Subscribe to Updates
Get the latest creative news from FooBar about art, design and business.
Author: kannadanewsnow09
ಕೋಲ್ಕತಾ: ಇಲ್ಲಿನ ಸೋನಾಗಾಚಿ ರೆಡ್ ಲೈಟ್ ಪ್ರದೇಶದ ಮಹಿಳೆಯೊಬ್ಬರು ಯುವ ವೈದ್ಯೆಯ ಭೀಕರ ಅತ್ಯಾಚಾರ ಮತ್ತು ಕೊಲೆಯ ನಂತರ ಹೃದಯ ವಿದ್ರಾವಕ ಹೇಳಿಕೆಯೊಂದಿಗೆ ನೆಟ್ಟಿಗರ ಹೃದಯಗಳನ್ನು ಗೆದ್ದಿದ್ದಾರೆ. ಲೈಂಗಿಕ ಕಾರ್ಯಕರ್ತ ಮಹಿಳೆ ಕೆಲವು ನಿಮಿಷಗಳ ಕಾಮಕ್ಕಾಗಿ ಮಹಿಳೆಯರನ್ನು ಅತ್ಯಾಚಾರ ಮತ್ತು ಕೊಲ್ಲುವ ಬದಲು ಕೆಂಪು ದೀಪದ ಪ್ರದೇಶಗಳಿಗೆ ಭೇಟಿ ನೀಡುವಂತೆ ಪುರುಷರಿಗೆ ಸಲಹೆ ನೀಡಿದರು. ನಿನಗೆ ಹೆಂಗಸಿನ ಮೇಲೆ ಅಷ್ಟೊಂದು ವ್ಯಾಮೋಹವಿದ್ದರೆ ನಮ್ಮ ಬಳಿಗೆ ಬಾ. ದಯವಿಟ್ಟು ಮಹಿಳೆಯರ ಜೀವನವನ್ನು ಹಾಳು ಮಾಡಬೇಡಿ. ಅತ್ಯಾಚಾರದಂತ ಕೀಚಕ ಕೃತ್ಯ ನಡೆಸುವ ಮೂಲಕ ಅವರ ಜೀವನವನ್ನು ನಾಶಪಡಿಸಬೇಡಿ ಎಂದು ಅವರು ಹೇಳಿದರು. ನಾವು ಇಲ್ಲಿ ಇಷ್ಟು ದೊಡ್ಡ ಕೆಂಪು ದೀಪ ಪ್ರದೇಶವನ್ನು ಹೊಂದಿದ್ದೇವೆ. ನೀವು ಇಲ್ಲಿಗೆ ಬರಬಹುದು. ಇಲ್ಲಿ 20-50 ರೂ.ಗೆ ಕೆಲಸ ಮಾಡುವ ಹುಡುಗಿಯರು ಇದ್ದಾರೆ. ಆದ್ದರಿಂದ, ದಯವಿಟ್ಟು ಕೆಲಸಕ್ಕೆ ಹೋಗುವ ಹುಡುಗಿಯರನ್ನು ಗುರಿಯಾಗಿಸಬೇಡಿ. ನಾವು ಮನಸ್ಥಿತಿಯನ್ನು ಬದಲಾಯಿಸಬೇಕಾಗಿದೆ ಎಂದು ಅವರು ಹೇಳಿದರು. https://twitter.com/lamist17/status/1826140740696609056 ಹೆಚ್ಚಿನ ಅತ್ಯಾಚಾರಿಗಳು ಅನುಭೂತಿ ಅಥವಾ ಪಶ್ಚಾತ್ತಾಪದ ಕೊರತೆ, ಪ್ರಚೋದನೆ,…
ಮಾರ್ವಾಡಿಗಳು ಈ ಲಕ್ಷ್ಮೀ ಕುಬೇರ ಪೂಜೆಯನ್ನು ಬಹಳ ವಿಮರ್ಶಾತ್ಮಕವಾಗಿ ನೆರವೇರಿಸುತ್ತಾರೆ. ನಮ್ಮ ಮನೆಯಲ್ಲಿ ಲಕ್ಷ್ಮೀ ಕುಬೇರ ಪೂಜೆಯನ್ನು ಅತ್ಯಂತ ವಿಮರ್ಶಾತ್ಮಕವಾಗಿ ಮಾಡುವುದಾಗಲಿ ಅಥವಾ ಕುಬೇರನನ್ನು ಅತ್ಯಂತ ಸರಳವಾಗಿ ಪೂಜಿಸುವುದಾಗಲಿ ಅದರೊಂದಿಗೆ ಈ ಮಂತ್ರವನ್ನು ಪಠಿಸಬೇಕು. ಈ ಕುಬೇರ ಪೂಜೆಯನ್ನು ಯಂತ್ರವನ್ನು ಇಟ್ಟುಕೊಂಡು, ಪೆಟ್ಟಿಗೆಯನ್ನು ಇಟ್ಟು, ಮಂತ್ರಗಳನ್ನು ಪಠಿಸುವ ಮೂಲಕ ಬಹಳ ವಿಮರ್ಶಾತ್ಮಕವಾಗಿ ನಡೆಸಲಾಗುತ್ತದೆ. ಅಷ್ಟರ ಮಟ್ಟಿಗೆ ಈ ಪೂಜೆ ಮಾಡಬಹುದೋ ಗೊತ್ತಿಲ್ಲ. ಆದರೆ ಮಂಗಳವಾರ ಮತ್ತು ಶುಕ್ರವಾರ ಸಂಜೆ ನಮ್ಮ ಮನೆಯಲ್ಲಿ ಈ ಪೂಜೆಯನ್ನು ಮಾಡಬಹುದಷ್ಟೆ. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564 ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ…
ಬೆಂಗಳೂರು: ಹಾಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಲೋಕಾಯುಕ್ತದಲ್ಲಿ 61 ಕೇಸ್ ದಾಖಲಾಗಿವೆ. ಹಾಗಾದರೆ, ಅವರು ಎಷ್ಟು ಸಲ ರಾಜೀನಾಮೆ ಕೊಡಬೇಕು ಎಂದು ಪ್ರಶ್ನಿಸಿದ ಸಚಿವರು; ಸಿದ್ದರಾಮಯ್ಯ ವಿರುದ್ಧದ 61 ಕೇಸುಗಳ ಪೈಕಿ 50 ಕೇಸುಗಳ ತನಿಖೆಯೇ ಆಗಿಲ್ಲ ಎಂದು ಪತ್ರಿಕಾ ವರದಿ ಹೇಳುತ್ತದೆ. ಇದಕ್ಕೆ ಸಿದ್ದರಾಮಯ್ಯ ಏನು ಹೇಳುತ್ತಾರೆ ಎಂದು ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಪ್ರಶ್ನಿಸಿದರು. ಬೆಂಗಳೂರಿನಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು ನಾನು ಕಪ್ಪು ಚುಕ್ಕೆ ಇಲ್ಲದ ನಾಯಕ, ಹಿಂದುಳಿದ ನಾಯಕ ಎಂದು ಸಿಎಂ ಹೇಳಿಕೊಳ್ಳುತ್ತಾರೆ. ಹಾಗಾದರೆ ಇವರು ಐದು ವರ್ಷ ಸಿಎಂ ಆಗಿದ್ದಾಗ ಲೋಕಾಯುಕ್ತವನ್ನು ಏನು ಮಾಡಿದರು? ಎಸಿಬಿಯನ್ನು ಯಾಕೆ ಹುಟ್ಟು ಹಾಕಿದರು? ಎಂದು ಖಾರವಾಗಿ ಪ್ರಶ್ನಿಸಿದರು. ಸಿಎಂ ಮನೆಯಿಂದಲೇ ನನಗೆ ಮಾಹಿತಿ ಬರುತ್ತಿದೆ ನಾನು ಈ ಸರಕಾರದ ಕಾನೂನು ಬಾಹಿರ ಕೃತ್ಯಗಳ ಬಗ್ಗೆ ಮೊದಲ ದಿನದಿಂದಲೂ ಮಾತನಾಡುತ್ತಲೇ ಇದ್ದೇನೆ. ಇದನ್ನು ಸಹಿಸಲಾಗದೆ ಸರಕಾರದಲ್ಲಿ ದೊಡ್ಡ ಮಟ್ಟದ ಒಳಸಂಚು ನಡೆಯುತ್ತಿದೆ. ನನಗೆ ಖುದ್ದು ಸಿಎಂ ಮನೆಯಿಂದಲೇ ಮಾಹಿತಿ ಬರುತ್ತಿದೆ.…
ಬೆಂಗಳೂರು: ನಾನು ಕೇಂದ್ರ ಸಚಿವನಾಗಿದ್ದೇನೆ ಎಂಬ ಹೊಟ್ಟೆಕಿಚ್ಚಿಗೆ ರಾಜ್ಯ ಕಾಂಗ್ರೆಸ್ ಸರ್ಕಾರ ನನ್ನ ಮೇಲೆ ಹಗೆ ಸಾಧಿಸುತ್ತಿದೆ. ಯಾವತ್ತೊ ಸತ್ತು ಹೋದ ಪ್ರಕರಣವನ್ನು, ನನ್ನ ಸಹಿ ಇಲ್ಲದ ಪ್ರಕರಣವನ್ನು ಇಟ್ಟುಕೊಂಡು ನನ್ನ ಮೇಲೆ ಪ್ರಯೋಗ ಮಾಡುತ್ತಿದೆ ಎಂದು ಕೇಂದ್ರದ ಭಾರೀ ಕೈಗಾರಿಕೆ ಮತ್ತು ಉಕ್ಕು ಖಾತೆಯ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಆರೋಪಿಸಿದರು. ಅಲ್ಲದೆ; ಸಾಯಿ ವೆಂಕಟೇಶ್ವರ ಕಂಪನಿಗೆ ನಾನು ಸೂಜಿ ಮೊನೆಯಷ್ಟು ಜಾಗವನ್ನೂ ನೀಡಿಲ್ಲ. ಅವರು ಗಣಿಗಾರಿಕೆಯನ್ನೂ ಮಾಡಿಲ್ಲ, ಕೇಂದ್ರ ಸರ್ಕಾರ ಅವರಿಗೆ ಅನುಮತಿಯನ್ನೇ ಕೊಟ್ಟಿಲ್ಲ, ರಾಜ್ಯದ ಬೊಕ್ಕಸಕ್ಕೆ ನಯಾಪೈಸೆ ನಷ್ಟವೂ ಆಗಿಲ್ಲ. ವಿಷಯ ಹೀಗಿದ್ದ ಮೇಲೆ ಎಸ್ ಐಟಿ ರಾಜ್ಯಪಾಲರಿಂದ ಪ್ರಾಸಿಕ್ಯೂಶನ್ ಗೆ ಹೇಗೆ ಅನುಮತಿ ಕೋರುತ್ತದೆ? ಎಂದು ಕೇಂದ್ರ ಸಚಿವರು ಪ್ರಶ್ನಿಸಿದರು. ಬೆಂಗಳೂರಿನಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು; ರಾಜ್ಯ ಸರ್ಕಾರ ನನ್ನ ವಿರುದ್ಧ ಹೂಡಿರುವ ಷಡ್ಯಂತ್ರಕ್ಕೆ ಹೆದರಿ ಓಡುವ ಜಾಯಮಾನ ನನ್ನದಲ್ಲ. ನಾನು ಕೂಡ ಕಾನೂನಾತ್ಮಕವಾಗಿಯೇ ಹೋರಾಟ ಮಾಡುತ್ತೇನೆ ಎಂದು ಹೇಳಿದರು. ಸಾಯಿ ವೆಂಕಟೇಶ್ವರ ಮಿನರಲ್ಸ್ ವಿಚಾರದಲ್ಲಿ…
ಕಲಬುರ್ಗಿ: ಜಿಲ್ಲೆಯ ನಾಗಾವಿ ಮತ್ತು ಕಾಳಗಿಯಲ್ಲಿರುವ ಐತಿಹಾಸಿಕ ಸ್ಮಾರಕಗಳನ್ನು ಸಂರಕ್ಷಿಸುವದರೊಂದಿಗೆ ಈ ಎರಡು ಸ್ಥಳಗಳನ್ನು ಪ್ರವಾಸೋದ್ಯಮ ದೃಷ್ಟಿಯಿಂದಲೂ ಅಭಿವೃದ್ಧಿ ಪಡಿಸಲು ಯೋಜನೆ ರೂಪಿಸಲಾಗಿದೆ ಎಂದು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಪ್ರವಾಸೋದ್ಯಮ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಚಿವರು ಕಲಬುರಗಿ ಜಿಲ್ಲೆಯ ನಾಗಾವಿ, ಸನ್ನತಿ, ಕಾಳಗಿ, ಮಳಖೇಡ, ಶಹಬಾದ್, ಫಿರೋಜಾಬಾದ್ ಹಂಪಾಪುರ, ಕನಗನಹಳ್ಳಿ ಐತಿಹಾಸಿಕ ಸ್ಮಾರಕಗಳನ್ನು ಹೊಂದಿದೆಯೆಂದು ಹೇಳಿದರಲ್ಲದೆ ಈ ಸ್ಮಾರಕಗಳನ್ನು ಮರಳಿ ಹಿಂದಿನ ರೂಪಕ್ಕೆ ತರುವದರೊಂದಿಗೆ ಮುಂದಿನ ಪೀಳಿಗೆಗಾಗಿ ಈ ಸ್ಥಳಗಳನ್ನು ಸಂರಕ್ಷಿಸಲಾಗುತ್ತಿದೆ. ಇತಿಹಾಸದ ಬಗ್ಗೆ ಕುತೂಹಲ ಇರುವವರಿಗೆ ಇಲ್ಲಿನ ಐತಿಹಾಸಿಕ ಮಹತ್ವವನ್ನು ದಾಖಲೆ ಮಾಡಲಾಗುವುದು ಹಾಗೂ ಪ್ರವಾಸೋದ್ಯಮ ದೃಷ್ಟಿಯಂದ ರಸ್ತೆ, ನೀರು, ಶೌಚಾಲಯ ಮತ್ತಿತರ ಸೌಲಭ್ಯಗಳನ್ನು ರೂಪಿಸಲಾಗುವುದು ಎಂದು ಹೇಳಿದರು. ಕಾಳಗಿಯಲ್ಲಿನ ನರಸಿಂಗಸ್ವಾಮಿ, ಸೂರ್ಯನಾರಾಯಣಸ್ವಾಮಿ ಹಾಗೂ ಕಾಳೇಶ್ವರ ದೇಗುಲಗಳು ಐತಿಹಾಸಿಕ ಮಹತ್ವವನ್ನು ಹೊಂದಿದ್ದು, ಸಾವಿರಾರು ಮಂದಿ ಈ ದೇಗುಲಗಳಿಗೆ ಭೇಟಿ ನೀಡುತ್ತಾರೆ,…
ಬೆಂಗಳೂರು: ನಾನು ಆರ್ ಟಿ ಐ ಅಡಿಯಲ್ಲಿ ಮುಡಾಕ್ಕೆ ಮೂಲ ದಾಖಲೆಗಳನ್ನು ನೀಡುವಂತೆ ಅರ್ಜಿ ಸಲ್ಲಿಸಿದ್ದೆ. ಆದರೇ ನನಗೆ ನೀಡಿಲ್ಲ. ಇಂತಹ ದಾಖಲೆಗಳನ್ನು ಸಿಎಂ ಸಿದ್ಧರಾಮಯ್ಯ ಅವರು ಸುದ್ದಿಗೋಷ್ಠಿಯಲ್ಲಿ ಬಿಡುಗಡೆ ಮಾಡಿದ್ದಾರೆ. ಸಿದ್ಧರಾಮಯ್ಯ ಅವರ ಬಳಿಯಲ್ಲೇ ಮುಡಾ ಕೇಸ್ ಗೆ ಸಂಬಂಧಿಸಿದಂತ ಮೂಲ ದಾಖಲೆಗಳು ಇರುವುದಾಗಿ ಆರ್ ಟಿಐ ಕಾರ್ಯಕರ್ತ ಗಂಗರಾಜು ಎಂಬುವರು ಗಂಭೀರ ಆರೋಪ ಮಾಡಿದ್ದಾರೆ. ಈ ಕುರಿತಂತೆ ಇಂದು ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಸಿಎಂ ಸಿದ್ಧರಾಮಯ್ಯ ಅವರ ಬಳಿಯಲ್ಲೇ ಮುಡಾ ಮೂಲ ದಾಖಲೆಗಳಿವೆ. ಈ ಬಗ್ಗೆ ಮುಖ್ಯ ಕಾರ್ಯದರ್ಶಿ, ಡಿಸಿ, ಮುಡಾ ಆಯುಕ್ತರು, ಮುಡಾ ಅಧ್ಯಕ್ಷರು ಸೇರಿ ಹಲವರಿಗೆ ಪತ್ರ ಬರೆಯಲಾಗಿದೆ ಎಂದರು. ಆರ್ ಟಿ ಐ ಅಡಿಯಲ್ಲಿ ಮುಡಾಗೆ ಸಂಬಂಧಿಸಿದಂತ ದಾಖಲೆಗಳನ್ನು ಕೇಳಿದ್ದೆ. ಆದರೇ ಮುಡಾ ಕಚೇರಿಯಿಂದ ಈವರೆಗೆ ಕೊಟ್ಟಿಲ್ಲ. ಬದಲಿಗೆ ಆ ದಾಖಲೆಗಳನ್ನೇ ಸಿದ್ಧರಾಮಯ್ಯ ಬಿಡುಗಡೆ ಮಾಡಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಸಿಎಂ ದಾಖಲೆ ಬಿಡುಗಡೆ ಮಾಡಿದ್ದಾರೆ. ಸಿದ್ಧರಾಮಯ್ಯ ಅವರಿಗೆ ಆ ದಾಖಲೆಗಳು ಸಿಕ್ಕಿದ್ದು ಹೇಗೆ? ಅಥವಾ ಆ…
ಬೆಂಗಳೂರು: ಕೆಸೆಟ್-2024ರ ಪರೀಕ್ಷೆಗೆ ಅರ್ಜಿ ಸಲ್ಲಿಕೆ ದಿನಾಂಕವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ವಿಸ್ತರಿಸಿ ಆದೇಶಿಸಿದೆ. ಈ ಮೂಲಕ ಕೆಸೆಟ್ ಪರೀಕ್ಷೆಗೆ ಅರ್ಜಿ ಸಲ್ಲಿಕೆ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್ ನೀಡಲಾಗಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಕೆಇಎ ಕಾರ್ಯನಿರ್ವಾಹಕ ನಿರ್ದೇಶಕರು ಮಾಹಿತಿ ನೀಡಿದ್ದು, ಕರ್ನಾಟಕ ಸರ್ಕಾರದ ನಿರ್ದೇಶನದಂತೆ, ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ-2024 (ಕೆಸೆಟ್-2024) ಗೆ ಸಂಬಂಧಿಸಿದಂತೆ ದಿನಾಂಕ 13.07.2024 ರಂದು ವಿವರವಾದ ಅಧಿಸೂಚನೆ ಹೊರಡಿಸಿ ದಿನಾಂಕ 22.08.2024 ರ ವರೆಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕವನ್ನು ನಿಗದಿಗೊಳಿಸಲಾಗಿತ್ತು ಎಂದಿದ್ದಾರೆ. ಆದರೆ ಕೆಲವು ಅಭ್ಯರ್ಥಿಗಳು ಪ್ರಾಧಿಕಾರಕ್ಕೆ ಮನವಿ ಸಲ್ಲಿಸಿ ಅರ್ಜಿ ಸಲ್ಲಿಕೆಯನ್ನು ವಿಸ್ತರಿಸುವಂತೆ ಕೋರಿದ್ದರಿಂದ, ಅರ್ಜಿ ಸಲ್ಲಿಕೆಯ ಕೊನೆಯ ದಿನಾಂಕವನ್ನು ಈ ಕೆಳಕಂಡಂತೆ ವಿಸ್ತರಿಸಲಾಗಿದೆ ಎಂದು ತಿಳಿಸಿದ್ದಾರೆ. 1) ಆನ್ಲೈನ್ ಮೂಲಕ ಅರ್ಜಿ ಸಲ್ಲಿಕೆಗೆ ವಿಸ್ತರಿಸಲಾದ ಕೊನೆಯ ದಿನಾಂಕ : 28.08.2024 2) ಆನ್ಲೈನ್ ಮೂಲಕ ಶುಲ್ಕ ಪಾವತಿಸಲು ಕೊನೆಯ ದಿನಾಂಕ : 30.08.2024 ಸೂಚನೆ : ಅರ್ಹತಾ ನಿಬಂಧನೆಗಳು ಮತ್ತು…
ಬೆಂಗಳೂರು: ರಾಜ್ಯದಲ್ಲಿ 200 ಕೋಟಿ ರೂ. ಬಂಡವಾಳ ಹೂಡಿಕೆಗೆ ತೈವಾನ್ ನ ಬೆಸ್ಟೆಕ್ ಪವರ್ ಎಲೆಕ್ಟ್ರಾನಿಕ್ಸ್ ಕಂಪನಿ ಆಸಕ್ತಿ ತಾಳಿದ್ದು, ಬೆಂಗಳೂರಿನ ಸುತ್ತಮುತ್ತ ಕಾರ್ಖಾನೆ ಸ್ಥಾಪಿಸಲು ಆಸಕ್ತಿ ತೋರಿದ್ದು ಅದಕ್ಕೆ ರಾಜ್ಯ ಸರಕಾರವು ಸಂಪೂರ್ಣ ಸಹಕಾರ ನೀಡಲಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಹೇಳಿದ್ದಾರೆ. ಮಂಗಳವಾರ ಇಲ್ಲಿ ಬೆಸ್ಟೆಕ್ ಉದ್ಯಮ ಸಮೂಹದ ಅಧ್ಯಕ್ಷ ಮೈಕ್ ಚೆನ್ ಮತ್ತು ಉಪಾಧ್ಯಕ್ಷ ತೆರೇಸಾ ಡಾಂಗ್ ತಮ್ಮನ್ನು ಭೇಟಿಯಾದ ಬಳಿಕ ಅವರು ಈ ಮಾಹಿತಿ ನೀಡಿದ್ದಾರೆ. https://twitter.com/KarnatakaVarthe/status/1826222621341495533 ತೈವಾನ್ ಮೂಲದ ಕಂಪನಿಯ ಈ ಯೋಜನೆಯಿಂದ 5,000 ಉದ್ಯೋಗಗಳು ಸೃಷ್ಟಿಯಾಗಲಿವೆ. ಮೂಲಸೌಕರ್ಯ ಅಭಿವೃದ್ಧಿ ಬಳಿಕ ಮೂರು ವರ್ಷಗಳಲ್ಲಿ ಕಂಪನಿಯು ಯೋಜನೆಗೆ ಹಂತಹಂತವಾಗಿ ಬಂಡವಾಳ ಹೂಡಲಿದೆ ಎಂದು ಅವರು ವಿವರಿಸಿದ್ದಾರೆ. ಬೆಸ್ಟೆಕ್ ಕಂಪನಿಯು ಅಡಾಪ್ಟರ್, ಸಿ-ಪಿನ್, ಇ.ವಿ. ಮತ್ತು ಲ್ಯಾಪ್ಟಾಪ್ ಚಾರ್ಜರ್, ಕೇಬಲ್ ಇತ್ಯಾದಿಗಳನ್ನು ಉತ್ಕೃಷ್ಟ ಗುಣಮಟ್ಟದೊಂದಿಗೆ ತಯಾರಿಸಲಿದೆ. ಈ ಮೂಲಕ ಕಂಪನಿಯು ವಾರ್ಷಿಕವಾಗಿ 2,500 ಕೋಟಿ ರೂಪಾಯಿ ವಹಿವಾಟು ನಡೆಸಲಿದೆ…
ಆಲಮಟ್ಟಿ: ಗಂಗಾ ಆರತಿ ಮಾದರಿಯಲ್ಲಿ ಕೃಷ್ಣಾ ಆರತಿ ಕಾರ್ಯಕ್ರಮ ನಡೆಸಬೇಕು ಎಂದು ಸಚಿವರಾದ ಎಂ.ಬಿ.ಪಾಟೀಲ್, ಶಿವಾನಂದ ಪಾಟೀಲ್ ಮತ್ತು ಆರ್.ಬಿ.ತಿಮ್ಮಾಪುರ ಅವರು ಸೇರಿದಂತೆ ಶಾಸಕರು ಮನವಿ ಮಾಡಿದ್ದಾರೆ. ತುಂಗಾ ಆರತಿ ಈಗಾಗಲೇ ನಡೆಯುತ್ತಿದೆ. ಕಾವೇರಿ ಆರತಿ ನಡೆಸಲು ಸಮಿತಿ ರಚನೆ ಮಾಡಲಾಗಿದೆ. ಅದೇ ರೀತಿ ಕೃಷ್ಣಾ ಆರತಿಯನ್ನು ಪರಿಗಣಿಸಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹೇಳಿದರು. ಲಾಲ್ ಬಹದ್ದೂರ್ ಶಾಸ್ತ್ರೀ (ಆಲಮಟ್ಟಿ) ಅಣೆಕಟ್ಟಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜೊತೆಗೂಡಿ ಬಾಗಿನ ಅರ್ಪಿಸಿದ ನಂತರ ನಡೆದ ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದ ಅವರು ಆಲಮಟ್ಟಿ ಅಣೆಕಟ್ಟಿನ ಉದ್ಯಾನವನ ಉತ್ತಮವಾಗಿದೆ. ಪ್ರವಾಸಿಗರ ಸಂಖ್ಯೆಯೂ ಹೆಚ್ಚಿದೆ. ಇನ್ನಷ್ಟು ಪ್ರವಾಸಿಗರನ್ನು ಆಕರ್ಷಿಸಲು ಏನು ಕೆಲಸ ಮಾಡಬೇಕೋ ಅದನ್ನು ಸರ್ಕಾರ ಮಾಡಲಿದೆ” ಎಂದರು. ತಮಿಳುನಾಡಿಗೆ ಹೆಚ್ಚುವರಿ 100 ಟಿಎಂಸಿ ನೀರು ಹರಿದಿದೆ “ಸಾಮಾನ್ಯ ವರ್ಷದಲ್ಲಿ 177.25 ಟಿಎಂಸಿ ಕಾವೇರಿ ನೀರನ್ನು ತಮಿಳುನಾಡಿಗೆ ಬಿಡಬೇಕಿತ್ತು. ನಿಗದಿತ ನೀರಿಗಿಂತ 100 ಟಿಎಂಸಿ ಹೆಚ್ಚುವರಿ ನೀರನ್ನು ಹರಿಸಲಾಗಿದೆ. ನಮ್ಮಲ್ಲಿ ಹೆಚ್ಚುವರಿ ನೀರನ್ನು ಹಿಡಿದಿಟ್ಟುಕೊಳ್ಳಲು ಆಗುವುದಿಲ್ಲ.…
ಆಲಮಟ್ಟಿ : “ಅಣೆಕಟ್ಟುಗಳ ಸುರಕ್ಷತೆ ಪರಿಶೀಲನೆಗಾಗಿ ಕೇಂದ್ರ ತಂಡ ಹಾಗೂ ಮಾಜಿ ಸಿಡ್ಬ್ಲೂ ಸಿ ಸದಸ್ಯರನ್ನು ಒಳಗೊಂಡ ತಾಂತ್ರಿಕ ಸಮಿತಿ ರಚನೆ ಮಾಡಲಾಗಿದೆ. ರಾಜ್ಯದ ಎಲ್ಲಾ ಅಣೆಕಟ್ಟುಗಳನ್ನು ಪರಿಶೀಲಿಸಲು ಈ ತಂಡ ಈಗಾಗಲೇ ರಾಜ್ಯದಾದ್ಯಂತ ಪ್ರವಾಸ ಮಾಡುತ್ತಿದೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿಳಿಸಿದರು. ಲಾಲ್ ಬಹದ್ದೂರ್ ಶಾಸ್ತ್ರೀ (ಆಲಮಟ್ಟಿ) ಅಣೆಕಟ್ಟಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜೊತೆಗೂಡಿ ಬಾಗಿನ ಅರ್ಪಿಸಿದ ನಂತರ ನಡೆದ ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದ ಅವರು “ಸಮಿತಿಯ ವರದಿಯ ಆದಾರದ ಮೇಲೆ ಅಣೆಕಟ್ಟುಗಳ ಸುರಕ್ಷತೆಗೆ ಸರ್ಕಾರ ಕೆಲಸ ಮಾಡಲಿದೆ. ನಾರಾಯಣಪುರ ಅಣೆಕಟ್ಟಿನ ಗೇಟುಗಳನ್ನು ಆಧುನಿಕ ತಂತ್ರಜ್ಞಾನ ಬಳಸಿ ಅಳವಡಿಸಲಾಗಿದೆ”ಎಂದು ತಿಳಿಸಿದರು. ಕೃಷ್ಣ ಮೇಲ್ದಂಡೆ ವಿಚಾರದಲ್ಲಿ ಭೂಮಿ ಕಳೆದು ಕೊಂಡವರು ಹಾಗೂ ಭೂಸ್ವಾಧೀನ ವಿಚಾರವಾಗಿ ಈ ಭಾಗದ ಮೂರು ಜನ ಮಂತ್ರಿಗಳು ಹಾಗೂ ಶಾಸಕರು ಪ್ರಸ್ತಾವನೆ ಮಾಡಿದ್ದಾರೆ. ಎಲ್ಲರ ಬಳಿ ಯಾವ, ಕೆಲಸಗಳನ್ನು ಮಾಡಬಹುದು ಎಂದು ಚರ್ಚೆ ನಡೆಸಿ ಕ್ರಮ ತೆಗೆದುಕೊಳ್ಳಲಾಗುವುದು. ಭೂಮಿ ಕಳೆದುಕೊಂಡಿರುವ ಸಂತ್ರಸ್ತರ ವಿಚಾರವಾಗಿ ಪ್ರತ್ಯೇಕ ಸಭೆ ಕರೆದು, ಕಾನೂನು…