Author: kannadanewsnow09

ಬೆಂಗಳೂರು: ರಾಜ್ಯದ ಗ್ರಾಮ ಪಂಚಾಯ್ತಿ ಅಧಿಕಾರಿ, ಸಿಬ್ಬಂದಿಗಳಿಗೆ ಮಹತ್ವದ ಮಾಹಿತಿಯನ್ನು ಗ್ರಾಮೀಣಾಭಿವೃದ್ಧಿ ಇಲಾಖೆ ಬಿಡುಗಡೆ ಮಾಡಿದೆ. ಅದೇ ಇ-ಗ್ರಾಮ ಸ್ವರಾಜ್ ತಂತ್ರಾಂಶದ ತಾಂತ್ರಿಕ ಸಮಸ್ಯೆ ಪರಿಹಾರಿಸಲಾಗಿದೆ. ಈ ಮೂಲಕ ಗ್ರಾಮ ಪಂಚಾಯತಿಗಳ ಅನುದಾನ ಬಳಕೆಗೆ ಅನುಕೂಲ ಮಾಡಿಕೊಡಲಾಗಿದೆ. ಇಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಇ-ಗ್ರಾಮ ಸ್ವರಾಜ್ ತಂತ್ರಾಂಶದೊಂದಿಗೆ ಇರುವ ಸಂಯೋಜನೆಯಲ್ಲಿನ  ತಾಂತ್ರಿಕ ಸಮಸ್ಯೆಯಿಂದಾಗಿ 2024-25 ನೇ ಸಾಲಿನ 15ನೇ ಹಣಕಾಸು ಆಯೋಗದ ಅನಿರ್ಬಂಧಿತ ಮೋದಲನೇ ಕಂತಿನ ಅನುದಾನವನ್ನು ಬಳಕೆ ಮಾಡಿಕೊಳ್ಳಲು ಕೆಲವು ಗ್ರಾಮ ಪಂಚಾಯತಿಗಳಿಗೆ ಸಾಧ್ಯವಾಗಿರಲಿಲ್ಲ ಎಂದು ತಿಳಿಸಿದೆ. ಇದೀಗ ಇ-ಸ್ವರಾಜ್ ತಂತ್ರಾಂಶದಲ್ಲಿ ಎದುರಾಗಿದ್ದ ತಾಂತ್ರಿಕ ತೊಂದರೆಗಳನ್ನು ನಿವಾರಿಸಲಾಗಿರುವುದರಿಂದ ಅಂತಹ ಗ್ರಾಮ ಪಂಚಾಯತಿಗಳು ಈಗ ಇ-ಗ್ರಾಮ ಸ್ವರಾಜ್ ತಂತ್ರಾಂಶದ ಮೂಲಕ ಅನುದಾನ ಬಳಸಿಕೊಳ್ಳಬಹುದಾಗಿದೆ ಎಂದು ತಿಳಿಸಿದೆ. https://kannadanewsnow.com/kannada/congress-president-sonia-gandhi-pays-last-respects-to-manmohan-singh/ https://kannadanewsnow.com/kannada/bandipur-banned-on-new-years-eve/

Read More

ಬೆಂಗಳೂರು: ರಾಜ್ಯದಲ್ಲಿ ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸೋದು ಮತ್ತಷ್ಟು ಸರಳಗೊಳಿಸಲಾಗಿದೆ. ಮನೆಯಿಂದಲೇ, ಕುಳಿತಲ್ಲಿಯೇ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ. ಹಾಗಾದ್ರೇ ಅದೇಗೆ.? ಮಾನದಂಡಗಳೇನು ಎಂಬುದು ಸೇರಿದಂತೆ ಇತರೆ ಮಾಹಿತಿ ಮುಂದಿದೆ ಓದಿ. ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ 2024ನೇ ಸಾಲಿನ ಪಡಿತರ ಚೀಟಿಗಾಗಿ ಆನ್ ಲೈನ್ ಅರ್ಜಿಗಳನ್ನು www.ahara.kar.nic.in ರಂದು ಆರಂಭಿಸಿದೆ. ಕರ್ನಾಟಕದ ನಿವಾಸಿಗಳು ಈಗ ಆನ್ಲೈನ್ನಲ್ಲಿ ಹೊಸ ಪಡಿತರ ಚೀಟಿಗಾಗಿ ಸುಲಭವಾಗಿ ಅರ್ಜಿ ಸಲ್ಲಿಸಬಹುದು ಮತ್ತು ಪಿಡಿಎಫ್ ರೂಪದಲ್ಲಿ ಸಂಪೂರ್ಣ ಅರ್ಜಿ ಪ್ರಕ್ರಿಯೆಯನ್ನು ಪ್ರವೇಶಿಸಬಹುದು. 2024 ರ ಕರ್ನಾಟಕ ಪಡಿತರ ಚೀಟಿ ಪಟ್ಟಿಯಲ್ಲಿ ಪಟ್ಟಿ ಮಾಡದ ವ್ಯಕ್ತಿಗಳು ಕರ್ನಾಟಕದಲ್ಲಿ ಹೊಸ ಎಪಿಎಲ್ / ಬಿಪಿಎಲ್ ಪಡಿತರ ಚೀಟಿಗೆ ಅರ್ಜಿ ಸಲ್ಲಿಸಲು ಅಗತ್ಯ ದಾಖಲೆಗಳು ಮತ್ತು ಕಾರ್ಯವಿಧಾನಗಳ ಬಗ್ಗೆ ಮಾಹಿತಿಯನ್ನು ಪಡೆಯಬಹುದು. ಹೆಚ್ಚುವರಿಯಾಗಿ, ಅರ್ಜಿದಾರರು ಕರ್ನಾಟಕದಲ್ಲಿ ಪಡಿತರ ಚೀಟಿಗಾಗಿ ತಮ್ಮ ಸೇರ್ಪಡೆ ವಿನಂತಿಯ ಸ್ಥಿತಿಯನ್ನು ಆನ್ ಲೈನ್ ನಲ್ಲಿ ಟ್ರ್ಯಾಕ್ ಮಾಡಬಹುದು. ಕರ್ನಾಟಕದಲ್ಲಿ ಆನ್ ಲೈನ್…

Read More

ಬೆಂಗಳೂರು: ಇ-ಗ್ರಾಮ ಸ್ವರಾಜ್ ತಂತ್ರಾಂಶದ ತಾಂತ್ರಿಕ ಸಮಸ್ಯೆ ಪರಿಹಾರವಾಗಿದೆ. ಇದು ಗ್ರಾಮ ಪಂಚಾಯತಿಗಳ ಅನುದಾನ ಬಳಕೆಗೆ ಅನುಕೂಲಕಾರಿಯಾಗಿದೆ ಅಂತ ಗ್ರಾಮೀಣಾಭಿವೃದ್ಧಿ ಇಲಾಖೆ ತಿಳಿಸಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಇ-ಗ್ರಾಮ ಸ್ವರಾಜ್ ತಂತ್ರಾಂಶದೊಂದಿಗೆ ಇರುವ ಸಂಯೋಜನೆಯಲ್ಲಿನ ತಾಂತ್ರಿಕ ಸಮಸ್ಯೆಯಿಂದಾಗಿ 2024-25 ನೇ ಸಾಲಿನ 15ನೇ ಹಣಕಾಸು ಆಯೋಗದ ಅನಿರ್ಬಂಧಿತ ಮೋದಲನೇ ಕಂತಿನ ಅನುದಾನವನ್ನು ಬಳಕೆ ಮಾಡಿಕೊಳ್ಳಲು ಕೆಲವು ಗ್ರಾಮ ಪಂಚಾಯತಿಗಳಿಗೆ ಸಾಧ್ಯವಾಗಿರಲಿಲ್ಲ. ಎದುರಾಗಿದ್ದ ತಾಂತ್ರಿಕ ತೊಂದರೆಗಳನ್ನು ನಿವಾರಿಸಲಾಗಿರುವುದರಿಂದ ಅಂತಹ ಗ್ರಾಮ ಪಂಚಾಯತಿಗಳು ಈಗ ಇ-ಗ್ರಾಮ ಸ್ವರಾಜ್ ತಂತ್ರಾಂಶದ ಮೂಲಕ ಅನುದಾನ ಬಳಸಿಕೊಳ್ಳಬಹುದಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಪ್ರಕಟಣೆ ತಿಳಿಸಿದೆ. https://kannadanewsnow.com/kannada/former-pm-manmohan-singhs-funeral-the-pioneer-of-economic-revolution-is-still-a-memory/ https://kannadanewsnow.com/kannada/congress-president-sonia-gandhi-pays-last-respects-to-manmohan-singh/

Read More

ನವದೆಹಲಿ: ಡಿ.26ರಂದು ನಿಧನರಾದಂತ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಪಾರ್ಥೀವ ಶರೀರದ ಅಂತಿಮ ದರ್ಶನದ ಬಳಿಕ, ದೆಹಲಿಯ ನಿಗಮ್ ಬೋಧ್ ಘಾಟ್ ನಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ ನೆರವೇರಿಸಲಾಯಿತು. ಈ ಮೂಲಕ ಆರ್ಥಿಕ ಅಭಿವೃದ್ಧಿಯ ಹರಿಕಾರ, ಶಿಕ್ಷಣ ತಜ್ಞ ಡಾ.ಮನಮೋಹನ್ ಸಿಂಗ್ ಇನ್ನೂ ನೆನಪಾಗಿ ಉಳಿದಂತೆ ಆಗಿದೆ. ಇದಕ್ಕೂ ಮುನ್ನ ಇಂದು ದೆಹಲಿಯಲ್ಲಿರುವಂತ ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ಡಾ.ಮನಮೋಹನ್ ಸಿಂಗ್ ಅವರ ಪಾರ್ಥೀವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಂಸದ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ಕೆಸಿ ವೇಣುಗೋಪಾಲ್, ಮುಖ್ಯಮಂತ್ರಿ ಸಿದ್ಧರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ಸೇರಿದಂತೆ ಇತರೆ ಗಣ್ಯರು ಅಂತಿಮ ದರ್ಶನವನ್ನು ಪಡೆದರು. ಎಐಸಿಸಿ ಕಚೇರಿಯಿಂದ ತೆರೆದ ವಾಹನದಲ್ಲಿ ಡಾ.ಮನಮೋಹನ್ ಸಿಂಗ್ ಅವರ ಪಾರ್ಥೀವ ಶರೀರವನ್ನು ಅಂತಿಮ ಯಾತ್ರೆಯಲ್ಲಿ ನಿಗಮ್ ಬೋಧ್ ಘಾಟ್ ಗೆ ಕೊಂಡೊಯ್ಯಲಾಯಿತು. ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರಪತಿ ದ್ರೌಪದಿ ಮುರ್ಮು, ಕೇಂದ್ರ ಸಚಿವರು ಸೇರಿದಂತೆ ಇತರೆ…

Read More

ನವದೆಹಲಿ: 2023 ರ ಫೆಬ್ರವರಿಯಲ್ಲಿ ಹೈದರಾಬಾದ್ನಲ್ಲಿ ನಡೆದ ಫಾರ್ಮುಲಾ-ಇ ರೇಸ್ನಲ್ಲಿ ಪಾವತಿ ಅಕ್ರಮಗಳಿಗೆ ಸಂಬಂಧಿಸಿದ ಮನಿ ಲಾಂಡರಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು ಮುಂದಿನ ತಿಂಗಳು ವಿಚಾರಣೆಗೆ ಹಾಜರಾಗುವಂತೆ ಭಾರತ ರಾಷ್ಟ್ರ ಸಮಿತಿ ಮುಖಂಡ ಕೆ.ಟಿ.ರಾಮರಾವ್ ಮತ್ತು ಇತರರಿಗೆ ಸಮನ್ಸ್ ನೀಡಿದೆ ಎಂದು ಅಧಿಕೃತ ಮೂಲಗಳು ಶನಿವಾರ ತಿಳಿಸಿವೆ. ತೆಲಂಗಾಣ ಪೊಲೀಸ್ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ದೂರನ್ನು ಪರಿಗಣಿಸಿ ಫೆಡರಲ್ ಏಜೆನ್ಸಿ ಕಳೆದ ವಾರ ಮನಿ ಲಾಂಡರಿಂಗ್ ತಡೆ ಕಾಯ್ದೆಯ (ಪಿಎಂಎಲ್ಎ) ವಿವಿಧ ವಿಭಾಗಗಳ ಅಡಿಯಲ್ಲಿ ಈ ಪ್ರಕರಣದಲ್ಲಿ ಜಾರಿ ಪ್ರಕರಣ ಮಾಹಿತಿ ವರದಿ (ಇಸಿಐಆರ್) ಅಥವಾ ಎಫ್ಐಆರ್ ದಾಖಲಿಸಿದೆ. ಭಾರತ ರಾಷ್ಟ್ರ ಸಮಿತಿ (ಬಿಆರ್ಎಸ್) ಕಾರ್ಯಕಾರಿ ಅಧ್ಯಕ್ಷ ಮತ್ತು ತೆಲಂಗಾಣದ ಮಾಜಿ ಮುಖ್ಯಮಂತ್ರಿ ಕೆ.ಚಂದ್ರಶೇಖರ್ ರಾವ್ ಅವರ ಪುತ್ರ ರಾಮರಾವ್ ಅವರಿಗೆ ಜನವರಿ 7 ರಂದು ತಮ್ಮ ಹೇಳಿಕೆಯನ್ನು ದಾಖಲಿಸಲು ಹಾಜರಾಗುವಂತೆ ಸೂಚಿಸಲಾಗಿದೆ ಎಂದು ಮೂಲಗಳು ತಿಳಿಸಿವೆ. ಹಿರಿಯ ಐಎಎಸ್ ಅಧಿಕಾರಿ ಅರವಿಂದ್ ಕುಮಾರ್ ಮತ್ತು ನಿವೃತ್ತ ಅಧಿಕಾರಿ…

Read More

ಹಿಮಾಚಲ ಪ್ರದೇಶ: ಕೆಲ ದಿನಗಳಿಂದ ಭಾರೀ ಹಿಮಪಾತವು ಹಿಮಾಚಲ ಪ್ರದೇಶದಲ್ಲಿ ಆಗುತ್ತಿದೆ. ನಿನ್ನೆಯಂತೂ ಭಾರೀ ಹಿಮಪಾತವೇ ಉಂಟಾಗಿದ್ದು, ಇದರ ಪರಿಣಾಮ ರಸ್ತೆಯೆಲ್ಲ ಬಂದ್ ಆಗಿ, ಟ್ರಾಫಿಕ್ ಜಾಮ್ ಉಂಟಾಗಿತ್ತು. ಈ ರೀತಿಯ ಟ್ರಾಫಿಕ್ ಚಾಮ್ ನಲ್ಲಿ ಸಿಲುಕ್ಕಿದ್ದಂತ 1000 ವಾಹನಗಳನ್ನು ಸಂಚಾರ ದಟ್ಟಣೆ ಕ್ಲಿಯರ್ ಮಾಡಿದ್ದು ಪೊಲೀಸರು. ಅದು ಹೇಗೆ ಅಂತ ಮುಂದೆ ಸುದ್ದಿ ಸಹಿತ ವೀಡಿಯೋ ಇದೆ ನೋಡಿ. ಹಿಮಾಚಲ ಪ್ರದೇಶದ ಕುಲ್ಲು ಜಿಲ್ಲೆಯ ಜನಪ್ರಿಯ ಸ್ಕೀ ರೆಸಾರ್ಟ್ ಸೋಲಾಂಗ್ ನಾಲಾ ಬಳಿ 1,000 ವಾಹನಗಳು ಸಿಲುಕಿಕೊಂಡಿದ್ದು, ಇದುವರೆಗಿನ ಅತ್ಯಂತ ಕೆಟ್ಟ ಟ್ರಾಫಿಕ್ ಜಾಮ್ ಗೆ ಸಾಕ್ಷಿಯಾಗಿದೆ. ಕುಲ್ಲು ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ ಸಿಲುಕಿದ್ದ 5,000 ಪ್ರವಾಸಿಗರನ್ನು ರಕ್ಷಿಸಿದ್ದಾರೆ. ಭಾರೀ ಹಿಮಪಾತ ಮತ್ತು ರಜಾದಿನಗಳಲ್ಲಿ ಟೌರಿಸ್ಟ್ ಗಳ ಭಾರಿ ಒಳಹರಿವಿನಿಂದಾಗಿ ಟ್ರಾಫಿಕ್ ಜಾಮ್ ಉಂಟಾಗಿತ್ತು. https://twitter.com/ANI/status/1871378243624046948 ಕುಲ್ಲು ಪೊಲೀಸರ ಹೇಳಿಕೆಯ ಪ್ರಕಾರ, ಶುಕ್ರವಾರ ಹೊಸ ಹಿಮಪಾತವು ತೀವ್ರ ಪ್ರಯಾಣ ಅಡೆತಡೆಗಳಿಗೆ ಕಾರಣವಾಯಿತು. “ಇಂದು 27.12.2024 ರಂದು ಹೊಸ ಹಿಮಪಾತದಿಂದಾಗಿ, ಸುಮಾರು 1,000 ಪ್ರವಾಸಿಗರು…

Read More

ನವದೆಹಲಿ: ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಅವರ ಅಂತಿಮ ವಿಧಿಗಳನ್ನು ನೆರವೇರಿಸಲು ಸಿಪಿಪಿ ಅಧ್ಯಕ್ಷೆ ಸೋನಿಯಾ ಗಾಂಧಿ ದೆಹಲಿಯ ನಿಗಮ್ ಬೋಧ್ ಘಾಟ್ ನಲ್ಲಿ ಅಂತಿಮ ನಮನ ಸಲ್ಲಿಸಿದರು. ಇಂದು ನಿಗಮ್ ಬೋಧ್ ಘಾಟ್ ಗೆ ತೆರಳಿದಂತ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿಯವರು, ಮಾಜಿ ಪ್ರಧಾನಿ ಡಾ.ಮನಮೋಹನ್ ಸಿಂಗ್ ಅವರ ಪಾರ್ಥೀವ ಶರೀರಕ್ಕೆ ಹೂಗುಚ್ಚ ಅರ್ಪಿಸಿ, ಅಂತಿಮ ನಮನವನ್ನು ಸಲ್ಲಿಸಿದರು. https://twitter.com/ANI/status/1872892362990759980

Read More

ನವದೆಹಲಿ: ಡಿ.26ರಂದು ನಿಧನರಾದಂತ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಪಾರ್ಥೀವ ಶರೀರದ ಅಂತಿಮ ದರ್ಶನದ ಬಳಿಕ, ದೆಹಲಿಯ ನಿಗಮ್ ಬೋಧ್ ಘಾಟ್ ನಲ್ಲಿ ಸಕಲ ಸರ್ಕಾರಿ ಗೌರವಗಳನ್ನು ಸಲ್ಲಿಸಲಾಯಿತು. ಇನ್ನೇನು ಕೆಲವೇ ಕ್ಷಣಗಳಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಗುತ್ತದೆ. ಇದಕ್ಕೂ ಮುನ್ನ ಇಂದು ದೆಹಲಿಯಲ್ಲಿರುವಂತ ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ಡಾ.ಮನಮೋಹನ್ ಸಿಂಗ್ ಅವರ ಪಾರ್ಥೀವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಂಸದ ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ಕೆಸಿ ವೇಣುಗೋಪಾಲ್, ಮುಖ್ಯಮಂತ್ರಿ ಸಿದ್ಧರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ಸೇರಿದಂತೆ ಇತರೆ ಗಣ್ಯರು ಅಂತಿಮ ದರ್ಶನವನ್ನು ಪಡೆದರು. ಎಐಸಿಸಿ ಕಚೇರಿಯಿಂದ ತೆರೆದ ವಾಹನದಲ್ಲಿ ಡಾ.ಮನಮೋಹನ್ ಸಿಂಗ್ ಅವರ ಪಾರ್ಥೀವ ಶರೀರವನ್ನು ಅಂತಿಮ ಯಾತ್ರೆಯಲ್ಲಿ ನಿಗಮ್ ಬೋಧ್ ಘಾಟ್ ಗೆ ಕೊಂಡೊಯ್ಯಲಾಯಿತು. ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರಪತಿ ದ್ರೌಪದಿ ಮುರ್ಮು, ಕೇಂದ್ರ ಸಚಿವರು ಸೇರಿದಂತೆ ಇತರೆ ಗಣ್ಯರ ಸಮ್ಮುಖದಲ್ಲಿ ನಿಗಮ್ ಬೋಧ್ ಘಾಟ್ ನಲ್ಲಿ ಡಾ.ಮನಮೋಹನ್ ಸಿಂಗ್ ಅವರ…

Read More

ರಾಯಚೂರು: ಜಿಲ್ಲೆಯಲ್ಲಿ ಬಾಣಂತಿಯರ ಸರಣಿ ಸಾವಿಗೆ ಕಾರಣವಾದರ ಹಿನ್ನಲೆಯಲ್ಲಿ ಬಾಣಂತಿಯರಿಗೆ ನೀಡಿದಂತ ಐವಿ ರಿಂಗಲ್ ಲ್ಯಾಕ್ಟೇಟ್ ದ್ರಾವಣ ಬಳಕೆಗೆ ಯೋಗವಲ್ಲ ಎಂಬುದಾಗಿ ಲ್ಯಾಬ್ ವರದಿಯಿಂದ ಶಾಕಿಂಗ್ ಮಾಹಿತಿ ಬಹಿರಂಗಗೊಂಡಿದೆ. ರಾಯಚೂರಿನ ಸಿಂಧನೂರು ತಾಲ್ಲೂಕು ಆಸ್ಪತ್ರೆಯಲ್ಲಿ ನಾಲ್ವರು ಬಾಣಂತಿಯರು ಸರಣಿ ಸಾವಾಗಿತ್ತು. ಈ ಘಟನೆಯ ನಂತ್ರ ಒಟ್ಟು 3 ಲ್ಯಾಬ್ ಗಳಿಗೆ ತಲಾ 6 ಐಪಿ ರಿಂಗರ್ ಲ್ಯಾಕ್ಟೇಟ್ ದ್ರಾವಣವನ್ನು ಪರೀಕ್ಷೆಗೆ ಕಳುಹಿಸಿಕೊಡಲಾಗಿತ್ತು. ಈ ದ್ರಾವಣವನ್ನು ಪರೀಕ್ಷಿಸಿದಂತ ಲ್ಯಾಬ್ ವರದಿ ಹೊರಬಿದ್ದಿದ್ದು, ಐಪಿ ರಿಂಗಲ್ ಲ್ಯಾಕ್ಟೇಟ್ ದ್ರಾವಣದಲ್ಲಿ ಎಂಡೋ ಟ್ಯಾಕ್ಸಿನ್ ಎಂಬ ಅಂಶ ಬಳಕೆಯಾಗಿದೆ. ಇದು ಬಳಕೆಗೆ ಯೋಗ್ಯವಲ್ಲ ಎಂಬ ಶಾಕಿಂಗ್ ಮಾಹಿತಿಯನ್ನು ಬಿಚ್ಚಿಟ್ಟಿದೆ. ಇನ್ನೂ ಹೈದರಾಬಾದ್​ನ ವಿಂಪ್ಟಾ ಲ್ಯಾಬ್ ವರದಿಯಲ್ಲಿ 6 ಸ್ಯಾಂಪಲ್ ಪೈಕಿ, 4 ಉಪಯೋಗಕ್ಕೆ ಯೋಗ್ಯವಿದೆ ಅಂತ ತಿಳಿಸಲಾಗಿದೆ. ಇನ್ನುಳಿದ 2 ಯೋಗ್ಯವಲ್ಲ ಅಂತ ವರದಿಯಲ್ಲಿ ಶಾಕಿಂಗ್ ಮಾಹಿತಿಯನ್ನು ಉಲ್ಲೇಖಿಸಲಾಗಿದೆ. ಈಗ ಸರ್ಕಾರದ ಡ್ರಗ್ ಕಂಟ್ರೋಲ್ ಲ್ಯಾಬ್​ನ ವರದಿ ಬರಬೇಕಿದ್ದು ಅದರಲ್ಲಿ ಏನು ವರದಿ ಬರುತ್ತದೋ ಎಂಬುದನ್ನು ಕಾದು…

Read More

ಬೆಂಗಳೂರು: ಸಾಗರ ತಾಲ್ಲೂಕಿನ ಡಿ.ಮಹಾಬಲೇಶ್ವರ ಲಿಂಗದಹಳ್ಳಿಯವರ ಪುತ್ರ ಡಾ.ಎಲ್ ಎಂ ಸುರೇಶ್ ಕೀನ್ಯಾ ಅವರಿಗೆ ಹವ್ಯಕ ಕೃಷಿ ರತ್ನ ಪ್ರಶಸ್ತಿಯನ್ನು ಪ್ರದಾನ ಮಾಡಿ, ಗೌರವಿಸಲಾಗಿದೆ. ಬೆಂಗಳೂರಿನ ಅರಮನೆ ಮೈದಾನದಲ್ಲಿ ನಿನ್ನೆಯಿಂದ ತೃತೀಯ ಅಖಿಲ ಭಾರತ ವಿಶ್ವ ಹವ್ಯಕ ಮಹಾ ಸಮ್ಮೇಳನ ನಡೆಯುತ್ತಿದೆ. ಈ ಸಮ್ಮೇಳನದಲ್ಲಿ ಶಿವಮೊಗ್ಗದ ಡಾ.ಎಲ್ ಎಂ ಸುರೇಶ್ ಕೀನ್ಯಾ ಅವರಿಗೆ ಹವ್ಯಕ ಕೃಷಿ ರತ್ನ ಪ್ರಶಸ್ತಿಯನ್ನು ನೀಡಿ, ಗೌರವಿಸಲಾಗಿದೆ. ಯಾರು ಡಾ.ಎಲ್ ಎಂ ಸುರೇಶ್ ಕೀನ್ಯಾ? ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಲಿಂಗದಹಳ್ಳಿಯವರೇ ಡಾ.ಎಲ್ ಎಂ ಸುರೇಶ್ ಆಗಿದ್ದಾರೆ. ಇವರ ತಂದೆ ದಿವಂಗತ ಮಹಾಬಲೇಶ್ವರ. ಒಬ್ಬ ಅಂತರರಾಷ್ಟ್ರೀಯ ಕೃಷಿ ವಿಜ್ಞಾನಿಯಾಗಿ ಡಾ.ಎಲ್ ಎಂ ಸುರೇಶ್ ಗುರುತಿಸಿಕೊಂಡಿದ್ದಾರೆ. ಪ್ರಸ್ತುತ ಕೀನ್ಯಾದ ನೈರೋಬಿಯಲ್ಲಿರುವಂತ ಅಂತರರಾಷ್ಟ್ರೀಯ ಜೋಳ ಮತ್ತು ಗೋಧಿ ಸುಧಾರಣಾ ಕೇಂದ್ರದಲ್ಲಿ ಮೇಸ್ ಸ್ಪೆಷಾಲಿಟಿ ಲೀಡ್ ಆಗಿ ಡಾ.ಎಲ್ ಎಂ ಸುರೇಶ್ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಬೆಂಗಳೂರಿನ ಕೃಷಿ ವಿಶ್ವವಿದ್ಯಾಲಯದಿಂದ ಕೃಷಿಯಲ್ಲಿ ಬಿಎಸ್ಸಿ, ಎಂಎಸ್ಸಿ ಪದವಿಯನ್ನು ಪಡೆದಂತ ಡಾ.ಎಲ್ ಎಂ ಸುರೇಶ್ ಅವರು,…

Read More