Subscribe to Updates
Get the latest creative news from FooBar about art, design and business.
Author: kannadanewsnow09
ಧಾರವಾಡ: ಜಿಲ್ಲೆಯಲ್ಲಿನ ಕೇಂದ್ರ ಕಾರಾಗೃಹ ಜೈಲಿನಲ್ಲೇ ಕೈದಿಯೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದಂತ ಆರೋಪಿ, ಇಂದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಧಾರವಾಡದಲ್ಲಿನ ಕೇಂದ್ರ ಕಾರಾಗೃಹದಲ್ಲಿ ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದಂತ ಕೈದಿ ಬಸವರಾಜ ಹೊಸೂರ(47) ಎಂಬಾತ ನೇಣಿಗೆ ಶರಣಾಗಿದ್ದಾನೆ. ಕಾರಾಗೃಹದಲ್ಲಿನ ಕಿಟಗಿಗೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂಬುದಾಗಿ ತಿಳಿದು ಬಂದಿದೆ. ಬಸವರಾಜ ಹೊಸೂರ ಅವರು ಜೀವಾವಧಿ ಶಿಕ್ಷೆ ಅನುಭವಿಸುತ್ತಿದ್ದಂತ ಕೈದಿಯಾಗಿದ್ದನು. ಗದಗ ಜಿಲ್ಲೆಯ ರೋಣ ತಾಲ್ಲೂಕಿನ ಸಂದಿಗವಾಡ ನಿವಾಸಿಯಾಗಿದ್ದರು. ಡಬ್ಬಲ್ ಮರ್ಡರ್ ಕೇಸಲ್ಲಿ ಜೀವಾವಧಿ ಶಿಕ್ಷೆಯನ್ನು ಅನುಭವಿಸುತ್ತಿದ್ದಂತ ಕೈದಿ, ಇಂದು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. https://kannadanewsnow.com/kannada/dk-shivakumar-ji-i-have-not-looted-everything-you-see-like-you-hd-kumaraswamy/ https://kannadanewsnow.com/kannada/breaking-major-fire-breaks-out-at-andhra-pradeshs-visakhapatnam-railway-station-trains-gutted-in-fire/ https://kannadanewsnow.com/kannada/decision-to-remove-sirigere-swamiji-from-chair-coordination-committee-formed-under-the-chairmanship-of-shamanur/
ರಾಮನಗರ: ಡಿ.ಕೆ.ಶಿವಕುಮಾರ್ ಅವರೇ.. ನಿಮ್ಮ ಹಾಗೆ ಕಂಡ ಕಂಡ ಕಂಡ ಕಂಡಿದ್ದೆಲ್ಲವನ್ನೂ ಲೂಟಿ ಹೊಡೆದಿಲ್ಲ. ನಿಮ್ಮ ಹಾಗೆ ನಾನು ಎಲ್ಲಿಯೂ ಲೂಟಿ ಮಾಡಿಲ್ಲ ಅಂತ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಕಿಡಿಕಾರಿದ್ದಾರೆ. ರಾಮನಗರದಲ್ಲಿ ಮೈಸೂರು ಚಲೋ ಪಾದಯಾತ್ರೆಯ ಬೃಹತ್ ರೋಡ್ ಶೋ ದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಬಿಡದಿಯ ಕೇತಿಗಾನಹಳ್ಳಿ ಗ್ರಾಮದಲ್ಲಿರುವ ತಮ್ಮ ಜಮೀನು ಬಗ್ಗೆ ಉಲ್ಲೇಖ ಮಾಡಿದ ಕೇಂದ್ರ ಸಚಿವರು; ನಾನು ಚಲನಚಿತ್ರ ಡಿಸ್ಟ್ರಿಬ್ಯೂಟರ್ ಆಗಿದ್ದಾಗ ಚೈನಾ ಸಾಬ್ರು ಅಂತ ಇಬ್ಬರು ಇದ್ದರು. ನೀನು ದೇವೆಗೌಡರ ಮಗ, ಬೇಸಾಯ ಮಾಡಬೇಕು. ನೀನು ರೈತನಾಗಿ ಬಾಳಿ ಬದುಕಬೇಕು ಎಂದು ಹೇಳಿ ಕರೆದುಕೊಂಡು ಹೋಗಿ ಈ ಜಾಮೀನು ತೋರಿಸಿದರು. ಆ ಜಾಗ ನೋಡಿ ನಾನು. ನೀವು ನೋಡಿದ್ರೆ ಕಲ್ಲು ಹೊಡೆಯುವ ಜಾಗ ತೋರಿಸ್ತಿದ್ದೀರಲ್ಲ ಅಂದೆ. ಆಮೇಲೆ ಕಷ್ಟಪಟ್ಟು ಒಳ್ಳೆಯ ತೋಟ ಮಾಡಿದ್ದೇನೆ. ಯಾರು ಬೇಕಾದರೂ ಬಂದು ನೋಡಬಹುದು. ನನಗೆ ಆ ಜಾಮೀನು ಮಾರಿದ ಯಾರನ್ನು ನಾನು ಕೊಟ್ಟವರನ್ನು ಯಾರನ್ನು ಮರೆತಿಲ್ಲ, ಡಿ.ಕೆ.ಶಿವಕುಮಾರ್ ಅವರೇ..…
ರಾಮನಗರ: ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ಜೆಡಿಎಸ್ ಬಿಜೆಪಿ ಅಶ್ವಮೇಧ ಆರಂಭಿಸಿವೆ. ಈ ಸರಕಾರದ ಅಂತಿಮ ಕಾಲ ಹತ್ತಿರಲ್ಲಿಯೇ ಇದೆ ಎಂದು ಕೇಂದ್ರ ಭಾರೀ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಸ್ಪಷ್ಟ ಮಾತುಗಳಲ್ಲಿ ಹೇಳಿದರು. ರಾಮನಗರದಲ್ಲಿ ಮೈಸೂರು ಚಲೋ ಪಾದಯಾತ್ರೆಯ ಬೃಹತ್ ರೋಡ್ ಶೋ ದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಪ್ರತಿಯೊಂದಕ್ಕೂ ಲೆಕ್ಕ ಕೊಡುತ್ತೇವೆ. ನಿಮ್ಮ ಲೆಕ್ಕ ಚುಕ್ತಾ ಮಾಡುತ್ತೇವೆ. ಅಶ್ವಮೇಧಕ್ಕೆ ಚಾಲನೆ ಕೊಟ್ಟಿದ್ದೇವೆ. ನಿಮ್ಮನ್ನು ಮುಗಿಸುವ ಕಾಲ ಹತ್ತಿರ ಬಂದಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು. ಈ ಸರಕಾರವು ಯಡಿಯೂರಪ್ಪ ಅವರ ವಿಷಯದಲ್ಲಿ ಅಮಾನುಷವಾಗಿ ವರ್ಸಿಸಿದೆ. ಅವರ ಮನಸ್ಸಿಗೆ ನೋವು ಕೊಟ್ಟಿದೆ. ನಿಮ್ಮ ಪಾಪದ ಕೊಡ ತುಂಬಿದೆ. ನಿಮ್ಮ ಅಂತಿಮ ಕಾಲ ಹತ್ತಿರಕ್ಕೆ ಬಂದಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು. ಬಿಜೆಪಿ-ಜೆಡಿಎಸ್ ಶವಯಾತ್ರೆ ನಡೆಯುತ್ತಿದೆ ಎಂದು ಹೇಳುತ್ತಿದ್ದಾರೆ ಅವರು. ಕಲಬುರ್ಗಿಯಲ್ಲಿ ಒಬ್ಬ ಪೋಲಿಸ್ ಅಧಿಕಾರಿಯ ಶವಯಾತ್ರೆ ಮಾಡಿಸಿದ್ದರಲ್ಲ, ಆ ಅಧಿಕಾರಿಯನ್ನು ಬಲಿ ತೆಗೆದುಕೊಂಡು ಆ ಕುಟುಂಬವನ್ನು…
ಬೆಂಗಳೂರು: ಬಿಜೆಪಿ–ಜೆಡಿಎಸ್ ಪಕ್ಷಗಳ ಪಿತೂರಿಗೆ ನಾವು ಜಗ್ಗುವುದಿಲ್ಲ. ನಾವು ಜನರ ಬಳಿಗೆ ಹೋಗುತ್ತೇವೆ. ಅವರಿಗೆ ವಾಸ್ತವಾಂಶ ವಿವರಿಸುತ್ತೇವೆ. ಒಗ್ಗಟ್ಟಿನಿಂದ ಹೋರಾಡುತ್ತೇವೆ ಎಂದು ಎಐಸಿಸಿ ಪ್ರಧಾನ ಕಾರ್ಯದರ್ಶಿ ಕೆ.ಸಿ. ವೇಣುಗೋಪಾಲ್ ಅವರು ಸ್ಪಷ್ಟ ಪಡಿಸಿದರು. ಅವರು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಿವಾಸದಲ್ಲಿ ಸಚಿವರೊಂದಿಗೆ ಸಭೆ ನಡೆಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿದರು. ಕರ್ನಾಟಕ ರಾಜ್ಯ ರಾಜಕಾರಣದಲ್ಲಿ ನಡೆಯುತ್ತಿರುವ ಗಂಭೀರ ಬೆಳವಣಿಗೆಗಳ ಕುರಿತು ರಾಜ್ಯದ ಸಚಿವರೊಂದಿಗೆ ಚರ್ಚಿಸಲಾಯಿತು. ಕರ್ನಾಟಕ ರಾಜ್ಯ ಬಿಜೆಪಿಯು ಸರ್ಕಾರಗಳನ್ನು ಉರುಳಿಸುವ ಇತಿಹಾಸವನ್ನು ಹೊಂದಿದೆ. 2018ರಲ್ಲಿ ಕಾಂಗ್ರೆಸ್- ಜೆಡಿಎಸ್ ಮೈತ್ರಿ ಸರ್ಕಾರವನ್ನು ಉರುಳಿಸಿದ್ದೇ ಬಿಜೆಪಿ ಕೇಂದ್ರ ನಾಯಕತ್ವದ ಪಿತೂರಿಯಿಂದ. ಅದೇ ರೀತಿಯ ಸ್ಪಷ್ಟ ಉದ್ದೇಶದಿಂದ ಈಗಲೂ ಕರ್ನಾಟಕ ಕಾಂಗ್ರೆಸ್ ಸರ್ಕಾರವನ್ನು ಗುರಿಯಾಗಿಸಿಕೊಂಡಿದ್ದಾರೆ. ತಮ್ಮ ಪಕ್ಷವನ್ನು ಉಳಿಸಿಕೊಳ್ಳಲು ಈ ಕೆಲಸ ಮಾಡುತ್ತಿದ್ದಾರೆ ಎಂದು ಟೀಕಿಸಿದರು. ಪ್ರಜ್ವಲ್ ರೇವಣ್ಣ ಪ್ರಕರಣ ಬೆಳಕಿಗೆ ಬಂದಾಗಲೇ ಇಡೀ ದೇಶ ಕಾಂಗ್ರೆಸ್ ಸರ್ಕಾರದ ವಿರುದ್ಧದ ಪಿತೂರಿಯನ್ನು ಗಮನಿಸಿದೆ. ಬಿಜೆಪಿ ಹಾಗೂ ಜೆಡಿಎಸ್ ನ ಮುಖಂಡರು ತಮ್ಮ ಮಕ್ಕಳನ್ನು ಉಳಿಸಿಕೊಳ್ಳಲು…
ಪ್ಯಾರಿಸ್: ಇಲ್ಲಿ ನಡೆಯುತ್ತಿರುವಂತ ಒಲಿಂಪಿಕ್ಸ್ 2024ರಲ್ಲಿ ಬ್ಯಾಡ್ಮಿಂಟನ್ ನಲ್ಲಿ ಕಾರ್ಲೋಸ್ ಅಲ್ಕರಾಜ್ ಮಣಿಸಿ ನೊವಾಕ್ ಜೊಕೊವಿಕ್ ಚಿನ್ನದ ಪದಕವನ್ನು ತನ್ನದಾಗಿಸಿಕೊಂಡಿದ್ದಾರೆ. ಪ್ಯಾರಿಸ್ ಒಲಿಂಪಿಕ್ಸ್ 2024ರ ಪುರುಷರ ಸಿಂಗಲ್ಸ್ ಫೈನಲ್ನಲ್ಲಿ ಕಾರ್ಲೋಸ್ ಅಲ್ಕರಾಜ್ ಅವರನ್ನು ಮಣಿಸಿದ ನೊವಾಕ್ ಜೊಕೊವಿಕ್ ಚಿನ್ನದ ಪದಕ ಗೆದ್ದಿದ್ದಾರೆ. ಜೊಕೊವಿಕ್ 7(7)-6(3), 7(7)-6(2) ನೇರ ಸೆಟ್ ಗಳಲ್ಲಿ ಗೆಲುವು ಸಾಧಿಸಿದರು. ನೊವಾಕ್ ಜೊಕೊವಿಕ್ ಟೈಬ್ರೇಕ್ ನಲ್ಲಿ ಎರಡನೇ ಸೆಟ್ ಅನ್ನು 7-6, 7-6 ಸೆಟ್ ಗಳಿಂದ ಗೆದ್ದು ತಮ್ಮ ಮೊದಲ ಚಿನ್ನವನ್ನು ಗೆದ್ದರು. ನೊವಾಕ್ ಜೊಕೊವಿಕ್ ವೃತ್ತಿಜೀವನದ ಗೋಲ್ಡನ್ ಸ್ಲಾಮ್ ಗೆದ್ದ ಐದನೇ ಟೆನಿಸ್ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. https://twitter.com/ITFTennis/status/1820112978299285610 https://kannadanewsnow.com/kannada/missing-congress-mla-channa-reddy-found-dead-at-cms-residence/ https://kannadanewsnow.com/kannada/decision-to-remove-sirigere-swamiji-from-chair-coordination-committee-formed-under-the-chairmanship-of-shamanur/
ಬೆಂಗಳೂರು: ಯಾದಗಿರಿ ಪಿಎಸ್ಐ ಪರಶುರಾಮ್ ಅವರ ಅನುಮಾನಾಸ್ಪದ ಸಾವಿನ ಬಳಿಕ ಕಾಂಗ್ರೆಸ್ ಶಾಸಕ ಚನ್ನಾರೆಡ್ಡಿ ಹಾಗೂ ಪುತ್ರನ ವಿರುದ್ಧ ದೂರು, ಎಫ್ಐಆರ್ ದಾಖಲಾಗಿತ್ತು. ಈ ನಂತ್ರ ನಾಪತ್ತೆಯಾಗಿದ್ದಂತ ಅವರು ಇದೀಗ ಸಿಎಂ ಸಿದ್ಧರಾಮಯ್ಯ ಅವರ ಅಧಿಕೃತ ನಿವಾಸ ಕಾವೇರಿಯಲ್ಲಿ ಪ್ರತ್ಯಕ್ಷರಾಗಿದ್ದಾರೆ. ಇಂದು ಬೆಂಗಳೂರಿನ ಸಿಎಂ ಸಿದ್ಧರಾಮಯ್ಯ ಅವರ ಕಾವೇರಿ ನಿವಾಸಕ್ಕೆ ಭೇಟಿ ನೀಡಿದಂತ ಕಾಂಗ್ರೆಸ್ ಶಾಸಕ ಚನ್ನಾರೆಡ್ಡಿ ಅವರು, ಸಿಎಂ ಹಾಗೂ ಗೃಹ ಸಚಿವ ಡಾ.ಜಿ ಪರಮೇಶ್ವರ್ ಜೊತೆಗೆ ತಮ್ಮ ವಿರುದ್ಧ ದಾಖಲಾಗಿರುವಂತ ಎಫ್ಐಆರ್ ಕುರಿತಂತೆ ಚರ್ಚಿಸಿದರು ಎನ್ನಲಾಗಿದೆ. ಯಾದಗಿರಿ ಪಿಎಸ್ಐ ಪರಶುರಾಮ ನಿಗೂಢ ಸಾವಿನ ಬಳಿಕ ಕಾಂಗ್ರೆಸ್ ಶಾಸಕ ಚನ್ನಾರೆಡ್ಡಿ ಅವರು ನಾಪತ್ತೆಯಾಗಿದ್ದರು. ಈಗ ಸಿಎಂ, ಗೃಹ ಸಚಿವರ ಎದುರಲ್ಲೇ ಅವರು ಪ್ರತ್ಯಕ್ಷರಾಗಿದ್ದು ಹಲವು ಕುತೂಹಲಕ್ಕೆ ಕಾರಣವಾಗಿದೆ. ಅಲ್ಲದೇ ಅವರ ವಿರುದ್ಧ ದಾಖಲಾಗಿರುವಂತ ಪ್ರಕರಣ ಸಂಬಂಧದಲ್ಲಿ ಬಂಧನಕ್ಕೆ ಒಳಗಾಗುತ್ತಾರಾ ಎಂಬುದನ್ನು ಕಾದು ನೋಡಬೇಕಿದೆ. https://kannadanewsnow.com/kannada/bangladesh-violence-72-dead-curfew-imposed-across-the-country/ https://kannadanewsnow.com/kannada/will-not-die-till-siddaramaiah-resigns-as-cm-by-vijayendra/ https://kannadanewsnow.com/kannada/breaking-major-fire-breaks-out-at-andhra-pradeshs-visakhapatnam-railway-station-trains-gutted-in-fire/
ಬೆಂಗಳೂರು: ಬಿಜೆಪಿ- ಜೆಡಿಎಸ್ ಪಾದಯಾತ್ರೆ ಪರಿಣಾಮವಾಗಿ ಕಾಂಗ್ರೆಸ್ಸಿಗರಿಗೆ ಚಿಂತೆ ಆರಂಭವಾಗಿದೆ. ನಿದ್ರೆ ಬಾರದ ಸ್ಥಿತಿ ಉಂಟಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ವಿಶ್ಲೇಷಿಸಿದರು. ಮೈಸೂರು ಚಲೋ ಪಾದಯಾತ್ರೆಯು ಎರಡನೇ ದಿನವಾದ ಇಂದು ಸಂಜೆ ರಾಮನಗರಕ್ಕೆ ತಲುಪಿದ ಸಂದರ್ಭದಲ್ಲಿ ಬೃಹತ್ ಸಮಾವೇಶದಲ್ಲಿ ಅವರು ಮಾತನಾಡಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರರಿಗೂ ನಿದ್ರೆ ಬರುತ್ತಿಲ್ಲ. ಒಂದೆಡೆ ಮುಖ್ಯಮಂತ್ರಿಯವರಿಗೆ ಕುರ್ಚಿ ಕಳಕೊಳ್ಳುವ ಭಯದಿಂದ ನಿದ್ರೆ ಬರುತ್ತಿಲ್ಲ. ಡಿಸಿಎಂ ಅವರಿಗೆ ಖಾಲಿಯಾದ ಕುರ್ಚಿ ಮೇಲೆ ಕೂರುವ ಆಸೆಯಿಂದ ನಿದ್ರೆ ಬರುತ್ತಿಲ್ಲ ಎಂದು ವಿವರಿಸಿದರು. ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಅವರು ನಮ್ಮ ಹೋರಾಟದ ಬಗ್ಗೆ ಹಗುರವಾಗಿ ಮಾತನಾಡುತ್ತಿದ್ದಾರೆ. ಸಿದ್ದರಾಮಯ್ಯನವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗೆ ಇಳಿಸುವ ವರೆಗೂ ನಮ್ಮ ಹೋರಾಟದ ಕಿಚ್ಚು ಆರುವುದಿಲ್ಲ ಎಂದು ಅವರು ಸ್ಪಷ್ಟವಾಗಿ ನುಡಿದರು. ದಲಿತರ ಅಭಿವೃದ್ಧಿಗೆ ಮೀಸಲಿಟ್ಟ ವಾಲ್ಮೀಕಿ ನಿಗಮದ 187 ಕೋಟಿ ಹಣವನ್ನು ಲೂಟಿ ಮಾಡಿ, ಚುನಾವಣೆಗೆ ಹೆಂಡ ಖರೀದಿ ಮಾಡಿದ್ದನ್ನು ಕೇಳಿದ್ದೇವೆ. ಗಾಂಧಿ ಕುಟುಂಬಕ್ಕೆ ಕರ್ನಾಟಕದ…
ಬಾಂಗ್ಲಾದೇಶ: ಬಾಂಗ್ಲಾ ಪ್ರಧಾನಿ ಶೇಖ್ ಹಸೀನಾ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದ ಸಾವಿರಾರು ಪ್ರತಿಭಟನಾಕಾರರನ್ನು ಚದುರಿಸಲು ಪೊಲೀಸರು ಅಶ್ರುವಾಯು ಪ್ರಯೋಗಿಸಿ ಗ್ರೆನೇಡ್ಗಳನ್ನು ಎಸೆದಿದ್ದರಿಂದ ಬಾಂಗ್ಲಾದೇಶದಲ್ಲಿ ಭಾನುವಾರ ನಡೆದ ಘರ್ಷಣೆಯಲ್ಲಿ ಕನಿಷ್ಠ 72 ಜನರು ಸಾವನ್ನಪ್ಪಿದ್ದಾರೆ ಮತ್ತು ಹಲವಾರು ಮಂದಿ ಗಾಯಗೊಂಡಿದ್ದಾರೆ. ಆಂತರಿಕ ಸಚಿವಾಲಯವು ಭಾನುವಾರ ಸಂಜೆ 6 ಗಂಟೆಗೆ (1200 ಜಿಎಂಟಿ) ಅನಿರ್ದಿಷ್ಟ ರಾಷ್ಟ್ರವ್ಯಾಪಿ ಕರ್ಫ್ಯೂ ಘೋಷಿಸಿತು. ಕಳೆದ ತಿಂಗಳು ಪ್ರಾರಂಭವಾದ ಪ್ರಸ್ತುತ ಪ್ರತಿಭಟನೆಯ ಸಮಯದಲ್ಲಿ ಮೊದಲ ಬಾರಿಗೆ ಇಂತಹ ಕ್ರಮ ಕೈಗೊಂಡಿದೆ. ಬಾಂಗ್ಲಾದೇಶದ ಪ್ರಧಾನಿ ಶೇಖ್ ಹಸೀನಾ ಅವರ ಬೆಂಬಲಿಗರು ಮತ್ತು ಸರ್ಕಾರಿ ವಿರೋಧಿ ಪ್ರತಿಭಟನಾಕಾರರ ನಡುವೆ ಹೊಸ ಘರ್ಷಣೆಗಳು ಭುಗಿಲೆದ್ದಿವೆ. ರಾಜಧಾನಿ ಢಾಕಾ ಮತ್ತು ಉತ್ತರದ ಜಿಲ್ಲೆಗಳಾದ ಬೋಗ್ರಾ, ಪಬ್ನಾ ಮತ್ತು ರಂಗ್ಪುರ್, ಪಶ್ಚಿಮದಲ್ಲಿ ಮಾಗುರಾ, ಪೂರ್ವದಲ್ಲಿ ಕೊಮಿಲ್ಲಾ ಮತ್ತು ದಕ್ಷಿಣದಲ್ಲಿ ಬರಿಸಾಲ್ ಮತ್ತು ಫೆನಿಯಲ್ಲಿ ಸಾವುಗಳು ವರದಿಯಾಗಿವೆ. https://kannadanewsnow.com/kannada/hezbollah-launches-dozens-of-rockets-at-israel-amid-escalating-tensions-in-middle-east/ https://kannadanewsnow.com/kannada/law-to-provide-life-imprisonment-in-love-jihad-cases-soon-assam-cm-himanta-biswa-sarma/
ಇಸ್ರೇಲ್: ಮಧ್ಯಪ್ರಾಚ್ಯದಲ್ಲಿ ಉದ್ವಿಗ್ನತೆಯ ಮಧ್ಯೆ, ಹಿಜ್ಬುಲ್ಲಾ ಶನಿವಾರ ಇಸ್ರೇಲ್ ಮೇಲೆ ಡಜನ್ಗಟ್ಟಲೆ ಕ್ಷಿಪಣಿಗಳನ್ನು ಉಡಾಯಿಸಿದೆ. ಲೆಬನಾನ್ ನ ಉಗ್ರಗಾಮಿ ಗುಂಪು ಹಿಜ್ಬುಲ್ಲಾ ಈ ಬೆಳವಣಿಗೆಯನ್ನು ದೃಢಪಡಿಸಿದೆ. ಹಿಜ್ಬುಲ್ಲಾ ಮತ್ತು ಇಸ್ರೇಲ್ ಶುಕ್ರವಾರ ದಾಳಿಗಳನ್ನು ವಿನಿಮಯ ಮಾಡಿಕೊಂಡ ನಂತರ ಇತ್ತೀಚಿನ ದಾಳಿ ನಡೆದಿದೆ. ಉಗ್ರಗಾಮಿ ಗುಂಪು ಗುರುವಾರ ಇಸ್ರೇಲ್ನ ಪಶ್ಚಿಮ ಗೆಲಿಲಿಯನ್ನು ಗುರಿಯಾಗಿಸಿಕೊಂಡಿದೆ. ಆದರೆ ಐದು ರಾಕೆಟ್ಗಳನ್ನು ಹೊರತುಪಡಿಸಿ ಅದರ ಹೆಚ್ಚಿನ ರಾಕೆಟ್ಗಳು ಗಾಳಿಯಲ್ಲಿ ನಾಶವಾಗಿವೆ. ಇದಕ್ಕೆ ಪ್ರತೀಕಾರದ ಕ್ರಮದಲ್ಲಿ, ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್) ಪಶ್ಚಿಮ ಗೆಲಿಲಿಯಲ್ಲಿ ದಾಳಿಗೆ ಬಳಸಿದ ಲಾಂಚರ್ ಅನ್ನು ನಾಶಪಡಿಸಿದವು. https://twitter.com/IsraelWarRoom/status/1819850171125207266 ಅಕ್ಟೋಬರ್ 7 ರಂದು ಇಸ್ರೇಲ್ ಮೇಲೆ ಹಮಾಸ್ ಒಳನುಸುಳುವಿಕೆ ದಾಳಿಯ ನಂತರ ಟೆಲ್ ಅವೀವ್ ಮತ್ತು ಹಿಜ್ಬುಲ್ಲಾ ಕಳೆದ 10 ತಿಂಗಳುಗಳಿಂದ ಗಡಿಯಾಚೆಗಿನ ಗುಂಡಿನ ದಾಳಿಯಲ್ಲಿ ತೊಡಗಿವೆ. ಆದಾಗ್ಯೂ, ಇರಾನ್ ರಾಜಧಾನಿ ಟೆಹ್ರಾನ್ನಲ್ಲಿ ಹಮಾಸ್ ಮುಖ್ಯಸ್ಥ ಇಸ್ಮಾಯಿಲ್ ಹನಿಯೆಹ್ ಅವರ ಹತ್ಯೆಯ ನಂತರ ಪರಿಸ್ಥಿತಿ ಹೊಸ ತಿರುವು ಪಡೆದುಕೊಂಡಿದೆ. ಈ ಘಟನೆಯು ಪ್ರಾದೇಶಿಕ ಯುದ್ಧದ…
ಪ್ಯಾರಿಸ್: ಪ್ಯಾರಿಸ್ ಒಲಿಂಪಿಕ್ಸ್ 2024ರಲ್ಲಿ ಭಾರತ ಹಾಕಿ ತಂಡ ಸೆಮಿಫೈನಲ್ಗೆ ಪ್ರವೇಶಿಸಿದೆ ಎಂದು ಸ್ಟಾರ್ ಸ್ಪೋರ್ಟ್ಸ್ ವೀಕ್ಷಕವಿವರಣೆಗಾರ ಸುನಿಲ್ ತನೇಜಾ ಹೇಳಿದ್ದಾರೆ. ಭಾರತದ ಉಲ್ಲಾಸಕರ ಗೆಲುವು ದೇಶಾದ್ಯಂತದ ಅಭಿಮಾನಿಗಳನ್ನು ತಮ್ಮ ಪರದೆಗಳಿಗೆ ಅಂಟಿಕೊಂಡಿತ್ತು, ಮತ್ತು ತನೇಜಾ ಇದಕ್ಕೆ ಹೊರತಾಗಿರಲಿಲ್ಲ. ಭಾವೋದ್ವೇಗಕ್ಕೆ ಒಳಗಾದ ಅವರು, “ಭಾರತ್ ಸೆಮಿಫೈನಲ್ ಜಾ ರಹಾ ಹೈ!” ಎಂದು ಪದೇ ಪದೇ ಕೂಗಿದರು, ನಂತರ ಕಣ್ಣೀರು ಸುರಿಸುತ್ತಾ ಕಾಮೆಂಟರಿ ಬಾಕ್ಸ್ನಲ್ಲಿದ್ದ ತಮ್ಮ ಸಹೋದ್ಯೋಗಿಯನ್ನು ಅಪ್ಪಿಕೊಂಡರು. ಈ ಹೃದಯಸ್ಪರ್ಶಿ ಕ್ಷಣವನ್ನು ತ್ವರಿತವಾಗಿ ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಳ್ಳಲಾಯಿತು, ತನೇಜಾ ಅವರ ಪ್ರತಿಕ್ರಿಯೆಯ ಕ್ಲಿಪ್ ವೈರಲ್ ಆಗಿದೆ. https://twitter.com/sujeet_gupta45/status/1820063153494831380 ಪ್ಯಾರಿಸ್ ನಲ್ಲಿ ಬ್ರಿಟಿಷ್ ಸವಾಲನ್ನು ಜಯಿಸಿದ ಭಾರತ ಹರ್ಮನ್ ಪ್ರೀತ್ ಸಿಂಗ್ ನೇತೃತ್ವದ ಭಾರತ ಹಾಕಿ ತಂಡ ಗ್ರೇಟ್ ಬ್ರಿಟನ್ ವಿರುದ್ಧ ಉತ್ತಮ ಪ್ರದರ್ಶನ ನೀಡಿತು. ನಿಯಮಿತ ಸಮಯದಲ್ಲಿ ಪಂದ್ಯವು 1-1 ಡ್ರಾದಲ್ಲಿ ಕೊನೆಗೊಂಡಿತು, ನಿರ್ಧಾರವನ್ನು ಪೆನಾಲ್ಟಿ ಶೂಟೌಟ್ಗೆ ತಳ್ಳಿತು. ಎರಡನೇ ಕ್ವಾರ್ಟರ್ನಲ್ಲಿ ದೊಡ್ಡ ಹಿನ್ನಡೆಯ ಹೊರತಾಗಿಯೂ, ಅಮಿತ್ ರೋಹಿದಾಸ್ ಅವರಿಗೆ ಕೆಂಪು…