Subscribe to Updates
Get the latest creative news from FooBar about art, design and business.
Author: kannadanewsnow09
ನವದೆಹಲಿ: ಭಾರತ ಸೇರಿದಂತೆ ವಿಶ್ವದ ಅನೇಕ ಕಡೆಯಲ್ಲಿ ಜನಪ್ರಿಯ ಸಾಮಾಜಿಕ ಮಾಧ್ಯಮ ಇನ್ಸ್ಟಾಗ್ರಾಮ್ ಸರ್ವರ್ ಡೌನ್ ಅಗಿದೆ ಎನ್ನಲಾಗುತ್ತಿದೆ. ಹೀಗಾಗಿ ಬಳಕೆದಾರರು ಪೋಸ್ಟ್, ವೀಡಿಯೋ ಮಾಡಲಾಗದೇ ಪರದಾಡುತ್ತಿದ್ದಾರೆ ಎಂಬುದಾಗಿ ತಿಳಿದು ಬಂದಿದೆ. ಈ ಕುರಿತಂತೆ ತಮ್ಮ ಇತರೆ ಸೋಷಿಯಲ್ ಮೀಡಿಯಾಗಳಲ್ಲಿ ಸಮಸ್ಯೆಯನ್ನು ಹಂಚಿಕೊಂಡಿದ್ದು, ನಾನು ಇನ್ಸ್ಟಾಗ್ರಾಮ್ ನಲ್ಲಿ ಯಾವುದೇ ಪೋಸ್ಟ್ ಮಾಡೋದಕ್ಕೆ ಸಾಧ್ಯವಾಗುತ್ತಿಲ್ಲ. ಸಮಸ್ಯೆ ಏನೆಂದು ತಿಳಿದವರು ಉತ್ತರಿಸುವಂತೆ ಕೇಳಿರುವುದು ಕಂಡು ಬಂದಿದೆ. https://twitter.com/Sowmyareddyr/status/1916823912865792452 ಸದ್ಯಕ್ಕೆ ಮೇಟಾ ಒಡೆತನದ ಇನ್ಸ್ಟಾಗ್ರಾಮ್ ಸರ್ವರ್ ನಲ್ಲಿ ಯಾವ ರೀತಿಯ ಸಮಸ್ಯೆ ಆಗಿದೆ ಎಂಬುದಾಗಿ ಕಂಪನಿಯ ಕಡೆಯಿಂದ ಪ್ರತ್ಯುತ್ತರ ತಿಳಿದು ಬಂದಿಲ್ಲ. ಇದರ ನಡುವೆ ಇನ್ಸ್ಟಾಗ್ರಾಮ್ ಬಳಕೆದಾರರು ವೀಡಿಯೋ, ಪೋಟ್ಟ್ ಮಾಡಲಾಗದೇ ಭಾರತದಾದ್ಯಂತ ಪರದಾಡುತ್ತಿರುವುದು ಕಂಡು ಬಂದಿದೆ. https://kannadanewsnow.com/kannada/putin-announces-3-day-ceasefire-in-ukraine/ https://kannadanewsnow.com/kannada/will-the-state-bjp-leaders-have-the-guts-to-question-modi-ji-minister-ramalinga-reddy-questions/
ರಷ್ಯಾ: ಎರಡನೇ ಮಹಾಯುದ್ಧದ ವಿಜಯದ 80 ವರ್ಷಗಳನ್ನು ಗುರುತಿಸಲು ಮೇ 8-10 ರಿಂದ ಉಕ್ರೇನ್ ಜೊತೆ 3 ದಿನಗಳ ಕದನ ವಿರಾಮವನ್ನು ರಷ್ಯಾ ಅಧ್ಯಕ್ಷ ಪುಟಿನ್ ಘೋಷಿಸಿದ್ದಾರೆ. ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಸೋಮವಾರ ಉಕ್ರೇನ್ ನಲ್ಲಿ ಮೇ 8 ರಿಂದ 11 ರವರೆಗೆ ಮೂರು ದಿನಗಳ ಕದನ ವಿರಾಮವನ್ನು ಘೋಷಿಸಿದ್ದಾರೆ. ಅವರು ಕೈವ್ ಅವರನ್ನು ಅದೇ ರೀತಿ ಮಾಡಲು ಕರೆದರು ಎಂದು ಕ್ರೆಮ್ಲಿನ್ ಹೇಳಿದರು. ಮೇ 8 ರ ಆರಂಭದಿಂದ ಮೇ 10 ರ ಅಂತ್ಯದವರೆಗೆ ನಡೆಯುವ 72 ಗಂಟೆಗಳ ಅಚ್ಚರಿಯ ಕದನ ವಿರಾಮವು ಮಾಸ್ಕೋದಲ್ಲಿ ಎರಡನೇ ಮಹಾಯುದ್ಧದ ವಿಜಯ ದಿನದ ಸ್ಮರಣಾರ್ಥ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಕಾರಣದಿಂದ ಕನದ ವಿರಾಮ ನೀಡಲಾಗಿದೆ ಅಂತ ಕ್ರೆಮ್ಲಿನ್ ಹೇಳಿದೆ. ಮಾನವೀಯ ಪರಿಗಣನೆಗಳ ಆಧಾರದ ಮೇಲೆ, ರಷ್ಯಾದ ಕಡೆಯವರು ವಿಜಯ ದಿನದ 80 ನೇ ವಾರ್ಷಿಕೋತ್ಸವದ ಸಮಯದಲ್ಲಿ ಕದನ ವಿರಾಮವನ್ನು ಘೋಷಿಸುತ್ತಿದ್ದಾರೆ ಎಂದು ಅದು ಹೇಳಿದೆ. ಆ ಅವಧಿಯಲ್ಲಿ ಎಲ್ಲಾ ಯುದ್ಧಗಳನ್ನು ನಿಲ್ಲಿಸಲಾಗುವುದು ಎಂದು…
ನವದೆಹಲಿ: ಮುಂಬೈ ದಾಳಿಯ ಮಾಸ್ಟರ್ ಮೈಂಡ್ ತಹವೂರ್ ರಾಣಾ ಅವರನ್ನು ಎನ್ಐಎ ಕಸ್ಟಡಿಗೆ ನೀಡಿದ್ದಂತ ಅವಧಿ ಮುಕ್ತಾಯಗೊಂಡಿತ್ತು. ಇಂದು ಕೋರ್ಟ್ ಗೆ ಹಾಜರುಪಡಿಸಲಾಗಿತ್ತು. ಅವರನ್ನು ಮತ್ತೆ 12 ದಿನಗಳ ಕಾಲ ಕೋರ್ಟ್ ಎನ್ಐಎ ವಶಕ್ಕೆ ನೀಡಿ ಆದೇಶಿಸಿದೆ. ಇಂದು 26/11 ಭಯೋತ್ಪಾದಕ ದಾಳಿಯ ಆರೋಪಿ ತಹವೂರ್ ರಾಣಾನನ್ನು ದೆಹಲಿಯ ಪಟಿಯಾಲ ಹೌಸ್ ಕೋರ್ಟ್ ನಿಂದ ಕರೆದೊಯ್ಯಲಾಗಿದೆ. ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ನ್ಯಾಯಾಲಯವು ಅವರ ಕಸ್ಟಡಿಯನ್ನು 12 ದಿನಗಳವರೆಗೆ ವಿಸ್ತರಿಸಿದೆ. ಅಂದಹಾಗೇ ಇಂದು ತಹವೂರ್ ರಾಣಾ ಅವರನ್ನು ಎನ್ಐಎ ವಶಕ್ಕೆ ನೀಡಿದ್ದಂತ ಕಾಲಾವಧಿ ಮುಕ್ತಾಯಗೊಂಡಿತ್ತು. ಮತ್ತೆ ಹೆಚ್ಚಿನ ವಿಚಾರಣೆಗಾಗಿ ತಮ್ಮ ವಶಕ್ಕೆ ನೀಡುವಂತೆ ರಾಷ್ಟ್ರೀಯ ತನಿಖಾ ಸಂಸ್ಥೆಯಿಂದ ನ್ಯಾಯಾಲಯಕ್ಕೆ ಮನವಿ ಮಾಡಲಾಗಿತ್ತು. ಈ ಮನವಿಯನ್ನು ಪುರಸ್ಕರಿಸಿ, ಮತ್ತೆ 12 ದಿನಗಳ ಕಾಲ ಮುಂಬೈ ದಾಳಿಯ ಮಾಸ್ಟರ್ ಮೈಂಡ್ ತಹವೂರ್ ರಾಣಾನನ್ನು ಎನ್ಐಎ ವಶಕ್ಕೆ ನೀಡಿ ಕೋರ್ಟ್ ಆದೇಶಿಸಿದೆ. https://twitter.com/ANI/status/1916810030168314332 https://kannadanewsnow.com/kannada/attention-people-of-sagar-taluk-summer-swimming-training-begins-in-the-swimming-pool-from-may-3rd/ https://kannadanewsnow.com/kannada/big-news-woman-fined-rs-500-for-eating-at-namma-metro-in-bengaluru-bmrcl-makes-important-announcement/
ಶಿವಮೊಗ್ಗ: ಜಿಲ್ಲೆಯ ಸಾಗರ ನಗರದಲ್ಲಿರುವಂತ ಈಜುಕೊಳದ ಕಾಮಗಾರಿ ಪೂರ್ಣಗೊಂಡಿದ್ದು, ಮೇ.3ರಿಂದ ಬೇಸಿಗೆ ಈಜು ತರಬೇತಿ ಶಿಬಿರವನ್ನು ಆಯೋಜಿಸಲಾಗಿದೆ. ಈ ಕುರಿತಂತೆ ಸಾಗರದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಾಗರ ತಾಲ್ಲೂಕಿನ ವಿಜಯನಗರದಲ್ಲಿರುವ ದುರಸ್ಥಿ ಕಾಮಗಾರಿ ಪೂರ್ಣಗೊಳಿಸಿದ್ದು, ದಿನಾಂಕ:01-05-2015ರಂದು ಬೆಳಿಗ್ಗೆ ಮಾನ್ಯ ಶಾಸಕರಾದ ಬೇಳೂರು ಗೋಪಾಲಕೃಷ್ಣರವರು ನವೀಕರಣಗೊಂಡ ಈಜುಕೊಳದ ಚಟುವಟಿಕೆಗಾಗಿ ಮನ: ಚಾಲನೆ ನೀಡಲಿದ್ದಾರೆ. ಅದರಂತೆ ಈ ಹಿಂದೆ ಸದಸ್ಯತ್ವ ಪಡದ ಹಾಗೂ ಹೊಸದಾಗಿ ಸದಸ್ಯತ್ವ ಪಡೆಯುವ ಸದಸ್ಯರು ಈಜುಕೊಳಕ್ಕೆ ಸಂಪರ್ಕಿಸಬಹುದಾಗಿದೆ ಎಂದಿದ್ದಾರೆ. ಈ ಬಾರಿಯೂ ಸಹ ದಿನಾಂಕ:03-05-2025ರಿಂದ 25-05-2025ರವರೆಗೆ ಈಜುಕೊಳದಲ್ಲಿ ಬೇಸಿಗೆಯ ವಿಶೇಷ ಈಜು ತರಬೇತಿ ಶಿಬಿರವನ್ನು 5 ವರ್ಷ ಮೇಲ್ಪಟ್ಟವರಿಗೆ 21 ದಿನಗಳ ಆಯೋಜಿಸಲಾಗುತ್ತಿದ್ದು, ಪ್ರತಿದಿನ ಬೆಳಿಗ್ಗೆ ಮತ್ತು ಸಂಜೆ ತರಬೇತಿ ನಡೆಸಲಾಗುತ್ತದೆ. ತರಬೇತಿ ಶುಲ್ಕವಾಗಿ ರೂ.1500/-ಗಳನ್ನು ನಿಗದಿಪಡಿಸಲಾಗಿದೆ. ತರಬೇತಿಗೆ ಪಾಲ್ಗೊಳ್ಳುವ ಆಸಕ್ತರು ತಕ್ಷಣದಲ್ಲಿ ಸಂಪರ್ಕಿಸಿ ತರಬೇತಿಯಲ್ಲಿ ಪಾಲ್ಗೊಳ್ಳಲು ಈ ಮೂಲಕ ತಿಳಿಸಲಾಗಿದೆ.…
ಕರಾಚಿ: ಪಾಕಿಸ್ತಾನದ ದಕ್ಷಿಣ ವಜಿರಿಸ್ತಾನದಲ್ಲಿ ಶಾಂತಿ ಸಭೆಯ ವೇಳೆಯಲ್ಲೇ ಪ್ರಬಲ ಬಾಂಬ್ ಸ್ಫೋಟಗೊಂಡ ನಂತರ ಕನಿಷ್ಠ ಏಳು ಜನರು ಸಾವನ್ನಪ್ಪಿದರು ಮತ್ತು 16 ಜನರು ಗಾಯಗೊಂಡರು ಎಂದು ಪೊಲೀಸರು ತಿಳಿಸಿದ್ದಾರೆ. ಖೈಬರ್ ಪಖ್ತುನ್ಖ್ವಾ ಪ್ರಾಂತ್ಯದ ದಕ್ಷಿಣ ವಜೀರಿಸ್ತಾನ್ ಜಿಲ್ಲೆಯ ಪ್ರಮುಖ ನಗರವಾದ ವಾನಾದಲ್ಲಿ ಈ ದಾಳಿ ನಡೆದಿದೆ ಎಂದು ಸ್ಥಳೀಯ ಪೊಲೀಸ್ ಮುಖ್ಯಸ್ಥ ಉಸ್ಮಾನ್ ವಜೀರ್ ಅಸೋಸಿಯೇಟೆಡ್ ಪ್ರೆಸ್ಗೆ ತಿಳಿಸಿದ್ದಾರೆ. ಪಾಕಿಸ್ತಾನಿ ತಾಲಿಬಾನ್ ಅನ್ನು ಸಾರ್ವಜನಿಕವಾಗಿ ವಿರೋಧಿಸುವ ಶಾಂತಿ ಸಮಿತಿಯ ಕಚೇರಿಯನ್ನು ಗುರಿಯಾಗಿಸಿಕೊಂಡು ಬಾಂಬ್ ದಾಳಿ ನಡೆಸಲಾಗಿದೆ ಎಂದು ಅವರು ಹೇಳಿದರು. ನಿವಾಸಿಗಳ ನಡುವಿನ ವಿವಾದಗಳನ್ನು ಪರಿಹರಿಸಲು ಸಮಿತಿಯು ಸಹಾಯ ಮಾಡುತ್ತದೆ. ಅಫ್ಘಾನಿಸ್ತಾನದಿಂದ ದೇಶವನ್ನು ದಾಟಲು ಪ್ರಯತ್ನಿಸಿದ ನಂತರ ಹತ್ತಿರದ ಉತ್ತರ ವಜೀರಿಸ್ತಾನ್ ಜಿಲ್ಲೆಯಲ್ಲಿ 54 ಉಗ್ರರನ್ನು ಪ್ರಮುಖ ಕಾರ್ಯಾಚರಣೆಯಲ್ಲಿ ಸೈನಿಕರು ಕೊಂದಿದ್ದಾರೆ ಎಂದು ಮಿಲಿಟರಿ ಹೇಳಿದ ಒಂದು ದಿನದ ನಂತರ ಬಾಂಬ್ ದಾಳಿ ನಡೆದಿದೆ. ಸೋಮವಾರದ ದಾಳಿಯ ಜವಾಬ್ದಾರಿಯನ್ನು ಯಾರೂ ತಕ್ಷಣ ವಹಿಸಿಕೊಂಡಿಲ್ಲ. ಆದರೆ ತೆಹ್ರೀಕ್-ಎ-ತಾಲಿಬಾನ್ ಪಾಕಿಸ್ತಾನ ಅಥವಾ ಟಿಟಿಪಿ…
ಧಾರವಾಡ : ನ್ಯಾಯಮೂರ್ತಿ ಡಾ.ಎಚ್.ಎಸ್.ನಾಗಮೋಹನದಾಸ ಏಕ ಸದಸ್ಯವಿಚಾರಣಾ ಆಯೋಗದ ಸೂಚನೆ ಪ್ರಕಾರ ಈಗಾಗಲೇ ಗುರುತಿಸಿರುವ 101 ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆಯಡಿ, ಉಪ ಜಾತಿಗಳ ಸಮೀಕ್ಷೆ ಮೇ 5 ರಿಂದ ಆರಂಭವಾಗಲಿದೆ. ಸಮೀಕ್ಷೆದಾರರು ಯಾವುದೇ ಒತ್ತಡ, ಪ್ರಭಾವಗಳಿಗೆ ಒಳಗಾಗದೇ, ಅಗತ್ಯ ದಾಖಲೆಗಳ ಅನುಸಾರ ಕರಾರುವಕ್ಕಾಗಿ ಮತ್ತು ನಿಯಮಗಳ ಅನುಸಾರ ಸಮೀಕ್ಷೆ ಮಾಡಬೇಕೆಂದು ತಿಳಿಸಿದರು. ಅವರು ಇಂದು ಜಿಲ್ಲಾ ಪಂಚಾಯತ ಸಭಾಂಗಣದಲ್ಲಿ ಸಮೀಕ್ಷೆದಾರರ ತರಬೇತಿ ಕಾರ್ಯಾಗಾರ ಉದ್ಘಾಟಿಸಿ, ಮಾತನಾಡಿದರು. ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆ-2025 ರಡಿ, ಉಪಜಾತಿಗಳ ಸಮೀಕ್ಷೆಯನ್ನು ಸರಕಾರವು ಅಭಿವೃದ್ಧಿಪಡಿಸಿರುವ ಆ್ಯಪ್ ಮೂಲಕ ಸಮಾಜ ಕಲ್ಯಾಣ ಇಲಾಖೆ ನೇತೃತ್ವದಲ್ಲಿ ಶಿಕ್ಷಣ ಇಲಾಖೆಯ ಶಿಕ್ಷಕರಿಂದ ಮೂರು ಹಂತಗಳಲ್ಲಿ ಮಾಡಲು ಸೂಚಿಸಲಾಗಿದೆ. ಮೇ 5 ರಿಂದ 17 ರವರೆಗೆ ಮೊದಲ ಹಂತದಲ್ಲಿ ಸಮೀಕ್ಷೆದಾರರು ಪರಿಶಿಷ್ಟ ಜಾತಿಯವರ ಮನೆಮನೆ ಭೇಟಿ ಮೂಲಕ ಸಮೀಕ್ಷೆ ಮಾಡಿ, ಮಾಹಿತಿ ದಾಖಲಿಸಲಿದ್ದಾರೆ. ಮೇ 19 ರಿಂದ 21 ರವರೆಗೆ ಎರಡನೇಯ ಹಂತದಲ್ಲಿ ಸಮೀಕ್ಷೆಯಲ್ಲಿ ಉಳಿದವರಿಗಾಗಿ ಮತಗಟ್ಟೆ ಮಟ್ಟದಲ್ಲಿ ಸಮೀಕ್ಷೆದಾರರು ವಿಶೇಷ…
ಬೆಂಗಳೂರು: ಸ್ಪೀಕರ್ ಅವರು ಆಡಳಿತ ಪಕ್ಷದ ಕೈಗೊಂಬೆಯಾಗಿ ವರ್ತಿಸಬಾರದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ಮನವಿ ಮಾಡಿದ್ದಾರೆ. ಬಿ.ವೈ. ವಿಜಯೇಂದ್ರ ಮತ್ತು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರ ನೇತೃತ್ವದಲ್ಲಿ ಬಿಜೆಪಿ ಶಾಸಕರ ನಿಯೋಗವು ಇಂದು ಗೌರವಾನ್ವಿತ ರಾಜ್ಯಪಾಲರನ್ನು ಭೇಟಿ ಮಾಡಿತು. ಈ ಸಂದರ್ಭದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಬಿಜೆಪಿಯ 18 ಶಾಸಕರನ್ನು 6 ತಿಂಗಳ ಕಾಲ ಅಮಾನತು ವಿಷಯದಲ್ಲಿ ಸಂವಿಧಾನ ವಿರೋಧಿ ನಡೆಯನ್ನು ಅನುಸರಿಸಲಾಗಿದ್ದು, ಸ್ಪೀಕರ್ ಅವರು ಇದಕ್ಕೆ ಬೆಂಬಲ ಕೊಡಬಾರದು ಎಂದು ಒತ್ತಾಯಿಸಿದರು. ಆಡಳಿತ ಪಕ್ಷಕ್ಕೆ ಮನವರಿಕೆ ಮಾಡಿ ಸ್ಪೀಕರ್ ಅವರು ತಮ್ಮ ನಿರ್ಧಾರದಿಂದ ಹಿಂದೆ ಸರಿಯಬೇಕೆಂದು ಆಗ್ರಹಿಸಿದರು. ಗೌರವಾನ್ವಿತ ರಾಜ್ಯಪಾಲರನ್ನು ಭೇಟಿ ಮಾಡಿದ್ದೇವೆ. ರಾಜ್ಯಪಾಲರು ಇದರಲ್ಲಿ ಮಧ್ಯಸ್ಥಿಕೆ ವಹಿಸಬೇಕು. ಸರಕಾರಕ್ಕೆ ಬುದ್ಧಿ ಹೇಳಬೇಕೆಂದು ಕೋರಿದ್ದಾಗಿ ವಿವರಿಸಿದರು. ಈಚೆಗೆ ನಡೆದ ಸದನದ ಕಲಾಪದಲ್ಲಿ ಬಿಜೆಪಿಯ 18 ಶಾಸಕರ ಅಮಾನತು ಕೂಡ ಆಗಿದೆ. ಹಲವಾರು ಬಾರಿ ವಿಪಕ್ಷದ ನಾಯಕರು ಮತ್ತು ಶಾಸಕರು…
ಬೆಂಗಳೂರು: ಹಬ್ಬನಘಟ್ಟ ಮತ್ತು ಅರಸೀಕೆರೆ ನಡುವಿನ ಲೈನ್ ಬ್ಲಾಕ್ನಿಂದಾಗಿ ಈ ಹಿಂದೆ ರದ್ದುಗೊಳಿಸಲಾಗಿದ್ದ, ಭಾಗಶಃ ರದ್ದುಗೊಳಿಸಲಾಗಿದ್ದ ಮತ್ತು ನಿಯಂತ್ರಿಸಲಾಗಿದ್ದ ಕೆಲವು ರೈಲು ಸೇವೆಗಳನ್ನು ಪುನರಾರಂಭಿಸಲಾಗಿದೆ. ಅವುಗಳ ವಿವರ ಹೀಗಿದೆ: 1. ರೈಲು ಸಂಖ್ಯೆ 56267 ಅರಸೀಕೆರೆ – ಮೈಸೂರು ಪ್ಯಾಸೆಂಜರ್ ರೈಲು, ಈ ಹಿಂದೆ ಏಪ್ರಿಲ್ 29, ಮೇ 3 ಮತ್ತು 10 ರಂದು ರದ್ದುಗೊಳಿಸಲಾಗಿತ್ತು. ಈಗ ಈ ರೈಲು ಎಂದಿನಂತೆ ಅರಸೀಕೆರೆಯಿಂದ ಮೈಸೂರಿಗೆ ತನ್ನ ನಿಗದಿತ ವೇಳಾಪಟ್ಟಿಯಂತೆ ಸಂಚರಿಸಲಿದೆ. 2. ರೈಲು ಸಂಖ್ಯೆ 16225 ಮೈಸೂರು – ಶಿವಮೊಗ್ಗ ಟೌನ್ ಎಕ್ಸ್ಪ್ರೆಸ್ ರೈಲು, ಈ ಹಿಂದೆ ಏಪ್ರಿಲ್ 29, ಮೇ 3 ಮತ್ತು 10 ರಂದು ಮೈಸೂರು ಮತ್ತು ಅರಸೀಕೆರೆ ನಡುವೆ ಭಾಗಶಃ ರದ್ದುಗೊಳಿಸಲಾಗಿತ್ತು. ಈಗ ಈ ರೈಲು ಮೈಸೂರಿನಿಂದ ಹೊರಟು ಶಿವಮೊಗ್ಗ ಟೌನ್ವರೆಗೆ ತನ್ನ ಪೂರ್ಣ ಮಾರ್ಗದಲ್ಲಿ ಸಂಚರಿಸಲಿದೆ. 3. ರೈಲು ಸಂಖ್ಯೆ 16206 ಮೈಸೂರು – ತಾಳಗುಪ್ಪ ಎಕ್ಸ್ಪ್ರೆಸ್ ರೈಲು, ಈ ಹಿಂದೆ ಏಪ್ರಿಲ್ 29, ಮೇ 3…
ಜಮ್ಮು: ಪಹಲ್ಗಾಮ್ ನಲ್ಲಿ ನಡೆದ ಭಯೋತ್ಪಾದಕ ದಾಳಿಯ ಬಗ್ಗೆ ಆಘಾತ ಮತ್ತು ದುಃಖವನ್ನು ವ್ಯಕ್ತಪಡಿಸುವ ನಿರ್ಣಯವನ್ನು ಜಮ್ಮು ಮತ್ತು ಕಾಶ್ಮೀರ ವಿಧಾನಸಭೆ ಸೋಮವಾರ ಸರ್ವಾನುಮತದಿಂದ ಅಂಗೀಕರಿಸಿತು. ಕೋಮು ಸೌಹಾರ್ದತೆಯನ್ನು ಭಂಗಗೊಳಿಸುವ ಮತ್ತು ಪ್ರಗತಿಗೆ ಅಡ್ಡಿಪಡಿಸುವ ದುಷ್ಟ ಯೋಜನೆಗಳನ್ನು ಸೋಲಿಸಲು ದೃಢವಾಗಿ ಹೋರಾಡಲು ನಿರ್ಧರಿಸಿತು. ವಿಧಾನಸಭೆಯ ವಿಶೇಷ ಅಧಿವೇಶನದಲ್ಲಿ ಉಪಮುಖ್ಯಮಂತ್ರಿ ಸುರಿಂದರ್ ಚೌಧರಿ ಮಂಡಿಸಿದ ನಿರ್ಣಯವನ್ನು ಧ್ವನಿ ಮತದಿಂದ ಅಂಗೀಕರಿಸಲಾಯಿತು. ಅಧಿವೇಶನದ ಆರಂಭದಲ್ಲಿ, ಸದನದ ಸದಸ್ಯರು ಕಳೆದ ವಾರ ದುರಂತದಲ್ಲಿ ಸಾವನ್ನಪ್ಪಿದ 26 ಜನರಿಗೆ ಗೌರವ ಸಲ್ಲಿಸಲು ಎರಡು ನಿಮಿಷಗಳ ಮೌನ ಆಚರಿಸಿದರು. ಜಮ್ಮು ಮತ್ತು ಕಾಶ್ಮೀರದ ವಿಧಾನಸಭೆಯು ತನ್ನ ಎಲ್ಲಾ ನಾಗರಿಕರಿಗೆ ಶಾಂತಿ, ಅಭಿವೃದ್ಧಿ ಮತ್ತು ಅಂತರ್ಗತ ಸಮೃದ್ಧಿಯ ವಾತಾವರಣವನ್ನು ಬೆಳೆಸಲು ಮತ್ತು ರಾಷ್ಟ್ರ ಮತ್ತು ಜಮ್ಮು ಮತ್ತು ಕಾಶ್ಮೀರದ ಕೋಮು ಸೌಹಾರ್ದತೆ ಮತ್ತು ಪ್ರಗತಿಯನ್ನು ಭಂಗಗೊಳಿಸಲು ಪ್ರಯತ್ನಿಸುವವರ ದುಷ್ಟ ಯೋಜನೆಗಳನ್ನು ದೃಢವಾಗಿ ಸೋಲಿಸಲು ತನ್ನ ಅಚಲ ಬದ್ಧತೆಯನ್ನು ಪುನರುಚ್ಚರಿಸುತ್ತದೆ ಎಂದು ನಿರ್ಣಯದಲ್ಲಿ ತಿಳಿಸಲಾಗಿದೆ. ನಿರ್ಣಯದ ಮೇಲಿನ ಚರ್ಚೆಯನ್ನು ಮುಕ್ತಾಯಗೊಳಿಸಿದ ಪ್ರವಾಸೋದ್ಯಮ…
ಉತ್ತರ ಕನ್ನಡ: ರಾಜ್ಯದಲ್ಲಿ ಮೋಸ್ಟ್ ವಾಂಟೆಡ್ ಕ್ರಿಮಿನಲ್ ಎಂಬುದಾಗಿಯೇ ಮೌಸಿನ್ ಶುಕುರ್ ನನ್ನು ಕರೆಯಲಾಗುತ್ತಿತ್ತು. ಇಂತಹ ಆರೋಪಿ ಮೌಸಿನ್ ಶುಕುರ್ ಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ಕೋರ್ಟ್ ಆದೇಶಿಸಿದೆ. ಉತ್ತರ ಕನ್ನಡ ಜಿಲ್ಲೆಯ ಶಿರಸಿಯ 1ನೇ ಹೆಚ್ಚುವರಿ ಸತ್ರ ನ್ಯಾಯಾಲಯದಿಂದ ಈ ಆದೇಶ ಮಾಡಲಾಗಿದೆ. ಅನೀಸ್ ಕೊಲೆ ಕೇಸಲ್ಲಿ ಮೌಸಿನ್ ಶುಕುರ್ ಗೆ ನ್ಯಾಯಾಂಗ ಬಂಧನವನ್ನು ವಿಧಿಸಿ ಕೋರ್ಟ್ ಆದೇಶಿಸಿದೆ. ಇನ್ನುಳಿದ ಪ್ರಕರಣದಲ್ಲಿ ಬಾಡಿ ವಾರಂಟ್ ಪಡೆಯಲು ಪೊಲೀಸರು ಸಜ್ಜಾಗಿದ್ದಾರೆ. ಮೋಸ್ಟ್ ವಾಂಟೆಡ್ ಕ್ರಿಮಿನಲ್ ಆಗಿರುವ ಮೌಸಿನ್ ಶುಕುರ್ ಗೆ ಬಾಡಿ ವಾರೆಂಟ್ ಪಡೆಯಲು ಪೊಲೀಸರು ಮುಂದಾಗಿದ್ದಾರೆ. ಅಂದಹಾಗೇ ಮೌಸಿರ್ ಶುಕುರ್ ವಿರುದ್ಧ ಉತ್ತರ ಕನ್ನಡ, ಬೆಂಗಳೂರು, ಮಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಪ್ರಕರಣಗಳು ದಾಖಲಾಗಿದ್ದಾವೆ. ಈತ ಭಯೋತ್ಪಾದಕರ ಜೊತೆ ಸಂಪರ್ಕ ಹೊಂದಿದ್ದರ ಬಗ್ಗೆಯೂ ಮಾಹಿತಿ ಇದೆ. ಈ ಕಾರಣಕ್ಕಾಗಿಯೇ ಎನ್ಐಎ ಕೂಡ ವಿಚಾರಣೆಗೆ ಮುಂದಾಗಿ ಎನ್ನಲಾಗುತ್ತಿದೆ. https://kannadanewsnow.com/kannada/big-news-woman-fined-rs-500-for-eating-at-namma-metro-in-bengaluru-bmrcl-makes-important-announcement/ https://kannadanewsnow.com/kannada/breaking-sensex-rises-over-1000-points-in-the-stock-market-share-market/