Author: kannadanewsnow09

ಬೆಂಗಳೂರು: ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ ಎನ್ನುವಂತೆ 400 ಪಶು ವೈದ್ಯಾಧಿಕಾರಿಗಳ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಪಶು ಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆಯಲ್ಲಿ ಖಾಲಿ ಇರುವ ಒಟ್ಟು 400 ಪಶು ವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿಗೆ ಕೆಪಿಎಸ್‌ಸಿ ಅಧಿಸೂಚನೆ ಹೊರಡಿಸಿದೆ. ಆಗಸ್ಟ್‌ 12 ರಿಂದ ಸೆಪ್ಟೆಂಬರ್‌ 12ರ ವರೆಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಸಾಮಾನ್ಯ ಅಭ್ಯರ್ಥಿಗಳು ₹600, ಪ್ರವರ್ಗ 2ಎ, 2ಬಿ, 3ಎ, 3ಬಿ ಗೆ ಸೇರಿದ ಅಭ್ಯರ್ಥಿಗಳು ₹300, ಮಾಜಿ ಸೈನಿಕ ಅಭ್ಯರ್ಥಿಗಳು ₹50 ಶುಲ್ಕ ಪಾವತಿಸಬೇಕು. ಅಭ್ಯರ್ಥಿಗಳು ಕನ್ನಡ ಭಾಷಾ ಪರೀಕ್ಷೆಯಲ್ಲಿ ಅರ್ಹತೆ ಪಡೆಯುವುದು ಕಡ್ಡಾಯವಾಗಿದೆ. ತಲಾ 300 ಅಂಕಗಳಿಗೆ ನಡೆಯಲಿರುವ ಸ್ಪರ್ಧಾತ್ಮಕ ಮತ್ತು ನಿರ್ದಿಷ್ಟ ಪತ್ರಿಕೆಯಲ್ಲಿ ಗಳಿಸುವ ಅಂಕಗಳ ಶೇಕಡಾವಾರು ಆಧಾರದಲ್ಲಿ ಮತ್ತು ಮೀಸಲಾತಿ ನಿಯಮದ ಪ್ರಕಾರ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ನಡೆಯಲಿದೆ ಎಂದು ಕೆಪಿಎಸ್‌ಸಿ ತಿಳಿಸಿದೆ. https://twitter.com/KarnatakaVarthe/status/1818254282488987764 https://kannadanewsnow.com/kannada/power-worth-rs-1403-crore-sold-from-state-minister-k-j-george/ https://kannadanewsnow.com/kannada/shimoga-the-working-journalists-association-of-sagara-will-celebrate-press-day-tomorrow/

Read More

ಬೆಂಗಳೂರು: ವಿದ್ಯುತ್ ವಲಯದಲ್ಲಿ ಸ್ವಾವಲಂಬನೆ ಸಾಧಿಸುವ ನಿಟ್ಟಿನಲ್ಲಿ ಹೆಜ್ಜೆ ಹಾಕಿರುವ ಇಂಧನ ಇಲಾಖೆ, ಕಳೆದ ಬೇಸಿಗೆ (ಎಪ್ರಿಲ್ 1) ನಂತರ ರಾಜ್ಯದಲ್ಲಿ 1,403 ಕೋಟಿ ರೂ. ಮೌಲ್ಯದ ವಿದ್ಯುತ್ ಮಾರಾಟ ಮಾಡಿದೆ. ಬೆಸ್ಕಾಂ ಕಚೇರಿಯಲ್ಲಿ ಮಂಗಳವಾರ ಆಯೋಜಿಸಿದ್ದ ಪತ್ರಿಕಾಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿರುವ ಇಂಧನ ಸಚಿವ ಕೆ.ಜೆ.ಜಾರ್ಜ್, “2024ರ ಏಪ್ರಿಲ್ 1ರಿಂದ ಜುಲೈ ಅಂತ್ಯದವರೆಗೆ 1,403 ಕೋಟಿ ರೂ. ಮೊತ್ತದ ವಿದ್ಯುತ್ ಮಾರಾಟ ಮಾಡಲಾಗಿದೆ. ಮೇ 18ರವರೆಗೆ ವಿದ್ಯುತ್ ಖರೀದಿ ಹೆಚ್ಚಾಗಿದ್ದರೆ, ನಂತರದಲ್ಲಿ ಮಾರಾಟ ಹೆಚ್ಚಾಗಿದೆ. ಪ್ರತಿನಿತ್ಯ 30ರಿಂದ 40 ಕೋಟಿ ರೂ. ಮೊತ್ತದ ವಿದ್ಯುತ್ ಮಾರಾಟ ಮಾಡಲಾಗುತ್ತಿದೆ” ಎಂದು ಮಾಹಿತಿ ನೀಡಿದರು. “ಪ್ರಸ್ತುತ ರಾಜ್ಯದಲ್ಲಿ ನಿತ್ಯ ಸರಾಸರಿ 250 ಮಿಲಿಯನ್ ಯೂನಿಟ್ ವಿದ್ಯುತ್ ಉತ್ಪಾದಿಸಲಾಗುತ್ತಿದೆ. ಈ ಪೈಕಿ 20 ಮಿಲಿಯನ್ ಯೂನಿಟ್ಅನ್ನು ಬೇಸಿಗೆಯಲ್ಲಿ ವಿನಿಮಯ ಆಧಾರದ ಮೇಲೆ ವಿದ್ಯುತ್ ಪಡೆದುಕೊಂಡಿರುವ ಪಂಜಾಬ್ ಮತ್ತು ಉತ್ತರ ಪ್ರದೇಶ ರಾಜ್ಯಗಳಿಗೆ ಪೂರೈಸಲಾಗುತ್ತಿದೆ. 40ರಿಂದ 50 ಮಿಲಿಯನ್ ಯೂನಿಟ್ ಮಾರಾಟ ಮಾಡಲಾಗುತ್ತಿದೆ. 180…

Read More

ಬೆಂಗಳೂರು: ರಾಜ್ಯದಲ್ಲಿ ಕಳೆದ ಕೆಲ ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಗೆ ಎಸ್ಕಾಂಗಳಿಗೆ ಒಟ್ಟಾರೆ 96.66 ಕೋಟಿ ರು. ನಷ್ಟವಾಗಿದ್ದು, ಹಾನಿಗೊಳಗಾಗಿರುವ ಸಾವಿರಾರು ವಿದ್ಯುತ್ ಕಂಬಗಳು, ಟ್ರಾನ್ಸ್ ಫಾರ್ಮರ್ ಗಳು ಹಾಗೂ ಲೈನ್‌ಗಳನ್ನು ದುರಸ್ತಿಗೊಳಿಸುವ ಕಾರ್ಯ ಬಹುತೇಕ ಪೂರ್ಣಗೊಂಡಿದೆ ಎಂದು ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ. ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಠಿಯಿಂದಾಗಿ ಇಂಧನ ಇಲಾಖೆಗೆ ಸಂಬಂಧಿಸಿದಂತೆ ಉದ್ಭವಿಸಿರುವ ಪರಿಸ್ಥಿತಿಗಳ ಕುರಿತು ಎಲ್ಲಾ ಎಸ್ಕಾಂ ಹಿರಿಯ ಅಧಿಕಾರಿಗಳೊಂದಿಗೆ ವೀಡಿಯೋ ಕಾನ್ಫರೆನ್ಸ್ ಮೂಲಕ ಸಮಾಲೋಚನೆ ನಡೆಸಿದ ಬಳಿಕ ಅವರು ಮಾತನಾಡಿದರು. ಮಳೆ ಮತ್ತು ಗಾಳಿಯಿಂದ 53,816 ಕಂಬಗಳು, 3,924 ಟ್ರಾನ್ಸ್ ಫಾರ್ಮರ್ ಗಳು, 1,120 ಕಿ.ಮೀ. ವಿದ್ಯುತ್ ತಂತಿಗಳು ಹಾನಿಯಾಗಿದ್ದಾವೆ ಅಂತ ತಿಳಿಸಿದರು. ವಿದ್ಯುತ್ ಕಂಬ, ತಂತಿ, ಟ್ರಾನ್ಸ್ ಫಾರ್ಮರ್‌ಗಳ ದುರಸ್ತಿಗೆ ಮೆಸ್ಕಾಂ ಸಿಬ್ಬಂದಿ ಹಗಲಿರುಳು ಶ್ರಮಿಸುತ್ತಿದ್ದಾರೆ. ಭಾರಿ ಮಳೆ ಬೀಳುತ್ತಿರುವ ಮಲೆನಾಡು, ಕರಾವಳಿ ಮತ್ತು ಬೆಳಗಾವಿ ಭಾಗಗಳಲ್ಲಿ ನೀರಿನ ಮಧ್ಯೆಯೂ ಕೆಲಸ ಮಾಡುತ್ತಿದ್ದಾರೆ. ಹೆಚ್ಚು ಹಾನಿ ಸಂಭವಿಸಿರುವ ಪ್ರದೇಶಗಳಿಗೆ ಹೆಚ್ಚುವರಿ ಗ್ಯಾಂಗ್ ಮೆನ್ ಮತ್ತು ಲೈನ್ ಮೆನ್ ಗಳನ್ನು…

Read More

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಆರಂಭಗೊಂಡ ನಂತ್ರ, ಕೆಲ ದಿನಗಳಿಂದ ಸುರಿಯುತ್ತಿರುವಂತ ಭಾರೀ ಮಳೆಯಿಂದಾಗಿ 53,816 ವಿದ್ಯುತ್ ಕಂಬ, 3,924 ಟ್ರಾನ್ಸ್ ಫಾರ್ಮರ್, 1,120 ಕಿ.ಮೀ ವಿದ್ಯುತ್ ತಂತಿ ಹಾನಿಗೊಂಡಿದೆ. ಈ ಮೂಲಕ ಎಸ್ಕಾಂಗಳಿಗೆ 96.66 ಕೋಟಿ ರೂ ನಷ್ಟವಾಗಿದೆ. ಇಂದು ಸುದ್ದಿಗೋಷ್ಠಿಯಲ್ಲಿ ಮಾಹಿತಿ ಹಂಚಿಕೊಂಡಂತ ಇಂಧನ ಸಚಿವ ಕೆಜೆ ಜಾರ್ಜ್ ಅವರು, “ಮಳೆ ಮತ್ತು ಗಾಳಿಯಿಂದ 53,816 ಕಂಬಗಳು, 3,924 ಟ್ರಾನ್ಸ್ ಫಾರ್ಮರ್ ಗಳು, 1,120 ಕಿ.ಮೀ. ವಿದ್ಯುತ್ ತಂತಿಗಳು ಹಾನಿಗದೊಳಗಾಗಿದ್ದು. ಈ ಪೈಕಿ 51,119 ಕಂಬಗಳು, 3,918 ಟ್ರಾನ್ಸ್ ಫಾರ್ಮರ್ ಗಳು, 1,063 ಕಿ.ಮೀ. ವಿದ್ಯುತ್ ತಂತಿಗಳನ್ನು ದುರಸ್ತಿಗೊಳಿಸುವ ಕಾರ್ಯ ಪೂರ್ಣಗೊಂಡಿದೆ. ಬಾಕಿ ಉಳಿದ ಕೆಲಸಗಳನ್ನು ತ್ವರಿತವಾಗಿ ಪೂರ್ಣಗೊಳಿಸಿ ಸಮರ್ಪಕ ವಿದ್ಯುತ್ ಪೂರೈಕೆಗೆ ಎಸ್ಕಾಂ ಸಿಬ್ಬಂದಿ ಸತತವಾಗಿ ಶ್ರಮಿಸುತ್ತಿದ್ದಾರೆ,” ಎಂದರು. “ವಿದ್ಯುತ್ ಕಂಬ, ತಂತಿ, ಟ್ರಾನ್ಸ್ ಫಾರ್ಮರ್‌ಗಳ ದುರಸ್ತಿಗೆ ಮೆಸ್ಕಾಂ ಸಿಬ್ಬಂದಿ ಹಗಲಿರುಳು ಶ್ರಮಿಸುತ್ತಿದ್ದಾರೆ. ಭಾರಿ ಮಳೆ ಬೀಳುತ್ತಿರುವ ಮಲೆನಾಡು, ಕರಾವಳಿ ಮತ್ತು ಬೆಳಗಾವಿ ಭಾಗಗಳಲ್ಲಿ ನೀರಿನ ಮಧ್ಯೆಯೂ ಕೆಲಸ…

Read More

ಬೆಂಗಳೂರು: ರಾಜ್ಯದ ಶಾಲಾ ವಿದ್ಯಾರ್ಥಿಗಳಿಗೆ ಮತ್ತೊಂದು ಗುಡ್ ನ್ಯೂಸ್ ಎನ್ನುವಂತೆ, ವಿದ್ಯಾರ್ಥಿಗಳಲ್ಲಿ ಓದುವ ಹವ್ಯಾಸ ಬೆಳೆಸಲು, ಪ್ರತಿ ಶಾಲೆಯಲ್ಲೂ ಮಕ್ಕಳ ಸ್ನೇಹಿ ಗ್ರಂಥಾಲಯ ನಿರ್ಮಿಸುವ ನಿರ್ಧಾರವನ್ನು ಶಾಲಾ ಶಿಕ್ಷಣ ಇಲಾಖೆ ಕೈಗೊಂಡಿದೆ. ವಿದ್ಯಾರ್ಥಿಗಳಲ್ಲಿ ಓದುವ ಹವ್ಯಾಸ ಬೆಳೆಸಲು ರಾಜ್ಯದ ಎಲ್ಲ ಶಾಲೆಗಳೂ ಮಕ್ಕಳ ಸ್ನೇಹಿ ಗ್ರಂಥಾಲಯ ಹೊಂದಬೇಕು. ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ ವಾರದಲ್ಲಿ ಒಂದು ಅವಧಿ ಗ್ರಂಥಾಲಯಕ್ಕೆ ಮೀಸಲಿಡಬೇಕು ಎಂದು ಶಾಲಾ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ. ಪ್ರಸಿದ್ಧ ಲೇಖಕರ ಕಥೆ, ಕವಿತೆ, ನಾಟಕ, ಕಾದಂಬರಿ ಮತ್ತಿತರ ಸಾಹಿತ್ಯ ಕೃತಿಗಳು, ಜಾನಪದ, ಲೇಖನಗಳನ್ನು ಒಳಗೊಂಡ ಪುಸ್ತಕಗಳನ್ನು ಸಂಗ್ರಹಿಸಬೇಕು. ಸಮಗ್ರ ಶಿಕ್ಷಣ ಕರ್ನಾಟಕದ ನೆರವು ಹಾಗೂ ದಾನಿಗಳಿಂದ ಪುಸ್ತಕಗಳನ್ನು ಪಡೆಯಬೇಕು. ಅಂತಹ ಪುಸ್ತಕ ಓದುವ ಹವ್ಯಾಸವನ್ನು ಮಕ್ಕಳಲ್ಲಿ ರೂಢಿಸಬೇಕು. ಅದಕ್ಕಾಗಿಯೇ ಸರ್ಕಾರ ʼಓದುವ ಹವ್ಯಾಸ ಜ್ಞಾನದ ವಿಕಾಸʼ ಕಾರ್ಯಕ್ರಮ ಅನುಷ್ಠಾನಗೊಳಿಸುತ್ತಿದೆ. https://kannadanewsnow.com/kannada/wayanad-landslide-kerala-declares-2-day-mourning/ https://kannadanewsnow.com/kannada/shimoga-the-working-journalists-association-of-sagara-will-celebrate-press-day-tomorrow/

Read More

ತಿರುವನಂತಪುರಂ : ಕೇರಳದ ವಯನಾಡ್ ನಲ್ಲಿ ಸಂಭವಿಸಿದ ಭೂಕುಸಿತದಲ್ಲಿ 84 ಮಂದಿ ಮೃತಪಟ್ಟ ಹಿನ್ನೆಲೆಯಲ್ಲಿ ಕೇರಳ ಸರ್ಕಾರ ಮಂಗಳವಾರ ಮತ್ತು ಬುಧವಾರ ಎರಡು ದಿನಗಳ ಕಾಲ ರಾಜ್ಯಾಧ್ಯಂತ ಶೋಕಾಚರಣೆ ಘೋಷಿಸಿದೆ. ವಯನಾಡ್ನಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಕನಿಷ್ಠ 70 ಜನರು ಪ್ರಾಣ ಕಳೆದುಕೊಂಡ ನಂತರ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಇಂದು ಮತ್ತು ನಾಳೆ ಎರಡು ದಿನಗಳ ಕಾಲ ರಾಜ್ಯವ್ಯಾಪಿ ಶೋಕಾಚರಣೆ ಘೋಷಿಸಿದ್ದಾರೆ. ವಯನಾಡ್ ಭೂಕುಸಿತ ಘಟನೆಯಲ್ಲಿ ಸಾವನ್ನಪ್ಪಿದವರ ಸಂಖ್ಯೆ 84 ಕ್ಕೆ ಏರಿದೆ ಮತ್ತು ಇಲ್ಲಿಯವರೆಗೆ ಒಟ್ಟು 116 ಗಾಯಗಳು ವರದಿಯಾಗಿವೆ ಎಂದು ಕೇರಳ ಕಂದಾಯ ಸಚಿವರ ಕಚೇರಿ ಮಾಹಿತಿ ನೀಡಿದೆ. ಏತನ್ಮಧ್ಯೆ, ಭಾರತೀಯ ಸೇನೆಯ ತುಕಡಿ ಮಧ್ಯಾಹ್ನದ ವೇಳೆಗೆ ಚೂರಲ್ಮಾಲಾದಲ್ಲಿ ಭೂಕುಸಿತದ ಸ್ಥಳವನ್ನು ತಲುಪಿತು. ಚೂರಲ್ಮಾಲಾದ ವಾರ್ಡ್ ಸಂಖ್ಯೆ 10 ರಲ್ಲಿ ರಕ್ಷಣಾ ಕಾರ್ಯಗಳಿಗೆ ಸಹಾಯ ಮಾಡಲು ಮತ್ತು ರಕ್ಷಣಾ ಕಾರ್ಯಗಳನ್ನು ಕೈಗೊಳ್ಳಲು ಹಗ್ಗಗಳನ್ನು ಬಳಸಿ ಸೈನಿಕರನ್ನು ನದಿಗೆ ಸಾಗಿಸಲಾಗುತ್ತಿದೆ. ಕೇಂದ್ರ ರಾಜ್ಯ ಸಚಿವ ಜಾರ್ಜ್ ಕುರಿಯನ್ ಅವರು ಪರಿಹಾರ…

Read More

ಬೆಂಗಳೂರು: ನಗರದಲ್ಲಿ ದಿನೇ ದಿನೇ ಹೆಚ್ಚಾಗುತ್ತಿರುವಂತ ಅನಧಿಕೃತ ಫ್ಲೆಕ್ಸ್ ಅಳವಡಿಕೆ ಹಾವಳಿಯನ್ನು ತಪ್ಪಿಸಲು ಬಿಬಿಎಂಪಿ ಮಹತ್ವದ ಕ್ರಮ ವಹಿಸಿದೆ. ಇದರ ಸಲುವಾಗಿ ರಾತ್ರಿಯ ವೇಳೆಯಲ್ಲಿ ಪ್ರಹರಿ ವಾಹನದಿಂದ ಗಸ್ತು ತಿರುಗುವಂತ ಕ್ರಮವಹಿಸಲಾಗಿದೆ. ರಾತ್ರಿ ವೇಳೆಯಲ್ಲಿ ಗಸ್ತು ತಿರುಗಲಿರುವಂತ ಬಿಬಿಎಂಪಿಯ ಪ್ರಹರಿ ವಾಹನವು, ಅನಧಿಕೃತವಾಗಿ ಫ್ಲೆಕ್ಸ್, ಬ್ಯಾನರ್ ಅಳವಡಿಸುವವರ ವಿರುದ್ಧ ಕೇಸ್ ಹಾಕಲಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ಅನಧಿಕೃತವಾಗಿ ಫ್ಲೆಕ್ಸ್/ಬ್ಯಾನರ್ ಅಳವಡಿಸುವವರ ಮೇಲೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕೆಂದು ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್ ಅವರು ಎಲ್ಲಾ ವಲಯ ಆಯುಕ್ತರಿಗೆ ಸೂಚನೆ ನೀಡಿದರು. ಬಿಬಿಎಂಪಿ ವ್ಯಾಪ್ತಿಯ ವಿವಿಧ ವಿಷಯಗಳಿಗೆ ಸಂಬಂಧಿಸಿದಂತೆ ಪಾಲಿಕೆ ಕೇಂದ್ರ ಕಛೇರಿಯಲ್ಲಿ ಇಂದು ನಡೆದ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು. ಪಾಲಿಕೆ ವ್ಯಾಪ್ತಿಯಲ್ಲಿ ಅನಧಿಕೃತವಾಗಿ ಫ್ಲೆಕ್ಸ್/ಬ್ಯಾನರ್ ಗಳನ್ನು ಅಳವಡಿಸುತ್ತಿದ್ದು, ಅದನ್ನು ಪರಿಣಾಮಕಾರಿಯಾಗಿ ನಿಯಂತ್ರಿಸಬೇಕಿದೆ. ಈ ನಿಟ್ಟಿನಲ್ಲಿ ಆಯಾ ವಲಯ ವ್ಯಾಪ್ತಿಯಲ್ಲಿ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡು ಎಲ್ಲಿಯೂ ಅನಧಿಕೃತ ಜಾಹೀರಾತುಗಳನ್ನು ಅಳವಡಿಸದಂತೆ ಸೂಕ್ತ ಕ್ರಮಗಳನ್ನು ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಿದರು. ಅನಧಿಕೃತವಾಗಿ ಅಳವಡಿಸುತ್ತಿರುವ ಫ್ಲೆಕ್ಸ್/ಬ್ಯಾನರ್…

Read More

ಬೆಂಗಳೂರು: ರಾಜ್ಯದ ಅನೇಕ ರೈತರು ಅನಧಿಕೃತವಾಗಿ ಪಂಪ್ ಸೆಟ್ ಹಾಕಿಕೊಂಡು ವಿದ್ಯುತ್ ಸಂಪರ್ಕಕ್ಕಾಗಿ ಕಾಯುತ್ತಿದ್ದಾರೆ. ಈ ರೈತರಿಗೆ ಎಸ್ಕಾಂ ಗುಡ್ ನ್ಯೂಸ್ ಒಂದನ್ನು ನೀಡಿದೆ. ಅದೇ ಈಗಾಗಲೇ ಸರ್ವೇ ನಡೆಸಲಾಗಿದ್ದು, ಶೀಘ್ರವೇ ವಿದ್ಯುತ್ ಸಂಪರ್ಕ ನೀಡುವುದಾಗಿ ಹೇಳಿದೆ. ಈ ಬಗ್ಗೆ ಇಂಧನ ಸಚಿವ ಕೆ.ಜೆ ಜಾರ್ಜ್ ಅವರು ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಠಿಯಿಂದಾಗಿ ಇಂಧನ ಇಲಾಖೆಗೆ ಸಂಬಂಧಿಸಿದಂತೆ ಉದ್ಭವಿಸಿರುವ ಪರಿಸ್ಥಿತಿಗಳ ಕುರಿತು ಎಲ್ಲಾ ಎಸ್ಕಾಂ ಹಿರಿಯ ಅಧಿಕಾರಿಗಳೊಂದಿಗೆ ವೀಡಿಯೋ ಕಾನ್ಫರೆನ್ಸ್ ಮೂಲಕ ಸಮಾಲೋಚನೆ ನಡೆಸಿದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಕುಸುಮ್ – ಜಂಟಿ ಸರ್ವೇ “ಕೃಷಿಗೆ ಸೌರ ಪಂಪ್ ಸೆಟ್ ಗಳನ್ನು ಒದಗಿಸುವ ಕುಸುಮ್ ಬಿ ಯೋಜನೆಯಡಿ ಆನ್ ಲೈನ್ ಮೂಲಕ 26,238 ಅರ್ಜಿಗಳು ಬಂದಿದ್ದು, ಈ ಹಿಂದಿನ ಅನಧಿಕೃತ ಪಂಪ್ ಸೆಟ್ ಗಳನ್ನು ಸಕ್ರಮಗೊಳಿಸುವ ಅಡಿಯಲ್ಲಿ 10,073 ಬಂದಿರುವ ಅರ್ಜಿಗಳನ್ನು ಪರಿಶೀಲಿಸಲಾಗುತ್ತಿದೆ. ಅನಧಿಕೃತ ಸಂಪರ್ಕಗಳನ್ನು ಸಕ್ರಮಗೊಳಿಸಲು ಅರ್ಜಿ ಸಲ್ಲಿಸಿರುವವರ ಪಂಪ್ ಸೆಟ್ ಗಳು ಗ್ರಿಡ್ ನಿಂದ 500 ಮೀಟರ್ ಒಳಗೆ…

Read More

ಕೆಎನ್ಎನ್ ಡಿಜಿಟಲ್ ಡೆಸ್ಕ್: ಟೆಲಿಗ್ರಾಮ್ನ ಸ್ಥಾಪಕ ಮತ್ತು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಪಾವೆಲ್ ಡುರೊವ್ ಇತ್ತೀಚೆಗೆ ಅವರು “100 ಕ್ಕೂ ಹೆಚ್ಚು ಜೈವಿಕ ಮಕ್ಕಳನ್ನು” ಹೊಂದಿದ್ದಾರೆ ಎಂದು ಬಹಿರಂಗಪಡಿಸಿದರು. ಅವರು ತಮ್ಮ 5.7 ಮಿಲಿಯನ್ ಚಂದಾದಾರರೊಂದಿಗೆ ಹಂಚಿಕೊಳ್ಳಲು ಮೆಸೇಜಿಂಗ್ ಅಪ್ಲಿಕೇಶನ್ ಅನ್ನು ತೆಗೆದುಕೊಂಡರು. “ನನಗೆ 100 ಕ್ಕೂ ಹೆಚ್ಚು ಜೈವಿಕ ಮಕ್ಕಳಿದ್ದಾರೆ ಎಂದು ನನಗೆ ತಿಳಿಸಲಾಯಿತು. ಎಂದಿಗೂ ಮದುವೆಯಾಗದ ಮತ್ತು ಏಕಾಂಗಿಯಾಗಿ ವಾಸಿಸಲು ಬಯಸುವ ವ್ಯಕ್ತಿಗೆ ಇದು ಹೇಗೆ ಸಾಧ್ಯ?” ಎಂದು ಅನೇಕರು ಪ್ರಶ್ನಿಸಿದರು. ಸುಮಾರು 15 ವರ್ಷಗಳ ಹಿಂದೆ, ಸ್ನೇಹಿತರೊಬ್ಬರು “ವಿಲಕ್ಷಣ ವಿನಂತಿ” ಯೊಂದಿಗೆ ಅವರನ್ನು ಸಂಪರ್ಕಿಸಿದರು ಎಂದು ಡುರೊವ್ ಹೇಳಿದರು. “ಫಲವತ್ತತೆ ಸಮಸ್ಯೆಯಿಂದಾಗಿ ತಾನು ಮತ್ತು ತನ್ನ ಹೆಂಡತಿ ಮಕ್ಕಳನ್ನು ಹೊಂದಲು ಸಾಧ್ಯವಿಲ್ಲ ಎಂದು ಅವರು ಹೇಳಿದರು. ಈ ಬಗ್ಗೆ ಟೆಲಿಕ್ರಾಮ್ ನಲ್ಲಿ ಬರೆದುಕೊಂಡಿರುವಂತ ಅವರು, “ಇದು ವೀರ್ಯ ದಾನಕ್ಕೆ ಸೈನ್ ಅಪ್ ಮಾಡಲು ನನ್ನನ್ನು ಪ್ರೇರೇಪಿಸುವಷ್ಟು ಹುಚ್ಚುತನವೆಂದು ತೋರುತ್ತದೆ. 2024 ಕ್ಕೆ ವೇಗವಾಗಿ ಮುಂದುವರಿಯುತ್ತಿರುವ ನನ್ನ ಹಿಂದಿನ…

Read More

ನವದೆಹಲಿ: ನೀಟ್ ಯುಜಿ 2024 ಅಂಕಗಳ ಆಧಾರದ ಮೇಲೆ 2024 ನೇ ಸಾಲಿನ ಎಂಬಿಬಿಎಸ್, ಬಿಡಿಎಸ್ ಮತ್ತು ಬಿಎಸ್ಸಿ ನರ್ಸಿಂಗ್ ಕೋರ್ಸ್ಗಳ ಪ್ರವೇಶಕ್ಕಾಗಿ ವೈದ್ಯಕೀಯ ಕೌನ್ಸೆಲಿಂಗ್ ಸಮಿತಿ (Medical Counselling Committee -MCC)  ಶೀಘ್ರದಲ್ಲೇ ನೋಂದಣಿಗೆ ಕೌನ್ಸೆಲಿಂಗ್ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ. ಅಲ್ಲದೇ ಶೀಘ್ರವೇ ಪ್ರಕ್ರಿಯೆಯನ್ನು ಪ್ರಾರಂಭಿಸಲಿದೆ. ಎಂಸಿಸಿ ಬಿಡುಗಡೆ ಮಾಡಿದ ಅಧಿಕೃತ ವೇಳಾಪಟ್ಟಿಯ ಪ್ರಕಾರ, ನೀಟ್ ಯುಜಿ 2024 ಪರೀಕ್ಷೆಗೆ ( NEET UG 2024 Exam ) ಅರ್ಹತೆ ಪಡೆದ ಎಲ್ಲಾ ಅಭ್ಯರ್ಥಿಗಳು mcc.nic.in ಎಂಸಿಸಿಯ ಅಧಿಕೃತ ವೆಬ್ಸೈಟ್ನಲ್ಲಿ ನೋಂದಾಯಿಸುವ ಮೂಲಕ ಕೌನ್ಸೆಲಿಂಗ್ ಪ್ರಕ್ರಿಯೆಯಲ್ಲಿ ಭಾಗವಹಿಸಲು ಅರ್ಹರಾಗಿರುತ್ತಾರೆ. ನೋಂದಣಿ ವಿಂಡೋ ಆಗಸ್ಟ್ 14 ರಂದು ತೆರೆಯುತ್ತದೆ ಮತ್ತು ಆಗಸ್ಟ್ 21 ರಂದು ಕೊನೆಗೊಳ್ಳುತ್ತದೆ. ಪಾವತಿ ಸೌಲಭ್ಯವು ಆಗಸ್ಟ್ 21 ರ ಮಧ್ಯಾಹ್ನ 03:00 ರವರೆಗೆ ಲಭ್ಯವಿರುತ್ತದೆ. ನಿಗದಿತ ಸಮಯದ ನಂತರ ಯಾವುದೇ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ. ಇಲ್ಲಿದೆ ನೀಟ್ ಯುಜಿ 2024 ಕೌನ್ಸೆಲಿಂಗ್ ( NEET UG 2024 Counselling )…

Read More