Subscribe to Updates
Get the latest creative news from FooBar about art, design and business.
Author: kannadanewsnow09
ರಾಯಚೂರು: ರಾಜ್ಯದ ಸರ್ಕಾರಿ ಆಸ್ಪತ್ರೆಯೊಂದರಲ್ಲಿದ್ದಂತ ಲಕ್ಷಾಂತರ ರೂ ಬೆಲೆ ಬಾಳುವಂತ ಯಂತ್ರೋಪಕರಣಗಳು ಕಳವು ಆಗಿರುವುದಾಗಿ ತಿಳಿದು ಬಂದಿದೆ. ರಾಯಚೂರು ಜಿಲ್ಲೆಯ ದೇವದುರ್ಗ ಸರ್ಕಾರಿ ಆಸ್ಪತ್ರೆಯಲ್ಲೇ ಉಪಕರಣಗಳು ಕಳ್ಳತನವಾಗಿದ್ದಾವೆ. ದೇವದುರ್ಗ ಸರ್ಕಾರಿ ಆಸ್ಪತ್ರೆಯ ಲ್ಯಾಬ್ ನಲ್ಲಿದ್ದಂತ ಲಕ್ಷಾಂತರ ರೂ ಮೌಲ್ಯದ ಉಪಕರಣಗಳು ಕಳ್ಳತನವಾಗಿದ್ದಾವೆ. ಲ್ಯಾಬ್ ನಲ್ಲಿದ್ದಂತ 10 ಲಕ್ಷ ಮೌಲ್ಯದ ಮೂರು ಯಂತ್ರೋಪಕರಣಗಳನ್ನು ಕದಿಯಲಾಗಿದೆ. ಅಲ್ಲದೇ ಸಿಸಿಟಿವಿ ಡಿವಿಆರ್, ರಕ್ತ ಪರೀಕ್ಷೆ ಮಾಡುವಂತ ಅತ್ಯಾಧುನಿಕ ಯಂತ್ರ, ಎಲೆಕ್ಟ್ರೋಲೈಟ್ ಸೇರಿದಂತೆ ಸುಮಾರು 10 ಲಕ್ಷ ಮೌಲ್ಯದ ಉಪಕರಣಗಳನ್ನು ಕಳ್ಳತನ ಮಾಡಲಾಗಿದೆ. ಈ ಸಂಬಂಧ ದೇವದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಕಳ್ಳರ ಪತ್ತೆಗೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ. https://kannadanewsnow.com/kannada/gold-price-hike-what-is-the-price-of-gold-today-here-are-the-details/ https://kannadanewsnow.com/kannada/breaking-commissioner-orders-ccb-probe-into-allegations-of-royalty-against-inmates-in-kalaburagi-jail/
ನವದೆಹಲಿ: ಅಕ್ಟೋಬರ್.18 ರಂದು ಭಾರತದಲ್ಲಿ ಚಿನ್ನದ ಬೆಲೆ 10 ಗ್ರಾಂಗೆ 77,000 ರೂ. 24 ಕ್ಯಾರೆಟ್ನ 10 ಗ್ರಾಂ ಚಿನ್ನದ ಬೆಲೆ 78,100 ರೂಪಾಯಿ ದಾಖಲಾಗಿದೆ. ಆಭರಣ ಖರೀದಿದಾರರಿಗೆ, ಅದರ ಮಿಶ್ರಲೋಹ ಸಂಯೋಜನೆಯಿಂದಾಗಿ ಹೆಚ್ಚು ಬಾಳಿಕೆ ಬರುವ 22 ಕ್ಯಾರೆಟ್ ಚಿನ್ನದ ಬೆಲೆ 10 ಗ್ರಾಂಗೆ 71,610 ರೂ. ಇನ್ನು ಬೆಳ್ಳಿ ಬೆಲೆ ಪ್ರತಿ ಕೆ.ಜಿ.ಗೆ 96,900 ರೂ. ಎಲ್ಲೆಲ್ಲಿ ಎಷ್ಟು ಚಿನ್ನದ ಬೆಲೆ ಇದೆ..? ಇಲ್ಲಿದೆ ಡೀಟೆಲ್ಸ್ ದೆಹಲಿ 22 ಕ್ಯಾರೇಟ್ 10 ಗ್ರಾಂ ಚಿನ್ನದ ಬೆಲೆ ರೂ.71,760, 24 ಕ್ಯಾರೆಟ್ ಚಿನ್ನದ ಬೆಲೆ ರೂ.78,270 ಮುಂಬೈ 22 ಕ್ಯಾರೇಟ್ 10 ಗ್ರಾಂ ಚಿನ್ನದ ಬೆಲೆ ರೂ. 71,610. 24 ಕ್ಯಾರೆಟ್ ಚಿನ್ನದ ಬೆಲೆ ರೂ.78,120 ಅಹಮದಾಬಾದ್ 22 ಕ್ಯಾರೇಟ್ 10 ಗ್ರಾಂ ಚಿನ್ನದ ಬೆಲೆ ರೂ. 71,660. 24 ಕ್ಯಾರೆಟ್ ಚಿನ್ನದ ಬೆಲೆ ರೂ.78,170 ಚೆನ್ನೈ 22 ಕ್ಯಾರೇಟ್ 10 ಗ್ರಾಂ ಚಿನ್ನದ ಬೆಲೆ ರೂ. 71,610. 24 ಕ್ಯಾರೆಟ್…
ಶಿವಮೊಗ್ಗ: ಕನ್ನಡದ ಬಿಗ್ ಬಾಸ್ ಸೀಜನ್ 11ಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಇಂದಿಗೆ 19 ದಿನ ಬಿಗ್ ಬಾಸ್ ಕನ್ನಡ ಆರಂಭಗೊಂಡ ಬಳಿಕ, ಈಗ ದೊಡ್ಡ ಸಂಕಷ್ಟವೇ ಎದುರಾಗಿದೆ. ಬಿಗ್ ಬಾಸ್ ಶೋಗೆ ಶಿವಮೊಗ್ಗ ಜಿಲ್ಲೆಯ ಸಾಗರ ನಗರದ ಕೋರ್ಟ್ ತುರ್ತು ನೋಟಿಸ್ ಜಾರಿಗೊಳಿಸಿದೆ. ಹೀಗಾಗಿ ಕನ್ನಡದ ಬಿಗ್ಬಾಸ್ ಸೀಸನ್ 11ಗೆ ದೊಡ್ಡ ಸಂಕಷ್ಟ ಎದುರಾಗಿದೆ. ಶಿವಮೊಗ್ಗ ಜಿಲ್ಲೆಯ ಸಾಗರ ನ್ಯಾಯಾಲಯಕ್ಕೆ ವಕೀಲ ಕೆ.ಎಲ್ ಭೋಜರಾಜ್ ಅವರು ಕನ್ನಡದ ರಿಯಾಲಿಟಿ ಶೋ ಬಿಗ್ ಬಾಸ್ ಕನ್ನಡ 11 ಕುರಿತಂತೆ ಅರ್ಜಿಯನ್ನು ಸಲ್ಲಿಸಿದ್ದರು. ಅದರಲ್ಲಿ ದಿನಾಂಕ: 29-ಸೆಪ್ಟೆಂಬರ್-2024 ರಿಂದ Colors ಕನ್ನಡ ವಾಹಿನಿ ಹಾಗೂ voot app ನಲ್ಲಿ ಬಿಗ್ ಬಾಸ್ ಸೀಸನ್ 11 ಕಾರ್ಯಕ್ರಮವು ಪ್ರಸಾರವಾಗಿರುತ್ತದೆ. ಇದರಲ್ಲಿ ಕನ್ನಡದ ಖ್ಯಾತ ನಟರಾದ ಸುದೀಪ್ ಅವರು 17 ಸ್ಪರ್ಧಿಗಳನ್ನು ಘೋಷಣೆ ಮಾಡಿ, ಸಾರ್ವಜನಿಕರಿಗೆ ಸ್ಪರ್ಧಿಗಳನ್ನು ಪರಿಚಯಿಸಿರುತ್ತಾರೆ. ಈ 17 ಜನ ಸ್ಪರ್ಧಿಗಳ ಪೈಕಿ, ಅಪರಾಧ ಹಿನ್ನೆಲೆಯುಳ್ಳ ಚೈತ್ರ ಕುಂದಾಪುರ ಇವರನ್ನೂ ಸಹ ಸ್ಪರ್ಧಿಯಾಗಿ…
ನವದೆಹಲಿ: ಬಾಲವುಡ್ ನಟ ಸಲ್ಮಾನ್ ಖಾನ್ ಅವರಿಗೆ ಮತ್ತೊಂದು ಕೊಲೆ ಬೆದರಿಕೆ ಸಂದೇಶವನ್ನು ಕಳುಹಿಸಲಾಗಿದೆ. ಮುಂಬೈನ ಸಂಚಾರ ಪೊಲೀಸರಿಗೆ ಈ ಕೊಲೆ ಬೆದರಿಕೆ ಸಂದೇಶವನ್ನು ಕಳುಹಿಸಲಾಗಿದೆ. ಮುಂಬೈ ಟ್ರಾಫಿಕ್ ಪೊಲೀಸರಿಗೆ ಕಳುಹಿಸಲಾಗಿರುವಂತ ಕೊಲೆ ಬೆದರಿಕೆ ಸಂದೇಶದಲ್ಲಿ, ಬಾಬಾ ಸಿದ್ದೀಕಿ ಕೊಲೆ ಕೇಸನ್ನು ಹಗುರವಾಗಿ ತೆಗೆದುಕೊಳ್ಳಬೇಡಿ. ಅವರಿಗಿಂತ ಕೆಟ್ಟದಾಗಿ ಸಲ್ಮಾನ್ ಖಾನ್ ಕೊಲೆ ಮಾಡುವುದಾಗಿ ಬೆದರಿಕೆ ಸಂದೇಶದಲ್ಲಿ ತಿಳಿಸಲಾಗಿದೆ. ಇನ್ನೂ ಬಾಲಿವುಡ್ ನಟ ಸಲ್ಮಾನ್ ಖಾನ್ ಕೊಲೆ ಮಾಡಬಾರದು ಅಂದ್ರೆ 5 ಕೋಟಿ ನೀಡಬೇಕು. ಇಲ್ಲದೇ ಇದ್ದರೇ ಅವರನ್ನು ಸಿದ್ದೀಕಿಗಿಂತ ಕೆಟ್ಟದಾಗಿ ಕೊಲೆ ಮಾಡುವುದಾಗಿ ಕೊಲೆ ಬೆದರಿಕೆ ಸಂದೇಶದಲ್ಲಿ ಎಚ್ಚರಿಕೆ ನೀಡಲಾಗಿದೆ. https://kannadanewsnow.com/kannada/breaking-commissioner-orders-ccb-probe-into-allegations-of-royalty-against-inmates-in-kalaburagi-jail/ https://kannadanewsnow.com/kannada/meta-launches-joint-initiative-with-centre-to-empower-indians-against-online-scams/
ತುಮಕೂರು: ಜಿಲ್ಲೆಯ ಕೊರಟಗೆರೆ ನಗರದಲ್ಲಿ ಬಾಲಕನೊಬ್ಬನ ಮೇಲೆ ಬೀದಿ ನಾಯಿಗಳು ದಾಳಿ ನಡೆಸಿ ಗಂಭೀರವಾಗಿ ಗಾಯಗೊಳಿಸಿದಂತ ಘಟನೆ ನಡೆದಿದೆ. ಬೀದಿ ನಾಯಿಗಳ ದಾಳಿಗೆ ಒಳಗಾಗಿರುವಂತ ಬಾಲಕನನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ತುಮಕೂರು ಜಿಲ್ಲೆಯ ಕೊರಟಗೆರೆಯಲ್ಲಿ ಬೀದಿ ನಾಯಿಗಳು ಬಾಲಕನ ಮೇಲೆ ಅಟ್ಟ ಹಾಸ ಮೆರೆದಿದ್ದಾವೆ. ಕೊರಟಗೆರೆಯಲ್ಲಿ ಗಣಪತಿ ನೋಡಲು ತೆರಳಿದ್ದಂತ ಸತ್ಯ ಎಂಬ ಬಾಲಕನ ಮೇಲೆ ಬೀದಿ ನಾಯಿಗಳು ದಾಳಿ ಮಾಡಿ ಗಾಯಗೊಳಿಸಿದ್ದಾವೆ. ಬೀದಿ ನಾಯಿಗಳ ದಾಳಿಗೆ ಒಳಗಾದಂತ ಬಾಲಕ ಸತ್ಯನನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಈ ಸಂಬಂಧ ಕೊರಟಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. https://kannadanewsnow.com/kannada/breaking-commissioner-orders-ccb-probe-into-allegations-of-royalty-against-inmates-in-kalaburagi-jail/ https://kannadanewsnow.com/kannada/meta-launches-joint-initiative-with-centre-to-empower-indians-against-online-scams/
ನವದೆಹಲಿ: ದೆಹಲಿಯ ಶಹದಾರಾ ಪ್ರದೇಶದ ಮನೆಯೊಂದರಲ್ಲಿ ಮುಂಜಾನೆ ಬೆಂಕಿ ಕಾಣಿಸಿಕೊಂಡಿದೆ. ಈ ಅಗ್ನಿ ಅವಘಡದಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ. ಮತ್ತಿಬ್ಬರು ಮಕ್ಕಳನ್ನು ರಕ್ಷಣೆ ಮಾಡಲಾಗಿದೆ. ಅಗ್ನಿಶಾಮಕ ಇಲಾಖೆಯ ಪ್ರಕಾರ, ಬೆಳಿಗ್ಗೆ 5: 24 ಕ್ಕೆ ಘಟನೆಯನ್ನು ವರದಿ ಮಾಡಿ ಕರೆ ಬಂದಿದೆ. ಕಟ್ಟಡದ ಮೂರು ಮತ್ತು ನಾಲ್ಕನೇ ಮಹಡಿಗಳನ್ನು ಆವರಿಸಿದ ಬೆಂಕಿಯನ್ನು ನಿಯಂತ್ರಿಸಲು ಆರು ಅಗ್ನಿಶಾಮಕ ಯಂತ್ರಗಳನ್ನು ಘಟನಾ ಸ್ಥಳಕ್ಕೆ ಧಾವಿಸಿದ್ದಾರೆ. ಅಗ್ನಿಶಾಮಕ ದಳದವರು ಮನೆಯಿಂದ ಇಬ್ಬರು ವ್ಯಕ್ತಿಗಳ ಸುಟ್ಟ ದೇಹಗಳನ್ನು ಹೊರತೆಗೆದಿದ್ದಾರೆ. ಇದಲ್ಲದೆ, ಇಬ್ಬರು ಮಕ್ಕಳನ್ನು ರಕ್ಷಿಸಿ ತಕ್ಷಣ ಚಿಕಿತ್ಸೆಗಾಗಿ ಆಸ್ಪತ್ರೆಗೆ ಸಾಗಿಸಲಾಯಿತು. ಬೆಂಕಿ ಅವಘಡಕ್ಕೆ ಕಾರಣವೇನು ಎಂಬ ಬಗ್ಗೆ ತನಿಖೆ ನಡೆಯುತ್ತಿದೆ. https://kannadanewsnow.com/kannada/ai-technology-is-coming-to-the-rescue-of-your-phone-laptop-this-is-a-brahmastra-to-prevent-cyber-frauds/ https://kannadanewsnow.com/kannada/breaking-commissioner-orders-ccb-probe-into-allegations-of-royalty-against-inmates-in-kalaburagi-jail/
ನವದೆಹಲಿ: ಕ್ವಿಕ್ ಹೀಲ್ ಟೆಕ್ನಾಲಜೀಸ್ ಲಿಮಿಟೆಡ್ ಆಂಟಿಫ್ರಾಡ್ ಅನ್ನು ಪರಿಚಯಿಸಿದೆ. ಎಐ ಸಮಗ್ರ ವಂಚನೆ ತಡೆಗಟ್ಟುವ ಪರಿಹಾರ. ಈ ಉಪಕ್ರಮವು ಹೆಚ್ಚುತ್ತಿರುವ ಆರ್ಥಿಕ ವಂಚನೆಯ ಬೆದರಿಕೆಯನ್ನು ಎದುರಿಸುವ ಗುರಿಯನ್ನು ಹೊಂದಿದೆ. ಇದು ತಂತ್ರಜ್ಞಾನ-ಬುದ್ಧಿವಂತರು ಸೇರಿದಂತೆ ಅನೇಕ ವ್ಯಕ್ತಿಗಳ ಮೇಲೆ ಪರಿಣಾಮ ಬೀರಿದೆ. AntiFraud.AI ಬಿಡುಗಡೆಯು ಪರಿಣಾಮಕಾರಿ ವಂಚನೆ ತಡೆಗಟ್ಟುವಿಕೆಯ ಅಗತ್ಯವನ್ನು ಪರಿಹರಿಸುತ್ತದೆ, ವಿಶೇಷವಾಗಿ ಭಾರತೀಯ ಸೈಬರ್ ಕ್ರೈಮ್ ಸಮನ್ವಯ ಕೇಂದ್ರವು ವರದಿ ಮಾಡಿದ ಆತಂಕಕಾರಿ ಅಂಕಿಅಂಶಗಳನ್ನು ಗಮನಿಸಿದರೆ. 2024 ರ ಜನವರಿಯಿಂದ ಏಪ್ರಿಲ್ವರೆಗೆ, ಆರ್ಥಿಕ ವಂಚನೆಯು 1,750 ಕೋಟಿ ರೂ.ಗಿಂತ ಹೆಚ್ಚಿನ ನಷ್ಟಕ್ಕೆ ಕಾರಣವಾಯಿತು, ರಾಷ್ಟ್ರೀಯ ಸೈಬರ್ ಕ್ರೈಮ್ ರಿಪೋರ್ಟಿಂಗ್ ಪೋರ್ಟಲ್ ಮೂಲಕ 740,000 ಕ್ಕೂ ಹೆಚ್ಚು ದೂರುಗಳು ದಾಖಲಾಗಿವೆ. AntiFraud.AI ಬಳಕೆದಾರರ ಸುರಕ್ಷತೆಯನ್ನು ಹೆಚ್ಚಿಸಲು ಮತ್ತು ಸೂಕ್ಷ್ಮ ಡೇಟಾವನ್ನು ರಕ್ಷಿಸಲು ಹಲವಾರು ಸಾಧನಗಳನ್ನು ಹೊಂದಿದೆ. ಪ್ರಮುಖ ಲಕ್ಷಣಗಳಲ್ಲಿ ಇವು ಸೇರಿವೆ: ರಿಸ್ಕ್ ಪ್ರೊಫೈಲ್: ಬಳಕೆದಾರರ ಅಪಾಯದ ಮಟ್ಟವನ್ನು ನಿರ್ಣಯಿಸುತ್ತದೆ ಮತ್ತು ವಂಚನೆಗೆ ಒಡ್ಡಿಕೊಳ್ಳುವುದನ್ನು ಕಡಿಮೆ ಮಾಡಲು ಶಿಫಾರಸುಗಳನ್ನು ಒದಗಿಸುತ್ತದೆ. ವಂಚನೆ…
ಬೆಂಗಳೂರು: ಅನಾರೋಗ್ಯದಿಂದಾಗಿ ಸ್ಯಾಂಡಲ್ ವುಡ್ ನಿರ್ದೇಶಕ, ನಟಿ ಅಮೂಲ್ಯ ಸಹೋದರ ದೀಪಕ್ ಅರಸ್ ಇಂದು ನಿಧನರಾಗಿದ್ದಾರೆ. ಈ ಮೂಲಕ ಸ್ಯಾಂಡಲ್ ವುಡ್ ನಿರ್ದೇಶಕ ದೀಪಕ್ ಅರಸ್ ಇನ್ನಿಲ್ಲವಾಗಿದ್ದಾರೆ. ಅನಾರೋಗ್ಯದಿಂದ ಬಳಲುತ್ತಿದ್ದಂತ ದೀಪಕ್ ಅರಸ್(42) ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಕಿಡ್ನಿ ವೈಫಲ್ಯದಿಂದ ಬಳಲುತ್ತಿದ್ದರು ಎಂಬುದಾಗಿ ಹೇಳಲಾಗುತ್ತಿದೆ. ಇಂದು ಸಂಜೆ 7 ಗಂಟೆಯ ಸುಮಾರಿಗೆ ನಟಿ ಅಮೂಲ್ಯ ಅವರ ಸಹೋದರ, ಕನ್ನಡ ಚಲನ ಚಿತ್ರ ನಿರ್ದೇಶಕ ದೀಪಕ್ ಅರಸ್ ನಿಧನರಾಗಿದ್ದಾರೆ ಎಂಬುದಾಗಿ ಕುಟುಂಬಸ್ಥರು ತಿಳಿಸಿದ್ದಾರೆ. ಅಂದಹಾಗೇ ದೀಪಕ್ ಅರಸ್ ಕನ್ನಡದ ಮನಸಾಲಜಿ, ಶುಗರ್ ಫ್ಯಾಕ್ಟರಿ ಸಿನಿಮಾ ನಿರ್ದೇಶಿಸುವ ಮೂಲಕ, ಸ್ಯಾಂಡಲ್ ವುಡ್ ನಲ್ಲಿ ನಿರ್ದೇಶಕರಾಗಿ ತಮ್ಮನ್ನು ಗುರುತಿಸಿಕೊಂಡಿದ್ದರು. 2011ರಲ್ಲಿ ರಾಕೇಶ್ ಅಭಿನಯದಲ್ಲಿ ಮನಸಾಲಜಿ ಚಿತ್ರ ತೆರೆ ಕಂಡಿತ್ತು. 2012ರಲ್ಲಿ ಡಾರ್ಲಿಂಗ್ ಕೃಷ್ಣ, ಸೋನಲ್ ಮೊಂಥೆರೋ ಅಭಿನಯ ಶುಗರ್ ಫ್ಯಾಕ್ಟರಿ ಚಿತ್ರವನ್ನು ನಿರ್ದೇಶಿಸಿದ್ದರು. https://kannadanewsnow.com/kannada/bengaluru-2nd-airport-issue-deputy-cm-dk-shivakumar-to-chair-crucial-meeting-tomorrow/ https://kannadanewsnow.com/kannada/note-jan-shatabdi-train-to-stop-at-tiptur-railway-station-in-tumkur/
ಗಮನಿಸಿ: ಇನ್ಮುಂದೆ ತುಮಕೂರಿನ ‘ತಿಪಟೂರು ರೈಲು ನಿಲ್ದಾಣ’ದಲ್ಲಿ ‘ಜನ ಶತಾಬ್ದಿ ರೈಲು’ ನಿಲುಗಡೆ | Jan Shatabdi Train
ಬೆಂಗಳೂರು: ರೈಲ್ವೆ ಪ್ರಯಾಣಿಕರಿಗೆ ಗುಡ್ ನ್ಯೂಸ್ ಎನ್ನುವಂತೆ ತುಮಕೂರು ಜಿಲ್ಲೆಯ ತಿಪಟೂರು ರೈಲ್ವೆ ನಿಲ್ದಾಣದಲ್ಲೂ ಜನ ಶತಾಬ್ದಿ ರೈಲು ನಿಲುಗಡೆ ಮಾಡಲಾಗುತ್ತಿದೆ. ಈ ಬಗ್ಗೆ ಕೇಂದ್ರ ಸಚಿವ ವಿ.ಸೋಮಣ್ಣ ಮಾಹಿತಿ ಹಂಚಿಕೊಂಡಿದ್ದು, ಹುಬ್ಬಳ್ಳಿ-ಬೆಂಗಳೂರು, ಶಿವಮೊಗ್ಗ-ಬೆಂಗಳೂರು ಮಾರ್ಗವಾಗಿ ತೆರಳುವಂತ ಜನ ಶತಾಬ್ದಿ ರೈಲನ್ನು ತುಮಕೂರಿನ ತಿಪಟೂರು ರೈಲ್ವೆ ನಿಲ್ದಾಣದಲ್ಲಿ ನಿಲುಗಡೆ ಮಾಡಲು ರೈಲ್ವೆ ಸಚಿವಾಲಯ ಅನುಮೋದನೆ ನೀಡಿದೆ ಎಂದು ತಿಳಿಸಿದ್ದಾರೆ. ದೀಪಾವಳಿ ಹಬ್ಬಕ್ಕೆ ಊರಿಗೆ ಹೋಗೋರಿಗೆ ಗುಡ್ ನ್ಯೂಸ್: ವಿಶೇಷ ರೈಲುಗಳ ಸಂಚಾರ ದೀಪಾವಳಿ ಹಬ್ಬದ ಸಂದರ್ಭದಲ್ಲಿ ಪ್ರಯಾಣಿಕರ ಜನದಟ್ಟಣೆ ನಿಯಂತ್ರಿಸಿ, ಸುಗಮ ಸಂಚಾರಕ್ಕಾಗಿ ವಿಶೇಷ ರೈಲುಗಳ ಸಂಚಾರದ ವ್ಯವಸ್ಥೆ ಮಾಡಲಾಗಿದೆ. ಇದೇ ಅಕ್ಟೋಬರ್ 31, 2024 ರಿಂದ ನವೆಂಬರ್ 2, 2024 ರ ವರೆಗೆ ರಾಜ್ಯದಾದ್ಯಂತ ವಿಶೇಷ ರೈಲುಗಳು ಸಂಚರಿಸಲಿವೆ. ರಾಜ್ಯದ ಪ್ರಮುಖ ರೈಲ್ವೆ ನಿಲ್ದಾಣಗಳಾದ ಬೆಳಗಾವಿಯಿಂದ ಮೀರಜ್, ಬೆಂಗಳೂರಿನಿಂದ ಬೆಳಗಾವಿ, ಮೈಸೂರಿನಿಂದ ವಿಜಯಪುರದವರೆಗೆ ಹಾಗೂ ವಿಸ್ತರಿತ ರೈಲ್ವೆ ಮಾರ್ಗ ಹುಬ್ಬಳ್ಳಿಯಿಂದ ರಾಮೇಶ್ವರಂ ಹಾಗೂ ಋಷಿಕೇಶದಿಂದ ಹುಬ್ಬಳ್ಳಿವರೆಗೆ ವಿಶೇಷ ರೈಲುಗಳು ಸಂಚರಿಸಲಿವೆ. ಪ್ರಯಾಣಿಕರಿಗೆ…
ಬೆಂಗಳೂರು: ನಗರದಲ್ಲಿ ಈಗಾಗಲೇ ಬೆಂಗಳೂರು ಅಂತರರಾಷ್ಟ್ರೀಯ ವಿಮಾನ ನಿಲ್ದಾಣ ಕಾರ್ಯಾಚರಣೆ ನಡೆಯುತ್ತಿದೆ. ಇದರ ನಡುವೆ ಬೆಂಗಳೂರಲ್ಲಿ 2ನೇ ವಿಮಾನ ನಿಲ್ದಾಣ ನಿರ್ಮಾಣದ ಚರ್ಚೆ ನಡೆಯುತ್ತಿದೆ. ಈ ಸಂಬಂಧ ನಾಳೆ ಡಿಸಿಎಂ ಡಿ.ಕೆ ಶಿವಕುಮಾರ್ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಲಿದೆ. ಬೆಂಗಳೂರಿನ ವಿಧಾನಸೌಧದಲ್ಲಿ ಮಧ್ಯಾಹ್ನ 3 ಗಂಟೆಗೆ ಬೆಂಗಳೂರಲ್ಲಿ 2ನೇ ವಿಮಾನ ನಿಲ್ದಾಣ ನಿರ್ಮಾಣದ ಬಗ್ಗೆ ಮಹತ್ವದ ಸಭೆ ನಡೆಯಲಿದೆ. ಬೆಂಗಳೂರು ನಗರದಲ್ಲಿ ಯಾವ ಸ್ಥಳದಲ್ಲಿ 2ನೇ ವಿಮಾನ ನಿಲ್ದಾಣ ನಿರ್ಮಾಣ ಮಾಡಬೇಕು ಎನ್ನುವ ಕುರಿತಂತೆ ಮಹತ್ವದ ಚರ್ಚೆ ನಡೆಯಲಿದೆ. ನಾಳೆ ಡಿಸಿಎಂ ಡಿಕೆ ಶಿವಕುಮಾರ್, ಬೆಂಗಳೂರು ನಗರದ ಶಾಸಕರು ಈ ಸಭೆಯಲ್ಲಿ ಭಾಗಿಯಾಗಲಿದ್ದಾರೆ. ಈ ಮೂಲಕ ಬೆಂಗಳೂರು ನಗರದಲ್ಲಿ 2ನೇ ವಿಮಾನ ನಿಲ್ದಾಣ ನಿರ್ಮಾಣ ಕುರಿತಂತೆ ಮಹತ್ವದ ತೀರ್ಮಾನವನ್ನು ನಾಳೆಯ ಸಭೆಯಲ್ಲಿ ಕೈಗೊಳ್ಳೋ ಸಾಧ್ಯತೆ ಇದೆ. https://kannadanewsnow.com/kannada/bomb-threat-call-to-flights-govt-plans-to-add-callers-to-no-fly-list/ https://kannadanewsnow.com/kannada/ugc-net-june-2024-results-declared-heres-how-to-check-results/