Author: kannadanewsnow09

ಬೆಂಗಳೂರು : ನಮ್ಮ ಸರ್ಕಾರ ಸಚಿವ ಪ್ರಿಯಾಂಕ ಖರ್ಗೆ ಅವರ ನೇತೃತ್ವದಲ್ಲಿ ಎಲ್ಲಾ ಗ್ರಂಥಾಲಯ ಮೇಲ್ವಿಚಾರಕರನ್ನು ಕನಿಷ್ಠ ವೇತನಕ್ಕೆ ಒಳಪಡಿಸಲು ನಿರ್ಧರಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಘೋಷಿಸಿದರು. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ಕರ್ನಾಟಕ ಪಂಚಾಯತ್ ರಾಜ್ ಆಯುಕ್ತಾಲಯದ ಸಂಯುಕ್ತಾಶ್ರಯದಲ್ಲಿ ಆಯೋಜಿಸಲಾಗಿದ್ದ ರಾಷ್ಟ್ರೀಯ ಗ್ರಂಥ ಪಾಲಕರ ದಿನಾಚರಣೆ ಮತ್ತು ಮೇಲ್ವಿಚಾರಕರ ರಾಜ್ಯ ಸಮ್ಮೇಳನವನ್ನು ಉದ್ಘಾಟಿಸಿ, ರಾಜ್ಯದಲ್ಲಿ 6599 ಹೊಸ ಗ್ರಾಮ ಗ್ರಂಥಾಲಯ ಕಾರ್ಯಕ್ರಮ ಲೋಕಾರ್ಪಣೆಗೊಳಿಸಿ ಮಾತನಾಡಿದರು. ಪುಸ್ತಕಗಳು ಒಳ್ಳೆಯ ಸ್ನೇಹಿತನಿದ್ದಂತೆ. ಗ್ರಂಥಾಲಯಗಳಿಗೆ ಹೋಗುವುದು ಅತ್ಯಂತ ಉತ್ತಮ ಹವ್ಯಾಸ. ಗ್ರಾಮಗಳಲ್ಲಿ 6599 ಗ್ರಾಮ‌ಮಟ್ಟದ ಗ್ರಂಥಾಲಯಗಳನ್ಮು ತೆರೆಯುವ ನಿರ್ಧಾರ ಮಾಡಿ ಘೋಷಣೆ ಮಾಡಿದ್ದೇವೆ ಎಂದರು. ಜ್ಞಾನ ವಿಕಾಸ ಕೇವಲ ಶಾಲಾ ಶಿಕ್ಷಣದಿಂದ ಮಾತ್ರ ಸಾಧ್ಯವಿಲ್ಲ. ಶಾಲೆಗಳ ಹೊರಗೂ ಕಲಿಕೆ ಅಗತ್ಯ. ಸಾವಿರಾರು ವರ್ಷಗಳ ಕಾಲ ಅಕ್ಷರ ಸಂಸ್ಕೃತಿಯಿಂದ ವಂಚಿತರಾಗಿದ್ದ ಸಮುದಾಯಗಳಿಗೆ ಅಂಬೇಡ್ಕರ್ ಅವರ ಸಂವಿಧಾನದ ಕಾರಣದಿಂದ ಶಿಕ್ಷಣ ಪಡೆಯುವ ಅವಕಾಶ ಸಿಕ್ಕಿದೆ. ನಾವು 78 ನೇ ಸ್ವಾತಂತ್ರ್ಯೋತ್ಸವವನ್ನು ಆಚರಿಸುತ್ತಿದ್ದೇವೆ. ಸ್ವಾತಂತ್ರ್ಯ ಬಂದು…

Read More

ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು ರಾಜ್ಯದ ಗ್ರಾಮ ಪಂಚಾಯತಿ ಕಚೇರಿಗಳಲ್ಲಿ ಈಗಾಗಲೇ 5,895 ಗ್ರಂಥಾಲಯಗಳನ್ನು ಸಜ್ಜುಗೊಳಿಸಿದ್ದು, ಇದರೊಂದಿಗೆ ಈ ವರ್ಷ 263.96 ಕೋಟಿ ರೂ. ಅನುದಾನದಲ್ಲಿ ರಾಜ್ಯದಲ್ಲಿ 6599 ಹೊಸ ಗ್ರಾಮ ಗ್ರಂಥಾಲಯಗಳನ್ನು ಪ್ರಾರಂಭಿಸಲಾಗುತ್ತಿದೆ. ಭಾರತದ ಗ್ರಂಥಾಲಯ ಚಳವಳಿಯ ಪಿತಾಮಹ ಡಾ.ಎಸ್.ಆರ್.ರಂಗನಾಥನ್ ರವರ ಜನ್ಮದಿನದಂದು ರಾಷ್ಟ್ರಮಟ್ಟದಲ್ಲಿ ಗ್ರಂಥಪಾಲಕರ ದಿನ ಆಚರಿಸಲಾಗುತ್ತಿದೆ. ಈ ಸಂದರ್ಭದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಏರ್ಪಡಿಸಿರುವ ಗ್ರಂಥಪಾಲಕರ ದಿನಾಚರಣೆಯಲ್ಲಿ ಹೊಸ ಗ್ರಾಮ ಗ್ರಂಥಾಲಯಗಳನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ರವರು ಘೋಷಣೆ ಮಾಡಿದರು. ಇದೇ ಸಂದರ್ಭದಲ್ಲಿ ಅರಿವು ಕೇಂದ್ರಗಳ ಮಾದರಿ ಕಟ್ಟಡ ವಿನ್ಯಾಸವನ್ನು ಮುಖ್ಯಮಂತ್ರಿಗಳು ಅನಾವರಣಗೊಳಿಸಿದರು. ನ್ಯಾಷನಲ್ ಬುಕ್ ಟ್ರಸ್ಟ್ ಆಫ್ ಇಂಡಿಯಾ ಸಂಸ್ಥೆಯಿಂದ ರಾಜ್ಯದಲ್ಲಿ ಹೊಸದಾಗಿ ಆರಂಭಿಸಲಾಗುತ್ತಿರುವ 6599 ಗ್ರಾಮೀಣ ಗ್ರಂಥಾಲಯಗಳಿಗೆ ತಲಾ 2 ಲಕ್ಷ ರೂ. ಮೌಲ್ಯದ ಪುಸ್ತಕಗಳನ್ನು ಖರೀದಿಸಲಾಗಿದೆ. ಇದಕ್ಕಾಗಿ 131.98 ಕೋಟಿ ರೂ. ವೆಚ್ಚ ಮಾಡಲಾಗಿದೆ. ಪ್ರತಿ ಗ್ರಂಥಾಲಯಕ್ಕೆ ಪೀಠೋಪಕರಣಗಳು ಹಾಗೂ ಡಿಜಿಟಲ್ ಪರಿಕರಗಳನ್ನು ನಿಯಮಾನುಸಾರ ಖರೀದಿಸಿ ಪೂರೈಸಲಾಗುವುದು. 6599 ಹೊಸ…

Read More

ಬೆಂಗಳೂರು: ಈಗಾಗಲೇ 2.68 ಕೋಟಿ ರೈತರ ಆಧಾರ್‌ ಸೀಡಿಂಗ್‌ ಕೆಲಸ ಮುಕ್ತಾಯವಾಗಿದ್ದು, ಆಗಸ್ಟ್‌ ತಿಂಗಳಾಂತ್ಯದೊಳಗಾಗಿ ಆಧಾರ್ ಸೀಡಿಂಗ್‌ ಕೆಲಸವನ್ನು ಸಂಪೂರ್ಣಗೊಳಿಸಲಾಗುವುದು ಎಂದು ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಅವರು, “ರಾಜ್ಯಾದ್ಯಂತ 4.8 ಕೋಟಿ ಜಮೀನಿನ ಮಾಲಿಕತ್ವ ಇದೆ. ಈವರೆಗೆ 2.68ಕೋಟಿ ರೈತರನ್ನು ಖುದ್ದು ಭೇಟಿ ಮಾಡಿ ಆಧಾರ್‌ ಜೊತೆಗೆ ಆರ್‌ಟಿಸಿ ಲಿಂಕ್‌ ಮಾಡಲಾಗಿದೆ. ಶೇ.65 ರಷ್ಟು ಕೆಲಸ ಸಂಪೂರ್ಣವಾಗಿದ್ದು, ಈ ತಿಂಗಳಾಂತ್ಯದೊಳಗೆ ಕನಿಷ್ಟ ಶೇ.90 ರಷ್ಟು ಕೆಲಸ ಮುಗಿಸುವ ಗುರಿ ಹೊಂದಲಾಗಿದೆ” ಎಂದರು. ಮುಂದುವರೆದು, “ಆಧಾರ್‌ ಸೀಡಿಂಗ್‌ ನಿಂದಾಗಿ ಸರ್ಕಾರಕ್ಕೆ ಸಾಕಷ್ಟು ಅಂಕಿಅಂಶಗಳು ಸಿಗುತ್ತಿದೆ. 36.53 ಲಕ್ಷ ಜಮೀನುಗಳಲ್ಲಿ ವ್ಯಕ್ತಿ ತೀರಿ ಹೋಗಿದ್ರೂ ಪಹಣಿಯಲ್ಲಿ ಅವರ ಹೆಸರೇ ಉಲ್ಲೇಖವಾಗಿರುವುದು ಆಧಾರ್‌ ಸೀಡಿಂಗ್‌ನಿಂದ ತಿಳಿದುಬಂದಿದೆ. ಹೀಗಾಗಿ ಎರಡು ತಿಂಗಳ ನಂತರ ಅಧಾಲತ್‌ ಮೂಲಕ ಫೌತಿಖಾತೆ ಅಭಿಯಾನ ಆರಂಭಿಸುವ ಚಿಂತನೆ ಇದೆ. ಅಲ್ಲದೆ, ಆಧಾರ್‌ ಸೀಡಿಂಗ್‌ನಿಂದಾಗಿ ನಕಲಿ ವ್ಯಕ್ತಿ ಸೃಷ್ಟಿಸಿ ಅಕ್ರಮವಾಗಿ ಜಮೀನು ಮಾರಾಟವನ್ನು ತಪ್ಪಿಸಬಹುದು, ಬಿಟ್ಟುಹೋದ…

Read More

ಬೆಂಗಳೂರು: ರಾಜ್ಯಾಧ್ಯಂತ ಸರ್ಕಾರಿ ಭೂಮಿ ಒತ್ತುವರಿದಾರರಿಗೆ ಬಿಗ್ ಶಾಕ್ ಎನ್ನುವಂತೆ ಸೆಪ್ಟೆಂಬರ್ ನಿಂದ ಲ್ಯಾಂಡ್ ಬೀಟ್‌ ಆ್ಯಪ್ ಆಧರಿಸಿ ಒತ್ತುವರಿ ತೆರವು ಕಾರ್ಯಾಚರಣೆಯನ್ನು ಸರ್ಕಾರ ನಡೆಸಲಿದೆ. ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಮಾಹಿತಿ ಹಂಚಿಕೊಂಡಂತ ಕಂದಾಯ ಸಚಿವ ಕೃಷ್ಣಭೈರೇಗೌಡ, ಲ್ಯಾಂಡ್ ಬೀಟ್‌ ಆ್ಯಪ್ ಆಧರಿಸಿ ಸೆಪ್ಟೆಂಬರ್‌ ತಿಂಗಳಿನಿಂದ ರಾಜ್ಯಾದ್ಯಂತ ಸರ್ಕಾರ ಭೂ ಒತ್ತುವರಿ ತೆರವು ಕಾರ್ಯಾಚರಣೆಗೆ ಚಾಲನೆ ನೀಡಲಾಗುವುದು ಎಂದು ತಿಳಿಸಿದರು. ಈ ಬಗ್ಗೆ ಮಾಹಿತಿ ನೀಡಿದ ಅವರು, “ ಕಂದಾಯ, ಅರಣ್ಯ, ಶಿಕ್ಷಣ ಹಾಗೂ ಪಿಡಬ್ಲ್ಯೂಡಿ ಇಲಾಖೆ ಸೇರಿ ರಾಜ್ಯಾದ್ಯಂತ 1.41 ಕೋಟಿ ಎಕರೆ ಸರ್ಕಾರಿ ಜಮೀನು ಇದೆ ಎಂಬುದು ಲ್ಯಾಂಡ್‌ ಬೀಟ್‌ ಆ್ಯಪ್ ಮೂಲಕ ತಿಳಿದುಬಂದಿದೆ. ಕಳೆದ ಎಂಟು ತಿಂಗಳಿನಿಂದ ಗ್ರಾಮ ಆಡಳಿತ ಅಧಿಕಾರಿಗಳ ಮೂಲಕ ಅವರ ಸರ್ಕಲ್‌ ನಲ್ಲಿ ಇರುವ ಸರ್ಕಾರಿ ಜಮೀನು ಎಷ್ಟಿವೆ? ಎಂದು ಲ್ಯಾಂಡ್‌ ಬೀಟ್ ಆ್ಯಪ್ ನಲ್ಲಿ ಅಪ್ಲೋಡ್‌ ಮಾಡಲು ಹೇಳಿದ್ದೆವು. ಅದು ಅಪ್ಲೋಡ್‌ ಆದ ಮೇಲೆ ಈ ಲೆಕ್ಕ ಸಿಕ್ಕಿವೆ. ಈಗ ನಮ್ಮ ಬಳಿ…

Read More

ಬೆಂಗಳೂರು: ಸೆಪ್ಟೆಂಬರ್‌ ತಿಂಗಳಿನಿಂದ ಪೋಡಿ ಅಭಿಯಾನಕ್ಕೆ ಚಾಲನೆ ನೀಡಲಾಗುವುದು, ಲಕ್ಷಾಂತರ ರೈತರಿಗೆ ಅವರ ಜಮೀನಿನ ಹಕ್ಕನ್ನು ಅವರಿಗೆ ನೀಡುವ ಮೂಲಕ ನೆಮ್ಮದಿಯ ಬದುಕು ಕಲ್ಪಿಸಲು ನಮ್ಮ ಸರ್ಕಾರ ಸಂಕಲ್ಪ ತೊಟ್ಟಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ತಿಳಿಸಿದರು. ಸೋಮವಾರ ವಿಕಾಸಸೌಧದ ನಾಲ್ಕನೇ ಮಹಡಿಯ ಸಭಾಂಗಣದಲ್ಲಿ ಬೆಂಗಳೂರು ವಿಭಾಗದ ಕಂದಾಯ ಇಲಾಖೆ ಪ್ರಗತಿ ಪರಿಶೀಲನಾ ಸಭೆ ಏರ್ಪಡಿಸಲಾಗಿತ್ತು. ಸಭೆಯ ನಂತರ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, “ಸಾಗುವಳಿ ಮಾಡುವ ರೈತರಿಗೆ ಮಂಜೂರು ಮಾಡಿರುವ ಲಕ್ಷಾಂತರ ಪ್ರಕರಣಗಳಲ್ಲಿ ಹಲವು ವರ್ಷಗಳಿಂದ ಪೋಡಿ ದುರಸ್ಥಿಯಾಗಿಲ್ಲ. ಈ ಹಿಂದಿನ ಸರ್ಕಾರದ ಅವಧಿಯಲ್ಲೂ ಹತ್ತಾರು ಚರ್ಚೆ, ನಾನಾ ಪ್ರಯತ್ನಗಳಾಗಿದ್ದರೂ ಈ ವಿಚಾರದಲ್ಲಿ ಸರಿಯಾದ ಪರಿಹಾರ ನೀಡಲು ಸಾಧ್ಯವಾಗಿಲ್ಲ. ಆದರೆ, ರೈತರಿಗೆ ಅವರ ಜಮೀನಿನ ಹಕ್ಕನ್ನು ಸಂಪೂರ್ಣವಾಗಿ ಅವರಿಗೇ ನೀಡಲು, ಈ ವಿಚಾರದಲ್ಲಿ ಶಾಶ್ವತ ಪರಿಹಾರ ನೀಡಲು ನಮ್ಮ ಸರ್ಕಾರ ಸಂಕಲ್ಪ ತೊಟ್ಟಿದೆ” ಎಂದು ಭರವಸೆ ನೀಡಿದರು. ಮುಂದುವರೆದು, “ರೈತರಿಗೆ ಜಮೀನು ಮಂಜೂರಾಗಿದ್ರೂ ಪೋಡಿ ದುರಸ್ಥಿಯಾಗದಿರಲು ಎರಡು ಪ್ರಮುಖ ಕಾರಣಗಳಿವೆ.…

Read More

ಬೆಂಗಳೂರು: ಮಳೆಯ ಕಾರಣಕ್ಕೆ ರಾಜ್ಯಾದ್ಯಂತ 80,000 ಹೆಕ್ಟೇರ್‌ ಪ್ರದೇಶದಲ್ಲಿ ಬೆಳೆ ನಾಶವಾಗಿದ್ದು, ವಾರದೊಳಗಾಗಿ ಎಲ್ಲಾ ರೈತರಿಗೂ ಪರಿಹಾರ ನೀಡಲಾಗುವುದು ಎಂದು ಸಚಿವ ಕೃಷ್ಣ ಬೈರೇಗೌಡ ಭರವಸೆ ನೀಡಿದರು. ಈ ಬಗ್ಗೆ ಮಾತನಾಡಿದ ಅವರು, “ರಾಜ್ಯಾದ್ಯಂತ ಕೃಷಿ ಬೆಳೆ 78679 ಹೆಕ್ಟೇರ್‌ ಹಾನಿಯಾಗಿದ್ದರೆ, ತೋಟಗಾರಿಕಾ ಬೆಳೆ 2294 ಹೆಕ್ಟೇರ್‌ ಪ್ರದೇಶ ಹಾನಿಯಾಗಿದೆ. ವಾರದೊಳಗೆ ಯಾವ ಯಾವ ಬೆಳೆಗಳು ಹಾನಿಯಾಗಿವೆ ಎಂಬ ಬಗ್ಗೆಯೂ ಖಚಿತ ಮಾಹಿತಿ ಸಿಗಲಿದೆ. ತದನಂತರ ರೈತರಿಗೆ ಪರಿಹಾರ ನೀಡುವ ಕಾರ್ಯಕ್ಕೂ ಚಾಲನೆ ನೀಡಲಾಗುವುದು. ಪ್ರಸ್ತುತ ರಾಜ್ಯ ಸರ್ಕಾರದ ಬಳೆ ಇರುವ ಸಂಪನ್ಮೂಲದಲ್ಲೇ ಪರಿಹಾರ ನೀಡಲಾಗುವುದು. ಇನ್ನೂ ಒಂದೂವರೆ ತಿಂಗಳ ಮಳೆ ಸಾಧ್ಯತೆ ಇರುವುದರಿಂದ ಮುಂದಿನ ದಿನಗಳಲ್ಲಿ ಮತ್ತಷ್ಟು ಬೆಳೆಹಾನಿಯಾಗುವ ಸಾಧ್ಯತೆ ಇದೆ. ಹೀಗಾಗಿ ಮುಂಗಾರಿನ ಸಂಪೂರ್ಣ ಅವಧಿ ಮುಗಿಯುವವರೆಗೆ ಕಾದು ತದನಂತರ ಪರಿಹಾರಕ್ಕಾಗಿ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಾಗುವುದು” ಎಂದು ತಿಳಿಸಿದರು. ಮುಂದುವರೆದು, “ಈ ವರ್ಷ ಬೆಳೆಹಾನಿ ಪ್ರಮಾಣವನ್ನು ನಿಯಂತ್ರಿಸಲಾಗಿದೆ. 2020ರಲ್ಲಿ 2.21ಲಕ್ಷ ಹೆಕ್ಟೇರ್‌ ಪ್ರದೇಶದಲ್ಲಿ ಬೆಳೆಹಾನಿಯಾಗಿತ್ತು. 2021ರಲ್ಲಿ 2.12 ಲಕ್ಷ…

Read More

ಬೆಂಗಳೂರು: ರೈಲ್ವೆ ಪ್ರಯಾಣಿಕರಿಗೆ ಗುಡ್ ನ್ಯೂಸ್ ಎನ್ನುವಂತೆ ಮೈಸೂರು-ಕಾರೈಕುಡಿ ನಡುವೆ ವಿಶೇಷ ರೈಲು ಸೇವೆಯನ್ನು ಆರಂಭಿಸಲಾಗುತ್ತಿದೆ.  ಈ ಕುರಿತಂತೆ ನೈರುತ್ಯ ರೈಲ್ವೆಯಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಪ್ರಯಾಣಿಕರ ಅನುಕೂಲಕ್ಕಾಗಿ ಮತ್ತು ಹೆಚ್ಚುವರಿ ದಟ್ಟಣೆಯನ್ನು ನಿವಾರಿಸಲು ನೈಋತ್ಯ ರೈಲ್ವೆ ಸಾಂಸ್ಕೃತಿಕ ನಗರಿ ಮೈಸೂರು ಮತ್ತು ತಮಿಳುನಾಡಿನ ಕಾರೈಕುಡಿ ನಡುವೆ ಎರಡು ಟ್ರಿಪ್ ವಿಶೇಷ ರೈಲುಗಳನ್ನು ಓಡಿಸುತ್ತಿದೆ. ರೈಲು ಸಂಖ್ಯೆ 06295 ಆಗಸ್ಟ್ 14 ಮತ್ತು 17 ರಂದು ರಾತ್ರಿ 9:30 ಕ್ಕೆ ಮೈಸೂರಿನಿಂದ ಹೊರಟು ಮರುದಿನ ಮಧ್ಯಾಹ್ನ 12:45 ಕ್ಕೆ ಕಾರೈಕುಡಿಯನ್ನು ತಲುಪಲಿದೆ. ರೈಲು ಸಂಖ್ಯೆ 06296 ಆಗಸ್ಟ್ 15 ಮತ್ತು 18ರಂದು ಸಂಜೆ 7 ಗಂಟೆಗೆ ಕಾರೈಕುಡಿಯಿಂದ ಹೊರಟು ಮರುದಿನ ಬೆಳಗ್ಗೆ 9.10ಕ್ಕೆ ಮೈಸೂರು ತಲುಪಲಿದೆ. ಈ ವಿಶೇಷ ರೈಲುಗಳು ಮಂಡ್ಯ, ಮದ್ದೂರು, ರಾಮನಗರ, ಕೆಂಗೇರಿ, ಕೆಎಸ್ಆರ್ ಬೆಂಗಳೂರು, ಬೆಂಗಳೂರು ಕಂಟೋನ್ಮೆಂಟ್, ಕೃಷ್ಣರಾಜಪುರಂ, ಬಂಗಾರಪೇಟೆ, ಕುಪ್ಪಂ, ಸೇಲಂ, ನಾಮಕ್ಕಲ್, ಕರೂರ್, ತಿರುಚಿರಾಪಳ್ಳಿ ಮತ್ತು ಪುದುಕೊಟ್ಟೈ ನಿಲ್ದಾಣಗಳಲ್ಲಿ ನಿಲ್ಲಲಿವೆ. ವಿಶೇಷ ರೈಲಿನಲ್ಲಿ ಎರಡು…

Read More

ಎಷ್ಟೇ ಹಣ, ಸಂಪತ್ತು ಗಳಿಸಿದರೂ ನಮಗೆ ಅದು ಹೊಟ್ಟೆಗೆ ಮಾತ್ರ ಊಟ. ಒಂದು ದಿನವೂ ಹಸಿವಿನಿಂದ ಇರಬಾರದು ಎಂದು ಓಡಿ ಹಣ ಸಂಗ್ರಹಿಸುತ್ತೇವೆ. ಎಷ್ಟೇ ಹಣವಿದ್ದರೂ ಹತ್ತು ದಿನದ ಆಹಾರವನ್ನು ಒಂದೇ ದಿನದಲ್ಲಿ ತಿನ್ನಲು ಸಾಧ್ಯವಿಲ್ಲ. ಒಂದು ದಿನವೂ ತಿನ್ನದೆ ಹಸಿವಿನಿಂದ ಇರಲು ಸಾಧ್ಯವಿಲ್ಲ. ಅನ್ನಪೂರ್ಣಿಯೇ ನಮಗೆ ಈ ಅನ್ನವನ್ನು ಕೊಡುತ್ತಾಳೆ. ಅನ್ನಪುರಣಿಯನ್ನು ವರ್ಷದಲ್ಲಿ ಒಂದು ದಿನ ಪಠಿಸಬಹುದಾದ ರೀತಿಯಲ್ಲಿ ಪೂಜಿಸಿದರೆ ನಿಮ್ಮ ಮನೆಗೆ ಬಡತನ ಎಂಬ ಪದ ಬರುವುದಿಲ್ಲ. ಸಂಪತ್ತು ಹೇರಳವಾಗಲಿದೆ. ಈ ಪೋಸ್ಟ್ ಮೂಲಕ ನಾವು ಶಕ್ತಿಶಾಲಿ ಅನ್ನಪುರಣಿ ಪೂಜೆಯ ಬಗ್ಗೆ ಅಪರೂಪದ ಆಧ್ಯಾತ್ಮಿಕ ಮಾಹಿತಿಯನ್ನು ತಿಳಿಯಲಿದ್ದೇವೆ. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ನಕ್ಷತ್ರಿ ತಂತ್ರಿ ನಂ:- 9686268564. ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ,…

Read More

ಶಿವಮೊಗ್ಗ : 2024ನೇ ಸಾಲಿನಲ್ಲಿ ಅಗ್ನಿಪಥ್ ಯೋಜನೆಯಡಿ ವಿವಿಧ ಹುದ್ದೆಗಳಿಗೆ ಲಿಖಿತ ಪರೀಕ್ಷೆಯಲ್ಲಿ ಆಯ್ಕೆಗೊಂಡ ಅಭ್ಯರ್ಥಿಗಳಿಗೆ ದೈಹಿಕ ಹಾಗೂ ವೈದ್ಯಕೀಯ ಪರೀಕ್ಷೆಗಳಿಗಾಗಿ ಅಗ್ನಿವೀರ್ ಸೇನಾ ನೇಮಕಾತಿ ರ‍್ಯಾಲಿಯನ್ನು ಆಗಸ್ಟ್ 22 ರಿಂದ ಆಗಸ್ಟ್ 31 ರವರೆಗೆ ಶಿವಮೊಗ್ಗ ನಗರದ ನೆಹರು ಕ್ರೀಡಾಂಗಣದಲ್ಲಿ ಸೇನಾ ನೇಮಕಾತಿ ನಿರ್ದೇಶಕರು, ಮಂಗಳೂರು ಇವರು ಆಯೋಜಿಸುತ್ತಿದ್ದು, ಅರ್ಹ ಅಭ್ಯರ್ಥಿಗಳಿಗೆ ಪ್ರವೇಶ ಪತ್ರಗಳನ್ನು ಅಭ್ಯರ್ಥಿಗಳ ಇಮೇಲ್ ಮೂಲಕ ರವಾನಿಸಲಾಗಿದೆ. ಈ ರ‍್ಯಾಲಿಯು ಶಿವಮೊಗ್ಗ, ದಾವಣಗೆರೆ, ಬಾಗಲಕೋಟೆ, ವಿಜಯಪುರ, ಧಾರವಾಡ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಗದಗ, ಹಾವೇರಿ ಮತ್ತು ಚಿಕ್ಕಮಗಳೂರು ಜಿಲ್ಲೆಗಳ ಅಭ್ಯರ್ಥಿಗಳಿಗೆ ಮಾತ್ರ ಮೀಸಲಾಗಿರುತ್ತದೆ ಎಂಬುದನ್ನು ನೇಮಕಾತಿ ನಿರ್ದೇಶಕರು, ಮಂಗಳೂರು ಇವರ ಕೋರಿಕೆಯ ಮೇರೆಗೆ ಉಪ ನಿರ್ದೇಶಕರು, ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ, ಶಿವಮೊಗ್ಗ ಇವರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. https://kannadanewsnow.com/kannada/pm-modi-holds-umbrella-for-farmers-in-rain-video-goes-viral/ https://kannadanewsnow.com/kannada/mysuru-dasara-celebrations-jumboo-savari-to-be-held-on-oct-12/ https://kannadanewsnow.com/kannada/breaking-big-shock-to-bjp-c-p-yogeshwar-to-contest-channapatna-by-election-as-independent-candidate/

Read More

ಬೆಂಗಳೂರು: ಅದ್ಧೂರಿ ಮೈಸೂರು ದಸರಾ ಆಚರಣೆಗೆ ( Mysore Dasara ) ರಾಜ್ಯ ಸರ್ಕಾರವು ನಿರ್ಧಾರ ಕೈಗೊಂಡಿದೆ. ಅಲ್ಲದೇ ಅಕ್ಟೋಬರ್.12ರಂದು ದಸರಾ ಜಂಬೂ ಸವಾರಿ ನಡೆಸೋದಕ್ಕೂ ಮುಹೂರ್ತ ಫಿಕ್ಸ್ ಮಾಡಲಾಗಿದೆ. ಈ ಕುರಿತಂತೆ ಮುಖ್ಯಮಂತ್ರಿ ಸಿದ್ಧರಾಮಯ್ಯ ( Chief Minister Siddaramaiah ) ಅವರ ನೇತೃತ್ವದಲ್ಲಿ ಇಂದು ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಉನ್ನತ ಮಟ್ಟದ ಸಮಿತಿಯ ಸಭೆಯ ನಂತ್ರ ಮಾತನಾಡಿದಂತ ಅವರು, ರಾಜ್ಯದಲ್ಲಿ ಉತ್ತಮ ಮಳೆ, ಸಮೃದ್ಧಿಯ ಹಿನ್ನಲೆಯಲ್ಲಿ ಅದ್ಧೂರಿ ದಸರಾ ಆಚರಣೆಗೆ ಸರ್ಕಾರ ನಿರ್ಧಾರ ಮಾಡಿದೆ ಎಂದರು. ಅಕ್ಟೋಬರ್ 3 ರಿಂದ 12 ರವರೆಗೆ ನಡೆಯಲಿರುವ ದಸರಾ ನಡೆಯಲಿದೆ. ಅಕ್ಟೋಬರ್ 3 ರ ಬೆಳಿಗ್ಗೆ 9 ಗಂಟೆ 10 ನಿಮಿಷಕ್ಕೆ ಚಾಮುಂಡಿ ಬೆಟ್ಟದಲ್ಲಿ ಪೂಜೆ ಮತ್ತು ದಸರಾ ಉದ್ಘಾಟನೆ ಮಾಡಲಾಗುತ್ತದೆ. ಅಕ್ಟೋಬರ್ 12 ರ ಮಧ್ಯಾಹ್ನ 12 ಗಂಟೆ 10 ನಿಮಿಷಕ್ಕೆ ಜಂಬೂ ಸವಾರಿ ಆರಂಭಗೊಳ್ಳಲಿದೆ ಎಂದರು. ಕಳೆದ ವರ್ಷ ದಸರೆಗೆ 30 ಕೋಟಿ ಖರ್ಚಾಗಿತ್ತು.ಈ ಸಲ ಇನ್ನಷ್ಟು ಹೆಚ್ಚು ಹಣ ಒದಗಿಸುವ…

Read More