Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಅನಧಿಕೃತವಾಗಿ ಫ್ಲೆಕ್ಸ್/ಬ್ಯಾನರ್ ಅಳವಡಿಸುವವರ ಮೇಲೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕೆಂದು ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್ ರವರು ಎಲ್ಲಾ ವಲಯ ಆಯುಕ್ತರಿಗೆ ಸೂಚನೆ ನೀಡಿದರು. ಬಿಬಿಎಂಪಿ ವ್ಯಾಪ್ತಿಯ ವಿವಿಧ ವಿಷಯಗಳಿಗೆ ಸಂಬಂಧಿಸಿದಂತೆ ಪಾಲಿಕೆ ಕೇಂದ್ರ ಕಛೇರಿಯಲ್ಲಿ ಇಂದು ನಡೆದ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು. ಪಾಲಿಕೆ ವ್ಯಾಪ್ತಿಯಲ್ಲಿ ಅನಧಿಕೃತವಾಗಿ ಫ್ಲೆಕ್ಸ್/ಬ್ಯಾನರ್ ಗಳನ್ನು ಅಳವಡಿಸುತ್ತಿದ್ದು, ಅದನ್ನು ಪರಿಣಾಮಕಾರಿಯಾಗಿ ನಿಯಂತ್ರಿಸಬೇಕಿದೆ. ಈ ನಿಟ್ಟಿನಲ್ಲಿ ಆಯಾ ವಲಯ ವ್ಯಾಪ್ತಿಯಲ್ಲಿ ಕಟ್ಟುನಿಟ್ಟಿನ ಕ್ರಮಗಳನ್ನು ಕೈಗೊಂಡು ಎಲ್ಲಿಯೂ ಅನಧಿಕೃತ ಜಾಹೀರಾತುಗಳನ್ನು ಅಳವಡಿಸದಂತೆ ಸೂಕ್ತ ಕ್ರಮಗಳನ್ನು ಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಿದರು. ಅನಧಿಕೃತವಾಗಿ ಅಳವಡಿಸುತ್ತಿರುವ ಫ್ಲೆಕ್ಸ್/ಬ್ಯಾನರ್ ಗಳನ್ನು ಪಾಲಿಕೆಯಿಂದ ತೆರವುಗೊಳಿಸಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿ ಎಫ್.ಐ.ಆರ್ ದಾಖಲಿಸಲಾಗುತ್ತಿದೆ. ಆದರೂ ಸಾರ್ವಜನಿಕ ಸ್ಥಳ, ರಸ್ತೆ ಬದಿ ಫ್ಲೆಕ್ಸ್ ಅಳವಡಿಸುವುದು ಮಾತ್ರ ನಿಯಂತ್ರಣವಾಗುತ್ತಿಲ್ಲ. ಆದ್ದರಿಂದ ಪಾಲಿಕೆ ಹಾಗೂ ಪೊಲೀಸ್ ಇಲಾಖೆ ಜಂಟಿ ಕಾರ್ಯಾಚರಣೆ ನಡೆಸಿ ಅನಧಿಕೃತ ಜಾಹೀರಾತು ಅಳವಡಿಕೆಗೆ ನಿಯಂತ್ರಣ ತರಬೇಕೆಂದು ಅಧಿಕಾರಿಗಳಿಗೆ ತಿಳಿಸಿದರು. ವಲಯವಾರು ಬರುವ ಫ್ರಿಂಟಿಂಗ್ ಯುನಿಟ್ಸ್…
ನವದೆಹಲಿ: ದೆಹಲಿ ಅಬಕಾರಿ ನೀತಿ ಹಗರಣ ಸಂಬಂಧ ಸಿಬಿಐ ಕೇಸಲ್ಲಿ ದೆಹಲಿ ಸಿಎಂ ಅರವಿದ್ ಕೇಜ್ರಿವಾಲ್ ಜಾಮೀನು ಕೋರಿ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದಂತ ನ್ಯಾಯಾಲಯವು ತೀರ್ಪು ಕಾಯ್ದಿರಿಸಿದೆ. ಹೀಗಾಗಿ ಇಂದು ಕೂಡ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಗೆ ರಿಲೀಫ್ ಸಿಕ್ಕಿಲ್ಲ. ದೆಹಲಿ ಅಬಕಾರಿ ನೀತಿ ‘ಹಗರಣ’ಕ್ಕೆ ಸಂಬಂಧಿಸಿದ ಸಿಬಿಐ ಪ್ರಕರಣದಲ್ಲಿ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರ ಜಾಮೀನು ಅರ್ಜಿಯ ತೀರ್ಪನ್ನು ದೆಹಲಿ ಹೈಕೋರ್ಟ್ ಸೋಮವಾರ ಕಾಯ್ದಿರಿಸಿದೆ. ಇದಕ್ಕೂ ಮುನ್ನ ಸಿಬಿಐ ಈ ಪ್ರಕರಣದಲ್ಲಿ ತನ್ನ ಅಂತಿಮ ಚಾರ್ಜ್ಶೀಟ್ ಸಲ್ಲಿಸಿತ್ತು. https://kannadanewsnow.com/kannada/cm-siddaramaiah-pays-tribute-to-krs-in-ashada/ https://kannadanewsnow.com/kannada/breaking-hc-asks-baba-ramdev-to-withdraw-cure-statement-of-coronil-for-covid-19/
ಮಂಡ್ಯ: ಬಹುತೇಕ ಶುಭ ಕಾರ್ಯಗಳನ್ನು ಪ್ರಾರಂಭಿಸೋದು, ಅಣಿಯಾಗೋದು ಆಷಾಡ ಮುಗಿದ ಮೇಲೆಯೇ ಆಗಿದೆ. ಆದರೇ ಸಿಎಂ ಸಿದ್ಧರಾಮಯ್ಯ ಆಷಾಡದಲ್ಲೂ ಕೆ ಆರ್ ಎಸ್ ಡ್ಯಾಂಗೆ ಬಾಗಿನ ಅರ್ಪಿಸುವ ಮೂಲಕ ಸಂಪ್ರದಾಯವನ್ನು ಮುರಿದಿದ್ದಾರೆ. ಇದಷ್ಟೇ ಅಲ್ಲದೇ ಇದೇ ಮೊದಲ ಬಾರಿಗೆ ಬಾಗಿನ ಅರ್ಪಿಸಿದ ಬಳಿಕ ಕಾವೇರಿ ನೀರಾವರಿ ನಿಗಮದ ಅಧಿಕಾರಿಗಳು ಬರ್ಜರಿ ಬಾಡೂಟದ ವ್ಯವಸ್ಥೆ ಮಾಡಿ, ಸಂಪ್ರದಾಯಕ್ಕೂ ತಿಲಾಂಜಲಿ ಇಟ್ಟಿದ್ದಾರೆ. ಇಂದು ಮಂಡ್ಯ ಜಿಲ್ಲೆಯ ಕೆ ಆರ್ ಎಸ್ ಜಲಾಶಯ ಭರ್ತಿಯಾದ ಹಿನ್ನಲೆಯಲ್ಲಿ ಸಿಎಂ ಸಿದ್ಧರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಬಾಗಿನ ಅರ್ಪಿಸಿದರು. ಆದರೇ ಸಂಪ್ರದಾಯ ಮುರಿಯುವಂತೆ ಆಷಾಡದಲ್ಲಿ ಬಾಗಿನ ಅರ್ಪಿಸಿದ್ದು ವಿಶೇಷವಾಗಿತ್ತು. ಸಿಎಂ ಸಿದ್ಧರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್, ಸಚಿವರು ಕಾವೇರಿಗೆ ಬಾಗಿನ ಅರ್ಪಿಸಿದ ಬಳಿಕ ಅತ್ತ ತೆರಳುತ್ತಲೇ ಕಾವೇರಿ ನಿರಾವರಿ ನಿಗಮದ ಅಧಿಕಾರಿಗಳ ಯಡವಟ್ಟೋ ಅಥವಾ ಸಂಪ್ರದಾಯ ಮುರಿಯುವಂತೆಯೋ, ಅಧಿಕಾರಿಗಳಿಗೆ ಭರ್ಜರಿ ಬಾಡೂಟದ ವ್ಯವಸ್ಥೆ ಮಾಡಲಾಗಿತ್ತು. ಕೆ ಆರ್ ಎಸ್ ನ ಖಾಸಗೀ ಹೋಟೆಲ್ ನಲ್ಲಿ ಕಾವೇರಿ ನೀರಾವರಿ…
ನವದೆಹಲಿ: 2025 ರ ಪುರುಷರ ಏಷ್ಯಾ ಕಪ್ ( Men’s Asia Cup in 2025 ) ಆವೃತ್ತಿಗೆ ಭಾರತ ಆತಿಥ್ಯ ವಹಿಸಲಿದೆ ಎಂದು ಏಷ್ಯನ್ ಕ್ರಿಕೆಟ್ ಕೌನ್ಸಿಲ್ (Asian Cricket Council -ACC) ದೃಢಪಡಿಸಿದೆ. ಮಹಿಳಾ ಏಷ್ಯಾ ಕಪ್ 2024 ರ ಫೈನಲ್ಗೆ ಒಂದು ದಿನ ಮುಂಚಿತವಾಗಿ ಜುಲೈ 27 ರ ಶನಿವಾರ ಎಸಿಸಿ ಆಸಕ್ತಿಗಳ ಅಭಿವ್ಯಕ್ತಿಗಾಗಿ ಆಹ್ವಾನ (ಐಇಒಐ) ದಾಖಲೆಯನ್ನು ಬಿಡುಗಡೆ ಮಾಡಿದ ನಂತರ ಈ ಸುದ್ದಿಯನ್ನು ದೃಢಪಡಿಸಲಾಗಿದೆ. 2024 ರಿಂದ 2027 ರ ಅವಧಿಗೆ ಎಸಿಸಿ ಪ್ರಾಯೋಜಕತ್ವ ಹಕ್ಕುಗಳಿಗಾಗಿ ತಮ್ಮ ಐಇಒಐ ಸಲ್ಲಿಸಲು ಆಸಕ್ತ ಪಕ್ಷಗಳನ್ನು ಡಾಕ್ಯುಮೆಂಟ್ ಆಹ್ವಾನಿಸಿದೆ. “ಕೆಳಗೆ ನೀಡಲಾದ ಎಸಿಸಿ ಪಂದ್ಯಾವಳಿಗಳಿಗೆ ಸಂಬಂಧಿಸಿದಂತೆ ವೇಳಾಪಟ್ಟಿಗಳು, ದಿನಾಂಕಗಳು, ವರ್ಷಗಳು, ಸ್ವರೂಪಗಳು ಮತ್ತು / ಅಥವಾ ಸ್ಥಳಗಳು ಸೇರಿದಂತೆ ಆದರೆ ಸೀಮಿತವಾಗಿಲ್ಲದ ವಿವರಗಳು ತಾತ್ಕಾಲಿಕವಾಗಿವೆ ಮತ್ತು ಎಸಿಸಿಯ ಸಂಪೂರ್ಣ ವಿವೇಚನೆಯ ಮೇರೆಗೆ ಮತ್ತು ಎಸಿಸಿಗೆ ಯಾವುದೇ ಹೊಣೆಗಾರಿಕೆಯಿಲ್ಲದೆ ಯಾವುದೇ ಸಮಯದಲ್ಲಿ ಬದಲಾವಣೆಗೆ ಒಳಪಟ್ಟಿರಬಹುದು” ಎಂದು ಡಾಕ್ಯುಮೆಂಟ್ ಹೇಳಿದೆ.…
ಬೆಂಗಳೂರು: ವಿಪಕ್ಷಗಳಿಗೆ ಗೊಡ್ಡು ಬೆದರಿಕೆ ಹಾಕುವ ಮೂಲಕ ನಮ್ಮ ಹೋರಾಟವನ್ನು, ಪಾದಯಾತ್ರೆಯನ್ನು ಹತ್ತಿಕ್ಕಲು ಸಾಧ್ಯವಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ಸವಾಲು ಹಾಕಿದರು. ನಗರದಲ್ಲಿ ಇಂದು ನಡೆದ ಮೈಸೂರು ಪಾದಯಾತ್ರೆಯ ಪೂರ್ವ ತಯಾರಿ ಸಭೆಯ ಸಂದರ್ಭದಲ್ಲಿ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯನವರೇ, ಉಪ ಮುಖ್ಯಮಂತ್ರಿ ಶಿವಕುಮಾರರೇ ನಿಮ್ಮ ಗೊಡ್ಡು ಬೆದರಿಕೆಗೆ ನಮ್ಮ ಕಾರ್ಯಕರ್ತರು ಅಂಜುವುದಿಲ್ಲ ಎಂದು ಎಚ್ಚರಿಕೆ ನೀಡಿದರು. ಇಡೀ ರಾಜ್ಯದ ಪರಿಶಿಷ್ಟ ಜಾತಿ, ಪಂಗಡಗಳ ಪರವಾಗಿ ನಮ್ಮ ಹೋರಾಟ ನಿರಂತರವಾಗಿ ಇರಲಿದೆ. ಪರಿಶಿಷ್ಟರ ಸಮುದಾಯದ ಹಣ ಲೂಟಿ ಮಾಡಿದ್ದಾರೆ. ಸಾವಿರಾರು ಕೋಟಿಯ ಭ್ರಷ್ಟಾಚಾರ ನಡೆಸಿದ್ದಾರೆ. ಇವುಗಳ ವಿರುದ್ಧ ಹೋರಾಟ ನಡೆಸದೆ ಇದ್ದರೆ ಭಗವಂತನೂ ನಮ್ಮನ್ನು ಕ್ಷಮಿಸುವುದಿಲ್ಲ ಎಂದು ನುಡಿದರು. ವಾಲ್ಮೀಕಿ ನಿಗಮದ ನೂರಾರು ಕೋಟಿ ಹಣವನ್ನು ಅಸ್ತಿತ್ವದಲ್ಲೇ ಇಲ್ಲದ ಕಂಪೆನಿಗಳ ಖಾತೆಗಳಿಗೆ ವರ್ಗಾಯಿಸಲಾಗಿತ್ತು. ಪರಿಶಿಷ್ಟ ಪಂಗಡಗಳಿಗೆ ಸೇರಿದ ಈ ಹಣವನ್ನು ಬಳಿಕ ಅದನ್ನು ಲೋಕಸಭಾ ಚುನಾವಣೆಯಲ್ಲಿ ದುರ್ಬಳಕೆ ಮಾಡಿದ್ದರು. ಹೆಂಡ ಖರೀದಿಯೂ ಮಾಡಿದ್ದನ್ನು ಇ.ಡಿ.…
ಮಂಡ್ಯ : “ಈ ಬಾರಿ ಉತ್ತಮ ಮಳೆಯಾಗಿರುವ ಪರಿಣಾಮ ಈಗಾಗಲೇ ತಮಿಳುನಾಡಿಗೆ 84 ಟಿಎಂಸಿಯಷ್ಟು ನೀರು ತಲುಪಿದೆ. ಮುಂದಿನ 10 ವರ್ಷವೂ ಬಾಗಿನ ಅರ್ಪಿಸುವಂತಹ ಆಶೀರ್ವಾದವನ್ನು ಕಾವೇರಿ ತಾಯಿ ನಮ್ಮ ಸರ್ಕಾರಕ್ಕೆ ಮಾಡುತ್ತಾಳೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹರ್ಷ ವ್ಯಕ್ತಪಡಿಸಿದರು. ಕೆಆರ್ ಎಸ್ ಅಣೆಕಟ್ಟಿಗೆ ಬಾಗಿನ ಸಮರ್ಪಿಸಿದ ನಂತರ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು “ಜುಲೈ ತಿಂಗಳಿನಲ್ಲಿ ಪ್ರತಿ ದಿನ 1 ಟಿಎಂಸಿಯಂತೆ ತಮಿಳುನಾಡಿಗೆ 40 ಟಿಎಂಸಿ ನೀರು ಹರಿಸಬೇಕಿತ್ತು. ಅದಕ್ಕಿಂತ ಹೆಚ್ಚಿನ ನೀರು ಹರಿದು ತಾಯಿ ಕಾವೇರಿ ನೆಮ್ಮದಿ ಶಾಂತಿ ತಂದಿದ್ದಾಳೆ” ಎಂದು ಹೇಳಿದರು. “ಮೇಕೆದಾಟು ಯೋಜನೆಯಿಂದ ತಮಿಳುನಾಡಿಗೆ ಹೆಚ್ಚಿನ ಪ್ರಯೋಜನವಿದೆ. ಸಂಕಷ್ಟ ಕಾಲದಲ್ಲಿ ಅವರ ಪಾಲಿನ 177 ಟಿಎಂಸಿ ನೀರನ್ನು ಅವರಿಗೆ ಹರಿಸಬಹುದು. ಸುಮಾರು 400 ಮೆ.ವ್ಯಾ ವಿದ್ಯುತ್ ತಯಾರಿಸಬಹುದು. ಈ ಅಣೆಕಟ್ಟು ಕಟ್ಟಲು ನ್ಯಾಯಲಯ ಅನುವು ಮಾಡಿಕೊಡುತ್ತದೆ ಎಂದು ನಂಬಿದ್ದೇವೆ. ತಮಿಳುನಾಡಿನ ಜನತೆಗೆ ಭಗವಂತನ ಕೃಪೆಯಿಂದ ಜ್ಞಾನೋದಯವಾಗುತ್ತದೆ. ನಮ್ಮ ಕಾಲದಲ್ಲಿ ಅಣೆಕಟ್ಟು ನಿರ್ಮಾಣಕ್ಕೆ ಅನುವು ಮಾಡಿಕೊಡುತ್ತಾರೆ ಎಂದು…
ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ಜೈಲು ಪಾಲಾಗಿದ್ದಾರೆ. ಜೈಲಿನಲ್ಲಿ ಇರುವಂತ ಅವರು ಮನೆ ಊಟಕ್ಕೆ ಅನುಮತಿ ನೀಡುವಂತೆ ಕೋರಿ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಇಂತಹ ಅರ್ಜಿಯನ್ನು ಇಂದು ವಾಪಾಸ್ ಪಡೆದಿದ್ದಾರೆ. ನಟ ದರ್ಶನ್ ಅವರು ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೊಲೆ ಕೇಸಲ್ಲಿ ಇದ್ದಾರೆ. ತಮ್ಮ ಪರ ವಕೀಲರ ಮೂಲಕ ಜೈಲು ಊಟ ಬೇಡ, ಮನೆಯೂಟಕ್ಕೆ ಅವಕಾಶ ಮಾಡಿಕೊಡುವಂತೆ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ವಿಚಾರಣೆ ನಡೆಸಿದ್ದಂತ ಕೋರ್ಟ್ ಮನೆ ಊಟಕ್ಕೆ ಅನುಮತಿಸುವುದಕ್ಕೆ ನಿರಾಕರಿಸಿ, ಅರ್ಜಿ ವಜಾಗೊಳಿಸಿತ್ತು. ಈ ಹಿನ್ನಲೆಯಲ್ಲಿ ಮತ್ತೆ ಮೇಲ್ಮನವಿಯನ್ನು ಕೋರ್ಟ್ ಗೆ ಸಲ್ಲಿಸಲಾಗಿತ್ತು. ಆದ್ರೇ ಇಂದು ತಾಂತ್ರಿಕ ಕಾರಣದಿಂದಾಗಿ ನಟ ದರ್ಶನ್ ಪರ ವಕೀಲ ಅರುಣ್ ಅವರು ಮನೆ ಊಟ ಕೋರಿ ಸಲ್ಲಿಸಲಾಗಿದ್ದಂತ ಅರ್ಜಿಯನ್ನು ವಾಪಾಸ್ ಪಡೆದಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ. https://kannadanewsnow.com/kannada/do-you-know-how-simple-cm-siddaramaiah-is-read-this-news/ https://kannadanewsnow.com/kannada/breaking-hc-asks-baba-ramdev-to-withdraw-cure-statement-of-coronil-for-covid-19/
ಮಂಡ್ಯ: ಹಣ, ಅಧಿಕಾರ, ಹುದ್ದೆ ಬಂದು ಹೋಗ್ತಾವೆ. ಆದರೇ ಗಳಿಸೋ ಸ್ನೇಹ, ಉಳಿಸಿಕೊಳ್ಳುವ ಗೌರವ, ತೋರುವ ನಡೆ ಮಾತ್ರ ನೀವು ಎಷ್ಟು ಸರಳ, ಸಜ್ಜನ ಎಂಬುದನ್ನು ನಿರ್ಧರಿಸುತ್ತದೆ. ಇದಕ್ಕೆ ಸಾಕ್ಷಿ ಎನ್ನುವಂತೆ ಸಿಎಂ ಸಿದ್ಧರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದರೂ, ಅವರು ಎಷ್ಟು ಸರಳ ಎನ್ನುವುದಕ್ಕೆ ಈ ಘಟನೆಯೊಂದು ಸಾಕ್ಷಿಯಾಗಿದೆ. ಅದೇನು.? ಸಿಎಂ ಸಿದ್ಧರಾಮಯ್ಯ ( CM Siddaramaiah ) ಆ ಸರಳತೆಯ ನಡೆಯೇನು ಅಂತ ಮುಂದೆ ಓದಿ. ಅನೇಕರು ಅಧಿಕಾರ, ಹುದ್ದೆಗೇರಿದ್ದೇ ತಡ ತಮ್ಮ ಲೈಫ್ ಸ್ಟೈಲ್ ( Life Style ) ಅನ್ನೇ ಬದಲಿಸಿ ಬಿಡುತ್ತಾರೆ. ಜನಸಾಮಾನ್ಯರಿಗೆ ಸಿಗೋದು ಡೌಟೇ ಆಗಿ ಬಿಡುತ್ತೆ. ಇನ್ನೂ ಊಟೋಪಚಾರವಂತೂ ತ್ರೀ ಸ್ಟಾರ್, ಫೈವ್ ಸ್ಟಾರ್ ಹೋಟೆಲ್ ನಲ್ಲೇ ( Five Star Hotel ) ನಡೆಯಬೇಕು ಬೇಕು ಅನ್ನೋರು ಇದ್ದಾರೆ. ಇಂತವರ ನಡುವೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಮಾತ್ರ ಇಂದು ದಾರಿಯ ಮಧ್ಯದಲ್ಲೇ ಸಿಕ್ಕ ಸಣ್ಣ ಹೋಟೆಲ್ ಒಂದರಲ್ಲೇ ಬೆಳಗಿನ ಉಪಹಾರ ಸೇರಿವಿಸಿ ಸರಳತೆ ಮರೆದಿದ್ದಾರೆ.…
ಬೆಂಗಳೂರು: ನಾನು ಎಷ್ಟು ದಿನ ಸಚಿವನಾಗಿರುತ್ತೇನೋ ಗೊತ್ತಿಲ್ಲ. ನಾನು ಜೀವಂತವಾಗಿ ಇರುತ್ತೇನೋ ಇಲ್ಲವೋ ಗೊತ್ತಿಲ್ಲ ಎಂಬುದಾಗಿ ಅಳಲು ತೋಡಿಕೊಳ್ಳುತ್ತಲೇ, ಸಚಿವ ಜಮೀರ್ ಅಹ್ಮದ್ ಖಾನ್, ಸಚಿವ ಸಂಪುಟ ಸರ್ಜರಿಯ ಸುಳಿವನ್ನು ನೀಡಿದ್ದಾರೆ. ಇಂದು ನಗರದಲ್ಲಿ ನಡೆಯುತ್ತಿರುವಂತ ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿ ಮಾತನಾಡಿದಂತ ಅವರು, ನಾನು ಎಷ್ಟು ದಿನ ಸಚಿವನಾಗಿ ಇರುತ್ತೇನೋ ಗೊತ್ತಿಲ್ಲ. ಜೀವಂತವಾಗಿ ಇರುತ್ತೇನೋ ಇಲ್ಲವೋ ಗೊತ್ತಿಲ್ಲ. ಯಾಕೆಂದ್ರೆ ದೇವರು ಹಣೆ ಬರಹ ಬರೆದಿರುತ್ತಾನಲ್ಲ ಎಂದರು. ಈಗ ನನ್ನನ್ನು ಅಲ್ಪಸಂಖ್ಯಾತ ಸಚಿವರಾಗಿ ಮಾಡಿದ್ದಾರೆ. ರಾಜ್ಯದಲ್ಲಿ ಮುಂದಿನ 4 ವರ್ಷ ನಮ್ಮದೇ ಸರ್ಕಾರವೇ ಇರುತ್ತದೆ. ನಾನೇ ಅಲ್ಪ ಸಂಖ್ಯಾತ ಕಲ್ಯಾಣ ಸಚಿವನಾಗಿ ಇರುತ್ತೇನೆ ಎಂಬ ವಿಶ್ವಾಸವಿದೆ ಎಂದರು. https://kannadanewsnow.com/kannada/bjp-leaders-stage-protest-against-kota-srinivas-poojary-over-corruption-allegations/ https://kannadanewsnow.com/kannada/breaking-hc-asks-baba-ramdev-to-withdraw-cure-statement-of-coronil-for-covid-19/
ಬೆಂಗಳೂರು: ಸಂಸದ ಕೋಟಾ ಶ್ರೀನಿವಾಸ ಪೂಜಾರಿ ವಿರುದ್ಧ ಕಾಂಗ್ರೆಸ್ ನಾಯಕರಿಂದ ಭ್ರಷ್ಟಾಚಾರ ಆರೋಪ ಮಾಡಲಾಗಿತ್ತು. ಇದನ್ನು ವಿರೋಧಿಸಿ, ಖಂಡಿಸಿ ಬಿಜೆಪಿ ನಾಯಕರಿಂದ ವಿಧಾನಸೌಧದ ಬಳಿಯ ಗಾಂಧಿ ಪ್ರತಿಮೆಯ ಬಳಿಯಲ್ಲಿ ಬಿಜೆಪಿ ನಾಯಕರು ಪ್ರತಿಭಟನೆ ನಡೆಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಂಸದರಾದ ಕೋಟಾ ಶ್ರೀನಿವಾಸ ಪೂಜಾರಿ ಅವರ ಮೇಲೆ ಸುಳ್ಳು ಭ್ರಷ್ಟಾಚಾರ ಆರೋಪ ಮಾಡಿರುವುದನ್ನು ಖಂಡಿಸಿ ಆರೋಪವನ್ನು ವಾಪಸ್ ಪಡೆಯಬೇಕು, ಸಿಬಿಐ ತನಿಖೆಗೆ ಆದೇಶಿಸಬೇಕೆಂದು ವಿಧಾನಸೌಧದ ಗಾಂಧಿಪ್ರತಿಮೆ ಬಳಿ ಮೌನ ಪ್ರತಿಭಟನೆ ನಡೆಸಿದರು. ಈ ಸಂದರ್ಭದಲ್ಲಿ ವಿಧಾನ ಪರಿಷತ್ ವಿರೋಧ ಪಕ್ಷ ನಾಯಕರಾದ ಛಲವಾದಿ ನಾರಾಯಣ ಸ್ವಾಮಿ ಅವರು ಹಾಗೂ ಪಕ್ಷದ ಶಾಸಕರು ಹಾಗೂ ವಿಧಾನ ಪರಿಷತ್ ಸದಸ್ಯರು ಭಾಗವಹಿಸಿ ನೈತಿಕವಾಗಿ ಬೆಂಬಲ ಸೂಚಿಸಿದರು. ಈ ಸಂದರ್ಭದಲ್ಲಿ ಪರಿಷತ್ ಸದಸ್ಯ ಎನ್ ರವಿಕುಮಾರ್, ಎಸ್ ಸುರೇಶ್ ಕುಮಾರ್ ಸೇರಿದಂತೆ ಇತರರು ಭಾಗಿಯಾಗಿದ್ದರು. https://kannadanewsnow.com/kannada/chief-minister-siddaramaiah-to-chair-cabinet-meeting-on-august-1/ https://kannadanewsnow.com/kannada/breaking-hc-asks-baba-ramdev-to-withdraw-cure-statement-of-coronil-for-covid-19/