Subscribe to Updates
Get the latest creative news from FooBar about art, design and business.
Author: kannadanewsnow09
ನವದೆಹಲಿ : ಮತ ಕಳ್ಳತನ ವಿರುದ್ಧದ ಸಹಿ ಸಂಗ್ರಹ ಅಭಿಯಾನವನ್ನು ಕರ್ನಾಟಕದಲ್ಲಿ ಯಶಸ್ವಿಯಾಗಿ ಪೂರ್ಣಗೊಳಿಸಲಾಗಿದ್ದು, ಕೆಪಿಸಿಸಿ ಅಧ್ಯಕ್ಷರಾದ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ರಾಜ್ಯದಲ್ಲಿ ಸಂಗ್ರಹಿಸಲಾದ 1,12,41,000 ಸಹಿಗಳ ದಾಖಲೆಗಳನ್ನು ಎಐಸಿಸಿಗೆ ಸಲ್ಲಿಸಿದರು. ದೆಹಲಿಯಲ್ಲಿರುವ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸಕ್ಕೆ ಸೋಮವಾರ ಭೇಟಿ ನೀಡಿದ ಶಿವಕುಮಾರ್ ಅವರ ನೇತೃತ್ವದ ಕರ್ನಾಟಕ ಕಾಂಗ್ರೆಸ್ ಮುಖಂಡರ ನಿಯೋಗವು ಸಹಿ ಸಂಗ್ರಹ ದಾಖಲೆಗಳ ಒಂದು ಪೆಟ್ಟಿಗೆಯನ್ನು ಸಾಂಕೇತಿಕವಾಗಿ ಸಲ್ಲಿಸಿದರು. ನಂತರ ಉಳಿದ ಪೆಟ್ಟಿಗೆಗಳನ್ನು ಎಐಸಿಸಿ ನೂತನ ಕಟ್ಟಡ ಇಂದಿರಾ ಭವನದಲ್ಲಿ ಎಐಸಿಸಿ ಕಾರ್ಯದರ್ಶಿ ನೆಟ್ಟ ಡಿಸೋಜ ಅವರಿಗೆ ಹಸ್ತಾಂತರಿಸಲಾಯಿತು. ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷದ 40 ಜಿಲ್ಲೆಗಳಲ್ಲಿ (ರಾಜಕೀಯ ಉದ್ದೇಶಕ್ಕಾಗಿ ರಚಿಸಿಕೊಂಡಿರುವ ಜಿಲ್ಲೆಗಳು) ಸಹಿ ಸಂಗ್ರಹಿಸಲಾಗಿದೆ. ರಾಜ್ಯದಲ್ಲಿ ನಡೆದ ಅಭಿಯಾನದಲ್ಲಿ ಅತಿ ಹೆಚ್ಚು ಸಹಿ ಸಂಗ್ರಹಿಸಿದ ಜಿಲ್ಲಾಧ್ಯಕ್ಷರುಗಳು ಕೂಡ ಶಿವಕುಮಾರ್ ಅವರ ಜೊತೆಯಲ್ಲಿ ದೆಹಲಿಗೆ ಹೋಗಿ ಸಹಿ ಸಂಗ್ರಹ ದಾಖಲೆಗಳನ್ನು ನೀಡಿದ್ದಾರೆ. ಈ ಸಂದರ್ಭದಲ್ಲಿ ಎಐಸಿಸಿ ಕಾರ್ಯದರ್ಶಿ ಅಭಿಷೇಕ್ ದತ್, ಕೆಪಿಸಿಸಿ ಕಾರ್ಯಾಧ್ಯಕ್ಷ ಡಾ ಜಿ…
ಸುಮ್ಮನೆ ಮನೆ ಕಟ್ಟಿಸಿ ಮದುವೆ ಮಾಡುತ್ತೇನೆ ಎಂದಿದ್ದಾರಾ? ಮದುವೆ ಅಥವಾ ಮನೆ ಕಟ್ಟುವ ಮೊದಲು ಸಾಕು. ನಿಮ್ಮ ಜಾತಕ ಮತ್ತು ವಾಸ್ತು ಪ್ರಕಾರ, ನಿಮ್ಮ ಮನೆಯನ್ನು ಈ ದಿಕ್ಕಿನಲ್ಲಿ ಇರಿಸಿದರೆ, ನಿಮ್ಮ ಜೀವನವು ಉತ್ತಮವಾಗಿರುತ್ತದೆ! ಆ ರೀತಿಯಲ್ಲಿ ನಿಮ್ಮ ಮನೆಯ ದಿಕ್ಕಿಗೆ ಅನುಗುಣವಾಗಿ ಪೆಡಲ್ಗಳನ್ನು ಬಳಸಿದರೆ ನೀವು ಅದೃಷ್ಟಶಾಲಿಯಾಗುತ್ತೀರಿ. ಅಂತಹ ಅದೃಷ್ಟವನ್ನು ತರಬಲ್ಲ ಪೆಡಲ್ಗಳ ವಿಜ್ಞಾನ ಯಾವುದು? ಅದನ್ನೇ ನಾವು ಈ ವಾಸ್ತು ಸಂಬಂಧಿತ ಪೋಸ್ಟ್ ಮೂಲಕ ತಿಳಿಯಲಿದ್ದೇವೆ . ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ವಿದ್ವಾನ್ ವಿದ್ಯಾಧರ್ ತಂತ್ರಿ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9686268564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ…
ಬೆಂಗಳೂರು: ಮಾಜಿ ಪ್ರಧಾನಿಗಳು ಹಾಗೂ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾದ ಹೆಚ್.ಡಿ. ದೇವೇಗೌಡರು ಪಕ್ಷದ ಉನ್ನತ ಮಟ್ಟದ ರಾಜಕೀಯ ವ್ಯವಹಾರಗಳ ಸಮಿತಿ ಅಧ್ಯಕ್ಷರನ್ನಾಗಿ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರನ್ನು ನೇಮಕ ಮಾಡಿದ್ದಾರೆ. ಈ ಸಂಚಾಲಕರನ್ನಾಗಿ ಜೆಡಿಎಸ್ ಶಾಸಕಾಂಗ ಪಕ್ಷದ ಉಪ ನಾಯಕಿ ಶಾರದಾ ಪೂರ್ಯಾ ನಾಯಕ ಅವರನ್ನು ಸಂಚಾಲಕರನ್ನಾಗಿ ನೇಮಕ ಮಾಡಲಾಗಿದೆ. ಸದಸ್ಯರಾಗಿ ಮಾಜಿ ಸಚಿವ ಬಂಡೆಪ್ಪ ಕಾಶೆಂಪುರ್, ಸಾ.ರಾ. ಮಹೇಶ್, ವೆಂಕಟರಾವ್ ನಾಡಗೌಡ, ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಸಿ.ಬಿ. ಸುರೇಶ್ ಬಾಬು, ಶಾಸಕರಾದ ಎಂ.ಟಿ. ಕೃಷ್ಣಪ್ಪ, ಎಸ್.ಎಲ್. ಬೋಜೇಗೌಡ, ಮಾಜಿ ಶಾಸಕ ಕೆ.ಎ. ತಿಪ್ಪೇಸ್ವಾಮಿ, ಯುವ ಜನತಾದಳ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು ಈ ಸಮಿತಿಯ ಸದಸ್ಯರಾಗಿದ್ದಾರೆ. ಪ್ರಚಾರ ಸಮಿತಿಗೆ ವೈ ಎಸ್ ವಿ ದತ್ತ ನಾಯಕತ್ವ ಜೆಡಿಎಸ್ ಪ್ರಚಾರ ಸಮಿತಿಯನ್ನು ರಾಜ್ಯಾಧ್ಯಕರಾದ ಹೆಚ್.ಡಿ. ಕುಮಾರಸ್ವಾಮಿ ಅವರು ರಚನೆ ಮಾಡಿದ್ದು, ಸಮಿತಿ ಅಧ್ಯಕ್ಷರನ್ನಾಗಿ ಮಾಜಿ ಶಾಸಕ ವೈ ಎಸ್ ವಿ ದತ್ತ ಅವರನ್ನು ನೇಮಕ ಮಾಡಿದ್ದಾರೆ. ಸದಸ್ಯರಾಗಿ ಮಾಜಿ…
ಬೆಂಗಳೂರು: ಶಬರಿ ಮಲೆಗೆ ತೆರಳುವಂತ ಅಯ್ಯಪ್ಪ ಸ್ವಾಮಿ ಭಕ್ತರಿಗೆ ಗುಡ್ ನ್ಯೂಸ್ ಎನ್ನುವಂತೆ ಕೆ ಎಸ್ ಆರ್ ಟಿ ಸಿಯಿಂದ ಬೆಂಗಳೂರು-ನೀಲಕ್ಕಲ್(ಪಂಪಾ-ಶಬರಿಮಲೈ) ಮಾರ್ಗದಲ್ಲಿ ವೋಲ್ವೋ ಬಸ್ ಸಂಚಾರವನ್ನು ದಿನಾಂಕ 28/11/2025 ರಿಂದ ಕಾರ್ಯಾಚರಣೆ ಮಾಡಲಾಗುತ್ತಿದೆ. ಈ ಬಗ್ಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಬೆಂಗಳೂರು ಕೇಂದ್ರೀಯ ವಿಭಾಗದ ವತಿಯಿಂದ ಸಾರ್ವಜನಿಕ ಪ್ರಯಾಣಿಕರು/ಭಕ್ತಾಧಿಗಳ ಅನುಕೂಲಕ್ಕಾಗಿ ದಿನಾಂಕ 28/11/2025 ರಿಂದ ಹೊಸದಾಗಿ ಬೆಂಗಳೂರು-ನೀಲಕ್ಕಲ್ (ಪಂಪಾ-ಶಬರಿಮಲೈ) ವಯಾ ಮೈಸೂರು, ಕ್ಯಾಲಿಕಟ್, ಗುರುವಾಯೂರು, ತ್ರಿಶೂರು, ಅಂಗಾಮಲೈ, ಕೊಟ್ಟಾಯಂ, ಏರುಮಲೈ ಮಾರ್ಗದಲ್ಲಿ ವೋಲ್ವೋ ವಾಹನವÀನ್ನು ಈ ಕೆಳಕಂಡ ವೇಳಾಪಟ್ಟಿಯಂತೆ ಕಾರ್ಯಾಚರಣೆ ಮಾಡಲಾಗುವುದು ಎಂದಿದೆ. https://kannadanewsnow.com/kannada/government-gives-green-signal-to-fill-various-vacant-posts-in-state-prisons/ https://kannadanewsnow.com/kannada/rbi-approves-upi-transfers-for-children-without-bank-accounts/
ಬೆಂಗಳೂರು: ರಾಜ್ಯದ ಕಾರಾಗೃಹದಲ್ಲಿ ಖಾಲಿ ಇರುವಂತ ವಾರ್ಡರ್, ಇನ್ ಸ್ಟ್ರಕ್ಟರ್ ಸೇರಿದಂತೆ ವಿವಿಧ 1,222 ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ. ಈ ಮೂಲಕ ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ ನೀಡಲಾಗಿದೆ. ಇಂದು ಸುದ್ದಿಗೋಷ್ಠಿಯಲ್ಲಿ ಮಾಹಿತಿ ಹಂಚಿಕೊಂಡಂತ ಗೃಹ ಸಚಿವ ಡಾ.ಜಿ ಪರಮೇಶ್ವರ್ ಅವರು, ಒಂದೇ ಕಡೆ ಐದು ವರ್ಷ ಕಾರ್ಯನಿರ್ವಹಿಸಿದ ಕಾರಾಗೃಹ ಅಧಿಕಾರಿಗಳನ್ನು ಕೂಡಲೇ ವರ್ಗಾವಣೆ ಮಾಡಲಾಗುವುದು. ಕಾರಾಗೃಹಗಳಲ್ಲಿ ಸಿಬ್ಬಂದಿ ಕೊರತೆ ಇದೆ ಎಂಬ ಸಬೂಬು ಹೇಳುತ್ತಿದ್ದಾರೆ. 197 ವಾರ್ಡರ್, 22 ಇನ್ಸ್ಟ್ರಕ್ಟರ್, 3 ಜನ ಅಸಿಸ್ಟೆಂಟ್ ಸೂಪರಿಡೆಂಟ್ ಹುದ್ದೆಗಳ ನೇಮಕಾತಿಗೆ ಅನುಮತಿ ನೀಡಲಾಗಿದೆ. 983 ವಾರ್ಡರ್, 17 ಜನ ಜೈಲರ್ಸ್ಗಳ ನೇಮಕಾತಿಗೆ ಪ್ರಸ್ತಾವನೆ ಬಂದಿದೆ. ಈ ಬಗ್ಗೆ ಕ್ರಮ ತೆಗೆದುಕೊಳ್ಳಲಾಗುವುದು ಎಂದರು. ಹೈಪವರ್ ಕಮಿಟಿ ರಚನೆ ಬೆಂಗಳೂರಿನ ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ 5000 ಕೈದಿಗಳಿದ್ದಾರೆ. ಅಂಡರ್ ಟ್ರಯಲ್ಸ್, ಸಜಾ ಕೈದಿಗಳಿದ್ದಾರೆ. ಬೇರೆಬೇರೆ ಬ್ಯಾರಕ್ಗಳಲ್ಲಿ ಇದ್ದಾರೆ. ಈ ಕಾರಾಗೃಹದಲ್ಲಿ ಸೆಲಿಬ್ರಿಟಿಗಳು ಹೆಚ್ಚಿನ ಗಮನ ಈ ಕಾರಾಗೃಹದ ಮೇಲಿರುತ್ತದೆ. ಇಲ್ಲಿ ನಡೆದಿರುವ…
ಬೆಂಗಳೂರು: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಅಕ್ರಮ ಚಟುವಟಿಕೆಗಳಿಗೆ ಸಂಬಂಧಿಸಿದಂತೆ ಇಬ್ಬರು ಇಮ್ಮಿಡಿಯಟ್ ಸೂಪರಿಡೆಂಟ್ ಹಾಗೂ ಸಹಾಯಕ ಸೂಪರಿಂಟ್ಡೆಂಟ್ ಅಧಿಕಾರಿಯನ್ನು ಅಮಾನತುಗೊಳಿಸಲಾಗಿದೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ತಿಳಿಸಿದರು. ಕಾರಾಗೃಹಗಳ ಪ್ರಧಾನ ಕಚೇರಿಯಲ್ಲಿ ‘ರಾಜ್ಯದ ಕಾರಾಗೃಹಗಳಲ್ಲಿ ಆಡಳಿತ ಮತ್ತು ಭದ್ರತೆಯ’ ಕುರಿತಂತೆ ಕರ್ನಾಟಕ ರಾಜ್ಯ ಕಾರಾಗೃಹ ಮತ್ತು ಸುಧಾರಣಾ ಸೇವೆ ಇಲಾಖೆಯ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಪತ್ರಕರ್ತರನ್ನು ಉದ್ದೇಶಿಸಿ ಅವರು ಮಾತನಾಡಿದರು. ಬೆಂಗಳೂರಿನ ಪರಪ್ಪನ ಅಗ್ರಹಾರ ಕಾರಾಗೃಹ ಘಟನೆಯ ಜವಾಬ್ದಾರಿಯನ್ನು ಮೂವರು ಅಧಿಕಾರಿಗಳ ಮೇಲೆ ಹಾಕಲಾಗಿದೆ. ಚೀಫ್ ಸೂಪರಿಡೆಂಟ್ ಕೆ.ಸುರೇಶ್ ಅವರನ್ನು ಕೂಡಲೇ ವರ್ಗಾವಣೆ ಮಾಡಲಾಗಿದೆ. ಇಮ್ಮಿಡಿಯಟ್ ಸೂಪರಿಡೆಂಟ್ ಮ್ಯಾಗೇರಿ ಹಾಗೂ ಸಹಾಯಕ ಸೂಪರಿಡೆಂಟ್ ಅಶೋಕ್ ಭಜಂತ್ರಿ ಅವರನ್ನು ಅಮಾನತುಗೊಳಿಸಲಾಗಿದೆ. ಚೀಫ್ ಸೂಪರಿಡೆಂಟ್ ಸ್ಥಳಕ್ಕೆ, ಇದೇ ಮೊದಲ ಬಾರಿಗೆ ಐಪಿಎಸ್ ಅಧಿಕಾರಿಯನ್ನು ನಿಯೋಜಿಸಲಾಗುವುದು. ಇನ್ನು ಮುಂದೆ ಪರಪ್ಪನ ಅಗ್ರಹಾರಕ್ಕೆ ಚೀಫ್ ಸೂಪರಿಡೆಂಟ್ ಹುದ್ದೆಯ ಅಧಿಕಾರವನ್ನು ಐಪಿಎಸ್ ಅಧಿಕಾರಿಗೆ ವಹಿಸಲಾಗುವುದು ಎಂದು ತಿಳಿಸಿದರು. ರಾಜ್ಯದಲ್ಲಿನ ಕಾರಾಗೃಹಗಳ ಈವರೆಗಿನ ಬೆಳವಣಿಗೆಗಳ ಬಗ್ಗೆ…
ನವದೆಹಲಿ: ಡಿಜಿಟಲ್ ಹಣಕಾಸು ಸೇರ್ಪಡೆಯನ್ನು ವಿಸ್ತರಿಸುವ ನಿಟ್ಟಿನಲ್ಲಿ ಒಂದು ಮಹತ್ವದ ಹೆಜ್ಜೆಯಾಗಿ, ಭಾರತೀಯ ರಿಸರ್ವ್ ಬ್ಯಾಂಕ್ (RBI) ಮಕ್ಕಳು ಮತ್ತು ಹದಿಹರೆಯದವರಿಗಾಗಿ ಪ್ರತ್ಯೇಕವಾಗಿ ವಿನ್ಯಾಸಗೊಳಿಸಲಾದ ವಿಶಿಷ್ಟ ಡಿಜಿಟಲ್ ವ್ಯಾಲೆಟ್ ಅನ್ನು ಪ್ರಾರಂಭಿಸಲು Junio Payments Private Limited ಗೆ ಅನುಮೋದನೆ ನೀಡಿದೆ. ಈ ನವೀನ ಉಪಕ್ರಮವು ಅಪ್ರಾಪ್ತ ವಯಸ್ಕರು ಬ್ಯಾಂಕ್ ಖಾತೆಯನ್ನು ಹೊಂದದೆ UPI ಪಾವತಿಗಳನ್ನು ಮಾಡಲು ಅನುವು ಮಾಡಿಕೊಡುತ್ತದೆ, ಇದು ಭಾರತದ ಡಿಜಿಟಲ್ ಪಾವತಿ ಪರಿಸರ ವ್ಯವಸ್ಥೆಯಲ್ಲಿ ಮಹತ್ವದ ಮೈಲಿಗಲ್ಲನ್ನು ಗುರುತಿಸುತ್ತದೆ. ಯುವ ಪೀಳಿಗೆಗೆ ಹಣಕಾಸು ಸೇರ್ಪಡೆಯತ್ತ ಒಂದು ಹೆಜ್ಜೆ ಸಾಂಪ್ರದಾಯಿಕವಾಗಿ, UPI ವಹಿವಾಟುಗಳನ್ನು ಸಕ್ರಿಯ ಬ್ಯಾಂಕ್ ಖಾತೆಗಳನ್ನು ಹೊಂದಿರುವ ವ್ಯಕ್ತಿಗಳಿಗೆ ಸೀಮಿತಗೊಳಿಸಲಾಗಿದೆ. ಆದಾಗ್ಯೂ, Junio Payments ಗೆ RBI ಅನುಮೋದನೆಯು ಪ್ರಿಪೇಯ್ಡ್ ವ್ಯಾಲೆಟ್ ವ್ಯವಸ್ಥೆಯ ಮೂಲಕ UPI QR ಕೋಡ್ಗಳನ್ನು ಬಳಸಿಕೊಂಡು ನೇರವಾಗಿ ಡಿಜಿಟಲ್ ಪಾವತಿಗಳನ್ನು ಮಾಡಲು ಮಕ್ಕಳಿಗೆ ಅಧಿಕಾರ ನೀಡುವ ಮೂಲಕ ಈ ರೂಢಿಯನ್ನು ಬದಲಾಯಿಸುತ್ತದೆ. ಈ ಪರಿಕಲ್ಪನೆಯು ಡಿಜಿಟಲ್ ವಹಿವಾಟುಗಳನ್ನು ಸರಳಗೊಳಿಸುವುದಲ್ಲದೆ, ಯುವ ಬಳಕೆದಾರರಲ್ಲಿ ಆರಂಭಿಕ…
ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳ ವೀಡಿಯೋ ವೈರಲ್ ಹಿನ್ನಲೆಯಲ್ಲಿ ಪರಪ್ಪನ ಅಗ್ರಹಾರ ಠಾಣೆಯಲ್ಲಿ 3 ಎನ್ ಸಿ ಆರ್, 1 ಎಫ್ಐಆರ್ ದಾಖಲಾಗಿದೆ. ಪರಪ್ಪನ ಅಗ್ರಹಾರ ಜೈಲಿನ ಅಧೀಕ್ಷಕಾದಂತ ಇಮಾಮ್ ಸಾಬ್ ಮ್ಯಾಗೇರಿ ದೂರಿನ ಮೇರೆಗೆ ಎಫ್ಐಆರ್ ದಾಖಲಾಗಿದೆ. ಸಜಾ ಕೈದಿ ಪ್ಯಾಟ್ರಿಕ್ ವಿರುದ್ಧ ಎಫ್ಐಆರ್ ದಾಖಲಾಗಿದೆ. ವೈರಲ್ ಆಗಿದ್ದಂತ ಡ್ಯಾನ್ಸ್ ವೀಡಿಯೋದಲ್ಲಿ ಜೈಲಲ್ಲಿ ತಟ್ಟೆ, ಡ್ರಮ್ ಬಾರಿಸಿ ಡ್ಯಾನ್ಸ್ ಅನ್ನು ಪ್ಯಾಟ್ರಿಕ್ ಟೀಮ್ ಮಾಡಿತ್ತು. ಈ ಹಿನ್ನಲೆಯಲ್ಲಿ ಪ್ಯಾಟ್ರಿಕ್ ವಿರುದ್ಧ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ. https://kannadanewsnow.com/kannada/royal-hospitality-for-prisoners-at-parappana-agrahara-jail-actor-dhanveers-mobile-seized/ https://kannadanewsnow.com/kannada/big-news-good-news-for-caste-census-surveyors-and-supervisors-honorary-allowance-released-by-the-state-government/
ಬೆಂಗಳೂರು: ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥ್ಯದ ವೀಡಿಯೋ ವೈರಲ್ ಆದ ಬೆನ್ನಲ್ಲೇ, ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ಅಲ್ಲದೇ ನಟ ದರ್ಶನ್ ಆಪ್ತ, ನಟ ಧನ್ವೀರ್ ಅವರ ಮೊಬೈಲ್ ಜಪ್ತಿ ಮಾಡಿದ್ದಾರೆ. ಪರಪ್ಪನ ಅಗ್ರಹಾರ ಸೆಂಟ್ರಲ್ ಜೈಲಲ್ಲಿ ಕೈದಿಗಳಿಗೆ ರಾಜಾತಿಥ್ಯದ ವಿಚಾರವಾಗಿ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ನಟ ಧನ್ವೀರ್ ವಿಚಾರಣೆ ನಡೆಸಲಾಗುತ್ತಿದೆ. ಎಲೆಕ್ಟ್ರಾನಿಕ್ ಸಿಟಿ ಡಿಸಿಪಿ ನಾರಾಯಣ ಅವರು ನಟ ಧನ್ವೀರ್ ವಿಚಾರಣೆ ನಡೆಸುತ್ತಿದ್ದಾರೆ. ಈ ವಿಚಾರಣೆಯ ವೇಳೆಯಲ್ಲಿ ನಟ ಧನ್ವೀರ್ ನನಗೆ ಪರಪ್ಪನ ಅಗ್ರಹಾರ ಜೈಲಿನ ಒಳಗಿನ ವೀಡಿಯೋಗಳನ್ನು ಆತ್ಮೀಯರೊಬ್ಬರು ಕಳುಹಿಸಿದ್ದರು. ನನಗೆ ಕಳುಹಿಸಿದ್ದ ವೀಡಿಯೋವನ್ನು ನಾನು ಯಾರಿಗೂ ಶೇರ್ ಮಾಡಿಲ್ಲ ಎಂಬುದಾಗಿ ತಿಳಿಸಿದ್ದಾರೆ. ವೀಡಿಯೋ ವೈರಲ್ ಹಿನ್ನಲೆಯಲ್ಲಿ ಕೊಲೆ ಆರೋಪಿ ದರ್ಶನ್ ಆಪ್ತ, ನಟ ಧನ್ವೀರ್ ಮೊಬೈಲ್ ಜಪ್ತಿ ಮಾಡಿದ್ದಾರೆ. ಆ ಬಳಿಕ ಧನ್ವೀರ್ ಮೊಬೈಲ್ ರಿಟ್ರೀವ್ ಮಾಡಲು ಎಫ್ ಎಸ್ ಎಲ್ ಗೆ ಪೊಲೀಸರು ರವಾನಿಸಿದ್ದಾರೆ. ಸದ್ಯ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲೇ ನಟ ಧನ್ವೀರ್…
ಶಿವಮೊಗ್ಗ: ನಾಡಿದ್ದು ಸಾಗರ ತಾಲ್ಲೂಕಿನ ಜನತೆಯ ಸಮಸ್ಯೆ ನಿವಾರಿಸಲು ಶಾಸಕ ಗೋಪಾಲಕೃಷ್ಣ ಬೇಳೂರು ಮಹತ್ವದ ಹೆಜ್ಜೆ ಇಟ್ಟಿದ್ದಾರೆ. ಅದೇ ನವೆಂಬರ್.12ರ ನಾಡಿದ್ದು ಬೆಳಗ್ಗೆ 11 ಗಂಟೆಯಿಂದ ಕಲ್ಮನೆ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಎದುರು ಜನಸಂಪರ್ಕ ಸಭೆಯನ್ನು ನಡೆಸಲಿದ್ದಾರೆ. ಈ ಜನಸಂಪರ್ಕ ಸಭೆಯಲ್ಲಿ ಸಾಗರ ತಾಲ್ಲೂಕಿನ ಜನತೆಯ ಸಮಸ್ಯೆಗಳಿಗೆ ಸ್ಥಳದಲ್ಲೇ ಪರಿಹಾರ ಕಲ್ಪಿಸುವಂತ ಕೆಲಸವನ್ನು ಮಾಡಲಿದ್ದಾರೆ. ಈ ಬಗ್ಗೆ ಶಾಸಕ ಗೋಪಾಲಕೃಷ್ಣ ಬೇಳೂರು ಅವರ ಕಚೇರಿಯಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಲಾಗಿದ್ದು, ದಿನಾಂಕ: 12-11-2025ರ ನಾಡಿದ್ದು ಬೆಳಿಗ್ಗೆ 11 ಗಂಟೆಗೆ ಕಲ್ಮನೆ ಗ್ರಾಮ ಪಾಂಚಾಯಿತಿಯ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಎದುರು ಜನಸಂಪರ್ಕ ಸಭೆಯನ್ನು ಹಮ್ಮಿಕೊಳ್ಳಲಾಗಿರುತ್ತದೆ ಎಂದು ತಿಳಿಸಿದೆ. ಕಂದಾಯ ಇಲಾಖೆಯಿಂದ ಪೌತಿ ಖಾತೆ ಆಂದೋಲನ ಮಾಡಿ, ಪೌತಿ ಖಾತೆ ಅರ್ಜಿ ಸ್ವೀಕೃತಿ ಹಾಗೂ ಕಡತಗಳ ತಯಾರಿಕೆ ಕಾರ್ಯ ಮಾಡಲಾಗುತ್ತದೆ. 94ಸಿ ಮನೆ ಹಕ್ಕುಪತ್ರ ಅರ್ಜಿಗಳ ಪರಿಶೀಲನೆ ಮಾಡಲಾಗುವುದು. ಸಾಗರ ಉಪವಿಭಾಗಾಧಿಕಾರಿಗಳು, ತಹಶೀಲ್ದಾರ್ ಹಾಗೂ ಕಂದಾಯ ಇಲಾಖಾ…













