Author: kannadanewsnow09

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಇದೇ ಜುಲೈ 28ರಂದು ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿಗೆ ಭೇಟಿ ನೀಡಲಿದ್ದು, ₹1300 ಕೋಟಿಗೂ ಅಧಿಕ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ. ಈ ಐತಿಹಾಸಿಕ ಕಾರ್ಯಕ್ರಮದಲ್ಲಿ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್‌. ಚಲುವರಾಯಸ್ವಾಮಿ ಸೇರಿದಂತೆ 10ಕ್ಕೂ ಹೆಚ್ಚು ಸಚಿವರು ಭಾಗವಹಿಸಲಿದ್ದಾರೆ ಎಂದು ಶಾಸಕ ದಿನೇಶ್‌ ಗೂಳಿಗೌಡ ತಿಳಿಸಿದರು. ಶಂಕುಸ್ಥಾಪನೆ ಕಾರ್ಯಕ್ರಮದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದ ಶಾಸಕ ದಿನೇಶ್‌ ಗೂಳಿಗೌಡ, ಮೈಸೂರು ಸಂಸ್ಥಾನದಲ್ಲಿ 1952ರಲ್ಲಿ ಚುನಾವಣಾ ರಾಜಕಾರಣ ಪ್ರಾರಂಭವಾದಾಗಿನಿಂದ ಮದ್ದೂರು ಕ್ಷೇತ್ರಕ್ಕೆ ಮುಖ್ಯಮಂತ್ರಿಗಳು ಮತ್ತು ಉಪಮುಖ್ಯಮಂತ್ರಿಗಳು, ಸಚಿವರು ಒಟ್ಟಾಗಿ ಭೇಟಿ ನೀಡಿ ಇಷ್ಟೊಂದು ದೊಡ್ಡ ಪ್ರಮಾಣದ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡುತ್ತಿರುವುದು ಇದೇ ಮೊದಲ ಬಾರಿಗೆ ಎಂದು ಸಂತಸ ವ್ಯಕ್ತಪಡಿಸಿದರು. ಪ್ರಸಕ್ತ ಶಾಸಕರಾದ ಉದಯ್‌ ಗೌಡ ಅವರು ಕಳೆದ ಎರಡು ವರ್ಷಗಳ ಅವಧಿಯಲ್ಲಿ ಮದ್ದೂರು ಕ್ಷೇತ್ರಕ್ಕೆ ಸಾವಿರಾರು ಕೋಟಿ ರೂ. ಮೌಲ್ಯದ ಕಾಮಗಾರಿಗಳನ್ನು ತರುವಲ್ಲಿ ಯಶಸ್ವಿಯಾಗಿದ್ದಾರೆ…

Read More

ಮೈಸೂರು: ರಾಜ್ಯದ ಯಜಮಾನಿ ಮಹಿಳೆಯರಿಗೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಗುಡ್ ನ್ಯೂಸ್ ನೀಡಿದ್ದಾರೆ. ಅದೇ ಮೂರು ತಿಂಗಳಿಗೆ ಒಮ್ಮೆ ಯಜಮಾನಿಯರಿಗೆ ಗೃಹಲಕ್ಷ್ಮೀ ಯೋಜನೆ ಹಣ ಹಾಕೋದಿಲ್ಲ. ಇನ್ಮುಂದೆ ಪ್ರತಿ ತಿಂಗಳು ಯಜಮಾನಿಯರ ಖಾತೆಗೆ ಗೃಹ ಲಕ್ಷ್ಮೀ ಯೋಜನೆಯ ಹಣ ಜಮಾ ಮಾಡುವುದಾಗಿ ತಿಳಿಸಿದ್ದಾರೆ. ಮೂರನೇ ಆಷಾಢ ಶುಕ್ರವಾರದ ಅಂಗವಾಗಿ ಕುಟುಂಬ ಸಮೇತ ತಾಯಿ ಚಾಮುಂಡೇಶ್ವರಿ ದರ್ಶನ ಪಡೆದ ಬಳಿಕ ಚಾಮುಂಡಿ ಬೆಟ್ಟದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಸಚಿವರು, ಸ್ವತಃ ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ಐದು ವರ್ಷಗಳ ಕಾಲ ನಾನೇ ಸಿಎಂ ಎಂದು ಹೇಳಿದ ಮೇಲೆ ಬೇರೆ ರೀತಿಯ ಚರ್ಚೆಗೆ ಅವಕಾಶವೇ ಇಲ್ಲ. ಈ ಬಗ್ಗೆ ಪದೆ ಪದೇ ಮಾತನಾಡುವುದು ಸರಿ ಇಲ್ಲ ಎಂದರು. ಮುಖ್ಯಮಂತ್ರಿ ಬದಲಾವಣೆ ಬಗ್ಗೆ ಸಿಎಂ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಈಗಾಗಲೇ ಮಾತನಾಡಿದ್ದು, ಈ ಬಗ್ಗೆ ಮಾತನಾಡುವಷ್ಟು ದೊಡ್ಡವರು ನಾವಲ್ಲ. ನಮ್ಮದು ರಾಷ್ಟ್ರೀಯ ಪಕ್ಷ. ಏನೇ ಇದ್ದರೂ ಹೈಕಮಾಂಡ್ ತೀರ್ಮಾನ ಕೈಗೊಳ್ಳಲಿದೆ ಎಂದು ಸಚಿವೆ ಲಕ್ಷ್ಮೀ…

Read More

ಬೆಂಗಳೂರು: ಬಿ.ಎಸ್‌ಸಿ ನರ್ಸಿಂಗ್‌ ಕೋರ್ಸ್‌ಗಳ ಶುಲ್ಕವನ್ನು 2025-26ನೇ ಸಾಲಿಗೆ ಹೆಚ್ಚಳ ಮಾಡುವುದಿಲ್ಲ. ಅನುಮೋದಿತ ಶುಲ್ಕಕ್ಕಿಂತ ಹೆಚ್ಚಿನ ಶುಲ್ಕ ಪಡೆದ ಪ್ರಕರಣಗಳು ಕಂಡುಬಂದರೆ ಕಾನೂನು ಕ್ರಮ ಕೈಗೊಳ್ಳುವ ಜೊತೆಗೆ ಅಂತಹ ಕಾಲೇಜುಗಳ ಮಾನ್ಯತೆಯನ್ನೂ ರದ್ದುಗೊಳಿಸಲಾಗುವುದು ಎಂದು ವೈದ್ಯಕೀಯ ಶಿಕ್ಷಣ ಸಚಿವರಾದ ಡಾ. ಶರಣಪ್ರಕಾಶ್‌ ಪಾಟೀಲ್‌ ತಿಳಿಸಿದ್ದಾರೆ. https://twitter.com/KarnatakaVarthe/status/1943583658268594509 ಹೆಚ್ಚಿನ ನರ್ಸಿಂಗ್ ವಿದ್ಯಾರ್ಥಿಗಳು ಗ್ರಾಮೀಣ ಮತ್ತು ಆರ್ಥಿಕವಾಗಿ ಹಿಂದುಳಿದ ಹಿನ್ನೆಲೆಯಿಂದ ಬಂದವರು. ಹೆಚ್ಚುವರಿ ಶುಲ್ಕ ವಿಧಿಸುವುದು ಅನ್ಯಾಯ ಮತ್ತು ಸ್ವೀಕಾರಾರ್ಹವಾಗುವುದಿಲ್ಲ ಎಂದು ತಿಳಿಸಿದರು. ಸರ್ಕಾರಿ ಕೋಟಾದಡಿಯಲ್ಲಿ 10,000 ರೂ., ಇತರೆ ಕೋಟಾದಡಿಯಲ್ಲಿ 1 ಲಕ್ಷ ರೂ. ಮತ್ತು ಕರ್ನಾಟಕೇತರ ವಿದ್ಯಾರ್ಥಿಗಳಿಗೆ 1.4 ಲಕ್ಷ ರೂ. ಶುಲ್ಕ ರಚನೆಯೇ ಈ ವರ್ಷವೂ ಮುಂದುರಿಯಲಿದೆ ಎಂದರು. “ಅನುಮೋದಿತ ಶುಲ್ಕಕ್ಕಿಂತ ಹೆಚ್ಚಿನ ಶುಲ್ಕವನ್ನು ಯಾವುದೇ ಕಾಲೇಜು ದಂಡ ವಿಧಿಸುವುದಿಲ್ಲ. ಅಂಥ ಪ್ರಕರಣಗಳು ಕಂಡುಬಂದರೆ, ಕಾನೂನು ಕ್ರಮವನ್ನು ಎದುರಿಸಬೇಕಾಗುತ್ತದೆ. ಅವುಗಳ ಮಾನ್ಯತೆಯನ್ನು ರದ್ದುಗೊಳಿಸಲಾಗುವುದು ಎಂದು ಎಚ್ಚರಿಸಿದರು. ರಾಜ್ಯದಲ್ಲಿ ಸುಮಾರು 35,000 ಸೀಟುಗಳನ್ನು ಹೊಂದಿರುವ 611 ನರ್ಸಿಂಗ್ ಕಾಲೇಜುಗಳಿವೆ. ಇವುಗಳಲ್ಲಿ, 80%…

Read More

ಹಾವೇರಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಐದು ವರ್ಷ ಅಧಿಕಾರದಲ್ಲಿ ಇರುತ್ತಾರೊ ಇಲ್ಲವೋ ಅನ್ನುವುದನ್ನು ಕಾಂಗ್ರೆಸ್ ಹೈಕಮಾಂಡ್ ಹೇಳಬೇಕು. ಕಾಂಗ್ರೆಸ್ ಹೈಕಮಾಂಡ್ ಎಲ್ಲಿಯವರೆಗೆ ಸ್ಪಷ್ಟತೆ ಕೊಡುವುದಿಲ್ಲವೋ ಅಲ್ಲಿಯವರೆಗೂ ಈ ನಾಟಕ ನಡೆಯುತ್ತಿರುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಹಾವೇರಿಯಲ್ಲಿ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿದ ಅವರು, 5 ವರ್ಷ ನಾನೇ ಸಿಎಂ ಎಂಬ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆ ಕುರಿತು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಸಿಎಂ ಸಿದ್ದರಾಮಯ್ಯನವರು ಎಷ್ಟು ಬಾರಿ 5 ವರ್ಷ ಇರುತ್ತೇನೆ ಅಂತ ಹೇಳುತ್ತಾರೊ ಅಷ್ಟು ಬಾರಿ ಅವರ ಮುಂದುವರಿಕೆ ಬಗ್ಗೆ ಪ್ರಶ್ನೆ ಬರುತ್ತದೆ. ಈ‌ ವಿಚಾರದಲ್ಲಿ ಯಾರು ಮಾತನಾಡಬೇಕೋ ಅವರು ಸುಮ್ಮನೇ ಇದ್ದಾರೆ ಹೈಕಮಾಂಡ್ ಎಲ್ಲಿವರೆಗೂ ಈ ಬಗ್ಗೆ ಸ್ಪಷ್ಟತೆ ಕೊಡುವುದಿಲ್ಲವೋ ಅಲ್ಲಿಯವರೆಗೆ ಇದು ನಾಟಕ ನಡೆಯುತ್ತಲೇ ಇರುತ್ತದೆ ಎಂದರು. ಸಿದ್ದರಾಮಯ್ಯ ಅವರು ಮುಂದುವರೆದರೂ ಅಷ್ಟೆ, ಬಿಟ್ಟರೂ ಅಷ್ಟೆ. ಆಡಳಿತ ಹದಗೆಡಲು ಅವಕಾಶ ಮಾಡಿಕೊಡಬಾರದು ಅಷ್ಟೆ. ಸಿದ್ದರಾಮಯ್ಯನವರು ನಾನು 5 ವರ್ಷ ಇರುತ್ತೇನೆ ಅಂತ ಹೇಳುವುದು.…

Read More

ಬೆಂಗಳೂರು: ನಾನು ಉಪ ಮುಖ್ಯಮಂತ್ರಿಯಾಗಿ ನನ್ನ ಕೆಲಸ ಮಾಡುತ್ತೇನೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕೊಟ್ಟಿರುವಂತ ದೀಕ್ಷೆಯನ್ನು ಸ್ವೀಕಾರ ಮಾಡಿದ್ದೇನೆ ಎಂಬುದಾಗಿ ಡಿಸಿಎಂ ಡಿ.ಕೆ ಶಿವಕುಮಾರ್ ತಿಳಿಸಿದರು. ಇಂದು ಐದು ವರ್ಷ ನಾನೇ ಮುಖ್ಯಮಂತ್ರಿ ಎಂಬುದಾಗಿ ಹೇಳಿದಂತ ಸಿಎಂ ಸಿದ್ಧರಾಮಯ್ಯ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದಂತ ಅವರು, ಮುಖ್ಯಮಂತ್ರಿಗಳು ಎಲ್ಲಾ ವಿಚಾರಗಳಿಗೆ ಉತ್ತರ ನೀಡಿದ್ದಾರೆ. ನಾನು ಯಾವುದೇ ಹೇಳಿಕೆ ನೀಡುವುದಿಲ್ಲ ಎಂದರು. ಮಲ್ಲಿಕಾರ್ಜುನ ಖರ್ಗೆ ನೀಡಿದ ದೀಕ್ಷೆಯಂತೆ ಕೆಲಸ ಮಾಡುವೆ. ಉಪ ಮುಖ್ಯಮಂತ್ರಿಯಾಗಿ ನನ್ನ ಕೆಲಸ ನಾನು ಮಾಡುತ್ತೇನೆ ಎಂಬುದಾಗಿ ತಿಳಿಸಿದರು. ದೆಹಲಿ ಪ್ರವಾಸದ ಬಗ್ಗೆ ಮಾಧ್ಯಮಗಳು ಕೇಳಿದಾಗ, “ದೆಹಲಿ ಪ್ರವಾಸದಲ್ಲಿ ಕೇಂದ್ರ ಜಲಶಕ್ತಿ ಸಚಿವರಾದ ಸಿ.ಆರ್ ಪಾಟೀಲ್ ಅವರನ್ನು ಭೇಟಿ ಮಾಡಿ ಕೃಷ್ಣಾ ನ್ಯಾಯಾಧಿಕರಣದ ತೀರ್ಪಿನ ಸಂಬಂಧ ಅಧಿಸೂಚನೆ ಹೊರಡಿಸುವುದು, ಮೆಕೆದಾಟು ಯೋಜನೆ ಅಪ್ರೈಸಲ್ ವರದಿ ಬಗ್ಗೆ ಚರ್ಚಿಸಲಾಗಿದೆ. ಅರಣ್ಯ ಸಚಿವರಾದ ಭೂಪೇಂದ್ರ ಯಾದವ್ ಅವರನ್ನು ಭೇಟಿ ಮಾಡಿ ಕಳಸಾ ಬಂಡೂರಿ ವಿಚಾರವಾಗಿ ಚರ್ಚೆ ಮಾಡಲಾಗಿದೆ. ಈ ವಿಚಾರವಾಗಿ ಪ್ರಹ್ಲಾದ್ ಜೋಷಿ…

Read More

ಬೆಂಗಳೂರು: ಪಾರ್ಟಿ ಇದ್ದರೆ ತಾನೇ ನಾನು. ಪಕ್ಷವೇ ಇಲ್ಲದಿದ್ದರೇ ನಾನಿಲ್ಲ. ನನಗೆ ಮಲ್ಲಿಕಾರ್ಜುನ ಖರ್ಗೆ ಕೊಟ್ಟ ದೀಕ್ಷೆ ಸ್ವೀಕಾರ ಮಾಡಿದ್ದೇನೆ ಎಂಬುದಾಗಿ ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ. ನಗರದಲ್ಲಿ ಡಿ.ಕೆ. ಶಿವಕುಮಾರ್ ಅವರಿಗೆ ಕೆಲವು ಶಾಸಕರ ಬೆಂಬಲ ಮಾತ್ರವಿದೆ ಎಂಬ ಸಿಎಂ ಸಿದ್ದರಾಮಯ್ಯ ಅವರ ಹೇಳಿಕೆ ಬಗ್ಗೆ ಕೇಳಿದಾಗ, “ನಾನು ಪಕ್ಷದ ರಾಜ್ಯ ಅಧ್ಯಕ್ಷ. ಪಕ್ಷ ಏನು ಹೇಳುತ್ತದೆಯೋ ಅದನ್ನು ಮಾಡುತ್ತೇನೆ. ನಾನು ನಿನ್ನೆ ಬ್ಯುಸಿ ಇದ್ದೆ. ಅದರ ಮಧ್ಯೆ ಮುಖ್ಯಮಂತ್ರಿಗಳ ಹೇಳಿಕೆ ನೋಡಿದೆ. ನಿಮ್ಮ ಪ್ರಶ್ನೆಗಳಿಗೆ ಅವರೇ ಉತ್ತರ ನೀಡಿದ್ದಾರೆ. ಅವರು ಉತ್ತರ ನೀಡಿದ ಮೇಲೆ ನಾವು ಮತ್ತೆ ಆ ವಿಚಾರ ಚರ್ಚೆ ಮಾಡುವುದು ಸೂಕ್ತವಲ್ಲ. ನೀವುಗಳು ಸಹ ಮತ್ತೆ ಆ ವಿಚಾರವಾಗಿ ಪ್ರಶ್ನೆ ಮಾಡುವುದು ಸೂಕ್ತವಲ್ಲ” ಎಂದು ಹೇಳಿದರು. ಈ ಹಿಂದೆ ನನ್ನ ಬಳಿ ಆಯ್ಕೆ ಇಲ್ಲ ಎಂದು ಹೇಳಿದ್ದಿರಿ, ಈಗಲೂ ನೀವು ಅದೇ ಸ್ಥಿತಿಯಲ್ಲಿದ್ದೀರಾ ಎಂದು ಕೇಳಿದಾಗ, “ನಿಮಗೆ ನಮ್ಮ ವಿಚಾರದಲ್ಲಿ ಯಾಕೆ ಗಾಬರಿ?…

Read More

ಬೆಂಗಳೂರು: ಇಂದು ‘ಸಾರ್ವಜನಿಕ ಸೇವೆಗಾಗಿ ಮೆ|| ಟಾಟಾ ಮೋಟರ್ಸ್ ಲಿಮಿಟೆಡ್ ನ 148 ಹವಾನಿಯಂತ್ರಣರಹಿತ ವಿದ್ಯುತ್ ಚಾಲಿತ ಬಸ್ಸುಗಳು ಹಾಗೂ ವೇಗದೂತ ಸೇವೆಗಳು ಮತ್ತು ಪ್ಯಾಕೇಜ್ ಪ್ರವಾಸದಡಿಯಲ್ಲಿ ಪರಿಚಯಿಸಲಾಗುತ್ತಿರುವ ನೂತನ ಮಾರ್ಗಗಳನ್ನು ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಅವರು ಲೋಕಾರ್ಪಣೆಗೊಳಿಸದರು. ಸಾರ್ವಜನಿಕ ಸಾರಿಗೆ ಸೇವೆಗಳನ್ನು ಪ್ರೋತ್ಸಾಹಿಸುವ ಸಲುವಾಗಿ ಹಾಗೂ ಬೆಂಗಳೂರು ನಗರದಲ್ಲಿ ಹೆಚ್ಚುತ್ತಿರುವ ವಾಹನ ಮಾಲಿನ್ಯ ತಡೆಗಟ್ಟಲು ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ಹಲವಾರು ಕ್ರಮಗಳನ್ನು ಕೈಗೊಂಡಿದ್ದು, ಅವುಗಳ ಪೈಕಿ ಎಲೆಕ್ಟ್ರಿಕ್‌ ಬಸ್ಸುಗಳನ್ನು ಪರಿಚಯಿಸುತ್ತಿರುವುದು ಒಂದಾಗಿರುತ್ತದೆ. ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ಸತತವಾಗಿ 04 ವರ್ಷಗಳಿಂದ ಎಲೆಕ್ಟ್ರಿಕ್‌ ಬಸ್ಸುಗಳನ್ನು ಪರಿಚಯಿಸುತ್ತಿದ್ದು, ಇಲ್ಲಿಯವರೆಗೆ 1436 ಎಲೆಕ್ಟ್ರಿಕ್‌ ಬಸ್ಸುಗಳು ಕಾರ್ಯಾಚರಣೆಗೆ ನಿಯೋಜಿಸಲಾಗಿರುತ್ತದೆ. ವಿವರಗಳು ಕೆಳಕಂಡಂತಿದೆ:  SL. No. Type of bus Company No. of buses 01 9m, Non-AC M/s.NTPC Vidyut Vypura Nigam Ltd. 90 02 12m, Non-AC M/s. Switch Mobility Automotive Ltd. 300…

Read More

ಬೆಂಗಳೂರು : ಉತ್ತರ ಕರ್ನಾಟಕದ ಹುಬ್ಬಳ್ಳಿ ಧಾರವಾಡ-ಬೆಳಗಾವಿ-ವಿಜಯಪುರ ಮತ್ತು ದಕ್ಷಿಣ ಕರ್ನಾಟಕದ ಬೆಂಗಳುರು ಗ್ರಾಮಾಂತರ-ಕೋಲಾರ-ಚಿಕ್ಕಬಳ್ಳಾಪುರಕ್ಕೆ ಡಿಫೆನ್ಸ್ ಕಾರಿಡಾರ್ ಮಂಜೂರು ಮಾಡುವ ನಮ್ಮ ಮನವಿಗೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಈ ಸಂಬಂಧ ಆದಷ್ಟು ಬೇಗ ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನೂ ಭೇಟಿ ಮಾಡಲಾಗುವುದು. ಅದಾದ ಮೇಲೆ ಈ ವಿಚಾರವು ಕೇಂದ್ರ ಸಂಪುಟದ ಮುಂದೆ ಬರಬೇಕಾಗುತ್ತದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಹೇಳಿದ್ದಾರೆ. ಶುಕ್ರವಾರ ತಮ್ಮ ನಿವಾಸದಲ್ಲಿ ತಮ್ಮನ್ನು ಭೇಟಿಯಾದ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, `ಇಸ್ರೇಲ್-ಇರಾನ್, ರಷ್ಯಾ-ಉಕ್ರೇನ್ ಸಂಘರ್ಷ ಮತ್ತು ಜಾಗತಿಕ ರಾಜಕೀಯ ಪರಿಸ್ಥಿತಿಯಲ್ಲಿನ ಬದಲಾವಣೆಗಳಿಂದಾಗಿ ಮುಂದಿನ 20 ವರ್ಷಗಳ ಕಾಲ ರಕ್ಷಣಾ ಉದ್ಯಮ, ಏರೋಸ್ಪೇಸ್, ಸೆಮಿಕಂಡಕ್ಟರ್, ಎಐ ಮುಂತಾದ ಡೀಪ್-ಟೆಕ್ ಆಧಾರಿತ ಉದ್ಯಮಗಳಿಗೆ ಬೇಡಿಕೆ ಇರಲಿದೆ. ನ್ವಿಡಿಯಾ ಕಂಪನಿ ಈ ವಲಯದಲ್ಲಿ 4 ಟ್ರಿಲಿಯನ್ ಡಾಲರ್ ವಹಿವಾಟು ದಾಖಲಿಸಿರುವ ಪ್ರಪ್ರಥಮ ಕಂಪನಿಯಾಗಿ ಹೊರಹೊಮ್ಮಿದೆ. ಇದನ್ನು ನಾವು ಸದವಕಾಶವಾಗಿ ಬಳಸಿಕೊಳ್ಳಲು…

Read More

ಬೆಂಗಳೂರು: “ನೀರಾವರಿ ಯೋಜನೆಗಳ ವಿಚಾರವಾಗಿ ದೆಹಲಿ ಪ್ರವಾಸ ಬಹುತೇಕ ಫಲಪ್ರದವಾಗಿದ್ದು, ಎತ್ತಿನಹೊಳೆ ಯೋಜನೆ ಸಂಬಂಧ ನಮ್ಮ ಮನವಿಯನ್ನು ಪುರಸ್ಕರಿಸುವುದಾಗಿ ಹೇಳಿದ್ದಾರೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಡಿ.ಕೆ. ಶಿವಕುಮಾರ್ ಅವರು ಶುಕ್ರವಾರ ಪ್ರತಿಕ್ರಿಯೆ ನೀಡಿದರು. ದೆಹಲಿ ಪ್ರವಾಸದ ಬಗ್ಗೆ ಮಾಧ್ಯಮಗಳು ಕೇಳಿದಾಗ, “ದೆಹಲಿ ಪ್ರವಾಸದಲ್ಲಿ ಕೇಂದ್ರ ಜಲಶಕ್ತಿ ಸಚಿವರಾದ ಸಿ.ಆರ್ ಪಾಟೀಲ್ ಅವರನ್ನು ಭೇಟಿ ಮಾಡಿ ಕೃಷ್ಣಾ ನ್ಯಾಯಾಧಿಕರಣದ ತೀರ್ಪಿನ ಸಂಬಂಧ ಅಧಿಸೂಚನೆ ಹೊರಡಿಸುವುದು, ಮೆಕೆದಾಟು ಯೋಜನೆ ಅಪ್ರೈಸಲ್ ವರದಿ ಬಗ್ಗೆ ಚರ್ಚಿಸಲಾಗಿದೆ. ಅರಣ್ಯ ಸಚಿವರಾದ ಭೂಪೇಂದ್ರ ಯಾದವ್ ಅವರನ್ನು ಭೇಟಿ ಮಾಡಿ ಕಳಸಾ ಬಂಡೂರಿ ವಿಚಾರವಾಗಿ ಚರ್ಚೆ ಮಾಡಲಾಗಿದೆ. ಈ ವಿಚಾರವಾಗಿ ಪ್ರಹ್ಲಾದ್ ಜೋಷಿ ಅವರ ಜತೆಗೂ ಮಾತನಾಡಿದ್ದೇನೆ. ಎರಡು ರಾಜ್ಯಗಳ ನಡುವೆ ರಾಜಿಗೆ ಸಲಹೆ ನೀಡಿದ್ದಾರೆ. ನಾವು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದು, ಈ ವಿಚಾರದಲ್ಲಿ ಕೆಲವು ತಾಂತ್ರಿಕ ಅಂಶಗಳಿವೆ. ಗೋವಾ ದವರು ನಮಗೆ ಶೋಕಾಸ್ ನೋಟೀಸ್ ನೀಡಿರುವುದು…

Read More

ಬೆಂಗಳೂರು: ಆರ್ಸೆಲರ್ ಮಿತ್ತಲ್ ನಿಪ್ಪಾನ್ ಸ್ಟೀಲ್ ಇಂಡಿಯಾ (ಎಎಂ/ಎನ್ಎಸ್ ಇಂಡಿಯಾ) ಇಂದು ಕರ್ನಾಟಕದಲ್ಲಿ ತನ್ನ ಪ್ರೀಮಿಯಂ ಬಣ್ಣ-ಲೇಪಿತ ಉಕ್ಕಿನ ಪೋರ್ಟ್‌ಫೋಲಿಯೊ ಆಪ್ಟಿಗಲ್® ನಲ್ಲಿ ಎರಡು ವಿಶ್ವ ದರ್ಜೆಯ, ಉನ್ನತ-ಕಾರ್ಯಕ್ಷಮತೆಯ ಉತ್ಪನ್ನಗಳಾದ ಆಪ್ಟಿಗಲ್® ಪ್ರೈಮ್ ಮತ್ತು ಆಪ್ಟಿಗಲ್® ಪಿನ್ನಾಕಲ್‌ ಗಳು ಮಾರುಕಟ್ಟೆಗೆ ಪ್ರವೇಶಿಸಿವೆ. ಕರ್ನಾಟಕದ ಭೌಗೋಳಿಕತೆ ವಿಶಿಷ್ಟವಾಗಿದೆ. ಮಂಗಳೂರಿನಂತಹ ತೇವಾಂಶ ಹೆಚ್ಚಿರುವ ಕರಾವಳಿ ಪ್ರದೇಶಗಳಿವೆ ಬೆಂಗಳೂರು ಮತ್ತು ಬಳ್ಳಾರಿಯಂತಹ ಕೈಗಾರಿಕಾ ಶಕ್ತಿ ಕೇಂದ್ರಗಳಿವೆ. ಇಲ್ಲಿನ ಹವಾಮಾನ ಗುಣಗಳಿಂದ ಮೂಲಸೌಕರ್ಯಕ್ಕೆ ಬೇಗ ತುಕ್ಕು ಹಿಡಿಯುತ್ತದೆ. ಹಾಗಾಗಿ ಇಲ್ಲಿ ಪರಿಸರದ ಕಾಠಿಣ್ಯವನ್ನು ತಡೆದುಕೊಳ್ಳುವಂತೆ ವಿನ್ಯಾಸಗೊಳಿಸಲಾದ C4 ಮಟ್ಟದ ಸುಧಾರಿತ ಉಕ್ಕಿನ ಪರಿಹಾರಗಳಿಗೆ ಬಹಳ ಬೇಡಿಕೆ ಇದೆ. ಕರ್ನಾಟಕ ರಾಜ್ಯ: ವಿಮಾನ ನಿಲ್ದಾಣಗಳು, ಬಂದರುಗಳು ಮತ್ತು ಲಾಜಿಸ್ಟಿಕ್ಸ್ ಪಾರ್ಕ್‌ಗಳಲ್ಲಿ ಹೆಚ್ಚಿನ ಹೂಡಿಕೆಗಳನ್ನು ಆಕರ್ಷಿಸುತ್ತಿರುವುದರಿಂದ; ದೀರ್ಘಾವಧಿ ಕಾರ್ಯಕ್ಷಮತೆ ಮತ್ತು ಕಡಿಮೆ ನಿರ್ವಹಣಾ ವೆಚ್ಚ ಸಾಧಿಸಲು ಬಾಳಿಕೆ ಬರುವ, ತುಕ್ಕು-ನಿರೋಧಕ ನಿರ್ಮಾಣ ಸಾಮಗ್ರಿಗಳ ಬಳಕೆ ಅತ್ಯಗತ್ಯ. ಇದಕ್ಕೆ ಪರಿಹಾರ ಸೃಷ್ಟಿಸಿರುವ ಎಎಂ/ಎನ್ಎಸ್ ಇಂಡಿಯಾ, ಕರ್ನಾಟಕದಲ್ಲಿ ಆಪ್ಟಿಗಲ್® ಪ್ರೈಮ್ ಮತ್ತು ಪಿನ್ನಾಕಲ್…

Read More