Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ರಾಜ್ಯ ಸರ್ಕಾರದಿಂದ ಮುಜರಾಯಿ ಆಸ್ತಿ ರಕ್ಷಣೆಗೆ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಲಾಗಿದೆ. ಈ ಪರಿಣಾಮ 10,700 ಎಕರೆ ಭೂಮಿಯನ್ನು ತೆರವುಗೊಳಿಸಿ ಸಂರಕ್ಷಣೆ ಮಾಡಲಾಗಿದೆ. ಈ ಬಗ್ಗೆ ರಾಜ್ಯ ಸರ್ಕಾರದಿಂದ ಮಾಹಿತಿ ಹಂಚಿಕೊಳ್ಳಲಾಗಿದ್ದು, ಮುಜರಾಯಿ ಆಸ್ತಿ ರಕ್ಷಣೆಗೆ ಕಟ್ಟುನಿಟ್ಟಿನ ಕ್ರಮ ಕೈಗೊಂಡಿದೆ. ಹಲವೆಡೆ ಖಾಸಗಿಯವರು, ವಿವಿಧ ಟ್ರಸ್ಟ್ ಹಾಗೂ ಸಂಘಸಂಸ್ಥೆಗಳು ಅತಿಕ್ರಮಿಸಿಕೊಂಡಿದ್ದ ಮುಜರಾಯಿ ಇಲಾಖೆ ಅಧೀನಕ್ಕೆ ಸೇರಿದ್ದ ಸುಮಾರು 10,700 ಎಕರೆ ಭೂಮಿಯನ್ನು ತೆರವುಗೊಳಿಸಿ ಸಂರಕ್ಷಿಸಲಾಗಿದೆ ಎಂದಿದೆ. https://twitter.com/KarnatakaVarthe/status/1874724304031826356 ಇನ್ನೂ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಮಾಹಿತಿ ಹಂಚಿಕೊಂಡಿದ್ದು, ದೇಶದ ಸ್ವಾತಂತ್ರ್ಯದ 77 ವರುಷಗಳ ಸುದೀರ್ಘ ಇತಿಹಾಸದಲ್ಲಿ ಮೊದಲ ಬಾರಿಗೆ ಐತಿಹಾಸಿಕ ಕ್ರಮ- ಹಿಂದೂ ದೇವಾಲಯಗಳ ಆಸ್ತಿ ರಕ್ಷಣೆಗೆ ಮಹತ್ವದ ಕ್ರಮವನ್ನು ಸರ್ಕಾರ ವಹಿಸಿದೆ. ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ಧಾರ್ಮಿಕ ಬದ್ಧತೆ – ಉಳಿಯಿತು 10,700 ಎಕರೆ ‘ದೇವರ ಸ್ವತ್ತು ಎಂದಿದ್ದಾರೆ. ಬುಟಾಟಿಕೆ ಮತ್ತು ಪೊಳ್ಳು ಹಿಂದುತ್ವವಾದ ಪ್ರತಿಪಾದಕರಾದ ಬಿ.ಜೆ.ಪಿ ಯವರು ಧರ್ಮ ಧರ್ಮಗಳ ನಡುವೆ ದ್ವೇಷದ ಬೆಂಕಿ…
ಮೈಸೂರು: ಕೆ ಆರ್ ಎಸ್ ರಸ್ತೆಗೆ ಅಧಿಕೃತ ಹೆಸರು ನೀಡಿರುವ ಉಲ್ಲೇಖಗಳಿಲ್ಲ ಎಂಬುದಾಗಿ ಹೇಳುತ್ತಿರುವಂತ ಮೈಸೂರು ಮಹಾನಗರ ಪಾಲಿಕೆಯ ಆಯುಕ್ತರಿಗೆ ದಾಖಲೆ ಸಹಿತ ಮೈಸೂರು ಒಡೆಯರ್ ಹಾಗೂ ಸಂಸದ ಯಧುವೀರ್ ಈ ಕೆಳಕಂಡಂತೆ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ”ಕೆಆರ್ಸ್ ರಸ್ತೆಗೆ ಅಧಿಕೃತ ಹೆಸರು ನೀಡಿರುವ ಉಲ್ಲೇಖಗಆಲ್ಲ ಎಂದು ಹೇಳುತ್ತಿರುವ ಮೈಸೂರು ಮಹಾನಗರ ಪಾಲಿಕೆಯ ಆಯುಕ್ತರೇ, ಈ ದಾಖಲೆಗಳನ್ನೊಮ್ಮೆ ನೋಡಿ. ಮೈಸೂರು ಸಂಸ್ಥಾನದ ದಿವಾನರಾಗಿದ್ದ ಶ್ರೀ ಮಿರ್ಜಾ ಇಸ್ಮಾಯಿಲ್’ರವರ ದೂರದ ಸಂಬಂಧಿಯೊಬ್ಬರು ಪ್ರಿನ್ಸೆಸ್ ರಸ್ತೆಯಲ್ಲಿ ವಾಸವಿದ್ದರು, ಅವರು ಬರೆದಿರುವಂತಹ at post ಪತ್ರಗಳ ವಿಳಾಸದಲ್ಲಿ ‘ಪ್ರಿನ್ಸೆಸ್ ರಸ್ತೆ’ಯ ಹೆಸರು ಬಳಸಲಾಗಿದೆ. ಕೇಂದ್ರ ಸರ್ಕಾರದ ಭಾರತದ ಮ್ಯಾಪಿಂಗ್ ಮತ್ತು ಸಮೀಕ್ಷೆಯ ಉಸ್ತುವಾರಿ ಹೊಂದಿರುವ ಸರ್ಕಾರಿ ಇಲಾಖೆಯವರ ‘ಮೈಸೂರು ಟೂರ್ ಮ್ಯಾಪ್/ಗೈಡ್’ನಲ್ಲಿರುವ ಮೈಸೂರಿನ ನಕ್ಷೆಯಲ್ಲಿ ‘ಪ್ರಿನ್ಸೆಸ್ ರಸ್ತೆ’ಯನ್ನು ಗುರುತಿಸಿ ಹೆಸರಿಸಲಾಗಿದೆ. ಅಧಿಕೃತವಾಗಿ 1921ರಲ್ಲಿ ಮೈಸೂರು ನಗರಾಭಿವೃದ್ಧಿ ವಿಶ್ವಸ್ಥ ಮಂಡಳಿಯು ಇದೇ ರಸ್ತೆಗೆ ‘ಪ್ರಿನ್ಸೆಸ್ ರಸ್ತೆ’ ಎಂದು ನಾಮಕರಣ…
ಬೆಂಗಳೂರು: ಕೃಷಿ ಇಲಾಖೆಯಲ್ಲಿ ಖಾಲಿ ಇರುವಂತ ಕೃಷಿ ಅಧಿಕಾರಿ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಈ ಹುದ್ದೆಗಳಿಗೆ ನಾಳೆಯಿಂದ ಅರ್ಜಿ ಸಲ್ಲಿಕೆ ಆರಂಭಗೊಳ್ಳಲಿದೆ. ಈ ಸಂಬಂಧ ಕರ್ನಾಟಕ ಲೋಕಸೇವಾ ಆಯೋಗದಿಂದ ಅಧಿಸೂಚನೆ ಹೊರಡಿಸಲಾಗಿದೆ. ಅದರಲ್ಲಿ ದಿನಾಂಕ:20-09-2024ರ ಅಧಿಸೂಚನೆಯಲ್ಲಿ ಕೃಷಿ ಇಲಾಖೆಯಲ್ಲಿನ ಕೃಷಿ ಅಧಿಕಾರಿ 86 ಮತ್ತು ಸಹಾಯಕ ಕೃಷಿ ಅಧಿಕಾರಿ 586 ಉಳಿಕೆ ಮೂಲ ವೃಂದದ ಹುದ್ದೆಗಳಿಗೆ ಅಧಿಸೂಚನೆ ಜಾರಿ ಮಾಡಿ ಅರ್ಜಿ ಸಲ್ಲಿಕೆಯ ದಿನಾಂಕವನ್ನು 07-10-2024ರಿಂದ 07-11-2024ರವರೆಗೆ ನಿಗದಿಪಡಿಸಲಾಗಿತ್ತು. ಸರ್ಕಾರವು ದಿನಾಂಕ:18-09-2024ರಂದು ಜಾರಿ ಮಾಡಿದ ಕ್ರೀಡಾ ಸಾಧಕ ಅಭ್ಯರ್ಥಿಗಳ ಮೀಸಲಾತಿಯನ್ನು ಸದರಿ ಹುದ್ದೆಗಳಿಗೂ ಅಳವಡಿಸಿಕೊಳ್ಳಬೇಕಾದ್ದರಿಂದ ಅರ್ಜಿ ಸ್ವೀಕಾರ ಪ್ರಕ್ರಿಯೆಯನ್ನು ಮುಂದೂಡಲಾಗಿರುತ್ತದೆ ಎಂದಿದೆ. ಪ್ರಸ್ತುತ ಸರ್ಕಾರದ ಸುತ್ತೋಲೆ ಸಂಖ್ಯೆ ಸಿಆಸುಇ 295 ಸೇನೆನಿ 2023 ದಿನಾಂಕ:04-12-2024ರಲಿ.. ಕ್ರೀಡಾ ಮೀಸಲಾತಿಗೆ ಸಂಬಂಧಿಸಿದಂತೆ ಸರ್ಕಾರವು ಕರ್ನಾಟಕ ನಾಗರಿಕ ಸೇವಾ (ಸಾಮಾನ ನೇಮಕಾತಿ) ನಿಯಮಗಳು 19770 ನಿಯಮ 098 ತಿದ್ದುಪಡಿ ಮಾಡಿರುವುದನ್ನು ಪುನರ್ ಪರಿಶೀಲಿಸಲಾಗುತ್ತಿರುವುದರಿಂದ ರಾಜ್ಯ ಸಿವಿಲ್ ಸೇವೆಯಲ್ಲಿನ ನೇರ ನೇಮಕಾತಿಯಲ್ಲಿ ಕ್ರೀಡಾ ಸಾಧಕರಿಗೆ ಶೇಕಡಾ…
ನವದೆಹಲಿ: ಭಾರತವು ಮಹತ್ವದ ಮೈಲಿಗಲ್ಲನ್ನು ಸಾಧಿಸಿದೆ. ದೇಶದ ಕಾಫಿ ರಫ್ತು ಹೊಸ ದಾಖಲೆಯ ಗರಿಷ್ಠ ಮಟ್ಟವನ್ನು ತಲುಪಿದೆ, ಮೊದಲ ಬಾರಿಗೆ 1 ಬಿಲಿಯನ್ ಡಾಲರ್ ಮೀರಿದೆ. 2024 ರ ಏಪ್ರಿಲ್ ಮತ್ತು ನವೆಂಬರ್ ನಡುವೆ ಕಾಫಿ ರಫ್ತು 1,146.9 ಮಿಲಿಯನ್ ಡಾಲರ್ ತಲುಪಿದೆ, ಇದು ಹಿಂದಿನ ವರ್ಷಕ್ಕೆ ಹೋಲಿಸಿದರೆ ಶೇಕಡಾ 29 ರಷ್ಟು ಹೆಚ್ಚಾಗಿದೆ. ಇದು ಸೆಂಟರ್ ಫಾರ್ ಮಾನಿಟರಿಂಗ್ ಇಂಡಿಯನ್ ಎಕಾನಮಿ (Centre for Monitoring Indian Economy -CMIE) ಪ್ರಕಾರ ಆಗಿದೆ. ರಫ್ತಿನ ಮೌಲ್ಯದಲ್ಲಿ ಹಠಾತ್ ಏರಿಕೆಯು ರೋಬಸ್ಟಾ ಕಾಫಿ ಬೆಲೆಗಳ ಏರಿಕೆಯಿಂದಾಗಿ ಎನ್ನಲಾಗುತ್ತಿದೆ. ಯುರೋಪಿಯನ್ ಯೂನಿಯನ್ ವಿಧಿಸಿದ ಹೊಸ ಅರಣ್ಯನಾಶ ಕಾನೂನಿನ ನಿರೀಕ್ಷೆಯಲ್ಲಿ ದಾಸ್ತಾನು ಮಾಡುವ ಅಗತ್ಯವೂ ರಫ್ತು ಉಲ್ಬಣಕ್ಕೆ ಕಾರಣವಾಯಿತು. ಈ ನಿಯಂತ್ರಣವು ಇಯುಗೆ ಕಾಫಿ ಮತ್ತು ಇತರ ಕೃಷಿ ರಫ್ತುಗಳ ವೆಚ್ಚವನ್ನು ಹೆಚ್ಚಿಸುತ್ತದೆ. ಭಾರತದ ಕಾಫಿ ರಫ್ತು 2023-24ರ ಪೂರ್ಣ ವರ್ಷದಲ್ಲಿ ಶೇಕಡಾ 12 ರಷ್ಟು ಏರಿಕೆಯಾಗಿ 1.28 ಬಿಲಿಯನ್ ಡಾಲರ್ಗೆ ತಲುಪಿದೆ. 2022-23ರಲ್ಲಿ, ದೇಶದ ಕಾಫಿ ರಫ್ತು ಮೌಲ್ಯ…
ಬೆಂಗಳೂರು: ನಗರದ ಜಿಆರ್ ಫಾರ್ಮ್ ಹೌಸ್ ನಲ್ಲಿ ನಡೆದಿದ್ದ ರೇವ್ ಪಾರ್ಟಿ ಕೇಸ್ ಸಂಬಂಧ ತೆಲುಗು ನಟಿ ಹೇಮಾ ವಿರುದ್ಧ ದಾಖಲಾಗಿದ್ದಂತ ಪ್ರಕರಣಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ. ಈ ಮೂಲಕ ನಟಿ ಹೇಮಾಗೆ ರೇವ್ ಪಾರ್ಟಿ ಕೇಸಲ್ಲಿ ಬಿಗ್ ರಿಲೀಫ್ ನೀಡಿದೆ. ಬೆಂಗಳೂರಲ್ಲಿ ನಡೆದಿದ್ದಂತ ರೇವ್ ಪಾರ್ಟಿ ಪ್ರಕರಣ ಸಂಬಂಧ ತೆಲುಗು ನಟಿ ಹೇಮಾ ಅವರ ವಿರುದ್ಧ ಕೇಸ್ ದಾಖಲಾಗಿ ಪೊಲೀಸರು ಬಂಧಿಸಿದ್ದರು. ಈ ಪ್ರಕರಣಲ್ಲಿ 14 ದಿನಗಳ ಕಾಲ ನ್ಯಾಯಾಂಗ ಬಂಧನದ ಬಳಿಕ, ಜಾಮೀನಿನ ಮೇಲೆ ಬಿಡುಗಡೆಯಾಗಿದ್ದರು. ಈ ಪ್ರಕರಣಕ್ಕೆ ತಡೆಯಾಜ್ಞೆ ಕೋರಿ ತೆಲುಗು ನಟಿ ಹೇಮಾ ಅವರು ಹೈಕೋರ್ಟ್ ಮೆಟ್ಟಿಲೇರಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದಂತ ಹೈಕೋರ್ಟ್ ನ್ಯಾಯಪೀಠವು ನಟಿ ಹೇಮಾ ವಿರುದ್ಧದ ರೇವ್ ಪಾರ್ಟಿ ಪ್ರಕರಣಕ್ಕೆ ತಡೆಯಾಜ್ಞೆ ನೀಡಿದೆ. ಈ ಮೂಲಕ ತೆಲುಗು ನಟಿ ಹೇಮಾಗೆ ಬಿಗ್ ರಿಲೀಫ್ ನೀಡಿದೆ. https://kannadanewsnow.com/kannada/direct-interview-for-assistant-professor-recruitment/ https://kannadanewsnow.com/kannada/breaking-big-shock-to-bengaluru-people-water-tariff-hike-almost-fixed-tariff-likely-to-go-up-in-january-2-week/
ಶಿವಮೊಗ್ಗ : ಶಿವಮೊಗ್ಗದ ಪಶು ವೈದ್ಯಕೀಯ ಮಹಾವಿದ್ಯಾಲಯದಲ್ಲಿ ವಿವಿಧ ವಿಭಾಗಗಳಲ್ಲಿ ಖಾಲಿ ಇರುವ ಸಹಾಯಕ ಪ್ರಾಧ್ಯಾಪಕರ ಹುದ್ದೆಗಳನ್ನು ಗುತ್ತಿಗೆ ಆಧಾರದಲ್ಲಿ ನೇಮಕಾತಿ ಮಾಡಿಕೊಳ್ಳುವ ಸಂಬಂಧ ಜ. 11 ರಂದು ನೇರ ಸಂದರ್ಶನ ಏರ್ಪಡಿಸಲಾಗಿದೆ. ಪಶುವೈದ್ಯಕೀಯ ಔಷಧ ಹಾಗೂ ವಿಷಶಾಸ್ತ್ರ ವಿಭಾಗ, ಜಾನುವಾರು ಸಾಕಾಣಿಕಾ ಸಂಕೀರ್ಣ ವಿಭಾಗ, ಪಶುವೈದ್ಯಕೀಯ ಶರೀರಕ್ರಿಯಾ ಮತ್ತು ಜೀವರಸಾಯನ ಶಾಸ್ತ್ರ ವಿಭಾಗ ಮತ್ತು ಪಶು ವೈದ್ಯಕೀಯ ಚಿಕಿತ್ಸಾ ಸಂಕೀರ್ಣ ವಿಭಾಗಗಳಲ್ಲಿ ನೇಮಕ ಮಾಡಿಕೊಳ್ಳಲಾಗುತ್ತಿದ್ದು, ಭಾರತೀಯ ಕೃಷಿ ಅನುಸಂಧಾನ ಪರಿಷತ್ತಿನ ನಿಯಮಾವಳಿಯಂತೆ ಹಾಗೂ ಮಾರ್ಗಸೂಚಿಯಂತೆ ನಿಗದಿಪಡಿಸಿದ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಸಂದರ್ಶನದಲ್ಲಿ ಭಾಗವಹಿಸಬಹುದು. ನೇರ ಸಂದರ್ಶನವು ಡೀನ್ ಕಚೇರಿ, ಪಶುವೈದ್ಯಕೀಯ ಮಹಾವಿದ್ಯಾಲಯ, ಶಿವಮೊಗ್ಗ ಇಲ್ಲಿ ಜ.11 ರ ಬೆಳಿಗ್ಗೆ 11 ಗಂಟೆಯಿಂದ ನಡೆಯಲಿದೆ. ಆಯ್ಕೆಯಾದ ರಾಷ್ಟ್ರೀಯ ಅರ್ಹತಾ ಪರೀಕ್ಷೆ(ಎನ್ಇಟಿ) ಪ್ರಮಾಣ ಪತ್ರ ಹೊಂದಿರುವ ಅಭ್ಯರ್ಥಿಗಳಿಗೆ ಮಾಸಿಕ ರೂ.56,700/- ಮತ್ತು ರಾಷ್ಟ್ರೀಯ ಅರ್ಹತಾ ಪರೀಕ್ಷೆಯ (ಎನ್ಇಟಿ)ಪ್ರಮಾಣ ಪತ್ರ ಹೊಂದಿರದ ಅಭ್ಯರ್ಥಿಗಳಿಗೆ ಮಾಸಿಕ ರೂ.50,000 ವೇತನ ನೀಡಲಾಗುವುದು. ಹೆಚ್ಚಿನ ಮಾಹಿತಿಗೆ ದೂರವಾಣಿ ಸಂಖ್ಯೆ…
ಬೆಂಗಳೂರು : ಈ ಬಾರಿಯ ವಿಶ್ವ ವಿಖ್ಯಾತ ಹಂಪಿ ಉತ್ಸವ ಫೆಬ್ರವರಿ 28 ರಿಂದ ಮೂರು ದಿನಗಳ ಕಾಲ ನಡೆಯಲಿದೆ. ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹಮದ್ ಖಾನ್ ಅವರು ಗುರುವಾರ ಬೆಳಗ್ಗೆ ಈ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಚರ್ಚಿಸಿ ಸಮ್ಮತಿ ಪಡೆದಿದ್ದಾರೆ. ಫೆ. 28 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಂಪಿ ಉತ್ಸವ ಉದ್ಘಾಟನೆ ಮಾಡಲಿದ್ದು, ಮಾರ್ಚ್ 1 ಮತ್ತು 2 ರಂದು ಕಾರ್ಯಕ್ರಮ ಗಳು ಇರಲಿವೆ. ಮಾರ್ಚ್ 2 ರಂದು ಸಮಾರೋಪ ನಡೆಯಲಿದೆ. ಹಂಪಿ ಉತ್ಸವ ಕ್ಕೆ ಸಿದ್ಧತೆ ಮಾಡಿಕೊಳ್ಳಲು ಜಿಲ್ಲಾಧಿಕಾರಿ ದಿವಾಕರ್ ಅವರಿಗೆ ಉಸ್ತುವಾರಿ ಸಚಿವ ಜಮೀರ್ ಅಹಮದ್ ಖಾನ್ ಸೂಚನೆ ನೀಡಿದ್ದಾರೆ. https://kannadanewsnow.com/kannada/kas-exam-controvorcyt-to-refund-the-examination-fee-with-interest-bjps-p-rajeev-demands/ https://kannadanewsnow.com/kannada/breaking-big-shock-to-bengaluru-people-water-tariff-hike-almost-fixed-tariff-likely-to-go-up-in-january-2-week/
ಬೆಂಗಳೂರು: ಮುಖ್ಯಮಂತ್ರಿಗಳೇ ನೇಮಿಸುವ ಐಎಎಸ್ ಅಧಿಕಾರಿಯಾದ ಕಾರ್ಯದರ್ಶಿ ಹಾಗೂ ಪರೀಕ್ಷಾ ನಿಯಂತ್ರಣಾಧಿಕಾರಿ ಕೆಪಿಎಸ್ಸಿ ಪರೀಕ್ಷೆಗಳನ್ನು ನಿಭಾಯಿಸುತ್ತಾರೆ. ಆದ್ದರಿಂದ ಕೆಪಿಎಸ್ಸಿ ಪರೀಕ್ಷಾ ವೈಫಲ್ಯದ ಜವಾಬ್ದಾರಿಯನ್ನು ಸ್ವತಃ ಮುಖ್ಯಮಂತ್ರಿಗಳೇ ಹೊರಬೇಕಾಗುತ್ತದೆ ಎಂದು ವಿಧಾನಪರಿಷತ್ ಮಾಜಿ ಸದಸ್ಯ ಅರುಣ್ ಶಹಾಪುರ ಅವರು ತಿಳಿಸಿದ್ದಾರೆ. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಅವರು, ಕೆಪಿಎಸ್ಸಿ ವ್ಯವಸ್ಥೆಯನ್ನು ಸರಿ ಮಾಡುವ ದೃಷ್ಟಿಯಿಂದ ತಕ್ಷಣ ಉನ್ನತ ಮಟ್ಟದ ತನಿಖೆ ನಡೆಸಬೇಕು. ಪರೀಕ್ಷಾ ಅಕ್ರಮ ದೊಡ್ಡ ಪ್ರಮಾಣದಲ್ಲಿದೆ. ಅದನ್ನು ತಡೆಯಲು ಸಾಕಷ್ಟು ಕಠಿಣ ಕಾನೂನುಗಳನ್ನು ರೂಪಿಸುವ ಕೆಲಸವನ್ನು ಹಿಂದಿನ ಸರಕಾರ ಮಾಡಿದೆ ಎಂದರು. ಕರ್ನಾಟಕದಲ್ಲಿ ಈಗ ತನಿಖೆ ಎಂದರೆ ಪ್ರಹಸನ ಎಂಬಂತಾಗಿದೆ. ಮಾತೆತ್ತಿದರೆ ಎಸ್ಐಟಿ, ಸಿಐಡಿ ಎನ್ನುತ್ತಿದ್ದಾರೆ. ಸ್ವತಂತ್ರ ನ್ಯಾಯಾಂಗದ ಸುಪರ್ದಿಯಲ್ಲಿ ತನಿಖೆ ನಡೆಯಬೇಕು ಎಂದು ಪ್ರಶ್ನೆಗೆ ಉತ್ತರ ನೀಡಿದರು. ಕಾನೂನಿನ ಭಯವೇ ಇರದ ವ್ಯಕ್ತಿಗಳು ನಿರ್ಮಾಣವಾಗಿದ್ದಾರೆ. ಕೆಪಿಎಸ್ಸಿಗೆ ಕಾಯಕಲ್ಪ ಕೊಡಲು ಸಮಗ್ರ ತೀರ್ಮಾನ ಕೈಗೊಳ್ಳುವ ಕಾಲ ಈಗ ಬಂದಿದೆ ಎಂದು ಪ್ರಶ್ನೆಗೆ ಉತ್ತರ…
ಬೆಂಗಳೂರು ನಗರ ಜಿಲ್ಲೆ: ತೋಟಗಾರಿಕೆ ಇಲಾಖೆಯ ಜೈವಿಕ ಕೇಂದ್ರ, ಹುಳಿಮಾವು, ಬೆಂಗಳೂರು ಇಲ್ಲಿ ಜನವರಿ 04 ರಂದು “ಅಣಬೆ ಬೇಸಾಯ” (Production Technology of Mushroom) ಒಂದು ದಿನದ ತರಬೇತಿ ಕಾರ್ಯಕ್ರಮವನ್ನು ನಗರವಾಸಿಗಳಿಗೆ, ರೈತರಿಗೆ, ಸಾರ್ವಜನಿಕರಿಗೆ ಮತ್ತು ವಿದ್ಯಾರ್ಥಿಗಳಿಗೆ ಹಮ್ಮಿಕೊಳ್ಳಲಾಗಿದೆ. ತರಬೇತಿಯಲ್ಲಿ ಭಾಗವಹಿಸಲು ಇಚ್ಛಿಸುವವರು ರೂ. 250/- ಗಳನ್ನು ಜೈವಿಕ ಕೇಂದ್ರ, ಹುಳಿಮಾವು, ಬೆಂಗಳೂರು ರವರ ಕಚೇರಿಯಲ್ಲಿ ತರಬೇತಿಯ ದಿನದಂದು ಪಾವತಿಸಿ ನೊಂದಣಿಯನ್ನು ಮಾಡಿಕೊಳ್ಳಬಹುದು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ : 9449833153, 9066764248, 7892618755 ಅಥವಾ ಇ-ಮೇಲ್ sadh.co23@gmail.com, jaivikakendra.hulimavu@gmail.com ಮೂಲಕ ಸಂಪರ್ಕಿಸಬಹುದು ಎಂದು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. https://kannadanewsnow.com/kannada/isro-to-launch-us-satellite-to-enable-voice-calls-via-smartphones-from-space/ https://kannadanewsnow.com/kannada/breaking-big-shock-to-bengaluru-people-water-tariff-hike-almost-fixed-tariff-likely-to-go-up-in-january-2-week/
ಬೆಂಗಳೂರು: ವಿಷಯಾಧಾರಿತ ಹೋರಾಟ ನಡೆಸದೇ ಮತ್ತೆ ಮತ್ತೆ ಕೋಮು ರಾಜಕೀಯ, ಶವ ರಾಜಕೀಯ ಮಾಡುತ್ತಿದ್ದರೆ ಜನ ನಿಮ್ಮನ್ನು ಮತ್ತೊಮ್ಮೆ ತಿರಸ್ಕರಿಸುವುದು ನಿಶ್ಚಿತ ಎಂಬುದಾಗಿ ಸಚಿವ ಡಾ.ಹೆಚ್.ಸಿ ಮಹದೇವಪ್ಪ ತಿಳಿಸಿದ್ದಾರೆ. ಇಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಸಚಿವ ಸಂಪುಟದ ಸದಸ್ಯರಾದ ಪ್ರಿಯಾಂಕ್ ಖರ್ಗೆ ಅವರ ರಾಜೀನಾಮೆಯನ್ನು ಕೇಳುತ್ತಿರುವ ಬಜೆಪಿಗರು ಎಂದಿನಂತೆ ಆಡಳಿತ ಪಕ್ಷದ ಮೇಲೆ ದ್ವೇಷಕ್ಕಾಗಿಯೇ ದ್ವೇಷ ಎಂಬ ತಮ್ಮ ಅನೀತಿಯನ್ನು ಮುಂದುವರೆಸುವ ಪ್ರಯತ್ನ ಮಾಡುತ್ತಿದ್ದಾರೆ ಎಂದಿದ್ದಾರೆ. ವಿಷಯಾಧಾರಿತವಾಗಿ ಮಾತನಾಡುವ ಪ್ರಿಯಾಂಕ್ ಖರ್ಗೆ ಅವರ ವಿರುದ್ಧ ಹಿಂದಿನಿಂದಲೂ ದೊಡ್ಡ ಮಟ್ಟದ ಅಸಹನೆಯನ್ನು ಹೊಂದಿರುವ ಬಿಜೆಪಿಗರು ಇದೀಗ ಬಿಜೆಪಿ ಪಕ್ಷದವರೊಂದಿಗೆ ನಂಟನ್ನು ಇಟ್ಟುಕೊಂಡಿರುವ ಸಚಿನ್ ಎಂಬ ವ್ಯಕ್ತಿಯ ಸಾವನ್ನು ಇಟ್ಟುಕೊಂಡು ರಾಜಕೀಯ ಮಾಡುತ್ತಿದ್ದಾರೆ ಕಿಡಿಕಾರಿದ್ದಾರೆ. ಈ ಹಿಂದೆ ನಮ್ಮ ಸರ್ಕಾರ ಅಧಿಕಾರದಲ್ಲಿ ಇದ್ದಾಗಲೂ ಕೂಡಾ ವಿಷತಾಧಾರಿತವಾಗಿ ರಾಜಕೀಯ ಮಾಡಲು ಬಾರದೇ ಕೇವಲ ಶವ ರಾಜಕೀಯದ ಮೂಲಕವೇ ನಮ್ಮ ಸರ್ಕಾರದ ವಿರುದ್ಧ ಅಪಪ್ರಚಾರ ನಡೆಸುವ ಕೆಟ್ಟ ಕೆಲಸ ಮಾಡಿದ್ದ ಬಿಜೆಪಿಗರು ಸಿಬಿಐ ತನಿಖೆಯ…













