Subscribe to Updates
Get the latest creative news from FooBar about art, design and business.
Author: kannadanewsnow09
ಶಿವಮೊಗ್ಗ: ಪತ್ರಕರ್ತರು ಸುದ್ದಿ ಮಾಡುವಾಗ ಸಮಾಜಿಕ ಹೊಣೆಗಾರಿಕೆಯನ್ನು ಹೊಂದಿರಬೇಕು. ಅವರು ಮಾಡುವ ಸುದ್ದಿಯು ಸಮಾಜವನ್ನು ದಿಕ್ಕು ತಪ್ಪಿಸಬಾರದು ಎಂದು ಪತ್ರಕರ್ತ ಡಿ ಎಮ್ ಪಿ ಸಿ ಅಧ್ಯಕ್ಷ ಚಾರ್ವಾಕ ರಾಘವೇಂದ್ರ ಹೇಳಿದರು. ಇಂದು ಶಿವಮೊಗ್ಗ ಜಿಲ್ಲೆಯ ಸಾಗರದ ಗಾಂಧಿನಗರದಲ್ಲಿರುವ DMPC ಕಚೇರಿಯಲ್ಲಿ ಪತ್ರಕರ್ತರಿಗೆ ಏರ್ಪಡಿಸಲಾಗಿದ್ದ ಸುದ್ದಿ ಬಗೆಯುವ ಬಗೆ ಎಂಬ ಕಾರ್ಯಗಾರದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಮಾತನಾಡಿದರು. ಪತ್ರಕರ್ತರು ಸುದ್ದಿ ಮಾಡುವಾಗ ಬಹಳ ಎಚ್ಚರಿಕೆ ವಹಿಸಬೇಕು. ಪತ್ರಕರ್ತರು ಸಮಾಜವನ್ನು ಕೂಡಿಸುವ ಕೊಂಡಿಯಾಗಬೇಕೆ ವಿನಃ ಸಮಾಜವನ್ನು ಒಡೆಯುವ ಅಸ್ತ್ರವಾಗಬಾರದು. ಪತ್ರಕರ್ತರು ಮಾಡಿದ ಸುದ್ದಿಯಿಂದ ಜಗತ್ತಿನಲ್ಲಿ ಹಲವಾರು ಸಮಾಜಿಕ ಬದಲಾವಣೆಯಾಗಿದೆ ಎನ್ನುವುದನ್ನು ಹಲವು ಹಲವು ಘಟನೆಗಳನ್ನು ಉಲ್ಲೇಖಿಸಿ ವಿವರಿಸಿದರು.ಇತ್ತೀಚಿಗೆ ಆಪ್ರೀಖಾದ ಪಟಗ್ರಾಫರ್ ಒಬ್ಬ ತೆಗೆದ ಒಂದು ಚಿತ್ರದಿಂದ ಆ ಕುಟುಂಬದ ಭವಿಷ್ಯವೇ ಬದಲಾಯ್ತು. ಹಾಗೆ ದ್ವೇಶ ಕಾರುವ ಪತ್ರಕರ್ತರ ಸುಳ್ಳು ವರದಿಗಳಿಂದಾಗಿ ಸಮಾಜದಲ್ಲಿ ದೊಂಬಿ ಹಿಂಸೆ ಸಾವು ನೋವುಗಳಿಗೆ ಕಾರಣವಾಗಿರುವುದನ್ನು ಉದಾಹರಿಸಿದರು. ಸುದ್ದಿ ಮಾಡುವಾಗ ಯಾವುದೇ ರಾಗ ದ್ವೇಷವಿರದೆ ಸತ್ಯದ ಬೆನ್ನು ಹತ್ತಿ ಹೋಗಬೇಕು…
ಬೆಂಗಳೂರು: ಸಾಕು ಪ್ರಾಣಿಗಳ ಕಡಿತಕ್ಕೆ ಒಳಗಾಗೋದು, ಪರಚುವಿಕೆಗೆ ಒಳಗಾದಾಗ ನೀವು ನಿರ್ಲಕ್ಷ್ಯಿಸಿದ್ರೇ, ಸಾವು ಗ್ಯಾರಂಟಿಯೇ. ಹೀಗಾಗಿ ನೀವು ಯಾವುದೇ ಪ್ರಾಣಿಯಿಂದ ಕಡಿತಕ್ಕೆ, ಪರಚುವಿಕೆಗೆ ಒಳಗಾಗಿದ್ದರೇ ನಿರ್ಲಕ್ಷ್ಯಿಸ ಬೇಡಿ. ಏನು ಮಾಡಬೇಕು ಅಂತ ಮುಂದೆ ಓದಿ. ನೀವು ಯಾವುದೇ ಪ್ರಾಣಿಯಿಂದ (ಸಾಕು ಪ್ರಾಣಿಗಳೂ ಸಹ) ಕಡಿತಕ್ಕೆ ಅಥವಾ ಪರಚುವಿಕೆಗೆ ಒಳಗಾದರೆ ನಿರ್ಲಕ್ಷಿಸಬೇಡಿ. ಸಾಬೂನನ್ನು ಬಳಸಿ 15 ನಿಮಿಷಗಳ ಕಾಲ ಗಾಯವನ್ನು ನಿರಂತರವಾಗಿ ನೀರಿನಿಂದ ತೊಳೆಯಿರಿ. ಬಳಿಕ ನಿಮ್ಮ ಹತ್ತಿರದ ಆಸ್ಪತ್ರೆಗೆ ತೆರಳಿ ರೇಬಿಸ್ ನಿರೋಧಕ ಚುಚ್ಚುಮದ್ದು ಮತ್ತು ಇಮ್ಯುನೋಗ್ಲೋಬಲಿನ್ ಪಡೆದುಕೊಳ್ಳಿ. ನೆನಪಿಡಿ : ಯಾವುದೇ ರೀತಿಯ ಪ್ರಾಣಿಗಳು ಕಚ್ಚಿದಾಗ ತಕ್ಷಣವೇ ಮಕ್ಕಳು ತಮ್ಮ ಪೋಷಕರಿಗೆ / ಶಿಕ್ಷಕರಿಗೆ ತಿಳಿಸುವಂತೆ ಮಕ್ಕಳಲ್ಲಿ ಅರಿವು ಮೂಡಿಸಿ. https://twitter.com/KarnatakaVarthe/status/1840008312290451903 https://kannadanewsnow.com/kannada/dasara-to-be-celebrated-as-peoples-festival-cm-siddaramaiah/ https://kannadanewsnow.com/kannada/breaking-muslims-say-hum-paanch-hamara-punchis-mla-yatnal/
ಬೆಂಗಳೂರು: ನಾಡಹಬ್ಬ ಮೈಸೂರು ದಸರಾವನ್ನು ಜನರ ಉಸ್ತವವಾಗಿ ಆಚರಿಸುವುದಾಗಿ ಸಿಎಂ ಸಿದ್ಧರಾಮಯ್ಯ ಘೋಷಿಸಿದ್ದಾರೆ. ಈ ಮೂಲಕ ನಾಡಹಬ್ಬಕ್ಕೆ ಮತ್ತಷ್ಟು ಮೆರುಗು ನೀಡಲು ಮುಂದಾಗಿದ್ದಾರೆ. ನಾಡಹಬ್ಬ ದಸರಾ ಉತ್ಸವಕ್ಕೆ ಅಕ್ಟೋಬರ್ 3ರಂದು ಸಾಹಿತಿ ಡಾ. ಹಂಪ ನಾಗರಾಜಯ್ಯ ಅವರು ಚಾಲನೆ ನೀಡಲಿದ್ದಾರೆ. ದಸರಾ ಉತ್ಸವವನ್ನು ಜನರ ಉತ್ಸವದಂತೆ ಆಚರಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಜಿಲ್ಲಾಡಳಿತ ಸರ್ವ ಸಿದ್ಧತೆಗಳನ್ನು ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ. https://twitter.com/KarnatakaVarthe/status/1839989544080347462 https://kannadanewsnow.com/kannada/decision-to-set-up-ai-skill-board-in-karnataka-priyank-kharge/ https://kannadanewsnow.com/kannada/that-mother-never-came-out-she-was-innocent-what-ks-eshwarappa-said-about-cms-wife-parvathi/
ಬೆಂಗಳೂರು: ವಿಶ್ವದಾಧ್ಯಂತ ಎಐ ತಂತ್ರಜ್ಞಾನ ಮುಂಚೂಣಿಯಲ್ಲಿದೆ. ಇದೇ ಸಂದರ್ಭದಲ್ಲಿ ಕರ್ನಾಟಕದಲ್ಲಿ ಎಐ ಕೌಶಲ ಮಂಡಳಿ ಸ್ಥಾಪನೆಗೆ ನಿರ್ಧರಿಸಲಾಗಿದೆ ಎಂಬುದಾಗಿ ಸಚಿವ ಪ್ರಿಯಾಂಕ್ ಖರ್ಗೆ ಘೋಷಿಸಿದ್ದಾರೆ. ಬೆಂಗಳೂರು ಮತ್ತು ಬೆಂಗಳೂರಿನ ಹೊರವಲಯದಲ್ಲಿ ಮೂರು ಹೊಸ ಟೆಕ್ ಪಾರ್ಕ್ ಸ್ಥಾಪಿಸುವ ಮೂಲಕ ಜಾಗತಿಕ ನಾವೀನ್ಯ ಜಿಲ್ಲೆಗಳ ರಚನೆಗೆ ನಿರ್ಧರಿಸಲಾಗಿದೆ. ತಂತ್ರಜ್ಞಾನ ಕ್ಷೇತ್ರದಲ್ಲಿ ಜಂಟಿ ಸಂಶೋಧನೆ ಮತ್ತು ಅಭಿವೃದ್ಧಿ ಚಟುವಟಿಕೆಗೆ ₹100 ಕೋಟಿ ಆವಿಷ್ಕಾರ ನಿಧಿ ಸ್ಥಾಪಿಸಲಾಗುವುದು. ಕೃತಕ ಬುದ್ಧಿಮತ್ತೆಗೆ ಉತ್ತೇಜನ ನೀಡಲು ಉತ್ಕೃಷ್ಟತಾ ಕೇಂದ್ರ ಮತ್ತು ಎಐ ಕೌಶಲ ಮಂಡಳಿ ಪ್ರಾರಂಭಿಸಲಾಗುವುದು ಎಂದು ತಿಳಿಸಿದ್ದಾರೆ. https://twitter.com/KarnatakaVarthe/status/1839972547074383992 ರಾಜ್ಯದ ಯುವಕ ಯುವತಿಯರು ಕಾಲೇಜುಗಳಲ್ಲಿ ತಾಂತ್ರಿಕ ಶಿಕ್ಷಣಾರ್ಹತೆ ಪಡೆದ ನಂತರ, ದಿನದಿಂದ ದಿನಕ್ಕೆ ಬದಲಾಗುತ್ತಿರುವ ಹಾಗೂ ವಿಭಿನ್ನ ಉದ್ಯೋಗ ಸಂಸ್ಥೆಗಳಲ್ಲಿ ವಿಭಿನ್ನವಾದ ನಿಪುಣತೆಯನ್ನು ಹೊಂದಿರುವ ಉದ್ಯೋಗಿಗಳ ಬೇಡಿಕೆಯಿರುವುದರಿಂದ ಕರ್ನಾಟಕ ಸರ್ಕಾರ ‘ನಿಪುಣ ಕರ್ನಾಟಕ’ ಯೋಜನೆಯನ್ನು ಜಾರಿಗೆ ತಂದಿದೆ. ಈ ಕಾರ್ಯಕ್ರಮದ ಮೂಲಕ ನಾವು ರಾಜ್ಯದ ಯುವ ಸಮೂಹಕ್ಕೆ ಸೂಕ್ತ ತರಬೇತಿ ನೀಡಿ ಅವರನ್ನು ಅವಶ್ಯಕತೆಗೆ ಅನುಗುಣವಾದ ಉದ್ಯೋಗಗಳಿಗೆ ತಯಾರು…
ಕನಕಪುರ : “ಕುಮಾರಸ್ವಾಮಿಯವರಿಗೆ ಅವರ ಬಳಿ ಇರುವ ದಾಖಲೆಗಳನ್ನು ಬಿಡುಗಡೆ ಮಾಡಬೇಡಿ ಎಂದು ಅವರನ್ನು ಹಿಡಿದುಕೊಂಡವರು ಯಾರು?” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿರುಗೇಟು ನೀಡಿದರು. ನನ್ನ ಬಳಿ ಇರುವ ದಾಖಲೆಗಳನ್ನು ಬಿಡುಗಡೆ ಮಾಡಿದರೆ ಕಾಂಗ್ರೆಸ್ ಸರ್ಕಾರದ ಏಳು ಜನ ಮಂತ್ರಿಗಳು ರಾಜೀನಾಮೆ ನೀಡಬೇಕಾಗುತ್ತದೆ ಎನ್ನುವ ಹೇಳಿಕೆ ಬಗ್ಗೆ ಕೇಳಿದಾಗ, “ದಾಖಲೆಗಳನ್ನು ಬಿಡುಗಡೆ ಮಾಡಲು ಬೇಡ ಎಂದವರು ಯಾರು?” ಎಂದರು. ಸಾತನೂರಿನ ಗ್ರಾಮಾಂತರ ಪ್ರೌಢಶಾಲೆ ಮತ್ತು ಪದವಿಪೂರ್ವ ಕಾಲೇಜಿನ ಆಟದ ಮೈದಾನದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಡಿಸಿಎಂ ಉತ್ತರಿಸಿದ್ದು ಹೀಗೆ. ಬಿಜೆಪಿ- ದಳ ಎರಡು ಒಂದೇ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಲಿ ಎಂದು ಬಿಜೆಪಿ ಒತ್ತಾಯ ಮಾಡುತ್ತಿದೆ. ಕುಮಾರಸ್ವಾಮಿಯವರು ಮೌನವಾಗಿದ್ದಾರೆ ಎಂದು ಕೇಳಿದಾಗ, “ಅವರು ಏನು ಬೇಕಾದರೂ ಮಾಡಿಕೊಳ್ಳಲಿ. ನಮ್ಮ ಪಕ್ಷ ಸಿದ್ದರಾಮಯ್ಯ ಅವರ ಬೆಂಬಲಕ್ಕಿದೆ. ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು ಇದರ ಬಗ್ಗೆ ಸ್ಪಷ್ಟನೆ ಕೊಟ್ಟಿದ್ದಾರೆ. ನಮಗೆ ಬಿಜೆಪಿ ಮತ್ತು ದಳ ಎರಡೂ ಒಂದೇ” ಎಂದರು. ಕನಕಪುರದ ಮೆಡಿಕಲ್ ಕಾಲೇಜು ವಿಚಾರವಾಗಿ ಸರ್ಕಾರ…
ಕನಕಪುರ : “ಸರ್ಕಾರಿ ಸೌಲಭ್ಯ ಕೊಡಿಸುತ್ತೇವೆ, ಕೆಲಸ ಮಾಡಿಕೊಡುತ್ತೇವೆ ಎಂದು ಅಧಿಕಾರಿಗಳು ಮತ್ತು ಮುಖಂಡರು ಜನರ ಬಳಿ ಲಂಚ ಕೇಳಬಾರದು. ಕೇಳಿದರೆ ಬೆಂಗಳೂರಿನ ನನ್ನ ವಿಳಾಸಕ್ಕೆ ಅವರ ಹೆಸರು, ಸಹಿತ ಪತ್ರ ಬರೆಯಿರಿ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಸಾರ್ವಜನಿಕರಿಗೆ ತಿಳಿಸಿದರು. ಸಾತನೂರಿನ ಗ್ರಾಮಾಂತರ ಪ್ರೌಢಶಾಲೆ ಮತ್ತು ಪದವಿಪೂರ್ವ ಕಾಲೇಜಿನ ಆಟದ ಮೈದಾನದಲ್ಲಿ ನಡೆದ ಜನಸ್ಪಂದನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು “ಈ ತಾಲೂಕಿನಲ್ಲಿ ಪಾರದರ್ಶಕವಾಗಿ ಆಡಳಿತ ನಡೆಯಬೇಕು. ನನ್ನನ್ನು ಗೆಲ್ಲಿಸಿದ ನಿಮ್ಮ ಋಣ ತೀರಿಸಬೇಕು” ಎಂದರು. “ಈ ಹಿಂದೆ 8 ಸಾವಿರಕ್ಕೂ ಹೆಚ್ಚು ಜನರಿಗೆ ಬಗರ್ ಹುಕುಂ ಜಮೀನು ನೀಡಿದ್ದೇವೆ. ನಿವೇಶನ, ಮನೆ ಹಂಚಿದ್ದೇವೆ. ಆದರೂ ಲೋಕಸಭಾ ಚುನಾವಣೆಯಲ್ಲಿ ಡಿ.ಕೆ.ಸುರೇಶ್ ಅವರಿಗೆ ಜನರು ಆಶೀರ್ವಾದ ಮಾಡಲಿಲ್ಲ. ಈ ಬಗ್ಗೆ ನಾನು ಹೆಚ್ಚು ಚರ್ಚೆ ಮಾಡಲು ಹೋಗುವುದಿಲ್ಲ” ಎಂದರು. ಕನಕಪುರ ಭಾಗದಲ್ಲಿ 2-3 ಲಕ್ಷಕ್ಕೆ ಜಮೀನು ಕೇಳುವವರು ಇರಲಿಲ್ಲ “ಈ ಭಾಗವನ್ನು ಅಭಿವೃದ್ಧಿ ಮಾಡಿದ ಪರಿಣಾಮವಾಗಿ ಜಮೀನುಗಳ ಬೆಲೆಯೂ ಹೆಚ್ಚಾಗಿದೆ. ಎರಡು, ಮೂರು ಲಕ್ಷ…
ಬೆಂಗಳೂರು: ವಿಶ್ವಕರ್ಮ ಸಮಾಜ ನಿಜವಾದ ಮೊದಲ ಇಂಜಿನಿಯರ್ ಗಳು. ಅವರಲ್ಲಿರುವ ಕುಶಲತೆ ಅಪಾರ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಶ್ರೀ ವಿಶ್ವಕರ್ಮ ಸೇವಾ ಪ್ರತಿಷ್ಠಾನದಿಂದ ನಗರದ ರವೀಂದ್ರ ಕಲಾಕ್ಷೇತ್ರದಲ್ಲಿ ಪ್ರತಿಷ್ಠಾನದ ಕಾರ್ಯಾಧ್ಯಕ್ಷ ವಿಶ್ವಕರ್ಮ ನಾಡೋಜ ಡಾ. ಬಿ.ಎಂ. ಉಮೇಶ್ ಕುಮಾರ್ ನೇತೃತ್ವದಲ್ಲಿ ಆಯೋಜಿಸಿದ್ದ ರಾಜ್ಯ ಮಟ್ಟದ ವಿರಾಟ್ ವಿಶ್ವಕರ್ಮ ಮಹೋತ್ಸವವನ್ನು ಉದ್ಘಾಟಿಸಿ ಸಾಧಕರಿಗೆ ವಿಶ್ವಕರ್ಮ ಶ್ರೀ, ವಿಶ್ವಕರ್ಮ ಸೇವಾ ರತ್ನ ಸೇರಿ ವಿವಿಧ ಪ್ರಶಸ್ತಿಗಳನ್ನು ಪ್ರದಾನ ಮಾಡಿ ಮಾತನಾಡಿದ ಅವರು, ವಿಶ್ವಕರ್ಮ ಸಮುದಾಯ ಭವ್ಯವಾದ ಶ್ರಮ ಸಂಸ್ಕೃತಿಯನ್ನು ಬೆಳೆಸಿಕೊಂಡು, ಉಳಿಸಿಕೊಂಡು ಬಂದಿದೆ. ನಿಮ್ಮಲ್ಲಿ ಅಗಾಧ ಪ್ರತಿಭೆ ಇದ್ದು, ಮುಂದಿನ ಪೀಳಿಗೆಗೆಯನ್ನು ಇನ್ನಷ್ಟು ಸಶಕ್ತಗೊಳಿಸಬೇಕಾಗಿದೆ. ಸಮುದಾಯದ ಸೃಜನ ಶೀಲತೆಯನ್ನು ಪ್ರೋತ್ಸಾಹಿಸಿ ಮಾರ್ಗದರ್ಶನ ನೀಡುವ ಅಗತ್ಯವಿದೆ ಎಂದರು. ಯಾವುದೇ ಸಮುದಾಯಕ್ಕೆ ಶಿಕ್ಷಣ, ಆರೋಗ್ಯ ಮತ್ತು ಮಾಹಿತಿ ಅತ್ಯಂತ ಅಗತ್ಯವಾಗಿದೆ. ಸಮಾಜದಲ್ಲಿ ಎಲ್ಲರಿಗೂ ಸಮಾನವಾದ ಅವಕಾಶವಿದೆ. ಪ್ರತಿಯೊಬ್ಬರೂ ಬೆಳೆಯಲು ಅವಕಾಶವಿದೆ. ಎಲ್ಲರೂ ಸಶಕ್ತರಾದರೆ ದೇಶ ಸೂಪರ್ ಪವರ್ ಆಗಲಿದೆ.…
ಕೆಎನ್ಎನ್ ಸಿನಿಮಾ ಡೆಸ್ಕ್: ಬಿಗ್ ಬಾಸ್ ಕನ್ನಡ 11ಗೆ ವೇದಿಕೆ ಸಿದ್ಧವಾಗಿದೆ. ಈ ಸ್ಪರ್ಧೆಗಾಗಿ ದೊಡ್ಮನೆ ಕೂಡ ಸಿದ್ದಗೊಂಡಿದೆ. ಈ ಬಾರಿಯ ಸ್ವರ್ಗ ಮತ್ತು ನರಕ ಅನ್ನೋ ಎರಡು ಥೀಮ್ ಗಳೊಂದಿಗೆ ಬಿಗ್ ಬಾಸ್ ಆಟ ಶುರುವಾಗಲಿದೆ. ಹಾಗಾದ್ರೇ ಬಿಗ್ ಬಾಸ್ ಮನೆ ಹೇಗಿಗೆ ಎನ್ನುವ ಬಗ್ಗೆ ಮೇಕಿಂಗ್ ವೀಡಿಯೋ ಔಟ್ ಆಗಿದ್ದು, ಆ ಬಗ್ಗೆ ಮುಂದೆ ಓದಿ. ಬಿಗ್ ಬಾಸ್ ಕನ್ನಡ 11ನೇ ಸೀಸನ್ ಮನೆಯ ತೆರೆಯ ಹಿಂದೆ ಹೇಗಿರಲಿದೆ ಎನ್ನುವ ಝಲಕ್ ರಿವೀಲ್ ಆಗಿದೆ. ಈ ಬಾರಿ ಸ್ವರ್ಗ ಮತ್ತು ನರಕ ಎನ್ನುವ ಥೀಮ್ ನೊಂದಿಗೆ ದೊಡ್ಮನೆಯ ಆಟ ಶುರುವಾಗಲಿದೆ. ಬಿಗ್ ಬಾಸ್ ಮನೆಗೆ ಯಾರೆಲ್ಲ ಸೇರಲಿದ್ದಾರೆ ಎನ್ನುವ ಬಗ್ಗೆ ಇನ್ನೂ ರಿವೀಲ್ ಆಗಿಲ್ಲ. ಆ ಬಗ್ಗೆ ತೀವ್ರ ಕುತೂಹಲ ಮೂಡಿಸಿದೆ. ಇದೆಲ್ಲದರ ನಡುವೆ ಬಿಗ್ ಬಾಸ್ ತಂಡ ದೊಡ್ಡ ಮಟ್ಟದಲ್ಲಿ ಮನೆಯ ತಯಾರಿ ನಡೆದಿದ್ದು, ವಾಹಿನಿಯು ಹೇಗೆ ಬಿಗ್ ಬಾಸ್ ಮನೆ ರಚನೆಯಾಗುತ್ತಿದೆ ಎನ್ನುವಂತ ವೀಡಿಯೋವನ್ನು ರಿಲೀಸ್…
ಬೆಂಗಳೂರು: ಮುಡಾ ಹಗರಣದಲ್ಲಿ ಸಿಎಂ ಸಿದ್ಧರಾಮಯ್ಯ ವಿರುದ್ಧ ಮೈಸೂರಿನ ಲೋಕಾಯುಕ್ತದಲ್ಲಿ ಎಫ್ಐಆರ್ ದಾಖಲಾಗಿದೆ. ಈ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ಧರಾಮಯ್ಯ ವಿರುದ್ಧ ಜಾರಿ ನಿರ್ದೇಶನಾಲಯದ ಅಧಿಕಾರಿಗಳಿಗೂ ದೂರು ನೀಡಲಾಗಿದೆ. ಇಂದು ಮುಡಾ ಹಗರಣ ಸಂಬಂಧ ಮುಖ್ಯಮಂತ್ರಿ ಸಿದ್ಧರಾಮಯ್ಯ ವಿರುದ್ಧ ದೂರುದಾರ ಸ್ನೇಹಮಹಿ ಕೃಷ್ಣ ಅವರು ಇಡಿ ಕಚೇರಿಗೆ ತೆರಳಿ ದೂರು ನೀಡಿದ್ದಾರೆ. ಹೀಗಾಗಿ ಸಿಎಂ ಸಿದ್ಧರಾಮಯ್ಯಗೆ ಇಡಿ ಸಂಕಷ್ಟ ಕೂಡ ಎದುರಾದಂತೆ ಆಗಿದೆ. ಮುಡಾ ಹಗರಣ ಸಂಬಂಧ ಸಿಎಂ ಸಿದ್ಧರಾಮಯ್ಯ ವಿರುದ್ಧದ ಪ್ರಾಸಿಕ್ಯೂಷನ್ ಗೆ ರಾಜ್ಯಪಾಲರು ಅನುಮತಿ ನೀಡಿದ್ದರು. ಇದರನ್ನು ಪ್ರಶ್ನಿಸಿ ಸಲ್ಲಿಸಲಾಗಿದ್ದಂತ ರಿಟ್ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿ, ರಾಜ್ಯಪಾಲರ ನಿರ್ಧಾರವನ್ನು ಎತ್ತಿ ಹಿಡಿಯಲಾಗಿತ್ತು. ಈ ಬಳಿಕ ಬೆಂಗಳೂರಿನ ಜನಪ್ರತಿನಿಧಿಗಳ ಕೋರ್ಟ್ ಸಿಎಂ ಸಿದ್ಧರಾಮಯ್ಯ ವಿರುದ್ಧದ ಮುಡಾ ಹಗರಣದ ಸಂಬಂಧ ಎಫ್ಐಆರ್ ದಾಖಲಿಸಿ, ತನಿಖೆಗೆ ಆದೇಶಿಸಿತ್ತು. ಅದರಂತೆ ನಿನ್ನೆ ಮುಖ್ಯಮಂತ್ರಿ ಸಿದ್ಧರಾಮಯ್ಯ, ಅವರ ಪತ್ನಿ ಹಾಗೂ ಭಾಮೈದ ಸೇರಿದಂತೆ ಐವರ ವಿರುದ್ಧ ಎಫ್ಐಆರ್ ದಾಖಲಾಗಿದೆ. https://kannadanewsnow.com/kannada/mangaluru-bmw-car-catches-fire-in-mangaluru/ https://kannadanewsnow.com/kannada/breaking-muslims-say-hum-paanch-hamara-punchis-mla-yatnal/
ಪೂರ್ವ ಜನ್ಮದ ಕರ್ಮ ಫಲ ಈ ಜನ್ಮದಲ್ಲಿ ಪಡೆದಿರುವ ಪ್ರತಿಫಲ. ನಮಗೆ ನಮ್ಮ ಪೂರ್ವ ಜನ್ಮದ ಕರ್ಮಗಳಿಂದಲೇ… ಈ ಜನ್ಮದಲ್ಲಿ… ತಂದೆ, ತಾಯಿ, ಅಣ್ಣ, ಅಕ್ಕ, ಹೆಂಡತಿ, ಗಂಡ, ಪ್ರೇಯಸಿ, ಪ್ರಿಯಕರ, ಮಿತ್ರರು, ಶತ್ರುಗಳು ಎನ್ನುವ ಅನೇಕ ಸಂಬಂಧಗಳು ನಮಗೆ ಈ ಪ್ರಪಂಚದಲ್ಲಿ ಲಭಿಸುತ್ತದೆ. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ನಕ್ಷತ್ರಿ ತಂತ್ರಿ ನಂ:- 9686268564. ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ, ಮಕ್ಕಳು ಹೇಳಿದ ಮಾತು ಕೇಳದಿದ್ದರೆ, ವಿದ್ಯಾಭ್ಯಾಸದಲ್ಲಿ ಕಿರಿಕಿರಿ, ಆರೋಗ್ಯ ಸಮಸ್ಯೆ, ಆಸ್ತಿಯಲ್ಲಿ ಕಿರಿಕಿರಿ, ಮಾಟ ಮಂತ್ರ, ಶತ್ರು ನಾಶ, ಶತ್ರು ವಶೀಕರಣ,ಭಾನಮತಿ ಕೃತಿಮ ವಶೀಕರಣ ಇನ್ನೂ ನಿಮ್ಮ…