Subscribe to Updates
Get the latest creative news from FooBar about art, design and business.
Author: kannadanewsnow09
ಜಕಾರ್ತಾ : ಇಂಡೋನೇಷ್ಯಾದ ಪೂರ್ವ ಮಧ್ಯ ಪಪುವಾ ಪ್ರಾಂತ್ಯದಲ್ಲಿ ಶನಿವಾರ 5.0 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ದೇಶದ ಹವಾಮಾನ ಮತ್ತು ಭೂಭೌತಶಾಸ್ತ್ರ ಸಂಸ್ಥೆ ತಿಳಿಸಿದೆ. ಸ್ಥಳೀಯ ಕಾಲಮಾನ ಮಧ್ಯಾಹ್ನ 12.32 ಕ್ಕೆ ಭೂಕಂಪ ಸಂಭವಿಸಿದ್ದು, ಅದರ ಕೇಂದ್ರಬಿಂದು ಪುಂಕಾಕ್ ಜಯಾ ರೀಜೆನ್ಸಿಯ ಈಶಾನ್ಯಕ್ಕೆ 28 ಕಿ.ಮೀ ದೂರದಲ್ಲಿ 100 ಕಿ.ಮೀ ಆಳದಲ್ಲಿದೆ ಎಂದು ಕ್ಸಿನ್ಹುವಾ ಸುದ್ದಿ ಸಂಸ್ಥೆ ವರದಿ ಮಾಡಿದೆ. ಭೂಕಂಪದ ನಂತರ ಯಾವುದೇ ಹಾನಿ ಅಥವಾ ಸಾವುನೋವುಗಳ ಬಗ್ಗೆ ಪ್ರಾಥಮಿಕ ವರದಿಗಳಿಲ್ಲ ಎಂದು ಪಪುವಾದ ಪ್ರಾದೇಶಿಕ ವಿಪತ್ತು ನಿರ್ವಹಣಾ ಸಂಸ್ಥೆಯ ಹಿರಿಯ ಅಧಿಕಾರಿ ಕ್ಯಾರೋಲಿನ್ ದೃಢಪಡಿಸಿದ್ದಾರೆ. ವಿವರಗಳನ್ನು ನಿರೀಕ್ಷಿಸಲಾಗಿದೆ. ಭೂಕಂಪನಾತ್ಮಕವಾಗಿ ಸಕ್ರಿಯವಾಗಿರುವ “ಪೆಸಿಫಿಕ್ ರಿಂಗ್ ಆಫ್ ಫೈರ್” ನಲ್ಲಿರುವ ಆರ್ಕಿಪೆಲಾಜಿಕ್ ರಾಷ್ಟ್ರವಾದ ಇಂಡೋನೇಷ್ಯಾ ಆಗಾಗ್ಗೆ ಭೂಕಂಪಗಳನ್ನು ಅನುಭವಿಸುತ್ತದೆ. https://kannadanewsnow.com/kannada/two-men-arrested-for-offering-gangajal-at-taj-mahal-video-goes-viral/ https://kannadanewsnow.com/kannada/good-news-for-veerashaiva-lingayat-communities-applications-invited-for-these-schemes/
ನವದೆಹಲಿ: ಸಾವನ್ ತಿಂಗಳ ಸಂದರ್ಭದಲ್ಲಿ ಉತ್ತರ ಪ್ರದೇಶದ ಆಗ್ರಾದ ಅಪ್ರತಿಮ ತಾಜ್ ಮಹಲ್ನಲ್ಲಿ ಗಂಗಾಜಲವನ್ನು ಅರ್ಪಿಸಿದ ಆರೋಪದ ಮೇಲೆ ಬಲಪಂಥೀಯ ಸಂಘಟನೆಯ ಇಬ್ಬರು ವ್ಯಕ್ತಿಗಳನ್ನು ಶನಿವಾರ ಬಂಧಿಸಲಾಗಿದೆ. ತಾಜ್ ಮಹಲ್ ಅನ್ನು ‘ತೇಜೋಮಹಾಲೆ’ ಶಿವ ದೇವಾಲಯವೆಂದು ಪರಿಗಣಿಸಿ ಪ್ಲಾಸ್ಟಿಕ್ ಬಾಟಲಿಗಳಲ್ಲಿ ಪವಿತ್ರ ನೀರನ್ನು ಅರ್ಪಿಸಿದ್ದಾಗಿ ಬಂಧಿತರು ಹೇಳಿದ್ದಾರೆ. ಅಖಿಲ ಭಾರತ ಹಿಂದೂ ಮಹಾಸಭಾದೊಂದಿಗೆ ಸಂಬಂಧ ಹೊಂದಿರುವುದಾಗಿ ಹೇಳಿಕೊಳ್ಳುವ ಇಬ್ಬರನ್ನು ತಾಜ್ ಮಹಲ್ ಆವರಣದಿಂದ ಬಂಧಿಸಲಾಗಿದೆ ಎಂದು ತಾಜ್ಗಂಜ್ ಪೊಲೀಸರು ದೃಢಪಡಿಸಿದ್ದಾರೆ. ಶಹಜಹಾನ್ ಮತ್ತು ಮುಮ್ತಾಜ್ ಮಹಲ್ ಅವರ ಮೂಲ ಸಮಾಧಿಗಳನ್ನು ಹೊಂದಿರುವ ತಾಜ್ ಮಹಲ್ನ ನೆಲಮಾಳಿಗೆಗೆ ಹೋಗುವ ಮುಚ್ಚಿದ ಮೆಟ್ಟಿಲುಗಳ ಮೇಲೆ ಆರೋಪಿಗಳಲ್ಲಿ ಒಬ್ಬರು ಪ್ಲಾಸ್ಟಿಕ್ ಬಾಟಲಿಯಿಂದ ನೀರನ್ನು ಸುರಿಯುವುದನ್ನು ವೀಡಿಯೊ ಕ್ಲಿಪ್ ತೋರಿಸುತ್ತದೆ. https://twitter.com/ygauravyadav/status/1819594042847432879 ತಾಜ್ ಮಹಲ್ ಸ್ಮಾರಕವಲ್ಲ, ಶಿವ ದೇವಾಲಯ ಮತ್ತು ಪವಿತ್ರ ನೀರನ್ನು ಓಂ ಅನ್ನು ಪ್ರದರ್ಶಿಸುವ ಸ್ಟಿಕ್ಕರ್ ಮೇಲೆ ಸುರಿಯಲಾಗಿದೆ ಎಂದು ಅವರು ವಾದಿಸಿದರು ಎಂದು ಪೊಲೀಸರು ತಿಳಿಸಿದ್ದಾರೆ ಎಂದು ಸುದ್ದಿ ಸಂಸ್ಥೆ ಐಎಎನ್ಎಸ್ ವರದಿ…
ಬೆಂಗಳೂರು: ಯಾದಗಿರಿಯ ಸೈಬರ್ ಠಾಣೆಯಲ್ಲಿ ಪಿಎಸ್ಐ ಆಗಿದ್ದಂತ ಪರಶುರಾಮ್ ಅವರು ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿದ್ದರು. ಅವರ ಸಾವಿನ ಪ್ರಕರಣವನ್ನು ರಾಜ್ಯ ಸರ್ಕಾರವು ಸಿಐಡಿ ತನಿಖೆಗೆ ವಹಿಸಿ ಆದೇಶಿಸಿದೆ. ವಾಲ್ಮೀಕಿ ಅಭಿವೃದ್ಧಿ ನಿಗಮದ ಭ್ರಷ್ಟಾಚಾರದಲ್ಲಿ ಪ್ರಾಮಾಣಿಕ ದಲಿತ ಅಧಿಕಾರಿ ಚಂದ್ರಶೇಖರನ್ ಅವರನ್ನು ಬಲಿ ಪಡೆದ ಕಾಂಗ್ರೆಸ್ ಸರ್ಕಾರ, ಈಗ ವರ್ಗಾವಣೆಗಾಗಿ ಲಂಚದ ಬೇಡಿಕೆ ಇಟ್ಟು ಮತ್ತೊಬ್ಬ ದಲಿತ ಅಧಿಕಾರಿ ಯಾದಗಿರಿಯ ಪಿಎಸ್ಐ ಪರಶುರಾಮ್ ಅವರನ್ನ ಬಲಿ ಪಡೆದುಕೊಂಡಿದೆ ಅಂತ ವಿಪಕ್ಷ ನಾಯಕ ಆರ್ ಅಶೋಕ್ ಹೇಳಿದ್ದರು. ಸಿಎಂ ಸಿದ್ಧರಾಮಯ್ಯನವರೇ, ಹಿರಿಯಕ್ಕನ ಚಾಳಿ ಮನೆ ಮಂದಿಗೆಲ್ಲ ಎಂಬಂತೆ, ಮುಖ್ಯಮಂತ್ರಿಗಳು, ಸಚಿವರು ಭ್ರಷ್ಟಾಚಾರಕ್ಕೆ ಇಳಿದಿರುವಾಗ ಇನ್ನು ಶಾಸಕರು ಸುಮ್ಮನಿರುತ್ತಾರೆಯೇ? ಎಂದು ಪ್ರಶ್ನಿಸಿದ್ದರು. ಒತ್ತಡ, ಮಾನಸಿಕ ಕಿರುಕುಳದಿಂದ ಹೃದಯಾಘಾತಕ್ಕೆ ಒಳಗಾಗಿ ಮೃತಪಟ್ಟಿರುವ ಯಾದಗಿರಿ ಪಿಎಸ್ ಐ ಪರಶುರಾಮ್ ಅವರ ಸಾವಿಗೆ ಕಾಂಗ್ರೆಸ್ ಶಾಸಕ ಚೆನ್ನಾರೆಡ್ಡಿ ಪಾಟೀಲ್ ಮತ್ತು ಅವರ ಪುತ್ರ ಸನ್ನಿಗೌಡ ಕಾರಣ ಎಂದು ಅವರ ಪತ್ನಿ ಮತ್ತು ಕುಟುಂಬಸ್ಥರು ಗಂಭೀರ ಆರೋಪ ಮಾಡಿ ಲಿಖಿತ ದೂರು…
ಬೆಂಗಳೂರು: ಕೇರಳದ ವಯನಾಡಿನಲ್ಲಿ ಸಂಭವಿಸಿದ ಭೀಕರ ಭೂಕುಸಿತದಿಂದ ತೊಂದರೆಗೊಳಗಾದ ಜನರ ಸಂಕಷ್ಟಕ್ಕೆ ನೆರೆಯ ಕರ್ನಾಟಕ ಮಿಡಿದಿದೆ. ಕರ್ನಾಟಕ ಸರ್ಕಾರ ಘಟನೆ ಸಂಭವಿಸಿದ ಒಡನೆಯೇ ರಕ್ಷಣೆ ಮತ್ತು ಪರಿಹಾರ ಕಾರ್ಯಕ್ಕೆ ಕೈಜೋಡಿಸಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಯನಾಡಿನಲ್ಲಿ ಮನೆ ಕಳೆದುಕೊಂಡ ಸಂತ್ರಸ್ತರಿಗೆ ನೂರು ಮನೆಗಳನ್ನು ನಿರ್ಮಿಸಿಕೊಡುವುದಾಗಿ ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರಿಗೆ ಭರವಸೆ ನೀಡಿದ್ದಾರೆ. ಇದರೊಂದಿಗೆ ರಾಜ್ಯದ ಕೈಗಾರಿಕೋದ್ಯಮಿಗಳು, ಖಾಸಗಿ ಸಂಘ ಸಂಸ್ಥೆಗಳೂ ಕೂಡ ವಿವಿಧ ರೂಪದಲ್ಲಿ ನೆರವಾಗಲು ಮುಂದಾಗಿವೆ. ಮೈಸೂರು ಜಿಲ್ಲಾಡಳಿತವು ವೈದ್ಯರ ತಂಡದೊಂದಿಗೆ 15 ಫ್ರೀಜರ್ ಬಾಕ್ಸ್ಗಳು, ನಾಲ್ಕು ಟ್ರಾಕ್ಟರ್ ಮೌಂಟೆಡ್ ಕಂಪ್ರೆಸರ್ ಮತ್ತು ಜಾಕ್ ಹ್ಯಾಮರ್, 500 ಬಾಡಿ ಬ್ಯಾಗ್ ಗಳು, ತುರ್ತು ಸಂದರ್ಭಗಳಲ್ಲಿ ಬಳಸುವ 15 ದೀಪಗಳ ವ್ಯವಸ್ಥೆ, 40 ಸ್ಟ್ರೆಚರ್ಗಳು, 288 ಗಮ್ಬೂಟ್ಗಳು, 5 ಸ್ಟೀಲ್ ಕಟ್ಟರ್ಗಳು, 10 ಗ್ಯಾಸ್ ಕಟ್ಟರ್ಗಳು, 2040 ನ್ಯಾಪ್ಕಿನ್ಗಳು, 1000 ಗ್ಲೋವ್ಗಳು, 2050 ಮಾಸ್ಕ್ಗಳು, 1000 ಬಾಟಲ್ ಸ್ಯಾನಿಟೈಸರ್ಗಳು ಹಾಗೂ ಆರೋಗ್ಯ ಇಲಾಖೆಯ ಔ಼ಷಧಿಗಳನ್ನು ಒದಗಿಸಿದೆ. ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ…
ಬೆಂಗಳೂರು: ಇಂದು ನಗರದ ದೊಡ್ಡಕಲ್ಲಸಂದ್ರ ಬಳಿಯ ಮೆಟ್ರೋ ನಿಲ್ದಾಣದಲ್ಲಿ ರೈಲು ಬರುತ್ತಿದ್ದಾಗಲೇ, ರೈಲಿನ ಮುಂದೆ ಜಿಗಿದು, ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಬಗ್ಗೆ ಬಿಎಂಆರ್ ಸಿಎಲ್ ಏನು ಹೇಳಿದೆ ಅಂತ ಮುಂದೆ ಓದಿ. ಇಂದಿನ ಘಟನೆಯ ಬಗ್ಗೆ ಬಿಎಂಆರ್ ಸಿಎಲ್ ಎಕ್ಸ್ ನಲ್ಲಿ ಮಾಹಿತಿ ಹಂಚಿಕೊಂಡು ಪೋಸ್ಟ್ ಮಾಡಿದ್ದು, ಪ್ರಾಥಮಿಕ ಮಾಹಿತಿಯ ಪ್ರಕಾರ, 35 ವರ್ಷದ ವ್ಯಕ್ತಿಯೊಬ್ಬರು ದೊಡ್ಡಕಲ್ಲಸಂದ್ರ ನಿಲ್ದಾಣದಲ್ಲಿ 17.45 ಗಂಟೆಗೆ ಸಮೀಪಿಸುತ್ತಿರುವ ರೈಲಿನ ಮುಂದೆ ಜಿಗಿದಿದ್ದಾರೆ. ಹಸಿರು ಮಾರ್ಗದಲ್ಲಿ ಯಲಚೇನಹಳ್ಳಿ ಮತ್ತು ಸಿಲ್ಕ್ ಇನ್ಸ್ಟಿಟ್ಯೂಟ್ ನಿಲ್ದಾಣಗಳ ನಡುವೆ ರೈಲು ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ, ಉಳಿದ ಮಾರ್ಗದಲ್ಲಿ ಸೇವೆಗಳು ಲಭ್ಯವಿದೆ ಎಂದು ತಿಳಿಸಿದೆ. https://twitter.com/OfficialBMRCL/status/1819723244770914453 https://kannadanewsnow.com/kannada/indian-classical-dancer-yamini-krishnamurthi-passes-away/ https://kannadanewsnow.com/kannada/good-news-for-veerashaiva-lingayat-communities-applications-invited-for-these-schemes/ https://kannadanewsnow.com/kannada/woman-dies-daughter-severely-injured-after-minor-performing-stunt-in-car-hits-scooter/
ನವದೆಹಲಿ: ಭರತನಾಟ್ಯ ಕಲಾವಿದೆ ಯಾಮಿನಿ ಕೃಷ್ಣಮೂರ್ತಿ ಶನಿವಾರ ನವದೆಹಲಿಯ ಅಪೋಲೋ ಆಸ್ಪತ್ರೆಯಲ್ಲಿ ನಿಧನರಾದರು. ಅವರಿಗೆ 84 ವರ್ಷ ವಯಸ್ಸಾಗಿತ್ತು. ವಯೋಸಹಜ ಸಮಸ್ಯೆಗಳಿಂದ ಬಳಲುತ್ತಿದ್ದ ಕೃಷ್ಣಮೂರ್ತಿ ಕಳೆದ ಏಳು ತಿಂಗಳಿನಿಂದ ಐಸಿಯುನಲ್ಲಿದ್ದರು ಎಂದು ಕೃಷ್ಣಮೂರ್ತಿ ಅವರ ಮ್ಯಾನೇಜರ್ ಮತ್ತು ಕಾರ್ಯದರ್ಶಿ ಗಣೇಶ್ ಪಿಟಿಐಗೆ ತಿಳಿಸಿದ್ದಾರೆ. ಕೃಷ್ಣಮೂರ್ತಿ ಅವರ ಪಾರ್ಥಿವ ಶರೀರವನ್ನು ಭಾನುವಾರ ಬೆಳಿಗ್ಗೆ 9 ಗಂಟೆಗೆ ಅವರ ಸಂಸ್ಥೆಯಾದ ಯಾಮಿನಿ ಸ್ಕೂಲ್ ಆಫ್ ಡ್ಯಾನ್ಸ್ ಗೆ ತರಲಾಗುವುದು. ಅವರ ಅಂತಿಮ ವಿಧಿಗಳ ವಿವರಗಳನ್ನು ಇನ್ನೂ ಅಂತಿಮಗೊಳಿಸಲಾಗಿಲ್ಲ. ಅವರಿಗೆ ಇಬ್ಬರು ಸಹೋದರಿಯರಿದ್ದಾರೆ. ಪದ್ಮಶ್ರೀ (1968), ಪದ್ಮಭೂಷಣ (2001) ಮತ್ತು ಪದ್ಮವಿಭೂಷಣ (2016) ಸೇರಿದಂತೆ ಅನೇಕ ಪ್ರಶಸ್ತಿಗಳಿಗೆ ಯಾಮಿನಿ ಕೃಷ್ಣಮೂರ್ತಿ ಭಾಜನರಾಗಿದ್ದರು. ಇಂತಹ ಖ್ಯಾತ ಭರತನಾಟ್ಯ ಕಲಾವಿಧೆ, ಪದ್ಮಪ್ರಶಸ್ತಿ ಪುರಸ್ಕೃತೆ ಇನ್ನಿಲ್ಲವಾಗಿದ್ದಾರೆ. https://kannadanewsnow.com/kannada/bengaluru-youth-commits-suicide-by-jumping-on-metro-rail-tracks/ https://kannadanewsnow.com/kannada/good-news-for-veerashaiva-lingayat-communities-applications-invited-for-these-schemes/
ಬೆಂಗಳೂರು: ನಗರದ ನಮ್ಮ ಮೆಟ್ರೋ ನಿಲ್ದಾಣಕ್ಕೆ ಬಂದಿದ್ದಂತ ಯುವಕನೊಬ್ಬ ಹಳಿಗಳ ಮೇಲೆ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವಂತ ಘಟನೆ ದೊಡ್ಡಕಲ್ಲಸಂದ್ರದಲ್ಲಿ ನಡೆದಿದೆ. ಹೀಗಾಗಿ ಹಸಿರು ಮಾರ್ಗದ ಮೆಟ್ರೋ ಸಂಚಾರದಲ್ಲಿ ವ್ಯತ್ಯಯ ಕೂಡ ಉಂಟಾಗಿದೆ. ಬೆಂಗಳೂರಿನ ದೊಡ್ಡಕಲ್ಲಸಂದ್ರದ ನಮ್ಮ ಮೆಟ್ರೋ ನಿಲ್ದಾಣದಲ್ಲಿ ಮೆಟ್ರೋ ಹಳಿಗಳ ಮೇಲೆ ಹಾರಿದಂತ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರೋದಾಗಿ ತಿಳಿದು ಬಂದಿದೆ. ವಿಷಯ ತಿಳಿದು ಸ್ಥಳಕ್ಕೆ ಕೋಣನಕುಂಟೆ ಠಾಣೆಯ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಈ ಘಟನೆಯಿಂದ ನಮ್ಮ ಮೆಟ್ರೋ ನಿಲ್ದಾಣದ ಹಸಿರು ಮಾರ್ಗದಲ್ಲಿ ವ್ಯತ್ಯಯ ಉಂಟಾಗಿದೆ. ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗಿದೆ. https://kannadanewsnow.com/kannada/corruption-is-your-parents-your-relatives-dks-sting-to-bjp-jds-leaders/ https://kannadanewsnow.com/kannada/good-news-for-veerashaiva-lingayat-communities-applications-invited-for-these-schemes/
ರಾಮನಗರ : “ಭ್ರಷ್ಟಾಚಾರವೇ ನಿಮ್ಮ, ತಾಯಿ ತಂದೆ, ಭ್ರಷ್ಟಾಚಾರವೇ ನಿಮ್ಮ ಬಂಧು ಬಳಗ, ಭ್ರಷ್ಟಾಚಾರ ಮಾಡಿರುವ ನಿಮ್ಮನ್ನು ಮೆಚ್ಚನಾ ಪರಮಾತ್ಮನು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಬಿಜೆಪಿ ಹಾಗೂ ಜೆಡಿಎಸ್ ನಾಯಕರನ್ನು ಹರಿತ ಮಾತುಗಳಿಂದ ಕುಟುಕಿದರು. ಬಿಜೆಪಿ-ಜೆಡಿಎಸ್ ಪಾದಯಾತ್ರೆ ವಿರುದ್ಧ ರಾಮನಗರದಲ್ಲಿ ಶನಿವಾರ ನಡೆದ ಜನಾಂದೋಲನ ಸಭೆಯಲ್ಲಿ ಮಾತನಾಡಿದ ಡಿ.ಕೆ. ಶಿವಕುಮಾರ್ ಅವರು, “ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಬೆಂಗಳೂರು-ಮೈಸೂರು ರಸ್ತೆಯಲ್ಲಿ ಪಾದಯಾತ್ರೆ ಮಾಡುವ ಮೂಲಕ ಅವರ ಭ್ರಷ್ಟಾಚಾರ ವಿಚಾರಗಳನ್ನು ಅನಾವರಣಗೊಳಿಸುವುದರ ಜತೆಗೆ ನಮ್ಮ ಪಕ್ಷ ಸಂಘಟನೆಗೂ ಒಂದು ಅವಕಾಶ ಕಲ್ಪಿಸಿಕೊಟ್ಟಿದ್ದಾರೆ. ಅದಕ್ಕಾಗಿ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ” ಎಂದರು. ಜನ ನನ್ನ ನಾಯಕತ್ವಕ್ಕೆ 135 ಸೀಟು, ಕುಮಾರಸ್ವಾಮಿ ನಾಯಕತ್ವಕ್ಕೆ 19 ಸೀಟು ಕೊಟ್ಟಿದ್ದಾರೆ: “ನಾನು ಶುಕ್ರವಾರದಂದು ಬಿಡದಿಯಲ್ಲಿ ಬೇಕಂತಲೇ ಕುಮಾರಸ್ವಾಮಿ ಅವರಿಗೆ ಕೆಲವು ಪ್ರಶ್ನೆಗಳನ್ನು ಕೇಳಿದೆ. ನನ್ನನ್ನು ಜೈಲಿಗೆ ಹಾಕಲು ಮಿಲಿಟರಿ ಬಂದು ಕರೆದುಕೊಂಡು ಹೋಗಲಿದೆ ಎಂದು ಕುಮಾರಸ್ವಾಮಿ ಅವರು ಹಿಂದೆ ಹೇಳಿಕೆ ನೀಡಿದ್ದರು. ನಾನು ಕೇಂದ್ರ ಮಂತ್ರಿಯಾಗಿದ್ದು, ನಿಮ್ಮನ್ನು…
ರಾಮನಗರ: ಮುಖ್ಯಮಂತ್ರಿ ಸಿದ್ದರಾಮಯ್ಯನವರ ಪತ್ನಿ ಅವರಿಗೆ ಮುಡಾ ನಿವೇಶನ ಕೊಟ್ಟಾಗ ಸಿಎಂ ಆಗಿದ್ದವರು ಯಾರು? ಆಗ ಕೊಟ್ಟಾಗ ಹಗರಣ ಅನಿಸಲಿಲ್ಲವೇ? ಈಗ ಎತ್ತುತ್ತಿದ್ದೀರಲ್ಲ ಅಂತ ಡಿಸಿಎಂ ಡಿ.ಕೆ ಶಿವಕುಮಾರ್ ವಾಗ್ಧಾಳಿ ನಡೆಸಿದರು. ಬಿಜೆಪಿ-ಜೆಡಿಎಸ್ ಪಾದಯಾತ್ರೆ ವಿರುದ್ಧ ರಾಮನಗರದಲ್ಲಿ ಶನಿವಾರ ನಡೆದ ಜನಾಂದೋಲನ ಸಭೆಯಲ್ಲಿ ಮಾತನಾಡಿದ ಅವರು, “ಸಿದ್ದರಾಮಯ್ಯ ಅವರ ಪತ್ನಿಗೆ ಅವರ ಸಹೋದರ ಅರಿಶಿನ ಕುಂಕುಮಕ್ಕೆ ದಾನವಾಗಿ ನೀಡಿದ ಜಮೀನಿನ ವಿಚಾರದಲ್ಲಿ ಅಕ್ರಮ ನಡೆದಿದೆಯಾ? ಅವರು ಸರ್ಕಾರಿ ಜಮೀನು ಕಬಳಿಸಿದ್ದಾರಾ? ಅಕ್ರಮವಾಗಿ ಜಮೀನು ಮಂಜೂರಾತಿ ಮಾಡಿಕೊಂಡಿದ್ದಾರಾ? ಅವರ ಜಮೀನನ್ನು ಮುಡಾದವರು ಅಕ್ರಮವಾಗಿ ಒತ್ತುವರಿ ಮಾಡಿಕೊಂಡಿದ್ದ ಕಾರಣಕ್ಕೆ ಪರಿಹಾರವಾಗಿ ನಿವೇಶನ ಪಡೆದುಕೊಂಡಿದ್ದಾರೆ. ಅದರಲ್ಲಿ ತಪ್ಪೇನಿದೆ?” ಎಂದು ಕೇಳಿದರು. “ನಿಮ್ಮ ಸರ್ಕಾರ ಅಧಿಕಾರದಲ್ಲಿದ್ದಾಗ, ಬೊಮ್ಮಾಯಿ ಅವರು ರಾಜ್ಯದಲ್ಲಿ ಮುಖ್ಯಮಂತ್ರಿಯಾಗಿದ್ದಾಗ ನಿವೇಶನ ನೀಡಿದ್ದೀರಿ. ಈ ನಿವೇಶನಗಳನ್ನು ಈಗ ಸಚಿವರಾಗಿರುವ ಭೈರತಿ ಸುರೇಶ್ ಕೊಟ್ಟಿದ್ದಾರಾ? ಸಿದ್ದರಾಮಯ್ಯ ಈ ನಿವೇಶನ ನೀಡಲು ಸಹಿ ಹಾಕಿದ್ದಾರಾ? ಬಿಜೆಪಿ ಅಧಿಕಾರದಲ್ಲಿದ್ದಾಗ, ಬಿಜೆಪಿಯವರು ಮುಡಾದಲ್ಲಿ ಅಧಿಕಾರ ಹೊಂದಿದ್ದಾಗ ಈ ನಿವೇಶನ ಹಂಚಿಕೆ ಮಾಡಲಾಗಿದೆ. ಮುಡಾದವರು…
ರಾಮನಗರ: ಮಿಸ್ಟರ್ ವಿಜಯೇಂದ್ರ, ನಿಮ್ಮ ತಂದೆ ಕಣ್ಣೀರಾಕುತ್ತಾ ರಾಜೀನಾಮೆ ಕೊಟ್ಟಿದ್ದೇಕೆ? ಅದಕ್ಕೆ ಕಾರಣ ಯಾರು ಎಂಬುದನ್ನು ಮರೆತು ಬಿಟ್ರಾ ಅಂತ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಪ್ರಶ್ನಿಸಿದ್ದಾರೆ. ಬಿಜೆಪಿ-ಜೆಡಿಎಸ್ ಪಾದಯಾತ್ರೆ ವಿರುದ್ಧ ರಾಮನಗರದಲ್ಲಿ ಶನಿವಾರ ನಡೆದ ಜನಾಂದೋಲನ ಸಭೆಯಲ್ಲಿ ಮಾತನಾಡಿದ ಅವರು, “ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ನಿನ್ನೆ ನನ್ನನ್ನು ಭ್ರಷ್ಟಾಚಾರದ ಪಿತಾಮಹ ಎಂದು ಕರೆದಿದ್ದಾರೆ. ಮಿಸ್ಟರ್ ವಿಜಯೇಂದ್ರ, ನಿಮ್ಮ ತಂದೆ ಏನು ತಪ್ಪು ಮಾಡಿದ್ದರು? ಅವರು ಯಾಕೆ ರಾಜೀನಾಮೆ ಕೊಟ್ಟರು? ನಿಮ್ಮ ತಂದೆ ವಿಧಾನಸೌಧದಲ್ಲಿ ಕಣ್ಣೀರು ಹಾಕುತ್ತಾ ರಾಜೀನಾಮೆ ನೀಡಿದ್ದು ಏಕೆ? ಈ ಬಗ್ಗೆ ನೀವು ಉತ್ತರ ನೀಡಬೇಕು ಎಂದರು. ಈ ಹಿಂದೆ ಯಡಿಯೂರಪ್ಪ ಅವರು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿ ಜೈಲಿಗೆ ಹೋಗಿದ್ದೇಕೆ? ಯಡಿಯೂರಪ್ಪ ಸಿಎಂ ಆಗಿದ್ದಾಗ ಅವರ ವಿಚಾರಣೆಗೆ ರಾಜ್ಯಪಾಲರು ಅನುಮತಿ ನೀಡಿದ್ದೇಕೆ? ವಿಜಯೇಂದ್ರ ಪಾದಯಾತ್ರೆ ಮಾಡುವ ಬದಲು, ಯಡಿಯೂರಪ್ಪ ಅವರು ಜೈಲಿಗೆ ಹೋಗಲು ಜೆಡಿಎಸ್ ಕಾರಣವಾಗಿದ್ದರ ಬಗ್ಗೆಯೂ ಉತ್ತರ ನೀಡಬೇಕು” ಎಂದು ಸವಾಲು ಹಾಕಿದರು. ದೇವೇಗೌಡರ ಕುಟುಂಬದ ಭೂಕಬಳಿಕೆ…