Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ರಾಜ್ಯ ಸರ್ಕಾರದಿಂದ ರಾಜ್ಯದ ಖಾಸಗಿ ಅನುದಾನಿತ ಪ್ರೌಢಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳಲ್ಲಿ ನಿಧನ, ನಿವೃತ್ತಿ, ರಾಜೀನಾಮೆ ಮತ್ತು ಇತರೆ ಕಾರಣಗಳಿಂದ ತೆರವಾದ ಖಾಲಿ ಇರುವ ಬೋಧಕ ಹುದ್ದೆಗಳ ಭರ್ತಿಗೆ ಅನುಮತಿಸಿ ಆದೇಶಿಸಿದೆ. ಈ ಮೂಲಕ ಅನುದಾನಿತ ಶಾಲಾ ಶಿಕ್ಷಕರು, ಕಾಲೇಜುಗಳ ಉಪನ್ಯಾಸಕರ ಹುದ್ದೆಗಳ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್ ನೀಡಿದೆ. ಈ ಕುರಿತಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಅವರು ನಡವಳಿಯನ್ನು ಹೊರಡಿಸಿದ್ದಾರೆ. ಅದರಲ್ಲಿ ದಿನಾಂಕ:31-03-2008 ರಲ್ಲಿ ಖಾಸಗಿ ಅನುದಾನಿತ ಪದವಿ ಪೂರ್ವ ಕಾಲೇಜುಗಳಲ್ಲಿ 401 ಖಾಲಿ ಹುದ್ದೆಗಳನ್ನು ತುಂಬಲು ಅನುಮತಿ ನೀಡಲಾಗಿದ್ದು, ಈ ಪೈಕಿ ವಿವಿಧ ಕಾರಣದಿಂದ ತುಂಬದೇ ಬಾಕಿ ಇರುವ 189 ಹುದ್ದೆಗಳನ್ನು ಮತ್ತು ದಿನಾಂಕ:01-07- 2008 ರ ನಂತರ ನಿಧನ, ನಿವೃತ್ತಿ, ರಾಜಿನಾಮೆ, ಸಕ್ಷಮ ಪ್ರಾಧಿಕಾರದಿಂದ ಅನುಮೋದಿತವಾದ ಬಡ್ತಿ ಮೂಲಕ ತೆರವಾದ ಮತ್ತು ಇತರ ಕಾರಣಗಳಿಂದ ತೆರವಾದ ಬೋಧಕ ಹುದ್ದೆಗಳನ್ನು ತುಂಬಲು ಷರತ್ತುಗಳಿಗೊಳಪಟ್ಟು ಆರ್ಥಿಕ ಮಿತವ್ಯಯ ಆದೇಶವನ್ನು ಸಡಿಲಿಸಿ, ಅನುಮತಿ…
ಬೆಂಗಳೂರು: ರಾಜ್ಯದಲ್ಲಿ ಡೆಂಗ್ಯೂ ಆರ್ಭಟಿಸಿದೆ. ಮಳೆಯ ಇಳಿಮುಖದ ನಡುವೆಯೂ ಇಂದು 279 ಜನರಿಗೆ ಡೆಂಗ್ಯೂ ಪಾಸಿಟಿವ್ ಅಂತ ವರದಿಯಲ್ಲಿ ದೃಢಪಟ್ಟಿದೆ. ಹೀಗಾಗಿ ಪ್ರಕರಣಗಳ ಸಂಖ್ಯೆ 20,202ಕ್ಕೆ ಏರಿಕೆಯಾಗಿದೆ. ಈ ಕುರಿತಂತೆ ರಾಜ್ಯ ಆರೋಗ್ಯ ಇಲಾಖೆಯಿಂದ ರಿಪೋರ್ಟ್ ಬಿಡುಗಡೆ ಮಾಡಿದ್ದು, ಕಳೆದ 24 ಗಂಟೆಯಲ್ಲಿ 1943 ಜನರನ್ನು ಡೆಂಗ್ಯೂ ಪರೀಕ್ಷೆಗೆ ಒಳಪಡಿಸಲಾಗಿದೆ. ಇವರಲ್ಲಿ 279 ಜನರಿಗೆ ಪಾಸಿಟಿವ್ ಬಂದಿರುವುದಾಗಿ ತಿಳಿಸಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ 463 ಮಂದಿಯನ್ನು ಪರೀಕ್ಷೆಗೆ ಒಳಪಡಿಸಲಾಗಿದ್ದು, ಇವರಲ್ಲಿ 104 ಜನರಿಗೆ, ಬೆಗಂಳೂರು ನಗರ ವ್ಯಾಪ್ತಿಯಲ್ಲಿ 150 ಪರೀಕ್ಷೆಯಲ್ಲಿ 18 ಮಂದಿಗೆ, ಕೋಲಾರದಲ್ಲಿ 11 ಮಂದಿಗೆ ಡೆಂಗ್ಯೂ ಪಾಸಿಟಿವ್ ಎಂಬುದಾಗಿ ಪರೀಕ್ಷೆಯಲ್ಲಿ ದೃಢಪಟ್ಟಿದೆ ಅಂತ ತಿಳಿಸಿದೆ. ಇನ್ನೂ ಬಳ್ಳಾರಿಯಲ್ಲಿ 20, ವಿಜಯನಗರ 10, ಮಂಡ್ಯ 20, ಉಡುಪಿ 10, ಕಲಬುರ್ಗಿ 15, ಬೆಳಗಾವಿ 13 ಸೇರಿದಂತೆ ಇಂದು ಒಟ್ಟು 279 ಮಂದಿಗೆ ಡೆಂಗ್ಯೂ ಪಾಸಿಟಿವ್ ದೃಢಪಟ್ಟಿದೆ. ಹೀಗಾಗಿ ಡೆಂಗ್ಯೂ ಕೇಸ್ ಸಂಖ್ಯೆ 20,202ಕ್ಕೆ ಏರಿಕೆಯಾಗಿದೆ. ಈವರೆಗೆ 10 ಮಂದಿ ಡೆಂಗ್ಯೂನಿಂದ ಸಾವನ್ನಪ್ಪಿದ್ದಾರೆ…
ಕೋಲಾರ: ಮಧುವೆಯಾದಂತ ಕೆಲ ಗಂಟೆಯಲ್ಲೇ ವಧು ವರರಿಬ್ಬರು ಹೊಡೆದಾಡಿಕೊಂಡಿರುವಂತ ಘಟನೆ ಕೋಲಾರದಲ್ಲಿ ನಡೆದಿದೆ. ಅಲ್ಲದೇ ಈ ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದಂತ ವಧು ಸಾವನ್ನಪ್ಪಿರುವುದಾಗಿ ತಿಳಿದು ಬಂದಿದೆ. ಕೋಲಾರ ಜಿಲ್ಲೆಯ ಕೆಜಿಎಫ್ ತಾಲ್ಲೂಕಿನ ಚಂಬರಸನಹಳ್ಳಿಯಲ್ಲಿ ಈ ಘಟನೆ ನಡೆದಿದೆ. ಮದುವೆಯಾದಂತ ನಂತ್ರ ಕೊಠಡಿಗೆ ವಧು ಲಿಖಿತಶ್ರೀ ಹಾಗೂ ವರ ನವೀನ್ ತೆರಳಿದ್ದರು. ಈ ವೇಳೆಯಲ್ಲಿ ಜಗಳ ಆಡಿದ್ದಾರೆ. ಜಗಳ ತಾರಕಕ್ಕೇರಿದಾಗ ಹೊಡೆದಾಟಿಕೊಂಡಿದ್ದಾರೆ. ನೂತನ ವಧು-ವರರ ಹೊಡೆದಾಟದಲ್ಲಿ ವಧು ಲಿಖಿತಶ್ರೀ ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರನ್ನು ಕೂಡಲೇ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಗಂಭೀರವಾಗಿ ಗಾಯಗೊಂಡಿದ್ದಂತ ವಧು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿರುವುದಾಗಿ ತಿಳಿದು ಬಂದಿದೆ. https://kannadanewsnow.com/kannada/strict-action-will-be-taken-against-those-found-supplying-substandard-medicines-minister-dinesh-gundu-rao/ https://kannadanewsnow.com/kannada/will-retire-from-politics-if-shantakumarswamys-allegations-against-me-are-proved-belur-gopalakrishna/
ನಮ್ಮಲ್ಲಿ ಪ್ರತಿಯೊಬ್ಬರೂ ಕೂಡ ಹಣವನ್ನು ಸಂಪಾದನೆ ಮಾಡಬೇಕು ನಮ್ಮ ಆಸೆಗಳನ್ನು ಈಡೇರಿಸಿಕೊಳ್ಳಬೇಕು ಎಂಬ ಕನಸನ್ನು ಇಟ್ಟು ಕೊಂಡಿರುತ್ತಾರೆ. ಆದರೆ ಕೆಲವೊಂದಷ್ಟು ಜನರಿಗೆ ಇದು ಸಾಧ್ಯವಾಗುವುದಿಲ್ಲ ಎಷ್ಟೇ ಕಷ್ಟಪಟ್ಟು ಸಂಪಾದನೆ ಮಾಡಿದರು ಒಂದಲ ಒಂದು ರೀತಿಯಾಗಿ ಹಣ ಖರ್ಚಾಗುತ್ತಿರುತ್ತದೆ ಹಾಗೂ ಇನ್ನೂ ಕೆಲವೊಂದಷ್ಟು ಜನರು ಎಷ್ಟೇ ಪ್ರಯತ್ನ ಪಟ್ಟರು ಅತಿ ಹೆಚ್ಚಿನ ಹಣವನ್ನು ಸಂಪಾದನೆ ಮಾಡಲು ಸಾಧ್ಯವಾಗುವುದಿಲ್ಲ. ಹಾಗಾಗಿ ಇಂತಹ ಸಮಸ್ಯೆಗಳನ್ನು ಅನುಭವಿಸುತ್ತಿರುವವರು ಈ ಒಂದು ಪರಿಹಾರವನ್ನು ಮಾಡಿಕೊಳ್ಳುವು ದರಿಂದ ಈ ಸಮಸ್ಯೆಯಿಂದ ಮುಕ್ತಿ ಪಡೆಯಬಹುದು ಅದೇನೆಂದು ನೋಡುವುದಾದರೆ 2 ರಿಂದ 4 ಲವಂಗವನ್ನು ಮಲ್ಲಿಗೆ ಎಣ್ಣೆಯಲ್ಲಿ ಹಾಕಿ ಆಂಜನೇಯನ ಮುಂದೆ ದೀಪವನ್ನು ಹಚ್ಚುವುದರಿಂದ ಅಲ್ಲಿ ನಿಮ್ಮ ಕೋರಿಕೆಗಳನ್ನು ಹೇಳಿಕೊಳ್ಳುವುದರ ಮೂಲಕ ದೀಪ ಹಚ್ಚಬೇಕು ಈ ರೀತಿ ಮಾಡುವುದರಿಂದ ನೀವು ಅಂತಹ ಒಂದು ಸಂಕಷ್ಟದಿಂದ ಪಾರಾಗಬಹುದು. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564. ನಂ 1ವಶೀಕರಣ ಸ್ಪೆಷಲಿಸ್ಟ್…
ಬೆಂಗಳೂರು: ರಾಜ್ಯದಲ್ಲಿ ಉತ್ಪಾದನೆಯಾಗುವ ಔಷಧಗಳು ಸೇರಿದಂತೆ ಸರ್ಕಾರಿ ಔಷಧಾಲಯಗಳ ಮೇಲೆ ಕಟ್ಟುನಿಟ್ಟಿನ ನಿಗಾ ವಹಿಸಲು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ ನೀಡಿದ್ದಾರೆ. ಬೆಂಗಳೂರಿನ ವಿಕಾಸ ಸೌಧದಲ್ಲಿ ಇಂದು ಔಷಧ ನಿಯಂತ್ರಣ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಸಚಿವರು, ಅಧಿಕಾರಿಗಳ ಕಾರ್ಯವೈಖರಿ ಬಗ್ಗೆ ಗರಂ ಆದರು. ರಾಜ್ಯದ ಮಾರುಕಟ್ಟೆಯಲ್ಲಿ ಸಾಕಷ್ಟು ಕಳಪೆ ಗುಣಮಟ್ಟದ ಔಷಧಿಗಳು ಪೂರೈಕೆ ಆಗುತ್ತಿದೆ. ಯಾರ ಹಂಗು ಇಲ್ಲದೇ ಮನಬಂದಂತೆ ಔಷಧಿಗಳನ್ನ ಜನರ ಮನೆಗೆ ಪೂರೈಸುತ್ತಿದ್ದಾರೆ. ಇದರಿಂದ ಜನರ ಆರೋಗ್ಯದ ಮೇಲೆ ಸಾಕಷ್ಟು ದಷ್ಪರಿಣಾಮ ಬೀರುತ್ತಿದೆ. ಡ್ರಗ್ ಕಂಟ್ರೋಲ್ ಇಲಾಖೆಯ ಮುಖ್ಯ ಉದ್ದೇಶವೇ ಪಬ್ಲಿಕ್ ಹೆಲ್ತ್. ಸಾರ್ವಜನಿಕರ ಆರೋಗ್ಯವನ್ನ ದೃಷ್ಟಿಯಲ್ಲಿಟ್ಟುಕೊಂಡು ಔಷಧಿಗಳ ಗುಣಮಟ್ಟದ ಬಗ್ಗೆ ಅಧಿಕಾರಿಗಳು ಹೆಚ್ಚಿನ ನಿಗಾ ವಹಿಸಬೇಕು. ಆದರೆ ಆ ರೀತಿಯ ಕಾರ್ಯವೈಖರಿ ಇಲಾಖೆಯ ಅಧಿಕಾರಿಗಳಿಂದ ಕಂಡುಬರುತ್ತಿಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅಸಮಾಧಾನ ವ್ಯಕ್ತಪಡಿಸಿದರು. ಔಷಧಿಗಳ ಗುಣಮಟ್ಟದ ವಿಚಾರದಲ್ಲಿ ಯಾವ ಕ್ರಮಗಳನ್ನ ಕೈಗೊಳ್ಳುತ್ತಿದ್ದೀರಿ ವಿಸ್ತೃತ ವರದಿ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಎಷ್ಟು…
ಬೆಂಗಳೂರು : ರಾಜ್ಯ ರಾಜಧಾನಿಯಲ್ಲಿ ಒತ್ತುವರಿ ತೆರವು ಮಾಡಿಸಲಾದ ಸುಮಾರು 500 ಕೋಟಿ ರೂ. ಬೆಲೆ ಬಾಳುವ ಅರಣ್ಯ ಭೂಮಿಯಲ್ಲಿ ವೃಕ್ಷೋಧ್ಯಾನ ಮತ್ತು ಪಕ್ಷಿಲೋಕ (Bird aviary) ನಿರ್ಮಿಸಲು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಅವರಿಂದು ಭೂಮಿಪೂಜೆ ನೆರವೇರಿಸಿದರು. ಇಲಾಖೆ ಮರುವಶ ಪಡಿಸಿಕೊಂಡಿರುವ 17 ಎಕರೆ ಜಮೀನಿನ ಖುದ್ದು ಪರಿಶೀಲನೆಗೆ ಆಗಮಿಸಿದ್ದ ಸಚಿವರು, ಗಿಡ ನೆಡುವ ಮೂಲಕ ವೃಕ್ಷೋಧ್ಯಾನದಲ್ಲಿ 1800 ಸ್ಥಳೀಯ ಪ್ರಭೇದದ ಸಸಿ ನೆಡುವ ಕಾರ್ಯಕ್ರಮಕ್ಕೆ ಹಾಗೂ ಜಮೀನಿನ ಸುತ್ತಲೂ ತಂತಿ ಬೇಲಿ ಹಾಕುವ ಕಾಮಗಾರಿಗೂ ಚಾಲನೆ ನೀಡಿದರು. ಬೆಂಗಳೂರು ನಗರ ಬೃಹದಾಕಾರವಾಗಿ ಬೆಳೆಯುತ್ತಿದ್ದು, ನಗರ ಪ್ರದೇಶದಲ್ಲಿ ಉಸಿರಾಡಲು ಹಸಿರು ಪ್ರದೇಶ (ಲಂಗ್ ಸ್ಪೇಸ್) ಇರಬೇಕು. ಐ.ಟಿ., ಬಿ.ಟಿ. ಕಂಪನಿಗಳಿರುವ ಈ ಪ್ರದೇಶ ಕಾಂಕ್ರೀಟ್ ಕಾಡಿನಂತಿದ್ದು, 17 ಎಕರೆಯಲ್ಲಿ ನಿರ್ಮಾಣವಾಗಲಿರುವ ಈ ವೃಕ್ಷೋಧ್ಯಾನ ಬೆಳಗಿನ ವಾಯು ವಿಹಾರಕ್ಕೆ ಬರುವವರಿಗೆ ಮತ್ತು ವಾರಾಂತ್ಯದಲ್ಲಿ ಮಕ್ಕಳು, ಮೊಮ್ಮಕ್ಕಳೊಂದಿಗೆ ಸಮಯ ಕಳೆಯಲು ಮಾಹಿತಿ ಮತ್ತು ಮನರಂಜನೆಯ ತಾಣವಾಗುವಂತೆ ಅಭಿವೃದ್ಧಿ…
ಢಾಕಾ: ನೊಬೆಲ್ ಪ್ರಶಸ್ತಿ ವಿಜೇತ ಪ್ರೊಫೆಸರ್ ಮುಹಮ್ಮದ್ ಯೂನುಸ್ ನೇತೃತ್ವದ ಮಧ್ಯಂತರ ಸರ್ಕಾರ ಗುರುವಾರ ಪ್ರಮಾಣವಚನ ಸ್ವೀಕರಿಸಲಿದೆ ಎಂದು ಬಾಂಗ್ಲಾದೇಶದ ಸೇನಾ ಮುಖ್ಯಸ್ಥ ಜನರಲ್ ವೇಕರ್-ಉಜ್-ಜಮಾನ್ ಹೇಳಿದ್ದಾರೆ. ಬುಧವಾರ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಜನರಲ್ ವೇಕರ್, ಮಧ್ಯಂತರ ಸರ್ಕಾರ ಗುರುವಾರ ರಾತ್ರಿ 8:00 ಗಂಟೆಗೆ ಪ್ರಮಾಣವಚನ ಸ್ವೀಕರಿಸುವ ಸಾಧ್ಯತೆಯಿದೆ ಎಂದು ಹೇಳಿದರು. ಸಲಹಾ ಮಂಡಳಿಯಲ್ಲಿ 15 ಸದಸ್ಯರಿರಬಹುದು ಎಂದು ಅವರು ಹೇಳಿದರು. ಉದ್ಯೋಗಗಳಲ್ಲಿ ವಿವಾದಾತ್ಮಕ ಕೋಟಾ ವ್ಯವಸ್ಥೆಯ ಬಗ್ಗೆ ಪ್ರಧಾನಿ ಶೇಖ್ ಹಸೀನಾ ರಾಜೀನಾಮೆ ನೀಡಿ ದೇಶದಿಂದ ಪಲಾಯನ ಮಾಡಿದ ಒಂದು ದಿನದ ನಂತರ 84 ವರ್ಷದ ಅರ್ಥಶಾಸ್ತ್ರಜ್ಞ ಯೂನುಸ್ ಅವರನ್ನು ಅಧ್ಯಕ್ಷ ಮೊಹಮ್ಮದ್ ಶಹಾಬುದ್ದೀನ್ ಮಂಗಳವಾರ ಮಧ್ಯಂತರ ಸರ್ಕಾರದ ಮುಖ್ಯಸ್ಥರಾಗಿ ನೇಮಿಸಿದ್ದಾರೆ. https://kannadanewsnow.com/kannada/big-shock-to-vacant-plot-owners-in-bengaluru-bbmp-fined-for-not-maintaining-cleanliness/ https://kannadanewsnow.com/kannada/big-shock-to-vacant-plot-owners-in-bengaluru-bbmp-fined-for-not-maintaining-cleanliness/
ಬೆಂಗಳೂರು: ನಗರದ ಖಾಲಿ ನಿವೇಶನ ಮಾಲೀಕರಿಗೆ ಬಿಗ್ ಶಾಕ್ ಎನ್ನುವಂತೆ ಸ್ವಚ್ಥತೆಯನ್ನು ಕಾಪಾಡದೇ ಇರುವಂತವರಿಗೆ ಆಸ್ತಿ ತೆರಿಗೆಯ ಭಾಗಾವಗಿ ದಂಡ ಮತ್ತು ವಿಲೇವಾರಿಗೆ ತಲುವಂತ ವೆಚ್ಚವನ್ನು ವಸೂಲಿ ಮಾಡುವಂತೆ ಬಿಬಿಎಂಪಿ ಆದೇಶಿಸಿದೆ. ಈ ಕುರಿತಂತೆ ಬಿಬಿಎಂಪಿಯ ಮುಖ್ಯ ಆಯುಕ್ತರು ಆದೇಶ ಹೊರಡಿಸಿದ್ದು, ಖಾಲಿ ಇರುವ ತೆರೆದ ಸ್ಥಳಗಳಿಂದ/ಖಾಲಿ ನಿವೇಶನಗಳಿಂದ ತ್ಯಾಜ್ಯ ವಿಲೆವಾರಿಗಾಗಿ ಮಾಲೀಕರಿಂದ ಆಸ್ತಿ ತೆರಿಗೆಯ ಭಾಗವಾಗಿ ದಂಡ ಮತ್ತು ವಿಲೇವಾರಿಗೆ ತಗುಲಿದ ವೆಚ್ಚ ಸಂಗ್ರಹಿಸುವಂತೆ ಸೂಚಿಸಿರುವುದಾಗಿ ತಿಳಿಸಿದ್ದಾರೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬರುವ ಖಾಲಿ ಇರುವ ತೆರೆದ ಸ್ಥಳಗಳಿಂದ/ಖಾಲಿ ನಿವೇಶನಗಳಿಂದ ತ್ಯಾಜ್ಯ ವಿಲೆವಾರಿಗಾಗಿ ಮಾಲೀಕರಿಂದ ಆಸ್ತಿ ತೆರಿಗೆಯ ಭಾಗವಾಗಿ ದಂಡ ಮತ್ತು ವಿಲೇವಾರಿಗೆ ತಗುಲಿದ ವೆಚ್ಚ ಸಂಗ್ರಹಿಸುವ ಕುರಿತು ಘನತ್ಯಾಜ್ಯ ನಿರ್ವಹಣೆ ನಿಯಮಗಳು-2016, ಘನತ್ಯಾಜ್ಯ ನಿರ್ವಹಣೆ ಬೈ-ಲಾಸ್ 2020 ಮತ್ತು ಬಿಬಿಎಂಪಿ ಕಾಯಿದೆ 2020ರ ಅಡಿಯಲ್ಲಿ ಹೊಸ ಆದೇಶವನ್ನು ಹೊರಡಿಸಲಾಗಿರುತ್ತದೆ. 1. ವಲಯ ಕಛೇರಿಗಳು ಎಲ್ಲಾ ಖಾಲಿ ನಿವೇಶನಗಳು/ಪ್ಲಾಟ್ಗಳು/ಸ್ಥಳಗಳು ಮತ್ತು ಘನತ್ಯಾಜ್ಯ/ಕಟ್ಟಡ ಮತ್ತು ಭಗ್ನಾವಶೇಷ ತ್ಯಾಜ್ಯ(C & D)ವನ್ನು…
ಶಿವಮೊಗ್ಗ: ಜಿಲ್ಲೆಯಲ್ಲಿ ವಿದ್ಯುತ್ ನಿರ್ವಹಣಾ ಕಾಮಗಾರಿಯ ಹಿನ್ನಲೆಯಲ್ಲಿ ಕೆಲ ಪ್ರದೇಶಗಳಲ್ಲಿ ಆಗಸ್ಟ್.9ರಿಂದ 11ರವರೆಗೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಗ್ರಾಹಕರು ಸಹಕರಿಸುವಂತೆ ಮನವಿ ಮಾಡಿದೆ. ಶಿವಮೊಗ್ಗ ಹೊಳಲೂರು 66/11 ಕೆ.ವಿ. ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ವಿದ್ಯುತ್ ಮಾರ್ಗಗಳ ಲಿಂಕ್ಲೈನ್ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಆ. 09 ರಿಂದ 11 ರವರೆಗೆ 3 ದಿನಗಳ ಕಾಲ ಬೆಳಗ್ಗೆ 10.00 ರಿಂದ ಸಂಜೆ 6.00ರವರೆಗೆ ಹಾಡೋನಹಳ್ಳಿ, ಹಳೆ/ಹೊಸ ಮಡಿಕೆಚೀಲೂರು, ಬಿ.ಕೆ.ತಾವರೆ ಗ್ರಾಮಗಳ ವ್ಯಾಪ್ತಿಯಲ್ಲಿ ಬರುವ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ. https://kannadanewsnow.com/kannada/will-retire-from-politics-if-shantakumarswamys-allegations-against-me-are-proved-belur-gopalakrishna/ https://kannadanewsnow.com/kannada/kengeri-electric-crematorium-temporarily-shut-down/
ಬೆಂಗಳೂರು: ನಾಳೆಯಿಂದ ಬೆಂಗಳೂರಿನ ರಾಜರಾಜೇಶ್ವರಿನಗರ ವಲಯದ ಕೆಂಗೇರಿ ವಿದ್ಯುತ್ ಚಿತಾಗಾರದಲ್ಲಿ ತುರ್ತು ನಿರ್ವಹಣೆ ಕೆಲಸದ ಪ್ರಯುಕ್ತ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗುತ್ತಿದೆ. ರಾಜರಾಜೇಶ್ವರಿನಗರ ವಲಯ ವ್ಯಾಪ್ತಿಯ ಕೆಂಗೇರಿ ವಿದ್ಯುತ್ ಚಿತಾಗಾರದಲ್ಲಿ ತುರ್ತ ನಿರ್ವಹಣೆ ಕಾಮಗಾರಿಯನ್ನು ಕೈಗೊಳ್ಳಬೇಕಾಗಿರುವುದರಿಂದ ದಿನಾಂಕ: 08-08-2024 ರಿಂದ 18- 08-2024 ವರೆವಿಗೂ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗುತ್ತಿದ್ದು, ಈ ಚಿತಾಗಾರಕ್ಕೆ ಮೃತ ದೇಹಗಳನ್ನು ದಹನ ಕ್ರಿಯೆಗಾಗಿ ತರುವ ಸಾರ್ವಜನಿಕರು ಸಮೀಪದಲ್ಲಿರುವ ಸುಮ್ಮನಹಳ್ಳಿ, ಮೇಡಿ ಅಗ್ರಹಾರ ಅಥವಾ ಪೀಣ್ಯ ವಿದ್ಯುತ್ ಚಿತಾಗಾರವನ್ನು ಉಪಯೋಗಿಸಿಕೊಳ್ಳಬಹುದಾಗಿರುತ್ತದೆ ಎಂದು ವಿದ್ಯುತ್ ವಿಭಾಗದ ಕಾರ್ಯಪಾಲಕ ಅಭಿಯಂತರರು ಕೋರಿರುತ್ತಾರೆ. https://kannadanewsnow.com/kannada/muda-scam-r-ashoka-releases-more-documents-against-cm-siddaramaiah/ https://kannadanewsnow.com/kannada/flower-show-to-begin-at-lalbagh-in-bengaluru-from-tomorrow-heres-how-the-ticket-prices-are/