Author: kannadanewsnow09

ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ನೇತೃತ್ವದಲ್ಲಿ ಆಗಸ್ಟ್.1ರಂದು ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ ನಡೆಯಲಿದೆ. ಈ ಕುರಿತಂತೆ ಮಾಹಿತಿ ನೀಡಿರುವಂತ ಸಚಿವ ಸಂಪುಟದ ಸರ್ಕಾರದ ಜಂಟಿ ಕಾರ್ಯದರ್ಶಿ ಆರ್.ಚಂದ್ರಶೇಖರ್ ಅವರು, ದಿನಾಂಕ 01-08-2024ರಂದು ಗುರುವಾರ ಬೆಳಿಗ್ಗೆ 11 ಗಂಟೆಗೆ ಸಚಿವ ಸಂಪುಟ ಸಭೆ ನಡೆಯಲಿದೆ ಅಂತ ತಿಳಿಸಿದ್ದಾರೆ. ಆಗಸ್ಟ್.1ರಂದು ಸಚಿವ ಸಂಪುಟದ 15ನೇ ಸಭೆಯು ವಿಧಾನಸೌಧದ ಸಚಿವ ಸಂಪುಟ ಸಭಾ ಮಂದಿರದಲ್ಲಿ ಕರೆಯಲಾಗಿದೆ ಎಂದಿದ್ದಾರೆ. ಆ.1ರಂದು ನಡೆಯಲಿರುವಂತ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ಅಭಿವೃದ್ಧಿ ಕಾರ್ಯಗಳಿಗೆ ಅನುಮೋದನೆ ದೊರೆಯುವ ಸಾಧ್ಯತೆ ಇದೆ. ಆ ಬಗ್ಗೆ ಕಾದು ನೋಡಬೇಕಿದೆ. https://kannadanewsnow.com/kannada/mother-cauvery-will-give-congress-an-opportunity-to-offer-bhagina-for-10-years-dk-shivakumar/ https://kannadanewsnow.com/kannada/breaking-hc-asks-baba-ramdev-to-withdraw-cure-statement-of-coronil-for-covid-19/

Read More

ಮಂಡ್ಯ: ಈ ವರ್ಷದಿಂದ ಕೆರೆ-ಕಟ್ಟೆ ತುಂಬುವ ಸಂದರ್ಭದಲ್ಲಿ ರೈತರಿಗೆ ಸನ್ಮಾನಕ್ಕೆ ನಿರ್ಧಾರ ಮಾಡಲಾಗಿದೆ. ಸಾವಡೆಗಳು ಹಾಗು ಎಇಇ ಅಧಿಕಾರಿಗಳಿಗೆ ಅವರಿಗೆ ಪ್ರಶಸ್ತಿ ಕೊಡಲು ಸರ್ಕಾರ ನಿರ್ಧಾರ ಕೈಗೊಳ್ಳಲಾಗಿದೆ. ಕಾವೇರಿ ತಾಯಿ 10 ವರ್ಷ ಬಾಗಿನ ಅರ್ಪಿಸುವ ಅವಕಾಶವನ್ನು ಕಾಂಗ್ರೆಸ್ ಗೆ ನಿಡ್ತಾಳೆ ಅನ್ನೋ ಭರವಸೆ ಇದೆ ಎಂಬುದಾಗಿ ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿದ್ದಾರೆ. ಇಂದು ಕೆ.ಆರ್.ಎಸ್ ಡ್ಯಾಂಗೆ ಬಾಗಿನ ಅರ್ಪಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಇಂದು ಸಂಭ್ರಮದ ದಿನ ಕನ್ನಂಬಾಡಿ ಕಟ್ಟೆ ನಮ್ಮೆಲ್ಲರ ಅನ್ನದ ತಟ್ಟೆ. ನಮ್ಮ ಬದುಕಿನ ಜೀವನದಿ. 92 ವರ್ಷವಾದ್ರು ಸಂಭ್ರಮದಿಂದ ಈ ತಾಯಿಗೆ ನಮನ ಸಲ್ಲಿಸುತ್ತಿದೇವೆ ಎಂದರು. ಚಾಮುಂಡೇಶ್ವರಿಯಲ್ಲಿ ಮಳೆಗಾಗಿ ಪ್ರಾರ್ಥನೆ ಮಾಡಿದ್ದೇನೆ. ಮೇಲಿರುವ ತಾಯಿಗೆ ಯಾರು ಅಧಿಕಾರದಲ್ಲಿದ್ದಾರೆ ಅನ್ನೋದು ಗೊತ್ತಿಲ್ಲ. ನಮ್ಮ ಪ್ರಾರ್ಥನೆಗೆ ತಾಯಿ ಕರುಣಿಸಿ ಅಣೆಕಟ್ಟು ತುಂಬಿ ಕಾವೇರಿ ಹರಿಯುತ್ತಿದ್ದಾಳೆ‌ ಎಂದರು. ಜಿಲ್ಲೆಯಲ್ಲಿ ಕೃಷಿ ವಿವಿ ಪ್ರಾರಂಭವಾಗುತ್ತಿದೆ ರೈತರ ಬದುಕಿಗೆ ಮಾರ್ಗದರ್ಶನ ಸಿಗುತ್ತೆ. ಜನರ ಬದುಕಿಗೆ, ಕೈಗಾರಿಕೆಗೆ ನೀರು ಬಳಕೆಯಾಗಲಿದೆ.  82 ಲಕ್ಷ ಎಕ್ಟೆರ್…

Read More

ವಿಜಯಪುರ: ‘ಕರ್ನಾಟಕ ರಾಜ್ಯ ವನ್ಯಜೀವಿ ಮಂಡಳಿಯ ಸದಸ್ಯನಾಗಿ ನನ್ನನ್ನು ನೇಮಿಸಿರುವುದಕ್ಕೂ ನಮ್ಮ‌ ತಂದೆಯವರ (ಎಂ ಬಿ ಪಾಟೀಲ) ರಾಜಕಾರಣಕ್ಕೂ ಸಂಬಂಧವಿಲ್ಲ. ವನ್ಯಜೀವಿ ಛಾಯಾಗ್ರಹಣ ಮತ್ತು ಸಂರಕ್ಷಣೆ ಕ್ಷೇತ್ರಗಳಲ್ಲಿ ನಾನು ಹನ್ನೊಂದು ವರ್ಷಗಳಿಂದ ಕೆಲಸ ಮಾಡುತ್ತಿದ್ದೇನೆ. ಇದನ್ನು ಗುರುತಿಸಿ ನನ್ನನ್ನು ಈಗ ಸದಸ್ಯನಾಗಿ ನೇಮಿಸಲಾಗಿದೆ’ ಎಂದು ಧ್ರುವ ಪಾಟೀಲ ಹೇಳಿದ್ದಾರೆ. ಇಲ್ಲಿನ ಮಮದಾಪುರ ಸಂರಕ್ಷಿತ ಅರಣ್ಯ ಪ್ರದೇಶದಲ್ಲಿ ಅರಣ್ಯ ಇಲಾಖೆ ಜತೆ ಸೇರಿ ತಮ್ಮ ನೇತೃತ್ವದ ಸೊಸೈಟಿ ಫಾರ್ ಪ್ರೊಟೆಕ್ಷನ್ ಆಫ್ ಪ್ಲಾಂಟ್ಸ್ ಆ್ಯಂಡ್ ಅನಿಮಲ್ಸ್ (ಎಸ್ ಪಿಪಿಎ) ಮೂಲಕ ಕೈಗೊಂಡಿರುವ ಕೋಟಿ ವೃಕ್ಷ ಆಂದೋಲನದ ಭಾಗವಾಗಿ ಎರಡು ವರ್ಷಗಳ ಹಿಂದೆ ನೆಟ್ಟಿದ್ದ 1.36 ಲಕ್ಷ ಸಸಿಗಳ ಬೆಳವಣಿಗೆ ವೀಕ್ಷಿಸಿದ ನಂತರ ಅವರು ತಮ್ಮನ್ನು ಭೇಟಿ ಮಾಡಿದ ಸುದ್ದಿಗಾರರ ಪ್ರಶ್ನೆಗಳಿಗೆ ಉತ್ತರಿಸಿದರು. ಸಸಿಗಳು ಈಗ ಮರಗಳಾಗಿ ನಳನಳಿಸುತ್ತಿದ್ದು ಇದನ್ನು ನೋಡಿ ಅವರು ಹರ್ಷ ವ್ಯಕ್ತಪಡಿಸಿದರು. ‘ರಾಜ್ಯ ವನ್ಯಜೀವಿ ಮಂಡಲಿಗೆ ನಾನು ಸಚಿವರ ಪುತ್ರ ಎಂಬ ಕಾರಣಕ್ಕೆ ಸದಸ್ಯನಾಗಿ ನೇಮಿಸಲಾಗಿದೆ ಎನ್ನುವ ಆರೋಪ ಸರಿಯಲ್ಲ.…

Read More

ಬೆಂಗಳೂರು: ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಿದ್ದಾಗಲೇ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರಿಗೆ ಮೂಗಿನಲ್ಲಿ ರಕ್ತಸ್ರಾವ ಉಂಟಾಗಿತ್ತು. ನನಗೆ ಕೆಲಸದ ಒತ್ತಡದಿಂದ ಒಮ್ಮೊಮ್ಮೆ ಹೀಗಾಗುತ್ತೆ ಅಂತ ಅವರು ಸ್ಪಷ್ಟ ಪಡಿಸಿದ್ದಾರೆ. ಬೆಂಗಳೂರು: ಮೂಗಿನಲ್ಲಿ ರಕ್ತಸ್ರಾವ ಉಂಟಾದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ ಕೇಂದ್ರ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಚಿಕಿತ್ಸೆ ಪಡೆದ ನಂತರ ಜೆಪಿ ನಗರದ ತಮ್ಮ ನಿವಾಸಕ್ಕೆ ವಾಪಸ್ಸಾದರು. ನಗರ ಖಾಸಗಿ ಹೋಟೆಲ್ ನಲ್ಲಿ ಜೆಡಿಎಸ್ ಮತ್ತು ಜೆಡಿಎಸ್ ಸಮನ್ವಯ ಸಮಿತಿ ಸಭೆಯಲ್ಲಿ ಪಾಲ್ಗೊಂಡ ನಂತರ ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರೊಂದಿಗೆ ಮಾಧ್ಯಮಗಳ ಜತೆ ಮಾತನಾಡುವ ಸಂದರ್ಭದಲ್ಲಿ ಸಚಿವರಿಗೆ ಮೂಗಿನಲ್ಲಿ ರಕ್ತಸ್ರಾವ ಉಂಟಾಯಿತು. ಕೂಡಲೇ ಖಾಸಗಿ ಆಸ್ಪತ್ರೆಗೆ ತೆರಳಿ ಚಿಕಿತ್ಸೆ ಪಡೆದ ಸಚಿವರನ್ನು ವೈದ್ಯರು ಕೆಲ ಗಂಟೆಗಳ ಕಾಲ ನಿಗಾದಲ್ಲಿ ಇರಿಸಿ ಅವಲೋಕನ ಮಾಡಿದರು. ಬಳಿಕ ಸೂಕ್ತ ಚಿಕಿತ್ಸೆ ನೀಡಿ ಅವರನ್ನು ಮನೆಗೆ ಕಳಿಸಿಕೊಟ್ಟರು. ಯಾರಿಗೂ ಆತಂಕ ಬೇಡ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ತಮ್ಮ ನಿವಾಸಕ್ಕೆ ಹೊರಡುವ ವೇಳೆ ಮಾಧ್ಯಮಗಳಿಗೆ…

Read More

ಬೆಂಗಳೂರು: ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿಗೆ ಮೂಗಿನಲ್ಲಿ ರಕ್ತಸ್ರಾವ ವಿಚಾರದವನ್ನು ತಿಳಿದಂತ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು, ಶೀಘ್ರವೇ ಅವರು ಚೇತರಿಸಿಕೊಂಡು ಕರ್ತವ್ಯಕ್ಕೆ ಮರಳುವಂತೆ ಆಗಲಿ ಅಂತ ಆಶಿಸಿದ್ದಾರೆ. ಈ ಕುರಿತಂತೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಕೇಂದ್ರ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರ ಆರೋಗ್ಯದಲ್ಲಿ ಏರುಪೇರಾದ ಸುದ್ದಿ ಮಾಧ್ಯಮಗಳಲ್ಲಿ ನೋಡಿದೆ ಅಂತ ತಿಳಿಸಿದ್ದಾರೆ. ಚಿಕಿತ್ಸೆ ಪಡೆಯುತ್ತಿರುವ ಕುಮಾರಸ್ವಾಮಿ ಅವರು ಶೀಘ್ರ ಚೇತರಿಸಿಕೊಂಡು ಮತ್ತೆ ತಮ್ಮ ಕರ್ತವ್ಯದಲ್ಲಿ ತೊಡಗಿಸಿಕೊಳ್ಳುವಂತಾಗಲಿ ಎಂದು ಹಾರೈಸುತ್ತೇನೆ ಎಂದು ಹೇಳಿದ್ದಾರೆ. https://twitter.com/siddaramaiah/status/1817588615398281500 https://kannadanewsnow.com/kannada/hd-kumaraswamy-discharged-from-hospital-after-suffering-nose-bleeds/ https://kannadanewsnow.com/kannada/pm-modi-calls-manu-bhaker-to-congratulate-him-on-winning-bronze-medal-at-paris-olympics/

Read More

ನವದೆಹಲಿ: ಪ್ಯಾರೀಸ್ ಒಲಂಪಿಕ್ಸ್ ನಲ್ಲಿ ಭಾರತದ ಮನು ಬಾಕರ್ ಅವರು ಇಂದು ಮೊದಲ ಪದಕವನ್ನು ತಂದುಕೊಡುವ ಮೂಲಕ, ಭಾರತದ ಪದಕದ ಭೇಟೆಗೆ ಮುನ್ನುಡಿ ಬರೆದಿದ್ದರು. ಇಂತಹ ಅವರಿಗೆ ಪ್ರಧಾನಿ ನರೇಂದ್ರ ಮೋದಿಯವರು ಕರೆ ಮಾಡಿ, ಅಭಿನಂದನೆಯನ್ನು ತಿಳಿಸಿದ್ದಾರೆ. ಪ್ಯಾರೀಸ್ ಒಲಂಪಿಕ್ಸ್ 2024ರ ಇಂದಿನ ಪಂದ್ಯಾವಳಿಯ ವೇಳೆಯಲ್ಲಿ ಮಹಿಳೆಯರ 10 ಮೀಟರ್ ಏರ್ ಪಿಸ್ತೂಲ್ ನಲ್ಲಿ ಭಾರತದ ಮನು ಬಾಕರ್ ಅವರು ಕಂಚಿನ ಪದಕವನ್ನು ಗೆದ್ದಿದ್ದರು. ಇದು ಭಾರತದ ಮೊದಲ ಪದಕವಾಗಿದೆ. ಇಂದು ಪ್ಯಾರೀಸ್ ಒಲಂಪಿಕ್ಸ್ ನಲ್ಲಿ ಕಂಚಿನ ಪದಕ ಗೆದ್ದಿದ್ದಂತ ಮನು ಬಾಕರ್ ಅವರಿಗೆ ಪ್ರಧಾನಿ ನರೇಂದ್ರ ಮೋದಿ, ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಎಕ್ಸ್ ನಲ್ಲಿ ಪೋಸ್ಟ್ ಮಾಡಿ ಕೂಡಲೇ ಅಭಿನಂದನೆಯನ್ನು ತಿಳಿಸಿದ್ದರು. https://twitter.com/narendramodi/status/1817511901355721186 ಈ ಬಳಿಕ ಪ್ರಧಾನಿ ನರೇಂದ್ರ ಮೋದಿಯವರು ಮನು ಬಾಕರ್ ಅವರಿಗೆ ದೂರವಾಣಿ ಕರೆ ಮಾಡಿ, ಪ್ಯಾರಿಸ್ ಒಲಿಂಪಿಕ್ಸ್ 2024 ರಲ್ಲಿ ಮಹಿಳೆಯರ 10 ಮೀಟರ್ ಏರ್ ಪಿಸ್ತೂಲ್ನಲ್ಲಿ ಕಂಚಿನ ಪದಕ ಗೆದ್ದಿದ್ದಕ್ಕೆ ಅಭಿನಂದನೆಯನ್ನು ಸಲ್ಲಿಸಿದ್ದಾರೆ.…

Read More

ಬೆಂಗಳೂರು: ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರಿಗೆ ಇಂದು ಸುದ್ದಿಗೋಷ್ಠಿಯಲ್ಲೇ ಮೂಗಿನಲ್ಲಿ ರಕ್ತಸ್ರಾವ ಉಂಟಾಗಿತ್ತು. ಹೀಗಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಇಂತಹ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಡಿಸ್ಚಾರ್ಜ್ ಆಗಿದ್ದಾರೆ. ಬಿಜೆಪಿ ಹಾಗೂ ಜೆಡಿಎಸ್ ನಾಯಕರಿಂದ ಬೆಂಗಳೂರಿನ ಖಾಸಗಿ ಹೋಟೆಲ್ ಒಂದರಲ್ಲಿ ಕಾಂಗ್ರೆಸ್ ಸರ್ಕಾರದ ಹಗರಣಗಳ ವಿರುದ್ಧ ಧ್ವನಿ ಎತ್ತೋ ಸಲುವಾಗಿ ಪಾದಯಾತ್ರೆ ನಡೆಸುವ ಸಂಬಂಧ ಸಭೆ ನಡೆಸಿದ್ದರು. ಈ ಸಭೆಯಲ್ಲಿ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಕೂಡ ಹಾಜರಾಗಿದ್ದರು. ಈ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಿದ್ದಂತ ವೇಳೆಯಲ್ಲೇ ಹೆಚ್.ಡಿ ಕುಮಾರಸ್ವಾಮಿಗೆ ಮೂಗಿನಲ್ಲಿ ರಕ್ತಸ್ರಾವ ಉಂಟಾಗಿತ್ತು. ಕರ್ಚಿಪ್ ನಲ್ಲಿ ಒರೆಸಿಕೊಳ್ಳುತ್ತಲೇ ಮಾತನಾಡಿ, ಅಲ್ಲಿಂದ ತುರ್ತಾಗೆ ಅರ್ಧಕ್ಕೆ ಸುದ್ದಿಗೋಷ್ಠಿ ಮೊಟಕುಗೊಳಿಸಿ ಹೊರಟಿದ್ದರು. ಬೆಂಗಳೂರಿನ ಜಯನಗರದಲ್ಲಿರುವಂತ ಅಪೋಲೋ ಆಸ್ಪತ್ರೆಗೆ ಹೆಚ್.ಡಿ ಕುಮಾರಸ್ವಾಮಿ ದಾಖಲಾಗಿದ್ದರು. ಅವರನ್ನು ಪರೀಕ್ಷಿಸಿದಂತ ವೈದ್ಯರು ಚಿಕಿತ್ಸೆ ನೀಡಿದ್ದರು. ಇದೀಗ ಹೆಚ್.ಡಿ ಕುಮಾರಸ್ವಾಮಿ ಚಿಕಿತ್ಸೆ ಪಡೆದ ಬಳಿಕ, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಈ ಬಳಿಕ ಆಸ್ಪತ್ರೆಯ ಬಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಕೆಲಸದ ಒತ್ತಡದಿಂದ ಒಮ್ಮೊಮ್ಮೆ…

Read More

ಗದಗ : ಕೇಂದ್ರ ಸರ್ಕಾರದ ಯೋಜನೆಗಳು ಜನರಿಗೆ ಮುಟ್ಟಿಸಲು ರಾಜ್ಯ ಸರ್ಕಾರದ ಸಹಕಾರ ಮುಖ್ಯವಾಗಿರುತ್ತದೆ. ಆದರೆ, ರಾಜ್ಯ ಸರ್ಕಾರ ಅಭಿವೃದ್ಧಿ ಕೆಲಸಗಳನ್ನು ಮಾಡದೇ ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂರಿಸುವ ಕೆಲಸ ಮಾಡುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ, ಸಂಸದ ಬಸವರಾಜ ಬೊಮ್ಮಾಯಿ ಆರೋಪಿಸಿದರು. ಅವರು ಭಾನುವಾರ ಮಾಜಿ ಸಚಿವ ಕಳಕಪ್ಪ ಬಂಡಿ ಅವರ ಗೃಹ ಕಚೇರಿಯ ಆವರಣದಲ್ಲಿ ನಡೆದ ರೋಣ ವಿಧಾನಸಭಾಕ್ಷೇತ್ರದ ಕಾರ್ಯಕರ್ತರು ಹಾಗೂ ಮತದಾರರಿಗೆ ಏರ್ಪಡಿಸಿದ ಅಭಿನಂದನಾ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದರು. ಗದಗ ನಗರದಲ್ಲಿ ಕಳೆದ 7 ವರ್ಷದ ಹಿಂದೆ ಕೇಂದ್ರೀಯ ವಿದ್ಯಾಲಯವನ್ನು ಕೇಂದ್ರ ಸರ್ಕಾರ ಮಂಜೂರು ಮಾಡಿತ್ತು. ಆದರೆ, ಅಲ್ಲಿನ ರಾಜಕೀಯ ನಾಯಕರ ನಿರಾಸಕ್ತಿಯಿಂದ ಸ್ಥಳದ ಸಮಸ್ಯೆಯಾಗಿ ವಿದ್ಯಾಲಯ ಸ್ಥಾಪನೆಯಾಗಲಿಲ್ಲ. ರಾಜ್ಯ ಸರ್ಕಾರಕ್ಕೆ ಕೇಂದ್ರದ ಮೇಲೆ ಗೂಬೆ ಕೂರಿಸುವುದೇ ಒಂದು ಕೆಲಸವಾಗಿದೆ. ತಮ್ಮ ವೈಫಲ್ಯ ಮುಚ್ಚಿಕೊಂಡು ಬರಪರಿಹಾರ, ಯಾವುದೇ ಟೆಂಡರಗಳನ್ನು ಕರಿಯದೇ ಅಭಿವೃದ್ಧಿ ಕೆಲಸಗಳನ್ನು ಮಾಡದೇ ಕೇಂದ್ರ ಸರ್ಕಾರದತ್ತ ಕೈ ತೋರಿಸುತ್ತಿದೆ. ಕೇಂದ್ರ ಸರ್ಕಾರದ ಬಗ್ಗೆ ಅಪಪ್ರಚಾರ ಮಾಡುತ್ತಿದೆ.…

Read More

ಶಿವಮೊಗ್ಗ 2024 ನೇ ಸಾಲಿನಲ್ಲಿ ಶಿವಮೊಗ್ಗ ಜಿಲ್ಲೆಯ ಪ್ರವಾಹ ಪರಿಸ್ಥಿತಿಯ ತುರ್ತು ಸಂದರ್ಭದಲ್ಲಿ ಜಿಲ್ಲಾಡಳಿತದ ವತಿಯಿಂದ ಕೈಗೊಳ್ಳಲಾದ ಕ್ರಮಗಳ ಕುರಿತು ಜಿಲ್ಲಾಧಿಕಾರಿ ಗುರುದತ್ ಹೆಗಡೆ ಅವರು ಮಾಧ್ಯಮದ ಪ್ರತಿನಿಧಿಗಳಿಗೆ ವಿಸ್ತೃತ ಮಾಹಿತಿ ನೀಡಿದರು. ಶಿವಮೊಗ್ಗ ಜಿಲ್ಲೆಯಲ್ಲಿ ಜುಲೈ ಮಾಹೆಯಲ್ಲಿ ಭಾರಿ ಮಳೆಯಾಗಿದ್ದರಿಂದ ಜಿಲ್ಲೆಯಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿರುತ್ತದೆ. ಜುಲೈ ಮಾಹೆಯಲ್ಲಿ (27-07-2022ರವರೆಗೆ) ನರಾಸರಿ 668.0 ಮೀ.ಮೀ ವಾಡಿಕೆ ಮಳೆ ಇದ್ದು 1109 ಮೀ.ಮೀ. ಮಳೆಯಾಗಿರುತ್ತದೆ. ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲಿ ವಾಡಿಕೆಗಿಂತ ಪ್ರತಿಶತ 66″, ರಷ್ಟು ಹೆಚ್ಚು ಮಳೆಯಾಗಿರುತ್ತದೆ. ಜಿಲ್ಲೆಯಲ್ಲಿ ನೆರೆಹಾವಳಿಯಿಂದಾಗಿ ಜೂನ್ ಮಾಹೆಯಿಂದ’ ಒಟ್ಟು 4 ಮಾನವ ಹಾನಿಯಾಗಿದ್ದು, ಈಗಾಗಲೆ 2 ಪ್ರಕರಣಗಳಿಗೆ ರೂ.5.00 ಲಕ್ಷದಂತೆ ಮಾರ್ಗಸೂಚಿಯಂತೆ ಪರಿಹಾರ ವಿತರಿಸಲಾಗಿದೆ ಉಳಿದ 2 ಪ್ರಕರಣಕ್ಕೆ ಶೀಘ್ರವಾಗಿ ಪರಿಹಾರ ಧನ ವಿತರಿಸಲಾಗುವುದು. ಜಿಲ್ಲೆಯಲ್ಲಿ ನೆರೆಹಾವಳಿಯಿಂದಾಗಿ ಒಟ್ಟು 10 ಜಾನುವಾರು ಮೃತಪಟ್ಟಿರುತ್ತವೆ 8 ಪ್ರಕರಣಗಳ ವಾರಸುದಾರರಿಗೆ ಮಾರ್ಗಸೂಚಿಯಂತೆ 0.375 ಲಕ್ಷದಂತೆ ಪರಿಹಾರ ಧನ ವಿತರಿಸಲಾಗಿದೆ ಅತಿ ಹೆಚ್ಚು ಮಳೆಯಿಂದ ಜೂನ್ ಮಾಹೆಯಿಂದ ಸುಮಾರು 18…

Read More

ಶಿವಮೊಗ್ಗ: ಹಿರಿಯ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಅವರು ವಯೋ ಸಹಜ ಅನಾರೋಗ್ಯದಿಂದ ಬಳಲುತ್ತಿದ್ದು, ನಗರದಲ್ಲಿ ಆರೋಗ್ಯದಲ್ಲಿ ಏರುಪೇರಾದ ಕಾರಣ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವುದಾಗಿ ತಿಳಿದು ಬಂದಿದೆ. ಶಿವಮೊಗ್ಗ ನಗರದ ಖಾಸಗಿ ಆಸ್ಪತ್ರೆಗೆ ಮಾಜಿ ಸಚಿವ ಹಾಗೂ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಕಾಗೋಡು ತಿಮ್ಮಪ್ಪ ಅವರು ಅನಾರೋಗ್ಯದ ಕಾರಣ, ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಈ ವಿಷಯ ತಿಳಿದಂತ ಶಾಲಾ ಶಿಕ್ಷಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಅವರು ಆಸ್ಪತ್ರೆಗೆ ಭೇಟಿ ನೀಡಿ, ಕಾಗೋಡು ತಿಮ್ಮಪ್ಪ ಅವರ ಆರೋಗ್ಯವನ್ನು ವಿಚಾರಿಸಿದರು. ಇನ್ನೂ ಮಾಜಿ ಸಚಿವ ಹರತಾಳು ಹಾಲಪ್ಪ ಹಾಗೂ ಸಾಗರ ತಾಲ್ಲೂಕು ಶಾಸಕ ಬೇಳೂರು ಗೋಪಾಲಕೃಷ್ಣ ಅವರ ಸೂಚನೆ ಮೇರೆಗೆ ಕರ್ತವ್ಯಾಧಿಕಾರಿ ಟಿ.ಪಿ ರಮೇಶ್ ಅವರು ಕೂಡ ಕಾಗೋಡು ತಿಮ್ಮಪ್ಪ ಅವರು ಚಿಕಿತ್ಸೆ ಪಡೆಯುತ್ತಿದ್ದಂತ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು. ಅಲ್ಲದೇ ಅವರಿಗೆ ಧೈರ್ಯ ತುಂಬಿದರು. https://kannadanewsnow.com/kannada/passengers-note-these-trains-will-be-cancelled-from-tomorrow-july-29-to-july-4/ https://kannadanewsnow.com/kannada/passengers-note-these-trains-will-be-cancelled-from-tomorrow-july-29-to-july-4/

Read More