದೇ ಇವಿ ಚಾರ್ಜಿಂಗ್ ಕೇಂದ್ರಗಳ ಸಂಖ್ಯೆಯಲ್ಲಿ ಬೆಂಗಳೂರಿಗೆ ಮೊದಲ ಸ್ಥಾನ ಲಭಿಸಿದೆ. ಹೌದು ಉದ್ಯಾನ ನಗರಿ, ಸಿಲಿಕಾನ್ ಸಿಟಿ ಬೆಂಗಳೂರಿನ ಮುಕುಟಕ್ಕೆ ʼಇವಿ ಚಾರ್ಜಿಂಗ್ ಹಬ್ʼ ಎಂಬ ಹೊಸ ಗರಿಯೊಂದು ಸೇರ್ಪಡೆಯಾಗಿದೆ. ಕೇಂದ್ರ ಇಂಧನ ಸಚಿವಾಲಯದ ಬ್ಯೂರೊ ಆಫ್ ಎನರ್ಜಿ ಎಫಿಷಿಯೆನ್ಸಿ ಸಂಸ್ಥೆ ಇತ್ತೀಚೆಗೆ ಬಿಡುಗಡೆ ಮಾಡಿದ ವರದಿ ಪ್ರಕಾರ, ಎಲೆಕ್ಟ್ರಿಕ್ ವಾಹನಗಳ ಚಾರ್ಜಿಂಗ್ ಕೇಂದ್ರಗಳನ್ನು ಹೊಂದಿರುವ ನಗರಗಳಲ್ಲಿ ಬೆಂಗಳೂರು ಅಗ್ರ ಸ್ಥಾನದಲ್ಲಿದೆ. ಬೆಂಗಳೂರಿನ ಬೆಸ್ಕಾಂ ವ್ಯಾಪ್ತಿಯಲ್ಲಿ 5,337 ಚಾರ್ಜಿಂಗ್ ಸ್ಟೇಷನ್ ಗಳಿದ್ದರೇ, 6,676 ಒಟ್ಟು ಚಾರ್ಜಿಂಗ್ ಘಟಕಗಳಿದ್ದಾವೆ. ಇವುಗಳಲ್ಲಿ 195 ಬೆಸ್ಕಾಂ ಇವಿ ಚಾರ್ಜಿಂಗ್ ಕೇಂದ್ರಗಳು ಸೇರಿದ್ದಾವೆ. https://kannadanewsnow.com/kannada/one-killed-four-members-of-a-family-injured-in-bee-attack-in-kolar/ https://kannadanewsnow.com/kannada/breaking-in-a-heart-rending-incident-in-belagavi-mother-commits-suicide-by-jumping-into-well-with-17-month-old-baby/ https://kannadanewsnow.com/kannada/bengaluru-police-inspector-booked-for-misappropriating-seized-goods-without-returning-them/