Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ಕೆ ಎಸ್ ಆರ್ ಟಿಸಿ ಜಾಹೀರಾತು ಸಂ.1/2020 ದಿನಾಂಕ:14-02-2020 ಚಾಲಕ-ಕಂ-ನಿರ್ವಾಹಕ ಹುದ್ದೆಗಳ ಹೆಚ್ಚುವರಿ 2ನೇ ಆಯ್ಕೆಪಟ್ಟಿ ಪ್ರಕಟಿಸಲಾಗಿದೆ. ಅಂತಿಮ ಆಯ್ಕೆಪಟ್ಟಿಯನ್ನು ದಿನಾಂಕ: 12-06-2025ರಂದು ಪ್ರಕಟಿಸಲಾಗಿತ್ತು. ಮೇಲ್ಕಂಡ ಜಾಹೀರಾತಿನನ್ವಯ ಚಾಲಕ-ಕಂ-ನಿರ್ವಾಹಕ ಹುದ್ದೆಗೆ ಉಲ್ಲೇಖ-01 ರನ್ವಯ ಪ್ರಕಟಿಸಲಾದ ಅಂತಿಮ ಆಯ್ಕ್ಕೆಪಟ್ಟಿಯಲ್ಲಿ ಸ್ಥಾನ ಪಡೆದು ಕೌನ್ಸಿಲಿಂಗ್ ಮೂಲಕ ವಿಭಾಗಗಳಿಗೆ ನಿಯೋಜಿತರಾಗಿದ್ದ ಅಭ್ಯರ್ಥಿಗಳಲ್ಲಿ ವರದಿ ಮಾಡಿಕೊಳ್ಳದ 143 ಅಭ್ಯರ್ಥಿಗಳ ಸ್ಥಾನದಲ್ಲಿ ಹೆಚ್ಚುವರಿ ಆಯ್ಕೆಪಟ್ಟಿಯನ್ನು ಸಿದ್ದಪಡಿಸಿ ನಿಗಮದ ಕೇಂದ್ರ ಕಛೇರಿ, ಶಾಂತಿ ನಗರ, ಬೆಂಗಳೂರು-27 ಸೂಚನಾ ಫಲಕದಲ್ಲಿ ಮತ್ತು ನಿಗಮದ ವೆಬ್-ಸೈಟ್ ಆದ www.ksrtcjobs.Karnataka.gov.in ನಲ್ಲಿ ಪ್ರಕಟಿಸಲಾಗಿದೆ. ಹೆಚ್ಚುವರಿ ಆಯ್ಕೆಪಟ್ಟಿಯಲ್ಲಿ ಸ್ಥಾನ ಪಡೆದ ಅಭ್ಯರ್ಥಿಗಳಿಗೆ ದಿನಾಂಕ: 23-08-2025 ರಂದು ಬೆಳಿಗ್ಗೆ 10.00 ಗಂಟೆಗೆ ನಿಗಮದ ಕೇಂದ್ರ ಕಛೇರಿ, ಶಾಂತಿನಗರ, ಬೆಂಗಳೂರು-27 ಇಲ್ಲಿ ನಡೆಸುವ ಗಣಕೀಕೃತ ಕೌನ್ಸಿಲಿಂಗ್ ಮೂಲಕ ಮೆರಿಟ್ ಆಧಾರದ ಮೇಲೆ ವಿಭಾಗ /ಘಟಕಗಳಿಗೆ ನೇರವಾಗಿ ನಿಯೋಜನೆ ಮಾಡಲಾಗುವುದು. ವಿಶೇಷ ಸೂಚನೆ: ಸಂಬಂಧಪಟ್ಟ ಅಭ್ಯರ್ಥಿಗಳಿಗೆ ಎಸ್.ಎಂ.ಎಸ್ ಕಳುಹಿಸಲಾಗಿದೆ. ಕೌನ್ಸಿಲಿಂಗ್ಗೆ ಹಾಜರಾಗದ ಅಭ್ಯರ್ಥಿಗಳನ್ನು ಖಾಲಿ ಉಳಿದ ಸ್ಥಾನಗಳಿಗೆ ನಿಗಮದ…
ನವದೆಹಲಿ: ರೈಲ್ವೆ ರಕ್ಷಣಾ ಪಡೆ (Railway Protection Force – RPF) ಸಿಬ್ಬಂದಿಯೊಬ್ಬರು ಪ್ರಯಾಣಿಕನನ್ನು ರೈಲಿನಿಂದ ಹೊರಗೆ ಎಸೆಯಲು ಪ್ರಯತ್ನಿಸಿರುವ ಆಘಾತಕಾರಿ ವೀಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ವೈರಲ್ ಕ್ಲಿಪ್ ಅನ್ನು ಎಕ್ಸ್ ಬಳಕೆದಾರರು ಹಂಚಿಕೊಂಡಿದ್ದಾರೆ. ಆರ್ಪಿಎಫ್ ಅಧಿಕಾರಿ ಯುವ ಪ್ರಯಾಣಿಕನನ್ನು ಸಾಮಾನುಗಳೊಂದಿಗೆ ರೈಲಿನಿಂದ ಹೊರಗೆ ಎಸೆಯಲು ಪ್ರಯತ್ನಿಸುತ್ತಿರುವುದನ್ನು ವೀಡಿಯೊ ತೋರಿಸುತ್ತದೆ. https://twitter.com/nehal076/status/1957694734937338231 ವೀಡಿಯೊದಲ್ಲಿ, ಯುವಕನೊಬ್ಬ ಆರ್ಪಿಎಫ್ ಸಿಬ್ಬಂದಿಗೆ ಕ್ಷಮೆಯಾಚಿಸುತ್ತಿರುವುದನ್ನು ಕಾಣಬಹುದು. ಅಧಿಕಾರಿಯು ಕಪಾಳಮೋಕ್ಷ ಮಾಡಿದಾಗ “ಕ್ಷಮಿಸಿ ಸರ್” ಎಂದು ಹೇಳುತ್ತಿದ್ದಾರೆ. ಈ ಘಟನೆ ಚಲಿಸುವ ರೈಲಿನಲ್ಲಿ ನಡೆದಂತೆ ಕಂಡುಬಂದರೂ, ಈ ಬಗ್ಗೆ ಅಧಿಕೃತ ದೃಢೀಕರಣಕ್ಕಾಗಿ ಕಾಯಲಾಗುತ್ತಿದೆ. ಕೊನೆಯಲ್ಲಿ, ಇತರ ಪ್ರಯಾಣಿಕರು ಆರ್ಪಿಎಫ್ ಸಿಬ್ಬಂದಿಯನ್ನು ಎದುರಿಸುತ್ತಿರುವುದನ್ನು ವೀಡಿಯೊ ತೋರಿಸುತ್ತದೆ. https://twitter.com/rpfnr_/status/1957712509110018110 https://kannadanewsnow.com/kannada/sagar-in-hosanagar-mla-gopalakrishna-bellurus-development-program-is-a-prelude-various-works-at-a-cost-of-1-crore/ https://kannadanewsnow.com/kannada/good-news-for-the-people-of-the-state-applications-invited-for-various-schemes-including-ganga-kalyana-swavalambi-sarathi/
ಬೆಂಗಳೂರು: ಗ್ರಾಮೀಣ ಪುನರ್ವಸತಿ ಯೋಜನೆಯಡಿ ಪುನರ್ವಸತಿ ಕಾರ್ಯಕರ್ತರನ್ನು ನಿಯಮಾನುಸಾರ ಗೌರವಧನದ ಆಧಾರದ ಮೇಲೆ ನೇಮಕ ಮಾಡಿಕೊಂಡಿದ್ದು, ಅವರನ್ನು ಖಾಯಂಗೊಳಿಸಲು ನಿಯಮಗಳಲ್ಲಿ ಅವಕಾಶವಿರುವುದಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಅವರು ಹೇಳಿದರು. ವಿಧಾನಸೌಧದಲ್ಲಿ ನಡೆಯುತ್ತಿರುವ ಮುಂಗಾರು ಅಧಿವೇಶನದ 7ನೇ ದಿನವಾದ ಬುಧವಾರ ವಿಧಾನಸಭೆಯಲ್ಲಿ ಪ್ರಶ್ನೋತ್ತರ ವೇಳೆ ಮೈಸೂರಿನ ಕೃಷ್ಣರಾಜ ಕ್ಷೇತ್ರದ ಶಾಸಕ ಟಿ.ಎಸ್.ಶ್ರೀವತ್ಸ ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಗ್ರಾಮೀಣ ಹಾಗೂ ನಗರ ಪುನರ್ವಸತಿ ಕಾರ್ಯಕರ್ತರ ಮಾಸಿಕ ಗೌರವಧನವನ್ನು 9 ಸಾವಿರ ರೂಪಾಯಿಯಿಂದ 10 ಸಾವಿರ ರೂಪಾಯಿಗಳಿಗೆ ಹಾಗೂ ವಿವಿಧೋದ್ದೇಶ ಪುನರ್ವಸತಿ ಕಾರ್ಯಕರ್ತರ ಮಾಸಿಕ ಗೌರವಧನವನ್ನು 15 ಸಾವಿರ ರೂಪಾಯಿಯಿಂದ 16 ಸಾವಿರ ರೂಪಾಯಿಗೆ ಹೆಚ್ಚಿಸಲಾಗಿದೆ ಎಂದರು. ಪ್ರಸ್ತುತ 5601 ಗ್ರಾಮೀಣ ಪುನರ್ವಸತಿ ಕಾರ್ಯಕರ್ತರು, 450 ನಗರ ಪುನರ್ವಸತಿ ಕಾರ್ಯಕರ್ತರು ಹಾಗೂ 172 ವಿವಿದೋದ್ದೇಶ ಪುನರ್ವಸತಿ ಕಾರ್ಯಕರ್ತರು ಕರ್ತವ್ಯ ನಿರ್ವಹಿಸುತ್ತಿದ್ದಾರೆ ಎಂದು ಸಚಿವರ ಮಾಹಿತಿ ನೀಡಿದರು. ಗ್ರಾಮೀಣ ಪುನರ್ವಸತಿ ಯೋಜನೆಯಡಿಯಲ್ಲಿ ಗೌರವಧನ ಆಧಾರದ ಮೇರೆಗೆ ಕರ್ತವ್ಯ…
ಬೆಂಗಳೂರು: ವಿಧಾನ ಪರಿಷತ್ತಿನಲ್ಲಿ ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳ ತಿದ್ದುಪಡಿ ವಿಧೇಯಕ ಅಂಗೀಕಾರಗೊಂಡಿದೆ. ಹೀಗಾಗಿ ಇನ್ಮುಂದೆ ಆರೋಗ್ಯ ಇಲಾಖೆಯ ವೈದ್ಯರು, ನರ್ಸ್ ಸೇರಿದಂತೆ ಇತರೆ ಸಿಬ್ಬಂದಿಗಳಿಗೆ ಗ್ರಾಮೀಣ ಭಾಗದಲ್ಲಿ ಕರ್ತವ್ಯ ನಿರ್ವಹಿಸುವುದು ಕಡ್ಡಾಯಗೊಂಡಂತೆ ಆಗಿದೆ. ರಾಜ್ಯದ ನಗರ ಪ್ರದೇಶಗಳಲ್ಲಿ ಹಲವು ವರ್ಷಗಳಿಂದ ಸೇವೆ ಸಲ್ಲಿಸುತ್ತಿರುವಂತ ವೈದ್ಯರು, ನರ್ಸ್ ಗಳು ಸೇರಿದಂತೆ ಇತರೆ ಸಿಬ್ಬಂದಿಗಳು ಇನ್ಮುಂದೆ ಕಡ್ಡಾಯವಾಗಿ ಗ್ರಾಮೀಣ ಭಾಗದಲ್ಲಿ ಕರ್ತವ್ಯ ನಿರ್ವಹಿಸಬೇಕಿದೆ. ಇದರ ಸಂಬಂಧ ವಿಧಾನಪರಿಷತ್ತಿನಲ್ಲಿ ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳ (ವೈದ್ಯಾಧಿಕಾರಿಗಳು ಮತ್ತು ಇತರೆ ಸಿಬ್ಬಂದಿ ವರ್ಗಾವಣೆ ನಿಯಂತ್ರಣ) ತಿದ್ದುಪಡಿ ಕಾಯ್ದೆ ವಿಧಾನ ಪರಿಷತ್ ನಲ್ಲಿ ಅಂಗೀಕಾರಗೊಂಡಿದೆ. ಇಂದು ವಿಧಾನ ಪರಿಷತ್ತಿನಲ್ಲಿ ತಿದ್ದುಪಡಿ ವಿಧೇಯಕ ಮಂಡಿಸಿ ಮಾತನಾಡಿದಂತ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು, ನಗರ ಪ್ರದೇಶಗಳ ಸರ್ಕಾರಿ ಆಸ್ಪತ್ರೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವಂತ ವೈದ್ಯರು, ನರ್ಸ್ ಗಳು, ಡಿ ಗ್ರೂಪ್ ಸಿಬ್ಬಂದಿಗಳು ದೀರ್ಘಕಾಲದಿಂದ ಒಂದೇ ಕಡೆ ಕೆಲಸ ಮಾಡುತ್ತಿದ್ದಾರೆ. ಹೀಗಾಗಿ ಕೆಲಸದಲ್ಲಿ ಪಾರದರ್ಶಕತೆ ತರುವ ಸಲುವಾಗಿ ಇವರನ್ನು ವರ್ಗಾವಣೆ ಮಾಡಿದರೇ…
ಬೆಂಗಳೂರು: 2025ರ ಗೌರಿ-ಗಣೇಶ ಹಬ್ಬವನ್ನು ಪರಿಸರ ಸ್ನೇಹಿಯಾಗಿ ಆಚರಿಸುವ ಕುರಿತು ಸರ್ಕಾರ ಹಾಗೂ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯು ಕೆಲವು ನಿರ್ದೇಶನಗಳನ್ನು ನೀಡಿದ್ದು, ಅದರಂತೆ ಕ್ರಮಕೈಗೊಳ್ಳಲು ಹಾಗೂ ಪರಿಸರಸ್ನೇಹಿ ಗಣೇಶ ಹಬ್ಬ ಆಚರಿಸುವ ಸಂಬಂಧ ಈ ಕೆಳಕಂಡಂತೆ ಸೂಚನೆಗಳನ್ನು ನೀಡಿದೆ. ರಾಜ್ಯಾಧ್ಯಂತ ಗಣೇಶ ಮೂರ್ತಿ ಸ್ಥಾಪನೆ, ವಿಸರ್ಜನೆ ವೇಳೆಯಲ್ಲಿ ಆ ನಿಯಮ ಪಾಲನೆ ಕಡ್ಡಾಯಗೊಳಿಸಿದೆ. ಒಂದು ವೇಳೆ ಉಲ್ಲಂಘಿಸಿದ್ರೆ ಕಾನೂನು ಕ್ರಮ ಕೈಗೊಳ್ಳುವುದಾಗಿ ರಾಜ್ಯ ಸರ್ಕಾರ ಎಚ್ಚರಿಕೆ ನೀಡಿದೆ. ರಾಜ್ಯಾಧ್ಯಂತ ಪ್ಲಾಸ್ಟರ್ ಆಫ್ ಪ್ಯಾರೀಸ್ ವಿಗ್ರಹಗಳ ತಯಾರಿಕೆ ಹಾಗೂ ಮಾರಾಟವನ್ನು ನಿಷೇಧಿಸಲಾಗಿದೆ. ಅನಧಿಕೃತವಾಗಿ ತಯಾರಿಸುವ /ಮಾರಾಟ ಮಾಡುವ ವ್ಯಕ್ತಿ/ ಸಂಸ್ಥೆಗಳ ಮೇಲೆ ಕಾನೂನು ಕ್ರಮ ಕೈಗೊಳ್ಳಲಾಗುವುದು. ಹಾಗೂ ಪ್ಲಾಸ್ಟರ್ ಆಫ್ ಪ್ಯಾರೀಸ್ ವಿಗ್ರಹ/ ಬಣ್ಣಲೇಪಿತ ವಿಗ್ರಹಗಳನ್ನು ಯಾವುದೇ ನದಿ, ಕಾಲುವೆ, ಬಾವಿ ಹಾಗೂ ಇತರೆ ಜಲಮೂಲಗಳಲ್ಲಿ ವಿಸರ್ಜಿಸುವುದನ್ನು ನಿಷೇಧಿಸಲಾಗಿದೆ. ನೈಸರ್ಗಿಕ ವಸ್ತುಗಳಿಂದ ತಯಾರಿಸಿದ ಹಾಗೂ ನೈಸರ್ಗಿಕ ಬಣ್ಣಲೇಪಿತ ಮೂರ್ತಿಗಳನ್ನು ಪ್ರತಿಷ್ಠಾಪಿಸಿ, ವೈಜ್ಞಾನಿಕ ರೀತಿಯಲ್ಲಿ ವಿಸರ್ಜಿಸುವುದು. ಗೌರಿಗಣೇಶ ಮೂರ್ತಿಗಳನ್ನು ವಿಸರ್ಜಿಸುವ ಸಂದರ್ಭದಲ್ಲಿ…
ಬೆಂಗಳೂರು: ಧರ್ಮಸ್ಥಳ ಪ್ರಕರಣಕ್ಕೆ ಈಗ ಹೊಸ ಟ್ವಿಸ್ಟ್ ಸಿಕ್ಕಿದೆ. ನೂರಾರು ಶವ ಹೂತ ಪ್ರಕರಣಕ್ಕೆ ಹೊಸ ದೂರುದಾರ ಎಂಟ್ರಿಯಾಗಿದ್ದು, ಮಹೇಶ್ ಶೆಟ್ಟಿ ತಿಮರೋಡಿಯೇ ಅಕ್ರಮವಾಗಿ ಶವ ಹೂತಿರುವ ಆರೋಪ ಮಾಡಿದ್ದಾರೆ. ಅಲ್ಲದೇ ಅವರ ವಿರುದ್ಧ ಎಸ್ಐಟಿಗೆ ದೂರು ನೀಡಿದ್ದಾರೆ. ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ಹೊಸ ಟ್ವಿಸ್ಟ್ ಸಿಕ್ಕಿದೆ. ಹೊಸ ದೂರುದಾರನೊಬ್ಬ ಮಹೇಶ್ ಶೆಟ್ಟಿ ತಿಮರೋಡಿಯೇ ಅಕ್ರಮವಾಗಿ ಶವ ಹೂತಿರುವುದಾಗಿ ಗಂಭೀರ ಆರೋಪ ಮಾಡಿದ್ದಾರೆ. ಇದಷ್ಟೇ ಅಲ್ಲದೇ ಅಕ್ರಮವಾಗಿ ಶವ ಹೂತ ಬಗ್ಗೆ ಎಸ್ಐಟಿ ಪೊಲೀಸ್ ಠಾಣೆಗೆ ತೆರಳಿ ದೂರು ನೀಡಿದ್ದಾರೆ. ಉಜಿರೆ ನಿವಾಸಿ ಭಾಸ್ಕರ್ ನಾಯ್ಕ್ ಎಂಬುವರು ಬೆಳ್ತಂಗಡಿ ಎಸ್ಐಟಿ ಪೊಲೀಸ್ ಠಾಣೆಗೆ ತೆರಳಿ ಹೊಸ ದೂರು ಸಲ್ಲಿಸಿದ್ದಾರೆ. 2018ರಲ್ಲಿ ಉಜಿರೆಯಲ್ಲಿ ಬಿಲ್ಲರೋಡಿ ಎಂಬಲ್ಲಿ ಶವ ಹೂತ ಆರೋಪ ಮಾಡಿದ್ದಾರೆ. ಸೋಂಪ ಯಾನೆ ಬಾಲಕೃಷ್ಣಗೌಡ ಎಂಬುವರ ಶವ ಹೂತ ಬಗ್ಗೆ ದೂರಿನಲ್ಲಿ ಆರೋಪಿಸಿದ್ದಾರೆ. ಮಹೇಶ್ ಶೆಟ್ಟಿ ತಿಮರೋಡಿ ಅವರು ಕೊಲೆ ಮಾಡಿ ಶವ ಹೂತಿರುವ ಬಗ್ಗೆ ಸಂಶಯ ವ್ಯಕ್ತ ಪಡಿಸಿದ್ದು, ಜೆಸಿಬಿ…
ಬೆಂಗಳೂರು : “ತುಂಗಭದ್ರಾ ಅಣೆಕಟ್ಟೆಯ ಎಲ್ಲಾ 33 ಕ್ರೆಸ್ಟ್ ಗೇಟ್ ಗಳನ್ನು ಬದಲಾವಣೆ ಮಾಡಲು ತುಂಗಭದ್ರಾ ಮಂಡಳಿಯವರು ಟೆಂಡರ್ ಕರೆದಿದ್ದಾರೆ. ಈಗಾಗಲೇ ಅಹಮದಾಬಾದ್ ಸಂಸ್ಥೆಯವರಿಗೆ ಗುತ್ತಿಗೆ ನೀಡಲಾಗಿದೆ. ಆರು ಗೇಟ್ ಗಳ ತಯಾರಿ ಕೆಲಸ ನಡೆಯುತ್ತಿದೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ವಿಧಾನಸಭೆಯಲ್ಲಿ ಬುಧವಾರ ತಿಳಿಸಿದರು. “ಈಗಾಗಲೇ ಗೇಟ್ ಗಳ ಫ್ಯಾಬ್ರಿಕೇಷನ್ ಕೆಲಸ ಪ್ರಾರಂಭವಾಗಿದೆ. ಅಗತ್ಯ ಸಲಕರಣೆಗಳು ಬರುತ್ತಿವೆ. ಗದಗ, ಹೊಸಪೇಟೆಯಲ್ಲಿ ಎರಡೆರಡು ಕಡೆ ಗೇಟ್ ಗಳ ತಯಾರಿ ಕೆಲಸ ಮುಂದುವರೆದಿದೆ. ಜಿಂದಾಲ್ ಅವರು ಇದಕ್ಕೆ ಸಹಕಾರ ನೀಡುತ್ತಿದ್ದಾರೆ. ಆಂಧ್ರ ಪ್ರದೇಶದ ಎಂಜಿನಿಯರ್ ಅವರಿಗೆ ಕೆಲಸವನ್ನು ಇನ್ನೂ ವೇಗಗೊಳಿಸಿ ಎಂದು ಸೂಚನೆ ನೀಡಿದ್ದೇನೆ. ಗೇಟ್ ತಯಾರಿಸಲು ಬೇರೆಯವರಿಗೂ ಅವಕಾಶ ನೀಡಿ, ಇದರಿಂದ ಕೆಲಸ ಬೇಗ ಆಗುತ್ತದೆ ಎಂದು ಹೇಳಿದ್ದೇನೆ” ಎಂದು ತಿಳಿಸಿದರು. ಎರಡನೇ ಬೆಳೆಗೆ ನೀರಿಲ್ಲ “ಅಣೆಕಟ್ಟೆಯ ಸುರಕ್ಷತೆ ದೃಷ್ಟಿಯಿಂದ 80 ಟಿಎಂಸಿ ನೀರನ್ನು ಮಾತ್ರ ಸಂಗ್ರಹ ಮಾಡಬೇಕಾದ ಕಾರಣಕ್ಕೆ ಎರಡನೇ ಬೆಳೆಗೆ ಈ ವರ್ಷ ನೀರು ನೀಡಲು ಸಾಧ್ಯವಾಗುತ್ತಿಲ್ಲ. ನೀರು ಕೊಟ್ಟರೆ…
ವಿಧಾನಪರಿಷತ್: ವಿಧಾನಸಭೆಯಲ್ಲಿ ಅಂಗೀಕಾರವಾಗಿದ್ದ ಬಾಲ್ಯವಿವಾಹ ನಿಷೇಧ (ತಿದ್ದುಪಡಿ) ಕಾಯ್ದೆ ಹಾಗೂ ದೇವದಾಸಿ ಪದ್ಧತಿ ನಿಷೇಧ ಕಾಯ್ದೆಗೆ ವಿಧಾನ ಪರಿಷತ್ನಲ್ಲೂ ಗ್ರೀನ್ ಸಿಗ್ನಲ್ ಸಿಕ್ಕಿದೆ. ಇದರೊಂದಿಗೆ ಸಾಮಾಜಿಕ ಪೀಡುಗಾಗಿರುವ ಬಾಲ್ಯ ವಿವಾಹ ಹಾಗೂ ದೇವದಾಸಿ ಪದ್ಧತಿ ನಿಷೇಧಕ್ಕೆ ಸರ್ಕಾರ ದಿಟ್ಟ ಹೆಜ್ಜೆ ಇಟ್ಟಂತಾಗಿದೆ. ಮುಂಗಾರು ಅಧಿವೇಶನದ 7ನೇ ದಿನವಾದ ಬುಧವಾರ ವಿಧಾನ ಪರಿಷತ್ನಲ್ಲಿ ಈ ಎರಡೂ ಕಾಯ್ದೆಗಳ ಬಗ್ಗೆ ಪಕ್ಷಾತೀತವಾಗಿ ಚರ್ಚೆ ನಡೆಸಲಾಯಿತು. ಕರ್ನಾಟಕದಲ್ಲಿ ಬಾಲ್ಯವಿವಾಹ ಎಂಬುದು ಸಾಮಾಜಿಕ ಪೀಡುಗಾಗಿದ್ದು, ಯಾವುದೇ ಸರ್ಕಾರಗಳು ಬಂದರೂ, ಕಠಿಣ ಕಾನೂನು ತಂದರೂ ಇದುವರೆಗೂ ಸಂಪೂರ್ಣ ತಡೆ ಸಾಧ್ಯವಾಗಿಲ್ಲ. ಬಾಲ್ಯವಿವಾಹವನ್ನು ಬೇರು ಸಮೇತ ಕಿತ್ತೊಗೆಯಬೇಕು. ಇದಕ್ಕೆ ಕಡಿವಾಣ ಹಾಕುವ ಉದ್ದೇಶದಿಂದ ಬಾಲ್ಯ ವಿವಾಹ ನಿಷೇಧ (ತಿದ್ದುಪಡಿ) ಕಾಯ್ದೆಯನ್ನು ಜಾರಿಗೆ ತರಲಾಗಿದೆ. ಹೊಸ ಕಾಯ್ದೆ ನಿಯಮ ಪ್ರಕಾರ, ನಿಶ್ಚಿತಾರ್ಥ ಮಾಡಿದರೂ ಕಾನೂನು ಕ್ರಮಕೈಗೊಳ್ಳಲಾಗುವುದು. ಬಾಲ್ಯವಿವಾಹ ಪ್ರಕರಣಗಳು ಕಂಡು ಬಂದರೆ ಒಂದು ಲಕ್ಷ ರೂಪಾಯಿ ದಂಡ ಹಾಗೂ ಎರಡು ವರ್ಷ ಜೈಲು ಶಿಕ್ಷೆ ನೀಡಲಾಗುವುದು. ಜೊತೆಗೆ ಬಾಲ್ಯವಿವಾಹ ಮುಕ್ತ ಗ್ರಾಮ…
ಬೆಂಗಳೂರು: ವೈದ್ಯಕೀಯ, ಎಂಜಿನಿಯರಿಂಗ್ ಸೇರಿದಂತೆ ಇತರ ಎಲ್ಲ ವೃತ್ತಿಪರ ಕೋರ್ಸ್ ಗಳ ಎರಡನೇ ಸುತ್ತಿನ ಪ್ರವೇಶ ಪ್ರಕ್ರಿಯೆ ಬುಧವಾರದಿಂದ ಆರಂಭವಾಗಿದೆ. ಲಭ್ಯ ಸೀಟುಗಳ ವಿವರಗಳನ್ನು ಕೂಡ ವೆಬ್ ಸೈಟ್ ನಲ್ಲಿ ಪ್ರಕಟಿಸಿದ್ದು, ಅಭ್ಯರ್ಥಿಗಳು ಗುರುವಾರದಿಂದ (ಆ.21) ಇಚ್ಛೆ/ಆಯ್ಕೆಗಳನ್ನು ಬದಲಿಸುವ/ತೆಗೆಯುವ ಕೆಲಸವನ್ನೂ ಮಾಡಬಹುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ತಿಳಿಸಿದ್ದಾರೆ. ಆ.25ರವರೆಗೆ ಇಚ್ಛೆ/ಆಯ್ಕೆಗಳನ್ನು ಬದಲಿಸಿಕೊಳ್ಳಲು ಅವಕಾಶ ನೀಡಲಾಗಿದೆ. ಆ.29ರಂದು ಸೀಟು ಹಂಚಿಕೆಯ ತಾತ್ಕಾಲಿಕ ಫಲಿತಾಂಶ ಪ್ರಕಟಿಸಲಾಗುವುದು ಎಂದು ಅವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಆರ್ಯುವೇದ ಕೋರ್ಸ್ ಗಳ ಸೀಟ್ ಮ್ಯಾಟ್ರಿಕ್ಸ್ ಕೂಡ ಪ್ರಕಟಿಸಿದ್ದು, ಈ ಕೋರ್ಸ್ ಗೆ ಮಾತ್ರ ಇಚ್ಚೆ/ಆಯ್ಕೆಗಳನ್ನು ದಾಖಲು ಮಾಡಲು ಅವಕಾಶ ನೀಡಲಾಗಿದೆ ಎಂದು ಅವರು ತಿಳಿಸಿದ್ದಾರೆ. ಮೊದಲ ಸುತ್ತಿನಲ್ಲಿ ಚಾಯ್ಸ್-1 ಆಯ್ಕೆ ಮಾಡಿಕೊಂಡು ಪ್ರವೇಶ ಪಡೆದಿರುವವರನ್ನು ಹೊರತುಪಡಿಸಿ, ಛಾಯ್ಸ್- 2 ಹಾಗೂ 3 ಆಯ್ಕೆ ಮಾಡಿದವರಿಗೂ ಆಯುರ್ವೇದ ಕೋರ್ಸ್ ಗಳ ಪ್ರವೇಶಕ್ಕೆ ಇಚ್ಛೆ/ಆಯ್ಕೆಗಳನ್ನು ದಾಖಲಿಸಲು ಅವಕಾಶ ಇರುತ್ತದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಇದುವರೆಗೂ ಸೀಟು ಹಂಚಿಕೆಯಾಗದಿರುವವರು…
ಬೆಂಗಳೂರು: ಒಳ ಮೀಸಲಾತಿ ಜಾರಿ ವಿಚಾರದಲ್ಲಿ ಮುಖ್ಯಮಂತ್ರಿಗಳು ಮಾನ್ಯ ಸುಪ್ರೀಂ ಕೋರ್ಟಿನ ಆದೇಶವನ್ನೂ ಸರಿಯಾಗಿ ಪಾಲನೆ ಮಾಡಿದಂತೆ ಕಾಣುತ್ತಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ಅವರು ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಜಸ್ಟಿಸ್ ಸದಾಶಿವ ಆಯೋಗದ ವರದಿಯನ್ನೂ ಸರಿಯಾಗಿ ಪಾಲಿಸಿದಂತೆ ಕಾಣುತ್ತಿಲ್ಲ. ಅದೇರೀತಿ ನ್ಯಾ.ನಾಗಮೋಹನ್ ದಾಸ್ ವರದಿಯನ್ನೂ ಸರಿಯಾಗಿ ಪಾಲಿಸಿದಂತೆ ಕಾಣುತ್ತಿಲ್ಲ ಎಂದು ಆಕ್ಷೇಪಿಸಿದರು. ನ್ಯಾ.ನಾಗಮೋಹನ್ ದಾಸ್ ವರದಿಯಲ್ಲಿ ಎ, ಬಿ, ಸಿ, ಡಿ, ಇ ಎಂದು 5 ವರ್ಗಗಳನ್ನು ಮಾಡಿದ್ದರು. ಅದನ್ನು ಎ, ಬಿ, ಸಿ ಎಂದು ಮಾಡಿದ್ದಾರೆ ಎಂದು ಆರೋಪಿಸಿದರು. ನರೇಂದ್ರ ಸ್ವಾಮಿ ಮೊದಲಾದವರ ಮೂಲಕ ನೀವೇ ವಿಂಗಡಣೆ ಮಾಡುವುದಾದರೆ, ಸರಕಾರ ಮತ್ತು ಸಿದ್ದರಾಮಯ್ಯನವರಿಗೆ ಜಸ್ಟಿಸ್ ಸದಾಶಿವ ಆಯೋಗ, ನ್ಯಾ.ನಾಗಮೋಹನ್ ದಾಸ್ ಆಯೋಗಕ್ಕೆ ನೂರಾರು ಕೋಟಿ ಖರ್ಚು ಮಾಡುವ ಅವಶ್ಯಕತೆ ಏನಿತ್ತು ಎಂದು ಕೇಳಿದರು. ಹಿಂದೆ ಬಸವರಾಜ ಬೊಮ್ಮಾಯಿಯವರ ನೇತೃತ್ವದ ಬಿಜೆಪಿ ಸರಕಾರ ಅಧಿಕಾರದಲ್ಲಿ ಇದ್ದಾಗ ಅವರು ಪರಿಶಿಷ್ಟ ಜಾತಿ,…