Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ಮೂಡಾ ಭೂಮಿಯನ್ನು ಸಿಎಂ ಸಿದ್ಧರಾಮಯ್ಯ ಕುಟುಂಬ ಮುಕ್ತಿ ತಿಂದಿದೆ. ಸಿದ್ದಾಲಜಿ ಸಕಲ ಗುಣ ನನಗೆ ಚೆನ್ನಾಗಿ ಗೊತ್ತು ಎಂಬುದಾಗಿ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ವಾಗ್ಧಾಳಿ ನಡೆಸಿದ್ದಾರೆ. ಈ ಕುರಿತಂತೆ ಇಂದು ಎಕ್ಸ್ ನಲ್ಲಿ ಸುದೀರ್ಘ ಪೋಸ್ಟ್ ಮಾಡಿರುವಂತ ಅವರು, ಸುಳ್ಳು ಹೇಳುವುದು ನಿಮಗೆ ಅಭ್ಯಾಸವೋ, ಆಚಾರವೋ, ಚಾಳಿಯೋ ಗೊತ್ತಿಲ್ಲ. ಹಸಿಹಸಿ ಸುಳ್ಳು ಹೇಳುತ್ತಿರುವ ನಿಮ್ಮಲ್ಲಿ ನೈತಿಕತೆ ಸತ್ತಿದೆ. ಆರೋಪಿ ಸ್ಥಾನದಲ್ಲಿರುವ ನೀವು ನನ್ನ ಬಗ್ಗೆ, ನನ್ನ ತಂದೆಯವರ ಬಗ್ಗೆ ಆಡುತ್ತಿರುವ ಸುಳ್ಳುಗಳು ನಿಮ್ಮ ಯೋಗ್ಯತೆಗೆ ತಕ್ಕುದಲ್ಲ ಸಿದ್ಧರಾಮಯ್ಯನವರೇ.. ನಮ್ಮ ಬಗ್ಗೆ ಮಾತನಾಡುವ ಯೋಗ್ಯತೆಯೂ ನಿಮಗಿದೆ ಎಂದು ನನಗೆ ಅನಿಸುವುದಿಲ್ಲ ಎಂದಿದ್ದಾರೆ. ಮೂಡಾದವರು ನನಗೆ ನಿವೇಶನ ಹಂಚಿದ್ದಾರೆ, ನಿಜ. ಸ್ವಾಧೀನ ಪತ್ರವವನ್ನೂ ನೀಡಿದ್ದಾರೆ. ಆ ಪತ್ರವನ್ನು ನಾನು ಮಾಧ್ಯಮಗಳ ಮುಂದೆಯೂ ತೋರಿಸಿದ್ದೇನೆ. ಹಂಚಿದ ನಿವೇಶನದ ಜಾಗವನ್ನು ನನ್ನ ಸುಪರ್ದಿಗೆ ಕೊಡಬೇಕಲ್ಲವೇ? ಕೊಟ್ಟಿಲ್ಲ. ಹಾಗಾದರೆ, ಇದರಲ್ಲಿ ‘ಸಿದ್ದರಾಮಯ್ಯ ಮಾಡಿದ ಸಂಶೋಧನೆ ಏನಿದೆ?’ ‘ಸುಳ್ಳು ಸಂಶೋಧಕ ಸಿದ್ದರಾಮಯ್ಯ’ನವರೇ, ನಿಮ್ಮ ಮುಖಕ್ಕೆ ಮೆತ್ತಿಕೊಂಡಿರುವ ಕೊಳಕನ್ನು…
ವಯನಾಡು: ಕೇರಳದ ವಯಾನಾಡಿನಲ್ಲಿ ಭೀಕರ ಭೂ ಕುಸಿತ ಉಂಟಾಗಿತ್ತು. ಐವರು ಮಕ್ಕಳು ಸೇರಿದಂತೆ ಈವರೆಗೆ 54 ಮಂದಿ ಸಾವನ್ನಪ್ಪಿರುವುದಾಗಿ ತಿಳಿದು ಬಂದಿದೆ. ಇದೀಗ ಭೂ ಕುಸಿತದಲ್ಲಿ ಸಿಲುಕಿರುವಂತರ ರಕ್ಷಣಾ ಕಾರ್ಯಾಚರಣೆಗೆ ಭಾರತೀಯ ವಾಯುಪಡೆ ಇಳಿಯುತ್ತಿದೆ. ಈ ಬಗ್ಗೆ ಐಎಎಫ್ ಅಧಿಕಾರಿಗಳು ಮಾಹಿತಿ ನೀಡಿದ್ದು, ಕೇರಳ ಸರ್ಕಾರ ಮತ್ತು ಎನ್ಡಿಆರ್ಎಫ್ ಅಧಿಕಾರಿಗಳ ಸಮನ್ವಯದೊಂದಿಗೆ ವಯನಾಡ್ನಲ್ಲಿ ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆಗಾಗಿ ಭಾರತೀಯ ವಾಯುಪಡೆ (ಐಎಎಫ್) ತಲಾ ಒಂದು ಎಂಐ -17 ಮತ್ತು ಎಎಲ್ಎಚ್ ಧ್ರುವ್ ಹೆಲಿಕಾಪ್ಟರ್ಗಳನ್ನು ನಿಯೋಜಿಸಿದೆ ಎಂದು ತಿಳಿಸಿದ್ದಾರೆ. https://twitter.com/ANI/status/1818190490770300987 https://kannadanewsnow.com/kannada/paris-olympics-2024-manu-bhaker-sarabjit-singh-win-another-medal-for-india-in-shooting/ https://kannadanewsnow.com/kannada/hd-kumaraswamy-got-muda-site-40-years-ago-siddaramaiah/
ಪ್ಯಾರಿಸ್: ಇಲ್ಲಿ ನಡೆಯುತ್ತಿರುವಂತ ಪ್ಯಾರಿಸ್ ಒಲಂಪಿಕ್ಸ್ 2024ರ ಪಂದ್ಯಾವಳಿಯಲ್ಲಿ ಭಾರತಕ್ಕೆ ಮತ್ತೊಂದು ಪದಕ ಸಂದಿದೆ. 10 ಮೀಟರ್ ಏರ್ ಪಿಸ್ತೂಲ್ ಸ್ಪರ್ಧೆಯಲ್ಲಿ ಭಾರತದ ಮನು ಭಾಕರ್ ಹಾಗೂ ಸರಬ್ ಜಿತ್ ಸಿಂಗ್ ಅವರು ಐತಿಹಾಸಿಕ ಕಂಚಿನ ಪದಕವನ್ನು ಗೆದ್ದಿದ್ದಾರೆ. ಈಗಾಗಲೇ ಕಂಚಿನ ಪದಕ ಗೆದ್ದಿರುವ ಮನು ಭಾಕರ್ ಈ ಬಾರಿ ಮೂರನೇ ಸ್ಥಾನಕ್ಕಾಗಿ ಸರಬ್ಜೋತ್ ಸಿಂಗ್ ಅವರೊಂದಿಗೆ ಕಂಚಿನ ಪದಕಕ್ಕಾಗಿ ಸೆಣಸಿ, ಅಂತಿಮವಾಗಿ 10 ಮೀಟರ್ ಏರ್ ಪಿಸ್ತೂಲ್ ಜೋಡಿ ಸ್ಪರ್ಧೆಯಲ್ಲಿ ಕಂಚಿನ ಪದಕವನ್ನು ಗೆದ್ದುಕೊಂಡಿದ್ದಾರೆ. https://twitter.com/sportwalkmedia/status/1818192065123307641 ಪುರುಷರ ಸಿಂಗಲ್ಸ್ ಸ್ಕಲ್ಸ್ನಲ್ಲಿ ಬಲರಾಜ್ ಪನ್ವಾರ್ ಮತ್ತೆ ಕಣಕ್ಕಿಳಿಯಲಿದ್ದು, ಕ್ವಾರ್ಟರ್ ಫೈನಲ್ ಪಂದ್ಯದಲ್ಲಿ ಭಾರತದ ರೋವರ್ ಅತ್ಯುತ್ತಮ ಪ್ರದರ್ಶನವನ್ನು ನೀಡಿದರು. ಅಶ್ವಾರೋಹಿ ಸ್ಪರ್ಧೆಯು ಇಂದು ನಡೆಯಲಿದ್ದು, ಡ್ರೆಸೇಜ್ ವೈಯಕ್ತಿಕ ಗ್ರ್ಯಾಂಡ್ ಪ್ರಿಕ್ಸ್ ಸ್ಪರ್ಧೆಯ ಮೊದಲ ದಿನದಂದು ಅನುಷ್ ಅಗರ್ವಾಲ್ಲಾ ಭಾಗವಹಿಸಲಿದ್ದಾರೆ. ಪುರುಷರ ಬ್ಯಾಡ್ಮಿಂಟನ್ ಡಬಲ್ಸ್ ಗ್ರೂಪ್ ಹಂತದ ಪಂದ್ಯದಲ್ಲಿ ಸಾತ್ವಿಕ್ ಸಾಯಿರಾಜ್ ರಾಂಕಿರೆಡ್ಡಿ ಮತ್ತು ಚಿರಾಗ್ ಶೆಟ್ಟಿ ಇಂಡೋನೇಷ್ಯಾದ ಫಜರ್ ಮತ್ತು ಅಲ್ಫಿಯಾನ್-ಮೊಹಮ್ಮದ್…
ಪ್ಯಾರೀಸ್: ಪ್ಯಾರೀಸ್ ಒಲಂಪಿಕ್ಸ್ ನಲ್ಲಿ ಭಾರತದ ಮನು ಭಾಕರ್, ಸರಬ್ ಜಿತ್ ಸಿಂಗ್ ಕಂಚಿನ ಪದಕ ಗೆಲ್ಲುವ ಗುರಿ ಖಚಿತಗೊಂಡಿದೆ. 10 ಮೀಟರ್ ಏರ್ ಪಿಸ್ತೂಲ್ ಫೈನಲ್ ಪ್ರವೇಶಿಸಿರುವಂತ ಈ ಜೋಡಿಗೆ ಕಂಚಿನ ಪದಕವನ್ನು ಗೆದ್ದುಕೊಂಡಿದೆ. ಹೌದು ಪ್ಯಾರಿಸ್ ಒಲಂಪಿಕ್ಸ್ 2024ರ 10 ಮೀಟರ್ ಏರ್ ಪಿಸ್ತೂಲ್ ಮಿಶ್ರ ತಂಡ ಸ್ಪರ್ಧೆಯಲ್ಲಿ ಮನು ಭಾಕರ್-ಸರಬ್ಜೋತ್ ಸಿಂಗ್ ಕಂಚಿನ ಪದಕ ಗೆಲುವು ಸಾಧಿಸಿದ್ದಾರೆ. ಶೂಟಿಂಗ್ ನ ಮಿಶ್ರ ತಂಡ 10 ಮೀ ಏರ್ ಪಿಸ್ತೂಲ್ ಫೈನಲ್ ಪ್ರವೇಶಿಸಿದ್ದರು. ಭಾರತ ಇಲ್ಲಿ ರೋಲ್ ನಲ್ಲಿದೆ. ಗೆಲುವು ಸಾಧಿಸಲು 8 ಅಂಕಗಳು ಉಳಿದಿತ್ತು. ಇವುಗಳನ್ನು ಗಳಿಸುವ ಮೂಲಕ ಭಾರತ ತಂಡವು ಗೆಲುವ ಸಾಧಿಸಿ, ಕಂಚಿನ ಪದಕವನ್ನು ಗೆದ್ದುಕೊಂಡಿದೆ. https://twitter.com/divakar_ks/status/1818192702493573183 https://kannadanewsnow.com/kannada/hd-kumaraswamy-got-muda-site-40-years-ago-siddaramaiah/
ಕೇರಳ: ಇಲ್ಲಿನ ವಯನಾಡಿನಲ್ಲಿ ಉಂಟಾಗಿರುವಂತ ಭೂ ಕುಸಿತದಲ್ಲಿ ಆರಂಭದಲ್ಲಿ ಐವರು ಮಕ್ಕಳು ಸೇರಿದಂತೆ 19 ಮಂದಿ ಸಾವನ್ನಪ್ಪಿರುವುದಾಗಿ ಹೇಳಲಾಗುತ್ತಿತ್ತು. ಆದರೇ ಈ ಸಾವಿನ ಸಂಖ್ಯೆ 54ಕ್ಕೆ ಏರಿಕೆಯಾಗಿದೆ. ಈ ಕುರಿತಂತೆ ಕೇರಳ ಸಚಿವ ಎ.ಕೆ ಶಶಿಂದ್ರನ್ ಮಾಹಿತಿ ನೀಡಿದ್ದು, ವಯನಾಡಿನಲ್ಲಿ ಉಂಟಾಗಿರುವಂತ ಭೂ ಕುಸಿತದಲ್ಲಿ ಈವರೆಗೆ 54 ಜನರ ಮೃತದೇಹಗಳು ಪತ್ತೆಯಾಗಿವೆ. ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ ಎಂದಿದ್ದಾರೆ. ಒಟ್ಟಾರೆಯಾಗಿ ವಯನಾಡ್ ಭೂಕುಸಿತ ಘಯನೆಯಲ್ಲಿ ಸಾವಿನ ಸಂಖ್ಯೆ 54ಕ್ಕೆ ಏರಿಕೆಯಾಗಿದೆ. https://twitter.com/ANI/status/1818187764481065378 https://kannadanewsnow.com/kannada/hd-kumaraswamy-got-muda-site-40-years-ago-siddaramaiah/
ಪ್ಯಾರೀಸ್: ಪ್ಯಾರೀಸ್ ಒಲಂಪಿಕ್ಸ್ ನಲ್ಲಿ ಭಾರತದ ಮನು ಭಾಕರ್, ಸರಬ್ ಜಿತ್ ಸಿಂಗ್ ಕಂಚಿನ ಪದಕ ಗೆಲ್ಲುವ ಗುರಿ ಖಚಿತಗೊಂಡಿದೆ. 10 ಮೀಟರ್ ಏರ್ ಪಿಸ್ತೂಲ್ ಫೈನಲ್ ಪ್ರವೇಶಿಸಿರುವಂತ ಈ ಜೋಡಿಗೆ ಕಂಚಿನ ಪದಕ ಗೆಲುವು ಖಚಿತವಾಗಿದೆ. ಹೌದು ಪ್ಯಾರಿಸ್ ಒಲಂಪಿಕ್ಸ್ 2024ರ 10 ಮೀಟರ್ ಏರ್ ಪಿಸ್ತೂಲ್ ಮಿಶ್ರ ತಂಡ ಸ್ಪರ್ಧೆಯಲ್ಲಿ ಮನು ಭಾಕರ್-ಸರಬ್ಜೋತ್ ಸಿಂಗ್ ಕಂಚಿನ ಪದಕ ಗೆಲ್ಲುವ ಗುರಿ ಹೊಂದಿದ್ದಾರೆ. ಶೂಟಿಂಗ್ ನ ಮಿಶ್ರ ತಂಡ 10 ಮೀ ಏರ್ ಪಿಸ್ತೂಲ್ ಫೈನಲ್ ಪ್ರವೇಶಿಸಿದ್ದಾರೆ. ಭಾರತ ಇಲ್ಲಿ ರೋಲ್ ನಲ್ಲಿದೆ. ಗೆಲುವು ಸಾಧಿಸಲು 8 ಅಂಕಗಳು ಉಳಿದಿವೆ. ಸ್ಕೋರ್: ಭಾರತ 8-2 ದಕ್ಷಿಣ ಕೊರಿಯಾ. https://twitter.com/sportwalkmedia/status/1818190171596349622 ಈ ಪಂದ್ಯದಲ್ಲಿ ಎರಡೂ ತಂಡಗಳ ಶೂಟರ್ಗಳು ಅನೇಕ ಸುತ್ತುಗಳಲ್ಲಿ ಪರಸ್ಪರ ಸ್ಪರ್ಧಿಸಲಿದ್ದಾರೆ. ಪ್ರತಿ ಸುತ್ತು ಪ್ರತಿ ಶೂಟರ್ ನಿಂದ ಒಂದು ಶಾಟ್ ಅನ್ನು ಒಳಗೊಂಡಿರುತ್ತದೆ. – ಪ್ರತಿ ಸುತ್ತು ಪೂರ್ಣಗೊಂಡ ನಂತರ, ಹೆಚ್ಚಿನ ಸ್ಕೋರ್ ಹೊಂದಿರುವ ತಂಡವು ಅಂಕಗಳನ್ನು ಪಡೆಯುತ್ತದೆ. ಟೈ…
ಬೆಂಗಳೂರು: ಸಂಸದ ಕೋಟಾ ಶ್ರೀನಿವಾಸ ಪೂಜಾರಿ ಅವರನ್ನು ಲೋಕಸಭಾ ಸಚೇತಕರಾಗಿ ಆಯ್ಕೆ ಮಾಡಿ ನೇಮಕಾತಿ ಆದೇಶವನ್ನು ಬಿಜೆಪಿ ಹೊರಡಿಸಿದೆ. ಈ ಕುರಿತಂತೆ ಬಿಜೆಪಿಯ ಪಾರ್ಲಿಮೆಂಟರಿ ಆಫೀಸ್ ಸೆಕ್ರೇಟರಿ ಡಾ. ಶಿವ್ ಶಕ್ತಿ ನಾಥ್ ಭಕ್ಷಿ ಅವರು ಲೋಕಸಭಾ ಸ್ಪೀಕರ್ ಅವರಿಗೆ ಪತ್ರದಲ್ಲಿ ಹೆಸರನ್ನು ಆಯ್ಕೆ ಮಾಡಿರುವ ಬಗ್ಗೆ ಮಾಹಿತಿ ನೀಡಿದ್ದಾರೆ. ಲೋಕಸಭೆಯ ಮುಖ್ಯ ಸಚೇತಕರಾಗಿ ಡಾ.ಸಂಜಯ್ ಜೈಸ್ವಾಲ್ ಅವರನ್ನು ನೇಮಕ ಮಾಡಲಾಗಿದೆ. ಸಚೇತಕರಾಗಿ ಸಂಸದ ಕೋಟಾ ಶ್ರೀನಿವಾಸ ಪೂಜಾರಿ ಸೇರಿದಂತೆ 16 ಮಂದಿಯನ್ನು ಆಯ್ಕೆ ಮಾಡಿರುವುದಾಗಿ ತಿಳಿಸಿದ್ದಾರೆ. https://twitter.com/BJP4Karnataka/status/1817942805119127832 https://kannadanewsnow.com/kannada/breaking-four-killed-in-blast-in-jammu-and-kashmir-blast-at-jks-baramulla/ https://kannadanewsnow.com/kannada/shivamogga-mescom-engineer-shantakumar-arrested-in-ganja-case/ https://kannadanewsnow.com/kannada/false-allegations-levelled-against-cm-in-muda-scam-minister-k-j-george/
ಆದಿ ದುರ್ಗೆಯ ಆರಾಧನೆ ಇಂದಿನ ಪರಿಸ್ಥಿತಿಯಲ್ಲಿ ಪ್ರತಿ ಮನೆಯಲ್ಲೂ ಕಲ್ಯಾಣ ನಿಷೇದದಿಂದ ಮನೆಯಲ್ಲಿ ವಾಸವಾಗಿರುವ ಜನರಿಗೆ ಹೆಚ್ಚಿನ ಒತ್ತಡ ಉಂಟಾಗಿದೆ. ತಮ್ಮ ಮಗುವಿಗೆ ಮದುವೆ ಆಗದೇ ಇದ್ದಾಗ ಹೆಣ್ಣು ಮಗುವಾಗಲಿ ಗಂಡು ಮಗುವಾಗಲಿ ಮದುವೆಗೆ ನಿಷೇಧ ಹೇರಿದಾಗ ಪೋಷಕರ ಮನಸ್ಸು ತಲ್ಲಣಗೊಳ್ಳುತ್ತದೆ. ದೀರ್ಘ ದಾಂಪತ್ಯದ ನಂತರ ಮಗು ಭಾಗ್ಯ ದೊರೆಯದಿದ್ದರೂ ಎದೆಗುಂದುವುದು ಖಂಡಿತ. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ನಕ್ಷತ್ರಿ ತಂತ್ರಿ ನಂ:- 9686268564. ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಇಲ್ಲಿ ಪರಿಹಾರ ಶತಸಿದ್ಧ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ, ಮಕ್ಕಳು ಹೇಳಿದ ಮಾತು ಕೇಳದಿದ್ದರೆ, ವಿದ್ಯಾಭ್ಯಾಸದಲ್ಲಿ ಕಿರಿಕಿರಿ, ಆರೋಗ್ಯ ಸಮಸ್ಯೆ, ಆಸ್ತಿಯಲ್ಲಿ ಕಿರಿಕಿರಿ,…
ಶಿವಮೊಗ್ಗ: ಮದುವೆ ವೈಷ್ಯಮ್ಯದ ಹಿನ್ನಲೆಯಲ್ಲಿ ಮನೆಯೊಂದರ ಕಾಂಪೌಂಡ್ ಒಳಗಡೆ ಗಾಂಜಾ ಎಸೆದು, ಹುಡುಗಿಯ ತಂದೆಯನ್ನು ಗಾಂಜಾ ಕೇಸಲ್ಲಿ ಸಿಕ್ಕಿ ಹಾಕಿಸಲು ಮಾಡಿದಂತ ಪ್ಲಾನ್ ಉಲ್ಟಾ ಆಗಿದೆ. ಈಗ ಯುವತಿಯ ಮನೆಯವರನ್ನು ಗಾಂಜಾ ಕೇಸಲ್ಲಿ ಸಿಕ್ಕಿ ಹಾಕಿಸಲು ಹೋಗಿ, ಮೆಸ್ಕಾಂ ಇಂಜಿನಿಯರ್ ತಾನೇ ಬಂಧನಕ್ಕೆ ಒಳಗಾಗಿ ಜೈಲುಪಾಲಾಗಿರುವಂತ ಘಟನೆ ಸಾಗರದಲ್ಲಿ ನಡೆದಿದೆ. ಈ ಕುರಿತಂತೆ ಶಿವಮೊಗ್ಗ ಜಿಲ್ಲಾ ಪೊಲೀಸ್ ಇಲಾಖೆಯಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಲಾಗಿದ್ದು, ಸಾಗರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ಹುಲ್ಲತ್ತಿ ಗ್ರಾಮದ ಜತೇಂದ್ರ ರವರ ಮನೆಯ ಕಾಂಪೌಂಡ್ ಒಳಭಾಗದಲ್ಲಿ ದಿ:13-07-2024 ರಂದು ರಾತ್ರಿ ಸಮಯದಲ್ಲಿ ಯಾರೋ ಒಬ್ಬ ಅಸಾಮಿಯು ಗಾಂಜಾ ಪ್ಯಾಕೇಟ್ ಗಳನ್ನು ಹಾಕಿದ್ದು, ಈ ಕೃತ್ಯವನ್ನು ಶಾಂತಕುಮಾರ್ ಸ್ವಾಮಿ ಅವರು ಮಾಡಿರಬಹುದೆಂಬ ಅನುಮಾನ ಇರುವುದಾಗಿ ದೂರು ನೀಡಿರುತ್ತಾರೆ ಎಂದಿದೆ. ಈ ದೂರಿನ ಮೇರೆಗೆ ದಿ: 16-07-2024 ರಂದು ಸಾಗರ ಗ್ರಾಮಾಂತರ ಠಾಣೆಯಲ್ಲಿ ಅಪರಾಧ ಸಂಖ್ಯೆ 103/2024 ಕಲಂ 20(ಬಿ) (ii)(ಎ),8(ಸಿ) ರೀತ್ಯಾ ಪ್ರಕರಣ ದಾಖಲಾಗಿದ್ದು, ಆರೋಪಿತರ ಪತ್ತೆ…
ನವದೆಹಲಿ: ದೆಹಲಿಯ ಹಳೆಯ ರಾಜೇಂದ್ರ ನಗರದ ಕೋಚಿಂಗ್ ಸೆಂಟರ್ ನ ನೆಲಮಾಳಿಗೆಯಲ್ಲಿ ಪ್ರವಾಹದಿಂದಾಗಿ ಮೂವರು ಯುಪಿಎಸ್ಸಿ ಆಕಾಂಕ್ಷಿಗಳು ಸಾವನ್ನಪ್ಪಿದ ದುರಂತ ಸಾವಿನ ಬಗ್ಗೆ ತನಿಖೆ ನಡೆಸಲು ಗೃಹ ಸಚಿವಾಲಯ (ಎಂಎಚ್ಎ) ಸೋಮವಾರ ಸಮಿತಿಯನ್ನು ರಚಿಸಿದೆ. ಸಮಿತಿಯು ತನಿಖೆ ನಡೆಸುತ್ತದೆ ಮತ್ತು ಜವಾಬ್ದಾರಿಯನ್ನು ನಿಗದಿಪಡಿಸುತ್ತದೆ ಮತ್ತು ಈ ಸಂಬಂಧ ಕ್ರಮಗಳು ಮತ್ತು ನೀತಿ ಬದಲಾವಣೆಗಳನ್ನು ಸೂಚಿಸುತ್ತದೆ. 30 ದಿನಗಳಲ್ಲಿ ವರದಿ ಸಲ್ಲಿಸಲಾಗುವುದು. ಈ ಸಮಿತಿಯಲ್ಲಿ ಎಂಒಯುಎಚ್ಎ ಹೆಚ್ಚುವರಿ ಕಾರ್ಯದರ್ಶಿ, ದೆಹಲಿ ಸರ್ಕಾರದ ಪ್ರಧಾನ ಕಾರ್ಯದರ್ಶಿ (ಗೃಹ), ವಿಶೇಷ ಸಿಪಿ, ದೆಹಲಿ ಪೊಲೀಸ್, ಅಗ್ನಿಶಾಮಕ ಸಲಹೆಗಾರ ಮತ್ತು ಗೃಹ ಸಚಿವಾಲಯದ ಜೆಎಸ್ ಸಂಚಾಲಕರಾಗಿರುತ್ತಾರೆ. https://kannadanewsnow.com/kannada/delhi-coaching-centre-tragedy-l-g-announces-rs-10-lakh-compensation-for-kin-of-victims/ https://kannadanewsnow.com/kannada/false-allegations-levelled-against-cm-in-muda-scam-minister-k-j-george/