Author: kannadanewsnow09

ಬೆಂಗಳೂರು: ಸಿಎಂ ಸಿದ್ದರಾಮಯ್ಯ ಕುಟುಂಬದ ವಿರುದ್ದದ ಮುಡಾ ಹಗರಣ ಕುರಿತಂತೆ ರಾಜ್ಯಪಾಲರಿಗೆ ಮತ್ತೊಂದು ದೂರು ಸಲ್ಲಿಕೆಯಾಗಿದೆ. ಸಿದ್ದರಾಮಯ್ಯ ಕುಟುಂಬ ವಿರುದ್ದದ ಆರೋಪಗಳು ಗಂಭೀರವಾಗಿದ್ದು ನ್ಯಾಯಾಲಯವೇ ಶಾಕ್ ಆಗಿದೆ ಎಂದು ತೀರ್ಪಿನಲ್ಲಿ ಹೇಳಿದೆ. ಹೀಗಿರುವಾಗ ಲೋಕಾಯುಕ್ತದಿಂದ ಸಮರ್ಪಕ ತನಿಖೆಯನ್ನು ನಿರೀಕ್ಷಿಸಲು ಸಾಧ್ಯವಿಲ್ಲ. ಹಾಗಾಗಿ ಹೈಕೋರ್ಟ್ ಮೇಲ್ವಿಚಾರಣೆಯಲ್ಲಿ ಸಿಬಿಐ ತನಿಖೆಗೆ ಆದೇಶಿಸಲು ನಿರ್ದೇಶನ ನೀಡಬೇಕೆಂದು ‘ಸಿಟಿಜನ್ ರೈಟ್ಸ್ ಫೌಂಡೇಷನ್ (CRF)’ ರಾಜ್ಯಪಾಲರಿಗೆ ದೂರು ನೀಡಿದೆ. ಮುಡಾ ಅಕ್ರಮ ಮಾತ್ರವಲ್ಲ, ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿದೆ ಎನ್ನಲಾಗಿರುವ ಭ್ರಷ್ಟಾಚಾರ ಪ್ರಕರಣಗಳ ಬಗ್ಗೆಯೂ ಹೈಕೋರ್ಟ್ ಮೇಲ್ವಿಚಾರಣೆಯಲ್ಲಿ ಸಿಬಿಐ ತನಿಖೆಗೆ ‘ಸಿಟಿಜನ್ ರೈಟ್ಸ್ ಫೌಂಡೇಷನ್’ ಒತ್ತಾಯಿಸಿದೆ. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (MUDA) ದಲ್ಲಿ ನಿವೇಶನ ಹಂಚಿಕೆ ಅಕ್ರಮ ಮೂಲಕ ಸಾವಿರಾರು ಕೋಟಿ ರೂಪಾಯಿ ಹಗರಣ ನಡೆದಿದೆ ಎಂಬ ಆರೋಪ ಕೇಳಿಬಂದಿದ್ದು ಈ ಪ್ರಕರಣದ ಬಗ್ಗೆ ಹೈಕೋರ್ಟ್ ಮೇಲ್ವಿಚಾರಣೆಯಲ್ಲಿ ಸಿಬಿಐ ತನಿಖೆ ನಡೆಸಲು ಕೋರಿ ‘ಸಿಟಿಜನ್ ರೈಟ್ಸ್ ಫೌಂಡೇಷನ್’ದಿನಾಂಕ 03.07.2024ರಂದು ಮನವಿ ಸಲ್ಲಿಸಿತ್ತು. ಈ ಮನವಿ ಸಲ್ಲಿಸಿ ಸುಮಾರು…

Read More

ಮೈಸೂರು: ಮಹಿಷ ಮಂಡಲೋತ್ಸವ ಆಚರಣೆ ವಿಚಾರವಾಗಿ ಮೈಸೂರು ನಗರ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಮೈಸೂರು ನಗರ ಕಮೀಷನರ್ ಸೀಮಾ ಲಾಟ್ಕರ್ ಆದೇಶಿಸಿದ್ದಾರೆ. ಈ ಸಂಬಂಧ ಆದೇಶ ಹೊರಡಿಸಿರುವಂತ ಅವರು, ಮಹಿಷ ಮಂಡಲೋತ್ಸವ ಆಚರಣೆಯ ಹಿನ್ನಲೆಯಲ್ಲಿ ಚಾಮುಂಡಿ ಬೆಟ್ಟ ಸೇರಿದಂತೆ ಮೈಸೂರು ನಗರದಲ್ಲಿ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಟೌನ್ ಹಾಲ್ ನ ಒಳ ಆವರಣ ಹೊರತುಪಡಿಸಿ ನಿಷೇಧಾಜ್ಞೆ ಜಾರಿಯಲ್ಲಿರುತ್ತದೆ ಎಂದಿದ್ದಾರೆ. ದಿನಾಂಕ 28.09.2024ರಂದು ಮಧ್ಯರಾತ್ರಿ 12 ಗಂಟೆಯಿಂದ 30.09.2024ರ ಬೆಳಿಗ್ಗೆ 6 ಗಂಟೆಯವರೆಗೆ ನಿಷೇಧಾಜ್ಞೆ ಜಾರಿಯಲ್ಲಿರಲಿದೆ. ಈ ವೇಳೆಯಲ್ಲಿ ಯಾವುದೇ ಸಭೆ ಸಮಾರಂಭ, ರ‌್ಯಾಲಿ ಹಾಗೂ ಮೆರವಣಿಗೆ ನಡೆಸದಂತೆ ನಿಷೇಧವಿದೆ. ಕಲಂ 163 ಬಿ.ಎನ್.ಎಸ್.ಎಸ್ ಅಡಿ ನಿಷೇಧಾಜ್ಞೆಯನ್ನು ಜಾರಿಗೊಳಿಸಿ, ಮೈಸೂರು ನಗರ ಕಮೀಷನರ್ ಸೀಮಾ ಲಾಟ್ಕರ್ ಆದೇಶಿಸಿದ್ದಾರೆ. https://kannadanewsnow.com/kannada/good-news-for-railway-passengers-6000-special-trains-to-run-on-dussehra-diwali/ https://kannadanewsnow.com/kannada/breaking-muslims-say-hum-paanch-hamara-punchis-mla-yatnal/

Read More

ಬೆಂಗಳೂರು: ದುರ್ಗಾ ಪೂಜೆ, ದೀಪಾವಳಿ ಮತ್ತು ಛತ್ ಪೂಜೆಯ ಸಮಯದಲ್ಲಿ ಪ್ರಯಾಣಿಕರ ಸುಗಮ ಸಂಚಾರಕ್ಕಾಗಿ ಈ ವರ್ಷ ಭಾರತೀಯ ರೈಲ್ವೆಯಿಂದ 6000 ಕ್ಕೂ ಹೆಚ್ಚು ವಿಶೇಷ ರೈಲುಗಳನ್ನು ಓಡಿಸಲಾಗುವುದು ಎಂದು ರೈಲ್ವೆ ಸಚಿವರು ಹೇಳಿದ್ದಾರೆ. ಈ ವಿಶೇಷ ರೈಲುಗಳು ಅಕ್ಟೋಬರ್ 1 ರಿಂದ ನವೆಂಬರ್ 30ರ ನಡುವೆ ಕಾರ್ಯನಿರ್ವಹಿಸಲಿವೆ. ಪ್ರಯಾಣಿಕರಿಗೆ ಅನುಕೂಲವಾಗುವಂತೆ ಭಾರತೀಯ ರೈಲ್ವೆ ಪ್ರತಿ ವರ್ಷ ಹಬ್ಬಗಳ ಸಂದರ್ಭದಲ್ಲಿ ವಿಶೇಷ ರೈಲುಗಳನ್ನು ಓಡಿಸಲಾಗುತ್ತಿದೆ. ಈ ವರ್ಷ ವಿಶೇಷ ರೈಲುಗಳ ಸಂಖ್ಯೆಯಲ್ಲಿ ಭಾರಿ ಹೆಚ್ಚಳವಾಗಿದೆ. ದುರ್ಗಾಪೂಜೆ, ದೀಪಾವಳಿ ಮತ್ತು ಛತ್ ಹಬ್ಬಗಳಲ್ಲಿ ಲಕ್ಷಗಟ್ಟಲೆ ಪ್ರಯಾಣಿಕರು ಮನೆಗೆ ತೆರಳಲು ಪ್ರಯಾಣಿಸುತ್ತಾರೆ ಎಂಬುದು ಗಮನಾರ್ಹ. ಅಪಾರ ಸಂಖ್ಯೆಯ ಪ್ರಯಾಣಿಕರಿಗೆ ಸುಲಭ ಮತ್ತು ಆರಾಮದಾಯಕ ಪ್ರಯಾಣವನ್ನು ಒದಗಿಸಲು, ಈ ವರ್ಷವೂ ವಿಶೇಷ ರೈಲುಗಳನ್ನು ಓಡಿಸಲು ರೈಲ್ವೆ ಸಿದ್ಧತೆಗಳನ್ನು ಮಾಡಿದೆ. ಎರಡು ತಿಂಗಳ ಅವಧಿಯಲ್ಲಿ, ಈ ವಿಶೇಷ ರೈಲುಗಳು 6000 ಕ್ಕೂ ಹೆಚ್ಚು ಟ್ರಿಪ್‌ಗಳನ್ನು ಮಾಡುತ್ತವೆ ಮತ್ತು ಹೆಚ್ಚಿನ ಸಂಖ್ಯೆಯ ಪ್ರಯಾಣಿಕರನ್ನು ಅವರ ಗಮ್ಯಸ್ಥಾನಕ್ಕೆ ಸಾಗಿಸಲು ಅನುಕೂಲವಾಗುತ್ತದೆ. ಕಳೆದ…

Read More

ಮೈಸೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ವಿರುದ್ಧ ಮುಡಾ ಹಗರಣ ಸಂಬಂಧ ಕೋರ್ಟ್ ಆದೇಶದಂತೆ ಎಫ್ಐಆರ್ ದಾಖಲಿಸಲಾಗಿತ್ತು. ಈ ಪ್ರಕರಣದ ತನಿಖೆಗಾಗಿ ನಾಲ್ವರು ಅಧಿಕಾರಿಗಳ ನೇತೃತ್ವದ ತಂಡವನ್ನು ಲೋಕಾಯುಕ್ತದಿಂದ ರಚಿಸಲಾಗಿದೆ. ಮೈಸೂರು ಲೋಕಾಯುಕ್ತ ಎಸ್ಪಿ ಉದೇಶ್ ಅವರ ನೇತೃತ್ವದಲ್ಲಿ ಡಿವೈಎಸ್ಪಿ ಮಾಲತೀಶ್, ಚಾಮರಾಜನಗರ ಡಿವೈಎಸ್ಪಿ ಮ್ಯಾಥ್ಯೂ ಥಾಮಸ್ ಹಾಗೂ ಇನ್ಸ್ ಪೆಕ್ಟರ್ ಒಳಗೊಂಡ ನಾಲ್ಕು ತನಿಖಾ ತಂಡವನ್ನು ರಚನೆ ಮಾಡಲಾಗಿದೆ. ಮುಡಾ ಹಗರಣ ಸಂಬಂಧದ ತನಿಖೆಯ ಕುರಿತಂತೆ, ದಾಖಲಾತಿಗಳು ಸೇರಿದಂತೆ ವಿವಿಧ ವಿಚಾರಗಳನ್ನು ಎಲ್ಲಾ ಅಧಿಕಾರಿಗಳೊಂದಿಗೆ ಸಭೆಯನ್ನು ನಡೆಸಿ ಲೋಕಾಯುಕ್ತ ಎಸ್ಪಿ ಉದೇಶ್ ಮಾಹಿತಿ ಹಂಚಿಕೊಂಡು, ಚರ್ಚಿಸಿದರು. ಹೀಗಾಗಿ ಮುಡಾ ಹಗರಣದ ಸಂಬಂಧ ಲೋಕಾಯುಕ್ತದಿಂದ ನಾಲ್ಕು ಟೀಂ ತನಿಖೆಗೆ ರಚನೆಯಾದಂತೆ ಆಗಿದೆ. https://kannadanewsnow.com/kannada/breaking-muslims-say-hum-paanch-hamara-punchis-mla-yatnal/ https://kannadanewsnow.com/kannada/breaking-5-6-ministers-will-resign-if-my-documents-are-released-hdk-new-bomb/

Read More

ಶಿವಮೊಗ್ಗ: ಜಿಲ್ಲೆಯಲ್ಲಿ ಸಾಗರ ತಾಲ್ಲೂಕಿನ ಕಾರ್ಗಲ್ ಪೊಲೀಸ್ ಠಾಣೆಗೆ ಶಾಸಕ ಬೇಳೂರು ಗೋಪಾಲಕೃಷ್ಣ ಅವರು ನೂತನ ಬೊಲೇರೋ ವಾಹನವನ್ನು ಹಸ್ತಾಂತರಿಸಿದರು. ಶಿವಮೊಗ್ಗ ಜಿಲ್ಲೆಯ ಸಾಗರ ನಗರದ ಡಿವೈಎಸ್ಪಿ ಕಚೇರಿಯಲ್ಲಿ ಇಂದು ಕಾರ್ಗಲ್ ಪೊಲೀಸ್ ಠಾಣೆಗೆ ಶಾಸಕರ ಅನುದಾನದಲ್ಲಿ ಖರೀದಿಸಿದ್ದಂತ ನೂತನ ಬೊಲೇರೋ ವಾಹನವನ್ನು ಶಾಸಕ ಬೇಳೂರು ಗೋಪಾಲಕೃಷ್ಣ ಹಸ್ತಾಂತರಿಸಿ, ಹಸಿರು ನಿಶಾನೆ ತೋರಿದರು. ಈ ಬಳಿಕ ಮಾತನಾಡಿದಂತ ಅವರು, ಕಾರ್ಗಲ್ ಠಾಣೆಯ ವ್ಯಾಪ್ತಿಯು ಕಾರ್ಗಲ್, ಬಾರಂಗಿ, ಜೋಗಾ ಒಳಗೊಂಡು 170 ಕಿ.ಮೀ ವ್ಯಾಪ್ತಿಯನ್ನು ಒಳಗೊಂಡಿದೆ. ಈ ಠಾಣೆಯಲ್ಲಿ ವಾಹನ ಹಳೆಯದಾಗಿದ್ದು ಕಂಡು ನಾನೇ ಒಂದು ದಿನ ಹೊಸ ವಾಹನ ಕೊಡಿಸುವುದಾಗಿ ಹೇಳಿದ್ದೆ. ಅದರಂತೆ ಇಂದು ಹೊಸ ವಾಹನವನ್ನು ಹಸ್ತಾಂತರಿಸಿದ್ದೇನೆ. ಇನ್ಮುಂದೆ ಜನತೆಯ ಕಷ್ಟಕ್ಕೆ ಸ್ಪಂದಿಸುವಂತ ಕೆಲಸ ತ್ವರಿತವಾಗಲಿ ಎಂದರು. ಬಾರಂಗಿ ಹೋಬಳಿಯ ಕಟ್ಟಿನಕಾರಿಯಲ್ಲಿ ಹೊಸದಾಗಿ ಪೊಲೀಸ್ ಠಾಣೆ ನೀಡಬೇಕು ಎಂಬುದು ಆ ಭಾಗದ ಜನರ ಒತ್ತಾಯ, ಮನವಿಯಾಗಿದೆ. ಈಗಾಗಲೇ ಗೃಹ ಸಚಿವರೊಂದಿಗೆ ಒಂದು ಬಾರಿ ಮಾತನಾಡಿದ್ದೇನೆ. ಅವರು ಸಕಾರಾತ್ಮಕವಾಗಿಯೇ ಸ್ಪಂದಿಸಿದ್ದಾರೆ ಎಂದು ಹೇಳಿದರು.…

Read More

ಶಿವಮೊಗ್ಗ: ರಾಜ್ಯ ಸರ್ಕಾರದಿಂದ ಸಿಬಿಐಗೆ ನೀಡಿದ್ದಂತ ಮುಕ್ತ ತನಿಖಾ ಅವಕಾಶ ಹಿಂಪಡೆದ ನಿರ್ಧಾರ ಸರಿಯಾಗಿದೆ. ಕೇವಲ ಮುಡಾ ಹಗರಣದಿಂದ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರನ್ನು ಬಚಾವ್ ಮಾಡೋದಕ್ಕೆ ಎಂಬುದು ಸುಳ್ಳು. ಸಿಬಿಐ ತನಿಖೆಗೆ ಕೊಟ್ಟ ಎಲ್ಲಾ ಕೇಸಲ್ಲೂ ನ್ಯಾಯ ಸಿಕ್ಕಿದ್ಯಾ ಎಂಬುದಾಗಿ ಶಾಸಕ ಬೇಳೂರು ಗೋಪಾಲಕೃಷ್ಣ ಕಿಡಿಕಾರಿದರು. ಇಂದು ಕಾರ್ಗಲ್ ಪೊಲೀಸ್ ಠಾಣೆಗೆ ನೂತನ ಬೊಲೆರೋ ವಾಹನವನ್ನು ಸಾಗರದ ಡಿವೈಎಸ್ಪಿ ಕಚೇರಿಯ ಬಳಿಯಲ್ಲಿ ಹಸ್ತಾಂತರಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಸಾಗರ ತಾಲ್ಲೂಕಿನ ಪೊಲೀಸ್ ಠಾಣೆಗಳ ಕೆಲವು ಜೀಪುಗಳು ಹಾಳಾಗಿದ್ದವು. ಈ ಬಗ್ಗೆ ನನ್ನ ಗಮನಕ್ಕೆ ತರಲಾಗಿತ್ತು. 170 ಕಿಲೋ ಮೀಟರ್ ವ್ಯಾಪ್ತಿಯನ್ನು ಹೊಂದಿರುವಂತ ಕಾರ್ಗಲ್ ಪೊಲೀಸ್ ಠಾಣೆಗೆ ಕರ್ತವ್ಯ ನಿರ್ವಹಣೆಗೆ ವಾಹನ ಅಗತ್ಯವಿದ್ದದ್ದು ಗಮನಕ್ಕೆ ಬಂದಿತ್ತು. ಈಗ ಹೊಸ ಕಾರನ್ನು ನೀಡಲಾಗಿದೆ ಎಂದರು. ಕಾರ್ಗಲ್ ಠಾಣೆಗೆ ಹೊಸ ಬೊಲೆರೋ ಕಾರನ್ನು ಹಸ್ತಾಂತರಿಸಲಾಗಿದೆ. ಪೊಲೀಸರು ಮತ್ತಷ್ಟು ಉತ್ತಮ ರೀತಿಯಲ್ಲಿ ಕರ್ತವ್ಯ ನಿರ್ವಹಿಸುವಂತ ಕೆಲಸ ಮಾಡಲಾಗಿದೆ. ಅವರ ಸಮಸ್ಯೆ ನಿವಾರಿಸಲು ನಿಮ್ಮೊಂದಿಗೆ ನಾನಿರುವುದಾಗಿ ಶಾಸಕರು…

Read More

ಮಧ್ಯಪ್ರದೇಶ: ಇಲ್ಲಿನ ಉಜ್ಜಯಿನಿ ಪಟ್ಟಣದ ಪ್ರಸಿದ್ಧ ಮಹಾಕಾಲ್ ದೇವಾಲಯದ ಗಡಿ ಗೋಡೆ ಶುಕ್ರವಾರ ಈ ಪ್ರದೇಶದಲ್ಲಿ ನಿರಂತರ ಭಾರಿ ಮಳೆಯಿಂದಾಗಿ ಕುಸಿದಿದೆ. ಮಧ್ಯಾಹ್ನ ಈ ಘಟನೆ ನಡೆದಿದ್ದು, ಅವಶೇಷಗಳ ಅಡಿಯಲ್ಲಿ ಅನೇಕ ಜನರು ಸಿಕ್ಕಿಬಿದ್ದಿದ್ದಾರೆ ಎಂದು ಶಂಕಿಸಲಾಗಿದೆ.  ಭಾರೀ ಮಳೆಯಿಂದಾಗಿ ಉಜ್ಜೈನಿಯ ಮಹಾಕಾಲೇಶ್ವರ ದೇವಾಲಯದ ಗಡಿ ಗೋಡೆ ಕುಸಿದು ಕನಿಷ್ಠ ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು ನಾಲ್ವರು ಗಾಯಗೊಂಡಿದ್ದಾರೆ. ಹಲವಾರು ಜನರು ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಶಂಕೆ ಇದ್ದು, ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಗಿದೆ. ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ ಕಮಲ್ ನಾಥ್ ಅವರು ಘಟನೆಯ ಬಗ್ಗೆ ದುಃಖ ವ್ಯಕ್ತಪಡಿಸಿದ್ದು, “ಉಜ್ಜಯಿನಿಯ ಮಹಾಕಾಲ್ ದೇವಾಲಯದ ಗೇಟ್ ಸಂಖ್ಯೆ 4 ರ ಬಳಿ ಗೋಡೆ ಕುಸಿದು ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು ನಾಲ್ವರು ಗಾಯಗೊಂಡಿದ್ದಾರೆ ಎಂಬ ದುಃಖದ ಸುದ್ದಿ ಬಂದಿದೆ. ಅಗಲಿದ ಆತ್ಮಗಳಿಗೆ ದೇವರು ಅವರ ಕಮಲದ ಪಾದಗಳಲ್ಲಿ ಸ್ಥಾನವನ್ನು ನೀಡಲಿ. ಗಾಯಾಳುಗಳು ಶೀಘ್ರ ಗುಣಮುಖರಾಗಲಿ ಎಂದು ಹಾರೈಸುತ್ತೇನೆ” ಎಂದು ಟ್ವೀಟ್ ಮಾಡಿದ್ದಾರೆ. https://twitter.com/PTI_News/status/1839682722798641454 ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ. ಈ…

Read More

ಬೆಂಗಳೂರು: ಭಾರತ್ ಮಾತಾ ಕಿ ಜೈ ಎಂದು ಘೋಷಣೆ ಕೂಗುವುದು ದ್ವೇಷದ ಭಾಷಣವಲ್ಲ ಮತ್ತು ಯಾವುದೇ ರೀತಿಯಲ್ಲಿ ಧರ್ಮಗಳ ನಡುವೆ ಅಸಂಗತತೆ ಅಥವಾ ದ್ವೇಷವನ್ನು ಉತ್ತೇಜಿಸುತ್ತದೆ ಎಂದು ಪರಿಗಣಿಸಲಾಗುವುದಿಲ್ಲ ಎಂದು ಕರ್ನಾಟಕ ಹೈಕೋರ್ಟ್ ಇತ್ತೀಚೆಗೆ ಭಾರತೀಯ ದಂಡ ಸಂಹಿತೆಯ (ಐಪಿಸಿ) ಸೆಕ್ಷನ್ 153 ಎ ಅಡಿಯಲ್ಲಿ ಐವರ ವಿರುದ್ಧ ದಾಖಲಾದ ಪ್ರಥಮ ಮಾಹಿತಿ ವರದಿಯನ್ನು (ಎಫ್ಐಆರ್) ರದ್ದುಗೊಳಿಸಿದೆ. ವಿವಿಧ ಗುಂಪುಗಳ ನಡುವೆ ದ್ವೇಷವನ್ನು ಉತ್ತೇಜಿಸಿದ ಮತ್ತು ಸಾಮರಸ್ಯವನ್ನು ಕಾಪಾಡಿಕೊಳ್ಳಲು ಪೂರ್ವಾಗ್ರಹ ಪೀಡಿತ ಕೃತ್ಯಗಳಲ್ಲಿ ತೊಡಗಿರುವ ಆರೋಪದ ಮೇಲೆ ದಾಖಲಾದ ಐವರು ಆರೋಪಿಗಳಿಗೆ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರು ಪರಿಹಾರ ನೀಡಿದರು. ಮೇಲೆ ವಿವರಿಸಿದ ಸಂಗತಿಗಳು ಮತ್ತು ತೀರ್ಪುಗಳ ಬೆಳಕಿನಲ್ಲಿ, ಪ್ರಕರಣದ ತನಿಖೆಯನ್ನು ಸಹ ಅನುಮತಿಸುವುದು ಮೇಲ್ನೋಟಕ್ಕೆ ಭಾರತ್ ಮಾತಾ ಕಿ ಜೈ ಘೋಷಣೆಗಳ ಬಗ್ಗೆ ತನಿಖೆಗೆ ಅನುಮತಿಸುತ್ತದೆ, ಇದು ಯಾವುದೇ ಕಲ್ಪನೆಯಿಂದ ಧರ್ಮಗಳ ನಡುವೆ ಅಸಂಗತತೆ ಅಥವಾ ದ್ವೇಷವನ್ನು ಉತ್ತೇಜಿಸುವುದಿಲ್ಲ ಎಂದು ನ್ಯಾಯಾಲಯವು ಎಫ್ಐಆರ್ ಅನ್ನು ರದ್ದುಗೊಳಿಸುವಾಗ ಹೇಳಿದೆ. ಕರ್ನಾಟಕದ ಉಳ್ಳಾಲ ತಾಲ್ಲೂಕಿನ…

Read More

ಬೆಂಗಳೂರು: ದಲಿತರ ಬಗ್ಗೆ ಕಾಳಜಿ ಇದ್ದರೆ ರಾಷ್ಟ್ರ ಮಟ್ಟದಲ್ಲಿ ಎಸ್‌ಸಿಎಸ್‌ಪಿ/ಟಿಎಸ್‌ಪಿ ಕಾಯ್ದೆಯನ್ನು ಜಾರಿಗೆ ತನ್ನಿ ಎಂಬುದಾಗಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಿಎಂ ಸಿದ್ದರಾಮಯ್ಯ ಸವಾಲ್ ಹಾಕಿದ್ದಾರೆ. ಈ ಬಗ್ಗೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವಂತ ಅವರು, ‘ಕರ್ನಾಟಕದಲ್ಲಿ ಪರಿಶಿಷ್ಟರ ನಿಧಿಯಲ್ಲಿ ಹಗರಣವಾಗಿದೆ’’ ಎಂದು ಆರೋಪಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ಅವರೇ, ದಲಿತರ ಬಗ್ಗೆ ಅಷ್ಟೊಂದು ಕಾಳಜಿ ನಿಮಗಿದ್ದರೆ ನಮ್ಮಲ್ಲಿರುವಂತೆ ರಾಷ್ಟ್ರಮಟ್ಟದಲ್ಲಿ ಪರಿಶಿಷ್ಟ ಜಾತಿ ಉಪಯೋಜನೆ ಮತ್ತು ಪರಿಶಿಷ್ಟ ಪಂಗಡ ಉಪಯೋಜನೆ (ಎಸ್ ಸಿಎಸ್‌ಪಿ/ಟಿಎಸ್ ಪಿ) ಕಾಯ್ದೆಯನ್ನು ಜಾರಿಗೆ ತಂದು, ದಲಿತರ ಜನಸಂಖ್ಯೆಗೆ ಅನುಗುಣವಾಗಿ ಅನುದಾನವನ್ನು ಮೀಸಲಿಡಿ, ಅದರ ನಂತರ ನಮ್ಮ ದಲಿತ ಕಾಳಜಿಯನ್ನು ಪ್ರಶ್ನಿಸಿ ಎಂದಿದ್ದಾರೆ. ಎಸ್‌ಸಿಎಸ್‌ಪಿ/ಟಿಎಸ್‌ಪಿ ಕಾಯ್ದೆಯನ್ನು ರಾಷ್ಟ್ರಮಟ್ಟದಲ್ಲಿ ಜಾರಿಗೆ ತರಬೇಕೆಂದು ಕಳೆದ ಹತ್ತು ವರ್ಷಗಳಿಂದ ನಾವು ಕೇಂದ್ರ ಸರ್ಕಾರವನ್ನು ಒತ್ತಾಯಿಸುತ್ತಿದ್ದರೂ ಒಪ್ಪಿಕೊಳ್ಳದ ನರೇಂದ್ರ ಮೋದಿಯವರು ಈಗ ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ದಲಿತರಿಗೆ ಅನ್ಯಾಯ ಮಾಡುತ್ತಿದೆ ಎಂದು ಚುನಾವಣಾ ಪ್ರಚಾರ ಸಭೆಗಳಲ್ಲಿ ಕಣ್ಣೀರು ಹಾಕುತ್ತಿರುವುದು ಹಾಸ್ಯಾಸ್ಪದವಾಗಿದೆ ಎಂದು ಹೇಳಿದ್ದಾರೆ. ಪ್ರಸಕ್ತ…

Read More

ನವದೆಹಲಿ: ಜೊಮಾಟೊ ಸಹ-ಸಂಸ್ಥಾಪಕ ಮತ್ತು ಮುಖ್ಯ ಜನ ಅಧಿಕಾರಿ ಆಕೃತಿ ಚೋಪ್ರಾ ಅವರು ಆಹಾರ ವಿತರಣಾ ಮೇಜರ್ನಲ್ಲಿ 13 ವರ್ಷಗಳ ಸುದೀರ್ಘ ಅಧಿಕಾರಾವಧಿಯ ನಂತರ ತಕ್ಷಣದಿಂದ ಜಾರಿಗೆ ಬರುವಂತೆ ರಾಜೀನಾಮೆ ನೀಡಿದ್ದಾರೆ ಎಂದು ಕಂಪನಿ ಸೆಪ್ಟೆಂಬರ್ 27 ರಂದು ಷೇರು ವಿನಿಮಯ ಕೇಂದ್ರಕ್ಕೆ ತಿಳಿಸಿದೆ. ದೀಪಿ, ಚರ್ಚಿಸಿದಂತೆ, ಇಂದು, ಸೆಪ್ಟೆಂಬರ್ 27, 2024 ರಿಂದ ಜಾರಿಗೆ ಬರುವಂತೆ ನನ್ನ ರಾಜೀನಾಮೆಯನ್ನು ಔಪಚಾರಿಕವಾಗಿ ಕಳುಹಿಸುತ್ತಿದ್ದೇನೆ. ಕಳೆದ 13 ವರ್ಷಗಳಲ್ಲಿ ಇದು ನಂಬಲಾಗದಷ್ಟು ಸಮೃದ್ಧ ಪ್ರಯಾಣವಾಗಿದೆ. ಎಲ್ಲದಕ್ಕೂ ಧನ್ಯವಾದಗಳು. ನಾನು ಯಾವಾಗಲೂ ಒಂದು ಕರೆ ದೂರದಲ್ಲಿರುತ್ತೇನೆ. ನಿಮಗೆ ಮತ್ತು ಎಟರ್ನಲ್ಗೆ ಶುಭ ಹಾರೈಸುತ್ತೇನೆ” ಎಂದು ಚೋಪ್ರಾ ಸ್ಟಾಕ್ ಎಕ್ಸ್ಚೇಂಜ್ನಲ್ಲಿ ಅಪ್ಲೋಡ್ ಮಾಡಿದ ನಿರ್ಗಮನ ಮೇಲ್ನಲ್ಲಿ ಬರೆದಿದ್ದಾರೆ. https://kannadanewsnow.com/kannada/breaking-after-cm-siddaramaiah-now-files-complaint-with-lokayukta-against-kharge-and-family/ https://kannadanewsnow.com/kannada/big-shock-to-the-people-of-the-state-cooking-oil-prices-hiked-by-20-in-10-days/

Read More