Author: kannadanewsnow09

ಬಳ್ಳಾರಿ: ಜಿಲ್ಲೆಯಲ್ಲಿ ಶಾಲಾ ಅವಧಿಯಲ್ಲೇ ವಿದ್ಯಾರ್ಥಿಗಳು ವಿಷಕಾರಿ ಬೀಜದ ಹಣ್ಣು ಸೇವಿಸಿದ್ದರಿಂದ, ತೀವ್ರವಾಗಿ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿರುವಂತ ಘಟನೆ ನಡೆದಿದೆ. ಬಳ್ಳಾರಿ ಜಿಲ್ಲೆಯ ಸಿರಗುಪ್ಪ ತಾಲ್ಲೂಕಿನ ತೆಕ್ಕಲಕೋಟೆ ಗ್ರಾಮದಲ್ಲಿನ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಮಕ್ಕಳು ಶಾಲಾ ವಿರಾಮದ ಸಂದರ್ಭದಲ್ಲಿ ವಿಷಕಾರಿ ಬೀಜವಿರುವಂತ ಕಾಡು ಹಣ್ಣುಗಳನ್ನು ಸೇವಿಸಿದ್ದಾರೆ. ಈ ಹಣ್ಣುಗಳನ್ನು ತಿಂದ ಕೂಡಲೇ, ಅಸ್ವಸ್ಥಗೊಂಡಿದ್ದಾರೆ. ವಿದ್ಯಾರ್ಥಿಗಳು ವಿಷಕಾರಿ ಬೀಜಗಳನ್ನು ತಿಂದು ಅಸ್ವಸ್ಥಗೊಂಡ ವಿಷಯ ತಿಳಿದಂತ ಶಿಕ್ಷಕರು, ಕೂಡಲೇ ಅವರನ್ನು ಸಮೀಪದ ಪ್ರಾಥಮಿಕ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಿದ್ದಾರೆ. ಆ ಬಳಿಕ ಬಳ್ಳಾರಿಯ ವಿಮ್ಸ್ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗಾಗಿ ದಾಖಲಿಸಿದ್ದಾರೆ. ಇದೀಗ ವಿಷದ ಬೀಜದ ಹಣ್ಣುಗಳನ್ನು ಸೇವಿಸಿ, ವಾಂತಿ, ಬೇಧಿಯಿಂದ ತೀವ್ರ ಅಸ್ವಸ್ಥಗೊಂಡಿದ್ದ ವಿದ್ಯಾರ್ಥಿಗಳು, ಚಿಕಿತ್ಸೆಯ ಬಳಿಕ ಚೇತರಿಸಿಕೊಂಡಿದ್ದಾರೆ. ಸಂಪೂರ್ಣ ಗುಣಮುಖರಾದ ಬಳಿಕ ಡಿಸ್ಚಾರ್ಜ್ ಮಾಡಲಾಗುತ್ತದೆ ಎಂಬುದಾಗಿ ವಿಮ್ಸ್ ನಿರ್ದೇಶಕ ಡಾ.ಗಂಗಾಧರ ಗೌಡ ತಿಳಿಸಿದ್ದಾರೆ. https://kannadanewsnow.com/kannada/indias-first-khirct-project-to-be-launched-on-august-23-m-b-patil/ https://kannadanewsnow.com/kannada/good-news-for-veerashaiva-lingayat-communities-applications-invited-for-these-schemes/

Read More

ಬೆಂಗಳೂರು: ದೇಶದಲ್ಲೇ ಪ್ರಪ್ರಥಮ ಎನ್ನಲಾದ, ಬಹು ಮಹತ್ತ್ವಾಕಾಂಕ್ಷೆಯ `ನಾಲೆಡ್ಜ್, ಹೆಲ್ತ್ ಇನ್ನೋವೇಶನ್ ಮತ್ತು ರೀಸರ್ಚ್ ಸಿಟಿ’ (ಕೆಎಚ್ಐಆರ್ ಸಿಟಿ) ಯೋಜನೆಯ ಮೊದಲನೇ ಹಂತಕ್ಕೆ ಆ.23ರ ಶುಕ್ರವಾರ ಚಾಲನೆ ನೀಡಲಾಗುವುದು ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಹಾಗೂ ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ ಬಿ ಪಾಟೀಲ ತಿಳಿಸಿದ್ದಾರೆ. ಶನಿವಾರ ಈ ಬಗ್ಗೆ ಪ್ರಕಟಣೆ ನೀಡಿರುವ ಅವರು, `ನಗರದಿಂದ 60 ಕಿ.ಮೀ. ದೂರದಲ್ಲಿ, ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಸಮೀಪ ಒಟ್ಟು 2,000 ಎಕರೆಯಲ್ಲಿ ಕೆಎಚ್ಐಆರ್ ಸಿಟಿ ಅಭಿವೃದ್ಧಿಪಡಿಸಲಾಗುವುದು. ಮೊದಲ ಹಂತದಲ್ಲಿ ಒಂದು ಸಾವಿರ ಎಕರೆ ಜಾಗದಲ್ಲಿ ಯೋಜನೆ ತಲೆ ಎತ್ತಲಿದೆ. ಒಟ್ಟು ಎರಡೂ ಹಂತಗಳಲ್ಲಿ 40 ಸಾವಿರ ಕೋಟಿ ರೂ.ಗಳಿಗಿಂತಲೂ ಹೆಚ್ಚು ಹೂಡಿಕೆ ಆಗಲಿದ್ದು, 50 ಸಾವಿರ ಉದ್ಯೋಗಗಳು ಸೃಷ್ಟಿಯಾಗಲಿವೆ. 23ರ ಬೆಳಿಗ್ಗೆ 11 ಗಂಟೆಗೆ ನಗರದಲ್ಲಿ ನಡೆಯಲಿರುವ ಸಮಾರಂಭದಲ್ಲಿ ಕೆಎಚ್ಐಆರ್ ಸಿಟಿಗೆ ಚಾಲನೆ ಸಿಗಲಿದೆ’ ಎಂದು ಮಾಹಿತಿ ನೀಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಅನೇಕ ಗಣ್ಯರು ಈ ಸಮಾರಂಭಕ್ಕೆ ಸಾಕ್ಷಿಯಾಗಲಿದ್ದಾರೆ.…

Read More

ಬೆಂಗಳೂರು: ಅಂಗಾಂಗ ದಾನಿಗಳ ಸಂಖ್ಯೆಯನ್ನ ಹೆಚ್ವಿಸುವತ್ತ ಹಲವು ಕಾರ್ಯಕ್ರಮಗಳನ್ನ ಹಮ್ಮಿಕೊಂಡಿರುವ ಆರೋಗ್ಯ ಇಲಾಖೆ ಬೆಳಗಾವಿಯಲ್ಲಿ ಇಂದು ಭಾರತೀಯ ಅಂಗಾಂಗ ದಾನ ದಿನಾಚಾರಣೆಯನ್ನ ಆಚರಸಿತು. ಕಾರ್ಯಕ್ರಮ ಉದ್ಘಾಟಿಸಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಅಂಗಾಂಗ ದಾನಿಗಳ ಕುಟುಂಬಗಳನ್ನ ಸನ್ಮಾನಿಸಿ ಗೌರವಿಸುವುದರ ಜೊತೆಗೆ ರಾಜ್ಯ ಸರ್ಕಾರದ ಪ್ರಶಂಸಾ ಪತ್ರ ವಿತರಿಸಿದರು.‌ ಬಳಿಕ ಮಾತನಾಡಿದ ಆರೋಗ್ಯ ಸಚಿವರು, ದೇಶದಲ್ಲಿಯೇ ಅಂಗಾಂಗ ದಾನದಲ್ಲಿ ಕರ್ನಾಟಕ ಎರಡನೇ ಸ್ಥಾನದಲ್ಲಿದ್ದರೂ, ದಾನಿಗಳ ಸಂಖ್ಯೆ ನಿರೀಕ್ಷೆಗೆ ತಕ್ಕಂತೆ ಇಲ್ಲ ಎಂದರು. ಸಾವಿನ ಅಂಚಿನಲ್ಲಿರುವಾಗ ಇನ್ನೊಬ್ಬರ ಜೀವ ಉಳಿಸಲು ಅಂಗಾಂಗ ದಾನ ಮಾಡುವ ನಿರ್ಣಯ ಕೈಗೊಳ್ಳುವುದು ನಿಜಕ್ಕೂ ಪುಣ್ಯದ ಕೆಲಸ. ಅಂಗಾಂಗಗಳಿಗೆ ಇಂದು ಹೆಚ್ಚು ಬೇಡಿಕೆಯಿದೆ.‌ ಆದರೆ ಬೇಡಿಕೆಗೆ ತಕ್ಕಂತೆ ಅಂಗಾಂಗಗಳ ಪೂರೈಕೆ ಮಾಡಲು ಸಾಧ್ಯವಾಗುತ್ತಿಲ್ಲ. ಸುಮಾರು 8500 ರೋಗಿಗಳು ಇಂದು ಅಂಗಾಂಗಗಳಿಗೆ ಕಾಯುತ್ತಿದ್ದಾರೆ. ಹೆಚ್ಚಿನ ಸಂಖ್ಯೆಯಲ್ಲಿ ಅಂಗಾಂಗ ದಾನಕ್ಕೆ ನಾವೆಲ್ಲರು ಇಂದು ಪ್ರತಿಜ್ಞೆ ಮಾಡಬೇಕಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅಭಿಪ್ರಾಯ ವ್ಯಕ್ತಪಡಿಸಿದರು. ಅಂಗಾಂಗ ದಾನವನ್ನ ಪ್ರೇರಿಪಸಲು ಆರೋಗ್ಯ ಇಲಾಖೆ ವಿಭಿನ್ನ…

Read More

ನವದೆಹಲಿ: ಪ್ರತಿ ವರ್ಷ ನೂರಾರು ಜೀವಗಳನ್ನು ಬಲಿತೆಗೆದುಕೊಳ್ಳುವ ಮೂಢನಂಬಿಕೆಗಳನ್ನು ನಿರ್ಮೂಲನೆ ಮಾಡಲು ಮತ್ತು ಜನರಲ್ಲಿ ವೈಜ್ಞಾನಿಕ ಮನೋಭಾವವನ್ನು ಬೆಳೆಸಲು ಕ್ರಮಗಳನ್ನು ತೆಗೆದುಕೊಳ್ಳಲು ಸರ್ಕಾರಗಳಿಗೆ ನಿರ್ದೇಶನ ನೀಡುವಂತೆ ಕೋರಿ ಸರಣಿ ಪಿಐಎಲ್ ಅರ್ಜಿದಾರರನ್ನು ಸುಪ್ರೀಂ ಕೋರ್ಟ್ ಶುಕ್ರವಾರ ಟೀಕಿಸಿದೆ. ಸಿಜೆಐ ಡಿ.ವೈ.ಚಂದ್ರಚೂಡ್ ನೇತೃತ್ವದ ಪೀಠವು ಅರ್ಜಿದಾರ-ವಕೀಲ ಅಶ್ವಿನಿ ಉಪಾಧ್ಯಾಯ ಅವರನ್ನು ಕೇಳಿತು. “ಜನರಲ್ಲಿ ವೈಜ್ಞಾನಿಕ ಮನೋಭಾವವನ್ನು ಬೆಳೆಸಲು ನ್ಯಾಯಾಂಗ ಆದೇಶಗಳಿಂದ ಸಾಧ್ಯವಿಲ್ಲ.” “ಶಾಲೆಗಳಲ್ಲಿ ವಿದ್ಯಾರ್ಥಿಗಳು ಏನು ಕಲಿಯಬೇಕು ಎಂದು ನಾವು ನಿರ್ದೇಶಿಸಲು ಸಾಧ್ಯವಿಲ್ಲ ಎಂದು ಹೇಳಿದರು. ಇವು ಸರ್ಕಾರಗಳ ಶಿಕ್ಷಣ ಇಲಾಖೆಯ ತಜ್ಞರ ನೀತಿ ವ್ಯಾಪ್ತಿಯಲ್ಲಿವೆ. ವಿದ್ಯಾರ್ಥಿಗಳು ಈಗಾಗಲೇ ವ್ಯಾಪಕವಾಗಿ ವಿಸ್ತರಿಸಿದ ಅಧ್ಯಯನ ಕೋರ್ಸ್ ಗಳಿಂದ ಹೊರೆಯಾಗಿದ್ದಾರೆ. ನ್ಯಾಯಾಂಗ ಆದೇಶದಿಂದ ನಾವು ಅದನ್ನು ಸೇರಿಸಲು ಸಾಧ್ಯವಿಲ್ಲ” ಎಂದು ಸಿಜೆಐ ಹೇಳಿದರು. ಇದು ಸಾಮಾಜಿಕ ಸುಧಾರಣೆಗಾಗಿ ನಿಜವಾದ ಪಿಐಎಲ್ ಎಂದು ಅರ್ಜಿದಾರರು ಹೇಳಿದಾಗ, ಸಿಜೆಐ, “ಸಾಂವಿಧಾನಿಕ ನ್ಯಾಯಾಲಯಗಳಲ್ಲಿ ಪಿಐಎಲ್ಗಳನ್ನು ಸಲ್ಲಿಸುವ ಮೂಲಕ ಒಬ್ಬರು ಸಮಾಜ ಸುಧಾರಕರಾಗಲು ಸಾಧ್ಯವಿಲ್ಲ. ಮೂಢನಂಬಿಕೆಗಳ ವಿರುದ್ಧ ಜನರಿಗೆ ಶಿಕ್ಷಣ ನೀಡಲು…

Read More

ಬೆಂಗಳೂರು :  2024-25 ನೇ ಸಾಲಿಗೆ ವೀರಶೈವ-ಲಿಂಗಾಯತ ಜಾತಿ ಹಾಗೂ ಉಪಜಾತಿಗೆ ಸೇರಿದ ಸಮುದಾಯದ ಜನರ (ಪ್ರವರ್ಗ-110) ಅಭಿವೃದ್ಧಿಗಾಗಿ ಶೈಕ್ಷಣಿಕ ಸಾಲ ಯೋಜನೆ (ಬಸದಬೆಳಗು ಮತ್ತು ವಿದೇಶ ವಿದ್ಯಾವಿಕಾಸ), ಜೀವಜಲ (ಗಂಗಾಕಲ್ಯಾಣ), ಸ್ವಯಂ ಉದ್ಯೋಗ ಯೋಜನೆಗಳು (ಕಾಯಕಕಿರಣ, ಸ್ವಾವಲಂಭ ಸಾರಥಿ, ವಿಭೂತಿ ನಿರ್ಮಾಣ ಘಟಕ, ಭೋಜನಾಲಯ ಕೇಂದ್ರ ಮತ್ತು ಸ್ವಯಂ ಉದ್ಯೋಗ ಬ್ಯಾಂಕ್ ಸಹಯೋಗದೊಂದಿಗೆ ) ಗಳಿಗೆ ಸೇವಾಸಿಂಧು ತಂತ್ರಾಂಶದ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಹ ಫಲಾಪೇಕ್ಷಿಗಳು ಗ್ರಾಮ ಒನ್/ ಬೆಂಗಳೂರು ಬನ್/ ಕರ್ನಾಟಕ ಒನ್ ನಾಗರೀಕ ಸೇವಾ ಕೇಂದ್ರಗಳಲ್ಲಿ ದಾಖಲೆಗಳೊಂದಿಗೆ ಸೇವಾಸಿಂಧು ಪೋರ್ಟ‌ಲ್‌ನಲ್ಲಿ ಅರ್ಜಿಗಳನ್ನು ಸಲ್ಲಿಸಬಹುದು. 2023-24 ನೇ ಸಾಲಿಗೆ ಅರ್ಜಿ ಸಲ್ಲಿಸಿ ಆಯ್ಕೆಯಾಗದವರು ಆದೇ ಯೋಜನೆಗೆ ಈ ವರ್ಷ ಮರುಅರ್ಜಿ ಸಲ್ಲಿಸುವ ಅಗತ್ಯತೆ ಇರುವುದಿಲ್ಲ. ಸ್ವಾತಂತ್ರ್ಯ ಅಮೃತ ಮಹೋತ್ಸವದ ಮುನ್ನಡೆ ಯೋಜನೆಯಡಿ ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ತರಬೇತಿಯನ್ನು ಸರ್ಕಾರಿ ಸ್ವಾಮ್ಯದ ಸಂಸ್ಥೆಗಳಾದ ITIs, GTTC KGTTL ATDC, VTU ಮೂಲಕ ತರಬೇತಿಯನ್ನು ಪಡೆಯಲು ಅರ್ಜಿದಾರರು https://www.kaushalkar.com/…

Read More

ಬೆಂಗಳೂರು: ನಗರದ ಹೊರ ವಲಯದಲ್ಲಿರುವಂತ ನೈಸ್ ರಸ್ತೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಬೈಕ್ ಸಂಚಾರವನ್ನು ರಾತ್ರಿಯ ವೇಳೆಯಲ್ಲಿ ನಿಷೇಧಿಸಲಾಗಿದೆ. ಈ ಬಗ್ಗೆ ಬೆಂಗಳೂರು ನಗರ ಸಂಚಾರ ಪೊಲೀಸರಿಂದ ಮಾಹಿತಿ ನೀಡಲಾಗಿದ್ದು, ನೈಸ್ ರಸ್ತೆಯಲ್ಲಿ ದಿನದಿಂದ ದಿನಕ್ಕೆ ವಾಹನಗಳ ಅಪಘಾತ ಹೆಚ್ಚಾಗುತ್ತಿವೆ. ಅದರಲ್ಲೂ ದ್ವಿಚಕ್ರ ವಾಹನಗಳ ಸವಾರರು ಅಪಘಾತಕ್ಕೆ ಈಡಾಗುತ್ತಿರುವುದಾಗಿ ಕಳವಳ ವ್ಯಕ್ತ ಪಡಿಸಿದೆ. ಈ ಹಿನ್ನಲೆಯಲ್ಲಿ ಅಪಘಾತಗಳನ್ನು ನಿಯಂತ್ರಿಸುವ ದೃಷ್ಟಿಯಿಂದ ರಾತ್ರಿ 10 ರಿಂದ ಬೆಳಿಗ್ಗೆ 5ರ ವರೆಗೆ ದ್ವಿಚಕ್ರ ವಾಹನಗಳ ಸಂಚಾರ ನಿಷೇಧಿಸಲಾಗಿದೆ. ಹೀಗಾಗಿ ದ್ವಿಚಕ್ರ ವಾಹನ ಸವಾರರು ಸಹಕರಿಸುವಂತೆ ಕೋರಿದೆ. https://twitter.com/KarnatakaVarthe/status/1819691918621544919 https://kannadanewsnow.com/kannada/leopard-with-different-coloured-eyes-caught-on-camera-in-bandipur-tiger-reserve/ https://kannadanewsnow.com/kannada/siddaramaiah-has-trouble-if-he-wears-a-blanket-all-his-difficulties-will-be-solved-cms-fan/

Read More

ಬೆಂಗಳೂರು: ರಾಜ್ಯ ವನ್ಯಜೀವಿ ಮಂಡಳಿ ಸದಸ್ಯರೂ ಆದ ವನ್ಯಜೀವಿ ಛಾಯಾಗ್ರಹಕ ಧ್ರುವ್ ಪಾಟೀಲ ಅವರು ಬೇರೆ ಬೇರೆ ಬಣ್ಣಗಳ ಕಣ್ಣುಗಳಿರುವ ಅಪರೂಪದ ಚಿರತೆಯನ್ನು ತಮ್ಮ ಕ್ಯಾಮೆರಾದಲ್ಲಿ ಬಂಡೀಪುರ ಹುಲಿ ಅಭಯಾರಣ್ಯ ಪ್ರದೇಶದಲ್ಲಿ ಸೆರೆಹಿಡಿದಿದ್ದಾರೆ. ಬಹಳ ಅಪರೂಪ ಎನ್ನಬಹುದಾದ ವಿಭಿನ್ನ ಬಣ್ಣಗಳ ಕಣ್ಣುಗಳು ಚಿರತೆಯಲ್ಲಿ ಕಂಡುಬರುವುದಕ್ಕೆ ವಂಶವಾಹಿನಿ ರೂಪಾಂತರಗಳು ಕಾರಣವಾಗುತ್ತವೆ. ಇದನ್ನು ವೈಜ್ಞಾನಿಕ ಪರಿಭಾಷೆಯಲ್ಲಿ ‘ಹೆಟೆರೋಕ್ರೋಮಿಯಾ ಇರಿಡಂ’ ಎನ್ನಲಾಗುತ್ತದೆ. ಇದನ್ನು ಧ್ರುವ್ ಅವರು ಕ್ಯಾಮೆರಾದಲ್ಲಿ ಸೆರೆ ಹಿಡಿದಿರುವುದು ಚಿರತೆಗಳಿಗೆ ಸಂಬಂಧಿಸಿದ ದಾಖಲೀಕರಣಕ್ಕೆ ಒಂದು ಉತ್ತಮ ಕೊಡುಗೆಯಾಗಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಭಾರಿ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಅವರ ಮಗನಾದ 21 ವರ್ಷದ ಧ್ರುವ್ ಹಲವು ವರ್ಷಗಳಿಂದಲೂ ಹೆಚ್ಚಿನ ಸಮಯವನ್ನು ಬಂಡೀಪುರ, ಕಬಿನಿ, ದಾಂಡೇಲಿ ಸರಹದ್ದಿನ ಕಾಡುಗಳಲ್ಲಿ ಕಳೆಯುತ್ತಾರೆ. ವನ್ಯಜೀವಿ ಛಾಯಾಗ್ರಹಣದ ಜೊತೆಗೆ ಜೀವ ವೈವಿಧ್ಯ ಅವಲೋಕನದಲ್ಲಿ ಆಸಕ್ತರಾಗಿರುವ ಅವರು ಆಗಾಗ ಕಾಡಿನಲ್ಲಿ ಸಫಾರಿ ಮಾಡುವುದನ್ನು ರೂಡಿಸಿಕೊಂಡಿದ್ದು, ಈ ಮುಂಚೆ ಕಬಿನಿ ಅಣೆಕಟ್ಟು ಸಮೀಪದ ಅರಣ್ಯದಲ್ಲಿ ಕಪ್ಪು ಚಿರತೆಯೊಂದನ್ನು…

Read More

ಶಿರಾಡಿ ಘಾಟ್ ಆ 3: ಶಿರಾಡ್ ಘಾಟ್ ಗುಡ್ಡ ಕುಸಿತದ ಭೀಕರತೆಗೆ ಶಾಕ್ ಆದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಪ್ರಾದೇಶಿಕ ಅಧಿಕಾರಿ ವಿಲಾಸ್ ಅವರಿಗೆ ಸಾಲು ಸಾಲು ಪ್ರಶ್ನೆಗಳ ಸುರಿಮಳೆಗೈದರು. ಗುಡ್ಡ ಕುಸಿತದ ಸ್ಥಳ ಪರಿಶೀಲನೆಗೆ ಅಧಿಕಾರಿಗಳ ತಂಡದೊಂದಿಗೆ ರಸ್ತೆ ಮಾರ್ಗವಾಗಿ ಘಟನಾ ಸ್ಥಳಕ್ಕೆ ಆಗಮಿಸಿದ ಮುಖ್ಯಮಂತ್ರಿಗಳು ರಸ್ತೆ ನಿರ್ಮಾಣಕ್ಕಾಗಿ ಗುಡ್ಡಗಳನ್ನು 90 ಡಿಗ್ರಿಯಲ್ಲಿ ನೇರವಾಗಿ ಸೀಳಿರುವುದಕ್ಕೆ ಅಸಮಾಧಾನಗೊಂಡು ಗುಡ್ಡ ಕುಸಿತಕ್ಕೆ ಇದೂ ಕೂಡ ಪ್ರಮುಖ ಕಾರಣ ಎಂದು ಅಸಮಾಧಾನ ವ್ಯಕ್ತಪಡಿಸಿದರು. ರಸ್ತೆ ಕಾಮಗಾರಿ ಕುರಿತಂತೆ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಅವರು ಸಿಎಂ ಗೆ ವಿವರಿಸುತ್ತಾ, “ಒಟ್ಟು 45 km ನಲ್ಲಿ 35 km ಹೈವೇ ಕಾಮಗಾರಿ ಮುಗಿದಿದೆ. 10 km ಬಾಕಿ ಇದೆ. ಆದರೆ ಇಲ್ಲಿಯವರೆಗೂ ಎಲ್ಲೂ ತಡೆಗೋಡೆಗಳನ್ಜು ನಿರ್ಮಿಸಿಲ್ಲ, ಮಣ್ಣಿನ ಗುಣಮಟ್ಟ ಪರೀಕ್ಷೆ ನಡೆಸಿ ಅದರ ಆಧಾರದಲ್ಲಿ ಸುರಕ್ಷತಾ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡಂತೆ ಇಲ್ಲ” ಎಂದು ವಿವರಿಸಿದರು. ಮೊಣಕಾಲುದ್ದುದ ಕೆಸರಲ್ಲೇ ಗುಡ್ಡ…

Read More

ಸೊಮಾಲಿ: ಸೊಮಾಲಿ ರಾಜಧಾನಿಯ ಜನಪ್ರಿಯ ಕಡಲತೀರದ ಸ್ಥಳವನ್ನು ಗುರಿಯಾಗಿಸಿಕೊಂಡು ಆತ್ಮಾಹುತಿ ಬಾಂಬರ್ ಮತ್ತು ಬಂದೂಕುಧಾರಿಗಳು ಶನಿವಾರ ನಡೆಸಿದ ದಾಳಿಯಲ್ಲಿ ಕನಿಷ್ಠ 32 ಜನರು ಸಾವನ್ನಪ್ಪಿದ್ದಾರೆ ಮತ್ತು ಹಲವಾರು ಜನರು ಗಾಯಗೊಂಡಿದ್ದಾರೆ ಎಂದು ಪೊಲೀಸ್ ವಕ್ತಾರರು ತಿಳಿಸಿದ್ದಾರೆ. ಸುಮಾರು 63 ಜನರು ಗಾಯಗೊಂಡಿದ್ದಾರೆ, ಅವರಲ್ಲಿ ಕೆಲವರ ಸ್ಥಿತಿ ಗಂಭೀರವಾಗಿದೆ ಎಂದು ಅಬ್ದಿಫತಾ ಅದಾನ್ ಹಸನ್ ಹೇಳಿದ್ದಾರೆ. ಮೊಗಾದಿಶುವಿನ ಅಬ್ದಿಯಾಜಿಜ್ ಜಿಲ್ಲೆಯಲ್ಲಿ ಹಲವಾರು ಶವಗಳು ಮತ್ತು ಗಾಯಗೊಂಡ ಜನರನ್ನು ವೀಡಿಯೊ ತುಣುಕುಗಳು ತೋರಿಸಿವೆ. ದಕ್ಷಿಣ ಮತ್ತು ಮಧ್ಯ ಸೊಮಾಲಿಯದ ಹೆಚ್ಚಿನ ಭಾಗಗಳನ್ನು ನಿಯಂತ್ರಿಸುವ ಅಲ್-ಶಬಾಬ್ ಉಗ್ರರು ಈ ದಾಳಿ ನಡೆಸಿದ್ದಾರೆ ಎಂದು ಸ್ಥಳೀಯ ಮಾಧ್ಯಮಗಳು ತಿಳಿಸಿವೆ. ಈ ಗುಂಪು ಅಲ್-ಖೈದಾದೊಂದಿಗೆ ಸಂಯೋಜಿತವಾಗಿದೆ ಮತ್ತು ಸೊಮಾಲಿಯಾದಲ್ಲಿ ಯುಎನ್ ಬೆಂಬಲಿತ ಸರ್ಕಾರದ ವಿರುದ್ಧ ಸುಮಾರು 20 ವರ್ಷಗಳಿಂದ ಕ್ರೂರ ಬಂಡಾಯವನ್ನು ನಡೆಸುತ್ತಿದೆ. ಸ್ಫೋಟದ ನಂತರ ಗುಂಡಿನ ದಾಳಿ ಪ್ರಾರಂಭವಾದ ಕಾರಣ ಏನಾಗುತ್ತಿದೆ ಎಂದು ತಿಳಿಯುವುದು ಕಷ್ಟವಾದ್ದರಿಂದ ಜನರು ಭಯಭೀತರಾಗಿದ್ದಾರೆ ಎಂದು ಪ್ರತ್ಯಕ್ಷದರ್ಶಿಯೊಬ್ಬರು ಎಎಫ್ಪಿ ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ. ಕೆಲವರು…

Read More

ಶಿರಾಡ್ ಘಾಟ್ : ಪ್ರವಾಹ ಪೀಡಿತ ವಯನಾಡ್ ಗೆ ರಾಜ್ಯದ ನೆರವನ್ನು ಇನ್ನಷ್ಟು ವಿಸ್ತರಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೂರು ಮನೆಗಳನ್ನು ನಿರ್ಮಿಸಿಕೊಡುವುದಾಗಿ ತಿಳಿಸಿದ್ದಾರೆ. ಈ ಬಗ್ಗೆ ಶಿರಾಡಿ ಘಾಟಿಯಲ್ಲಿ ಮಾಧ್ಯಮದವರ ಜೊತೆ ಮಾತನಾಡಿದ ಮುಖ್ಯಮಂತ್ರಿಗಳು ಕೇರಳ ರಾಜ್ಯದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರ ಜೊತೆ ಧೂರವಾಣಿ ಮೂಲಕ ಮಾತನಾಡಿದ್ದೇನೆ. ಅಗತ್ಯ ಇರುವ ನೆರವನ್ನು ವಿಸ್ತರಿಸುವುದಾಗಿ ಹೇಳಿದರು. ಘಟನೆಯಲ್ಲಿ ನಾಪತ್ತೆಯಾಗಿರುವ ಒಟ್ಟು ಕನ್ನಡಿಗರ ಲೆಕ್ಕ ಸಿಗಲು ಇನ್ನಷ್ಟು ಸಮಯ ಬೇಕು. ರಕ್ಷಣಾ ಕಾರ್ಯಾಚರಣೆ ಪೂರ್ತಿ ಮುಗಿದ ಬಳಿಕ ತಿಳಿಯಲಿದೆ ಎಂದರು. ವಯನಾಡಿನಲ್ಲಿ 100 ಸುಸಜ್ಜಿತ ಮನೆಗಳನ್ನು ನಿರ್ಮಿಸಲು ತೀರ್ಮಾನಿಸಿದ್ದೇವೆ. ಯಾವ ಸ್ಥಳದಲ್ಲಿ ನಿರ್ಮಿಸಬೇಕು, ಯಾವ ವೆಚ್ಚದಲ್ಲಿ ನಿರ್ಮಿಸಬೇಕು ಎನ್ನುವುದನ್ನು ನಂತರ ತೀರ್ಮಾನಿಸಲಾಗುವುದು ಎಂದರು. https://kannadanewsnow.com/kannada/big-shock-to-unauthorized-homestay-resort-owners-in-the-state/ https://kannadanewsnow.com/kannada/breaking-yadgir-psi-death-case-complaint-lodged-against-mla-chenna-reddy-son/

Read More