Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ಒಳ ಮೀಸಲಾತಿ ಸಂಬಂಧ ರಾಜ್ಯದ ಕಾಂಗ್ರೆಸ್ ಸರಕಾರವು ಕೇವಲ ರಾಜಕೀಯ ತೀರ್ಮಾನ ವ್ಯಕ್ತಪಡಿಸಿದೆ ಎಂಬುದಾಗಿ ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಇಂಥ ತೀರ್ಮಾನವನ್ನು ಸರಕಾರವು ಯಾವತ್ತೋ ಕೊಡಬಹುದಾಗಿತ್ತು. ಇಷ್ಟು ಕಾಯಬೇಕಿರಲಿಲ್ಲ ಎಂದು ಅವರು ಟೀಕಿಸಿದರು. ಸರಕಾರ ಸಾಮಾಜಿಕ ನ್ಯಾಯದ ಪರವಾಗಿ ಇದೆಯೇ ಎಂಬುದು ರಾಜ್ಯದ ಜನರಿಗೆ ಪ್ರಶ್ನಾರ್ಥಕ ಚಿಹ್ನೆಯಾಗಿದೆ ಎಂದು ವಿಶ್ಲೇಷಿಸಿದರು. ರಾಜ್ಯದ ಕಾಂಗ್ರೆಸ್ ಸರಕಾರವು ಒಳ ಮೀಸಲಾತಿ ವಿಷಯದಲ್ಲಿ ಒಂದು ತೀರ್ಮಾನಕ್ಕೆ ಬಂದ ವಿಚಾರ ಮಾಧ್ಯಮಗಳಲ್ಲಿ ಗಮನಿಸಿದ್ದೇನೆ. ಈ ತೀರ್ಮಾನವು ಸುಪ್ರೀಂ ಕೋರ್ಟ್ ಆದೇಶದ ಪರವಾಗಿ ಅಥವಾ ಸದಾಶಿವ ಆಯೋಗದ ಪರವಾಗಿಯೂ ಇಲ್ಲ; ನಾಗಮೋಹನ್ ದಾಸ್ ಆಯೋಗದ ವಿಚಾರಗಳೂ ಇದರಲ್ಲಿ ಇಲ್ಲ ಎಂದು ಆಕ್ಷೇಪಿಸಿದರು. ನ್ಯಾ.ನಾಗಮೋಹನ್ ದಾಸ್ ಅವರು 5 ಗುಂಪುಗಳಾಗಿ ವಿಂಗಡಿಸಿದ್ದರು. ನೀವು ಅದನ್ನು ತಿರಸ್ಕಾರ ಮಾಡಿ, 3 ಗುಂಪಾಗಿ ಸೀಮಿತಗೊಳಿಸಿದ್ದೀರಿ. ಎಡ, ಬಲ ಮತ್ತು ಸ್ಪøಶ್ಯ ಸಮುದಾಯವಾಗಿ ಮಾಡಿದ ಮಾಹಿತಿ ಇದೆ. ಹಾಗಾದಲ್ಲಿ…
ಬೆಂಗಳೂರು: ರಾಜ್ಯ ಸರ್ಕಾರದಿಂದ ವಿಧಾನಸಭೆಯಲ್ಲಿ ಮಂಡಿಸಿದ್ದಂತ ಜನಸಂದಣಿ ನಿಯಂತ್ರಣ ವಿಧೇಯಕಕ್ಕೆ ಅಂಗೀಕಾರ ದೊರೆತಿದೆ. ವಿಧಾನಸಭೆಯಲ್ಲಿ ಗೃಹ ಸಚಿವ ಡಾ.ಜಿ ಪರಮೇಶ್ವರ್ ಅವರು ಜನಸಂದಣಿ ನಿಯಂತ್ರಣ ವಿಧೇಯಕ ಮಂಡಿಸಿದ್ದರು. 2025ನೇ ಸಾಲಿನ ಜನಸಂದಣಿ ನಿಯಂತ್ರಣ ವಿಧೇಯಕವನ್ನು ಮಂಡಿಸಲಾಗಿತ್ತು. ಜನಸಂದಣಿ ನಿಯಂತ್ರಣ ಮಾಡಲು ಸರ್ಕಾರದಿಂದ ಕಾನೂನು ರೂಪಿಸಲು ಈ ಮಸೂಧೆಯನ್ನು ಮಂಡಿಸಲಾಗಿತ್ತು. ಆರ್ ಸಿ ಬಿ ಘಟನೆ ಬಳಿಕ ಸರ್ಕಾರ ಎಚ್ಚೆತ್ತು ಈ ಕಾನೂನು ರೂಪಿಸಲಾಗಿತ್ತು. ರಾಜ್ಯ ಸರ್ಕಾರದಿಂದ ಜನಸಂದಣಿ ನಿಯಂತ್ರಣಕ್ಕೆ ತಿದ್ದುಪಡಿ ವಿಧೇಯಕವನ್ನು ವಿಧಾನಸಭೆಯಲ್ಲಿ ಮಂಡಿಸಲಾಗಿತ್ತು. ಈ ತಿದ್ದುಪಡಿ ಮಸೂದೆಗೆ ವಿಧಾನಸಭೆಯಲ್ಲಿ ಅಂಗೀಕಾರ ದೊರೆತಿದೆ. https://kannadanewsnow.com/kannada/high-court-directs-the-state-government-to-clarify-its-position-on-formulating-rules-for-bike-taxis/ https://kannadanewsnow.com/kannada/sagar-in-hosanagar-mla-gopalakrishna-bellurus-development-program-is-a-prelude-various-works-at-a-cost-of-1-crore/
ಬೆಂಗಳೂರು: ಬೈಕ್ ಟ್ಯಾಕ್ಸಿಗೆ ನಿಯಮ ರೂಪಿಸುವ ಬಗ್ಗೆ 1 ತಿಂಗಳಲ್ಲಿ ನಿಲುವು ತಿಳಿಸಲು ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ ನೀಡಿದೆ. ಇಂದು ಕರ್ನಾಟಕದಲ್ಲಿ ಬೈಕ್ ಟ್ಯಾಕ್ಸಿ ನಿಷೇಧ ಪ್ರಶ್ನಿಸಿ ಆಪರೇಟರ್ ಗಳು ಸಲ್ಲಿಸಲಾಗಿದ್ದಂತ ಮೇಲ್ಮನವಿಯ ಅರ್ಜಿಯ ವಿಚಾರಣೆಯನ್ನು ನಡೆಸಿತು. ಸಿಜೆ ವಿಭು ಬಕ್ರು, ನ್ಯಾಯಮೂರ್ತಿ ಸಿಎಂ ಜೋಶಿ ಅವರಿದ್ದಂತ ನ್ಯಾಯಪೀಠವು ವಿಚಾರಣೆ ಕೈಗೊಂಡಿತು. ಈ ವೇಳೆ ಎಲ್ಲರಿಗೂ ನ್ಯಾಯಯುತ ವ್ಯವಹಾರ ನಡೆಸುವ ಸಂವಿಧಾನಬದ್ಧ ಹಕ್ಕಿದೆ. ಬೈಕ್ ಟ್ಯಾಕ್ಸಿ ನಡೆಸುತ್ತೇವೆಂದರೆ ಸರ್ಕಾರ ನಿಯಮ ರೂಪಿಸಬಹುದು. 13 ರಾಜ್ಯಗಳು ನಿಯಮ ರೂಪಿಸಿವೆ. ನೀವು ನಿಷೇಧಿಸಿದ್ದೀರಿ. ಈ ರೀತಿ ನಿಷೇಧ ಸರಿಯೇ ಎಂಬುದನ್ನು ಹೈಕೋರ್ಟ್ ಪರಿಶೀಲಿಸಿದೆ ಎಂದಿತು. ಬೈಕ್ ನಿಂದ ಸಂಚಾರದಟ್ಟಣೆಯೂ ಉಂಟಾಗುವುದಿಲ್ಲ. ಕಾರು, ಆಟೋ ಸಂಚರಿಸದ ಕಡೆಯೂ ಬೈಕ್ ಸಂಚರಿಸಬಹುದು. ಸರ್ಕಾರ ನೀತಿ ರೂಪಿಸುವುದಿದ್ದರೇ ಸಮಯ ನೀಡುತ್ತೇವೆ. ಜೀವನೋಪಾಯದ ಅಂಶವೂ ಇರುವುದರಿಂದ ನಿಲುವು ತಿಳಿಸಲು ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಸೂಚಿಸಿತು. ಹೈಕೋರ್ಟ್ ಸಲಹೆಗೆ ಸರ್ಕಾರದ ಪರವಾಗಿ ಎಜಿ ಶಶಿಕಿರಣ್ ಶೆಟ್ಟಿ ಪ್ರತಿಕ್ರಿಯಿಸಿ, ನಾಲ್ಕು ವಾರದಲ್ಲಿ…
ನವದೆಹಲಿ: ಎನ್.ಡಿ.ಎ ಮೈತ್ರಿಕೂಟದ ಉಪ ರಾಷ್ಟ್ರಪತಿ ಅಭ್ಯರ್ಥಿ ಸಿ.ಪಿ. ರಾಧಾಕೃಷ್ಣನ್ ಅವರು ಮಾಜಿ ಪ್ರಧಾನಿಗಳಾದ ಹೆಚ್.ಡಿ. ದೇವೇಗೌಡ ಅವರ ದೆಹಲಿ ನಿವಾಸಕ್ಕೆ ಭೇಟಿ ನೀಡಿದರು. ಮಾಜಿ ಪ್ರಧಾನಿಗಳ ನಿವಾಸಕ್ಕೆ ಆಗಮಿಸಿದ ರಾಧಾಕೃಷ್ಣನ್ ಅವರನ್ನು ಕೇಂದ್ರ ಉಕ್ಕು ಮತ್ತು ಬೃಹತ್ ಕೈಗಾರಿಕೆಗಳ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಗೌರವಪೂರ್ವಕವಾಗಿ ಬರಮಾಡಿಕೊಂಡರು. ತಮ್ಮ ಹಾಗೂ ಪ್ರಧಾನಿಗಳ ನಡುವಿನ ಬಾಂಧವ್ಯವನ್ನು ಸ್ಮರಿಸಿದ ರಾಧಾಕೃಷ್ಣನ್ ಅವರು, ಎನ್ ಡಿಎ ಮೈತ್ರಿಕೂಟದ ಉಪ ರಾಷ್ಟ್ರಪತಿ ಅಭ್ಯರ್ಥಿ ಆಗಿರುವ ತಮಗೆ ಬೆಂಬಲ ನೀಡಿದ್ದಾಗಿ ಅಭ್ಯರ್ಥಿಯಾಗಿ ಧನ್ಯವಾದ ತಿಳಿಸಿದರು. ಈ ಸಂದರ್ಭದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ, ಸಂಸದರಾದ ಮಲ್ಲೇಶ್ ಬಾಬು ಮತ್ತು ಡಾ. ಸಿ.ಎನ್. ಮಂಜುನಾಥ್, ಜೆಡಿಎಸ್ ಪಕ್ಷದ ಹಿರಿಯ ನಾಯಕ ವೆಂಕಟರಾವ್ ನಾಡಗೌಡ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಬಿನೋದ್ ತಾವಡೆ ಮುಂತಾದವರು ಈ ಸಂದರ್ಭದಲ್ಲಿ ಹಾಜರಿದ್ದರು. ಈ ಸಂದರ್ಭದಲ್ಲಿ ಮಾಜಿ ಪ್ರಧಾನಿಗಳು ಹಾಗೂ ಕೇಂದ್ರ ಸಚಿವರು ಸಿ.ಪಿ. ರಾಧಾಕೃಷ್ಣನ್ ಅವರಿಗೆ ಶುಭ ಹಾರೈಸಿದರು. https://kannadanewsnow.com/kannada/false-propaganda-against-dharmasthala-complaint-to-dg-ig-against-youtuber-sameer-m-d/ https://kannadanewsnow.com/kannada/sagar-in-hosanagar-mla-gopalakrishna-bellurus-development-program-is-a-prelude-various-works-at-a-cost-of-1-crore/
ಬೆಂಗಳೂರು: ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಮಾಡುತ್ತಿದ್ದಾರೆ ಎಂಬುದಾಗಿ ಆರೋಪಿಸಿ ಯೂಟ್ಯೂಬರ್ ಸಮೀರ್ ಎಂ.ಡಿ ವಿರುದ್ಧ ಕರ್ನಾಟಕದ ಡಿಜಿ-ಐಜಿಪಿಯವರಿಗೆ ದೂರು ನೀಡಲಾಗಿದೆ. ಈ ಕುರಿತಂತೆ ಬಜರಂಗದಳದ ತೇಜಸ್ ಎ ಗೌಡ ಎಂಬುವರು ದೂರು ನೀಡಿದ್ದು, ಧರ್ಮಸ್ಥಳದಲ್ಲಿ ಅಸಹಜ ಸಾವುಗಳು, ಇತ್ಯಾದಿಗಳ ಬಗ್ಗೆ ಅಸತ್ಯ ಮಾಹಿತಿ ಮತ್ತು ಸುಳ್ಳು ವೀಡಿಯೋಗಳನ್ನು ಪ್ರಕಟಿಸಿರುವುದು ಕೋಟ್ಯಾಂತರ ಹಿಂದೂ ಭಕ್ತರ ಧಾರ್ಮಿಕ ಭಾವನೆಗಳಿಗೆ ಗಂಭೀರವಾಗಿ ಹಾನಿಗೊಳಿಸಲಾಗಿದೆ ಎಂದಿದ್ದಾರೆ. ಉದ್ದೇಶಪೂರ್ವಕವಾಗಿ ಧಾರ್ಮಿಕ ಭಾವನೆಗಳನ್ನು ನೋವು ಪಡಿಸಿ, ಧರ್ಮ ಮತ್ತು ಧರ್ಮಗಳ ನಡುವೆ ದ್ವೇಷಗಳನ್ನು ಭಿತ್ತಲು ಪ್ರಯತ್ನಿಸುತ್ತಿದ್ದಾರೆ. ಈ ವೀಡಿಯೋಗಳು ವ್ಯವಸ್ಥಿತವಾಗಿ ದುರುದ್ದೇಶದಿಂದ ಮತ್ತು ಸಂಚು ರೂಪಿಸಿ ಪವಿತ್ರ ಕ್ಷೇತ್ರವನ್ನು ಕೆಡಿಸುವ ಪ್ರಯತ್ನವಾಗಿದೆ. ಅದರಿಂದ ಸಮಾಜದಲ್ಲಿ ಅಶಾಂತಿ ಉಂಟಾಗುವ ಸಾಧ್ಯತೆ, ಧಾರ್ಮಿಕ ಸಂಘರ್ಷ ಸೃಷ್ಟಿಸುವ ಸಾಧ್ಯತೆ ಉಂಟಾಗಿದೆ. ಈ ಕೂಡಲೇ ಈತನನ್ನು ಬಂಧಿಸಿ ಕಟ್ಟು ನಿಟ್ಟಿನ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ. ಈ ಕಾನೂನಿನಡಿ ಕಾನೂನು ಕ್ರಮ ಕೈಗೊಳ್ಳುವಂತೆ ಆಗ್ರಹ ಭಾರತೀಯ ನ್ಯಾಯ ಸಂಹಿತೆ 2023 ಸುಳ್ಳು ಮಾಹಿತಿ ನೀಡುವುದು -…
ನವದೆಹಲಿ: ಆನ್ಲೈನ್ ಗೇಮಿಂಗ್ ಪ್ರಚಾರ ಮತ್ತು ನಿಯಂತ್ರಣ ಮಸೂದೆ, 2025 ಅನ್ನು ಬುಧವಾರ ಲೋಕಸಭೆಯಲ್ಲಿ ಅಂಗೀಕರಿಸಲಾಯಿತು. ಕೇಂದ್ರ ಸಚಿವೆ ಅಶ್ವಿನಿ ವೈಷ್ಣವ್ ಅವರು ಮಸೂದೆಯನ್ನು ಮಂಡಿಸಿದರು, ಇದನ್ನು ಮಂಗಳವಾರ ಕೇಂದ್ರ ಸಚಿವ ಸಂಪುಟವು ಅಂಗೀಕರಿಸಿತು. ವೈಷ್ಣವ್ ಅವರು ಮಸೂದೆಯ ಅಂಗೀಕಾರಕ್ಕಾಗಿ ಮುಂದಾದ ಮೊದಲು, ಸ್ಪೀಕರ್ ಓಂ ಬಿರ್ಲಾ ಅವರು ಸದನದಲ್ಲಿ ಮಸೂದೆಯ ಮೇಲಿನ ಚರ್ಚೆಗೆ ಪರವಾಗಿ/ವಿರುದ್ಧವಾಗಿ ಮತ ಚಲಾಯಿಸಲು ಬಯಸುತ್ತೀರಾ ಎಂದು ಸದನವನ್ನು ಕೇಳಿದರು. ಆನ್ಲೈನ್ ಹಣದ ಗೇಮಿಂಗ್ ಪ್ಲಾಟ್ಫಾರ್ಮ್ಗಳನ್ನು ನಿಷೇಧಿಸುವ ಪ್ರಸ್ತಾಪವನ್ನು ಹೊಂದಿರುವ ಮಸೂದೆಯು, ಅಧಿಕಾರಿಗಳಿಗೆ ವಾರಂಟ್ ಇಲ್ಲದೆ ಶೋಧ ಮತ್ತು ಬಂಧಿಸಲು ಅಧಿಕಾರ ನೀಡುತ್ತದೆ. ಕಂಪ್ಯೂಟರ್ ವ್ಯವಸ್ಥೆಗಳು, ಸರ್ವರ್ಗಳು ಮತ್ತು ಸಂವಹನ ಸಾಧನಗಳು ಸೇರಿದಂತೆ ಆನ್ಲೈನ್ ಗೇಮಿಂಗ್ನ ತನಿಖೆಯ ವ್ಯಾಪ್ತಿಯನ್ನು “ಯಾವುದೇ ಸ್ಥಳಕ್ಕೆ” ವಿಸ್ತರಿಸುವ ಅಧಿಕಾರವನ್ನು ಇದು ಕೇಂದ್ರ ಸರ್ಕಾರಕ್ಕೆ ನೀಡುತ್ತದೆ. ಈ ಮಸೂದೆಯು ವ್ಯಕ್ತಿಗಳನ್ನು, ವಿಶೇಷವಾಗಿ ಯುವಕರು ಮತ್ತು ದುರ್ಬಲ ಜನಸಂಖ್ಯೆಯನ್ನು, ಅಂತಹ ಆಟಗಳ ಪ್ರತಿಕೂಲ ಸಾಮಾಜಿಕ, ಆರ್ಥಿಕ, ಮಾನಸಿಕ ಮತ್ತು ಗೌಪ್ಯತೆಗೆ ಸಂಬಂಧಿಸಿದ ಪರಿಣಾಮಗಳಿಂದ ರಕ್ಷಿಸಲು ಪ್ರಯತ್ನಿಸುತ್ತದೆ.…
ಬೆಂಗಳೂರು: ಇಂದು ವಿಧಾನ ಪರಿಷತ್ತಿನಲ್ಲಿ ಕರ್ನಾಟಕ ಸೌಹಾರ್ದ ಸಹಕಾರಿ ತಿದ್ದುಪಡಿ ವಿಧೇಯಕವನ್ನು ರಾಜ್ಯ ಸರ್ಕಾರ ಮಂಡಿಸಲಾಗಿತ್ತು. ಈ ಬಿಲ್ ಅನ್ನು ಮತಕ್ಕೆ ಹಾಕಲಾಗಿದ್ದು, ಅತಿ ಹೆಚ್ಚು ಮತಗಳು ಬಿಲ್ ವಿರೋಧಿಸಿ ವ್ಯಕ್ತವಾಗಿದ್ದಾವೆ. ಈ ಮೂಲಕ ಕರ್ನಾಟಕ ಸೌಹಾರ್ದ ಸಹಕಾರಿ ತಿದ್ದುಪಡಿ ವಿಧೇಯಕ ವಿಧಾನ ಪರಿಷತ್ತಿನಲ್ಲಿ ತಿರಸ್ಕಾರಗೊಂಡು ಸರ್ಕಾರಕ್ಕೆ ಭಾರೀ ಮುಖಭಂಗವಾದಂತೆ ಆಗಿದೆ. ವಿಧಾನ ಪರಿಷತ್ತಿನಲ್ಲಿ ರಾಜ್ಯ ಸರ್ಕಾರದಿಂದ ಕರ್ನಾಟಕ ಸೌಹಾರ್ದ ಸಹಕಾರಿ (ತಿದ್ದುಪಡಿ) ವಿಧೇಯಕವನ್ನು ಮಂಡಿಸಲಾಗಿತ್ತು. ಇದಕ್ಕೆ ವಿಪಕ್ಷಗಳಿಂದ ಭಾರೀ ವಿರೋಧ ವ್ಯಕ್ತವಾಗಿತ್ತು. ಅಲ್ಲದೇ ಮತಕ್ಕೆ ಹಾಕುವಂತೆ ಒತ್ತಾಯ ಕೇಳಿಬಂದಿತ್ತು. ಈ ಹಿನ್ನಲೆಯಲ್ಲಿ ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರು ಕರ್ನಾಟಕ ಸೌಹಾರ್ದ ಸಹಕಾರಿ ತಿದ್ದುಪಡಿ ಬಿಲ್ ಅನ್ನು ಮತಕ್ಕೆ ಹಾಕಲಾಯಿತು. ಈ ವೇಳೆ ಬಿಲ್ ಪರವಾಗಿ 24 ಮತಗಳು ಬಿದ್ದರೇ, ಬಿಲ್ ವಿರೋಧಿಸಿ 26 ಮತಗಳನ್ನು ಚಲಾಯಿಸಲಾಗಿದೆ. ಹೀಗಾಗಿ ಬಿಲ್ ವಿರೋಧಿಸಿ ಅತಿ ಹೆಚ್ಚು ಮತಗಳು ಬಿದ್ದ ಪರಿಣಾಮ, ವಿಧಾನ ಪರಿಷತ್ತಿನಲ್ಲಿ ಕರ್ನಾಟಕ ಸೌಹಾರ್ದ ಸಹಕಾರಿ ತಿದ್ದುಪಡಿ ವಿಧೇಯಕ ತಿರಸ್ಕಾರಗೊಂಡಂತೆ…
ಬೆಂಗಳೂರು: ಧರ್ಮಸ್ಥಳದ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಅಪಪ್ರಚಾರ ನಡೆಸಲಾಗುತ್ತಿದೆ ಎಂಬುದಾಗಿ ಯೂಟ್ಯೂಬರ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಇಡಿಗೆ ವ್ಯಕ್ತಿಯೊಬ್ಬರು ದೂರು ನೀಡಿದ್ದಾರೆ. ಧರ್ಮಸ್ಥಳದ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅಪಪ್ರಚಾರ ಮಾಡಲಾಗುತ್ತಿದೆ ಎಂಬುದಾಗಿ ಆರೋಪಿಸಿ ಯೂಟ್ಯೂಬರ್ ವಿರುದ್ಧ ಇಡಿಗೆ ಹಿಂದೂ ಮುಖಂಡ ತೇಜಸ್ ಗೌಡ ಎಂಬುವರು ದೂರು ನೀಡಿದ್ದಾರೆ. ಮುಸ್ಲೀಂ ಯೂಟ್ಯೂಬರ್ ಮತ್ತು ಅಸೋಸಿಯೇಟ್ಸ್ ಎಂಬುದಾಗಿ ದೂರಿನಲ್ಲಿ ಉಲ್ಲೇಖಿಸಲಾಗಿದೆ. ಹಿಂದೂಗಳ ಧಾರ್ಮಿಕ ನಂಬಿಕೆಗಳಿಗೆ ಹಾನಿ ಮಾಡುತ್ತಿದ್ದಾನೆ. ಧರ್ಮಸ್ಥಳ ಮಂದಿರದ ಹೆಸರು ಕೆಡಿಸಲು ಪ್ರಯತ್ನ ನಡೆಯುತ್ತಿದೆ ಎಂಬುದಾಗಿ ದೂರಿನಲ್ಲಿ ಆರೋಪಿಸಲಾಗಿದೆ. ಧರ್ಮಸ್ಥಳದ ವಿರುದ್ಧ ಅಪಪ್ರಚಾರಕ್ಕಾಗಿ ಇವರಿಗೆಲ್ಲ ಹೊರದೇಶದಿಂದ ಹಣ ಬರುತ್ತಿದೆ. ಹೀಗಾಗಿ ಈ ಪ್ರಕರಣ ಗಂಭೀರವಾಗಿ ಪರಿಗಣಿಸಬೇಕು ಎಂಬುದಾಗಿ ದೂರಿನಲ್ಲಿ ಉಲ್ಲೇಖಿಸಲಾಗಿದೆ. ಧರ್ಮಸ್ಥಳದ ಬಗ್ಗೆ ಅಪಪ್ರಚಾರ ಮಾಡುವವರ ಹಿಂದೆ ದೊಡ್ಡ ಗುಂಪಿದೆ. ಅವರ ಕೈವಾಡದಿಂದ ಅಪಪ್ರಚಾರ ಸೇರಿದಂತೆ ಎಲ್ಲವೂ ನಡೆಯುತ್ತಿದೆ ಎಂಬುದಾಗಿ ಹೇಳಲಾಗಿದೆ. https://kannadanewsnow.com/kannada/6-reservation-for-left-handers-6-for-the-right-community-and-5-for-the-touchable-community-cm-siddaramaiahs-announcement/ https://kannadanewsnow.com/kannada/sagar-in-hosanagar-mla-gopalakrishna-bellurus-development-program-is-a-prelude-various-works-at-a-cost-of-1-crore/ https://kannadanewsnow.com/kannada/good-news-for-the-people-of-the-state-applications-invited-for-various-schemes-including-ganga-kalyana-swavalambi-sarathi/
ಬೆಂಗಳೂರು: ರಾಜ್ಯದ ಪರಿಶಿಷ್ಟ ಜಾತಿಗಳ ಎಡಗೈ ಸಮುದಾಯಕ್ಕೆ ಶೇ.6ರಷ್ಟು, ಬಲ ಸಮುದಾಯಕ್ಕೆ ಶೇ.6ರಷಅಟು ಸ್ಪೃಶ್ಯ ಸಮುದಾಯಕ್ಕೆ ಶೇ.5ರಷ್ಟು ಒಳ ಮೀಸಲಾತಿ ಕಲ್ಪಿಸಲು ತೀರ್ಮಾನಿಸಲಾಗಿದೆ ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ವಿಧಾನಸಭೆಯಲ್ಲೇ ಘೋಷಿಸಿದ್ದಾರೆ. ಪರಿಶಿಷ್ಟ ಜಾತಿಗಳ ಒಳಮೀಸಲಾತಿ- ಸರ್ಕಾರದ ತೀರ್ಮಾನ ಕುರಿತಂತೆ ಮುಖ್ಯಮಂತ್ರಿ ಸಿದ್ಧರಾಮಯ್ಯ ವಿಧಾನಸಭೆಯಲ್ಲಿ ಮಾತನಾಡಿದರು. 1. ಪರಿಶಿಷ್ಟ ಜಾತಿಗಳಿಗೆ ಒಳಮೀಸಲಾತಿ ಕಲ್ಪಿಸುವ ಕುರಿತಂತೆ ಗೌರವಾನ್ವಿತ ಸರ್ವೋಚ್ಛ ನ್ಯಾಯಾಲಯವು ದಿನಾಂಕ:01.08.2024 ರಂದು ಪಂಜಾಬ್ ರಾಜ್ಯ ಮತ್ತು ಇತರರು ವರ್ಸಸ್ ದೇವಿಂದರ್ ಸಿಂಗ್ ಪ್ರಕರಣದಲ್ಲಿ “ The provision provides the State with the power to make “any” special provisions for the Schedules castes and the Scheduled Tribes. Thereby, it recognizes the wide power of the State to employ a range of means to secure substantive equality. This would include sub-classification within the Scheduled…
ಬೆಂಗಳೂರು: ಪರಿಶಿಷ್ಟ ಜಾತಿಗಳ ಒಳಮೀಸಲಾತಿ- ಸರ್ಕಾರದ ತೀರ್ಮಾನ ಕುರಿತಂತೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ವಿಧಾನಸಭೆಯಲ್ಲಿ ಮಾತನಾಡಿದರು. ಅವರ ಮಾತಿನ ಪ್ರಮುಖ ಹೈಲೈಟ್ಸ್ ಮುಂದೆ ಓದಿ. 1. ಪರಿಶಿಷ್ಟ ಜಾತಿಗಳಿಗೆ ಒಳಮೀಸಲಾತಿ ಕಲ್ಪಿಸುವ ಕುರಿತಂತೆ ಗೌರವಾನ್ವಿತ ಸರ್ವೋಚ್ಛ ನ್ಯಾಯಾಲಯವು ದಿನಾಂಕ:01.08.2024 ರಂದು ಪಂಜಾಬ್ ರಾಜ್ಯ ಮತ್ತು ಇತರರು ವರ್ಸಸ್ ದೇವಿಂದರ್ ಸಿಂಗ್ ಪ್ರಕರಣದಲ್ಲಿ “ The provision provides the State with the power to make “any” special provisions for the Schedules castes and the Scheduled Tribes. Thereby, it recognizes the wide power of the State to employ a range of means to secure substantive equality. This would include sub-classification within the Scheduled Castes.” ಎಂದು ತೀರ್ಪು ನೀಡಿದೆ. ಅಂದರೆ, ಪರಿಶಿಷ್ಟ ಜಾತಿಗಳ ಉಪವರ್ಗೀಕರಣ ಮಾಡುವ ಅಧಿಕಾರ ರಾಜ್ಯ ಸರ್ಕಾರಗಳಿಗೆ ಸಾಂವಿಧಾನಿಕವಾಗಿ ದತ್ತವಾಗಿದೆ ಎಂದು…