Author: kannadanewsnow09

ಬೆಂಗಳೂರು: ಇಂದು ಕರ್ನಾಟಕ, ಕೇರಳ ರಾಜ್ಯಕ್ಕೆ ಬೇಕಿದ್ದಂತ 6 ಮೋಸ್ಟ್ ವಾಂಟೆಂಡ್ ನಕ್ಸಲರು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಸಮ್ಮುಖದಲ್ಲಿ ಶರಣಾಗತಿಯಾದರು. ಈ ಬಳಿಕ ಸಿಎಂ ಸಿದ್ಧರಾಮಯ್ಯ ಏನು ಹೇಳಿದರು ಅಂತ ಮುಂದೆ ಓದಿ. 6 ನಕ್ಸಲರು ಶರಣಾಗತಿಯ ಬಳಿಕ ಸಿಎಂ ಸಿದ್ಧರಾಮಯ್ಯ ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಮಾತಿನ ಹೈಲೈಟ್ಸ್ ಈ ಕೆಳಗಿನಂತಿದೆ. • ಅನ್ಯಾಯದ ವಿರುದ್ಧ, ಶೋಷಣೆ, ದೌರ್ಜನನ್ಯದ ವಿರುದ್ಧ ನ್ಯಾಯಕ್ಕಾಗಿ ಹೋರಾಡುವುದು ತಪ್ಪಲ್ಲ. • ವ್ಯವಸ್ಥೆ ಬದಲಾವಣೆಗೆ ಹೋರಾಟ ಮಾಡಲು ಸಂವಿಧಾನದಲ್ಲಿ ಅವಕಾಶವಿದೆ. ಆದರೆ ಹೋರಾಟ ಶಾಂತಿಯುತವಾಗಿ , ನ್ಯಾಯಯುತವಾಗಿ ಮಾಡಬೇಕು. • ನಕ್ಸಲಿಸಂ, ಶಸ್ತ್ರಾಸ್ತ್ರ ಹೋರಾಟಕ್ಕೆ ಸಂವಿಧಾನದಲ್ಲಿ, ಪ್ರಜಾಪ್ರಭತ್ವ ವ್ಯವಸ್ಥೆಯಲ್ಲಿ ಅವಕಾಶವಿಲ್ಲ. • ಈ ಹಿಂದೆಯೂ ಬಹಳ ನಕ್ಸಲೀಯರು ಶಸ್ತ್ರಾಸ್ತ ತ್ಯಜಿಸಿ ಮುಖ್ಯಧಾರೆಗೆ ಬಂದಿದ್ದಾರೆ. ಇವರ ಪುನರ್‌ ವಸತಿಗೆ ಸರ್ಕಾರ ನೆರವು ಒದಗಿಸಿದೆ. • ಶಾಂತಿಗಾಗಿ ನಾಗರಿಕ ವೇದಿಕೆಯವರು ನನ್ನನ್ನು ಭೇಟಿ ಮಾಡಿ ನಕ್ಸಲಿಯರ ಮನವೊಲಿಸುವ ಬಗ್ಗೆ ತಿಳಿಸಿದ್ದರು. ಆ ಸಂದರ್ಭದಲ್ಲಿ ನಕ್ಸಲಿಸಂ ತ್ಯಜಿಸಿ ಮುಖ್ಯವಾಹಿನಿಗೆ ಬರಲು ಸರಕಾರ ಎಲ್ಲಾ…

Read More

ಬೆಂಗಳೂರು: ಸಾರಿಗೆ ಬಸ್ ದರವನ್ನು ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಶಾಕ್ ನೀಡಲಾಗಿತ್ತು. ಈ ಬೆನ್ನಲ್ಲೇ ಬೆಂಗಳೂರು ಜನತೆಗೆ ಮತ್ತೊಂದು ಶಾಕ್ ಎನ್ನುವಂತೆ ಬಿಎಂಟಿಸಿ ದೈನಿಕ ಹಾಗೂ ಮಾಸಿಕ ಬಸ್ ಪಾಸ್ ದರ ಹೆಚ್ಚಳ ಮಾಡಿ ಅಧಿಕೃತ ಆದೇಶ ಹೊರಡಿಸಿದೆ. ನೂತನ ಹೆಚ್ಚಳ ದರ ನಾಳೆಯಿಂದಲೇ ಜಾರಿಗೆ ಬರುತ್ತಿರುವುದಾಗಿ ತಿಳಿಸಿದೆ. ಇಂದು ಬಿಎಂಟಿಸಿಯಿಂದ ಆದೇಶ ಹೊರಡಿಸಲಾಗಿದ್ದು, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ವಿವಿಧ ವರ್ಗದ ದೈನಿಕ, ಸಾಪ್ತಾಹಿಕ ಮತ್ತು ಮಾಸಿಕ ಪಾಸುಗಳನ್ನು ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ವಿತರಣೆ ಮಾಡುತ್ತಿದೆ. ಪ್ರಯಾಣಿಕರ ಬಸ್ ಟಿಕೆಟ್ ದರ ಪರಿಷ್ಕರಣೆಯಾದ ಹಿನ್ನಲೆಯಲ್ಲಿ ಸಂಸ್ಥೆಯ ಆರ್ಥಿ ದೃಷ್ಠಿಯಿಂದ ದೈನಿಕ, ಸಾಪ್ತಾಹಿಕ ಮತ್ತು ಮಾಸಿಕ ಪಾಸುಗಳ ದರಗಳನ್ನು ಹೆಚ್ಚಳ ಮಾಡುತ್ತಿದೆ. ದಿನಾಂಕ 09-01-2025ರಿಂದ ನೂತನ ಹೆಚ್ಚಳ ದರವು ಜಾರಿಯಾಗಲಿದೆ ಎಂದಿದೆ. ಹೀಗಿದೆ ಪಾಸ್ ದರ ಹೆಚ್ಚಳದ ವಿವರ ಸಾಮಾನ್ಯ ದೈನಿಕ ಪಾಸು ರೂ.70 ಇದ್ದದ್ದನ್ನು ರೂ.80ಕ್ಕೆ ಹೆಚ್ಚಳ ಮಾಡಲಾಗಿದೆ. ಸಾಮಾನ್ಯ ಸಾಪ್ತಾಹಿಕ ವಾರದ ಪಾಸು ದರ ರೂ.300ರಿಂದ ರೂ.350ಕ್ಕೆ…

Read More

ಚಿತ್ರದುರ್ಗ :  ಬಯಲುಸೀಮೆಯ ಜನರ ಜೀವನಾಡಿ ವಾಣಿ ವಿಲಾಸ ಸಾಗರ ಜಲಾಶಯ ಕೋಡಿ ಬೀಳಲು ಕ್ಷಣಗಣನೆ ಪ್ರಾರಂಭವಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯನವರು ಶೀಘ್ರವೇ ಜಿಲ್ಲೆಗೆ ಆಗಮಿಸಿ ಭರ್ತಿಯಾಗಿರುವ ವಾಣಿವಿಲಾಸ ಸಾಗರ ಜಲಾಶಯಕ್ಕೆ ಬಾಗಿನ ಅರ್ಪಿಸಲಿದ್ದಾರೆ. ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಟಿ. ವೆಂಕಟೇಶ್, ಜಿ.ಪಂ. ಸಿಇಒ ಎಸ್.ಜೆ. ಸೋಮಶೇಖರ್ ಅವರು ಮಂಗಳವಾರದಂದು ವಿವಿ ಸಾಗರಕ್ಕೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು. ವಾಣಿವಿಲಾಸ ಸಾಗರ ಜಲಾಶಯಕ್ಕೆ ನಿತ್ಯ ಭದ್ರಾದಿಂದ 693 ಕ್ಯೂಸೆಕ್ ನೀರು ಒಳಹರಿವಿದ್ದು, ಮಂಗಳವಾರದಂದು ಜಲಾಶಯದ ನೀರಿನ ಮಟ್ಟ 129.80 ಅಡಿಗೆ ತಲುಪಿದೆ. ಹೀಗಾಗಿ ನೀರಿನ ಮಟ್ಟ ಜಲಾಶಯದ ಗರಿಷ್ಟ ಮಟ್ಟ 130 ಅಡಿಗೆ ತಲುಪಿ, ಹೆಚ್ಚುವರಿ ನೀರು ಕೋಡಿ ಮೂಲಕ ಹರಿದುಹೋಗಲಿದೆ. ಜಲಾಶಯ ಸಂಪೂರ್ಣ ಭರ್ತಿಯಾಗುತ್ತಿರುವುದು ಇಡೀ ಜಿಲ್ಲೆಗೆ ಸಂತಸದ ಕ್ಷಣವಾಗಿದ್ದು, ಮುಖ್ಯಮಂತ್ರಿಗಳು, ಉಪಮುಖ್ಯಮಂತ್ರಿಗಳು ಶೀಘ್ರವೇ ಜಿಲ್ಲೆಗೆ ಆಗಮಿಸಿ, ಭರ್ತಿಯಾಗಿರುವ ವಿ.ವಿ. ಸಾಗರ ಜಲಾಶಯಕ್ಕೆ ಬಾಗಿನ ಅರ್ಪಣೆ ಮಾಡಲಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವರು, ಸಂಸದರು, ಶಾಸಕರುಗಳು, ಜನಪ್ರತಿನಿಧಿಗಳು, ಉನ್ನತ ಅಧಿಕಾರಿಗಳು ಕೂಡ…

Read More

ಚಿತ್ರದುರ್ಗ: ಹೆಚ್.ಎ.ಎಲ್ (ಹಿಂದೂಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್‍ನಲ್ಲಿ ಫಿಟ್ಟರ್, ಮೆಷಿನಿಸ್ಟ್, ಟರ್ನರ್, ಕಂಪ್ಯೂಟರ್ ಅಪರೇಟರ್ ಅಂಡ್ ಪ್ರೋಗ್ರಾಮಿಂಗ್ ಅಸಿಸ್ಟಟ್, ಕಾರ್ಪೆಂಟರ್, ಫೌಂಡ್ರಿ ಮ್ಯಾನ್, ಶೀಟ್ ಮೆಟಲ್ ವರ್ಕರ್, ಟೂಲ್ ಅಂಡ್ ಡೈ ಮಾರ್ಕರ್, ಸಿಎನ್‍ಸಿ ಪ್ರೋಗ್ರಾಮರ್ ಕಮ್ ಅಪರೇಟರ್ ಮೆಕಾನಿಕ್ ರಿಪ್ರೀರಿಗೇಷನ್ ಅಂಡ್ ಕಂಡಿಷಿನಿಂಗ್ ಟ್ರೇಡ್‍ಗಳಿಗೆ ಸಂಬಂಧಪಟ್ಟ ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ಜ.24 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಈ ಅಪ್ರೆಂಟಿಸ್ ತರಬೇತಿಯು ಎಲ್ಲಾ ಟ್ರೇಡ್‍ಗಳಿಗೂ ಒಂದು ವರ್ಷದ ಅವಧಿಯಾಗಿರುತ್ತದೆ. ಅಭ್ಯರ್ಥಿಗಳು ಎಸ್‍ಎಸ್‍ಎಲ್‍ಸಿ ಅಂಕಪಟ್ಟಿ, ಐ.ಟಿ.ಐ ಪ್ರಮಾಣ ಪತ್ರ (ಸ್ವ ದೃಢೀಕೃತ ರಿಸಲ್ಟ್ ಶೀಟ್), ಜಾತಿ ಪ್ರಮಾಣ ಪತ್ರ, ಅಂಗವಿಕಲರ ಪ್ರಮಾಣ ಪತ್ರ, ಆರ್ಮಡ್ ಪರ್ಸನಲ್ ಪ್ರಮಾಣ ಪತ್ರ, ಆಧಾರ್ ಕಾರ್ಡ್, 4 ಭಾವಚಿತ್ರ., ಎನ್‍ಸಿವಿಟಿ ನೋಂದಣಿ ಪ್ರತಿ ಅರ್ಜಿಯೊಂದಿಗೆ ಸಲ್ಲಿಸಬೇಕು. ಆನ್‍ಲೈನ್‍ನಲ್ಲಿ ನೊಂದಾಯಿಸಲು https://apprenticeshindia.gov.in, www.hal-india.com/career ವೆಬ್‍ಸೈಟ್ ಮೂಲಕ ಅಥವಾ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ನೋಂದಾಯಿಸಿಕೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ ಚಿತ್ರದುರ್ಗ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ದೂರವಾಣಿ ಸಂಖ್ಯೆ 9945587060,…

Read More

ಬೆಂಗಳೂರು: ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಗೌರವಧನ ಹೆಚ್ಚಳಕ್ಕೆ ಕ್ರಮಕೈಗೊಳ್ಳಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಭರವಸೆ ನೀಡಿದರು. ಬೆಂಗಳೂರಿನ ವಿಧಾನಸೌಧದ ತಮ್ಮ ಕೊಠಡಿಯಲ್ಲಿ ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಬೇಡಿಕೆ ಹಾಗೂ ಕುಂದು ಕೊರತೆಗಳ ಬಗ್ಗೆ ಸಚಿವರು ಚರ್ಚೆ ನಡೆಸಿದರು. ಗೌರವಧನ ಹೆಚ್ಚಳ, ಮುಂಬಡ್ತಿ, ಗ್ರಾಚ್ಯುಟಿ ಸೌಲಭ್ಯ, ಉಚಿತ ವೈದ್ಯಕೀಯ ಸೌಲಭ್ಯ, ಅನಾರೋಗ್ಯ ಪೀಡಿತರಿಗೆ ಸ್ವಯಂ ನಿವೃತ್ತಿ ಯೋಜನೆ ಸೇರಿದಂತೆ ಹಲವು ವಿಷಯಗಳ ಬಗ್ಗೆ ಸಚಿವರು, ವಿವಿಧ ಸಂಘಟನೆಗಳೊಂದಿಗೆ ಚರ್ಚೆ ನಡೆಸಿದರು‌‌‌. ನಾನು ಎಂದಿಗೂ ಅಂಗನವಾಡಿ ಕಾರ್ಯಕರ್ತೆಯರ ಪರ. ಇಡೀ‌ ದೇಶಕ್ಕೆ ನಮ್ಮ ಅಂಗನವಾಡಿಗಳು ಮಾದರಿಯಾಗಿವೆ. ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆಗಳ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಚರ್ಚೆ ನಡೆಸಿ, ಮುಂದಿನ ಬಜೆಟ್ ನಲ್ಲಿ ಗೌರವಧನ ಹೆಚ್ಚಿಸಲು ಪ್ರಯತ್ನಿಸಲಾಗುವುದು ಎಂದು ಸಚಿವರು ತಿಳಿಸಿದರು. ಸಭೆಯಲ್ಲಿ ಇಲಾಖೆಯ ಪ್ರಧಾನ ಕಾರ್ಯದರ್ಶಿ ಡಾ.ಶಮ್ಲಾ‌ ಇಕ್ಬಾಲ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ನಿರ್ದೇಶಕರಾದ ಎನ್.ಸಿದ್ದೇಶ್ವರ್, ಸಚಿವರ ಆಪ್ತ…

Read More

ಬೆಂಗಳೂರು : “ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ನಿಧನದ ಹಿನ್ನೆಲೆಯಲ್ಲಿ ಮುಂದೂಡಿಕೆಯಾಗಿದ್ದ ಗಾಂಧಿ ಭಾರತ ಕಾರ್ಯಕ್ರಮದ ಅಂಗವಾಗಿ ಬೆಳಗಾವಿ ಸುವರ್ಣ ವಿಧಾನಸೌಧದ ಆವರಣದಲ್ಲಿ ಗಾಂಧಿ ಪ್ರತಿಮೆ ಅನಾವರಣ ಹಾಗೂ ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಸಮಾವೇಶವನ್ನು ಇದೇ ಜ .21 ರಂದು ನಡೆಸಲಾಗುವುದು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಕೆಪಿಸಿಸಿ ಅಧ್ಯಕ್ಷರೂ ಆದ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಕೆಪಿಸಿಸಿ ಕಚೇರಿಯಲ್ಲಿ ಬುಧವಾರ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದರು. ಈ ಸಂದರ್ಭದಲ್ಲಿ ಮಾಜಿ ಸಿಎಂ ವೀರಪ್ಪ ಮೊಯ್ಲಿ, ಸಚಿವರಾದ ಪರಮೇಶ್ವರ್, ಕೆ.ಹೆಚ್. ಮುನಿಯಪ್ಪ, ಸತೀಶ್ ಜಾರಕಿಹೊಳಿ, ಲಕ್ಷ್ಮಿ ಹೆಬ್ಬಾಳ್ಕರ್, ಶಾಸಕ ನೆಲಮಂಗಲ ಶ್ರೀನಿವಾಸ್, ವಿಧಾನ ಪರಿಷತ್ ಸದಸ್ಯ ಎಸ್.ರವಿ ಮತ್ತಿತರ ಮುಖಂಡರು ಉಪಸ್ಥಿತರಿದ್ದರು. “ಗಾಂಧಿ ಭಾರತ ಕಾರ್ಯಕ್ರಮವನ್ನು ಪಕ್ಷ ಈಗಾಗಲೇ ಆರಂಭಿಸಿದ್ದು, ಗಾಂಧೀಜಿ ಅವರು ಕಾಂಗ್ರೆಸ್ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡು ಕಳೆದ ಡಿಸಂಬರ್ 26ಕ್ಕೆ ನೂರು ವರ್ಷ ತುಂಬಿದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಸಭೆ ನಡೆಸಲಾಗಿತ್ತು. ಅಂದು…

Read More

ಚಿತ್ರದುರ್ಗ : 2024-25ನೇ ಸಾಲಿನಲ್ಲಿ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ ಜಿಲ್ಲೆಯ 15 ವರ್ಷ ಮೇಲ್ಪಟ್ಟ ವಯಸ್ಸಿನ ದೈಹಿಕ ವಿಕಲಚೇತನರಿಗಾಗಿ ಬ್ಯಾಟರಿ ಚಾಲಿತ ವೀಲ್‍ಚೇರ್ ಪಡೆಯಲು ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಜ.21 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಬ್ಯಾಟರಿ ಚಾಲಿತ ವೀಲ್‍ಚೇರ್ ಯೋಜನೆಯಡಿ ಪ್ರಯೋಜನ ಪಡೆಯಲು 15 ವರ್ಷ ಮೇಲ್ಪಟ್ಟ ವಯಸ್ಸಿನ ದೈಹಿಕ ವಿಕಲಚೇತನರು ಕಡ್ಡಾಯವಾಗಿ ವಿಕಲಚೇತನರ ವಿಶಿಷ್ಟ ಗುರುತಿನ ಚೀಟಿ (ಯುಡಿಐಡಿ), ವೈದ್ಯಕೀಯ ಪ್ರಮಾಣ ಪತ್ರ (ಶೇ.75ಕ್ಕಿಂತ ಹೆಚ್ಚಿನ ದೈಹಿಕ ವಿಕಲತೆ ಇರುವವರಿಗೆ ಮಾತ್ರ), ಇತ್ತೀಚಿನ ಆದಾಯ ಪ್ರಮಾಣ ಪತ್ರ, ಯಂತ್ರಚಾಲಿತ ದ್ವಿಚಕ್ರ ವಾಹನ ಪಡೆಯದಿರುವ ಬಗ್ಗೆ ರೂ.20/ಗಳ ಛಾಪಕಾಗದ ನೋಟರಿ ದೃಢೀಕರಣ ಹಾಗೂ ಇತ್ತೀಚಿನ ಭಾವಚಿತ್ರದೊಂದಿಗೆ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಯಂತ್ರಚಾಲಿತ ದ್ವಿಚಕ್ರ ವಾಹನ (ರೆಟ್ರೋಫಿಟ್‍ಮೆಂಟ್ ಸಹಿತ) ಪಡೆದಿರುವ ವಿಕಲಚೇತನರು ಈ ಯೋಜನೆಗೆ ಅರ್ಜಿ ಸಲ್ಲಿಸಲು ಅನರ್ಹರಾಗಿರುತ್ತಾರೆ. ಈ ಯೋಜನೆ www.sevasindhuservices.karnataka.gov.in/ ವೆಬ್‍ಸೈಟ್ ಮೂಲಕ ಆನ್‍ಲೈನ್ ಅರ್ಜಿ ಸಲ್ಲಿಸಬಹುದು. ಮಾಹಿತಿಗಾಗಿ ತಾಲ್ಲೂಕು ಪಂಚಾಯಿತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ…

Read More

ದಾವಣಗೆರೆ: ಹ್ಯೂಮನ್ ಮೆಟ್ಪಾ ನ್ಯೂಮೋ ವೈರಸ್(ಹೆಚ್.ಎಂ.ಪಿ.ವಿ) ಕುರಿತು ಸಾರ್ವಜನಿಕರಿಗೆ ಆಂತಕ ಬೇಡ ಎಂದು ಜಿಲ್ಲಾಧಿಕಾರಿ ಗಂಗಾಧರಸ್ವಾಮಿ.ಜಿ.ಎಂ ತಿಳಿಸಿದ್ದಾರೆ. ಜಿಲ್ಲೆಯಲ್ಲಿ ಎಚ್‍ಎಂಪಿವಿ ವೈರಾಣು ಸೋಂಕು ಹರಡದಂತೆ ಮುಂಜಾಗ್ರತಾ ಕ್ರಮಗಳನ್ನು ಸಾರ್ವಜನಿಕರು ಅನುಸರಿಸಬೇಕು: ಉಸಿರಾಟದ ಸಮಸ್ಯೆ ವೈರಸ್‍ಗಳಂತೆಯೆ ಚಳಿಗಾಲದಲ್ಲಿ ಶೀತ ಮತ್ತು ಜ್ವರ ತರಹದ ರೋಗಲಕ್ಷಣಗಳನ್ನು ವಿಶೇಷವಾಗಿ ಕಿರಿಯ ಮತ್ತು ಹಿರಿಯ ವಯಸ್ಸಿನವರಲ್ಲಿ ಉಂಟುಮಾಡುತ್ತದೆ. ಬೆಂಗಳೂರಿನ ಖಾಸಗಿ ಆರೋಗ್ಯ ಕೇಂದ್ರದಲ್ಲಿ ಸಾಮಾನ್ಯ ಪರೀಕ್ಷೆಯ ಸಮಯದಲ್ಲಿ ಎರಡು ಹೆಚ್.ಎಂ.ಪಿ.ವಿ. ಸೋಂಕಿತ ಪ್ರಕರಣಗಳು ಧೃಡಪಟ್ಟಿವೆ. 1 ಪ್ರಕರಣವನ್ನು ಈಗಾಗಲೇ ಚಿಕಿತ್ಸೆ ನೀಡಿ ಬಿಡುಗಡೆ ಮಾಡಲಾಗಿದೆ ಮತ್ತು ಇತರೆ ಪ್ರಕರಣಗಳನ್ನು ಶೀಘ್ರದಲ್ಲೇ ಬಿಡುಗಡೆ ಮಾಡಲಾಗುವುದು. ಈ ಎರಡೂ ಪ್ರಕರಣಗಳು ಸೌಮ್ಯ ಸ್ವಭಾವದವು ಮತ್ತು ಯಾವುದೇ ಅಂತರಾಷ್ಟ್ರೀಯ ಪ್ರಯಾಣ ಇತಿಹಾಸವನ್ನು ಹೊಂದಿಲ್ಲ. ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ರಾಜ್ಯದಲ್ಲಿ ಸಾಮಾನ್ಯ ಶೀತಜ್ವರ ತರಹದ ಸಾಮಾನ್ಯ ಮತ್ತು ತೀವ್ರತರಹದ ಸೋಂಕಿನಂತಹ ಚಾಲ್ತಿಯಲ್ಲಿರುವ ಉಸಿರಾಟದ ಸೋಂಕುಗಳ ಡೇಟಾವನ್ನು ವಿಶ್ಲೇಷಿಸಿದೆ. ಹಿಂದಿನ ವರ್ಷಕ್ಕೆ ಹೋಲಿಸಿದರೆ 2024ರ ಡಿಸೆಂಬರ್‍ನಲ್ಲಿ ವರದಿಯಾದ ಪ್ರಕರಣಗಳ ಸಂಖ್ಯೆಯಲ್ಲಿ ಗಮನಾರ್ಹ…

Read More

ಕರ್ನಾಟಕ ರಾಜ್ಯದ ಶಿವಮೊಗ್ಗಾ ಜಿಲ್ಲೆಯ ಸಾಗರ ತಾಲೂಕಿನ ಕರೂರು ಹೋಬಳಿಯ ದೇವಿ ಚೌಡೇಶ್ವರಿಯ ಸಿಗಂದೂರು ಕ್ಷೇತ್ರ ಶಕ್ತಿ ದೇವತೆಗಳ ನೆಲೆಯಲ್ಲಿ ಮಹತ್ವದ ಕ್ಷೇತ್ರವಾಗಿದೆ. ಶರಾವತಿಯ ಹಿನ್ನೀರ ತಟದ ಪಕೃತಿಯ ಮಡಿಲಲ್ಲಿ, ಹಚ್ಚ ಹಸುರಿನ ಸುಂದರ ಪ್ರಶಾಂತ ವಾತಾವರಣದಲ್ಲಿ ಸಿಗಂದೂರು ಕ್ಷೇತ್ರವಿದೆ. ಯಾವುದೇ ಜಾತಿ, ಧರ್ಮ ಮೇಲು ಕೀಳು ಎಂಬ ಪಂಕ್ತಿ ಬೇಧವಿಲ್ಲದ, ಬಡವ -ಶ್ರೀಮಂತ ಎಂಬ ದೃಷಿಯಿಂದ ನೋಡದ ಅಪರೂಪದ ಧರ್ಮ ಕ್ಷೇತ್ರವಾಗಿ ಪ್ರಖ್ಯಾತಿ ಹೊಂದಿದೆ.. ಸೋತು ಬಂದವರನ್ನು ಚೌಡಮ್ಮ ಎಂದೂ ಕೈ ಬಿಡುವುದಿಲ್ಲ ಎಂಬ ದೃಢನಂಬಿಕೆಯಿಂದ ಸನ್ನಿಧಿಗೆ ನಿತ್ಯ ಸಹಸ್ರಾರು ಭಕ್ತರು ಬರುತ್ತಾರೆ. ತಮ್ಮ ಕಷ್ಟ ಕಾರ್ಪಣ್ಯ, ನೋವುಗಳನ್ನು ದೇವಿಯ ಮಡಿಲಿಗೆ ಹಾಕಿ ದುಗಡ ದುಮ್ಮಾನಗಳಿಂದ ನಿರಾಳವಾಗುತ್ತಾರೆ. ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ. ನಿಮ್ಮ…

Read More

ಬೆಂಗಳೂರು: 2024-25ನೇ ಸಾಲಿನ ಬಿ.ಇಡಿ ಕೋರ್ಸ್ ಪ್ರವೇಶಾತಿಗೆ ಅರ್ಜಿ ಸಲ್ಲಿಸಿದ್ದವರಿಗೆ, 3ನೇ ಸುತ್ತಿನ ಸೀಟು ಹಂಚಿಕೆ ಪಟ್ಟಿಯನ್ನು ಪ್ರಕಟಿಸಲಾಗಿದೆ. ಆ ಮೂಲಕ ದಾಖಲಾತಿಗೆ ಸೂಚಿಸಲಾಗಿದೆ. ಈ ಬಗ್ಗೆ ಕೇದ್ರೀಕೃತ ದಾಖಲಾತಿ ಘಟಕವು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, 2024-25ನೇ ಸಾಲಿನ ಬಿ.ಇಡಿ ಕೋರ್ಸಿನ ಸರ್ಕಾರಿ ಕೋಟಾದ ಸೀಟುಗಳ ದಾಖಲಾತಿ ಪ್ರಕ್ರಿಯೆಗೆ ಸಂಬಂಧಿಸಿದಂತೆ 3ನೇ ಸುತ್ತಿನ ಸೀಟು ಹಂಚಿಕೆಯ ಪಟ್ಟಿಯನ್ನು ದಿನಾಂಕ: 03/01/2025 ರಂದು ಇಲಾಖಾ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿತ್ತು ಎಂದಿದೆ. ಮೂಲದಾಖಲೆಗಳ ಪರಿಶೀಲನೆ ಆಗದೇ ಇರುವುದರಿಂದ ಮತ್ತೊಮ್ಮೆ ಪರಿಶೀಲನೆಗೆ ಅವಕಾಶ ಮಾಡಿಕೊಡುವಂತೆ ಹಲವಾರು ಅಭ್ಯರ್ಥಿಗಳು ಕೊರಿಕೊಳ್ಳುತ್ತಿರುವುದರಿಂದ 4ನೇ ಅಂತಿಮ ಸುತ್ತಿಗೆ ಅವಕಾಶ ಮಾಡಿಕೊಳ್ಳುವುದಕ್ಕಾಗಿ ದಿನಾಂಕ:10/01/2025 ಹಾಗೂ 13/01/2025 ಎರಡು ದಿನಗಳಂದು ತಾವು ಆಯ್ಕೆ ಮಾಡಿಕೊಂಡ ವ್ಯವಸ್ಥಾಪಕ ಕೇಂದ್ರಗಳಲ್ಲಿ (DIET/CTE) ಮೂಲದಾಖಲೆಗಳ ಪರಿಶೀಲನೆಗೆ ಅವಕಾಶ ಕಲ್ಪಿಸಿದೆ ಎಂದು ಹೇಳಿದೆ. 1, 2, 3ನೇ ಸುತ್ತಿನಲ್ಲಿ ಸೀಟು ಹಂಚಿಕೆಯಾಗಿ ದಾಖಲಾತಿ ಪತ್ರ (Admission Slip) ಪಡೆಯದೇ ಇರುವ ಅಭ್ಯರ್ಥಿಗಳು 3ನೇ ಸುತ್ತಿನಲ್ಲಿ ಸ್ಟಾರ್ (**) ಗುರುತು ಬಂದಿರುವ…

Read More