Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ರಾಜ್ಯ ಸರ್ಕಾರದಿಂದ ಈಗಾಗಲೇ ಸ್ಥಳೀಯ ಸಂಸ್ಥೆಗಳಿಗೆ ಮೀಸಲಾತಿಯನ್ನು ಘೋಷಣೆ ಮಾಡಿ, ಚುನಾವಣೆಯ ಮುನ್ಸೂಚನೆ ನೀಡಿತ್ತು. ಈ ಬೆನ್ನಲ್ಲೇ ರಾಜ್ಯದ ಚುನಾವಣಾ ಆಯೋಗದ ಚುನಾವಣಾ ಆಯುಕ್ತರು ತಾಲ್ಲೂಕು, ಜಿಲ್ಲಾ ಪಂಚಾಯ್ತಿ ಚುನಾವಣೆ ಬಗ್ಗೆ ಮಹತ್ವದ ಅಪ್ ಡೇಟ್ ನೀಡಿದ್ದಾರೆ. ಅದು ಏನು ಅಂತ ಮುಂದೆ ಓದಿ. ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದಂತ ಕರ್ನಾಟಕ ರಾಜ್ಯ ಚುನಾವಣಾ ಆಯೋಗದ ನೂತನ ಆಯುಕ್ತ ಜಿ.ಎಂಸ್ ಸಂಗ್ರೇಶಿ ಅವರು, ಕಳೆದ ನಾಲ್ಕು ವರ್ಷಗಳಿಂದ ಅವಧಿ ಮುಗಿದರೂ ತಾಲ್ಲೂಕು, ಜಿಲ್ಲಾ ಪಂಚಾಯ್ತಿ ಹಾಗೂ ಬಿಬಿಎಂಪಿ ಚುನಾವಣೆ ನಡೆಸಿಲ್ಲ. ಈ ಸಂಬಂಧ ಸರ್ಕಾರದ ವಿರುದ್ಧ ನ್ಯಾಯಾಂಗ ಉಲ್ಲಂಘನೆ ಕೇಸ್ ದಾಖಲಿಸಲಾಗಿದೆ ಎಂದರು. ಚುನಾವಣಾ ಆಯೋಗದಿಂದ ಸುಪ್ರೀಂ ಕೋರ್ಟ್ ನಲ್ಲಿ ಸಲ್ಲಿಕೆಯಾಗಿರುವಂತ ಅರ್ಜಿಯಲ್ಲಿ 2 ಚುನಾವಣೆಗೆ ಸಂಬಂಧಿಸಿದಂತೆ ವಿಚಾರಣೆಯು ಬಾಕಿ ಇದೆ. ಆ ಎರಡು ಚುನಾವಣಾ ಅರ್ಜಿಯ ವಿಚಾರಣೆ ಪೂರ್ಣಗೊಂಡ ನಂತ್ರ, ತಕ್ಷಣವೇ ಚುನಾವಣೆಗೆ ದಿನಾಂಕ ಘೋಷಿಸುವುದಾಗಿ ತಿಳಿಸಿದರು. ನಿಯಮಾವಳಿಗಳ ಪ್ರಕಾರ ಅವಧಿ ಮುಗಿದಂತ 6 ತಿಂಗಳ ಒಳಗಾಗಿ ಚುನಾವಣೆಗೆ…
ಬೆಂಗಳೂರು: ಆಗಸ್ಟ್.25ರಂದು ನಡೆಯಬೇಕಿದ್ದಂತ ಕೆಎಎಸ್ ಪೂರ್ವಭಾವಿ ಪರೀಕ್ಷೆಯನ್ನು ಅಂದೇ ಇತರೆ ಪರೀಕ್ಷೆಗಳು ಇದ್ದ ಕಾರಣ ಮುಂದೂಡಿಕೆ ಮಾಡಲಾಗಿತ್ತು. ಈಗ ಕೆಪಿಎಸ್ಸಿಯಿಂದ ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳ ಪೂರ್ವಭಾವಿ ಪರೀಕ್ಷೆಯನ್ನು ಆಗಸ್ಟ್.27ಕ್ಕೆ ಮರುನಿಗದಿ ಪಡಿಸಿ ಆದೇಶಿಸಿದೆ. ಈ ಕುರಿತಂತೆ ಕರ್ನಾಟಕ ಲೋಕಸೇವಾ ಆಯೋಗವು ( Karnataka Public Service Commission-KPSC ) ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಆಯೋಗವು 2023-24ನೇ ಸಾಲಿನ ಗೆಜೆಟೆಡ್ ಪ್ರೊಬೇಷನರ್ ( Gazetted Probationer ) ಗ್ರೂಪ್ ‘ಎ’ ಮತ್ತು ‘ಬಿ’ ವೃಂದದ ಒಟ್ಟು 384 ಹುದ್ದೆಗಳ ನೇಮಕಾತಿಯ ( KAS Recruitment ) ಪೂರ್ವಭಾವಿ ಪರೀಕ್ಷೆಯನ್ನು ದಿನಾಂಕ:25-08-2024ರಂದು ನಡೆಸಲು ನಿಗದಿಪಡಿಸಲಾಗಿತ್ತು ಎಂದು ತಿಳಿಸಿದೆ. ಈ ದಿನದಂದು ಐ.ಬಿ.ಪಿ.ಎಸ್. ಪರೀಕ್ಷೆ ನಿಗದಿಯಾಗಿರುವ ಹಿನ್ನೆಲೆಯಲ್ಲಿ, ಮುಖ್ಯಮಂತ್ರಿ ಅವರೊಂದಿಗೆ ಸಮಾಲೋಚಿಸಲಾಗಿ ಸದರಿ ಪೂರ್ವಭಾವಿ ಪರೀಕ್ಷೆಗೆ ಆಯೋಗವು ಎಲ್ಲಾ ಪರೀಕ್ಷಾ ಪೂರ್ವಸಿದ್ಧತೆಗಳನ್ನು ಮಾಡಿಕೊಂಡಿರುವ ಹಿನ್ನೆಲೆಯಲ್ಲಿ ಹೆಚ್ಚಿನ ಕಾಲಾವಕಾಶ ನೀಡದೆ. ಬೇರೆ ಪರೀಕ್ಷೆಗಳೊಂದಿಗೆ Overlap ಆಗದಂತೆ ಅಲ್ಪಕಾಲ ಮುಂದೂಡಲು ನಿರ್ಧರಿಸಲಾಗಿರುತ್ತದೆ ಎಂದು ಹೇಳಿದೆ. ಈ ಹಿನ್ನೆಲೆಯಲ್ಲಿ…
ಬೆಂಗಳೂರು: ರೈಲ್ವೆ ಪ್ರಯಾಣಿಕರಿಗೆ ಗುಡ್ ನ್ಯೂಸ್ ಎನ್ನುವಂತೆ ಗುಡ್ಡ ಕುಸಿತದಿಂದ ಸ್ಥಗಿತಗೊಂಡಿದ್ದಂತ ಬೆಂಗಳೂರು ಟು ಮಂಗಳೂರು ನಡುವಿನ ರೈಲು ಸಂಚಾರವನ್ನು ಪುನರಾರಂಭಿಸಲಾಗಿದೆ. ಈ ಕುರಿತಂತೆ ನೈರುತ್ಯ ರೈಲ್ವೆಯಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ನಿರಂತರ ಮತ್ತು ಭಾರಿ ಮಳೆಯ ಹೊರತಾಗಿಯೂ, ಸಕಲೇಶಪುರ ಮತ್ತು ಸುಬ್ರಹ್ಮಣ್ಯ ರಸ್ತೆ ವಿಭಾಗದ ಕಡಗರವಳ್ಳಿ ಮತ್ತು ಯಡಕುಮರಿ ನಿಲ್ದಾಣಗಳ ನಡುವಿನ ಹಳಿಯ ಪುನಃಸ್ಥಾಪನೆ ಯಶಸ್ವಿಯಾಗಿ ಪೂರ್ಣಗೊಂಡಿದೆ. ಹವಾಮಾನವು ಗಮನಾರ್ಹ ಸವಾಲುಗಳನ್ನು ಪ್ರಸ್ತುತಪಡಿಸಿತು. ಮಳೆ ಆಗಾಗ್ಗೆ ಪ್ರಗತಿಗೆ ಅಡ್ಡಿಪಡಿಸುತ್ತದೆ ಮತ್ತು ಕಷ್ಟಕರ ಕೆಲಸದ ಪರಿಸ್ಥಿತಿಗಳನ್ನು ಸೃಷ್ಟಿಸುತ್ತಿದೆ ಎಂದಿದೆ. ಟ್ರ್ಯಾಕ್ ಅನ್ನು ಪುನಃಸ್ಥಾಪಿಸುವುದನ್ನು ಖಚಿತಪಡಿಸಿಕೊಳ್ಳಲು ಸಮರ್ಪಿತ ತಂಡಗಳು ದಣಿವರಿಯದೆ ಕೆಲಸ ಮಾಡಿದವು. 04.08.2024 ರಂದು, 08:58 ಗಂಟೆಗೆ, ಟ್ರ್ಯಾಕ್ ಅಂತಿಮವಾಗಿ ಸರಕು ರೈಲಿಗೆ ಮಾತ್ರ ‘ಸೂಕ್ತ’ ಎಂದು ಪ್ರಮಾಣೀಕರಿಸಲಾಯಿತು. ಈ ಸವಾಲಿನ ಪರಿಸ್ಥಿತಿಗಳಲ್ಲಿ ಟ್ರ್ಯಾಕ್ ನ ಸುರಕ್ಷತೆಯನ್ನು ನಿರ್ಣಯಿಸಲು ಮತ್ತು ದೃಢೀಕರಿಸಲು ಎಂಜಿನ್ ರೋಲಿಂಗ್ ಪರೀಕ್ಷೆಯನ್ನು ನಡೆಸಲಾಯಿತು ಎಂದು ಹೇಳಿದೆ. 06.08.2024 ರಂದು, ಸಂಪೂರ್ಣವಾಗಿ ಲೋಡ್ ಮಾಡಿದ ಸರಕು ರೇಕ್ ಪುನಃಸ್ಥಾಪಿಸಲಾದ…
ನವದೆಹಲಿ: ಸ್ಟಾಫ್ ಸೆಲೆಕ್ಷನ್ ಕಮಿಷನ್ (ಎಸ್ಎಸ್ಸಿ) ಕಂಬೈನ್ಡ್ ಗ್ರಾಜುಯೇಟ್ ಲೆವೆಲ್ (ಸಿಜಿಎಲ್) ಪರೀಕ್ಷೆ 2024 ರ ಅಧಿಕೃತ ಪರೀಕ್ಷಾ ದಿನಾಂಕಗಳನ್ನು sc.gov.in ತನ್ನ ಅಧಿಕೃತ ವೆಬ್ಸೈಟ್ನಲ್ಲಿ ಪ್ರಕಟಿಸಿದೆ. ಅಧಿಸೂಚನೆಯ ಪ್ರಕಾರ, ಎಸ್ಎಸ್ಸಿ ರಾಷ್ಟ್ರವ್ಯಾಪಿ ನೇಮಕಾತಿ ಪರೀಕ್ಷೆಯನ್ನು 17 ದಿನಗಳ ಅವಧಿಯಲ್ಲಿ ನಡೆಸಲಿದೆ, ಇದು ಸೆಪ್ಟೆಂಬರ್ 9, 2024 ರಿಂದ ಪ್ರಾರಂಭವಾಗಿ ಸೆಪ್ಟೆಂಬರ್ 26, 2024 ರಂದು ಕೊನೆಗೊಳ್ಳುತ್ತದೆ. “ಸಂಯೋಜಿತ ಪದವೀಧರ ಮಟ್ಟದ ಪರೀಕ್ಷೆ, 2024 (ಶ್ರೇಣಿ -1) ಅನ್ನು 09-ಸೆಪ್ಟೆಂಬರ್-2024 ರಿಂದ 26-ಸೆಪ್ಟೆಂಬರ್-2024 ರವರೆಗೆ ನಡೆಸಲು ಆಯೋಗ ನಿರ್ಧರಿಸಿದೆ” ಎಂದು ಅಧಿಕೃತ ನೋಟಿಸ್ನಲ್ಲಿ ತಿಳಿಸಲಾಗಿದೆ. ಎಸ್ಎಸ್ಸಿ ಸಿಜಿಎಲ್ 2024 ಶ್ರೇಣಿ 1 ಪರೀಕ್ಷೆಗೆ ಕನಿಷ್ಠ ಅರ್ಹತಾ ಅಂಕಗಳು ಸ್ಟಾಫ್ ಸೆಲೆಕ್ಷನ್ ಕಮಿಷನ್ (ಎಸ್ಎಸ್ಸಿ) ತನ್ನ ಅಧಿಕೃತ ಅಧಿಸೂಚನೆಯಲ್ಲಿ ವಿವರಿಸಿದಂತೆ ಎಸ್ಎಸ್ಸಿ ಸಿಜಿಎಲ್ ಶ್ರೇಣಿ 1 ಪರೀಕ್ಷೆಗೆ ಕನಿಷ್ಠ ಅರ್ಹತಾ ಅಂಕಗಳನ್ನು ಸ್ಥಾಪಿಸಿದೆ. ಸಾಮಾನ್ಯ ವರ್ಗಕ್ಕೆ ಸೇರಿದ ಅಭ್ಯರ್ಥಿಗಳು ಅರ್ಹತೆ ಪಡೆಯಲು ಕನಿಷ್ಠ 30% ಅಂಕಗಳನ್ನು ಗಳಿಸಬೇಕು. ಒಬಿಸಿ (ಇತರ ಹಿಂದುಳಿದ ವರ್ಗಗಳು)…
ಇಂದು ಬೆಳೆಯುತ್ತಿರುವ ಚಂದ್ರ ಪ್ರಕಾಶಮಾನವಾಗಿದೆ. ನಾಲ್ಕನೆಯ ತಿಥಿ ಚತುರ್ಥಿ ತಿಥಿ. ಚತುರ್ಥಿ ತಿಥಿ ಗಣೇಶನಿಗೆ ಮಂಗಳಕರ ಎಂದು ನಮಗೆಲ್ಲರಿಗೂ ತಿಳಿದಿದೆ. ಈ ಮೇಣದ ಚತುರ್ಥಿ ತಿಥಿಯ ಜೊತೆಗೆ ದೂರ್ವ ಅಂದರೆ ಗರಿಕೆ ಗಣೇಶನನ್ನೂ ಇಂದು ಆಚರಿಸಲಾಗುತ್ತದೆ. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ನಕ್ಷತ್ರಿ ತಂತ್ರಿ ನಂ:- 9686268564. ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಇಲ್ಲಿ ಪರಿಹಾರ ಶತಸಿದ್ಧ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ, ಮಕ್ಕಳು ಹೇಳಿದ ಮಾತು ಕೇಳದಿದ್ದರೆ, ವಿದ್ಯಾಭ್ಯಾಸದಲ್ಲಿ ಕಿರಿಕಿರಿ, ಆರೋಗ್ಯ ಸಮಸ್ಯೆ, ಆಸ್ತಿಯಲ್ಲಿ ಕಿರಿಕಿರಿ, ಮಾಟ ಮಂತ್ರ, ಶತ್ರು ನಾಶ, ಶತ್ರು ವಶೀಕರಣ,ಭಾನಮತಿ ಕೃತಿಮ ವಶೀಕರಣ ಇನ್ನೂ ನಿಮ್ಮ ಜೀವನದ ಗುಪ್ತ…
ಮಡಿಕೇರಿ : 2020-21 ರಲ್ಲಿ ಅಥವಾ ನಂತರ ಐ.ಟಿ.ಐ ಉತ್ತೀರ್ಣರಾಗಿರುವ, ತಾಂತ್ರಿಕ ಕೌಶಲ್ಯದ ಕೋರ್ಸ್ನಲ್ಲಿ ಪ್ರಮಾಣ ಪತ್ರ ಹೊಂದಿರುವ 18 ರಿಂದ 23 ವರ್ಷ ವಯೋಮಿತಿಯವರಾಗಿ ದುಬೈ ಶಿಪ್ಯಾರ್ಡ್ನಲ್ಲಿ ತರಬೇತಿ/ ನೇಮಕಾತಿಗೆ ಅವಕಾಶ ಕಲ್ಪಿಸಲಾಗಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಉಚಿತ ತರಬೇತಿ, ಉಚಿತ ವಿಮಾನ ಟಿಕೆಟ್, ಉಚಿತ ವಸತಿ, ಆರೋಗ್ಯ ವಿಮೆ, ವಾರ್ಷಿಕ ರಜೆಗಳು ಹಾಗೂ ಹಿಂದಿರುಗುವ ಪ್ರಯಾಣದ ವಿಮಾನ ಟಿಕೇಟ್ ಸೌಲಭ್ಯಗಳಿವೆ. ಅರ್ಜಿ ಸಲ್ಲಿಸಲು ಆಗಸ್ಟ್, 11 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗೆ ವೆಬ್ಸೈಟ್ ವಿಳಾಸ http://imck.kaushalkar.com/ ಹಾಗೂ ಮೊ.ಸಂ.9483223884 ನ್ನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಹಾಗೂ ಉದ್ಯೋಗಾಧಿಕಾರಿ ರೇಖಾ ಗಣಪತಿ ಅವರು ತಿಳಿಸಿದ್ದಾರೆ. https://kannadanewsnow.com/kannada/udyog-mela-to-be-held-in-mysuru-on-aug-10/ https://kannadanewsnow.com/kannada/good-day-moment-see-map-kumaraswamys-brothers-property-documents-released-dk-shivakumar/ https://kannadanewsnow.com/kannada/ask-rtos-to-check-dl-of-lorry-drivers-in-bengaluru-ramesh-babu-writes-to-cm/
ಶಿವಮೊಗ್ಗ : ಸಮರ್ಥನಂ ಅಂಗವಿಕಲ ಸಂಸ್ಥೆಯವರು ಜೆಎಸ್ಎಸ್ ಪಾಲಿಟೆಕ್ನಿಕ್ ಫಾರ್ ದಿ ಡಿಫರೆಂಟ್ಲಿ ಏಬಲ್ಡ್ ಜೆಎಸ್ಎಸ್ ಇನ್ಸ್ ಸ್ಟಿಟ್ಯೂಷನ್ಸ್ ಕ್ಯಾಂಪಸ್, ಮಾನಸ ಗಂಗೋತ್ರಿ ಮೈಸೂರು ಇಲ್ಲಿ ಆ .10 ರಂದು ಬೆಳಗ್ಗೆ 9.00 ಕ್ಕೆ ವಿಕಲಚೇತನರ ಉದ್ಯೋಗ ಮೇಳವನ್ನು ಆಯೋಜಿಸಿದೆ. ಈ ಉದ್ಯೋಗ ಮೇಳದಲ್ಲಿ ಭಾಗವಹಿಸಲು ಇಚ್ಛಿಸುವವರು ಹೆಚ್ಚಿನ ಮಾಹಿತಿಗಾಗಿ ಸಮರ್ಥನಂ ಸಂಸ್ಥೆಯ ಸಿಬ್ಬಂದಿಗಳಾದ ವೀರಭದ್ರಪ್ಪ ಪಾಟೀಲ್ ಮೊ.ನಂ.: 9480812121 ಹಾಗೂ ಸುಭಾಷ್ ಮೊ.ನಂ.: 9449864693 ಗಳನ್ನು ಅಥವಾ ಇ-ಮೇಲ್ placements@samarthanam.org, centerhead Bangalore@ samarthanam.org ಗಳನ್ನು ಸಂಪರ್ಕಿಸಬಹುದೆಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ಪ್ರಶಸ್ತಿಗೆ ಅರ್ಜಿ ಆಹ್ವಾನ ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆ ವತಿಯಿಂದ ಅಕ್ಟೋಬರ್ 1 ರಂದು ವಿಶ್ವ ಹಿರಿಯ ನಾಗರೀಕರ ದಿನಾಚರಣೆಯನ್ನು ರಾಜ್ಯ ಮಟ್ಟದಲ್ಲಿ ಆಚರಿಸುವ ಸಂದರ್ಭದಲ್ಲಿ ವಿವಿಧ ಕ್ಷೇತ್ರದಲ್ಲಿ ಉತ್ತಮ ಕಾರ್ಯ ನಿರ್ವಹಿಸಿದ ವ್ಯಕ್ತಿಗಳು ಮತ್ತು ಸಂಸ್ಥೆಗೆ ಪ್ರಶಸ್ತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ. ಶಿಕ್ಷಣ, ಸಾಹಿತ್ಯ,ಕಲೆ, ಕಾನೂನು, ಪ್ರತಿಭೆ/ಕ್ರೀಡೆ ಮತ್ತು ಹಿರಿಯ…
ಶಿವಮೊಗ್ಗ: ಜಿಲ್ಲೆಯಲ್ಲಿ ಕೆಲ ವಿದ್ಯುತ್ ನಿರ್ವಹಣಾ ಕಾಮಗಾರಿಯನ್ನು ಮೆಸ್ಕಾಂ ಅಧಿಕಾರಿಗಳು ಕೈಗೊಳ್ಳುತ್ತಿರುವುದರಿಂದ ಆ.9, 10 ಮತ್ತು 11 ರಂದು ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಶಿವಮೊಗ್ಗದ ಆಲ್ಕೋಳ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಫೀಡರ್ ಎ.ಎಫ್ -03 ರಲ್ಲಿ ತುರ್ತು ನಿರ್ವಹಣಾ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಆ.10 ರಂದು ಬೆಳಗ್ಗೆ 9.00 ರಿಂದ ಸಂಜೆ 05:30 ರ ವರೆಗೆ ಎಸ್.ವಿ.ಬಡಾವಣೆ, ಎ, ಬಿ ಮತ್ತು ಎಫ್ ಬ್ಲಾಕ್, ಗುಡ್ಲಕ್ ಸರ್ಕಲ್, ಅಮ್ಮ ನಿಲಯ, ಸ್ನೇಹ ಅಪಾರ್ಟ್ಮೆಂಟ್ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ. ಆ.9 ರಿಂದ 11ರವರೆಗೆ ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಶಿವಮೊಗ್ಗ ಹೊಳಲೂರು 66/11 ಕೆ.ವಿ. ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ವಿದ್ಯುತ್ ಮಾರ್ಗಗಳ ಲಿಂಕ್ಲೈನ್ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಆಗಸ್ಟ್.9ರಿಂದ 11ರವರೆಗೆ 3 ದಿನಗಳ ಕಾಲ ಬೆಳಗ್ಗೆ 10.00 ರಿಂದ ಸಂಜೆ 6.00ರವರೆಗೆ ಹಾಡೋನಹಳ್ಳಿ, ಹಳೆ/ಹೊಸ ಮಡಿಕೆಚೀಲೂರು, ಬಿ.ಕೆ.ತಾವರೆ ಗ್ರಾಮಗಳ ವ್ಯಾಪ್ತಿಯಲ್ಲಿ ಬರುವ ಸುತ್ತಮುತ್ತಲಿನ ಗ್ರಾಮಗಳಲ್ಲಿ…
ಬೆಂಗಳೂರು; ನಗರದಲ್ಲಿ ದಿನೇ ದಿನೇ ಲಾರಿ, ಸರಕು ಸಾಗಾಣಿಕೆ ವಾಹನ, ಬಿಬಿಎಂಪಿಯ ಕಸದ ಲಾರಿಗೆ ಜನರು ಬಲಿಯಾಗುತ್ತಿರುವ ಸಂಖ್ಯೆ ಹೆಚ್ಚಾಗಿದೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಅಂತಹ ವಾಹನಗಳ ಚಾಲಕರ ಚಾಲನಾ ಪರವಾನಗಿ(ಡಿಎಲ್) ಅನ್ನು ಕಡ್ಡಾಯವಾಗಿ ಪರಿಶೀಲಿಸುವಂತೆ ಆರ್ ಟಿ ಓಗಳಿಗೆ ಸೂಚಿಸುವಂತೆ ಮಾಜಿ ಪರಿಷತ್ ಸದಸ್ಯ ರಮೇಶ್ ಬಾಬು ಸಿಎಂಗೆ ಪತ್ರದಲ್ಲಿ ಮನವಿ ಮಾಡಿದ್ದಾರೆ. ಈ ಕುರಿತಂತೆ ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಪತ್ರವನ್ನು ಬರೆದಿರುವಂತ ಅವರು, 07-08-2024 ರಂದು ಬೆಂಗಳೂರಿನ ಡಾಬಸ್ ಪೇಟೆಯ ಬಳಿ ನಡೆದ ರಸ್ತೆ ಅಪಘಾತದಲ್ಲಿ ಗರ್ಭಿಣಿ ಮಹಿಳೆ ಮತ್ತು ಗರ್ಭದೊಳಗೆ ಇದ್ದ ಮಗು ಮೃತ ಪಟ್ಟಿದ್ದು, ಟಿಪ್ಪರ್ ಲಾರಿಯ ಚಾಲಕ ಪರಾರಿಯಾಗಿರುತ್ತಾನೆ. ಒಂದು ವಾರದ ಹಿಂದೆ ಬೆಂಗಳೂರಿನ ಕೆ.ಆರ್ ಸರ್ಕಲ್ ಬಳಿ ನಡೆದ ರಸ್ತೆ ಅಪಘಾತದಲ್ಲಿ ಇಬ್ಬರು ಇಂಜಿನಿಯರ್ ಗಳು ಮೃತ ಪಟ್ಟಿದ್ದು, ಬಿಬಿಎಂಪಿ ಕಸದ ಲಾರಿ ಚಾಲಕ ಪರಾರಿಯಾಗಿರುತ್ತಾನೆ. ಇತ್ತೀಚಿಗೆ ಬಿಬಿಎಂಪಿ ವ್ಯಾಪ್ತಿಯಲ್ಲಿ ನಡೆಯುತ್ತಿರುವ ರಸ್ತೆ ಅಪಘಾತಗಳಲ್ಲಿ ಬಹುತೇಕ ಲಾರಿ ಚಾಲಕರ ಚಾಲನಾ ಪರವಾನಿಗಿ…
ಬೆಂಗಳೂರು: ಮೈಸೂರಿನಲ್ಲಿ ಇದೇ 10ರಂದು ನಡೆಯುವ ಬೃಹತ್ ಸಮಾವೇಶ, ಜನಾಕ್ರೋಶ ಸಭೆಯಲ್ಲಿ ಬೆಂಬಲಕ್ಕೆ ನಿಲ್ಲುವುದಾಗಿ ಹಾಗೂ ಪಾಲ್ಗೊಳ್ಳುವುದಾಗಿ ಪರಿಶಿಷ್ಟ ಸಮುದಾಯಗಳ ಮುಖಂಡರು ಭರವಸೆ ಕೊಟ್ಟಿದ್ದಾರೆ ಎಂದು ವಿಧಾನಪರಿಷತ್ತಿನ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ತಿಳಿಸಿದರು. ಮಂಡ್ಯ ಜಿಲ್ಲೆಯ ಗಾಣಗನೂರಿನಲ್ಲಿ ಇಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರ ಉಪಸ್ಥಿತಿಯಲ್ಲಿ ನಡೆದ ಪರಿಶಿಷ್ಟ ಜಾತಿ, ಪಂಗಡಗಳ ಮುಖಂಡರ ಸಭೆಯ ಬಳಿಕ ಅವರು ಸಭೆಯ ಕುರಿತು ಮಾಧ್ಯಮ ಪ್ರತಿನಿಧಿಗಳಿಗೆ ವಿವರ ನೀಡಿದರು. ನಮ್ಮ ಹೋರಾಟ ಇಲ್ಲಿಗೇ ನಿಲ್ಲದು. ಇಡೀ ರಾಜ್ಯದಲ್ಲಿ ಹೋರಾಟ ಮುಂದುವರೆಯಲಿದೆ. ಆ ಹೋರಾಟಕ್ಕೆ ಎಲ್ಲ ದಲಿತ ಸಂಘಟನೆಗಳು, ದಲಿತ ಮುಖಂಡರು ಬೆಂಬಲ ಸೂಚಿಸಿದ್ದಾರೆ ಎಂದು ಹೇಳಿದರು. ಕಾಂಗ್ರೆಸ್ ಪಕ್ಷ ಮಾಡಿದ ದ್ರೋಹಕ್ಕೆ ಪ್ರತಿಯಾಗಿ ದಲಿತರು ತಮ್ಮನ್ನು ಬಿಜೆಪಿ ಹೋರಾಟದಲ್ಲಿ ಜೋಡಿಸಿಕೊಳ್ಳಲು ಸಿದ್ಧರಾಗಿದ್ದಾರೆ ಎಂದು ಹೇಳಿದರು. ವಾಲ್ಮೀಕಿ ನಿಗಮದ 187 ಕೋಟಿಯ ಹಗರಣ, ಮೂಡ ಹಗರಣ ಮತ್ತು ಎಸ್ಸಿ, ಎಸ್ಟಿಗಳಿಗೆ ಮೀಸಲಿಟ್ಟ ಹಣವನ್ನು ಅನ್ಯ ಉದ್ದೇಶಕ್ಕೆ ಬಳಸಿದ ಪ್ರಕರಣಗಳಲ್ಲಿ ನ್ಯಾಯ ದೊರಕಿಸಿಕೊಡುವ…