Author: kannadanewsnow09

ನ್ಯೂ ಓರ್ಲಿಯನ್ಸ್: ಇಲ್ಲಿನ ಫ್ರೆಂಚ್ ಕ್ವಾರ್ಟರ್ನ ಬೋರ್ಬನ್ ಸ್ಟ್ರೀಟ್ನಲ್ಲಿ ಬುಧವಾರ ಮುಂಜಾನೆ ವಾಹನವೊಂದು ಹೆಚ್ಚಿನ ವೇಗದಲ್ಲಿ ಜನಸಮೂಹಕ್ಕೆ ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ. ಇದು ಸಾಮೂಹಿಕ ಸಾವುನೋವು ಘಟನೆಗೆ ಕಾರಣವಾಯಿತು ಎಂದು ಬಿಬಿಸಿಯ ಯುಎಸ್ ಪಾಲುದಾರ ಸಿಬಿಎಸ್ ನ್ಯೂಸ್ ತಿಳಿಸಿದೆ. ನಂತರ ಚಾಲಕ ವಾಹನದಿಂದ ಹೊರಬಂದು ಆಯುಧವನ್ನು ಹಾರಿಸಲು ಪ್ರಾರಂಭಿಸಿದನು. ಇದರಿಂದಾಗಿ ಪೊಲೀಸರು ಗುಂಡು ಹಾರಿಸಲು ಪ್ರೇರೇಪಿಸಿದರು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ. ಪ್ರತ್ಯಕ್ಷದರ್ಶಿಗಳ ಪ್ರಕಾರ, ಅನೇಕ ವ್ಯಕ್ತಿಗಳು ಗಾಯಗಳೊಂದಿಗೆ ನೆಲದ ಮೇಲೆ ಕಂಡುಬಂದಿದ್ದಾರೆ. ನ್ಯೂ ಓರ್ಲಿಯನ್ಸ್ ಪೊಲೀಸ್ ಇಲಾಖೆಯ ವಕ್ತಾರರು ಸಿಬಿಎಸ್ ನ್ಯೂಸ್ಗೆ ಖಚಿತಪಡಿಸಿದ್ದು, ಆರಂಭಿಕ ವರದಿಗಳು ಕಾರು ಜನರ ಗುಂಪಿಗೆ ಡಿಕ್ಕಿ ಹೊಡೆದಿರಬಹುದು ಎಂದು ಸೂಚಿಸುತ್ತವೆ. ಗಾಯಗಳ ಪ್ರಮಾಣ ಅಸ್ಪಷ್ಟವಾಗಿದ್ದರೂ, ಸಾವುನೋವುಗಳು ವರದಿಯಾಗಿವೆ. ಘಟನೆ ಇನ್ನೂ ತನಿಖೆಯಲ್ಲಿದೆ ಮತ್ತು ಹೆಚ್ಚಿನ ವಿವರಗಳನ್ನು ಸಂಗ್ರಹಿಸಲು ಅಧಿಕಾರಿಗಳು ಕೆಲಸ ಮಾಡುತ್ತಿದ್ದಾರೆ. ಸದ್ಯದ ಮಾಹಿತಿಯ ಪ್ರಕಾರ ಒಬ್ಬರು ಸಾವನ್ನಪ್ಪಿದ್ದು, ಇನ್ನೂ ಹಲವರು ಗಾಯಗೊಂಡಿರೋದಾಗಿ ಹೇಳಲಾಗುತ್ತಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ. https://kannadanewsnow.com/kannada/new-years-eve-15-mt-of-waste-collected-in-and-around-mg-road-in-bengaluru/ https://kannadanewsnow.com/kannada/fir-lodged-against-ct-ravi-13-others-for-poster-campaign-against-priyank-kharge/…

Read More

ಬೆಂಗಳೂರು: ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಪ್ರಕರಣ ಸಂಬಂಧ ಬಿಜೆಪಿಯಿಂದ ಪೋಸ್ಟರ್ ಅಭಿಯಾನವನ್ನು ಆರಂಭಿಸಲಾಗಿತ್ತು. ಬೆಂಗಳೂರಿನ ಹಲವೆಡೆ ಗೋಡೆಗಳಿಗೆ ಬಿಜೆಪಿಯಿಂದ ಪೋಸ್ಟರ್ ಕೂಡ ಅಂಟಿಸಲಾಗಿತ್ತು. ಈ ಹಿನ್ನಲೆಯಲ್ಲಿ ಪರಿಷತ್ ಸದಸ್ಯ ಸಿ.ಟಿ ರವಿ, ಎನ್.ರವಿಕುಮಾರ್ ಸೇರಿದಂತೆ 13 ಜನರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿಯಿಂದ ಪೋಸ್ಟರ್ ಅಭಿಯಾನ ನಡೆಸಲಾಗಿತ್ತು. ಈ ಹಿನ್ನಲೆಯಲ್ಲಿ ಪಿಎಸ್ಐ ಶಶಿಧರ ವಣ್ಣೂರ ಅವರು ನೀಡಿದಂತ ದೂರಿನ ಹಿನ್ನಲೆಯಲ್ಲಿ ಬೆಂಗಳೂರಿನ ಹೈಗ್ರೌಂಡ್ ಪೊಲೀಸ್ ಠಾಣೆಯಲ್ಲಿ ಸಿ.ಟಿ ರವಿ ಸೇರಿದಂತೆ 13 ಜನರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಪರಿಷತ್ ಸದಸ್ಯ ಸಿ.ಟಿ ರವಿ, ಎನ್ ರವಿ ಕುಮಾರ್ ಸೇರಿದಂತೆ ಇತರೆ 13 ಬಿಜೆಪಿ ಮುಖಂಡರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಅಕ್ರಮವಾಗಿ ರಸ್ತೆಯಲ್ಲಿ ಗುಂಪು ಸೇರಿ ಸಾರ್ವಜನಿಕರಿಗೆ ಅಡ್ಡಿ ಆರೋಪದಲ್ಲಿ ಈ ಕೇಸ್ ದಾಖಲಾಗಿದೆ. https://kannadanewsnow.com/kannada/new-years-eve-15-mt-of-waste-collected-in-and-around-mg-road-in-bengaluru/ https://kannadanewsnow.com/kannada/sagarotsava-2025-to-be-held-at-sagar-on-jan-5-bhoomanni-basket-competition-miracle-show-to-be-held/

Read More

ಬೆಂಗಳೂರು: ನಗರದ ಪೂರ್ವ ವಲಯ ವ್ಯಾಪ್ತಿಯ ಎಂ.ಜಿ ರಸ್ತೆಯ ಸುತ್ತಮುತ್ತಲಿನ ರಸ್ತೆ/ಪ್ರದೇಶಗಳಲ್ಲಿ ಹೊಸ ವರ್ಷಾರಣೆಯ ಸಂದರ್ಭದಲ್ಲಿ ರಸ್ತೆಗಳಲ್ಲಿ ಬಿದ್ದಿದ್ದ ಸುಮಾರು 15 ಮೆಟ್ರಿಕ್ ಟನ್ ತ್ಯಾಜ್ಯ-ಅನುಪಯುಕ್ತ ವಸ್ತುಗಳನ್ನು ಸಂಗ್ರಹಿಸಲಾಗಿದೆ. ಪೂರ್ವ ವಲಯ ಆಯುಕ್ತರಾದ ಸ್ನೇಹಲ್, ಬಿ.ಎಸ್.ಡಬ್ಲ್ಯೂ.ಎಂ.ಎಲ್ ನ ಮುಖ್ಯ ಪ್ರಧಾನ ವ್ಯವಸ್ಥಾಪಕರಾದ ಬಸವರಾಜ್ ಕಬಾಡೆ ರವರ ನೇತೃತ್ವದಲ್ಲಿ ಹೊಸ ವರ್ಷಾಚರಣೆಯ ಹಿನ್ನೆಲೆ ನಗರದ ಸಿಬಿಡಿ ರಸ್ತೆಗಳಲ್ಲಿ ಬಿದ್ದಿದ್ದ ತ್ಯಾಜ್ಯವನ್ನು ಬೆಂಗಳೂರು ಘನತ್ಯಾಜ್ಯ ನಿರ್ವಹಣೆ ನಿಯಮಿತ ವಿಭಾಗದ ಮೇಲ್ವಿಚಾರಣೆಯಲ್ಲಿ ಬೆಳಗ್ಗೆಯೊಳಗಾಗಿ ಸಂಪೂರ್ಣ ಸ್ವಚ್ಛತಾ ಕಾರ್ಯವನ್ನು ನಡೆಸಲಾಗಿರುತ್ತದೆ. ಎಂಜಿ ರಸ್ತೆ, ಬ್ರಿಗೇಡ್ ರಸ್ತೆ, ಚರ್ಚ್ ಸ್ತ್ರೀಟ್, ರಿಸಿಡೆನ್ಸಿ ರಸ್ತೆ, ರಿಚ್‌ಮಂಡ್ ರಸ್ತೆ, ಸೇಂಟ್ ಮಾರ್ಕ್ಸ್ ರಸ್ತೆ, ಕಸ್ತೂರ್ ಬಾ ರಸ್ತ್ತೆ ಸೇರಿದಂತೆ ಮುಂತಾದ ರಸ್ತೆಗಳಲ್ಲಿ ಮುಂಜಾನೆ 3.00ರಿಂದ ಸ್ವಚ್ಛತಾ ಕಾರ್ಯ ಆರಂಭಿಸಿ ಬೆಳಗ್ಗೆ 7.00ರ ವೇಳೆಗೆ ಪೂರ್ಣಗೊಳಿಸಿ ಸುಮಾರು 15 ಮೆ. ಟನ್ ತ್ಯಾಜ್ಯವನ್ನು ಬೀದಿಗಳಿಂದ ತೆರವುಗೊಳಿಸಿ ರಸ್ತೆಗಳನ್ನು ಸ್ವಚ್ಛಗೊಳಿಸಿ ನಾಗರಿಕರ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ. ಸ್ವಚ್ಛತಾ ಕಾರ್ಯವು ಶಾಂತಿನಗರ ವಿಭಾಗದ ಘನತ್ಯಾಜ್ಯ ವಿಭಾಗದಿಂದ…

Read More

ಶಿವಮೊಗ್ಗ: ಸಾಗರ ಸುತ್ತ ವಾರಪತ್ರಿಕೆಯ ನೇತೃತ್ವದಲ್ಲಿ ಇದೇ ಜನವರಿ 5, 2025ರಂದು ಸಾಗರೋತ್ಸವ -2025 ಕಾರ್ಯಕ್ರಮವನ್ನು ಸಾಗರದಲ್ಲಿ ಆಯೋಜಿಸಲಾಗಿದೆ. ಒಂದೇ ದಿನ ಬೆಳಗ್ಗೆಯಿಂದ ಸಂಜೆಯವರೆಗೆ ಭೂಮಣ್ಣಿ ಬುಟ್ಟಿ ಚಿತ್ತಾರ ಬಿಡಿಸುವವರಿಗೂ ಸ್ಪರ್ಧೆ, ಪವಾಡ ಬಯಲು, ಇತಿಹಾಸ ಸಮ್ಮೇಳನ ಸೇರಿದಂತೆ ನಾಲ್ಕು ವಿವಿಧ ಕಾರ್ಯಕ್ರಮವನ್ನು ಸಾಗರದ ನಗರಸಭೆ ಆವರಣದಲ್ಲಿನ ಗಾಂಧಿ ಮೈದಾನದಲ್ಲಿ ಆಯೋಜಿಸಲಾಗಿದೆ. ಈ ಕುರಿತಂತೆ ಕನ್ನಡ ನ್ಯೂಸ್ ನೌಗೆ ಮಾಹಿತಿ ನೀಡಿರುವಂತ ಸಾಗರ ಸುತ್ತ ವಾರಪತ್ರಿಕೆಯ ಪ್ರಧಾನ ಸಂಪಾದಕರಾದಂತ ನಾಗೇಶ್.ಜಿ ಅವರು, ದಿನಾಂಕ 05-01-2025ರ ಭಾನುವಾರದಂದು ಸಾಗರೋತ್ಸವ -2025 ಕಾರ್ಯಕ್ರಮವನ್ನು ಸಾಗರದಲ್ಲಿ ಆಯೋಜಿಸಲಾಗಿದೆ. ಸಾಗರದ ಜನರು ಹೆಚ್ಚಾಗಿ ಭಾಗಿಯಾಗುವ ಮೂಲಕ ಕಾರ್ಯಕ್ರಮ ಯಶಸ್ವಿಗೊಳಿಸುವಂತೆ ಕೋರಿದರು. ಒಂದೇ ದಿನ ನಾಲ್ಕು ಕಾರ್ಯಕ್ರಮ ಜನವರಿ.5, 2025ರಂದು ಒಂದೇ ದಿನ ಸಾಗರಸುತ್ತ ಪತ್ರಿಕಾ ಬಳಗ, ಸಹೃದಯ ಬಳಗ(ರಿ) ಹಾಗೂ ಸಾಗರ ತಾಲ್ಲೂಕು ಇತಿಹಾಸ ವೇದಿಕೆಯಿಂದ ಮೂರು ಕಾರ್ಯಕ್ರಮ ಆಯೋಜಿಸಲಾಗಿದೆ. ಭೂಮಣ್ಣಿಬುಟ್ಟಿ ಸ್ಪರ್ಧೆ, ಸಾಗರ ತಾಲ್ಲೂಕು ಮಟ್ಟದ 6ನೇ ಇತಿಹಾಸ ಸಮ್ಮೇಳನ, ಆಹಾರ ಮೇಳೆ ಮತ್ತು ವಸ್ತು…

Read More

ಮಡಿಕೇರಿ: ಜಮ್ಮು-ಕಾಶ್ಮೀರದ ಪೂಂಚ್ ನಲ್ಲಿ ಸೇನಾ ವಾಹನ ಅಪಘಾತಗೊಂಡು ಕೊನೆಯುಸಿರೆಳೆದಿದ್ದಂತ ಕೊಡಗಿನ ಯೋಧ ದಿವಿನ್(28) ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ಹುಟ್ಟೂರು ಆಲೂರು ಸಿದ್ದಾಪುರ ಗ್ರಾಮದಲ್ಲಿ ನೆರವೇರಿಸಲಾಯಿತು. ಕೊಡಗು ಜಿಲ್ಲೆಯ ಸೋಮವಾರಪೇಟೆ ತಾಲ್ಲೂಕಿನ ಆಲೂರು ಸಿದ್ದಾಪುರ ಗ್ರಾಮದಲ್ಲಿ ಜಮ್ಮು-ಕಾಶ್ಮೀರದಲ್ಲಿ ಸೇನಾವಾಹನ ಅಪಘಾತದಲ್ಲಿ ಕೊನೆಯುಸಿರೆಳೆದಂತ ಯೋಧ ದಿವಿನ್ ಅಂತ್ಯಕ್ರಿಯೆನ್ನು ಕುಟುಂಬಸ್ಥರು ಇಂದು ನೆರವೇರಿಸಿದರು. ಇಂದು ಬೆಳಿಗ್ಗೆ ಕುಶಾಲನಗರದ ಸರ್ಕಾರಿ ಆಸ್ಪತ್ರೆಯಿಂದ ಯೋಧ ದಿವಿನ್ ಪಾರ್ಥೀವ ಶರೀರವನ್ನು ಹುಟ್ಟೂರು ಆಲೂರು ಸಿದ್ದಾಪುರ ಗ್ರಾಮಕ್ಕೆ ಕೊಂಡೊಯ್ಯಲಾಯಿತು. ಸಾರ್ವಜನಿಕರ ಅಂತಿಮ ದರ್ಶನದ ಬಳಿಕ ದಿವಿನ್ ಅವರ ತೋಟದಲ್ಲಿರುವ ತಂದೆಯ ಸಮಾಧಿಯ ಬಳಿಯಲ್ಲೇ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ನೆರವೇರಿಸಲಾಯಿತು. https://kannadanewsnow.com/kannada/govardhan-arrested-for-attempting-to-cheat-in-the-name-of-union-minister-v-somanna/ https://kannadanewsnow.com/kannada/mother-four-sisters-murder-arshad-wanted-to-become-hindu/

Read More

ತುಮಕೂರು: ಕೇಂದ್ರ ಸಚಿವ ವಿ.ಸೋಮಣ್ಣ ಹೆಸರಲ್ಲಿ ವಂಚನೆಗೆ ಯತ್ನಿಸಿದಂತ ಆರೋಪಿ ಗೋವರ್ಧನ್ ಎಂಬಾತನನ್ನು ಪೊಲೀಸರು ಬಂಧಿಸಿ ಜೈಲಿಗಟ್ಟಿದ್ದಾರೆ. ಈ ಮೂಲಕ ವಂಚನೆ ಕೇಸ್ ಗೆ ಬ್ರೇಕ್ ಹಾಕಿದ್ದಾರೆ. ಕೇಂದ್ರ ಸಚಿವ ವಿ.ಸೋಮಣ್ಣ ಅವರ ಆಪ್ತ ಸಹಾಯಕ ನೀಡಿದಂತ ದೂರಿನ ಹಿನ್ನಲೆಯಲ್ಲಿ ತುಮಕೂರು ಪೊಲೀಸರು ಆರೋಪಿ ಗೋವರ್ಧನ್ ಎಂಬಾತನನ್ನು ಬಂಧಿಸಿದ್ದಾರೆ. ಅಂದಹಾಗೇ ಆರೋಪಿ ಗೋವರ್ಧನ್ ಜನರಿಗೆ ಗಂಗಾಕಲ್ಯಾಣ ಯೋಜನೆ ಮಾಡಿಸಿಕೊಡುವುದಾಗಿ ಹೇಳುತ್ತಿದ್ದರಂತೆ. ಇದಕ್ಕಾಗಿ ಕೇಂದ್ರ ಸಚಿವ ವಿ.ಸೋಮಣ್ಣ ಹಾಗೂ ರಾಜ್ಯ ಸರ್ಕಾರ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರ ಲೆಟರ್ ಹೆಡ್ ಹಾಗೂ ಸಹಿಯನ್ನು ನಕಲಿ ಮಾಡಿ, ವಂಚನೆಗೆ ಯತ್ನಿಸಿದ್ದರಂತೆ. ಈ ವಿಷಯವ ತಿಳಿದು ಬಂದ ಕಾರಣ, ಸೋಮಣ್ಣ ಆಪ್ತ ಸಹಾಯಕ ದೂರು ನೀಡಿದ್ದರು. ಈ ದೂರಿನ ಹಿನ್ನಲೆಯಲ್ಲಿ ಮಿಡಿಗೇಶಿ ಮೂಲದ ಗೋವರ್ಧನ್ ಬಂಧಿಸಿ, ಜೈಲಿಗಟ್ಟಿದ್ದಾರೆ. https://kannadanewsnow.com/kannada/mother-four-sisters-murder-arshad-wanted-to-become-hindu/ https://kannadanewsnow.com/kannada/breaking-yadgir-man-hacked-to-death-with-knife/

Read More

ಬೆಂಗಳೂರು: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆಯವರು ತಮ್ಮ ಮಗನಿಗೆ ಬುದ್ಧಿ ಹೇಳಲಿ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್ ಅವರು ಆಗ್ರಹಿಸಿದ್ದಾರೆ. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಎಐಸಿಸಿ ಅಧ್ಯಕ್ಷರೇ ನೀವಾದರೂ ಬುದ್ಧಿ ಹೇಳಿ. ಸುಪಾರಿ ಕೊಟ್ಟಂಥ ಇಷ್ಟು ದೊಡ್ಡ ಆರೋಪ ಯಾವ ಸಚಿವರ ಮೇಲೂ ಬಂದಿಲ್ಲ; ಆರೋಪಮುಕ್ತನಾಗುವವರೆಗೆ ನೀನು (ಪ್ರಿಯಾಂಕ ಖರ್ಗೆ) ಸಚಿವನಾಗಿ ಮುಂದುವರೆಯಬೇಡ ಎಂದು ನಿಮ್ಮ ಮಗನಿಗೆ ನೀವಾದರೂ ಬುದ್ಧಿ ಹೇಳಿ ಎಂಬುದಾಗಿ ಮಲ್ಲಿಕಾರ್ಜುನ ಖರ್ಗೆಯವರನ್ನು ಒತ್ತಾಯಿಸಿದರು. ಸುಪಾರಿ ಕೊಡುವ ಸಚಿವ ಪ್ರಿಯಾಂಕ ಖರ್ಗೆಯವರನ್ನು ನೀವು ಹೇಗೆ ಸಚಿವಸಂಪುಟದಲ್ಲಿ ಇಟ್ಟುಕೊಳ್ಳುತ್ತೀರಿ ಸಿದ್ದರಾಮಯ್ಯನವರೇ? ಎಂದರಲ್ಲದೆ, ಭ್ರಷ್ಟಾಚಾರಕ್ಕಾಗಿ ಹಿಂಸಿಸಿ ಸಾವಿಗೆ ದುಷ್ಪ್ರೇರಣೆ ಆಗಿದ್ದು, ಅದರಲ್ಲಿ ನೇರವಾಗಿ ಸಚಿವರೇ ಭಾಗಿಯಾಗಿದ್ದಾರೆ. ಸುಪಾರಿ ಕೊಟ್ಟದ್ದಕ್ಕೆ ಬೆನ್ನಿಗೆ ನಿಂತರೆ ಸುಪಾರಿ ಕೊಟ್ಟಿದ್ದೀರೆಂದೇ ಅರ್ಥ. ಸಂವಿಧಾನದ ಬಗ್ಗೆ ಮಾತನಾಡುವ ಖರ್ಗೆ, ಕಾಂಗ್ರೆಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷರ ಮಗ ಸುಪಾರಿಯಲ್ಲಿ ಭಾಗವಹಿಸಿದ್ದಾರೆ ಎಂದರೆ, ಇವರು ಸಚಿವರಾಗಿ ಒಂದು…

Read More

ನವದೆಹಲಿ: ಸುರಕ್ಷಿತ ಹೂಡಿಕೆಯಾಗಿ, ಚಿನ್ನದ ಬೆಲೆ ಹೊಸ ವರ್ಷದಲ್ಲಿಯೂ ದಾಖಲೆಯ ಮಟ್ಟವನ್ನು ತಲುಪಬಹುದು. 22 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 85,000 ರೂ. ಭೌಗೋಳಿಕ, ರಾಜಕೀಯ ಉದ್ವಿಗ್ನತೆ ಮತ್ತು ಜಾಗತಿಕ ಆರ್ಥಿಕ ಅನಿಶ್ಚಿತತೆಗಳು ಮುಂದುವರಿದರೆ, ಇದು ದೇಶೀಯ ಮಾರುಕಟ್ಟೆಯಲ್ಲಿ 90,000 ರೂ.ಗಳ ಮಟ್ಟವನ್ನು ತಲುಪಬಹುದು. ವಿತ್ತೀಯ ನೀತಿಯಲ್ಲಿ ಹೊಂದಾಣಿಕೆಯ ನಿಲುವು ಮತ್ತು ಕೇಂದ್ರ ಬ್ಯಾಂಕುಗಳ ಖರೀದಿ ಕೂಡ ಚಿನ್ನದ ಏರಿಕೆಗೆ ಸಹಾಯ ಮಾಡುತ್ತಿದೆ. ಆದಾಗ್ಯೂ, ಭೌಗೋಳಿಕ ರಾಜಕೀಯ ಬಿಕ್ಕಟ್ಟು ಕಡಿಮೆಯಾದರೆ, ರೂಪಾಯಿ ಮೌಲ್ಯ ಕುಸಿಯುವುದನ್ನು ನಿಲ್ಲಿಸುತ್ತಿದ್ದಂತೆ ಅಮೂಲ್ಯ ಲೋಹವು ದುರ್ಬಲಗೊಳ್ಳಬಹುದು. ಪ್ರಸ್ತುತ, ಸ್ಪಾಟ್ ಮಾರುಕಟ್ಟೆಯಲ್ಲಿ ಚಿನ್ನದ ಬೆಲೆ 10 ಗ್ರಾಂಗೆ 79,350 ರೂ ಮತ್ತು ಮಲ್ಟಿ ಕಮೋಡಿಟಿ ಎಕ್ಸ್ಚೇಂಜ್ (ಎಂಸಿಎಕ್ಸ್) ನಲ್ಲಿ ಫ್ಯೂಚರ್ಸ್ ಟ್ರೇಡ್ನಲ್ಲಿ 10 ಗ್ರಾಂಗೆ 76,600 ರೂ ಆಗಿದೆ. 2024 ರಲ್ಲಿ ಚಿನ್ನವು ಶೇಕಡಾ 23 ರಷ್ಟು ಆದಾಯವನ್ನು ನೀಡಿತು, ಬೆಳ್ಳಿ ಶೇಕಡಾ 30 ರಷ್ಟು ಹೆಚ್ಚಳ ಚಿನ್ನವು ಬಲವಾಗಿ ಕಾರ್ಯನಿರ್ವಹಿಸಿತು, 2024 ರಲ್ಲಿ ಅದರ ಹೊಸ…

Read More

ಬೆಳಗಾವಿ: ಜಿಲ್ಲೆಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಕಾರು ಸಹಿತ ಕೆರೆಗೆ ಬಿದ್ದಂತ ವ್ಯಕ್ತಿಯೊಬ್ಬ ಸಾವನ್ನಪ್ಪಿರುವಂತ ಘಟನೆ ಬೆಳಗಾವಿ ಜಿಲ್ಲೆಯ ಬೆನಕನಹೊಳಿಯಲ್ಲಿ ನಡೆದಿದೆ. ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲ್ಲೂಕಿ ದಡ್ಡಿ ಗ್ರಾಮ ನಿವಾಸಿಯಾಗಿದ್ದಂತ ಕಿರಣ್ ನಾವಲಗಿ ಎಂಬಾತ ಕಾರು ಚಾಲನೆ ಮಾಡಿಕೊಂಡು ತೆರಳುತ್ತಿದ್ದಂತ ಸಂದರ್ಭದಲ್ಲಿ ನಿಯಂತ್ರಣ ತಪ್ಪಿ ಕೆರೆಗೆ ಬಿದ್ದಿದೆ. ಕಾರಿನ ಒಳಗಡೆ ಸಿಲುಕಿಕೊಂಡಿದ್ದಂತ ಕಿರಣ್ ನೀರಿನಿಂದ ಹೊರ ಬರಲಾಗದೇ ಮುಳುಗಿ ಸಾವನ್ನಪ್ಪಿದ್ದಾನೆ. ಮೃತ ಕಿರಣ್ ನಾವಲಗಿ(45) ಹುಕ್ಕೇರಿ ತಾಲ್ಲೂಕಿನ ದಡ್ಡಿ ಗ್ರಾಮದವರು ಎಂಬುದಾಗಿ ತಿಳಿದು ಬಂದಿದೆ. ಸ್ಥಳಕ್ಕೆ ಆಗಮಿಸಿದಂತ ಅಗ್ನಿಶಾಮಕ ಸಿಬ್ಬಂದಿ ಕಾರು ಮೇಲೆತ್ತುವ ಕಾರ್ಯದಲ್ಲಿ ತೊಡಗಿದ್ದಾರೆ. https://kannadanewsnow.com/kannada/do-you-suffer-from-frequent-colds-sneezes-heres-the-solution/ https://kannadanewsnow.com/kannada/mother-four-sisters-murder-arshad-wanted-to-become-hindu/

Read More

ಚಳಿಗಾಲದ ಒಣಹವೆ, ಶೀತಲ ಗಾಳಿಯಿಂದ ವಾತಾವರಣದಲ್ಲಿ ಹಲವಾರು ಬದಲಾವಣೆಯಾದಂತೆ, ಇದಕ್ಕೆ ಅನುಗುಣವಾಗಿ ಮನುಷ್ಯನ ದೇಹದಲ್ಲಿಯೂ ಬದಲಾವಣೆಗಳು ಉಂಟಾಗುತ್ತದೆ ಮತ್ತು ಅನೇಕ ಅರೋಗ್ಯ ಸಮಸ್ಯೆಗಳನ್ನು ತಂದೊಡ್ಡುತ್ತದೆ. ಅವುಗಳೆಂದರೆ ಸಂಧಿಗಳಲ್ಲಿ ನೋವು, ಶೀತ ಮತ್ತು ಕೆಮ್ಮು, ಕಿವಿಯಲ್ಲಿ ಸೋಂಕು ಮುಂತಾದವು. ಕೇವಲ ಚಳಿಗಾಲದಲ್ಲದೇ ಎಲ್ಲಾ ಋತುಗಳಲ್ಲಿ ಕಾಡುವ ಸಾಮಾನ್ಯ ಶೀತದ ಬಗ್ಗೆ ಮುಂದೆ ತಿಳಿಯೋಣ. ಆಯುರ್ವೇದ ದಲ್ಲಿ ಪದೇ ಪದೇ ಶೀತವಾಗುವುದನ್ನು ಪ್ರತಿಶ್ಯಾಯ ಎಂದು ಕರೆಯುತ್ತಾರ. ಪ್ರತಿಶ್ಯಾಯವು ಪ್ರತಿ ಮತ್ತು ಶ್ಯಾಯ ಎಂಬ ಎರಡು ಪದಗಳಿಂದ ಕೂಡಿದೆ. ಪ್ರತಿ ಎಂದರೆ ಅಭಿಮುಖ ( opposite direction) , ಶ್ಯಾಯ ಎಂದರೆ ಗಮನ / ಹರಿಯುವುದು ಎಂದರ್ಥ. ಪ್ರತಿಕ್ಷಣಮ್ ಶ್ಯಾಯತೆ ಇತಿ ಪ್ರತಿಶ್ಯಾಯಃ | ಅಂದರೆ ಯಾವ ರೋಗದಲ್ಲಿ ನಿರಂತರವಾಗಿ ( continuous flow) ಹರಿಯುವಿಕೆ ಇರುತ್ತದೆ ಅದನ್ನು ಪ್ರತಿಶ್ಯಾಯ ಎನ್ನುವರು. ಇದು ಕೆಲವರಿಗೆ ಚಳಿಗಾಲದಲ್ಲಿ ಅಥವಾ ಒಂದು ನಿರ್ದಿಷ್ಟ ಋತುವಿನಲ್ಲಿ ಬಂದರೆ ಇನ್ನು ಕೆಲವರಿಗೆ ವರ್ಷವಿಡಿ ಈ ಸಮಸ್ಯೆ ಕಾಡುತ್ತಿರುತ್ತದೆ.ಇದನ್ನು ಆಧುನಿಕ ವೈದ್ಯಕೀಯ ಶಾಸ್ತ್ರದಲ್ಲಿ…

Read More