Subscribe to Updates
Get the latest creative news from FooBar about art, design and business.
Author: kannadanewsnow09
ಬೆಳಗಾವಿ: ರಾಜ್ಯದಲ್ಲಿ ಹಣ ವಸೂಲಿಗಾಗಿ ಅನಗತ್ಯವಾಗಿ ಸಿಸೇರಿಯನ್ ಹೆರಿಗೆ ಮಾಡುವ ಖಾಸಗಿ ಆಸ್ಪತ್ರೆಗಳ ವಿರುದ್ಧ ಕೆ.ಪಿ.ಎಂ.ಇ. ಅಧಿನಿಯಮದಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದರು. ಅವರು ವಿಧಾನ ಪರಿಷತ್ ನಲ್ಲಿ ಸದಸ್ಯ ಗೋವಿಂದ ರಾಜು ಅವರ ಚುಕ್ಕೆ ಗುರುತಿನ ಪ್ರಶ್ನೆ ಗೆ ಉತ್ತರಿಸಿ ಮಾತನಾಡಿದರು. ರಾಜ್ಯದಲ್ಲಿ ಹಣ ವಸೂಲಿಗಾಗಿ ಅನಗತ್ಯವಾಗಿ ಸಿಸೇರಿಯನ್ ಹೆರಿಗೆ ಮಾಡುವಂತಹ ಖಾಸಗಿ ಆಸ್ಪತ್ರೆಗಳನ್ನು ನಿರ್ದಿಷ್ಟವಾಗಿ ಗುರುತಿಸಿರುವುದಿಲ್ಲ. ಹಾಗೂ ಅನಗತ್ಯವಾಗಿ ಸಿಸೇರಿಯನ್ ಹೆರಿಗೆ ಮಾಡಿರುವ ಬಗ್ಗೆ, ಜಿಲ್ಲಾ, ಕೆ.ಪಿ.ಎಂ.ಇ. ನೋಂದಣಿ ಮತ್ತು ಕುಂದು ಕೊರತೆ ನಿವಾರಣಾ ಪ್ರಾಧಿಕಾರದಲ್ಲಿ ಯಾವುದೇ ದೂರುಗಳು ಸಾರ್ವಜನಿಕರಿಂದ ಸ್ವೀಕೃತವಾಗಿರುವುದಿಲ್ಲ ಎಂದರು. ದೂರುಗಳು ಬಂದಲ್ಲಿ ನಿಯಮ ಉಲ್ಲಂಘಿಸಿದ ಖಾಸಗಿ ಆಸ್ಪತ್ರೆಯ ವಿರುದ್ಧ ಕೆ ಪಿ ಎಂ ಇ ಅಧಿನಿಯಮದ ಸೆಕ್ಷನ್ 15 ಉಪಬಂಧ 1ರನ್ವಯ ಕ್ರಮ ಜರುಗಿಸಲಾಗುವುದು ಎಂದರು. ಗರ್ಭಿಣಿಯರಿಗೆ ತಪಾಸಣೆ ಮಾಡುವ ಸಂದರ್ಭದಲ್ಲಿ ಸರ್ಕಾರಿ ಮತ್ತು ಖಾಸಗಿ ಆಸ್ಪತ್ರೆಗಳು ಅನುಸರಿಬೇಕಾದ ನೀತಿ ನಿಯಮಗಳಿದ್ದು,ನಿಯಮ ಉಲ್ಲಂಘಿಸಿದ ಖಾಸಗಿ…
ಬೆಳಗಾವಿ : ಬ್ಯಾಕ್ಟಿರೀಯಾ ಸೋಂಕು ಗಳಲೆ ರೋಗ (ಹೆಮರೇಜಿಕ್ ಸೆಪ್ಟಿ ಸೀಮಿಯಾ)ದಿಂದ ರಾಣಿ ಚೆನ್ನಮ್ಮ ಕಿರು ಮೃಗಾಲಯದಲ್ಲಿ 31 ಕೃಷ್ಣಮೃಗಗಳು ಸಾವನ್ನಪ್ಪಿದ್ದು, ತಮಗೂ ನೋವು ತಂದಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಹೇಳಿದ್ದಾರೆ. ವಿಧಾನಪರಿಷತ್ತಿನಲ್ಲಿಂದು ಸದಸ್ಯರ ಪ್ರಶ್ನೆಗೆ ಉತ್ತರಿಸಿದ ಅವರು, ಚಿಗುರು ತಿನ್ನುವ ಪ್ರಾಣಿಗಳಲ್ಲಿ ಸಾಮಾನ್ಯವಾಗಿ ಈ ಕಾಯಿಲೆ ಕಾಣಿಸಿಕೊಳ್ಳುತ್ತದೆ. ಹೊರ ನೋಟಕ್ಕೆ ಸೋಂಕಿನ ಲಕ್ಷಣವೂ ಕಾಣುವುದಿಲ್ಲ. ಈ ಸೋಂಕು ಬಂದ 6 ರಿಂದ 24 ಗಂಟೆಗಳಲ್ಲಿ ಅಥವಾ 8ರಿಂದ 24 ಗಂಟೆಗಳಲ್ಲಿ ಸಾವು ಸಂಭವಿಸುತ್ತದೆ ಎಂದು ವೈದ್ಯರು ಹೇಳುತ್ತಾರೆ. ಸೋಂಕು ತಗುಲಿದ ಕೆಲವೇ ಗಂಟೆಗಳಲ್ಲಿ ಸಾವು ಸಂಭವಿಸುವ ಕಾರಣ ಹೆಚ್ಚಿನ ಸಂಖ್ಯೆ ಕೃಷ್ಣಮೃಗ ಮೃತಪಟ್ಟಿದೆ ಎಂಬುದು ತಜ್ಞ ವೈದ್ಯರ ಅಭಿಪ್ರಾಯವಾಗಿದೆ ಎಂದು ತಿಳಿಸಿದರು. ಕಿರು ಮೃಗಾಲಯದಲ್ಲಿ ನವೆಂಬರ್ 13ರಿಂದ 17ರವರೆಗೆ ಒಟ್ಟು 31 ಕೃಷ್ಣಮೃಗಗಳು ಸಾವಿಗೀಡಾಗಿವೆ. ಮೃಗಾಲಯದ ವೈದ್ಯರು, ಪಶು ಸಂಗೋಪನಾ ಇಲಾಖೆಯ ಸ್ಥಳೀಯ ವೈದ್ಯರು ಮರಣೋತ್ತರ ಪರೀಕ್ಷೆ ನಡೆಸಿ, ಪಶುವೈದ್ಯಕೀಯ ಜೈವಿಕ…
ಬೆಳಗಾವಿ: ಇಂದಿನಿಂದ ಪ್ರಾರಂಭವಾಗುವ ಚಳಿಗಾಲದ ಅಧಿವೇಶನದಲ್ಲಿ ರಾಜ್ಯದ ಜ್ವಲಂತ ಸಮಸ್ಯೆಗಳ ಕುರಿತು ಸಮಗ್ರವಾಗಿ ಚರ್ಚಿಸಬೇಕಿದೆ. ಪ್ರಮುಖವಾಗಿ ನಾಡಿನ ರೈತರು ಸಂಕಷ್ಟದಲ್ಲಿದ್ದಾರೆ. ಆ ಕುರಿತು ಚರ್ಚೆ ಮಾಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಆಗ್ರಹಿಸಿದ್ದಾರೆ. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ರಾಜ್ಯ ಸರಕಾರದ ನಿರ್ಲಕ್ಷ್ಯದಿಂದ ಕಬ್ಬು ಬೆಳೆಗಾರರು, ಮೆಕ್ಕೆ ಜೋಳ ಬೆಳೆಗಾರರು, ಭತ್ತ ಬೆಳೆಯುವ ರೈತರು, ತೊಗರಿ ಬೆಳೆಗಾರರು ಸಂಕಷ್ಟ ಅನುಭವಿಸಬೇಕಿದೆ ಎಂದು ಆಕ್ಷೇಪಿಸಿದರು. ಕಾಂಗ್ರೆಸ್ ಪಕ್ಷವು ಚುನಾವಣೆ ಸಂದರ್ಭದಲ್ಲಿ ನಿರುದ್ಯೋಗ ನಿರ್ಮೂಲನೆ ಮಾಡುತ್ತೇವೆ. ಲಕ್ಷಾಂತರ ಯುವಕರಿಗೆ ಉದ್ಯೋಗ ನೀಡುವುದಾಗಿ ಭರವಸೆ ಕೊಟ್ಟಿತ್ತು. ಅದು ಈಡೇರಿಲ್ಲ ಎಂದು ಟೀಕಿಸಿದರು. ನೇಕಾರರ ಸಮಸ್ಯೆ, ರಾಜ್ಯದ ಅಭಿವೃದ್ಧಿ ವಿಚಾರ- ಇವೆಲ್ಲವು ಅಧಿವೇಶನದಲ್ಲಿ ಚರ್ಚೆ ಆಗಬೇಕಿದೆ. ಉತ್ತರ ಕರ್ನಾಟಕದ ನೀರಾವರಿ ಯೋಜನೆಗಳ ಬಗ್ಗೆಯೂ ಚರ್ಚೆ ಮಾಡುವವರಿದ್ದೇವೆ ಎಂದು ತಿಳಿಸಿದರು. ಪ್ರಶ್ನೆಗೆ ಉತ್ತರ ನೀಡಿದ ಅವರು, ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಅವರು ಬಹಳ ನಿಸ್ಸೀಮರಿದ್ದಾರೆ. ರಾಜ್ಯ ಸರಕಾರದ ವೈಫಲ್ಯಗಳನ್ನು ಮುಚ್ಚಿ ಹಾಕುವ ಸಲುವಾಗಿ ಪ್ರತಿ…
ಬೆಂಗಳೂರು: ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಗೆ ವೆಂಕಟೇಶ್ ಪ್ರಸಾದ್ ಅಧ್ಯಕ್ಷರಾಗಿ ಆಯ್ಕೆದ್ದರೇ, ಶಿವಮೊಗ್ಗ ವಿಭಾಗದ ಸಂಚಾಲಕರಾಗಿ ಡಿ ಎಸ್ ಅರುಣ್ ಅವರಿಗೆ ಭರ್ಜರಿ ಗೆಲುವು ಸಾಧಿಸಿದ್ದಾರೆ. ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ (KSCA) ಯ ಆಡಳಿತ ಮಂಡಳಿ ಸ್ಥಾನಗಳಿಗೆ ನಡೆದ ಚುನಾವಣೆಯ ಅಂತಿಮ ಫಲಿತಾಂಶದಲ್ಲಿ ವಿಧಾನ ಪರಿಷತ್ ಶಾಸಕರು ಮತ್ತು ರಾಜ್ಯ ಬಿಜೆಪಿ ಕಾರ್ಯದರ್ಶಿಗಳು ಡಿ ಎಸ್ ಅರುಣ್ ಅವರು ನೂತನವಾಗಿ ಶಿವಮೊಗ್ಗ ವಲಯ ಸಂಚಾಲಕರಾಗಿ ಮತ್ತು ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಯ ನಿರ್ದೇಶಕರಾಗಿ ಆಯ್ಕೆಯಾಗಿದ್ದಾರೆ. ತಮ್ಮ ಗೆಲುವಿಗೆ ಸಹಕರಿಸಿದ ಪ್ರತಿಯೊಬ್ಬರಿಗೂ ಹೃದಯಪೂರ್ವಕ ಧನ್ಯವಾದಗಳು. ಪ್ರತ್ಯಕ್ಷವಾಗಿ ಮತ್ತು ಪರೋಕ್ಷವಾಗಿ ಸಹಕರಿಸಿದ ಎಲ್ಲರಿಗೂ ಕೃತಜ್ಞತೆ ಸಲ್ಲಿಸಿದ್ದಾರೆ. ಮುಂದಿನ ದಿನಗಳಲ್ಲಿ ವಲಯದಲ್ಲಿನ ಕ್ರಿಕೆಟ್ ಅಭಿವೃದ್ಧಿ, ತರಬೇತಿ ಮತ್ತು ಪ್ರತಿಭೆಗಳನ್ನು ಬೆಳೆಸುವುದು, ಪಾರದರ್ಶಕ ಮತ್ತು ಪರಿಣಾಮಕಾರಿ ಆಯ್ಕೆ ಪ್ರಕ್ರಿಯೆ, ಕ್ರಿಕೆಟ್ ಪಂದ್ಯಗಳು ಮತ್ತು ಟೂರ್ನಮೆಂಟ್ ಗಳ ಸಮನ್ವಯ, ಮೂಲಸೌಕರ್ಯ ಅಭಿವೃದ್ಧಿ, ಶಿಸ್ತಿನ ಪಾಲನೆಯ ಮತ್ತು ನಿಯಮಾವಳಿ ಅನುಸರಣೆ ಹೀಗೆ ಹಲವು ಗುರಿಗಳನ್ನು ಹೊಂದಿರುವುದಾಗಿ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.…
ಬೆಳಗಾವಿ: ಬೆಳಗಾವಿಯ ಸುವರ್ಣಸೌಧದಲ್ಲಿ ನಡೆಯುತ್ತಿರುವ ವಿಧಾನ ಮಂಡಲ ಅಧಿವೇಶನದ ಮೊದಲನೇ ದಿನವಾದ ಇಂದು Noise Pollution (Regulation and Control) Rules, 2000 ಉಲ್ಲಂಘನೆಯ ಕುರಿತು ವಿಧಾನ ಪರಿಷತ್ ಶಾಸಕರಾದ ಡಿ.ಎಸ್.ಅರುಣ್ ಅವರು ಕೇಳಿದ ಚುಕ್ಕೆ ಗುರುತಿನ ಪ್ರಶ್ನೆಗೆ ಅರಣ್ಯ,ಜೀವಶಾಸ್ತ್ರ ಮತ್ತು ಪರಿಸರ ಸಚಿವರು ಹಾಗೂ ಇಲಾಖೆಯಿಂದ ಉತ್ತರ ವಿಳಂಬವಾಗಿರುವುದಕ್ಕೆ ಅವರು ಅಧಿವೇಶನದಲ್ಲಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಶಿವಮೊಗ್ಗ ಸೇರಿದಂತೆ ರಾಜ್ಯದ ಅನೇಕ ಮಸೀದಿಗಳಲ್ಲಿ ಅಝಾನ್ ವೇಳೆ ಲೌಡ್ಸ್ಪೀಕರ್ಗಳ ಶಬ್ದಮಟ್ಟ ಡೆಸಿಬೆಲ್ ಮಿತಿಯನ್ನು ಮೀರುತ್ತಿದೆ ಎಂಬ ವಿಚಾರವನ್ನು ಗಂಭೀರವಾಗಿ ಪರಿಗಣಿಸಿ, ಸರ್ಕಾರ ಈ ಮಹತ್ವದ ಸಾರ್ವಜನಿಕ ಪರಿಸರ ಸಂಬಂಧಿತ ವಿಷಯದಲ್ಲಿ ಗಂಭೀರತೆ ತೋರದೆ ಪ್ರಶ್ನೆಯನ್ನು ಮುಂದೂಡುತ್ತಿರುವುದು ನಿರ್ಲಕ್ಷ್ಯ ಎಂದಿದ್ದಾರೆ. ಡಿ.ಎಸ್.ಅರುಣ್ ಅವರು ಧಾರ್ಮಿಕ ಸ್ಥಳಗಳ ಶಬ್ದಮಟ್ಟ ಉಲ್ಲಂಘನೆಗಳ ಜಿಲ್ಲಾವಾರು ಮಾಹಿತಿ, KSPCB ನಡೆಸಿದ ಪರಿಶೀಲನೆಗಳು, Noise Level Testing ವರದಿ, ಪರವಾನಗಿ ಪರಿಶೀಲನೆ ಹಾಗೂ ಮಿತಿಮೀರಿದ ಶಬ್ದ ನಿಯಂತ್ರಣಕ್ಕೆ ಸರ್ಕಾರ ಕೈಗೊಂಡಿರುವ ಕ್ರಮಗಳ ಕುರಿತು ಸ್ಪಷ್ಟ ಉತ್ತರ ಕೇಳಿದ್ದರು. ಸಾರ್ವಜನಿಕ ಮಹತ್ವದ…
ಶಿವಮೊಗ್ಗ: ನಿನ್ನೆಯ ಭಾನುವಾರದಂದು ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲ್ಲೂಕಿನ ತಾಳಗುಂದ ಹಳ್ಳಿಯ ವೀರಭದ್ರೇಶ್ವರ ದೇವಾಲಯದ ಬಳಿ ಕೊಳೆತ ಸ್ಥಿತಿಯಲ್ಲಿ ಚಿರತೆಯ ಮೃತದೇಹ ಪತ್ತೆಯಾಗಿದೆ. ತಾಳಗುಂದ ಗ್ರಾಮಸ್ಥರು ಶಿರಾಳಕೊಪ್ಪ ಆರ್ ಎಫ್ ಓ ಜಾವೆದ್ ಅವರಿಗೆ ಮಾಹಿತಿ ನೀಡಿದ್ದಾರೆ. ಕೂಡಲೇ ಸ್ಥಳಕ್ಕೆ ತೆರಳಿದಂತ ಅವರು ಪರಿಶೀಲಿಸಿದಾಗ ಚಿರತೆ ಕತ್ತಿನಲ್ಲಿ ಉರುಲು ಇರುವುದು ಕಂಡುಬಂದಿದೆ. ಉರುಲಿನ ಕಾರಣ ಚಿರತೆ ಸಾವನ್ನಪ್ಪಿರುವ ಶಂಕೆಯನ್ನು ವ್ಯಕ್ತಪಡಿಸಿದ್ದಾರೆ. ಪಶುವೈದ್ಯರನ್ನು ಕರೆಸಿದಂತ ಆರ್ ಎಫ್ ಓ ಜಾವೆದ್ ಅವರು ಸ್ಥಳದಲ್ಲೇ ಕಾನೂನಿನ ಅನುಸಾರ ಮರಣೋತ್ತರ ಪರೀಕ್ಷೆಯನ್ನು ಮಾಡಿಸಲಾಗಿದೆ. ಈ ವೇಳೆ ಚಿರತೆ ಮೂರು ನಾಲ್ಕು ದಿನದ ಹಿಂದೆಯೇ ಸಾವನ್ನಪ್ಪಿದ್ದಾಗಿ ತಿಳಿದು ಬಂದಿದೆ ಎನ್ನಲಾಗುತ್ತಿದೆ. ಒಂದು ವಾರ, ಹದಿನೈದು ದಿನಗಳ ಹಿಂದೆಯೇ ಚಿರತೆ ಉರುಳಿಗೆ ಬಿದ್ದಿರುವ ಬಗ್ಗೆ ಅರಣ್ಯಾಧಿಕಾರಿಗಳು ಶಂಕೆ ವ್ಯಕ್ತಪಡಿಸಿದ್ದಾರೆ. ಅಲ್ಲದೇ ಚಿರತೆ ಉರುಳಿಗೆ ಬಿದ್ದಿದ್ದು ಎಲ್ಲಿ.? ಇಟ್ಟವರು ಯಾರು ಎನ್ನುವ ನಿಟ್ಟಿನಲ್ಲಿ ತನಿಖೆಯನ್ನು ನಡೆಸುತ್ತಿದ್ದಾರೆ. ವರದಿ: ವಸಂತ ಬಿ ಈಶ್ವರಗೆರೆ, ಸಂಪಾದಕರು…
ಬೆಂಗಳೂರು: ಶಾಲಾ ಶಿಕ್ಷಣ ಇಲಾಖೆ, ಕರ್ನಾಟಕ ಅಧಿಕೃತ ವೆಬ್ಸೈಟ್ – schooleducation.kar.nic.in ನಲ್ಲಿ KARTET ಪೇಪರ್ 1 ಉತ್ತರ ಕೀ 2025 ಅನ್ನು ಬಿಡುಗಡೆ ಮಾಡಿದೆ. 7 ಡಿಸೆಂಬರ್ 2025 ರಂದು ನಡೆದ ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ (KARTET) 2025 ಕ್ಕೆ ಹಾಜರಾದ ಅಭ್ಯರ್ಥಿಗಳು, ಕೆಳಗೆ ನೀಡಲಾದ ನೇರ ಲಿಂಕ್ಗಳ ಮೂಲಕ ಪೇಪರ್ I ಗಾಗಿ ತಾತ್ಕಾಲಿಕ ಉತ್ತರ ಕೀಯನ್ನು ಡೌನ್ಲೋಡ್ ಮಾಡಬಹುದು. ಉತ್ತರದ ಕೀಲಿಯು ಅಭ್ಯರ್ಥಿಗಳು ತಮ್ಮ ಸರಿಯಾದ ಪ್ರತಿಕ್ರಿಯೆಗಳನ್ನು ಪರಿಶೀಲಿಸಲು, ನಿರೀಕ್ಷಿತ ಅಂಕಗಳನ್ನು ಲೆಕ್ಕಾಚಾರ ಮಾಡಲು ಮತ್ತು ಫಲಿತಾಂಶದ ಮೊದಲು ಅವರ ಅರ್ಹತಾ ಅವಕಾಶಗಳನ್ನು ಅಂದಾಜು ಮಾಡಲು ಸಹಾಯ ಮಾಡುತ್ತದೆ. KARTET ಉತ್ತರ ಕೀ 2025 PDF – ಡೌನ್ಲೋಡ್ ಲಿಂಕ್ಗಳು KARTET ಉತ್ತರ ಕೀ 2025 ಅನ್ನು ಪೇಪರ್ 1 (ಪ್ರಾಥಮಿಕ ಶಿಕ್ಷಕರು) ಮತ್ತು ಪೇಪರ್ 2 (ಮೇಲ್ ಪ್ರಾಥಮಿಕ ಶಿಕ್ಷಕರು) ಗಾಗಿ ಪ್ರತ್ಯೇಕವಾಗಿ ಬಿಡುಗಡೆ ಮಾಡಲಾಗಿದೆ. ಕೆಳಗಿನ ಕೋಷ್ಟಕದ ಮೂಲಕ PDF ಗಳನ್ನು ಡೌನ್ಲೋಡ್…
ಬೆಂಗಳೂರು : ರಾಜ್ಯವನ್ನು ಮಾದಕ ವ್ಯಸನ ಮುಕ್ತಗೊಳಿಸುವ ನಿಟ್ಟಿನಲ್ಲಿ ಮಾದಕ ವಸ್ತುಗಳ ಮಾರಾಟಗಾರರು, ಬಳಕೆದಾರರ ವಿರುದ್ಧ ಸರ್ಕಾರ ಮತ್ತು ಪೊಲೀಸರು ಸಮರ ಸಾರಿದ್ದು, ಗುರಿ ಸಾಧಿಸುವವರೆಗೆ ವಿರಮಿಸುವುದಿಲ್ಲ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ ಹೇಳಿದ್ದಾರೆ. ಬೆಂಗಳೂರು ಸಿಟಿ ಪೊಲೀಸ್ ಹಾಗೂ ಫೆಡರೇಷನ್ ಆಫ್ ಹಿಸ್ಟೋರಿಕ್ ವೆಹಿಕಲ್ಸ್ ಆಫ್ ಇಂಡಿಯಾ (ಎಫ್ಎಚ್ ವಿಐ) ಸಹಯೋಗದಲ್ಲಿ ಪೌಲ್ ಜಾನ್ ರೆಸಾರ್ಟ್ ಮತ್ತು ಹೊಟೇಲ್ ಸಂಸ್ಥೆ ಭಾನುವಾರ ಆಯೋಜಿಸಿದ್ದ ಡ್ರಗ್ಸ್ ಮುಕ್ತ ಕರ್ನಾಟಕಕ್ಕಾಗಿ ವಿಂಟೇಜ್ ಕಾರ್ ರ್ಯಾಲಿ ಜಾಗೃತಿ ಅಭಿಯಾನ ಉದ್ಘಾಟಿಸಿ ಅವರು ಮಾತನಾಡಿದರು. “ಕರ್ನಾಟಕ ಮಾತ್ರವಲ್ಲ, ವಿಶ್ವದೆಲ್ಲೆಡೆ ಸಮಾಜ ಮಾದಕ ವ್ಯಸನದ ಜತೆ ಹೋಗುತ್ತಿದೆ. ಮಾದಕ ವಸ್ತುಗಳನ್ನು ಯಾರು ಬೆಂಬಲಿಸುತ್ತಾರೋ ಅವರು ಮನುಷ್ಯರಲ್ಲ, ಜನರ ಜೀವನದ ಜತೆ ಆಟವಾಡುತ್ತಾರೆ. ಅವರ ಭವಿಷ್ಯ, ಆರೋಗ್ಯವನ್ನು ನಾಶ ಮಾಡುತ್ತಾರೆ. ಇದನ್ನು ಮನಗಂಡು ನಮ್ಮ ಸರ್ಕಾರ ಕರ್ನಾಟಕವನ್ನು ಮಾದಕ ವ್ಯಸನ ಮಕ್ತ ರಾಜ್ಯವಾಗಿ ರೂಪಿಸುವ ಬಗ್ಗೆ ಸರ್ಕಾರ ಘೋಷಿಸಿತ್ತು,” ಎಂದರು. “ಘೋಷಣೆಯಾದ ಕೂಡಲೇ ಕರ್ನಾಟಕ ಮಾದಕ ವ್ಯಸನ ಮುಕ್ತವಾಯಿತು…
ಬೆಂಗಳೂರು: ಬಿ ಟಿ ಎಂ ಕ್ಷೇತ್ರ -ಬೆಂಗಳೂರು ನಗರದಲ್ಲಿ ಶಿಕ್ಷಣ, ಆರೋಗ್ಯ, ರಸ್ತೆ, ಒಳಚರಂಡಿ ವ್ಯವಸ್ಥೆ, ಕಸ ವಿಗಂಡಣೆ ಹೀಗೆ ಹತ್ತು ಹಲವು ಜನಸ್ನೇಹಿ ಕ್ರಮಗಳಿಗೆ ಮಾದರಿಯಾದ ಕ್ಷೇತ್ರಯಾಗಿದೆ. ಅದರಲ್ಲೂ ಬಿ.ಟಿ.ಎಂ ವಿಧಾನಸಭಾ ಕ್ಷೇತ್ರದಲ್ಲಿನ ಸರ್ಕಾರಿ ಶಾಲಾ/ಕಾಲೇಜುಗಳು ಹೀಗಾಗಲೇ ದೇಶದ್ಯಾಂತ ಸುದ್ದಿಯಾಗಿವೆ. ಶಿಕ್ಷಣ ಕಾಶಿ ಎಂದೇ ಹೆಸರುವಾಸಿಯಾಗಿದೆ. ಇದಕ್ಕೆ ಮತ್ತೊಂದು ಸೇರ್ಪಡೆ ಎನ್ನುವಂತೆ ತೆಲಂಗಾಣ ಶಿಕ್ಷಣ ಆಯೋಗ ಅಧ್ಯಕ್ಷರಾದ ನಿವೃತ್ತ ಐಎಎಸ್ ಅಧಿಕಾರಿ ಎ.ಮುರುಳಿ ಆಡುಗೋಡಿ ಸರ್ಕಾರಿ ಶಾಲೆಗೆ ಭೇಟಿ ನಿಡಿದ್ದಾರೆ. ಹೌದು.. ಎ.ಮುರಳಿ IAS ( ನಿವೃತ್ತ) , ಅಧ್ಯಕ್ಷರು, ತೆಲಂಗಾಣ ಶಿಕ್ಷಣ ಸುಧಾರಣಾ ಆಯೋಗ ಅವರು ರಾಜ್ಯದಲ್ಲಿ ಅಭಿವೃದ್ಧಿ ಪಡಿಸಿರುವ ಸರ್ಕಾರಿ ಶಾಲೆಗಳ ಗುಣಮಟ್ಟವನ್ನು ಪರಿಶೀಲಿಸಿ ,ತೆಲಂಗಾಣ ರಾಜ್ಯದಲ್ಲಿ ಅಳವಡಿಸಿಕೊಳ್ಳುವ ನಿಟ್ಟಿನಲ್ಲಿ ಭೇಟಿ ನೀಡಿದ್ದರು. ಅವರ ಭೇಟಿಯ ಒಂದು ಭಾಗವಾಗಿ ಆಡುಗೋಡಿ ಸರ್ಕಾರಿ ಶಾಲೆಗೆ ತೆರಳಿ ಅಲ್ಲಿನ ವ್ಯವಸ್ಥೆಗಳನ್ನು ಕಣ್ಣಾರೆ ಕಂಡು ಬಹಳ ಸಂತೋಷ ವ್ಯಕ್ತಪಡಿಸಿ, ಶಾಲೆಯ ಗಣ್ಯರ ಭೇಟಿಯ ಪುಸ್ತಕದಲ್ಲಿ ಈ ಕೆಳಗಿನಂತೆ ತಮ್ಮ ಕೈಬರಹದಲ್ಲಿ ದಾಖಲಿಸಿರುತ್ತಾರೆ.…
ಮಂಡ್ಯ : ಕರ್ನಾಟಕ ರಾಜ್ಯ ಅನುಸೂಚಿತ ಜಾತಿ ಮತ್ತು ಅನುಸೂಚಿತ ಬುಡಕಟ್ಟುಗಳ ಆಯೋಗದ ಅಧ್ಯಕ್ಷರಾದ ಡಾ.ಎಲ್. ಮೂರ್ತಿ 08 /12/ 2025 ರಂದು ಸೋಮವಾರ ಮಂಡ್ಯ ಜಿಲ್ಲೆಯಲ್ಲಿ ಪ್ರವಾಸ ಕೈಗೊಂಡಿದ್ದಾರೆ. ಸೋಮವಾರ ಬೆಳಿಗ್ಗೆ 9 ಗಂಟೆಗೆ ಬೆಂಗಳೂರಿನಿಂದ ಹೊರಟು ಮದ್ದೂರು ನಗರದ ಪ್ರವಾಸಿ ಮಂದಿರಕ್ಕೆ 10.30ಕ್ಕೆ ಆಗಮಿಸಲಿದ್ದಾರೆ. ಪ್ರವಾಸಿ ಮಂದಿರದಲ್ಲಿ ತಾಲೂಕು ತಹಶೀಲ್ದಾರ್, ತಾಪಂ ಇಓ, ನಗರಸಭೆ ಪೌರಾಯುಕ್ತ, ಮಳವಳ್ಳಿ ಉಪ ವಿಭಾಗದ ಡಿವೈಎಸ್ಪಿ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳ ಸಭೆ ನಡೆಸಲಿದ್ದಾರೆ. ಬಳಿಕ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಲಿದ್ದಾರೆ. ಬಳಿಕ 11.30 ಕ್ಕೆ ಮಳವಳ್ಳಿಗೆ ತೆರಳಿ 12.30 ರಿಂದ ಮಳವಳ್ಳಿ ಪ್ರವಾಸಿ ಮಂದಿರದಲ್ಲಿ ತಾಲೂಕು ತಹಶೀಲ್ದಾರ್, ತಾಪಂ ಇಓ, ಪುರಸಭೆ ಮುಖ್ಯಾಧಿಕಾರಿ, ಡಿವೈಎಸ್ಪಿ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳ ಸಭೆ ನಡೆಸಲಿದ್ದಾರೆ. ಬಳಿಕ ಸಾರ್ವಜನಿಕರಿಂದ ಅಹವಾಲು ಸ್ವೀಕರಿಸಲಿದ್ದಾರೆ. ನಂತರ ಸಂಜೆ ಮಂಡ್ಯ ನಗರದಲ್ಲಿ ಖಾಸಗಿ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿ ಬಳಿಕ ಬೆಂಗಳೂರಿಗೆ ತೆರಳಲಿದ್ದಾರೆ. ವರದಿ : ಗಿರೀಶ್ ರಾಜ್, ಮಂಡ್ಯ














