Subscribe to Updates
Get the latest creative news from FooBar about art, design and business.
Author: kannadanewsnow09
ಕೆಎನ್ಎನ್ ಸ್ಪೋರ್ಟ್ಸ್ ಡೆಸ್ಕ್: ಭಾರತ vs ಇಂಗ್ಲೆಂಡ್ 2ನೇ ಟೆಸ್ಟ್ ನಿಂದ ಜಸ್ಪ್ರೀತ್ ಬುಮ್ರಾ ಹೊರಬಿದ್ದಿದ್ದಾರೆ. ಎಡ್ಜ್ಬಾಸ್ಟನ್ಗೆ ಮುನ್ನ ಭಾರತ ತಂಡ ಉತ್ತರಕ್ಕಾಗಿ ಪರದಾಡುತ್ತಿದೆ. ಭಾರತದ ವೇಗದ ಬೌಲರ್ ಮತ್ತು ಈ ಸರಣಿಯಲ್ಲಿ ಅವರ ಅತ್ಯಂತ ಅಮೂಲ್ಯ ಆಟಗಾರ ಜಸ್ಪ್ರೀತ್ ಬುಮ್ರಾ, ಎಡ್ಜ್ಬಾಸ್ಟನ್ನಲ್ಲಿ ಇಂಗ್ಲೆಂಡ್ ವಿರುದ್ಧದ ಎರಡನೇ ಟೆಸ್ಟ್ ಪಂದ್ಯವನ್ನು ತಪ್ಪಿಸಿಕೊಳ್ಳಲಿದ್ದಾರೆ ಎಂದು ವರದಿಯಾಗಿದೆ. theindianexpree.com ವರದಿಯ ಪ್ರಕಾರ, ಜುಲೈ 10 ರಂದು ಲಾರ್ಡ್ಸ್ನಲ್ಲಿ ನಡೆಯಲಿರುವ ಮೂರನೇ ಟೆಸ್ಟ್ ಪಂದ್ಯಕ್ಕೆ ಬುಮ್ರಾ ಮರಳುವ ನಿರೀಕ್ಷೆಯಿದೆ. ಗೆಲ್ಲಲೇಬೇಕಾಗಿದ್ದ ಹೆಡಿಂಗ್ಲಿ ಟೆಸ್ಟ್ನಲ್ಲಿ ಸೋತ ನಂತರ, ಮುಂದಿನ ಪಂದ್ಯದಲ್ಲಿ ಭಾರತ ತಂಡಕ್ಕೆ ಎಂವಿಪಿ ಇಲ್ಲದಿರುವ ಸಾಧ್ಯತೆ ಇದೆ. ಲಾರ್ಡ್ಸ್ನಲ್ಲಿ ಕೆಲಸದ ಹೊರೆ ಅಥವಾ ಕೆಲಸದ ಹೊರೆ ನಿರ್ವಹಣೆಯ ಸಮಸ್ಯೆ ಇರಬಹುದು; ಹೆಡಿಂಗ್ಲಿಯಲ್ಲಿ 44 ಓವರ್ಗಳನ್ನು ಬೌಲಿಂಗ್ ಮಾಡಿದ ಜಸ್ಪ್ರೀತ್ ಬುಮ್ರಾ, ಎಡ್ಜ್ಬಾಸ್ಟನ್ನಲ್ಲಿ ನಡೆಯಲಿರುವ ಎರಡನೇ ಟೆಸ್ಟ್ಗೆ ಹೊರಗುಳಿಯುವ ಸಾಧ್ಯತೆ ಹೆಚ್ಚಿದೆ. ಜುಲೈ 10 ರಂದು ಲಂಡನ್ನಲ್ಲಿ ನಡೆಯಲಿರುವ ಮೂರನೇ ಟೆಸ್ಟ್ಗೆ ಅವರು ಮರಳುವ ನಿರೀಕ್ಷೆಯಿದೆ. ಬರ್ಮಿಂಗ್ಹ್ಯಾಮ್…
ಬೆಂಗಳೂರು: ಕೆಲವೇ ಗೌರವಾನ್ವಿತ ನ್ಯಾಯಾಧೀಶರುಗಳ ವಿಶೇಷ ಆಸಕ್ತಿಯಿಂದ ಕನ್ನಡ ಭಾಷೆ ನ್ಯಾಯಾಲಯ ವ್ಯವಸ್ಥೆಯಲ್ಲಿ ಉಸಿರಾಡುತ್ತಿದ್ದು, ಕಕ್ಷಿದಾರರು, ನ್ಯಾಯವಾದಿಗಳು ಕನ್ನಡದವರೇ ಆಗಿದ್ದರೂ ಸಹ ವಿಚಾರಣೆಗಳು, ತೀರ್ಪುಗಳು ಸಾಮಾನ್ಯವಾಗಿ ಆಂಗ್ಲ ಭಾಷೆಯಲ್ಲಿ ಇರುವುದು ವ್ಯವಸ್ಥೆಯ ಅಣಕವಾಗಿದ್ದು, ರಾಜ್ಯ ಉಚ್ಚ ನ್ಯಾಯಾಲಯವು ಕನ್ನಡದಲ್ಲಿ ವಿಚಾರಣ ವ್ಯವಸ್ಥೆಯನ್ನು ಜಾರಿಯಲ್ಲಿಡುವಲ್ಲಿ ಗಂಭೀರವಾಗಿ ಚಿಂತಿಸಬೇಕಿದೆ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ. ಪುರುಷೋತ್ತಮ ಬಿಳಿಮಲೆ ಹೇಳಿದ್ದಾರೆ. ಈ ಕುರಿತಂತೆ ರಾಜ್ಯ ಉಚ್ಚ ನ್ಯಾಯಾಲಯ ರಿಜಿಸ್ಟ್ರಾರ್ ಜನರಲ್ ಅವರಿಗೆ ಪತ್ರ ಬರೆದಿರುವ ಬಿಳಿಮಲೆ, ಕನ್ನಡದಲ್ಲಿ ನ್ಯಾಯದಾನವನ್ನು ಅಪೇಕ್ಷಿಸುವ ಅಸಂಖ್ಯ ಕನ್ನಡಿಗರ ವೇದನೆಯನ್ನು ಶಮನಗೊಳಿಸಬೇಕಾದಲ್ಲಿ ಮಾನ್ಯ ನ್ಯಾಯಾಲಯವು ಹೆಚ್ಚಿನ ಮುತುವರ್ಜಿಯನ್ನು ಅನುಸರಿಸಬೇಕಾದ ಅವಶ್ಯಕತೆ ಇದೆ. ಕನಿಷ್ಟ ಪಕ್ಷ ಕನ್ನಡದಲ್ಲಿ ಪ್ರಕರಣವನ್ನು ದಾಖಲಿಸಲು ಅನುವು ಮಾಡಿಕೊಟ್ಟಲ್ಲಿ ನ್ಯಾಯಾಲಯ ವ್ಯವಸ್ಥೆಯ ಬಗ್ಗೆ ಜನ ಸಾಮಾನ್ಯರಲ್ಲಿ ಗೌರವ ಹೆಚ್ಚುತ್ತದೆ. ವಿಚಾರಣೆಗಳು, ತೀರ್ಪುಗಳು ಕನ್ನಡ ಭಾಷೆಯಲ್ಲಿ ಬರುವಂತಾದಲ್ಲಿ ನ್ಯಾಯದಾನ ವ್ಯವಸ್ಥೆಯ ಬಗ್ಗೆ ಹೆಚ್ಚಿನ ಭರವಸೆ ಮೂಡುತ್ತದೆ ಎಂದು ತಿಳಿಸಿದ್ದಾರೆ. ಹೊರನಾಡು ಗಡಿನಾಡಿನ ಕನ್ನಡಿಗರ ಪರವಾದ ಆದೇಶಗಳನ್ನು ಸಮರ್ಪಕವಾಗಿ…
ಬೆಂಗಳೂರು: ಏಕಕಾಲದಲ್ಲೇ ರೊಬೋಟ್ ಸಹಾಯದಿಂದ ದಾನಿಗಳಿಂದ ಕಿಡ್ನಿ ಪಡೆದು, ರೋಗಿಗೆ ಕಿಡ್ನಿ ಕಸಿ ಮಾಡುವ TREAT (ಟೋಟಲ್ ರೋಬೋಟ್ ಎನೇಬಲ್ಡ್ ಅಂಡ್ ಅಸ್ಸಿಸ್ಟಡ್ ಟ್ರಾನ್ಸ್ಪ್ಲಾಂಟ್) ಎಂಬ ಅಪರೂಪದ ಟೆಕ್ನಾಲಜಿಯನ್ನು ಬನ್ನೇರುಘಟ್ಟ ರಸ್ತೆಯ ಫೋರ್ಟಿಸ್ ಆಸ್ಪತ್ರೆ ಪರಿಚಯಿಸಿದ್ದು, ದೇಶದಲ್ಲೇ ಮೊದಲ ಪ್ರಯತ್ನ ಇದಾಗಿದೆ. ಈ ಕುರಿತು ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಫೋರ್ಟಿಸ್ ಆಸ್ಪತ್ರೆ ಮೂತ್ರಪಿಂಡ ವಿಜ್ಞಾನದ ಪ್ರಧಾನ ನಿರ್ದೇಶಕ ಡಾ. ಮೋಹನ್ ಕೇಶವಮೂರ್ತಿ, ಟ್ರೀಟ್ ಎಂಬ ನೂತನ ಟೆಕ್ನಾಲಜಿ ಕಿಡ್ನಿ ಕಸಿಯನ್ನು ಅತ್ಯಂತ ಸುಲಭಗೊಳಿಸಿದೆ. ರೋಬೋಟ್-ಸಂಯೋಜಿತ ಮೂತ್ರಪಿಂಡದ ಕಸಿ ನಡೆಸುವ ಈ ಅತ್ಯಾಧುನಿಕ ಉಪಕ್ರಮವು ಏಕಕಾಲದಲ್ಲೇ ದಾನಿ ಮತ್ತು ಸ್ವೀಕರಿಸುವವರಿಗೆ ಎರಡು ರೋಬಾಟ್ ನೆರವಿನಿಂದ ಕಿಡ್ನಿ ತೆಗೆದು , ಕಿಡ್ನಿ ಕಸಿ ಮಾಡುವ ಶಸ್ತ್ರಚಿಕಿತ್ಸೆಯನ್ನು ನಿಖರವಾಗಿ ನಡೆಸಲಿದ್ದು, ಸಂಪೂರ್ಣ ಯಶಸ್ಸು ನೀಡಲಿದೆ. ಈ ವಿನೂತನ ಪ್ರಯತ್ನದಿಂದ ಚೇತರಿಕೆಯ ಸಮಯವೂ ಕಡಿಮೆ ಆಗಲಿದ್ದು, ಶಸ್ತ್ರಚಿಕಿತ್ಸೆ ಅತ್ಯಂತ ನಿಖರವಾಗಿರಲಿದೆ ಎಂದು ಹೇಳಿದರು. ಈ ಟೆಕ್ನಾಲಜಿಯು ದಾನಿಗಳು ಕೂಡ ಶೀಘ್ರವೇ ಚೇತರಿಸಿಕೊಳ್ಳುವಂತೆ ಸಹಾಯಕಾರಿಯಾಗಲಿದೆ. ನಮ್ಮ ದೇಶದಲ್ಲಿ ಮಹಿಳೆಯರೇ…
ನವದೆಹಲಿ: ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತವು ಹೊಸ ಇತಿಹಾಸ ಬರೆದಿದೆ. ಅದೇ ಸ್ಪೇಸ್-ಎಕ್ಸ್ ನ ಫಾಲ್ಕನ್ 9 ರಾಕೆಟ್ ಉಡಾವಣೆ ಯಶಸ್ವಿಯಾಗಿದೆ. ಈ ಮೂಲಕ ಅಂತಾರಾಷ್ಟ್ರೀಯ ಬಾಹ್ಯಾಕಾಶ ಕೇಂದ್ರವನ್ನು ಭಾರತೀಯ ಶುಭಾಂಶು ಶುಕ್ಲಾ ಸೇರಿದಂತೆ ನಾಲ್ವರು ಗಗನ ಯಾತ್ರಿಕರು ತಲುಪಿದ್ದಾರೆ. ಈ ಮೂಲಕ ಶುಭಾಂಶು ಶುಕ್ಲಾ ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣ ತಲುಪಿದ ಮೊದಲ ಭಾರತೀಯ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದ್ದಾರೆ. https://twitter.com/ANI/status/1938185342143668348 ನಿನ್ನೆ ಪ್ಲೋರಿಡಾದ ಕೆನಡಿ ಬಾಹ್ಯಾಕಾಶ ಕೇಂದ್ರದಿಂದ ಭಾರತೀಯ ಶುಭಾಂಶು ಶುಕ್ಲಾ, ಪೋಲೆಂಡ್ ನ ಸ್ಲವೋಜ್ ಉಝ್ ನಾಸ್ಕಿ, ಅಮೇರಿಕಾದ ಪೆಗ್ಗಿ ವಿಟ್ಸನ್, ಹಂಗೇರಿಯಾದ ಟಿಬರ್ ಸೇರಿದಂತೆ ನಾಲ್ವರು ಗಗನ ಯಾತ್ರಿಗಳನ್ನು ಹೊತ್ತ ಸ್ಪೆಸ್-ಎಕ್ಸ್ ಫಾಲ್ಕನ್ 9 ರಾಕೆಟ್ ಉಡಾವಣೆ ಮಾಡಲಾಗಿತ್ತು. ಇದೀಗ ಫಾಲ್ಕನ್ 9 ರಾಕೆಟ್ ನಲ್ಲಿದ್ದಂತ ನಾಲ್ವರು ಗಗನ ಯಾತ್ರಿಗಳು ಬಾಹ್ಯಾಕಾಶ ಕೇಂದ್ರವನ್ನು ತಲುಪಿದ್ದಾರೆ. ಈ ಮೂಲಕ ಅಂತರಾಷ್ಟ್ರೀಯ ಬಾಹ್ಯಾಕಾಶ ಕೇಂದ್ರವನ್ನು ಯಶಸ್ವಿಯಾಗಿ ತಲುಪಿದ್ದಾರೆ. ಹೀಗಾಗಿ ಭಾರತವು ಬಾಹ್ಯಾಕಾಶ ಕ್ಷೇತ್ರದಲ್ಲಿ ಹೊಸ ಇತಿಹಾಸವನ್ನು ಬರೆದಂತೆ ಆಗಿದೆ. https://twitter.com/ANI/status/1938185478043509173 ಒಟ್ಟಾರೆಯಾಗಿ ಆಕ್ಸಿಯಮ್…
ಬೆಂಗಳೂರು: ಶಿವಮೊಗ್ಗ ಜಿಲ್ಲೆಯ ಸಾಗರದ ತ್ಯಾಗರ್ತಿಯಲ್ಲಿ ಆರ್ಯ ಈಡಿಗ ಸಮುದಾಯ ಭವನ ನಿರ್ಮಾಣಕ್ಕೆ ಅನುದಾನ ಒದಗಿಸುವಂತೆ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಿವರಾಜ್ ತಂಗಡಗಿ ಅವರನ್ನು ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು ಭೇಟಿಯಾಗಿ ಮನವಿ ಮಾಡಿದರು. ಇಂದು ಬೆಂಗಳೂರಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವ ಶಿವರಾಜ್ ತಂಗಡಗಿ ಅವರನ್ನು ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು ಭೇಟಿಯಾದರು. ಈ ವೇಳೆಯಲ್ಲಿ ಸಾಗರ ತಾಲ್ಲೂಕಿನ ತ್ಯಾಗರ್ತಿಯ ಆರ್ಯ ಈಡಿಗ ಸಮುದಾಯ ಭವನ ನಿರ್ಮಾಣಕ್ಕಾಗಿ ಅನುದಾನ ಒದಗಿಸಿಕೊಡುವಂತೆ ಮನವಿಯನ್ನು ಸಲ್ಲಿಸಲಾಯಿತು. ಶಾಸಕರ ಮನವಿಗೆ ಸಕಾರಾತ್ಮಕವಾಗಿಯೇ ಪ್ರತಿಸ್ಪಂದಿಸಿರುವಂತ ಸಚಿವ ಶಿವರಾಜ್ ತಂಗಡಗಿ ಅವರು, ಶೀಘ್ರವೇ ತ್ಯಾಗರ್ತಿಯ ಆರ್ಯ ಈಡಿಗ ಸಮುದಾಯ ಭವನ ನಿರ್ಮಾಣಕ್ಕೆ ಬೇಕಿರುವಂತ ಅನುದಾವನ್ನು ಒದಗಿಸಿ ಕೊಡುವಂತ ಭರವಸೆಯನ್ನು ನೀಡಿರುವುದಾಗಿ ಶಾಸಕ ಗೋಪಾಲಕೃಷ್ಣ ಬೇಳೂರು ತಿಳಿಸಿದ್ದಾರೆ. ಈ ಸಂದರ್ಭದಲ್ಲಿ ಮಾಜಿ ತಾಲ್ಲೂಕು ಪಂಚಾಯ್ತಿ ಸದಸ್ಯ ಸೋಮಶೇಖರ ಲಾವಿಗೆರೆ, ಚೇತನ್ ರಾಜ್ ಕಣ್ಣೂರು ಉಪಸ್ಥಿತರಿದ್ದರು. https://kannadanewsnow.com/kannada/toll-charges-for-two-wheelers-from-july-15/ https://kannadanewsnow.com/kannada/these-7-benefits-will-come-if-pf-is-deducted-from-your-salary-every-month/
ಕೆಎನ್ಎನ್ ಡಿಜಿಟಲ್ ಡೆಸ್ಕ್: ದ್ವಿಚಕ್ರ ಹೊರತುಪಡಿಸಿ, ಇನ್ನುಳಿದ ಎಲ್ಲಾ ಮಾದರಿಯ ವಾಹನಗಳಿಗೆ ಟೋಲ್ ಫ್ಲಾಜಾಗಳಲ್ಲಿ ಶುಲ್ಕವನ್ನು ವಸೂಲಿ ಮಾಡಲಾಗುತ್ತಿದೆ. ಆದರೇ ಜುಲೈ.15ರಿಂದ ದ್ವಿಚಕ್ರ ವಾಹನಗಳಿಗೂ ಟೋಲ್ ಶುಲ್ಕ ವಿಧಿಸಲಾಗುತ್ತದೆ ಎಂಬುದಾಗಿ ಸುದ್ದಿಯೊಂದು ವೈರಲ್ ಆಗಿದೆ. ಇದು ನಿಜವೇ ಎನ್ನುವ ಅಸಲಿ ಸತ್ಯ ಮುಂದಿದೆ ಓದಿ. ಜುಲೈ 15 ರಿಂದ ದ್ವಿಚಕ್ರ ವಾಹನಗಳಿಗೆ ಟೋಲ್ ಶುಲ್ಕವನ್ನು ಪರಿಚಯಿಸಬಹುದು ಎಂಬ ಹೆಚ್ಚುತ್ತಿರುವ ಊಹಾಪೋಹಗಳು ಮತ್ತು ವ್ಯಾಪಕ ಮಾಧ್ಯಮ ವರದಿಗಳ ಮಧ್ಯೆ, ಭಾರತ ಸರ್ಕಾರವು ಅಂತಹ ಹೇಳಿಕೆಗಳನ್ನು ಅಧಿಕೃತವಾಗಿ ತಳ್ಳಿಹಾಕಿದೆ. ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ಈ ವರದಿಗಳನ್ನು “ಆಧಾರರಹಿತ” ಎಂದು ಕರೆದು ಬಲವಾದ ಸ್ಪಷ್ಟೀಕರಣವನ್ನು ನೀಡಿದೆ ಮತ್ತು ಅಂತಹ ಯಾವುದೇ ಪ್ರಸ್ತಾಪವು ಸಕ್ರಿಯ ಪರಿಗಣನೆಯಲ್ಲಿಲ್ಲ ಎಂದು ದೃಢಪಡಿಸಿದೆ. https://twitter.com/NHAI_Official/status/1938155675445588222 ಗುರುವಾರ NHAI ಸಾಮಾಜಿಕ ಮಾಧ್ಯಮ ಮತ್ತು ಅಧಿಕೃತ ಚಾನೆಲ್ಗಳ ಮೂಲಕ ಹೇಳಿಕೆಯನ್ನು ಬಿಡುಗಡೆ ಮಾಡಿತು. ಭಾರತ ಸರ್ಕಾರವು ದ್ವಿಚಕ್ರ ವಾಹನಗಳ ಮೇಲೆ ಬಳಕೆದಾರ ಶುಲ್ಕವನ್ನು ವಿಧಿಸಲು ಯೋಜಿಸುತ್ತಿದೆ ಎಂದು ಕೆಲವು ಮಾಧ್ಯಮಗಳು ವರದಿ…
ಬೆಂಗಳೂರು: ನಗರದ ಜನತೆಗೆ ಅನುಕೂಲ ಆಗುವ ನಿಟ್ಟಿನಲ್ಲಿ ಬಿಎಂಟಿಸಿಯಿಂದ ಹೊಸ ಮಾರ್ಗದಲ್ಲಿ ಬಸ್ ಸಂಚಾರವನ್ನು ಆರಂಭಿಸಿದೆ. ಈ ಮೂಲಕ ಜನತೆಗೆ ಅನುಕೂಲವನ್ನು ಕಲ್ಪಿಸಿದೆ. ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ಸಾರ್ವಜನಿಕ ಪ್ರಯಾಣಿಕರಿಗೆ ದಕ್ಷ, ವಿಶ್ವಾಸನೀಯ, ಆರಾಮಧಾಯಕ ಹಾಗೂ ಮಿತವ್ಯಯಕರ ದರದಲ್ಲಿ ಉತ್ತಮ ಸಾರಿಗೆ ಸೌಲಭ್ಯವನ್ನು ಒದಗಿಸುತ್ತಿದೆ. ಬೆಂ.ಮ.ಸಾ.ಸಂಸ್ಥೆಯು ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಹವಾನಿಯಂತ್ರಣರಹಿತ ಸೇವೆಗಳಲ್ಲಿ ನೂತನ ಮಾರ್ಗವನ್ನು ದಿನಾಂಕ.27.06.2025 ರಿಂದ ಪರಿಚಯಿಸಿದ್ದು, ವಿವರ ಈ ಕೆಳಕಂಡಂತಿದೆ: ಕ್ರ.ಸಂ ಮಾರ್ಗ ಸಂಖ್ಯೆ ಎಲ್ಲಿಂದ ಎಲ್ಲಿಗೆ ಮಾರ್ಗ ಬಸ್ಸುಗಳ ಸಂಖ್ಯೆ 01 180-ಎ ಕಾವಲ್ ಭೈರಸಂದ್ರ ಮೈಸೂರು ರಸ್ತೆ ಬಸ್ ನಿಲ್ದಾಣ ಮೇಖ್ರಿ ವೃತ್ತ, ಯಶವಂತಪುರ, ರಾಜಾಜಿನಗರ, ವಿಜಯನಗರ, ಅತ್ತಿಗುಪ್ಪೆ 06 ಸದರಿ ಮಾರ್ಗದ ವೇಳಾಪಟ್ಟಿ ವಿವರಗಳು ಈ ಕೆಳಗಿನಂತಿದೆ. ಮಾರ್ಗ ಸಂಖ್ಯೆ: 180-ಎ ಬಿಡುವ ವೇಳೆ ಕಾವಲ್ ಭೈರಸಂದ್ರ 0445, 0505, 0525, 0545, 0630, 0700, 0720, 0740, 0800, 0830, 0910, 1150, 1400, 1420, 1440, 1500, 1530,…
ಹುಬ್ಬಳ್ಳಿ: ಕರ್ನಾಟಕ ಮತ್ತು ಮಧ್ಯಪ್ರದೇಶದ ನಡುವೆ ನೇರ ರೈಲು ಸಂಪರ್ಕವನ್ನು ಹೆಚ್ಚಿಸುವ ಉದ್ದೇಶದಿಂದ, ಬೆಂಗಳೂರಿನ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಮತ್ತು ಮಧ್ಯಪ್ರದೇಶದ ಗ್ವಾಲಿಯರ್ ನಿಲ್ದಾಣಗಳ ನಡುವೆ ಹೊಸ ಸಾಪ್ತಾಹಿಕ ಎಕ್ಸ್ಪ್ರೆಸ್ ರೈಲು ಸೇವೆಯನ್ನು ರೈಲ್ವೆ ಮಂಡಳಿ ಸಂಚರಿಸಲು ಘೋಷಿಸಿದೆ. ಈ ಸೇವೆಯು ರೈಲು ಸಂಖ್ಯೆ 11085/11086 ಎಸ್ಎಂವಿಟಿ ಬೆಂಗಳೂರು – ಗ್ವಾಲಿಯರ್ – ಎಸ್ಎಂವಿಟಿ ಬೆಂಗಳೂರು ಸಾಪ್ತಾಹಿಕ ಎಕ್ಸ್ಪ್ರೆಸ್ ಆಗಿ ಕಾರ್ಯನಿರ್ವಹಿಸಲಿದೆ. ರೈಲು ಸಂಖ್ಯೆ 11085 ಎಸ್ಎಂವಿಟಿ ಬೆಂಗಳೂರು – ಗ್ವಾಲಿಯರ್ ಸಾಪ್ತಾಹಿಕ ಎಕ್ಸ್ಪ್ರೆಸ್ ಜೂನ್ 29, 2025 ರಿಂದ ಪ್ರತಿ ಭಾನುವಾರ ಮಧ್ಯಾಹ್ನ 3:50ಕ್ಕೆ ಬೆಂಗಳೂರಿನ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ನಿಂದ ಹೊರಟು ಮಂಗಳವಾರ ಬೆಳಿಗ್ಗೆ 10:25ಕ್ಕೆ ಗ್ವಾಲಿಯರ್ ಜಂಕ್ಷನ್ಗೆ ತಲುಪಲಿದೆ. ಮರಳಿ, ರೈಲು ಸಂಖ್ಯೆ 11086 ಗ್ವಾಲಿಯರ್ – ಎಸ್ಎಂವಿಟಿ ಬೆಂಗಳೂರು ಸಾಪ್ತಾಹಿಕ ಎಕ್ಸ್ಪ್ರೆಸ್ ಜುಲೈ 4, 2025 ರಿಂದ ಪ್ರತಿ ಶುಕ್ರವಾರ ಮಧ್ಯಾಹ್ನ 3:00ಕ್ಕೆ ಗ್ವಾಲಿಯರ್ನಿಂದ ಹೊರಟು ಭಾನುವಾರ ಬೆಳಿಗ್ಗೆ 07:35ಕ್ಕೆ ಎಸ್ಎಂವಿಟಿ ಬೆಂಗಳೂರಿಗೆ ಆಗಮಿಸಲಿದೆ. ಈ…
ಮಂಗಳೂರು: ‘ಎಸ್ಎಸ್ ಮೆಟಲ್ಸ್ ಆಂಡ್ ಇಂಡಸ್ಟ್ರೀಸ್’ನ ಅತ್ಯಾಧುನಿಕ ಟ್ಯಾಂಕರ್ ಮಾಪನಾಂಕ ನಿರ್ಣಯ ಘಟಕ ಮಂಗಳವಾರ ನಗರದಲ್ಲಿ ಉದ್ಘಾಟನೆಗೊಂಡಿದೆ. ಮಂಗಳೂರಿನ ಓಷನ್ ಪರ್ಲ್ ಹೊಟೇಲ್ನಲ್ಲಿ ನಡೆದ ಅದ್ಧೂರಿ ಕಾರ್ಯಕ್ರಮದಲ್ಲಿ ಅನಾವರಣಗೊಂಡ ಈ ಘಟಕವು ಮಂಗಳೂರು ಸೇರಿದಂತೆ ವಿವಿಧೆಡೆಗಳಲ್ಲಿ ಬೃಹತ್ ತೈಲ, ರಾಸಾಯನಿಕ ನಿರ್ವಹಣೆ ಮಾಡುವ ಕೈಗಾರಿಕೆಗಳಿಗೆ ನಿಖರತೆ, ಸುರಕ್ಷತೆ ಮತ್ತು ನಿಯಂತ್ರಕ ಕ್ರಮಗಳನ್ನು ಅನುಸರಿಸಲು ಪೂರಕವಾಗಲಿದೆ. ಉದ್ಘಾಟನಾ ಸಮಾರಂಭದಲ್ಲಿ ಉದ್ಯಮದ ಮುಖಂಡರು ಮತ್ತು ಧಾರ್ಮಿಕ ನಾಯಕರು ಪಾಲ್ಗೊಂಡಿದ್ದರು. ಬೆಂಗಳೂರಿನ ಸೈಂಟ್ ಆಂಡ್ರ್ಯೂಸ್ ಚರ್ಚ್ನ ವಂ.ಡಾ. ಡೆಕ್ಸ್ಟರ್ ಎಸ್. ಮಾಬೆನ್, ಜೋನಸ್ ಗ್ರೂಪ್ನ ನಿರ್ದೇಶಕ ಸುನಿಲ್ ಎ. ಜೋನಸ್, ಎಸ್ಎಸ್ ಮೆಟಲ್ಸ್ ನಿರ್ದೇಶಕಿ ಸಂಧ್ಯಾ ದೀಪಾ ಜೋನಸ್ ಭಾಗವಹಿಸಿದ್ದರು. ಪ್ರಮುಖ ಉದ್ಯಮ ಪ್ರತಿನಿಧಿಗಳಾದ ಎಂಆರ್ಪಿಎಲ್ನ ಜಿಜಿಎಂ (ಎಚ್ಆರ್) ಕೃಷ್ಣ ಹೆಗ್ಡೆ ಮಿಯಾರ್, ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ (ಐಒಸಿಎಲ್) ಕಾರ್ಯ ನಿರ್ವಾಹಕ ನಿರ್ದೇಶಕ ಸಂಜಯ್ ಪರಾಶರ್, ಶೈನಿ ಶಿಪ್ಪಿಂಗ್ ಮತ್ತು ಲಾಜಿಸ್ಟಿಕ್ಸ್ ಪ್ರೈವೇಟ್ ಲಿಮಿಟೆಡ್ ಸಂಸ್ಥಾಪಕ ಸ್ಟ್ಯಾನಿ ಲಿಯೋ ನೊರೊನ್ಹಾ ಉಪಸ್ಥಿತರಿದ್ದರು. ಇಂಡಿಯನ್ ಆಯಿಲ್…
ಬೆಂಗಳೂರು: ವಿದ್ಯಾರ್ಥಿಗಳಿಗೆ ಉಜ್ವಲ ಭವಿಷ್ಯವಿದ್ದು, ಮಾದಕ ವ್ಯಸನಕ್ಕೆ ಸಿಲುಕಿ ಜೀವನ ಹಾಳು ಮಾಡಿಕೊಳ್ಳಬೇಡಿ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ಹೇಳಿದರು. ಬೆಂಗಳೂರು ನಗರ ಪೊಲೀಸ್ ವತಿಯಿಂದ ನಗರದ ಕಂಠೀರವ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ‘ಅಂತಾರಾಷ್ಟ್ರೀಯ ಮಾದಕ ವ್ಯಸನ ಮತ್ತು ಅಕ್ರಮ ಕಳ್ಳ ಸಾಗಾಣಿಕೆ ವಿರೋಧಿ ದಿನ’ವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಕಳೆದ ಒಂದು ವರ್ಷದಲ್ಲಿ ನಾಲ್ಕು ಸಾವಿರ ಕೆ.ಜಿ. ಗಾಂಜಾ ಸೇರಿದಂತೆ 45 ಕೋಟಿ ರೂ. ಮೌಲ್ಯದ ವಿವಿಧ ಬಗೆಯ ಮಾದಕ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ವಿದೇಶಿ ವಿದ್ಯಾರ್ಥಿಗಳು ಡ್ರಗ್ಸ್ ದಂಧೆಯಲ್ಲಿ ತೊಡಗುತ್ತಿದ್ದು, 200ಕ್ಕು ಹೆಚ್ಚು ವಿದೇಶಿಗರನ್ನು ಗಡಿಪಾರು ಮಾಡಲಾಗಿದೆ ಎಂದರು. ವಿಶ್ವದಲ್ಲಿ ಮಾದಕ ವಸ್ತುಗಳು ಮತ್ತು ಮಾನವ ಕಳ್ಳ ಸಾಗಾಣಿಕೆ ವಿರುದ್ಧ ಆಂದೋಲನ ಮಾಡಲಾಗುತ್ತಿದೆ. ಡ್ರಗ್ಸ್ನಿಂದಾಗುವ ಅನಾಹುತಗಳ ಬಗ್ಗೆ ಜಾಗೃತಿ ಮೂಡಿಸಲಾಗುತ್ತಿದೆ. ಮನುಷ್ಯನಿಗೆ ಆಗುವ ದೈಹಿಕ ಮತ್ತು ಮಾನಸಿಕ ದುಷ್ಪರಿಣಾಮಗಳನ್ನು ಅರ್ಥ ಮಾಡಿಕೊಳ್ಳಬೇಕು ಎಂದು ಹೇಳಿದರು ಡ್ರಗ್ಸ್ ದಂಧೆಯನ್ನು ಮಟ್ಟ ಹಾಕಲು ಕಾನೂನು ಪ್ರಕಾರ ಕ್ರಮ ತೆಗೆದುಕೊಳ್ಳಲಾಗುತ್ತಿದೆ. ಬರೀ ಕಾನೂನಿಂದ…