Author: kannadanewsnow09

ಬೆಂಗಳೂರು : ಇತ್ತೀಚೆಗೆ ಲಿಂಗೈಕ್ಯರಾದ ಮಾಜಿ ಸಚಿವ ಶತಾಯುಷಿ ಲೋಕನಾಯಕ ಡಾ. ಭೀಮಣ್ಣ ಖಂಡ್ರೆ ಅವರ ಗೌರವಾರ್ಥ ಫೆ.14ರ ಶನಿವಾರ ಸಂಜೆ ನುಡಿನಮನ ಕಾರ್ಯಕ್ರಮವನ್ನು ಏರ್ಪಡಿಸಲಾಗಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಹಾಗೂ ವೀರಶೈವ ಲಿಂಗಾಯತ ಮಹಾಸಭಾ ರಾಷ್ಟ್ರೀಯ ಅಧ್ಯಕ್ಷ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಸುದ್ದಿಗಾರರಿಗೆ ವಿವರ ನೀಡಿದ ಅವರು, ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಮತ್ತು ಭಾಲ್ಕಿಯ ಶಾಂತಿವರ್ಧಕ ಶಿಕ್ಷಣ ಸಂಸ್ಥೆಯ ಆಶ್ರಯದಲ್ಲಿ ಬೆಂಗಳೂರು ಅರಮನೆ ಆವರಣದ ಗೇಟ್ 4ರಲ್ಲಿರುವ ಗಾಯತ್ರಿ ವಿಹಾರದಲ್ಲಿ ನುಡಿನಮನ ಕಾರ್ಯಕ್ರಮ ನಡೆಯಲಿದ್ದು, ಸುತ್ತೂರು ಸಂಸ್ಥಾನದ ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮೀಜಿ, ತರಳಬಾಳು ಬೃಹನ್ಮಠದ ಡಾ. ಶಿವಮೂರ್ತಿ ಶಿವಾಚಾರ್ಯರು, ಸಿದ್ದಗಂಗಾಮಠದ ಶ್ರೀ ಸಿದ್ದಲಿಂಗ ಮಹಾಸ್ವಾಮೀಜಿ, ಭಾಲ್ಕಿ ಹಿರೇಮಠದ ಡಾ. ಬಸವಲಿಂಗ ಪಟ್ಟದ್ದೇವರು ದಿವ್ಯ ಸಾನ್ನಿಧ್ಯ ವಹಿಸಲಿದ್ದಾರೆ ಎಂದು ತಿಳಿಸಿದರು. ರಾಜ್ಯಸಭೆಯ ಪ್ರತಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ, ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ಸಭಾಧ್ಯಕ್ಷರಾದ ಯು.ಟಿ. ಖಾದರ್,…

Read More

ನವದೆಹಲಿ : “ಬಿಜೆಪಿಯವರ ಹೋರಾಟ ಏನಿದ್ದರೂ ರಾಜಕೀಯಕ್ಕಾಗಿ ಹೊರತು ಜನರ ಹಿತಕ್ಕಾಗಿ ಇಲ್ಲ. ಸುದ್ದಿಯಲ್ಲಿರಬೇಕು ಎಂಬ ಕಾರಣಕ್ಕೆ ಹೋರಾಟ ಮಾಡುತ್ತಿದ್ದಾರೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ವಾಗ್ದಾಳಿ ನಡೆಸಿದರು. ದೆಹಲಿಯ ಕರ್ನಾಟಕ ಭವನದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಮಂಗಳವಾರ ಪ್ರತಿಕ್ರಿಯೆ ನೀಡಿದರು. ಮೆಟ್ರೋ ದರ ಏರಿಕೆ ವಿಚಾರವಾಗಿ ತೇಜಸ್ವಿ ಸೂರ್ಯ ಅವರ ಹೇಳಿಕೆ ಬಗ್ಗೆ ಕೇಳಿದಾಗ, “ಅವರ ಆದೇಶಕ್ಕೆ ಎಲ್ಲಿ ಲೆಕ್ಕಕ್ಕೆ ಇದೆ? ಕೇಂದ್ರ ಸರ್ಕಾರ ದರ ಏರಿಕೆಗೆ ತಡೆ ಹಿಡಿಯಬಹುದಾಗಿತ್ತಲ್ಲವೇ? ಬಿಜೆಪಿ ನಾಯಕರು ಯಾವ ಕಾನೂನಿನ ಅಡಿಯಲ್ಲಿ ಇದನ್ನು ತಡೆದಿದ್ದಾರೆ ಎಂದು ಹೇಳಲಿ. ಅವರು ಮಾಧ್ಯಮಗಳ ಮುಂದೆ ಮಾತನಾಡುತ್ತಾರೆ ಅಷ್ಟೇ. ಅವರು ಕೇಂದ್ರ ಮಂತ್ರಿ ಭೇಟಿ ಮಾಡಿರಬಹುದು, ಆದರೆ ದರ ಏರಿಕೆ ತಡೆಯುವ ಯಾವ ರೀತಿಯ ಹಕ್ಕು ಅವರಿಗೆ ಇಲ್ಲ” ಎಂದು ತಿಳಿಸಿದರು. “ರಾಜಕೀಯದಲ್ಲಿ ಬದುಕಿದ್ದೇನೆ ಎಂದು ತೋರಿಸಿಕೊಳ್ಳಲು, ಪ್ರಚಾರ ಪಡೆಯಲು ಈ ರೀತಿ ಮಾಡುತ್ತಿದ್ದಾರೆ. ಅವರಿಂದ ಕರ್ನಾಟಕ ರಾಜ್ಯಕ್ಕೆ 1 ರೂಪಾಯಿ ಅನುದಾನ ತರಲು ಆಗಿಲ್ಲ. ಬೆಂಗಳೂರಿಗೆ ಒಂದು…

Read More

ಧಾರವಾಡ: 110 ಕೆವ್ಹಿ. ಮೃತ್ಯುಂಜಯನಗರ ವಿದ್ಯುತ್ ವಿತರಣಾ ಕೇಂದ್ರದಲ್ಲಿ ಫೆಬ್ರವರಿ 12, 2026 ರಂದು ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ಇವರು 4ನೇ ತ್ರೈಮಾಸಿಕ ತುರ್ತುಪಾಲನಾ ಕಾಮಗಾರಿಯನ್ನು ಕೈಗೊಳ್ಳುವುದರಿಂದ ಸದರಿ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜು ಆಗುವ ಎಲ್ಲಾ 11ಕೆವಿ ಮಾರ್ಗಗಳಲ್ಲಿ ಫೆಬ್ರವರಿ 12, 2026 ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಮುರುಘಾಮಠ, ಮದಿಹಾಳ, ಪತ್ರೇಶ್ವರ ನಗರ, ರಾಜನಗರ, ಹಾವೇರಿಪೇಟ, ನಿಜಾಮುದ್ದಿನ್ ಕಾಲೋನಿ, ಸವದತ್ತಿ ರೋಡ್, ಕಾಮನಕಟ್ಟಿ, ಚರಂತಿಮಠ ಗಾರ್ಡನ್, ಹೆಬ್ಬಳ್ಳಿ ಅಗಸಿ, ಮನಕಿಲ್ಲಾ, ಕಾರ್ಪೋರೇಶನ್ ಸರ್ಕಲ್, ಸುಭಾಶ್ ರೋಡ್, ಶಿವಾಜಿ ರೋಡ್, ಮರಾಠ ಕಾಲೋನಿ, ಜುಬ್ಲೀ ಸರ್ಕಲ್, ಭಾರತ ಹೈಸ್ಕೂಲ್, ಮಾರ್ಕೆಟ್, ಕಮಲಾಪುರ, ಕಲಾಭವನ, ಕರಡಿಗುಡ್ಡ, ವಿದ್ಯಾರಣ್ಯ, ಮರೇವಾಡ ಜಿನ್ನಿಂಗ್ ಫ್ಯಾಕ್ಟರಿ, ವನಹಳ್ಳಿ, ಕವಲಗೇರಿ, ಮಂಗಳಗಟ್ಟಿ, ಅಮ್ಮಿನಭಾವಿ, 33ಕೆವಿ ಉಪ್ಪಿನ ಬೆಟಗೇರಿ, ಮುಕ್ತಿಧಾಮ, ಕೊಳಿಕೇರಿ, ಪೆಂಡಾರ ಓಣಿ, ದರ್ಗಾ ಓಣಿ, ರವಿವಾರ ಪೇಟ, ಶುಕ್ರವಾರ ಪೇಟ,…

Read More

ಬಳ್ಳಾರಿ : ಬಳ್ಳಾರಿ ಗ್ರಾಮೀಣ ಜೆಸ್ಕಾಂ ವ್ಯಾಪ್ತಿಯ 220/110/11 ಕೆ.ವಿ ಅಲ್ಲೀಪುರ ಸ್ವೀಕರಣಾ ಕೇಂದ್ರದಲ್ಲಿ ಶಿಥೀಲಗೊಂಡ ಜಿ.ಒ.ಎಸ್ ಬದಲಾಯಿಸುವ ಕಾರ್ಯ ತುರ್ತಾಗಿ ಕೈಗೊಂಡಿರುವುದರಿAದ ಫೆ.12 ರಂದು ಬೆಳಗ್ಗೆ 09 ಸಂಜೆ 06 ಗಂಟೆಯ ರವರೆಗೆ ಬಳ್ಳಾರಿ ಗ್ರಾಮೀಣ ವ್ಯಾಪ್ತಿಯಲ್ಲಿ ವಿವಿಧೆಡೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ವಿದ್ಯುತ್ ವ್ಯತ್ಯಯವಾಗುವ ಪ್ರದೇಶಗಳಿವು: ಎಫ್-31 ಅಲ್ಲೀಪುರ ನಗರ ಪ್ರದೇಶ ಫೀಡರ್ ಮಾರ್ಗದ ಅಲ್ಲಿಪುರ, ರಾಮೇಶ್ವರಿ ನಗರ, ಬೈಪಾಸ್ ರಸ್ತೆ. ಎಫ್-32 ಐ.ಪಿ ಸೆಟ್ ಫೀಡರ್ ಮಾರ್ಗದ ಬೆಳಗಲ್ಲು, ಬೆಳಗಲ್ಲು ತಾಂಡ, ಜಾನೆಕುಂಟೆ, ಜಾನೆಕುಂಟೆ ತಾಂಡ, ಹರಗಿನದೋಣಿ, ಅಲ್ಲೀಪುರ ಕೃಷಿ ಪ್ರದೇಶಗಳು. ಎಫ್-37 ಮತ್ತು 38 ಬೆಳಗಲ್ಲು ತಾಂಡ ಕೈಗಾರಿಕೆ ಪ್ರದೇಶ ಫೀಡರ್ ಮಾರ್ಗದ ಬೆಳಗಲ್ಲು, ಬೆಳಗಲ್ಲು ತಾಂಡ, ಜಾನೆಕುಂಟೆ, ಜಾನೆಕುಂಟೆ ತಾಂಡ, ಕೈಗಾರಿಕೆ ಪ್ರದೇಶ. ಎಫ್-71 ಹರಗಿನದೋಣಿ ಎನ್.ಜೆ.ವೈ ಫೀಡರ್ ಮಾರ್ಗದ ಬೆಳಗಲ್ಲು, ಬೆಳಗಲ್ಲು ತಾಂಡ, ಜಾನೆಕುಂಟೆ, ಜಾನೆಕುಂಟೆ ತಾಂಡ, ಹರಗಿನದೋಣಿ, ಹೊನ್ನಾಳ್ಳಿ, ಹೊನ್ನಳ್ಳಿ ತಾಂಡ ಮುಂತಾದ ಗ್ರಾಮಗಳು. ಎಫ್-74 ಗೌತಮ್ ನಗರ ಎನ್.ಜೆ.ವೈ ಫೀಡರ್ ಮಾರ್ಗದ…

Read More

ಬೆಂಗಳೂರು: ನಗರದಲ್ಲಿ ನಮ್ಮ ಮೆಟ್ರೋ ಟಿಕೆಟ್ ಖರೀದಿಸೋದಕ್ಕೆ ಪ್ರಯಾಣಿಕರು ಪರದಾಡಿದಂತ ಘಟನೆ ನಡೆದಿದೆ. ಬ್ಯಾಂಕ್ ಸರ್ವರ್ ಡೌನ್ ಆಗಿದ್ದೇ ಇದಕ್ಕೆ ಕಾರಣ ಎನ್ನಲಾಗಿದೆ. ಇಂದು ಸಂಜೆ 6 ಗಂಟೆಯಿಂದ ಬ್ಯಾಂಕ್ ಸರ್ವರ್ ಡೌನ್ ಆಗಿದ್ದರಿಂದಾಗಿ ಮೆಟ್ರೋ ಟಿಕೆಟ್ ತೆಗೆದುಕೊಳ್ಳೋದಕ್ಕೆ ಪ್ರಯಾಣಿಕರು ಪರದಾಡುವಂತೆ ಆಗಿದೆ. ಸರ್ವರ್ ಕೈಕೊಟ್ಟ ಕಾರಣದಿಂದಾಗಿ ಟಿಕೆಟ್ ಗಾಗಿ ಮೆಟ್ರೋ ಸ್ಟೇಷನ್ ನಲ್ಲೇ ಜನರು ಕಾಯುತ್ತಿದ್ದಂತ ಘಟನೆಗೂ ಸಾಕ್ಷಿಯಾಗಿದೆ. https://kannadanewsnow.com/kannada/application-invited-for-free-beekeeping-training/ https://kannadanewsnow.com/kannada/good-news-for-taluk-level-journalists-of-the-state-application-invited-for-free-bus-pass/

Read More

ಬೆಂಗಳೂರು : ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಮಾಧ್ಯಮ ಪಟ್ಟಿಯಲ್ಲಿರುವ ಮಾಧ್ಯಮ ಸಂಸ್ಥೆಗಳಲ್ಲಿ ಕಾರ್ಯ ನಿರ್ವಹಿಸುತ್ತಿರುವ ತಾಲ್ಲೂಕು ಮಟ್ಟದ ಪತ್ರಕರ್ತರು ತಮ್ಮ ವೃತ್ತಿ ನಿರತ ಚಟುವಟಿಕೆಗಳ ಸಂಬಂಧ ತಮ್ಮ ಜಿಲ್ಲಾದ್ಯಂತ ಉಚಿತವಾಗಿ ಸಂಚರಿಸಲು ಅನುಕೂಲವಾಗುವಂತೆ ಉಚಿತ ಬಸ್ ಪಾಸ್ ನೀಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಪತ್ರಕರ್ತರು ತಾವು ಕಾರ್ಯನಿರ್ವಹಿಸುತ್ತಿರುವ ಮಾಧ್ಯಮ ಸಂಸ್ಥೆಗಳಿಂದ ಸೇವಾ ಪ್ರಮಾಣಪತ್ರ, ಶಿಫಾರಸ್ಸು ಪತ್ರ ಮತ್ತು 11 ತಿಂಗಳುಗಳ ವೇತನಪತ್ರ (ಲೈನೇಜ್/ಸಂಭಾವನೆ/ಕಮೀಷನ್ ಪಡೆದಿರುವ ದಾಖಲೆ)ಗಳನ್ನು ಅಥವಾ ವೇತನ ಜಮಾ ಆಗಿರುವ ಮಾಹಿತಿ ಇರುವಂತಹ ಬ್ಯಾಂಕ್ ಸ್ಟೇಟಮೆಂಟ್ ಲಗತ್ತಿಸಿ ‘ಸೇವಾಸಿಂಧು’ ಪೋರ್ಟಲ್ (https://sevasindhu.karnataka.gov.in) ಮೂಲಕ ಆನ್ ಲೈನ್ ನಲ್ಲಿ ಅರ್ಜಿಗಳನ್ನು ಸಲ್ಲಿಸಬಹುದು. ಆನ್ ಲೈನ್ ನಲ್ಲಿ ಸಲ್ಲಿಸಲಾದ ಅರ್ಜಿ ಮತ್ತು ಲಗತ್ತಿಸಲಾಗಿರುವ ದಾಖಲೆಗಳ ಒಂದು ಪ್ರತಿಯನ್ನು ಆಯಾ ಜಿಲ್ಲೆಯ ವಾರ್ತಾಧಿಕಾರಿಗಳ ಕಚೇರಿಗೆ ಸಲ್ಲಿಸಬೇಕು. ಸ್ವೀಕೃತ ಅರ್ಜಿಗಳನ್ನು ಆಯ್ಕೆ ಸಮಿತಿಯ ಸಭೆಯಲ್ಲಿ ಪರಿಶೀಲಿಸಿ ಬಸ್ ಪಾಸ್ ಮಂಜೂರು ಮಾಡಲಾಗುತ್ತದೆ. ರಾಜ್ಯದ ಎಲ್ಲ ತಾಲ್ಲೂಕುಗಳ ಅರ್ಹ ಪತ್ರಕರ್ತರು ಕೂಡಲೇ ‘ಸೇವಾಸಿಂಧು’ ಪೋರ್ಟಲ್ ಮೂಲಕ ಅರ್ಜಿಗಳನ್ನು…

Read More

ಬಳ್ಳಾರಿ : ಕಂಪ್ಲಿಯ ಜಿಲ್ಲಾ ಕೃಷಿ ತರಬೇತಿ ಕೇಂದ್ರ ವತಿಯಿಂದ ಫೆ.16 ರಿಂದ 21ರವರೆಗೆ 6 ದಿನಗಳ ಜೇನು ಕೃಷಿಯ ಕುರಿತು ಉಚಿತ ತರಬೇತಿಯನ್ನು ಕಂಪ್ಲಿಯ ಕೃಷಿ ತರಬೇತಿ ಕೇಂದ್ರದಲ್ಲಿ ನೀಡಲು ಉದ್ದೇಶಿಸಲಾಗಿದ್ದು, ಆಸಕ್ತ ಬಳ್ಳಾರಿ ಮತ್ತು ವಿಜಯನಗರ ಜಿಲ್ಲೆಯ ಎಲ್ಲಾ ವರ್ಗದ ರೈತರು, ರೈತ ಮಹಿಳೆಯರಿಂದ ಹೆಸರು ನೋಂದಣಿಮಾಡಿಕೊಳ್ಳಲು ಆಹ್ವಾನಿಸಲಾಗಿದೆ. ತರಬೇತಿಯಲ್ಲಿ ಊಟ ಹಾಗೂ ವಸತಿ ಸೌಕರ್ಯ ಇರಲಿದೆ. ಹೆಚ್ಚಿನ ಮಾಹಿತಿಗಾಗಿ ಸಹಾಯಕ ಕೃಷಿ ನಿರ್ದೇಶಕರಾದ ವಿದ್ಯಾವತಿ ಹೊಸಮನಿ(ಮೊ.7353533138), ಕೃಷಿ ಅಧಿಕಾರಿಗಳಾದ ಯೇಸುಬಾಬು(ಮೊ.6360645255), ನವ್ಯ ಪ್ರಶಾಂತ್(ಮೊ.6360139316) ಗೆ ಸಂಪರ್ಕಿಸಬಹುದು ಎಂದು ಕಂಪ್ಲಿಯ ಜಿಲ್ಲಾ ಕೃಷಿ ತರಬೇತಿ ಕೇಂದ್ರದ ಸಹಾಯಕ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. https://kannadanewsnow.com/kannada/supreme-court-allows-530-appeals-filed-by-karnataka-in-land-acquisition-case/ https://kannadanewsnow.com/kannada/actress-tamannaah-becomes-ambassador-for-sandalwood-soap-from-today-57-new-products-launched/

Read More

ಬೆಂಗಳೂರು: ಭಾರತದ ಸುಪ್ರೀಂ ಕೋರ್ಟ್, ಸೋಮವಾರ ದಿನಾಂಕ 09 ಫೆಬ್ರವರಿ 2026 ರಂದು, Deputy Commissioner & Special Land Acquisition Officer vs. SV Global Mills (SLP Civil No. 215 of 2023) ಹಾಗೂ ಸಂಬಂಧಿತ ಪ್ರಕರಣಗಳಲ್ಲಿ ಐತಿಹಾಸಿಕ ತೀರ್ಪು ನೀಡಿದ್ದು, ಕರ್ನಾಟಕ ರಾಜ್ಯ ಸರ್ಕಾರ ಸಲ್ಲಿಸಿದ್ದ 530 ಮೇಲ್ಮನವಿಗಳನ್ನು ಅನುಮತಿಸಿದೆ. ಈ ಮೇಲ್ಮನವಿಗಳು ಕೃಷ್ಣಾ ಮೇಲ್ದಂಡೆ ಯೋಜನೆ, ಸಿಂಗಟಾಲೂರು ಏತ ನೀರಾವರಿ ಯೋಜನೆ, ರಾಜ್ಯ ಹೆದ್ದಾರಿ ಯೋಜನೆಗಳು ಹಾಗೂ ಇತರೆ ಪ್ರಮುಖ ಅಭಿವೃದ್ಧಿ ಯೋಜನೆಗಳಿಗೆ ಸಂಬಂಧಿಸಿದ ಭೂಸ್ವಾಧೀನ ಪ್ರಕರಣಗಳಿಗೆ ಸಂಬಂಧಿಸಿದ ಧಾವೆಗಳಾಗಿವೆ. ಈ ತೀರ್ಪು ರಾಜ್ಯದ ಆರ್ಥಿಕ ಸ್ಥಿತಿಗತಿಗಳ ಮೇಲೆ ವ್ಯಾಪಕ ಪರಿಣಾಮ ಬೀರುವಂತದ್ದಾಗಿದ್ದು, ಕರ್ನಾಟಕ ಸರ್ಕಾರದ ಯಶಸ್ವಿ ಕಾನೂನು ಸವಾಲಿನ ಫಲವಾಗಿ ಪಣದಲ್ಲಿದ್ದ ಹತ್ತು ಸಾವಿರಾರು ಕೋಟಿ ರೂಪಾಯಿಗಳ ಸಾರ್ವಜನಿಕ ಹಣವನ್ನು ರಕ್ಷಿಸಲಾಗಿದೆ. ಪ್ರಕರಣದ ಹಿನ್ನೆಲೆ 1.ರಾಜ್ಯದ ವಿವಿಧ ಭಾಗಗಳಲ್ಲಿ ಸಾರ್ವಜನಿಕ ಹಾಗೂ ಮೂಲಸೌಕರ್ಯ ಯೋಜನೆಗಳಿಗಾಗಿ ಭೂಸ್ವಾಧೀನ ಅಧಿಕಾರಿಗಳು ಭೂಮಿಯನ್ನು ಸ್ವಾಧೀನಪಡಿಸಿಕೊಂಡರು. 2.ಭೂಮಾಲೀಕರು, ಭೂಸ್ವಾಧೀನ…

Read More

ಶಿವಮೊಗ್ಗ: ರಾಜ್ಯ ಸರ್ಕಾರದ ಆದೇಶವನ್ನೇ ಗಾಳಿಗೆ ತೂರಿ, ಅವಧಿ ಮುಕ್ತಾಯಗೊಂಡ ಗ್ರಾಮ ಪಂಚಾಯ್ತಿ ಸದಸ್ಯರಿಗೆ ಹಾರ, ತುರಾಯಿ, ನೆನಪಿನ ಕಾಣಿಗೆ ನೀಡಿ ಅದ್ಧೂರಿಯಾಗಿ ಬೀಳ್ಕೊಡುಗೆಯನ್ನು ಪಿಡಿಓ ಒಬ್ಬರು ನೀಡಿರುವಂತ ಘಟನೆ ಸಾಗರ ತಾಲ್ಲೂಕಿನ ಬರೂರು ಗ್ರಾಮ ಪಂಚಾಯ್ತಿಯಲ್ಲಿ ನಡೆದಿದೆ. ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಬರೂರು ಗ್ರಾಮ ಪಂಚಾಯ್ತಿಯ ಸದಸ್ಯರ ಅಧಿಕಾರವಧಿ ಮುಕ್ತಾಯಗೊಂಡಿತ್ತು. ಹೀಗೆ ಅವಧಿ ಮುಕ್ತಾಯಗೊಂಡ ಗ್ರಾಮ ಪಂಚಾಯ್ತಿಗಳಿಗೆ ದಿನಾಂಕ 06-02-2026ರಂದು ಶಿವಮೊಗ್ಗ ಜಿಲ್ಲಾಧಿಕಾರಿಗಳು ಆಡಳಿತಾಧಿಕಾರಿಯನ್ನು ನೇಮಕ ಮಾಡಿದ್ದಾರೆ. ಅದರಂತೆ ಸಾಗರ ತಾಲ್ಲೂಕಿನ ಬರೂರು ಗ್ರಾಮ ಪಂಚಾಯ್ತಿಗೆ ಸಾಗರದ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ರಾಜೇಶ್ವರಿ ಅವರನ್ನು ಆಡಳಿತಾಧಿಕಾರಿಯಾಗಿಯೂ ನೇಮಕ ಮಾಡಲಾಗಿದೆ. ರಾಜ್ಯ ಸರ್ಕಾರದ ಆದೇಶ ಏನು? ಈ ಎಲ್ಲದರ ನಡುವೆ ಸಾಗರ ತಾಲ್ಲೂಕಿನ ಬರೂರು ಗ್ರಾಮ ಪಂಚಾಯ್ತಿ ಪಿಡಿಓ ರಾಜು ಸಾಹೇಬ್ರು ಮಾತ್ರ, ಸರ್ಕಾರದ ನಿಯಮವನ್ನೇ ಗಾಳಿಗೆ ತೂರಿ ಅವಧಿ ಮುಕ್ತಾಯಗೊಂಡ ಬರೂರು ಗ್ರಾಮ ಪಂಚಾಯ್ತಿ ಸದಸ್ಯರಿಗೆ ಬೀಳ್ಗೊಡುಗೆ ಮಾಡಿದ್ದಾರೆ. ಶಾಲು ಹೊದಿಸಿ, ಹಾರ ಹಾಕಿ, ನೆನಪಿನ ಕಾಣಿಕೆಯನ್ನು ನೀಡಿದ್ದು…

Read More

ಬೆಂಗಳೂರು: ಕರ್ನಾಟಕದ ಹೆಮ್ಮೆಯ ಸಂಕೇತವಾದ, ಹೆಂಗಳೆಯರ ಪಾಲಿಗೆ ಅಚ್ಚುಮೆಚ್ಚಿನದಾಗಿರುವ ತಿಳಿಗೆಂಪು ಬಣ್ಣದ ಮೈಸೂರು ಸಿಲ್ಕ್‌ ಸೀರೆ ಉಟ್ಟುಕೊಂಡು, ನೆರೆದಿದ್ದವರ ಮೋಡಿ ಮಾಡುವಂತೆ ವೇದಿಕೆಯ ಮೇಲೆ ನಸುನಗುತ್ತಾ ಹಿಂಬಾಗಿಲ ಮೂಲಕ ವಿಶೇಷವಾದ ರೀತಿಯಲ್ಲಿ ಪ್ರತ್ಯಕ್ಷರಾದವರು ಹೆಸರಾಂತ ನಟಿ ತಮನ್ನಾ ಭಾಟಿಯಾ. ಅವರ ಆಗಮನಕ್ಕೆ ಕಾರಣವಾಗಿದ್ದು ನಾಡಿನ ಮತ್ತೊಂದು ಐಕಾನಿಕ್‌ ಉತ್ಪನ್ನವಾದ ಮೈಸೂರು ಸ್ಯಾಂಡಲ್‌ ಸೋಪ್!‌ ಇವೆಲ್ಲ ಸೇರಿಕೊಂಡು, ತಮನ್ನಾ ಅವರು ಶತಮಾನಕ್ಕೂ ಹೆಚ್ಚಿನ ಇತಿಹಾಸವಿರುವ ಕೆಎಸ್‌ಡಿಎಲ್‌ ಸಂಸ್ಥೆಯ ಪ್ರಚಾರ ರಾಯಭಾರಿಯಾಗಿ ಹೊಸ ಅಧ್ಯಾಯವನ್ನು ವಿಧ್ಯುಕ್ತವಾಗಿ ಆರಂಭಿಸಿದರು. ಇದಕ್ಕೆ ವೇದಿಕೆಯಾಗಿದ್ದು ತಾಜ್‌ ವೆಸ್ಟ್‌ ಎಂಡ್‌ ಹೋಟೆಲಿನ ಝಗಮಗಿಸುವ ಸಭಾಂಗಣ. ಹೌದು, ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಹಾಗೂ ಅಧ್ಯಕ್ಷ ಸಿ.ಎಸ್.ನಾಡಗೌಡ ಅವರ ನೇತೃತ್ವದಲ್ಲಿ ಕೆಎಸ್‌ಡಿಎಲ್‌, ಹೊಸ ಯುಗಕ್ಕೆ ಕಾಲಿಟ್ಟಿದೆ. ಇದಕ್ಕೆ ಸಾಕ್ಷಿಯಾಗಿ ಹಾಲುಬಣ್ಣದ ಬೆಡಗಿ ತಮನ್ನಾ ವಿಶೇವಾಗಿ ಸಿದ್ಧಪಡಿಸಿದ್ದ ವೇದಿಕೆ‌ ಮೇಲೆ ಬೆಳಕಿನ ಹೊನಲಿನಲ್ಲಿ ನಗೆ ಸೂಸುತ್ತ ಪ್ರತ್ಯಕ್ಷರಾದರು. ಹೊಚ್ಚಹೊಸ ಪ್ಯಾಕ್‌ನ ರೂಪ ತಾಳಿರುವ ಮೈಸೂರು ಸ್ಯಾಂಡಲ್‌ ಸೋಪ್‌…

Read More