Subscribe to Updates
Get the latest creative news from FooBar about art, design and business.
Author: kannadanewsnow09
ನವದೆಹಲಿ: ರಾಷ್ಟ್ರ ರಾಜಧಾನಿಯ ಕೋಚಿಂಗ್ ಸೆಂಟರ್ ಪ್ರವಾಹ ಘಟನೆಯಲ್ಲಿ ಸಾವನ್ನಪ್ಪಿದ ಮೂವರು ಐಎಎಸ್ ಆಕಾಂಕ್ಷಿಗಳ ಕುಟುಂಬಗಳಿಗೆ ದೆಹಲಿ ಲೆಫ್ಟಿನೆಂಟ್ ಗವರ್ನರ್ ವಿ.ಕೆ.ಸಕ್ಸೇನಾ ಸೋಮವಾರ 10 ಲಕ್ಷ ರೂ.ಗಳ ಪರಿಹಾರವನ್ನು ಘೋಷಿಸಿದ್ದಾರೆ. ದೆಹಲಿ ಅಗ್ನಿಶಾಮಕ ಸೇವೆಗಳು, ಪೊಲೀಸ್ ಮತ್ತು ಎಂಸಿಡಿಯ ಜವಾಬ್ದಾರಿಯುತ ಅಧಿಕಾರಿಗಳ ವಿರುದ್ಧ 24 ಗಂಟೆಗಳಲ್ಲಿ ಕ್ರಮ ಕೈಗೊಳ್ಳುವುದಾಗಿ ಲೆಫ್ಟಿನೆಂಟ್ ಗವರ್ನರ್ ಭರವಸೆ ನೀಡಿದ್ದಾರೆ ಎಂದು ಅವರ ಕಚೇರಿಯನ್ನು ಉಲ್ಲೇಖಿಸಿ ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ. ಏತನ್ಮಧ್ಯೆ, ಕೋಚಿಂಗ್ ಸೆಂಟರ್ ದುರಂತವನ್ನು ಪರಿಶೀಲಿಸಲು ಗೃಹ ಸಚಿವಾಲಯವು ಸಮಿತಿಯನ್ನು ರಚಿಸಿದೆ ಮತ್ತು ಸಮಿತಿಯು 30 ದಿನಗಳಲ್ಲಿ ವರದಿಯನ್ನು ಸಲ್ಲಿಸಲಿದೆ. https://twitter.com/PIBHomeAffairs/status/1817934253478334941 https://kannadanewsnow.com/kannada/chief-minister-what-a-disservice-this-is-offer-badoota-jds-question/ https://kannadanewsnow.com/kannada/cm-siddaramaiah-demands-removal-of-nirmala-sitharaman-from-cabinet/ https://kannadanewsnow.com/kannada/false-allegations-levelled-against-cm-in-muda-scam-minister-k-j-george/
ಬೆಂಗಳೂರು: ಆಯವ್ಯಯದ ಲೆಕ್ಕಾಚಾರದ ಮೂಲಪಾಠವೇ ಗೊತ್ತಿಲ್ಲದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರನ್ನು ತಕ್ಷಣ ಸಂಪುಟದಿಂದ ಕೈಬಿಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಒತ್ತಾಯಿಸಿದ್ದಾರೆ. ಇಂಥವರ ಕೈಯಲ್ಲಿ ಹಣಕಾಸು ಖಾತೆ ನೀಡಿರುವುದು ಅತ್ಯಂತ ಅಪಾಯಕಾರಿ ನಿರ್ಧಾರ ಎಂದು ಅವರು ಹೇಳಿದ್ದಾರೆ. ಈ ಬಗ್ಗೆ ಮಾಧ್ಯಮ ಪ್ರಕಟಣೆ ಬಿಡುಗಡೆ ಮಾಡಿರುವಂತ ಅವರು, ಭಾನುವಾರದ ಪತ್ರಿಕಾಗೋಷ್ಠಿಯಲ್ಲಿ ನರೇಂದ್ರ ಮೋದಿ ಸರ್ಕಾರದಿಂದ ಕರ್ನಾಟಕಕ್ಕೆ ಆಗುತ್ತಿರುವ ಅನ್ಯಾಯವನ್ನು ಮರೆಮಾಚುವ ಹತಾಶ ಪ್ರಯತ್ನ ಮಾಡಿರುವ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ತಾವೇ ಹೆಣೆದ ಬಲೆಯಲ್ಲಿ ಸಿಕ್ಕಿ ಹಾಕಿಕೊಡಿರುವುದು ದುರಂತ. ಸಚಿವರ ಗೊಂದಲಮಯ ಹೇಳಿಕೆಗಳ ಸಿಕ್ಕುಗಳನ್ನೆಲ್ಲ ಬಿಡಿಸುತ್ತಾ ಹೋದರೆ ಕೊನೆಗೂ ಕೇಂದ್ರ ಸರ್ಕಾರ ಕರ್ನಾಟಕಕ್ಕೆ ನೀಡಿರುವುದು ಚೊಂಬು ಮಾತ್ರ ಎನ್ನುವುದು ಸಾಬೀತಾಗುತ್ತದೆ. ನಿರ್ಮಲಾ ಸೀತಾರಾಮನ್ ಅವರ ಪ್ರಕಾರ ಹಿಂದಿನ ಯುಪಿಎ ಸರ್ಕಾರ (2004-2014) ಹತ್ತು ವರ್ಷಗಳ ಅವಧಿಯಲ್ಲಿ ಕರ್ನಾಟಕಕ್ಕೆ ನೀಡಿರುವ ಅನುದಾನ ರೂ.60,779 ಕೋಟಿ. ಎನ್ಡಿಎ ಸರ್ಕಾರ (2014-2024) ಹತ್ತು ವರ್ಷಗಳ ಅವಧಿಯಲ್ಲಿ…
ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರೇ ಇದೆಂಥಾ ಅಪಚಾರ..!? ಬಾಗಿನ ಅರ್ಪಿಸಿ ಕಾಂಗ್ರೆಸ್ ಬಾಡೂಟ..! ತುತ್ತು ಅನ್ನಕ್ಕೂ ಸಂತ್ರಸ್ತರ ಪರದಾಟದ ಈ ಪರಿಸ್ಥಿತಿಯಲ್ಲಿ ಏನಿದು ಅಂತ ಜೆಡಿಎಸ್ ಪ್ರಶ್ನೆ ಮಾಡಿದೆ. ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದು, ರಾಜ್ಯದಲ್ಲಿ ನೆರೆಯಿಂದ ಹಲವು ಜಿಲ್ಲೆಗಳಲ್ಲಿ ಜನರು ಒಂದು ತುತ್ತು ಅನ್ನಕ್ಕೂ ಪರಿತಪಿಸುತ್ತಿದ್ರೆ, ಇತ್ತ ಮಜಾವಾದಿ ಸಿದ್ಧರಾಮಯ್ಯ ಸರ್ಕಾರ, ಮತ್ತವರ ಅಧಿಕಾರಿಗಳು ಭರ್ಜರಿ ಬಾಡೂಟ ತಿಂದು ಪಾರ್ಟಿ ಮಾಡಿದ್ದಾರೆ ಎಂಬುದಾಗಿ ಕಿಡಿಕಾರಿದೆ. ಮಂಡ್ಯದಲ್ಲಿ ಕಾವೇರಿಗೆ ಬಾಗಿನ ಅರ್ಪಿಸಿದ ಬಳಿಕ ಬಾಡೂಟ ಆಯೋಜಿಸಿ ಸಂಪ್ರದಾಯಕ್ಕೆ ಎಳ್ಳುನೀರು ಬಿಟ್ಟು, ಅಪಚಾರ ಎಸಗಿ ಕಾಂಗ್ರೆಸ್ ಸರ್ಕಾರ ಜನರ ಆಕ್ರೋಶಕ್ಕೆ ಗುರಿಯಾಗಿದೆ… ಜನಸಾಮಾನ್ಯರ ಭಾವನೆಗಳಿಗೆ ಬೆಲೆ ಕೊಡದ ಕಾಂಗ್ರೆಸ್ ಸರ್ಕಾರಕ್ಕೆ ಮುಂದಿನ ದಿನಗಳಲ್ಲಿ ತಕ್ಕ ಪಾಠ ಕಲಿಸುವುದು ಗ್ಯಾರಂಟಿ ಅಂತ ತಿಳಿಸಿದೆ. https://kannadanewsnow.com/kannada/bjp-jds-leaders-padayatra-to-be-inaugurated-at-8-30-am-on-august-3-workers-from-all-224-constituencies-to-participate/ https://kannadanewsnow.com/kannada/breaking-hc-asks-baba-ramdev-to-withdraw-cure-statement-of-coronil-for-covid-19/ https://kannadanewsnow.com/kannada/breaking-four-killed-in-blast-in-jammu-and-kashmir-blast-at-jks-baramulla/
ಬೆಂಗಳೂರು: ಹಗರಣ ನಡೆದಿರುವುದನ್ನು ಕಾಂಗ್ರೆಸ್ ಸರಕಾರ ಒಪ್ಪಿಕೊಂಡಿದೆ. ಆದರೆ, ಮುಡಾ ಹಗರಣದ ಕುರಿತು ಚರ್ಚಿಸಲು ಧೈರ್ಯ ತೋರದ ಕಾಂಗ್ರೆಸ್ ಸರಕಾರ ಮತ್ತು ಮುಖ್ಯಮಂತ್ರಿಗಳು ಸದನವನ್ನು ಮೊಟಕುಗೊಳಿಸಿ ಪಲಾಯನವಾದ ಮಾಡಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ಟೀಕಿಸಿದರು. ನಗರದಲ್ಲಿ ಇಂದು ನಡೆದ ಮೈಸೂರು ಪಾದಯಾತ್ರೆಯ ಪೂರ್ವ ತಯಾರಿ ಸಭೆಯ ಬಳಿಕ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಬಿಜೆಪಿ- ಜೆಡಿಎಸ್ ಪಕ್ಷಗಳು ಮೈಸೂರಿಗೆ ಪಾದಯಾತ್ರೆ ನಡೆಸಲಿವೆ. ಇದಕ್ಕೆ ಪೂರ್ವಭಾವಿಯಾಗಿ ಇವತ್ತು ಪ್ರಮುಖರ ಸಭೆ ನಡೆಸಿದ್ದೇವೆ. ಭ್ರಷ್ಟ ಕಾಂಗ್ರೆಸ್ ಸರಕಾರದ ಹಗರಣಗಳ ವಿರುದ್ಧ ನಡೆಸುವ ಪಾದಯಾತ್ರೆ, ಹೋರಾಟದ ಕುರಿತು ಚರ್ಚಿಸಲಾಗಿದೆ ಎಂದರು. ಕಾರ್ಯಕರ್ತರಲ್ಲಿ ರಣೋತ್ಸಾಹ ಮೂಡಿದೆ. ಆ.3ರಂದು ಬೆಳಿಗ್ಗೆ 8.30ಕ್ಕೆ ಪಾದಯಾತ್ರೆಯ ಉದ್ಘಾಟನೆ ನೆರವೇರಲಿದೆ. ರಾಜ್ಯದ ಹಿರಿಯ ನಾಯಕರಾದ ಬಿ.ಎಸ್.ಯಡಿಯೂರಪ್ಪ, ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ, ಜೆಡಿಎಸ್ ಅಧ್ಯಕ್ಷ ಮತ್ತು ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ, ಎರಡೂ ಪಕ್ಷಗಳ ಹಿರಿಯ ಮುಖಂಡರು ಭಾಗವಹಿಸುತ್ತಾರೆ ಎಂದು ತಿಳಿಸಿದರು. ಕೆಂಗೇರಿ ಕೆಂಪಮ್ಮ ದೇವಸ್ಥಾನ, ಗಣಪತಿ ದೇವಸ್ಥಾನದಲ್ಲಿ…
ಚಾಮರಾಜನಗರ: “ಸಂಕಷ್ಟ ಕಾಲದಲ್ಲಿ ನಮ್ಮನ್ನು ಕಾಪಾಡಿದ ಕಪಿಲಾ ನದಿಗೆ ನಮ್ಮೆಲ್ಲರ ನಮನಗಳು. ಈ ನದಿ ನಮ್ಮ ಗೌರವ ಉಳಿಸಿದೆ” ಎಂದು ಹೇಳಿದರು. ಕಬಿನಿ ಅಣೆಕಟ್ಟಿಗೆ ಬಾಗಿನ ನಂತರ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಅವರು “ಕಾವೇರಿ ಜಲಾನಯನ ಪ್ರದೇಶದಲ್ಲಿ ನೀರಿಲ್ಲದೆ ಇದ್ದಾಗ, ಕಾವೇರಿ ನೀರು ಹರಿಸಬೇಕು ಎನ್ನುವ ತೀರ್ಪು ಬಂದಾಗ, ಎಲ್ಲ ಸಂಕಷ್ಟ ಕಾಲದಲ್ಲೂ ಕಪಿಲಾ ನದಿಯಿಂದ ನೀರು ಹರಿಸಲಾಗಿದೆ” ಎಂದರು. ಕಳೆದ ವರ್ಷ ಕಬಿನಿಯಲ್ಲಿ ನೀರಿರಲಿಲ್ಲ. ಈ ಬಾರಿ ಮೈತುಂಬಿ ಹರಿಯುತ್ತಿದೆ. ಕಪಿಲಾ ನದಿಗೆ ನಮ್ಮಿಂದ ಹಾಗೂ ಸರ್ಕಾರದಿಂದ ಕೋಟಿ ಕೋಟಿ ನಮನಗಳು” ಎಂದು ಸಂತಸ ವ್ಯಕ್ತಪಡಿಸಿದರು. https://kannadanewsnow.com/kannada/e-property-software-to-be-shut-down-tomorrow-service-not-available/ https://kannadanewsnow.com/kannada/breaking-hc-asks-baba-ramdev-to-withdraw-cure-statement-of-coronil-for-covid-19/
ಬೆಂಗಳೂರು: ಇ-ಸ್ವತ್ತು ತಂತ್ರಾಂಶದ ಹೊಸ ಅವತರಣಿಕೆಯನ್ನು ಪರಿಚಯಿಸುತ್ತಿರುವ ಪ್ರಕ್ರಿಯೆ ಮುಂದುವರೆದಿದ್ದು, ಮತ್ತೆ ಒಂದು ದಿನ 30.07.2024 ಇ-ಸ್ವತ್ತು ತಂತ್ರಾಂಶವು ಕಾರ್ಯನಿರ್ವಹಿಸುವುದಿಲ್ಲ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ಸಾರ್ವಜನಿಕರ ಸಹಕಾರ ಕೋರಿರುವ ಸಚಿವರು ಸಾರ್ವಜನಿಕರ ಅನಾನುಕೂಲತೆಯನ್ನು ಕಡಿಮೆ ಮಾಡಲು ತಂತ್ರಾಂಶ ಕಾರ್ಯಾರಂಭಿಸಿದ ನಂತರ ಇ-ಸ್ವತ್ತು ತಂತ್ರಾಂಶದ ಕಾರ್ಯಾವಧಿಯನ್ನು 2024ರ ಆಗಸ್ಟ್ 2ರವರೆಗೆ ಪ್ರತಿ ನಿತ್ಯ ಸಂಜೆ 8 ಗಂಟೆಯವರೆಗೂ ಸೇವೆ ಸಲ್ಲಿಸಲು ಕಾಲಾವಧಿ ವಿಸ್ತರಿಸಲಾಗುವುದು ಎಂದೂ ಹೇಳಿದ್ದಾರೆ. ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಇ-ಸ್ವತ್ತು ತಂತ್ರಾಂಶದ ಹೊಸ ಅವತರಣಿಕೆಯನ್ನು ಅಭಿವೃದ್ದಿಪಡಿಸಲಾಗುತ್ತಿದ್ದು ಈ ತಂತ್ರಾಂಶದ ಹೊಸ ಅವತರಣಿಕೆಯನ್ನು ಸಾರ್ವಜನಿಕರ ಸೇವೆಗೆ ಬಿಡುಗಡೆ ಮಾಡಲಾಗುತ್ತಿದೆ ಎಂದು ತಿಳಿಸಿರು ಸಚಿವರು. ಇ-ಸ್ವತ್ತು ತಂತ್ರಾಂಶದ ಬಳಕೆದಾರರಿಗೆ ಅನುಕೂಲವಾಗುವಂತೆ ಸಮಗ್ರ ಆವೃತ್ತಿಯೊಂದಿಗೆ ಸಜ್ಜುಗೊಳಿಸಲಾಗಿರುವ ಈ ತಂತ್ರಾಂಶದ ಮೂಲಕ ಸಾರ್ವಜನಿಕರ ಆಸ್ತಿಯನ್ನು ಗ್ರಾಮಠಾಣದ ಒಳಗೆ ಆಥವಾ ಹೊರಗೆ ಬರುವ ಬಗ್ಗೆ ಅಳತೆ ಮಾಡಿಸುವ ಪ್ರಕ್ರಿಯೆಯನ್ನು ಗ್ರಾಮ ಪಂಚಾಯತಿಯ ಹಂತದಲ್ಲಿ…
ಪ್ಯಾರಿಸ್ : ಪ್ಯಾರಿಸ್ ಒಲಿಂಪಿಕ್ಸ್ 2024ರ ಫೈನಲ್ ಪಂದ್ಯದಲ್ಲಿ ಸರ್ಬಿಯಾದ ಟೆನಿಸ್ ತಾರೆ ನೊವಾಕ್ ಜೊಕೊವಿಕ್ ಅವರು ರಾಫೆಲ್ ನಡಾಲ್ ಅವರನ್ನು ಮಣಿಸಿದ್ದಾರೆ. ಹೀಗಾಗಿ ಪ್ಯಾರೀಸ್ ಒಲಂಪಿಕ್ಸ್ 2024ರ ಪಂದ್ಯಾವಳಿಯಿಂದ 2ನೇ ಸುತ್ತಿನಲ್ಲಿ ಸೋಲು ಕಂಡು, ರಾಫೆಲ್ ನಾಡಲ್ ಪಂದ್ಯಾವಳಿಯಿಂದ ಹೊರ ಬಿದ್ದಿದ್ದಾರೆ. ಪ್ಯಾರಿಸ್ ಒಲಿಂಪಿಕ್ಸ್ನ ಎರಡನೇ ದಿನದಂದು ಇತಿಹಾಸ ಬರೆದ ನಂತರ, ಭಾರತೀಯ ತಂಡವು ಜುಲೈ.29 ರ ಸೋಮವಾರ ದೇಶದ ಪದಕಗಳ ಪಟ್ಟಿಗೆ ಹೆಚ್ಚಿನ ಪದಕಗಳನ್ನು ಸೇರಿಸಲು ಎದುರು ನೋಡುತ್ತಿದೆ. ಮಹಿಳೆಯರ 10 ಮೀಟರ್ ಏರ್ ರೈಫಲ್ ವಿಭಾಗದಲ್ಲಿ ಪದಕ ಸ್ಪರ್ಧೆಯಲ್ಲಿ ಸ್ಥಾನ ಪಡೆದಿರುವ ರಮಿತಾ ಜಿಂದಾಲ್ ಅವರಿಂದ ಭಾರತ ಹೆಚ್ಚಿನ ಭರವಸೆ ಹೊಂದಿದೆ. ಅರ್ಜುನ್ ಬಬುಟಾ ಕೂಡ ಪದಕ ಗೆಲ್ಲುವ ಅವಕಾಶವನ್ನು ಹೊಂದಿದ್ದರೂ, ಅಂತಿಮವಾಗಿ ಸೋಲು ಕಂಡು, ಪದಕದ ಭರವಸೆ ಸುಳ್ಳಾಗಿತ್ತು. ಭಾರತದ ಪುರುಷರ ಬಿಲ್ಲುಗಾರಿಕೆ ತಂಡ ಇಂದು ಕಣಕ್ಕಿಳಿಯಲಿದೆ. ಬಿಲ್ಲುಗಾರರು ಕ್ವಾರ್ಟರ್ ಫೈನಲ್ ನಲ್ಲಿ ಸ್ಪರ್ಧಿಸಲಿದ್ದಾರೆ. ಎಲ್ಲಾ ಹಾದಿಯಲ್ಲಿ ಸಾಗುವ ಭರವಸೆ ಹೊಂದಿದ್ದಾರೆ. ಭಾರತ ಪುರುಷರ ಹಾಕಿ…
ಮಂಡ್ಯ : ಕಾವೇರಿಗೆ ವಿವಾದ ನಾಲ್ಕು ರಾಜ್ಯಗಳಿಗೆ ಅಂದರೆ ತಮಿಳುನಾಡು, ಕರ್ನಾಟಕ, ಕೇರಳ, ಪಾಂಡಿಚೆರಿ ರಾಜ್ಯಗಳಿಗೆ ಸಂಬಂಧಿಸಿದೆ ತಮಿಳುನಾಡಿನವರು ರಾಜಕೀಯ ಲಾಭಕ್ಕಾಗಿ ಕ್ಯಾತೆ ಮೇಕೆದಾಟು ಯೋಜನೆಯ ಕುರಿತು ತೆಗೆಯುತ್ತಲೇ ಇರುತ್ತಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಕಾವೇರಿಗೆ ಪೂಜೆ ಸಲ್ಲಿಸಿ ಬಾಗಿನ ಅರ್ಪಿಸಿದ ನಂತರ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಈ ವಿವಾದ ಸರ್ವೋಚ್ಛ ನ್ಯಾಯಾಲಯದಲ್ಲಿ ತೀರ್ಮಾನವಾಗಿದ್ದು ಸಾಧಾರಣ ವರ್ಷದಲ್ಲಿ ಜಲಾಶಯಗಳು ತುಂಬಿದ ಸಂದರ್ಭದಲ್ಲಿ 177.25 ಟಿಎಂಸಿ ನೀರನ್ನು ಕೊಡಬೇಕೆಂದಿದೆ. 2022-2023ರಲ್ಲಿ ಸುಮಾರು 665 ಟಿಎಂಸಿ ನೀರು ಹರಿದಿದೆ. ಈ ವರ್ಷವೂ ಕೂಡ ಹೆಚ್ಚು ಹೋಗುವ ಸಾಧ್ಯತೆಯಿದೆ. ಈಗಾಗಲೇ 83. ಟಿಎಂಸಿ ಗೂ ಹೆಚ್ಚು ನೀರು ತಮಿಳುನಾಡಿಗೆ ಹರಿದು ಹೋಗಿದೆ. ಸಂಕಷ್ಟದ ವರ್ಷದಲ್ಲಿ ಅಷ್ಟು ನೀರನ್ನು ಕೊಡಲು ಸಾಧ್ಯವಿಲ್ಲ. ಈ ವರ್ಷ ಹೆಚ್ಚು ನೀರನ್ನು ಕೊಡಲಾಗುವುದು. ಸಮುದ್ರಕ್ಕೆ ಸೇರುವ ಹೆಚ್ಚುವರಿ ನೀರನ್ನು ತಡೆಹಿಡಿಯಲು ಬ್ಯಾಲೆಂನ್ಸಿಂಗ್ ರಿಸರ್ವಾಯರ್ ಕಟ್ಟಿದರೆ ನಮಗಿಂತ ಜಾಸ್ತಿ ತಮಿಳುನಾಡಿಗೆ ಅನುಕೂಲವಾಗುತ್ತದೆ ಎಂದರು. ಕೇಂದ್ರದಿಂದ ಮಂಜೂರಾತಿ ಕೊಡಿಸಲು ಒತ್ತಾಯಿಸಬೇಕು…
ಬೆಂಗಳೂರು: ರಾಜ್ಯದಲ್ಲಿ ರಸ್ತೆ ಅಪಘಾತಗಳನ್ನು ತಪ್ಪಿಸೋ ನಿಟ್ಟಿನಲ್ಲಿ ಪೊಲೀಸ್ ಇಲಾಖೆ ಮಹತ್ವದ ಕ್ರಮವಹಿಸಿದೆ. ಇದಕ್ಕಾಗಿ ವಾಹನಗಳ ವೇಗಕ್ಕೆ ಮಿತಿ ನಿಗದಿ ಪಡಿಸಲಾಗಿದೆ. ಒಂದು ವೇಳೆ ಈ ಮಿತಿ ಮೀರಿದರೇ ಅಂತಹ ವಾಹನ ಸವಾರರ ವಿರುದ್ಧ ಎಫ್ಐಆರ್ ಹಾಗೂ ದಂಡ ಹಾಕಲಾಗುತ್ತದೆ. ಈ ಕುರಿತಂತೆ ಮಾಹಿತಿ ಹಂಚಿಕೊಂಡಿರುವಂತ ಸಂಚಾರ ಮತ್ತು ರಸ್ತೆ ಸುರಕ್ಷತಾ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಅಲೋಕ್ ಕುಮಾರ್ ಅವರು, ವೇಗದ ಸಂಚಾರಕ್ಕೆ ಕಡಿವಾಣ ಹಾಕುವ ಉದ್ದೇಶದಿಂದ ಆಗಸ್ಟ್ 1 ರಿಂದ 130 ಕಿ.ಮೀ. ಗಿಂತ ಹೆಚ್ಚಿನ ವೇಗದಲ್ಲಿ ಸಂಚರಿಸುವ ವಾಹನಗಳ ವಿರುದ್ಧ ಎಫ್ಐಆರ್ ದಾಖಲಿಸಲಾಗುವುದು. ರಾಜ್ಯಾದ್ಯಂತ ಈ ಕ್ರಮ ಜಾರಿಗೆ ಬರಲಿದೆ ಎಂದು ತಿಳಿಸಿದ್ದಾರೆ. ಸ್ಪಾಟ್ ಸ್ಪೀಡ್ ಮತ್ತು ಸೆಕ್ಷನಲ್ ಸ್ಪೀಡ್ ಆಧಾರದಲ್ಲಿ ವಾಹನ ಚಾಲಕರ ವಿರುದ್ಧ ಪ್ರಕರಣ ದಾಖಲಿಸಿ, ದಂಡ ವಿಧಿಸಲಾಗುವುದು. ಈ ರೀತಿಯ ಪ್ರಕರಣಗಳಲ್ಲಿ ರೂ. 2 ಸಾವಿರದವರೆಗೆ ದಂಡ ಮತ್ತು 6 ತಿಂಗಳು ಜೈಲು ಶಿಕ್ಷೆ ವಿಧಿಸಲು ಅವಕಾಶವಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.…
ಬೆಂಗಳೂರು: ರಾಜ್ಯದಲ್ಲಿ ನೆರೆ ಪರಿಹಾರ ಹಾಗೂ ಇತರೆ ಕಾರ್ಯಕ್ರಮಗಳಿಗೆ ಒಟ್ಟು 777 ಕೋಟಿ ಬಿಡುಗಡೆ ಮಾಡಲಾಗಿದೆ. ಹಾಸನ ಜಿಲ್ಲೆಗೆ 23 ಕೋಟಿ ನೀಡಲಾಗಿದೆ ಅಂತ ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ. ರಾಜ್ಯದಲ್ಲಿ ಕಳೆದ ಕೆಲ ದಿನಗಳಿಂದ ಸುರಿದಂತ ಭಾರೀ ಮಳೆಯಿಂದಾಗಿ ಹಲವೆಡೆ ಮನೆಗಳು ಬಿದ್ದು ಹೋಗಿದ್ದಾವೆ. ನೀರು ಬೆಳೆಯ ಮೇಲೆ ನುಗ್ಗಿದ ಪರಿಣಾಮ, ಬೆಳೆಹಾನಿ ಕೂಡ ಆಗಿದೆ. ಈ ರೈತರಿಗೆ ನೆರವಾಗುವ ಸಲುವಾಗಿ ನೆರೆ ಪರಿಹಾರವಾಗಿ ರಾಜ್ಯ ಸರ್ಕಾರದಿಂದ 777 ಕೋಟಿಯನ್ನು ಬಿಡುಗಡೆ ಮಾಡಲಾಗಿದೆ. ನದಿಯ ಬದಿಗಳಲ್ಲಿ ಹಾಗೂ ಜಲಾಶಯದ ಹಿನ್ನೀರು ಬದಿಯಲ್ಲಿ ನೆರೆ ಇಲ್ಲದ ಸಂದರ್ಭದಲ್ಲಿ ರೈತರು ಬೆಳೆಯನ್ನು ಬೆಳೆಯುವುದು ಹಾಗೂ ನೆರೆ ಬಂದ ಸಂದರ್ಭದಲ್ಲಿ ಹಿಂದಕ್ಕೆ ಸರಿಯುವುದು ವಾಡಿಕೆಯಾಗಿದೆ.ಇದು ಕಾನೂನಾತ್ಮಕ ವಾಗಿ ತಪ್ಪು ನೆರೆ ಬಂದ ಸಂದರ್ಭದಲ್ಲಿ ಪ್ರಾಣ ಹಾನಿಯಾಗಬಹುದು ಹಾಗೂ ಇಲ್ಲಿ ಬೆಳೆಯುವ ಬೆಳೆಗಳಿಗೆ ಬೆಳೆ ಹಾನಿ ಪರಿಹಾರ ಒದಗಿಸುವುದು ಸಾಧ್ಯವಿಲ್ಲ ಎಂದರು. ವಿಪತ್ತು ನಿರ್ವಹಣೆಗಾಗಿ ರಾಜ್ಯದಲ್ಲಿ ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಖಾತೆಗೆ ಒಟ್ಟು 770…