Subscribe to Updates
Get the latest creative news from FooBar about art, design and business.
Author: kannadanewsnow09
ಶಿವಮೊಗ್ಗ : ಗಣಪತಿ ದೇವಸ್ಥಾನವನ್ನು ಸರ್ಕಾರ ಮತ್ತು ಸಾರ್ವಜನಿಕರ ಸಹಾಯಧನದೊಂದಿಗೆ ಮಾದರಿಯಾಗಿ ನಿರ್ಮಿಸಲಾಗುತ್ತದೆ. ದೇವಾಲಯದ ಮೂಲಭೂತ ಸೌಕರ್ಯಗಳಿಗೆ ಪ್ರಮುಖ ಅಧ್ಯಯನ ನೀಡಲಾಗುತ್ತದೆ ಗಣಪತಿ ದೇವಸ್ಥಾನಕ್ಕೆ ಬೇಕಾದ ಅನುದಾವನ್ನು ಸರ್ಕಾರದಿಂದ ತರಲಾಗುತ್ತದೆ ಎಂದು ಶಾಸಕ ಹಾಗೂ ಅರಣ್ಯ ಕೈಗಾರಿಕಾ ಅಭಿವೃದ್ದಿ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಹೇಳಿದರು. ಇಂದು ಶಿವಮೊಗ್ಗ ಜಿಲ್ಲೆಯ ಸಾಗರದ ಗಣಪತಿ ದೇವಸ್ಥಾನ ಆವರಣದಲ್ಲಿ ಗುರುವಾರ ಮುಜರಾಯಿ ಇಲಾಖೆ ವತಿಯಿಂದ ಗಣಪತಿ ದೇವಸ್ಥಾನ ಅಭಿವೃದ್ದಿಗೆ ಸಂಬoಧಿಸಿದoತೆ ಕರೆಯಲಾಗಿದ್ದ ಸಮಾಲೋಚನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದಂತ ಅವರು, ಸಾಗರಕ್ಕೆ ಗಣಪತಿ ದೇವಸ್ಥಾನ ಮತ್ತು ಮಾರಿಕಾಂಬಾ ದೇವಸ್ಥಾನ ಪ್ರಮುಖ ಶ್ರದ್ಧಾಭಕ್ತಿಯ ಕೇಂದ್ರವಾಗಿದೆ. ಅನೇಕ ಪ್ರವಾಸಿಗರು ಬಂದಾಗ ಇಲ್ಲಿಗೆ ಭೇಟಿ ನೀಡುತ್ತಾರೆ. ಗಣಪತಿ ದೇವಸ್ಥಾನವನ್ನು ಪೂರ್ಣ ಪ್ರಮಾಣದಲ್ಲಿ ಅಭಿವೃದ್ದಿ ಮಾಡುವುದು ನನ್ನ ಆದ್ಯತಾ ವಿಷಯಗಳಲ್ಲಿ ಪ್ರಮುಖವಾಗಿದೆ. ಈಗಾಗಲೆ ಮುಜರಾಯಿ ಇಲಾಖೆಯಿಂದ 55 ಲಕ್ಷ ರೂ. ಅನುದಾನ ಮಂಜೂರಾಗಿದ್ದು, ಹೆಚ್ಚುವರಿಯಾಗಿ 1.,07 ಕೋಟಿ ರೂ. ಬಿಡುಗಡೆಯಾಗುವ ನಿರೀಕ್ಷೆ ಇದೆ. ಈ ಹಿನ್ನೆಲೆಯಲ್ಲಿ ದೇವಸ್ಥಾನದ ಸಮಗ್ರ ಅಭಿವೃದ್ದಿಗೆ ಮಾಸ್ಟರ್…
ಶಿವಮೊಗ್ಗ : ಗಣತಿಗೆ ಬರುವ ಶಿಕ್ಷಕರನ್ನು ನಿಮ್ಮ ಮನೆ ಅತಿಥಿಗಳಂತೆ ನೋಡಿ. ಸರ್ಕಾರ ಗಣತಿಗೆ ನಿಯೋಜಿಸಿರುವ ಶಿಕ್ಷಕರನ್ನು ಬೈಯಬೇಡಿ ಎಂದು ಶಾಸಕ ಹಾಗೂ ಅರಣ್ಯ ಕೈಗಾರಿಕಾ ಅಭಿವೃದ್ದಿ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಮನವಿ ಮಾಡಿದ್ದಾರೆ. ಇಂದು ಶಿವಮೊಗ್ಗ ಜಿಲ್ಲೆಯ ಸಾಗರದ ನೆಹರೂ ಮೈದಾನದಲ್ಲಿ ಶುಕ್ರವಾರ ಸಾರ್ವಜನಿಕ ಶಿಕ್ಷಣ ಇಲಾಖೆ ಮತ್ತು ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳ ತಾಲ್ಲೂಕು ಮಟ್ಟದ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿದ ಅವರು, ಸರ್ಕಾರ ಮಹತ್ತರ ಉದ್ದೇಶದಿಂದ ಗಣತಿ ನಡೆಸುತ್ತಿದೆ. ತಾಲ್ಲೂಕಿನಲ್ಲಿ ಈತನಕ ಶೇ. 98ರಷ್ಟು ಗಣತಿ ಕಾರ್ಯ ಮುಗಿದಿದೆ. ಕೆಲವು ಕಡೆಗಳಲ್ಲಿ ಮಾಹಿತಿ ಸಂಗ್ರಹಕ್ಕೆ ಬಂದ ಶಿಕ್ಷಕರನ್ನು ಕೇವಲವಾಗಿ ನಡೆಸಿಕೊಳ್ಳುತ್ತಿರುವುದು ನನ್ನ ಗಮನಕ್ಕೆ ಬಂದಿದೆ. ಸಾಧ್ಯವಾದರೆ ಮಾಹಿತಿ ಕೊಡಿ. ಇಲ್ಲವಾದಲ್ಲಿ ತಿರಸ್ಕಾರ ಮಾಡಿ.. ತಾಲ್ಲೂಕಿನಲ್ಲಿ ಶಿಕ್ಷಕರು ಗಣತಿಯನ್ನು ಅತ್ಯಂತ ಯಶಸ್ವಿಯಾಗಿ ನಿರ್ವಹಿಸಿದ್ದಾರೆ. ಅವರಿಗೆ ಸರ್ಕಾರದ ಪರವಾಗಿ ಅಭಿನಂದನೆ ಸಲ್ಲಿಸುತ್ತಿದ್ದೇನೆ ಎಂದರು. ಕ್ರೀಡಾಸ್ಪೂರ್ತಿಯಿಂದ ಮಕ್ಕಳು ಕ್ರೀಡೆಯಲ್ಲಿ ಪಾಲ್ಗೊಳ್ಳಬೇಕು. ನೆಹರೂ ಮೈದಾನದಲ್ಲಿ ಕ್ರೀಡೆ,…
ಹಾವೇರಿ: ಆಕ್ಸಿಡೆಂಟಲ್ ಇನ್ಸೂರೆನ್ಸ್ ಹಣಕ್ಕಾಗಿ ವ್ಯಕ್ತಿಯೊಬ್ಬರನ್ನು ಹತ್ಯೆ ಮಾಡಿ, ಅಪಘಾತದ ನಾಟಕವಾಡಿದ್ದಂತ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ಕಳೆದ ಸೆಪ್ಟೆಂಬರ್.27, 2025ರಂದು ರಟ್ಟಿಹಳ್ಳಿ ಪೊಲೀಸ್ ಠಾಣೆಯ ಕೂಗಳತೆ ದೂರದಲ್ಲಿ 38 ವರ್ಷದ ಬಸವರಾಜ್ ಪುಟ್ಟಪ್ಪನವರ್ ಕೊಲೆ ಮಾಡಲಾಗಿತ್ತು. ಈ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದಂತ ಪೊಲೀಸರಿಗೆ ವಿಮೆ ಹಣಕ್ಕಾಗಿ ಹತ್ಯೆ ಮಾಡಿರುವುದು ತಿಳಿದು ಬಂದಿದೆ. ಈ ಪ್ರಕರಣದಲ್ಲಿ ಬಸವರಾಜ್ ಮಾವ ರಾಘವೇಂದ್ರ ಮಾಳಗೊಂಡರ, ಸಿದ್ದನಗೌಡ ಹಲಗೇರಿ, ಪ್ರವೀಣ್ ಹಾಗೂ ಲೋಕೇಶ್ ಎಂಬ ಆರೋಪಿಗಳನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಅಂದಹಾಗೇ ಹತ್ಯೆಯಾಗಿದ್ದ ಬಸವರಾಜ್ ತಂದೆ-ತಾಯಿ, ಸಹೋದರ ನಿಧನರಾಗಿದ್ದರು. ಹೀಗಾಗಿ ಒಬ್ಬಂಟಿಯಾಗಿ ಜೀವನ ನಡೆಸುತ್ತಿದ್ದನು. ಈತನಿಗೆ 8 ಎಕರೆ ಜಮೀನು, ಮನೆ ಇತ್ತು. ಅಲ್ಲದೇ ಆರೋಪಿಗಳೇ ಮೃತನಿಗೆ ಆಕ್ಸಿಡೆಂಟಲ್ ಇನ್ಸೂರೆನ್ಸ್ ಮಾಡಿಸಿದ್ದರು. ಈ ವಿಮೆ ಕ್ಲೈ ಮಾಡಲು ಬಸವರಾಜ್ ಹತ್ಯೆ ಮಾಡಿ ಅಪಘಾತದ ನಾಟಕವಾಡಿದ್ದರು. https://kannadanewsnow.com/kannada/three-injured-in-fire-accident-in-bengaluru-die-without-treatment/ https://kannadanewsnow.com/kannada/mla-gopalakrishna-belur-inaugurated-the-new-royal-enfield-showroom-of-rbd-motors/
ಬೆಂಗಳೂರು: ಸಿಲಿಂಡರ್ ನಿಂದ ಗ್ಯಾಸ್ ಸೋರಿಕೆಯಾಗಿ ಆ ಬಳಿಕ ಬೆಂಕಿ ಕಾಣಿಸಿಕೊಂಡಿತ್ತು. ಈ ಅಗ್ನಿ ಅವಘಡದಲ್ಲಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದಂತ ಮೂವರು ಗಾಯಾಳುಗಳು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರ ತಾಲ್ಲೂಕಿನ ಭೀಮನಹಳ್ಳಿಯಲ್ಲಿ ಸಿಲಿಂಡರ್ ಗ್ಯಾಸ್ ಸೋರಿಕೆಯಿಂದ ಅಗ್ನಿ ಅವಘಡ ಸಂಭವಿಸಿತ್ತು. ಈ ದುರ್ಘಟನೆಯಲ್ಲಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿದ್ದ ಮನುರುಲ್ ಶೇಖ್, ಜಾವಿದ್ ಆಲಿ ಹಾಗೂ ತಜ್ ಬುಲ್ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾರೆ. ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ. ಅಕ್ಟೋಬರ್.7ರಂದು ಭೀಮನಹಳ್ಳಿ ಬಳಿಯ ಶೆಡ್ ನಲ್ಲಿ ಈ ದುರ್ಘಟನೆ ಸಂಭವಿಸಿತ್ತು. ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರ ತಾಲ್ಲೂಕಿನ ಭೀಮನಹಳ್ಳಿ ಇದಾಗಿದೆ. ಪಶ್ಚಿಮ ಬಂಗಾಳ ಮೂಲದ 7 ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿದ್ದರು. https://kannadanewsnow.com/kannada/actress-ramyas-obscene-comment-threat-case-high-court-grants-bail-to-7-accused/ https://kannadanewsnow.com/kannada/police-station-closed-due-to-heavy-rains-in-mandya-water-blockade-for-more-than-10-houses/
ಬೆಂಗಳೂರು: ಇಂದು ಕೆಂಪೇಗೌಡ ಪೌರ ಸಭಾಂಗಣದಲ್ಲಿ ನಡೆದ ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಮೊದಲ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ನೀಡಿದ ಸೂಚನೆಗಳು, ಸಭೆಯ ಪ್ರಮುಖ ಹೈಲೈಟ್ಸ್ ಮುಂದಿದೆ ಓದಿ. * ಬೆಂಗಳೂರು ಜಾಗತಿಕವಾಗಿ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ನಗರವಾಗಿದೆ. ವಿಶ್ವದ ಹಲವು ದೇಶಗಳು ಜನರು ಇಲ್ಲಿ ಬಂಡವಾಳ ಹೂಡಿಕೆ ಮಾಡಿರುವುದು ಮಾತ್ರವಲ್ಲ, ಇಲ್ಲಿಯೇ ತಮ್ಮ ಬದುಕು ಕಟ್ಟಿಕೊಂಡಿದ್ದಾರೆ. ಇಂದು ಬೆಂಗಳೂರಿನ ಜನಸಂಖ್ಯೆ ಸುಮಾರು 1.40 ಕೋಟಿ ಇದೆ. ಇಂತಹ ಬೃಹತ್ ನಗರದ ಸಮರ್ಪಕ ಆಡಳಿತ ಕೇವಲ ಒಂದು ಪಾಲಿಕೆಯಿಂದ ಸಾಧ್ಯವಿಲ್ಲ ಎಂಬ ಚರ್ಚೆ ಇತ್ತು. * ಹಿಂದೆ ಮುಖ್ಯಮಂತ್ರಿಯಾಗಿದ್ದಾಗ ಬೆಂಗಳೂರಿನಲ್ಲಿ ಹೆಚ್ಚು ಕಾರ್ಪೊರೇಶನ್ ರಚನೆ ಸಾಧ್ಯತೆಗಳ ಕುರಿತು ವರದಿ ನೀಡಲು ಸಮಿತಿ ರಚಿಸಿದ್ದೆವು. ಸಮಿತಿ ಮಧ್ಯಂತರ ವರದಿಯನ್ನು ಸಹ ನೀಡಿತ್ತು. ಆದರೆ ನಂತರ ಬಂದ ಸರ್ಕಾರಗಳಲ್ಲಿ ಈ ಕುರಿತು ಯಾವುದೆ ತೀರ್ಮಾನ ಆಗಿರಲಿಲ್ಲ. ನಾವು ಅಧಿಕಾರಕ್ಕೆ ಬಂದ ಬಳಿಕ ಸಮಿತಿ ಪುನರ್ರಚಿಸಿದೆವು. ಇದೀಗ ಸಾರ್ವಜನಿಕರಿಂದ ಸಲಹೆ, ಆಕ್ಷೇಪಣೆಗಳನ್ನು ಸ್ವೀಕರಿಸಿ ನಾವು ಕಾನೂನು…
ಶ್ರೀ ಆಂಜನೇಯ ಸ್ವಾಮಿಯ ಅಷ್ಟೋತ್ತರ ಮಂತ್ರವನ್ನು ವ್ಯಾಪಾರ,ವ್ಯವಹಾರದ ಬೆಳವಣಿಗಾಗಿ ಜಪಿಸಿ ಶುಭವಾಗುತ್ತದೆ.. ಪಂಡಿತ್ ವಿದ್ಯಾಧರ್ ನಕ್ಷತ್ರಿ ಪ್ರಧಾನ್ ತಾಂತ್ರಿಕ್ ಹಾಗೂ ಅರ್ಚಕರು 9686268564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವು ಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತುಪ್ರಶ್ನೆಗಳಿಗೆ ಉತ್ತರಿಸೃಬಹುದು ಏಷ್ಟೇ ಪೂಜೆ ಪ್ರಯತ್ನಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇ ಘೋರ ನಿಗೂಢ ಗುಪ್ತಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ಶ್ರೀ ಕ್ಷೇತ್ರ ಕಟೀಲು ರಕ್ತೇಶ್ವರೀ ದೇವಿಯ ವಿಶೇಷ ಪೂಜಾದೈವಿಕ ವಿಧಿವಿಧಾನದಿಂದ ಪರಿಹಾರ ತಿಳಿಸುತ್ತಾರೆ ಪಂಡಿತ್ ವಿದ್ಯಾಧರ್ ನಕ್ಷತ್ರಿ 9686268564 ನಾಳೇಯ ದಿನ ಆಂಜನೇಯ ಸ್ವಾಮಿಯ ಹನುಮಾನ್ ಚಾಲೀಸ ಪಾರಾಯಣ ಮಾಡಿರಿ ಇದರಿಂದ ನಿಮಗೆ ಸಾಕಷ್ಟು ಒಳಿತು ಆಗುತ್ತದೆ ಕುಟುಂಬ ಜನಕ್ಕೂಸಹ ಸಾಕಷ್ಟು ಒಳ್ಳೆಯದು ಆಗಲಿದೆ. ಓಂ ಶ್ರೀ ಆಂಜನೇಯಾಯ ನಮಃ ಓಂ ಮಹಾವೀರಾಯ ನಮಃ ಓಂ ಹನುಮತೇ ನಮಃ ಓಂ ಸೀತಾದೇವಿ…
ಮಂಡ್ಯ : ಜಿಲ್ಲೆಯ ವಿವಿಧೆಡೆ ಗುರುವಾರ ಇಡೀ ರಾತ್ರಿ ಸುರಿದ ಕುಂಭದ್ರೋಣ ಮಳೆಯಿಂದಾಗಿ ಹಲವಾರು ಅವಾಂತರಗಳನ್ನು ಸೃಷ್ಟಿಸಿದೆ. ಮದ್ದೂರು ತಾಲ್ಲೂಕಿನ ನಿಲುವಾಗಿಲು ಗ್ರಾಮದ ಕೆರೆ ಕೋಡಿ ಬಿದ್ದು ನಾಲೆಯಲ್ಲಿ ತ್ಯಾಜ್ಯ ತುಂಬಿದ ಪರಿಣಾಮ ನೀರು ಸರಾಗವಾಗಿ ಹರಿಯಲು ಸಾಧ್ಯವಾಗದೆ 15 ಕ್ಕೂ ಹೆಚ್ಚು ಮನೆಗಳಿಗೆ ನುಗ್ಗಿದ ಪರಿಣಾಮ ಜನರು ರಾತ್ರಿಯಿಡೀ ಜಾಗರಣೆ ಮಾಡಿ ದವಸ ಧಾನ್ಯ ಸೇರಿದಂತೆ ಅಗತ್ಯ ವಸ್ತುಗಳನ್ನು ಸಂರಕ್ಷಿಸಿಕೊಂಡಿದ್ದಾರೆ. ಇನ್ನು ವಿಷಯ ತಿಳಿದು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಮದ್ದೂರು ತಹಶೀಲ್ದಾರ್ ಪರಶುರಾಮ್ ಸತ್ತಿಗೇರಿ ಮನೆಗಳಿಗೆ ನೀರು ನುಗ್ಗಿರುವುದೆಕೆ ಎಂದು ಗ್ರಾಮಸ್ಥರ ಬಳಿ ಚರ್ಚಿಸಿದರು. ನಾಲೆಗಳಲ್ಲಿರುವ ತ್ಯಾಜ್ಯವನ್ನು ಸ್ವಚ್ಚತೆ ಮಾಡದ ಪರಿಣಾಮ ಮನೆಗಳಿಗೆ ನೀರು ನುಗ್ಗಲು ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳು ಹಾಗೂ ಗ್ರಾಮ ಪಂಚಾಯಿತಿಯೇ ನೇರ ಕಾರಣರಾಗಿದ್ದಾರೆ ಎಂದು ಗ್ರಾಮಸ್ಥರು ಆರೋಪಿಸಿದರು. ತಕ್ಷಣವೇ ಎಚ್ಚೆತ್ತುಕೊಂಡ ತಹಶೀಲ್ದಾರ್ ಪರಶುರಾಮ್ ಸತ್ತಿಗೇರಿ ಅವರು ನಿಲುವಾಗಿಲು ಗ್ರಾಮ ಪಂಚಾಯಿತಿ ಹಾಗೂ ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳಿಗೆ ಸೂಚನೆ ನೀಡಿ ನಾಲೆಗಳಲ್ಲಿ…
ಬೆಂಗಳೂರು: ಹಾಸನಾಂಭ ಜಾತ್ರಾ ಮಹೋತ್ಸವದ ಪ್ರಯುಕ್ತ ಪ್ಯಾಕೇಜ್ ಪ್ರವಾಸವನ್ನು ಕೆ ಎಸ್ ಆರ್ ಟಿಸಿ ಆರಂಭಿಸಿದೆ. ಈ ಮೂಲಕ ಹಾಸನಾಂಭ ಭಕ್ತರಿಗೆ ಕೆ ಎಸ್ ಆರ್ ಟಿಸಿ ಗುಡ್ ನ್ಯೂಸ್ ನೀಡಲಾಗಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಅಕ್ಟೋಬರ್-2025ರ ಮಾಹೆಯಲ್ಲಿ ಹಾಸನ ನಗರದಲ್ಲಿ ಜರುಗುವ ಹಾಸನಾಂಭ ಜಾತ್ರಾ ಮಹೋತ್ಸವ-2025 ರ ಅಂಗವಾಗಿ ಹಾಸನಾಂಭ ದೇವಿಯ ದರ್ಶನಕ್ಕೆ ಆಗಮಿಸುವ ಪ್ರವಾಸಿಗರಿಗೆ ಹಾಸನ ಜಿಲ್ಲೆಯ ಪ್ರವಾಸಿ ಸ್ಥಳಗಳ ವೀಕ್ಷಣೆಗಾಗಿ (8 ಕರ್ನಾಟಕ ಸಾರಿಗೆ+2 ಅಶ್ವಮೇಧ+2 ವೋಲ್ವೊ) 10 ಮಾರ್ಗಗಳ ಟೂರ್ ಪ್ಯಾಕೇಜ್ನ್ನು ಸಿದ್ದಪಡಿಸಿ ಸದರಿ ಟೂರ್ ಪ್ಯಾಕೇಜ್ ಅನ್ನು ದಿನಾಂಕ:10.10.2025 ರಿಂದ ದಿನಾಂಕ:22.10.2025 ರವರೆಗೆ ಹಮ್ಮಿಕೊಳ್ಳಲಾಗಿರುತ್ತದೆ. ಸದರಿ 10(+2 ವೋಲ್ವೋ) ಪ್ಯಾಕೇಜ್ ಪ್ರವಾಸದ ಮಾರ್ಗಗಳ ವಿವರ ಈ ಕೆಳಕಂಡಂತಿರುತ್ತದೆ. ಪ್ಯಾಕೇಜ್ ಟೂರ್ ಹಾಸನ ನಗರ ಬಸ್ ನಿಲ್ದಾಣದಿಂದ ವಿವಿಧ ಪ್ರೇಕ್ಷಣೀಯ ಸ್ಥಳಗಳಿಗೆ ಪ್ಯಾಕೇಜ್ ಟೂರ್ ಗಳಿಗೆ ವೊಲ್ವೋ, ಅಶ್ವಮೇಧ ಹಾಗೂ ಕರ್ನಾಟಕ ಸಾರಿಗೆ ವಾಹನಗಳನ್ನು ಕಾರ್ಯಾಚರಣೆ, ಹೊರಡುವ ಸಮಯ ಹಾಗೂ ಸ್ಥಳಗಳ…
ಬೆಂಗಳೂರು: ನಟಿ ರಮ್ಯಾಗೆ ಅಶ್ಲೀಲ ಕಾಮೆಂಟ್, ಬೆದರಿಕೆ ಹಾಕಿದ್ದ ಸಂಬಂಧ 7 ಆರೋಪಿಗಳನ್ನು ಬಂಧಿಸಲಾಗಿತ್ತು. ಈ ಕೇಸಲ್ಲಿ ಜಾಮೀನು ಕೋರಿ ಹೈಕೋರ್ಟ್ ಗೆ ಆರೋಪಿಗಳು ಅರ್ಜಿ ಸಲ್ಲಿಸಿದ್ದರು. ಹೈಕೋರ್ಟ್ ಅರ್ಜಿ ವಿಚಾರಣೆ ನಡೆಸಿ 7 ಆರೋಪಿಗಳಿಗೆ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ನಟಿ ರಮ್ಯಾಗೆ ಅಶ್ಲೀಲ ಕಾಮೆಂಟ್, ಬೆದರಿಕೆ ಹಾಕಿದ್ದ ಪ್ರಕರಣದಲ್ಲಿ ಜಾಮೀನು ಕೋರಿ ಆರೋಪಿಗಳು ಸಲ್ಲಿಸಿದ್ದಂತ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ನಡೆಸಿತು. ಆರೋಪಿಗಳಾದಂತ ಕೆ.ಪ್ರಮೋದ್, ಮಂಜುನಾಥ್, ರಾಜೇಶ್ ಸಿವೈ, ಓಬಣ್ಣ.ಟಿ, ಗಂಗಾಧರ್.ಕೆ.ಎಂ, ಚಿನ್ಮಯ್ ಶೆಟ್ಟಿಗೆ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ. ಇನ್ನೂ ಈ ಪ್ರಕರಣದಲ್ಲಿ ಮತ್ತೊಬ್ಬ ಆರೋಪಿ ವಿಕಾಸ್ ಬಿ.ಎ ಗೆ ನಿರೀಕ್ಷಣಾ ಜಾಮೀನು ನೀಡಲಾಗಿದೆ. ಈಗಾಗಲೇ ಆರೋಪಪಟ್ಟಿ ದಾಖಲಾಗಿರುವ ಹಿನ್ನಲೆಯಲ್ಲಿ ನ್ಯಾಯಮೂರ್ತಿ ಶಿವಶಂಕರ್ ಅಮರಣ್ಣನವರ್ ಅವರಿದ್ದ ಪೀಠದಿಂದ ಜಾಮೀನು ಮಂಜೂರು ಮಾಡಲಾಗಿದೆ. ಒಂದು ಲಕ್ಷ ಬಾಂಡ್, ಒಬ್ಬರ ಶ್ಯೂರಿಟಿ ಒದಗಿಸುವಂತೆ ಷರತ್ತು ವಿಧಿಸಲಾಗಿತ್ತು. https://kannadanewsnow.com/kannada/mla-gopalakrishna-belur-inaugurated-the-new-royal-enfield-showroom-of-rbd-motors/
ಮಂಡ್ಯ : ಶರಣರ ಸಂಘಟನಾ ವೇದಿಕೆ ( ಮದ್ದೂರು ಘಟಕ ) ಹಾಗೂ ಉದ್ಯೋಗ ವಿನಿಮಯ ಕಛೇರಿ ಮಂಡ್ಯ ಅವರ ಸಹಯೋಗದೊಂದಿಗೆ ಅ.13 ರಂದು ಬೃಹತ್ ಉದ್ಯೋಗ ಮೇಳ ಆಯೋಜಿಸಲಾಗಿದೆ ಎಂದು ಶರಣರ ಸಂಘಟನಾ ವೇದಿಕೆ ತಾಲೂಕು ಅಧ್ಯಕ್ಷ ಎಸ್.ಎಂ.ಗಂಗಾಧರ್ ಹೇಳಿದರು. ಮದ್ದೂರು ನಗರದ ಪ್ರವಾಸಿ ಮಂದಿರದಲ್ಲಿ ಶುಕ್ರವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಅ.13 ಸೋಮವಾರದಂದು ನಗರದ ಬೆಂಗಳೂರು – ಮೈಸೂರು ರಾಷ್ಟ್ರೀಯ ಹೆದ್ದಾರಿಯ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ಬೆಳಿಗ್ಗೆ 10 ಗಂಟೆಯಿಂದ ಮಧ್ಯಾಹ್ನ 2 ಗಂಟೆಯವರೆಗೆ ಉದ್ಯೋಗ ಮೇಳವನ್ನು ಆಯೋಜಿಸಲಾಗಿದ್ದು, ಕಾರ್ಯಕ್ರಮವನ್ನು ಮದ್ದೂರು ಕ್ಷೇತ್ರದ ಶಾಸಕರಾದ ಕೆ.ಎಂ.ಉದಯ್ ಅವರು ಉದ್ಘಾಟಿಸಲಿದ್ದಾರೆ ಎಂದರು. ಉದ್ಯೋಗ ಮೇಳ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಮಾಜಿ ಶಾಸಕ ಡಿ.ಸಿ.ತಮ್ಮಣ್ಣ, ಮನ್ ಮುಲ್ ನಿರ್ದೇಶಕ ಎಸ್.ಪಿ.ಸ್ವಾಮಿ, ತಹಶೀಲ್ದಾರ್ ಪರಶುರಾಮ್ ಸತ್ತಿಗೇರಿ, ಕೆ.ಬೆಳ್ಳೂರು ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ನಟರಾಜ್, ರೈತ ಮುಖಂಡ ಅಣ್ಣೂರು ಮಹೇಂದ್ರ, ನೈದಿಲೆ ಚಂದ್ರು ಸೇರಿದಂತೆ ಗಣ್ಯರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು. ಜಿಲ್ಲೆಯ ನಿರುದ್ಯೋಗಿ ಯುವಕ,…














