Author: kannadanewsnow09

ಬೆಂಗಳೂರು: ದಿನೇ ದಿನೇ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ಜನರು ತತ್ತರಿಸಿ ಹೋಗಿದ್ದಾರೆ. ನಿನ್ನೆಯಷ್ಟೇ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಸಾರಿಗೆ ಬಸ್ಸುಗಳ ಪ್ರಯಾಣ ದರ ಏರಿಕೆಗೂ ಅನುಮತಿ ನೀಡಲಾಗಿದೆ. ಈ ಬೆನ್ನಲ್ಲೇ ಬೆಂಗಳೂರಲ್ಲಿ ಕಾವೇರಿ ನೀರಿನ ದರ ಪರಿಷ್ಕರಣೆ ಮುಂದಾಗಿದೆ. ಈ ಮೂಲಕ ಶೀಘ್ರವೇ ನೀರಿನ ದರ ಹೆಚ್ಚಳದ ಶಾಕ್ ನೀಡಲು ಸರ್ಕಾರ ಮುಂದಾಗಿರುವ ಸುಳಿವನ್ನು ಜಲಮಂಡಳಿ ನೀಡಿದೆ. ಬೆಂಗಳೂರಲ್ಲಿ ಕಾವೇರಿ ನೀರಿನ ದರ ಪರಿಷ್ಕರಣೆಗೆ ಸರ್ಕಾರ ಮುಂದಾಗಿ ಎನ್ನಲಾಗುತ್ತಿದೆ. ಈ ಸಂಬಂಧ ಬೆಂಗಳೂರು ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಡಿಸಿಎಂ ಡಿ.ಕೆ ಶಿವಕುಮಾರ್ ನೇತೃತ್ವದಲ್ಲಿ ಬಿಡಬ್ಲ್ಯೂ ಎಸ್ ಎಸ್ ಬಿ ಸಭೆ ನಡೆಯೋ ಸಾಧ್ಯತೆ ಇದೆ. ಡಿಸಿಎಂ ನೇತೃತ್ವದ ಜಲಮಂಡಳಿ ಸಭೆಯಲ್ಲಿ ಕಾವೇರಿ ನೀರಿನದ ದರ ಹೆಚ್ಚಳದ ಕುರಿತಂತೆ ಚರ್ಚಿಸಲಾಗುತ್ತಿದೆ. ಆ ಬಳಿಕ ಬೆಂಗಳೂರಲ್ಲಿ ನೀರಿನ ದರ ಪರಿಷ್ಕರಣೆ ಅಧಿಕೃತ ಆದೇಶ ಹೊರ ಬೀಳೋ ಸಾಧ್ಯತೆ ಇದೆ. ಅಂದಹಾಗೆ ನೀರು ಸರಬರಾಜು ವೆಚ್ಚ, ವಿದ್ಯುತ್ ಬಳಕೆ ವೆಚ್ಚ ಸೇರಿದಂತೆ…

Read More

ಬೆಂಗಳೂರು : ತನಿಖಾ ತಂಡಕ್ಕೆ ಘಟನೆಯ ಕುರಿತು ಸಂಪೂರ್ಣ ಮಾಹಿತಿ ನೀಡಿದ್ದೇನೆ. ಕಾನೂನು ಚೌಕಟ್ಟಿನಲ್ಲಿ ಕ್ರಮ ಆಗಲಿದೆ ಎನ್ನುವ ವಿಶ್ವಾಸವಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಪ್ರತಿಕ್ರಿಯಿಸಿದ್ದಾರೆ. ಬೆಳಗಾವಿಯಲ್ಲಿ ನಡೆದ ಚಳಿಗಾಲದ ಅಧಿವೇಶನದ ಕಲಾಪದ ವೇಳೆ ಸಚಿವರ ವಿರುದ್ಧ ಬಿಜೆಪಿಯ ವಿಧಾನ ಪರಿಷತ್ ಸದಸ್ಯರಾದ ಸಿ.ಟಿ.ರವಿ ಅಶ್ಲೀಲ ಪದ ಬಳಿಸಿದ್ದರು. ಈ ಕುರಿತು ಸಿಒಡಿ ತನಿಖೆಗೆ ರಾಜ್ಯ ಸರ್ಕಾರ ಆದೇಶಿಸಿತ್ತು‌. ಇದರ ಭಾಗವಾಗಿ ಸಿಒಡಿ ಅಧಿಕಾರಿಗಳಿಗೆ ಮಾಹಿತಿ ನೀಡಿದ ಬಳಿಕ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಸಚಿವರು, ಅಧಿಕಾರಿಗಳ ಎದುರು ಘಟನೆ ಬಗ್ಗೆ ವಿವರಣೆ ನೀಡಿರುವೆ ಎಂದರು‌. ಪ್ರಕರಣದ ಬಗ್ಗೆ ಕಾನೂನು ಚೌಕಟ್ಟಿನಲ್ಲಿ ಏನಾಗಬೇಕು ಅದು ಆಗುತ್ತೆ. ನನಗೆ ಅನ್ಯಾಯ ಆಗಿದೆ, ಇದು ಇಡೀ ಮನುಕುಲಕ್ಕೆ ಆಗಿರುವ ಅನ್ಯಾಯ. ನನ್ನ ಜೊತೆ ಎಲ್ಲರೂ ನಿಂತುಕೊಳ್ಳಬೇಕು ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಪ್ರಕರಣವನ್ನು ಪ್ರತಿಷ್ಠೆಯಾಗಿ, ರಾಜಕೀಯವಾಗಿ ತೆಗೆದುಕೊಂಡಿಲ್ಲ. ನನಗೆ ಅನ್ಯಾಯ ಆಗಿದೆ. ಇದು ನನ್ನ ಸ್ವಾಭಿಮಾನದ ಪ್ರಶ್ನೆ.…

Read More

ಕ್ಯಾಲಿಫೋರ್ನಿಯಾ: ದಕ್ಷಿಣ ಕ್ಯಾಲಿಫೋರ್ನಿಯಾದ ಪೀಠೋಪಕರಣ ತಯಾರಿಕಾ ಘಟಕದ ಮೇಲ್ಛಾವಣಿಯ ಮೂಲಕ ಸಣ್ಣ ವಿಮಾನವೊಂದು ಗುರುವಾರ ಅಪಘಾತಕ್ಕೀಡಾಗಿದ್ದು, ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು 19 ಮಂದಿ ಗಾಯಗೊಂಡಿದ್ದಾರೆ. ಕಟ್ಟಡದಲ್ಲಿ ಕನಿಷ್ಠ 200 ಉದ್ಯೋಗಿಗಳು ಇದ್ದಾಗ ಈ ಘಟನೆ ಸಂಭವಿಸಿದೆ ಎಂದು ಸ್ಥಳೀಯ ಪೊಲೀಸರು ತಿಳಿಸಿದ್ದಾರೆ. ಮೃತ ಇಬ್ಬರು ವ್ಯಕ್ತಿಗಳು ವಿಮಾನದಲ್ಲಿದ್ದರು ಎಂದು ಅಧಿಕಾರಿಗಳು ನಂಬಿದ್ದರೆ, ಗಾಯಗೊಂಡವರು ಪೀಠೋಪಕರಣಗಳ ಅಪ್ಹೋಲ್ಸ್ಟರಿ ತಯಾರಕ ಮೈಕೆಲ್ ನಿಕೋಲಸ್ ಡಿಸೈನ್ಸ್ ಕಟ್ಟಡದೊಳಗೆ ಇದ್ದರು. ಹತ್ತಿರದ ಸಂಬಂಧಿಕರಿಗೆ ಸೂಚನೆ ನೀಡಿದ ನಂತರ ಮೃತರ ಗುರುತುಗಳನ್ನು ಬಿಡುಗಡೆ ಮಾಡಲಾಗುವುದು ಎಂದು ಫುಲ್ಲರ್ಟನ್ ಪೊಲೀಸ್ ಇಲಾಖೆ ಹೇಳಿದೆ. ಗಾಯಗೊಂಡ 19 ಜನರಲ್ಲಿ 11 ಜನರನ್ನು ಸ್ಥಳೀಯ ಆಸ್ಪತ್ರೆಗಳಿಗೆ ಸಾಗಿಸಲಾಗಿದ್ದು, ಎಂಟು ಜನರಿಗೆ ಘಟನಾ ಸ್ಥಳದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಫುಲ್ಲರ್ಟನ್ ನ ಅಗ್ನಿಶಾಮಕ ಕಾರ್ಯಾಚರಣೆಗಳ ಉಪ ಮುಖ್ಯಸ್ಥ ಮೈಕೆಲ್ ಮೀಚಾಮ್ ವರದಿ ಮಾಡಿದಂತೆ, ಗಾಯಗಳ ವ್ಯಾಪ್ತಿಯನ್ನು ಸಣ್ಣದರಿಂದ ಅತ್ಯಂತ ಗಂಭೀರವಾದ ವ್ಯಾಪ್ತಿಯವರೆಗೆ ವಿವರಿಸಲಾಗಿದೆ. https://twitter.com/ResistanceWar1/status/1875016750108139887 ರಾಷ್ಟ್ರೀಯ ಸಾರಿಗೆ ಸುರಕ್ಷತಾ ಮಂಡಳಿಯ (ಎನ್ ಟಿಎಸ್ ಬಿ) ತನಿಖಾಧಿಕಾರಿ…

Read More

ಬೆಂಗಳೂರು: ಸುಪ್ರೀಂ ಕೋರ್ಟ್ ಗೆ ಶೃಂಗೇರಿ ಶಾಸಕ ಸಲ್ಲಿಸಿದ್ದಂತ ಗೆಲುವು ಪ್ರಶ್ನಿಸಿ ಜೀವರಾಜ್ ಸಲ್ಲಿಸಿದ್ದಂತ ಅರ್ಜಿಯ ವಿಚಾರಣೆಗೆ ನಕಾರ ವ್ಯಕ್ತಪಡಿಸಿದೆ. ಈ ಮೂಲಕ ಸುಪ್ರೀಂ ಕೋರ್ಟ್ ನಲ್ಲಿ ಶೃಂಗೇರಿ ಶಾಸಕ ಡಿ.ಟಿ ರಾಜೇಗೌಡಗೆ ಹಿನ್ನಡೆಯುಂಟಾಗಿದೆ. ಶೃಂಗೇರಿ ಶಾಸಕ ಡಿ.ಟಿ ರಾಜೇಗೌಡ ಅವರು ಗೆಲುವು ಪ್ರಶ್ನಿಸಿ ಜೀವರಾಜ್ ಸಲ್ಲಿಸಿದ್ದಂತ ಅರ್ಜಿಯ ಮೇಲ್ಮನವಿಯ ಕುರಿತಂತೆ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಅಲ್ಲದೇ ಗೆಲುವು ಪ್ರಶ್ನಿಸಿ ಜೀವ ರಾಜ್ ಅರ್ಜಿಯಲ್ಲಿ ಅಸ್ಪಷ್ಟ ಆರೋಪ ಕೂಡ ಮಾಡಲಾಗಿತ್ತು. ಮತದಾನದ ವೇಳೆ ಕಪ್ಪು ಹಣ ಬಳಕೆ ಬಗ್ಗೆ ಅಸ್ಪಷ್ಟತೆ ಆರೋಪವನ್ನು ಮಾಡಿ ಅರ್ಜಿ ವಜಾಗೆ ಸುಪ್ರೀಂ ಕೋರ್ಟ್ ಗೆ ಮನವಿ ಮಾಡಲಾಗಿತ್ತು. ಆದರೇ ಯಾವುದೇ ಸಾಕ್ಷ್ಯಗಳಿಲ್ಲದೇ ಗೆರುವು ಪ್ರಶ್ನಿಸಿದ್ದಾರೆಂದು ಸಲ್ಲಿಸಿದ್ದಂತ ಶೃಂಗೇರಿ ಶಾಸಕ ಡಿ.ಟಿ ರಾಜೇಗೌಡ ಅವರ ಅರ್ಜಿಯನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸಲು ನಕಾರ ವ್ಯಕ್ತ ಪಡಿಸಿದೆ. ಸುಪ್ರೀಂ ಕೋರ್ಟ್ ನ ನ್ಯಾಯಮೂರ್ತಿ ಸೂರ್ಯಕಾಂತ್, ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಅವರ ಪೀಠದಿಂದ ನಕಾರ ವ್ಯಕ್ತ ಪಡಿಸಲಾಗಿದೆ.…

Read More

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಅಧಿಕಾರಿಗಳು, ನೌಕರರು ಹಾಗೂ ಅವರ ಕುಟುಂಬದ ಅವಲಂಬಿತ ಸದಸ್ಯರಿಗೆ ನೂತನ ನಗದು ರಹಿತ ವೈದ್ಯಕೀಯ ಚಿಕಿತ್ಸಾ ಸೌಲಭ್ಯವನ್ನು ಒದಗಿಸಲು ಕೆ ಎಸ್ ಆರ್ ಟಿಸಿ ಆರೋಗ್ಯ ಯೋಜನೆಯನ್ನು ಜಾರಿಗೊಳಿಸಲಾಗುತ್ತಿದೆ. ಈ ಮೂಲಕ ಕೆ ಎಸ್ ಆರ್ ಟಿಸಿ ಅಧಿಕಾರಿ, ಸಿಬ್ಬಂದಿಗಳಿಗೆ ಸಿಹಿಸುದ್ದಿ ನೀಡಲಾಗಿದೆ. ಈ ಕುರಿತಂತೆ ಕೆ ಎಸ್ ಆರ್ ಟಿಸಿಯ ವ್ಯವಸ್ಥಾಪಕ ನಿರ್ದೇಶಕರು ಸುತ್ತೋಲೆ ಹೊರಡಿಸಿದ್ದಾರೆ. ಅದರಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಅಧಿಕಾರಿಗಳು/ನೌಕರರು ಹಾಗೂ ಅವರ ಕುಟುಂಬದ ಅವಲಂಬಿತ ಸದಸ್ಯರಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನೌಕರರ ವೈದ್ಯಕೀಯ ಚಿಕಿತ್ಸೆಯ ನಿಬಂಧನೆಗಳು -1970 ರನ್ವಯ ಹಾಗೂ ಸರ್ಕಾರದ ಮಾರ್ಗಸೂಚಿಗಳನ್ವಯ ವೈದ್ಯಕೀಯ ಚಿಕಿತ್ಸಾ ಸೌಲಭ್ಯಗಳನ್ನು ಒದಗಿಸಲಾಗುತ್ತಿದೆ. ನಿಗಮದ ಅಧಿಕಾರಿಗಳು/ನೌಕರರು ಹಾಗೂ ಅವರ ಕುಟುಂಬದ ಅವಲಂಬಿತ ಸದಸ್ಯರು ಸರ್ಕಾರದ ಮಾನ್ಯತೆ ಹೊಂದಿರುವ ಸರ್ಕಾರಿ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ಒಳರೋಗಿ/ಹೊರ ರೋಗಿಯಾಗಿ ಪಡೆದ ವೈದ್ಯಕೀಯ ಚಿಕಿತ್ಸೆಯ ವೆಚ್ಚವನ್ನು CGHS 2014 ರ…

Read More

ಗದಗ: ಜಿಲ್ಲೆಯಲ್ಲಿ ನಿರ್ಮಿತಿ ಕೇಂದ್ರದ ಇಂಜಿನಿಯರ್ ಒಬ್ಬರು ಲಾಡ್ಜ್ ನಲ್ಲೇ ಆತ್ಮಹತ್ಯೆಗೆ ಶರಣಾಗಿರುವಂತ ಘಟನೆ ನಡೆದಿದೆ. ಈ ಮೂಲಕ ನೇಣುಬಿಗಿದುಕೊಂಡು ನಿರ್ಮಿತಿ ಕೇಂದ್ರದ ಇಂಜಿನಿಯರ್ ಸಾವಿಗೆ ಶರಣಾಗಿದ್ದಾರೆ. ಗದಗ ನಗರದ ಪಲ್ಲವಿ ಲಾಡ್ಜ್ ಗೆ ತೆರಳಿದ್ದಂತ ನಿರ್ಮಿತಿ ಕೇಂದ್ರದ ಶಂಕರಗೌಡ ಪಾಟೀಲ್ ಎಂಬುವರೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವಂತ ಇಂಜಿನಿಯರ್ ಆಗಿದ್ದಾರೆ. ಇಂದು ಬೆಳಿಗ್ಗೆ 7.30ಕ್ಕೆ ಮನೆಯಿಂದ ಹೊರ ಬಂದಿದ್ದಂತ ನಿರ್ಮಿತಿ ಕೇಂದ್ರದ ಇಂಜಿನಿಯರ್ ಶಂಕರಗೌಡ ಪಾಟೀಲ್ ಅವರು ಲಾಡ್ಜ್ ನಲ್ಲಿ ರೂಂ ಪಡೆದು ಉಳಿದುಕೊಂಡಿದ್ದರು. ಲಾಡ್ಜ್ ನ ಸರ್ವಿಸ್ ಬಾಯ್ ಗಳು ರೂಂ ಬಾಗಿಲು ಬಡಿದಾಗ ಪ್ರತ್ಯುತ್ತರ ನೀಡಿಲ್ಲ. ಹೀಗಾಗಿ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಪೊಲೀಸರು ಆಗಮಿಸಿ, ಲಾಡ್ಜ್ ನ ರೂಂ ಬಾಗಿಲು ತೆರೆದು ನೋಡಿದಾಗ ಈ ಘಟನೆ ಬೆಳಕಿಗೆ ಬಂದಿದೆ. https://kannadanewsnow.com/kannada/the-bjp-has-spent-rs-5900-crore-had-the-loan-not-been-waived-there-would-have-been-no-need-to-increase-ticket-prices-ramalinga-reddy/ https://kannadanewsnow.com/kannada/breaking-ramanagara-man-killed-thrown-into-well-during-new-year-party/

Read More

ಬೆಂಗಳೂರು : ಗುಂಪುಗಾರಿಕೆ ಹಾಗೂ ಆಂತರಿಕ ಕಚ್ಚಾಟದಿಂದ ಕೆಂಗೆಟ್ಟು ಬೌದ್ಧಿಕವಾಗಿ ದಿವಾಳಿಯಾಗಿರುವ ಬಿಜೆಪಿಯು ರಾಜ್ಯದ ಜನಪರ ಕಾಂಗ್ರೆಸ್ ಸರ್ಕಾರದ ವಿರುದ್ಧ ಹೋರಾಟ ಮಾಡಲು ಹೊರಟಿರುವುದು ಹಾಸ್ಯಾಸ್ಪದ ಎಂದು ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ ಹೇಳಿದ್ದಾರೆ. ಈ ಕುರಿತು ಹೇಳಿಕೆ ನೀಡಿರುವ ಅವರು, ರಾಜ್ಯದಲ್ಲಿ ಎಂದೂ ಜನರಿಂದ ಬಹುಮತ ಪಡೆಯದ ಬಿಜೆಪಿ ವಾಮ ಮಾರ್ಗದ ಮೂಲಕ ಅಧಿಕಾರ ಹಿಡಿದು ಹತ್ತಾರು ಹಗರಣ ಮಾಡಿ 40 ಪರ್ಸೆಂಟ್ ಸರ್ಕಾರ ಎಂಬ ಕುಖ್ಯಾತಿ ಪಡೆದು ಜನರಿಂದ ತಿರಸ್ಕೃತ ವಾಗಿದೆ. ಪ್ರತಿ ಪಕ್ಷ ಸ್ಥಾನದ ಜವಾಬ್ದಾರಿ ಯನ್ನೂ ಸರಿಯಾಗಿ ನಿಭಾಯಿಸದೆ ವಿಫಲಗೊಂಡು ಇದೀಗ ರಾಜ್ಯ ಸರ್ಕಾರದ ವಿರುದ್ಧ ಹೋರಾಟ ಎಂಬ ಹೊಸ ನಾಟಕ ಆರಂಭಿಸಿದೆ ಎಂದು ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆ ಅನುಷ್ಠಾನ ಹಾಗೂ ಜನಪರ ತೀರ್ಮಾನ ಗಳನ್ನು ಬಿಜೆಪಿ ಗೆ ಸಹಿಸಲು ಆಗುತ್ತಿಲ್ಲ, ಹೀಗಾಗಿ ಅನಗತ್ಯ ವಿಷಯ ಮುಂದಿಡುತ್ತಿದೆ. ಮೊದಲಿಗೆ ಮುಡಾ ಆಯ್ತು, ನಂತರ ವಖ್ಫ್…

Read More

ಶಿವಮೊಗ್ಗ: 2024-25ನೇ ಸಾಲಿನ ನೀರಿನ ಕಂದಾಯ ಮತ್ತು ಬಾಕಿ ಕರವಸೂಲಾತಿ ಮಾಡಲು ನಗರದ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ನಿರ್ವಹಣಾ ವಿಭಾಗ ಮತ್ತು ಉಪವಿಭಾಗದ ವತಿಯಿಂದ ಜ.5 ರ ಭಾನುವಾರದಂದು ವಿಶೇಷ ವಸೂಲಾತಿ ಕೌಂಟರ್‌ಗಳನ್ನು ತರೆಯಲಾಗಿದೆ. ನೀರಿನ ಕಂದಾಯ ಮತ್ತು ಬಾಕಿ ಕರ ವಸೂಲಾತಿಗಾಗಿ ನಗರದ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯು ಗುಂಡಪ್ಪಶೆಡ್ ಪಾರ್ಕ್ ಹತ್ತಿರ, ಆರ್‌ಎಂಎಲ್ ನಗರ, ಭಾರತೀಯ ಸಭಾಭವನ, ವಿನೋಬನಗರ ಪೊಲೀಸ್ ಠಾಣೆ ಎದುರು ಪೊಲೀಸ್ ಚೌಕಿ, ಗಾಂಧಿನಗರ ಪಾರ್ಕ್ ಹತ್ತಿರ, ನೇತಾಜಿ ಸರ್ಕಲ್ ಆಟೋ ಸ್ಟಾö್ಯಂಡ್ ಹತ್ತಿರ ವಿಶೇಷ ವಸೂಲಾತಿ ಕೌಂಟರ್ ತೆರೆಯಲಾಗಿದೆ. ನೀರಿನ ಖಾತೆದಾರರು ಬಾಕಿ ಉಳಿಸಿಕೊಂಡಿರುವ ನೀರಿನ ಕಂದಾಯವನ್ನು ಪಾವತಿಸದಿದ್ದಲ್ಲಿ ನೀರಿನ ಸಂಪರ್ಕವನ್ನು ಕಡಿತಗೊಳಿಸಲಾಗುವುದು ಎಂದು ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಸಹಾಯಕ ಕಾರ್ಯಪಾಲಕ ಅಭಿಯಂತರು ತಿಳಿಸಿದ್ದಾರೆ. https://kannadanewsnow.com/kannada/the-bjp-has-spent-rs-5900-crore-had-the-loan-not-been-waived-there-would-have-been-no-need-to-increase-ticket-prices-ramalinga-reddy/ https://kannadanewsnow.com/kannada/breaking-ramanagara-man-killed-thrown-into-well-during-new-year-party/

Read More

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರಕಾರ ಬಸ್ ಪ್ರಯಾಣ ದರವನ್ನು ಶೇಕಡಾ 15ರಷ್ಟು ಹೆಚ್ಚಳ ಮಾಡಿರುವುದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು; ಅಧಿಕಾರಕ್ಕೆ ಬಂದಾಗಿನಿಂದ ಈ ಸರಕಾರ ಜನರ ಮೇಲೆ ಬರೆ ಎಳೆಯುವುದು, ಅದನ್ನು ಜನರೂ ಭರಿಸಿಕೊಂಡು ಹೋಗುವುದು ಮಾಮೂಲಿ ಆಗಿಬಿಟ್ಟಿದೆ ಎಂದು ಹರಿಹಾಯ್ದರು. ಈ ಬಗ್ಗೆ ಮಾಧ್ಯಮಗಳು ಕೇಳಿದ ಪ್ರಶ್ನೆಗಳಿಗೆ ಉತ್ತರ ಕೊಟ್ಟ ಕೇಂದ್ರ ಸಚಿವರು; ಈ ರಾಜ್ಯದಲ್ಲಿ ಸರಕಾರ ಎನ್ನುವುದು ಇದೆಯಾ? ಇದನ್ನು ಸರಕಾರ ಎಂದು ಕರೆಯುತ್ತಾರಾ? ಈ ಸರಕಾರ ಬಂದಾಗಿನಿಂದ ಬರೀ ಬೆಲೆ ಏರಿಕೆ ಮಾಡುವುದೇ ಆಗಿದೆ ಎಂದು ಅವರು ಕಿಡಿಕಾರಿದರು. ನಮ್ಮ ರಾಜ್ಯದಲ್ಲಿ ದರ ಏರಿಕೆ, ಬೆಲೆ ಏರಿಕೆ ಎನ್ನುವುದು ಅಚ್ಚರಿಯ ವಿಷಯ ಅಲ್ಲ. ಸರಕಾರ ಪ್ರಯಾಣ ದರವನ್ನು ಶೇಕಡಾ 15ರಷ್ಟು ಏರಿಕೆ ಮಾಡಿ ಜನರ ಮೇಲೆ ದೊಡ್ಡ ಬರೆ ಹಾಕಿದೆ. ಜನರೂ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಜನರಿಗೂ ಅಭ್ಯಾಸವಾಗಿ ಹೋಗಿದೆ. ಎರಡು ದಿನ ಆಕ್ರೋಶ ವ್ಯಕ್ತಪಡಿಸಿ ಮೂರನೇ ದಿನ ಮರೆತು ಹೋಗಿ ಪ್ರಯಾಣ…

Read More

ರಾತ್ರಿ ಮಲಗುವಾಗ ಯಾವ ದಿಕ್ಕಿಗೆ ತಲೆ ಇಟ್ಟುಕೊಂಡು ಮಲಗಬೇಕು ? ಎನ್ನುವ ಬಗ್ಗೆ ಶಾಸ್ತ್ರಾನುಸಾರ ಹೇಳೋದೇನು ಅಂತ ಮುಂದೆ ಓದಿ. *ಪ್ರಾಕ್ ಶಿರಾ ಶಯನೇ ವಿಂದ್ಯಾತ್* *ಧನಮಾಯುಶ್ಚ ದಕ್ಷಿಣೇ* | *ಪಶ್ಚಿಮೇ ಪ್ರಬಲಾ ಚಿಂತಾ* *ಹಾನಿಮೃತ್ಯುರಥೋತ್ತರೇ* || ಪೂರ್ವಕ್ಕೆ ತಲೆ ಇಟ್ಟುಕೊಂಡು ಮಲಗಿದರೆ ಧನ ಪ್ರಾಪ್ತಿಯಾಗುವುದು.ಲೌಕಿಕ ಐಶ್ವರ್ಯ ಬಯಸಿದರೆ ಆ ಪ್ರಕಾರ ಸಂಕಲ್ಪ ಮಾಡಿಕೊಂಡು ಪೂರ್ವಕ್ಕೆ ನಿತ್ಯ ರಾತ್ರಿಯಲ್ಲಿ ಮಲಗುವಾಗ ತಲೆಯನ್ನು ಹಾಕಬಹುದು. ದಕ್ಷಿಣಕ್ಕೆ ತಲೆ ಇಟ್ಟುಕೊಂಡು ಮಲಗಿದರೆ ಆಯುಸ್ಸು, ಮಾನಸಿಕ ನೆಮ್ಮದಿ, ಶಾಂತಿ ಹೆಚ್ಚುತ್ತದೆ. ಪಶ್ಚಿಮಕ್ಕೆ ತಲೆ ಮಾಡಿ ಮಲಗಿದರೆ,ಪ್ರಬಲವಾದ ಚಿಂತೆಗಳು ಯಾವಾಗಲೂ ಎಲ್ಲಾ ವಿಭಾಗಗಳಲ್ಲಿಯೂ ಬರುತ್ತಲೇ ಇರುತ್ತವೆ. ಉತ್ತರಕ್ಕೆ ತಲೆ ಇಟ್ಟು ಮಲಗಿದರೆ,ಧನ ನಷ್ಟ ಮತ್ತು ಮರಣ ಸಂಭವಿಸುತ್ತದೆ, ಅಂದರೆ ಆಯುಷ್ಯ ಹಾನಿಯಾಗುತ್ತದೆ. ಪೂರ್ವ ದಿಕ್ಕು ಸೂರ್ಯೋದಯದ ದಿಕ್ಕು. ಆರೋಗ್ಯಂ ಭಾಸ್ಕರಾದಿಚ್ಛೇತ್, ಸೂರ್ಯನಿಂದ ಆರೊಗ್ಯವನ್ನು ಬಯಸಿ, ಎಂಬುದು ಸ್ಮೃತಿ ವಾಕ್ಯ. ಸೂರ್ಯನು ಐಶ್ವರ್ಯಕ್ಕೆ, ಆರೋಗ್ಯಕ್ಕೆ ಪ್ರಧಾನ ದೇವತೆ. ಪೂರ್ವಕ್ಕೆ ತಲೆ ಮಾಡಿ ಮಲಗಿದರೆ, ಐಶ್ವರ್ಯ ಮತ್ತು ಆರೋಗ್ಯ ಸಿದ್ಧಿಸುತ್ತದೆ.…

Read More