Author: kannadanewsnow09

ಬೆಳಗಾವಿ ಸುವರ್ಣಸೌಧ: ರಾಜ್ಯ ಸರ್ಕಾರದ ಪ್ರಮುಖ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ‘ಯುವನಿಧಿ’ಯಡಿ ಇದುವರೆಗೆ 2,84,802 ಫಲಾನುಭವಿಗಳು ನೋಂದಣಿ ಮಾಡಿಕೊಂಡಿದ್ದು, ಅವರಿಗೆ 757 ಕೋಟಿ 92 ಲಕ್ಷ ರೂಪಾಯಿ ಆರ್ಥಿಕ ನೆರವನ್ನು ರಾಜ್ಯ ಸರ್ಕಾರ ಬಿಡುಗಡೆ ಮಾಡಿದೆ. 2024ರ ನವೆಂಬರ್ 28ರ ಅಂತ್ಯದವರೆಗೆ ಈ ಮೊತ್ತವನ್ನು ಫಲಾನುಭವಿಗಳಿಗೆ ವಿತರಿಸಲಾಗಿದೆ ಎಂದು ವಿಧಾನ ಪರಿಷತ್ತಿನಲ್ಲಿ ಡಿ. 8ರ ಸೋಮವಾರ ಸರ್ಕಾರ ಮಾಹಿತಿ ನೀಡಿದೆ. ವಿಧಾನಪರಿಷತ್ ಸದಸ್ಯರು, ಗ್ಯಾರಂಟಿ ಅನುಷ್ಠಾನ ಸಮಿತಿಯ ರಾಜ್ಯ ಉಪಾಧ್ಯಕ್ಷರಾದ ದಿನೇಶ್‌ ಗೂಳಿಗೌಡ ಅವರು ಕೇಳಿದ ಚುಕ್ಕೆ ಗುರಿತನದ ಪ್ರಶ್ನೆಗೆ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಸಚಿವ ಡಾ. ಶರಣಪ್ರಕಾಶ್ ಪಾಟೀಲ್ ಅವರು ಉತ್ತರ ನೀಡಿದ್ದು, ಯೋಜನೆಯ ಪ್ರಗತಿ ವಿವರಗಳನ್ನು ವಿವರಿಸಿದ್ದಾರೆ. ಒಟ್ಟು 2.84 ಲಕ್ಷ ನೋಂದಾಯಿತ ನಿರುದ್ಯೋಗಿ ಫಲಾನುಭವಿಗಳಲ್ಲಿ ಉದ್ಯೋಗ ಪಡೆದವರ ಸಂಖ್ಯೆ ಬಹಳ ಕಡಿಮೆ ಇರುವುದು ಸರ್ಕಾರದ ಉತ್ತರದ ಮೂಲಕ ದೃಢಪಟ್ಟಿದೆ. ಸರ್ಕಾರದ ಮಾಹಿತಿಯ ಪ್ರಕಾರ, ಯುವನಿಧಿ ಯೋಜನೆ ಪ್ರಾರಂಭವಾದ ನಂತರ ಈವರೆಗೆ ಕೇವಲ 2,327 ಫಲಾನುಭವಿಗಳು ಉದ್ಯೋಗ ಅಥವಾ…

Read More

ಬೆಳಗಾವಿ ಸುವರ್ಣಸೌಧ : ರಾಜ್ಯದಲ್ಲಿನ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ಮಕ್ಕಳಿಗೆ ಶೂ ಸಾಕ್ಸ್ ವಿತರಣೆ ಮಾಡಲು ರೂ. 111.88 ಕೋಟಿ ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ತಿಳಿಸಿದರು. ಅವರು ವಿಧಾನ ಪರಿಷತ್ ನಲ್ಲಿ ಸದಸ್ಯ ಜಗದೇವ್ ಗುತ್ತೇದಾರ್ ಮತ್ತು ಕೇಶವ ಪ್ರಸಾದ್ ಅವರ ಚುಕ್ಕೆ ಗುರುತಿನ ಪ್ರಶ್ನೆ ಗೆ ಉತ್ತರಿಸಿ ಮಾತನಾಡಿದರು. ರಾಜ್ಯದಲ್ಲಿನ ಎಲ್ಲಾ ಜಿಲ್ಲೆಗಳ 44525 ಶಾಲೆಗಳಿಗೆ ಶೂ ಸಾಕ್ಸ್ ವಿತರಣೆ ಮಾಡಲು ಅನುದಾನ ಬಿಡುಗಡೆ ಮಾಡಲಾಗಿದೆ ಎಂದರು. https://kannadanewsnow.com/kannada/decision-taken-in-the-working-committee-meeting-to-discuss-the-north-karnataka-issue-in-the-belgaum-house-from-tomorrow/ https://kannadanewsnow.com/kannada/alert-do-you-use-an-inverter-in-your-home-dont-make-these-mistakes-even-if-you-make-a-mistake/

Read More

ಬೆಳಗಾವಿ: ಇಲ್ಲಿನ ಸುವರ್ಣಸೌಧದಲ್ಲಿ ನಡೆಯುತ್ತಿರುವಂತ ವಿಧಾನಮಂಡಲದ ಅಧಿವೇಶನದಲ್ಲಿ ನಾಳೆಯಿಂದ ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಚರ್ಚಿಸಲು ಕಲಾಪ ಸಲಹಾ ಸಮಿತಿ ಸಭೆಯಲ್ಲಿ ಒಮ್ಮತದಿಂದ ತೀರ್ಮಾನಿಸಲಾಗಿದೆ. ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ಕಲಾಪ ಸಲಹಾ ಸಮಿತಿಯ ಸಭೆ ನಡೆಯಿತು. ಈ ಸಭೆಯಲ್ಲಿ ನಾಳೆಯಿಂದ ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಚರ್ಚಿಸಲು ಕಲಾಪ ಸಲಹಾ ಸಮಿತಿ ಸಭೆಯಲ್ಲಿ ಒಮ್ಮತದಿಂದ ತೀರ್ಮಾನಿಸಲಾಯಿತು. ಶಾಲಾ ಮಕ್ಕಳ ಶೂ ಸಾಕ್ಸ್ ವಿತರಣೆ ಗೆ ರೂ.111.88 ಕೋಟಿ : ಸಚಿವ ಎಸ್. ಮಧು ಬಂಗಾರಪ್ಪ ರಾಜ್ಯದಲ್ಲಿನ ಸರ್ಕಾರಿ ಮತ್ತು ಅನುದಾನಿತ ಶಾಲೆಗಳ ಮಕ್ಕಳಿಗೆ ಶೂ ಸಾಕ್ಸ್ ವಿತರಣೆ ಮಾಡಲು ರೂ. 111.88 ಕೋಟಿ ಅನುದಾನ ಬಿಡುಗಡೆ ಮಾಡಲಾಗಿದೆ ಎಂದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವ ಮಧು ಬಂಗಾರಪ್ಪ ತಿಳಿಸಿದರು. ಅವರು ವಿಧಾನ ಪರಿಷತ್ ನಲ್ಲಿ ಸದಸ್ಯ ಜಗದೇವ್ ಗುತ್ತೇದಾರ್ ಮತ್ತು ಕೇಶವ ಪ್ರಸಾದ್ ಅವರ ಚುಕ್ಕೆ ಗುರುತಿನ ಪ್ರಶ್ನೆ ಗೆ ಉತ್ತರಿಸಿ ಮಾತನಾಡಿದರು. ರಾಜ್ಯದಲ್ಲಿನ ಎಲ್ಲಾ ಜಿಲ್ಲೆಗಳ…

Read More

ಬೆಳಗಾವಿ : ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಧಾನಮಂಡಲದ ಅಧಿವೇಶನದಲ್ಲಿ ಇತ್ತೀಚೆಗೆ ಅಗಲಿದ ಗಣ್ಯರಿಗೆ ಸಂತಾಪ ಸೂಚಿಸಿದರು. ಮಾಜಿ ಸಚಿವರು, ಹಾಲಿ ಸಂಸದರಾಗಿದ್ದ ಉತ್ತರ ಕರ್ನಾಟಕ ಭಾಗದ ಹಿರಿಯ ನಾಯಕರಾದ ಹೆಚ್.ವೈ.ಮೇಟಿ ಅವರ ಕುರಿತು ಮಾತನಾಡಿ ದೀರ್ಘ ಕಾಲ ಸಾರ್ವಜನಿಕ ಬದುಕಿನಲ್ಲಿದ್ದ ಮೇಟಿಯವರು ಜನಪರವಾಗಿ, ಕ್ಷೇತ್ರದ ಅಭಿವೃದ್ಧಿಯ ಬಗ್ಗೆಯಷ್ಟೇ ಚಿಂತಿಸುತ್ತಿದ್ದ ಮುತ್ಸದ್ದಿ ನಾಯಕ. ನನ್ನ ಅನುಯಾಯಿಗಳಲ್ಲಿ ಮೇಟಿ ಅಗ್ರಗಣ್ಯರು. ವೃತ್ತಿಯಲ್ಲಿ ಕೃಷಿಕರಾಗಿದ್ದ ಮೇಟಿಯವರು ಬಿಲ್‌ಕೆರೂರು ಮಂಡಳ ಪಂಚಾಯಿತಿ ಅಧ್ಯಕ್ಷರಾಗುವ ಮೂಲಕ ರಾಜಕೀಯ ಪ್ರವೇಶಿಸಿದ್ದರು. ಬಾಗಲಕೋಟೆ ತಾಲ್ಲೂಕು ಕೃಷಿ ಹುಟ್ಟುವಳಿ ಮಾರಾಟ ಸಮಿತಿ, ಬಾಗಲಕೋಟೆ ಪಟ್ಟಣ ಅಭಿವೃದ್ಧಿ ಪ್ರಾಧಿಕಾರ, ಮತ್ತು ಎಂ.ಎಸ್.ಐ.ಎಲ್.ನ ಅಧ್ಯಕ್ಷರಾಗಿ ಡಿ.ಸಿ.ಸಿ ಬ್ಯಾಂಕ್ ಹಾಗೂ ನಿರ್ದೇಶಕರಾಗಿ ಸೇವೆ ಸಲ್ಲಿಸಿದ್ದರು. 1983 ರಿಂದಲೂ ಹೆಚ್.ವೈ. ಮೇಟಿಯವರೊಂದಿಗೆ ಒಡನಾಡವಿತ್ತು. ನಾನು ಜನತಾ ಪಕ್ಷ, ಜನತಾ ದಳ ಹಾಗೂ ಕಾಂಗ್ರೆಸ್ ಪಕ್ಷದಲ್ಲಿದ್ದರೂ ನಾನು ಕೈಗೊಳ್ಳುವ ತೀರ್ಮಾನಗಳಿಗೆ ಬದ್ಧರಾಗಿದ್ದರು. ಅಹಿಂದ ಸಂಘಟನೆಯಲ್ಲಿ ನನ್ನೊಂದಿಗೆ ಹೆಗಲು ಕೊಟ್ಟು ದುಡಿದವರು. ಶಾಸಕರಾಗಿ, ಸಂಸದರಾಗಿ, ಸಚಿವರಾಗಿ, ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ ಮೇಟಿಯವರು…

Read More

ನವದೆಹಲಿ: ಕುಮಾರಸ್ವಾಮಿ ಮಂಡ್ಯಕ್ಕೆ ಏನು ಕೊಟ್ಟಿದ್ದಾರೆ ಎಂದು ಕೇಳಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ತೀಕ್ಷ್ಣವಾಗಿ ತಿರುಗೇಟು ಕೊಟ್ಟಿರುವ ಕೇಂದ್ರ ಸಚಿವರು; ನಾನು ಕೊಟ್ಟಿದ್ದನ್ನು ಪಟ್ಟಿ ಮಾಡಿ ಹೇಳುತ್ತೇನೆ, ಮೊದಲು ಐದು ವರ್ಷ ಮುಖ್ಯಮಂತ್ರಿ ಆಗಿದ್ದಾಗ, ಈಗ ಏನೇನು ಕೊಟ್ಟಿದ್ದೀರಿ ಎಂಬುದನ್ನು ಹೇಳಿ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಒತ್ತಾಯಿಸಿದರು. ನವದೆಹಲಿಯ ತಮ್ಮ ಗೃಹ ಕಚೇರಿಯಲ್ಲಿ ಸೋಮವಾರ ಬೆಳಗ್ಗೆ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಸಚಿವರು; ನಾನು ಕೊಟ್ಟಿದ್ದನ್ನು ಹೇಳುತ್ತೇನೆ. ಸಿದ್ದರಾಮಯ್ಯ ಅವರೇ.. ನೀವು ರೈತರಿಗೆ ಏನು ಕೊಡುಗೆ ಕೊಟ್ಟಿದ್ದೀರಿ ಎಂಬುದನ್ನು ಹೇಳಿ. ಮಂಡ್ಯಕ್ಕೆ ನಿಮ್ಮ ಕೊಡುಗೆ ಏನು? ಹಿಂದಿನ ಐದು ವರ್ಷ ಆಡಳಿತದಲ್ಲಿ 200ಕ್ಕೂ ಹೆಚ್ಚು ರೈತರು ಮಂಡ್ಯದಲ್ಲಿ ಸರಣಿ ಆತ್ಮಹತ್ಯೆ ಮಾಡಿಕೊಂಡಿದ್ದೇ ನಿಮ್ಮ ಕೊಡುಗೆ. ಅಂಥ ಕಷ್ಟಕಾಲದಲ್ಲಿ ನಾನು ಅಧಿಕಾರಕ್ಕೆ ಬಂದ ಮೇಲೆ ಅದೇ ಜಿಲ್ಲೆಯ ರೈತರ 900 ಕೋಟಿ ಸಾಲ ಮನ್ನಾ ಮಾಡಿದೆ. ಇದಕ್ಕಿಂತ ಕೊಡುಗೆ ಬೇಕಾ? ನಿಮ್ಮ ಕಾಲದಲ್ಲಿ ರೈತರ ಜೀವ ಹೋಯಿತು, ನನ್ನ ಕಾಲದಲ್ಲಿ ಜೀವ…

Read More

ಸುವರ್ಣವಿಧಾನಸೌಧ: ಪ್ರತಿಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್ ಅವಿಶ್ವಾಸ ನಿರ್ಣಯ ಮಂಡಿಸಿದರೆ ಅದಕ್ಕೆ ಸೋಲಾಗುವುದು ಶತಃಸಿದ್ಧ ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬೈರತಿ ಸುರೇಶ್ ತಿಳಿಸಿದ್ದಾರೆ. ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬೆಳಗಾವಿ ಅಧಿವೇಶನದಲ್ಲಿ ನಮ್ಮ ಸರ್ಕಾರದ ವಿರುದ್ಧ ಹಲವಾರು ಅಸ್ತ್ರಗಳನ್ನು ಪ್ರಯೋಗಿಸಲಾಗುವುದು ಎಂದು ಪ್ರತಿ ಪಕ್ಷದ ನಾಯಕ ಆರ್.ಅಶೋಕ ಹೇಳಿದ್ದಾರೆ. ಆದರೆ, ಅವರ ಪಕ್ಷದ ಬತ್ತಳಿಕೆಯಲ್ಲಿ ಬಾಣವೇ ಇಲ್ಲ ಎಂದು ವ್ಯಂಗ್ಯವಾಡಿದರು. ಪ್ರತಿಪಕ್ಷ ಬಿಜೆಪಿಯಲ್ಲೇ ಅಶೋಕ ಬಣ, ವಿಜಯೇಂದ್ರ ಬಣ, ಕುಮಾರ್ ಬಂಗಾರಪ್ಪ ಬಣ ಮತ್ತು ರಮೇಶ್ ಜಾರಕಿಹೊಳಿ ಬಣಗಳಿವೆ. ಮೊದಲು ಆ ಬಣಗಳ ಕಿತ್ತಾಟವನ್ನು ಅಶೋಕ್ ಅವರು ಪರಿಹರಿಸಲಿ. ನಮ್ಮ ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ಬಣಗಳಿಲ್ಲ. ನಮ್ಮದೇನಿದ್ದರೂ ಕಾಂಗ್ರೆಸ್ ಬಣ ಎಂದು ಅವರು ಸ್ಪಷ್ಟಪಡಿಸಿದರು. ಬಿಜೆಪಿಯವರು ಜನರಲ್ಲಿ ಕೇವಲ ಮತೀಯ ಭಾವನೆಗಳನ್ನು ಕೆರಳಿಸಿ ಎತ್ತಿಕಟ್ಟುವ ಕೆಲಸ ಮಾಡುತ್ತಿದ್ದಾರೆಯೇ ಹೊರತು, ಯಾವತ್ತಾದರೂ ಅಭಿವೃದ್ಧಿ ಬಗ್ಗೆ ರಾಜಕೀಯ ಮಾಡಿಲ್ಲ. ಜನರ ಪರವಾಗಿ ಎಂದಿಗೂ ಕೆಲಸವನ್ನೂ ಮಾಡಿಲ್ಲ ಎಂದು…

Read More

ಬೆಳಗಾವಿ ಸುವರ್ಣಸೌಧ : ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ವಿವಿಧ ಹುದ್ದೆಗಳ ನೇಮಕಾತಿಯ ಪರೀಕ್ಷೆ ಸಂದರ್ಭದಲ್ಲಿ ಬಡ ಹಾಗೂ ಗ್ರಾಮೀಣ ಪ್ರದೇಶದ ಅಭ್ಯರ್ಥಿಗಳಿಗೆ ಆರ್ಥಿಕವಾಗಿ ಹೊರೆಯಾಗದಂತೆ ಪರೀಕ್ಷಾ ಶುಲ್ಕ ನಿಗದಿಪಡಿಸಲಾಗುತ್ತದೆ ಎಂದು ಉನ್ನತ ಶಿಕ್ಷಣ ಸಚಿವರಾದ ಡಾ.ಎಂ.ಸಿ.ಸುಧಾಕರ ತಿಳಿಸಿದರು. ಪರಿಷತನಲ್ಲಿ ಡಿ.08ರಂದು ಪ್ರಶ್ನೋತ್ತರ ವೇಳೆಯಲ್ಲಿ, ಪರಿಷತ್ ಸದಸ್ಯರಾದ ನಿರಾಣಿ ಹನುಮಂತಪ್ಪ ರುದ್ರಪ್ಪ ಅವರ ಚುಕ್ಕೆ ಗುರುತಿನ ಸಂಖ್ಯೆ 105ಕ್ಕೆ ಪ್ರತಿಕ್ರಿಯಿಸಿದ ಸಚಿವರು ಹೇಳಿದ್ದಿಷ್ಟು; 2024ನೇ ಸಾಲಿನಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ರಾಜ್ಯ ಸರ್ಕಾರದ ವಿವಿಧ ಹುದ್ದೆಗಳ ನೇಮಕಾತಿಗಾಗಿ 17 ನೇಮಕಾತಿ ಅಧಿಸೂಚನೆಗಳನ್ನು ಪೂರ್ಣಗೊಳಿಸಿರುವುದಿಲ್ಲ. 2024ರಲ್ಲಿ ಕೆಲವೇ ಅಧಿಸೂಚನೆಗಳನ್ನು ಹೊರಡಿಸಿ ಶುಲ್ಕ ಸಂಗ್ರಹಿಸಿದೆ. ಸ್ಪರ್ಧಾತ್ಮಕ ಪರೀಕ್ಷೆಗಳನ್ನು ನಡೆಸಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ಸರ್ಕಾರದಿಂದ ಯಾವುದೇ ಅನುದಾನ ನೀಡಲಾಗುವುದಿಲ್ಲ. ಸ್ಪರ್ಧಾತ್ಮಕ ಪರೀಕ್ಷೆಗಳನ್ನು ನಡೆಸಲು ಪರೀಕ್ಷಾ ಕೇಂದ್ರಗಳಿಗೆ ತಗಲುಬಹುದಾದ ವೆಚ್ಚಗಳು, ಗೌಪ್ಯತಾ ವೆಚ್ಚಗಳು, ಮುದ್ರಣ, ಗೌಪ್ಯತಾ ಬಂಡಲುಗಳನ್ನು ಆಯಾ ಪರೀಕ್ಷಾ ಕೇಂದ್ರಗಳಿಗೆ ರವಾನಿಸುವುದು, ಪರೀಕ್ಷೆ ಮುಗಿದ ನಂತರ ಗೌಪ್ಯತಾ ಬಂಡಲುಗಳನ್ನು ಪ್ರಾಧಿಕಾರಕ್ಕೆ ತೆಗೆದುಕೊಂಡು ಬರುವುದು, ಪರೀಕ್ಷಾ ಕಾರ್ಯಗಳಲ್ಲಿ…

Read More

ಬೆಳಗಾವಿ ಸುವರ್ಣಸೌಧ: ಬೆಳಗಾವಿಯ ಭೂತರಾಮನ ಹಟ್ಟಿಯಲ್ಲಿನ ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿ 30 ಕೃಷ್ಣ ಮೃಗಗಳು ಮೃತಪಡಲು ಸಾಂಕ್ರಾಮಿಕ ರೋಗವೇ ಕಾರಣ ಎಂದು ಅರಣ್ಯ ಸಚಿವ ಈಶ್ವರ ಖಂಡ್ರೆ ತಿಳಿಸಿದರು. ಅವರು ವಿಧಾನ ಪರಿಷತ್ ನಲ್ಲಿ ಸದಸ್ಯ ತಳವಾರ್ ಸಾಬಣ್ಣ ಅವರ ಚುಕ್ಕೆ ಗುರುತಿನ ಪ್ರಶ್ನೆ ಗೆ ಉತ್ತರಿಸಿ ಮಾತನಾಡಿದರು. ಕೃಷ್ಣ ಮೃಗಗಳು ‘ಹೆಮರಾಜಿಕ್ ಸೆಫ್ಟಿಸೆಮಿಯಾ’ ಸಾಂಕ್ರಾಮಿಕ ರೋಗದಿಂದ ಮರಣ ಹೊಂದಿರುವುದು ಪ್ರಯೋಗಾಲಯದ ದೃಢಪಟ್ಟಿರುವುದರಿಂದ, ಮೇಲ್ನೋಟಕ್ಕೆ ಅಧಿಕಾರಿಗಳ ಕರ್ತವ್ಯ ನಿರ್ಲಕ್ಷ್ಯ ಕಂಡುಬಂದಿರುವುದಿಲ್ಲ ಎಂದರು. ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿ ಕೃಷ್ಣ ಮೃಗಗಳು ಮೃತಪಟ್ಟ ಪ್ರಕರಣದಲ್ಲಿ, ಪ್ರಾಣಿ ಆರೋಗ್ಯ ಮತ್ತು ಪಶುವೈದ್ಯ ಜೈವಿಕ ಸಂಸ್ಥೆ, ತಂಡವು ಹೆಬ್ಬಾಳ, ಬೆಂಗಳೂರು ಇಲ್ಲಿಂದ ನುರಿತ ಪಶುವೈದ್ಯಾಧಿಕಾರಿ ಹಾಗೂ ತಜ್ಞರ ಮೃಗಾಲಯಕ್ಕೆ ಭೇಟಿ ನೀಡಿ ಮೃತ ಪ್ರಾಣಿಗಳನ್ನು ಪರಿಶೀಲಿಸಿದ್ದು, ಸಾವಿನ ಕಾರಣ ಪತ್ತೆ ಹಚ್ಚಲು ಮೃತಪಟ್ಟ ಪ್ರಾಣಿಗಳ ಮಾದರಿಯನ್ನು (Blood samples and organs) ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ಮೃಗಾಲಯದಲ್ಲಿರುವ ಬೇರೆ ಪ್ರಾಣಿಗಳಿಗೆ ಸಾಂಕ್ರಾಮಿಕ ರೋಗ…

Read More

ಬೆಳಗಾವಿ ಸುವರ್ಣಸೌಧ: : ವಿಧಾನ ಪರಿಷತ್ತಿನಲ್ಲಿ ಡಿ.8ರಂದು ನಡೆದ ಪ್ರಶ್ನೋತ್ತರ ವೇಳೆಯಲ್ಲಿ, ಬೆಳಗಾವಿ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಆಸ್ಪತ್ರೆಯ ಪ್ರಕರಣವೊಂದು ಚರ್ಚೆಗೆ ಬಂದಿತು. ಚುಕ್ಕೆ ಗುರುತಿನ ಪ್ರಶ್ನೆ ಸಂಖ್ಯೆ 13(139)ರ ಮೇಲಿನ ಚರ್ಚೆಯ ವೇಳೆ ಸದಸ್ಯರಾದ ಎಂ ನಾಗರಾಜು ಅವರು ವಿಷಯ ಪ್ರಸ್ತಾಪಿಸಿ, ತಪ್ಪಿತಸ್ಥ ವೈದ್ಯರು‌ ಮತ್ತು ಆಡಳಿತ ಮಂಡಳಿ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ಪಟ್ಟುಹಿಡಿದರು. ಇದಕ್ಕೆ ಪ್ರತಿಕ್ರಿಯಿಸಿದ ವೈದ್ಯಕೀಯ ಶಿಕ್ಷಣ ಹಾಗೂ ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವರಾದ ಡಾ.ಶರಣಪ್ರಕಾಶ ಪಾಟೀಲ, ಬಿಮ್ಸ್ ಸಂಸ್ಥೆಯಲ್ಲಿ ಶಸ್ತ್ರಚಿಕಿತ್ಸೆಯ ವೇಳೆಯಲ್ಲಿ ವೈದ್ಯರಿಂದ ಯಾವುದೇ ನಿರ್ಲಕ್ಷ್ಯ ಆಗಿರುವುದಿಲ್ಲ ಎಂದು ಸ್ಪಷ್ಟನೆ ನೀಡಿದರು. ಬೆಳಗಾವಿ ವೈದ್ಯಕೀಯ ವಿಜ್ಞಾನ ಸಂಸ್ಥೆಯ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸಕರ ನಿರ್ಲಕ್ಷ್ಯದಿಂದ ಒಬ್ಬ ರೋಗಿಯ ಹೊಟ್ಟೆಯ ಗಡ್ಡೆ ಬದಲಿಗೆ ಕರುಳನ್ನು ತೆಗೆದು ಹಾಕಲಾಗಿದೆ ಎಂದು ಸುದ್ದಿಯಾಗಿರುವದು ಸರ್ಕಾರದ ಗಮನಕ್ಕೆ ಬಂದಿದೆ. ಈ ಪ್ರಕರಣದ ಬಗ್ಗೆ ಪರಿಶೀಲಿಸಲಾಗಿ, ರೋಗಿಯು ದೀರ್ಘಕಾಲದ ಮದ್ಯವ್ಯಸನಿ ಹಾಗೂ ತಂಬಾಕು ಅಗಿಯುವ ಇತಿಹಾಸವನ್ನು ಹೊಂದಿದ್ದು, ರೋಗಿಗೆ ಅಪೇಂಡಿಕ್ಸ್ ಕರುಳಿನ ರಂದ್ರ ಇರುವುದು ತಾಲ್ಲೂಕ…

Read More

ನವದೆಹಲಿ: ಬೆಂಗಳೂರು ಸೇರಿ ರಾಜ್ಯದಲ್ಲಿ ಮಾದಕ ವಸ್ತುಗಳ ನಶೆಗೆ ಸಿಕ್ಕಿ ಯುವಜನರು ಹಾಳಾಗುತ್ತಿದ್ದಾರೆ. ರಾತ್ರಿಯಿಂದ ಬೆಳಗ್ಗೆವರೆಗೂ ರೇವ್ ಪಾರ್ಟಿಗಳಲ್ಲಿ ಡ್ರಗ್ಸ್ ಅನ್ನು ನಿರಂತರವಾಗಿ ಪೂರೈಕೆ ಮಾಡುತ್ತಿದ್ದಾರೆ. ಇಂಥ ಕೆಟ್ಟ ಪರಿಸ್ಥಿತಿಯಿಂದ ಯುವಕರನ್ನು ಸರಿದಾರಿಗೆ ತರಲು ವಿದ್ಯಾರ್ಥಿ ದಿಸೆಯಿಂದಲೇ ಭಗವದ್ಗೀತೆ ಬೋಧಿಸಬೇಕು ಎಂದು ಹೇಳಿದ್ದೇನೆ. ಇದರಲ್ಲಿ ತಪ್ಪೇನಿದೆ? ಎಂದು ಎಂದು ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಪ್ರಶ್ನಿಸಿದರು. ನವದೆಹಲಿಯ ತಮ್ಮ ಗೃಹ ಕಚೇರಿಯಲ್ಲಿ ಸೋಮವಾರ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಸಚಿವರು; ಸಮಾಜ ಯಾವ ದಿಕ್ಕಿಗೆ ಹೋಗುತ್ತಿದೆ ಎಂಬುದನ್ನು ನಾವು ನಿತ್ಯವೂ ನೋಡುತ್ತಿದ್ದೇವೆ. ಒಳ್ಳೆಯ ಸಮಾಜ ನಿರ್ಮಿಸುವ ಉದ್ದೇಶದಿಂದ ಮಕ್ಕಳಿಗೆ ಚಿಕ್ಕಂದಿನಿಂದಲೇ ಭಗವದ್ಗೀತೆ ಕಲಿಸಬೇಕು ಎಂಬುದು ನನ್ನ ಅಭಿಪ್ರಾಯ. ಮನುವಾದಕ್ಕೂ ಭಗವದ್ಗೀತೆಗೂ ಏನು ಸಂಬಂಧ? ಇಂಥ ಮನಃಸ್ಥಿತಿಯೇ ಅಪಾಯಕಾರಿ ಎಂದು ಅಭಿಪ್ರಾಯಪಟ್ಟರು. ಈ ಬಗ್ಗೆ ತಮ್ಮನ್ನು ಟೀಕಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ, ಸಚಿವ ಹೆಚ್.ಸಿ. ಮಹಾದೇವಪ್ಪ ಅವರಿಗೆ ತಿರುಗೇಟು ಕೊಟ್ಟ ಸಚಿವರು; ಒಳ್ಳೆಯದು, ಸದ್ವಿಚಾರಗಳನ್ನು ಚರ್ಚೆ ಮಾಡುವುದು, ಮಕ್ಕಳಿಗೆ ಒಳ್ಳೆಯ…

Read More