Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ರಾಜ್ಯದ ಕಾಂಗ್ರೆಸ್ ಸರಕಾರವು ಬಿಜೆಪಿ ಶಾಸಕರಿಗೆ ಎಷ್ಟು ಅನುದಾನ ನೀಡಿದೆ? ಕಾಂಗ್ರೆಸ್ ಶಾಸಕರಿಗೆ ಎಷ್ಟು ಅನುದಾನ ಕೊಟ್ಟಿದೆ ಎಂಬುದನ್ನು ಮೊದಲು ಬಹಿರಂಗಪಡಿಸಲಿ ಎಂದು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ಸವಾಲು ಹಾಕಿದರು. ಮಾನ್ಯ ರಾಜ್ಯಪಾಲರ ಭೇಟಿಯ ಬಳಿಕ ನಗರದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಕೇಂದ್ರ ಸರಕಾರದಿಂದ ರಾಜ್ಯಕ್ಕೆ ಕಡಿಮೆ ಅನುದಾನ ಕುರಿತಂತೆ ಮಾತನಾಡುವ ಕಾಂಗ್ರೆಸ್ ಮುಖಂಡರು ತಮ್ಮ ಮನೆಯಲ್ಲಿ ಸತ್ತುಬಿದ್ದ ಹೆಗ್ಗಣವನ್ನು ಮೊದಲು ಆಚೆ ಬಿಸಾಡಲಿ; ಆಮೇಲೆ ಬೇರೆಯವರ ತಟ್ಟೆಯಲ್ಲಿ ಬಿದ್ದ ನೊಣವನ್ನು ಎತ್ತಿ ಆಚೆ ಹಾಕಬಹುದು ಎಂದು ತಿಳಿಸಿದರು. ತಾರತಮ್ಯ ಮಾಡಿಲ್ಲ ಎಂಬುದನ್ನು ಸ್ಪಷ್ಟಪಡಿಸಿ; ಆಗ ನಾವು ನಿಯೋಗದಲ್ಲಿ ನಿಮ್ಮ ಜೊತೆ ಬರಲು ಸಿದ್ಧ ಎಂದು ತಿಳಿಸಿದರು. ಹುಬ್ಬಳ್ಳಿ ಪೊಲೀಸ್ ಠಾಣೆಗೆ ಬೆಂಕಿ ಹಚ್ಚಿದ, ಕಲ್ಲೆಸೆದ ದೇಶದ್ರೋಹಿಗಳನ್ನು ಬೆಂಬಲಿಸುವ ಹಾಗೂ ಅವರ ಮೊಕದ್ದಮೆ ರದ್ದುಪಡಿಸುವ ಸರಕಾರದ ನಿರ್ಧಾರದ ವಿರುದ್ಧ ಹೋರಾಟ ಇಲ್ಲಿಗೇ ನಿಲ್ಲುವುದಿಲ್ಲ ಎಂದು ಅವರು ತಿಳಿಸಿದರು. ಪಕ್ಷದ ರಾಜ್ಯಾಧ್ಯಕ್ಷ ವಿಜಯೇಂದ್ರರ…
ಬೆಂಗಳೂರು: ಮತಬ್ಯಾಂಕ್ಗಾಗಿ ಹಾಗೂ ಹಗರಣಗಳನ್ನು ಮರೆಮಾಚಲು ಕ್ರಿಮಿನಲ್ ಪ್ರಕರಣಗಳನ್ನು ಹಿಂಪಡೆಯಲು ಕಾಂಗ್ರೆಸ್ ಸರ್ಕಾರ ಮುಂದಾಗಿದೆ. ಕುರ್ಚಿ ಅಲುಗಾಡುತ್ತಿರುವ ಸಮಯದಲ್ಲಿ ಮುಸ್ಲಿಮರು ನನ್ನ ಪರವಾಗಿದ್ದಾರೆ ಎಂದು ತೋರಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಹೀಗೆ ಮಾಡಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆಕ್ರೋಶ ವ್ಯಕ್ತಪಡಿಸಿದರು. ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನದಲ್ಲಿ ರಾಜ್ಯ ಸರ್ಕಾರದ ವಿರುದ್ಧ ನಡೆದ ಪ್ರತಿಭಟನೆಯಲ್ಲಿ ಪ್ರತಿಪಕ್ಷ ನಾಯಕ ಆರ್.ಅಶೋಕ ಭಾಗವಹಿಸಿದರು. ನಂತರ ಬಿಜೆಪಿ ಶಾಸಕರು, ಮುಖಂಡರೊಂದಿಗೆ ರಾಜಭವನಕ್ಕೆ ತೆರಳಿ, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಭೇಟಿ ಮಾಡಿ ದೂರು ಪತ್ರ ಸಲ್ಲಿಸಿದರು. ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದೇಶದ್ರೋಹಿ ಚಟುವಟಿಕೆ, ಪೊಲೀಸರ ಮೇಲೆ ಹಲ್ಲೆ ಮಾಡಿದ ಪ್ರಕರಣಗಳನ್ನು ಕಾಂಗ್ರೆಸ್ ಸರ್ಕಾರ ಮುಚ್ಚಿಹಾಕಿದೆ. ರೈತ ಹೋರಾಟ, ಕನ್ನಡ ಹೋರಾಟಗಳಿಗೆ ಇದನ್ನು ಹೋಲಿಸಬಾರದು. ಕಾಂಗ್ರೆಸ್ಗೆ ಮುಸ್ಲಿಮರ ಓಟು ಬೇಕೆಂದು ಹೀಗೆ ಮಾಡಲಾಗಿದೆ. ಸಿಎಂ ಸಿದ್ದರಾಮಯ್ಯನವರ ಕುರ್ಚಿ ಅಲುಗಾಡುತ್ತಿದ್ದು, ಮುಸ್ಲಿಮರು ನನ್ನ ಪರವಾಗಿದ್ದಾರೆ ಎಂದು ತೋರಿಸಲು ಹೀಗೆ ಮಾಡಿದ್ದಾರೆ. ರೈತರ ವಿರುದ್ಧದ ಪ್ರಕರಣ ವಾಪಸ್ ಪಡೆಯಲು ಸಿ.ಟಿ.ರವಿ ಮನವಿ…
ಕೆಎನ್ಎನ್ ಡಿಜಿಟಲ್ ಡೆಸ್ಕ್: ರಾಯಲ್ ಸ್ವೀಡಿಷ್ ಅಕಾಡೆಮಿ ಆಫ್ ಸೈನ್ಸಸ್ 2024 ರ ಆರ್ಥಿಕ ವಿಜ್ಞಾನದ ನೊಬೆಲ್ ಪ್ರಶಸ್ತಿಯನ್ನು ಖ್ಯಾತ ಅರ್ಥಶಾಸ್ತ್ರಜ್ಞರಾದ ಡಾರಾನ್ ಅಸೆಮೊಗ್ಲು, ಸೈಮನ್ ಜಾನ್ಸನ್ ಮತ್ತು ಜೇಮ್ಸ್ ಎ. ರಾಬಿನ್ಸನ್ ಅವರಿಗೆ ನೀಡಿದೆ. “ಸಂಸ್ಥೆಗಳು ಹೇಗೆ ರೂಪುಗೊಳ್ಳುತ್ತವೆ ಮತ್ತು ಸಮೃದ್ಧಿಯ ಮೇಲೆ ಹೇಗೆ ಪರಿಣಾಮ ಬೀರುತ್ತವೆ ಎಂಬುದರ ಅಧ್ಯಯನಕ್ಕಾಗಿ” ಅವರಿಗೆ ಪ್ರಶಸ್ತಿ ನೀಡಲಾಗಿದೆ. https://twitter.com/NobelPrize/status/1845763241147785723 ಮೂವರು ಅರ್ಥಶಾಸ್ತ್ರಜ್ಞರು “ದೇಶದ ಸಮೃದ್ಧಿಗೆ ಸಾಮಾಜಿಕ ಸಂಸ್ಥೆಗಳ ಮಹತ್ವವನ್ನು ಪ್ರದರ್ಶಿಸಿದ್ದಾರೆ” ಎಂದು ರಾಯಲ್ ಸ್ವೀಡಿಷ್ ಅಕಾಡೆಮಿ ಆಫ್ ಸೈನ್ಸಸ್ನ ನೊಬೆಲ್ ಸಮಿತಿ ಸ್ಟಾಕ್ಹೋಮ್ನಲ್ಲಿ ಪ್ರಕಟಣೆಯಲ್ಲಿ ತಿಳಿಸಿದೆ. “ಕಾನೂನಿನ ಕಳಪೆ ನಿಯಮವನ್ನು ಹೊಂದಿರುವ ಸಮಾಜಗಳು ಮತ್ತು ಜನಸಂಖ್ಯೆಯನ್ನು ಶೋಷಿಸುವ ಸಂಸ್ಥೆಗಳು ಉತ್ತಮ ಬೆಳವಣಿಗೆ ಅಥವಾ ಬದಲಾವಣೆಯನ್ನು ಉಂಟುಮಾಡುವುದಿಲ್ಲ. ಪ್ರಶಸ್ತಿ ವಿಜೇತರ ಸಂಶೋಧನೆಯು ಏಕೆ ಎಂಬುದನ್ನು ಅರ್ಥಮಾಡಿಕೊಳ್ಳಲು ನಮಗೆ ಸಹಾಯ ಮಾಡುತ್ತದೆ” ಎಂದು ಅದು ಹೇಳಿದೆ. ಅಸೆಮೊಗ್ಲು ಮತ್ತು ಜಾನ್ಸನ್ ಮ್ಯಾಸಚೂಸೆಟ್ಸ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯಲ್ಲಿ ಕೆಲಸ ಮಾಡುತ್ತಾರೆ ಮತ್ತು ರಾಬಿನ್ಸನ್ ಚಿಕಾಗೋ ವಿಶ್ವವಿದ್ಯಾಲಯದಲ್ಲಿ ತಮ್ಮ…
ಕೇರಳ: ಕುಡಿದು ವಾಹನ ಚಲಾಯಿಸಿದ ಆರೋಪದ ಮೇಲೆ ಮಲಯಾಳಂ ನಟ ಬೈಜು ಸಂತೋಷ್ ಅವರನ್ನು ಕೇರಳ ಪೊಲೀಸರು ಸೋಮವಾರ ಬಂಧಿಸಿದ್ದಾರೆ. ಭಾನುವಾರ ರಾತ್ರಿ 11:45 ರ ಸುಮಾರಿಗೆ ನಟ ತನ್ನ ಕಾರನ್ನು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಒಬ್ಬ ವ್ಯಕ್ತಿ ಗಾಯಗೊಂಡಿದ್ದಾನೆ ಎಂದು ವರದಿಯಾಗಿದೆ. ತಿರುವನಂತಪುರಂನ ಮ್ಯೂಸಿಯಂ ಪೊಲೀಸ್ ಠಾಣೆ ವ್ಯಾಪ್ತಿಯ ಕೌಡಿಯಾರ್-ವೆಲ್ಲಯಂಬಲಂ ರಸ್ತೆಯಲ್ಲಿ ಅವರು ವಾಹನ ಚಲಾಯಿಸುತ್ತಿದ್ದರು. ಪೃಥ್ವಿರಾಜ್ ಸುಕುಮಾರನ್ ಅವರ ಎಲ್ 2: ಎಂಪುರಾನ್ ಚಿತ್ರದಲ್ಲಿ ಮೋಹನ್ ಲಾಲ್ ಅವರೊಂದಿಗೆ ಕಾಣಿಸಿಕೊಳ್ಳಲಿರುವ ನಟನ ವಿರುದ್ಧ ಭಾರತೀಯ ನ್ಯಾಯ ಸಂಹಿತಾ (ಬಿಎನ್ಎಸ್) (ಸಾರ್ವಜನಿಕ ಮಾರ್ಗದಲ್ಲಿ ರಾಶ್ ಡ್ರೈವಿಂಗ್) ಸೆಕ್ಷನ್ 281 ಮತ್ತು ಮೋಟಾರು ವಾಹನ ಕಾಯ್ದೆ, 1988 ರ ಸೆಕ್ಷನ್ 185 (ಮದ್ಯದ ಅಮಲಿನಲ್ಲಿ ಚಾಲನೆ) ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಸುದ್ದಿ ಸಂಸ್ಥೆ ಪಿಟಿಐ ಪ್ರಕಟಿಸಿದ ವರದಿಯ ಪ್ರಕಾರ, ಬೈಜು ಅವರನ್ನು ನಂತರ ಸ್ಟೇಷನ್ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಯಿತು. ಅವರ ಕಾರನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ ಮತ್ತು ಗಾಯಗೊಂಡವರು…
ಬೆಂಗಳೂರು: ರಾಜ್ಯದಲ್ಲಿ ವೈದ್ಯಕೀಯ ವ್ಯಾಸಂಗದ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್ ಎನ್ನುವಂತೆ ಹೊಸದಾಗಿ 11 ಸರ್ಕಾರಿ ವೈದ್ಯಕೀಯ ಕಾಲೇಜು ಸ್ಥಾಪಿಸುವುದಾಗಿ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ತಿಳಿಸಿದ್ದಾರೆ. ಬಡ ವಿದ್ಯಾರ್ಥಿಗಳ ವೈದ್ಯಕೀಯ ಶಿಕ್ಷಣದ ಕನಸು ನನಸು ಮಾಡಬೇಕೆಂಬ ಉದ್ದೇಶದಿಂದ ಪ್ರತಿ ಜಿಲ್ಲೆಯಲ್ಲೂ ವೈದ್ಯಕೀಯ ಕಾಲೇಜು ಆರಂಭಿಸಲು ಸರ್ಕಾರ ನಿರ್ಧರಿಸಿದೆ. 11 ಹೊಸ ಕಾಲೇಜುಗಳ ಸ್ಥಾಪನೆಗಾಗಿ ಆರ್ಥಿಕ ಇಲಾಖೆಗೆ ಅನುಮತಿ ಕೇಳಿದ್ದೇವೆ ಎಂದು ವೈದ್ಯಕೀಯ ಶಿಕ್ಷಣ ಸಚಿವರಾದ ಡಾ. ಶರಣಪ್ರಕಾಶ ಪಾಟೀಲ್ ತಿಳಿಸಿದ್ದಾರೆ. https://twitter.com/KarnatakaVarthe/status/1845768969937891683 ಎಮ್.ಬಿ.ಬಿ.ಎಸ್ ವಿದ್ಯಾರ್ಥಿಗಳ ತರಗತಿಗಳು ಸಮರ್ಪಕ ಹಾಗೂ ಉನ್ನತ ಮಟ್ಟದಲ್ಲಿ ವಿಶ್ವವಿದ್ಯಾಲಯ ನಡೆಸುತ್ತಿರುವ ಬಗ್ಗೆ ಜಾಗರೂಕತೆ ಜೊತೆಗೆ ಕಾಳಜಿಯೂ ಇರಲಿ ಎಂದು ಸಚಿವರು ತಿಳಿಸಿದರು. ಪದವಿ ಪಡೆದ ನಂತರವೂ ನಿರಂತರ ಕಲಿಕೆ ಮುಂದುವರಿಯಬೇಕು. ಜ್ಞಾನವನ್ನು ಸಂಪಾದಿಸುವುದು, ಆಧುನೀಕತೆ ಜೊತೆಗೆ ಪ್ರಸಕ್ತ ಸನ್ನಿವೇಶಗಳನ್ನು ಎದುರಿಸುವುದು ಅರಿತಿರಬೇಕು ಎಂದು ಡಾ.ಪಾಟೀಲ್ ತಿಳಿಸಿದರು. ಔಷಧಗಳು ಇನ್ಮುಂದೆ ನಿಮ್ಮ ಜೀವನದ ಭಾಗವಾಗಲಿದೆ. ನಿಮ್ಮಿಂದ ಸಲಹೆ, ಸೂಚನೆ ಪಡೆಯುವವರಿಗೆ ಸೂಕ್ತ ಮಾರ್ಗದರ್ಶನ ನೀಡಬೇಕು ಎಂದರು. ಉತ್ತಮ…
ನವದೆಹಲಿ: ಶಿವಸೇನೆ (ಯುಬಿಟಿ) ಮುಖ್ಯಸ್ಥ ಉದ್ಧವ್ ಠಾಕ್ರೆ ಅವರನ್ನು ತಪಾಸಣೆಗಾಗಿ ರಿಲಯನ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರು ಆಂಜಿಯೋಪ್ಲಾಸ್ಟಿಯ ಇತಿಹಾಸವನ್ನು ಹೊಂದಿದ್ದಾರೆ ಮತ್ತು ಪ್ರಸ್ತುತ ಅವರ ಹೃದಯ ಅಪಧಮನಿಗಳಲ್ಲಿನ ತಡೆಗಳನ್ನು ಗುರುತಿಸಲು ಪರೀಕ್ಷೆಗಳಿಗೆ ಒಳಗಾಗುತ್ತಿದ್ದಾರೆ ಎಂದು ಐಎಎನ್ಎಸ್ ತಿಳಿಸಿದೆ. https://twitter.com/ians_india/status/1845742882260455607 ವರದಿಗಳ ಪ್ರಕಾರ, ಅಕ್ಟೋಬರ್ 12 ರಂದು ನಡೆದ ದಸರಾ ರ್ಯಾಲಿಯಲ್ಲಿ ಆಡಳಿತಾರೂಢ ಮಹೌತಿ ಸರ್ಕಾರ ಮತ್ತು ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿದ ನಂತರ ಠಾಕ್ರೆ ಆರೋಗ್ಯ ಸರಿಯಿಲ್ಲ. 2016 ರಲ್ಲಿ, ಆಂಜಿಯೋಗ್ರಫಿ ಪರೀಕ್ಷೆಯ ನಂತರ ಠಾಕ್ರೆ ಅವರನ್ನು ಮುಂಬೈನ ಲೀಲಾವತಿ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಯಿತು. ನ್ಯೂಸ್ 18 ಪ್ರಕಾರ, ಠಾಕ್ರೆ ಅವರು ಜುಲೈ 20, 2012 ರಂದು ನಡೆಸಿದ ಆಂಜಿಯೋಪ್ಲಾಸ್ಟಿಯ ಅನುಸರಣೆಯಲ್ಲಿ ಈ ಕಾರ್ಯವಿಧಾನಕ್ಕೆ ಒಳಗಾಗಿದ್ದರು, ವೈದ್ಯರು ಅವರ ಹೃದಯದ ಮೂರು ಮುಖ್ಯ ಅಪಧಮನಿಗಳಲ್ಲಿನ ಬಹು ತಡೆಗಳ ಸಂಕೋಚನವನ್ನು ತೆಗೆದುಹಾಕಲು 8 ಸ್ಟೆಂಟ್ಗಳನ್ನು ಹಾಕಿದರು. ಸಿಂಧುದುರ್ಗದಲ್ಲಿ ಛತ್ರಪತಿ ಶಿವಾಜಿ ಮಹಾರಾಜ್ ಅವರ ಪ್ರತಿಮೆ ಕುಸಿದಿರುವುದಕ್ಕೆ ಆಡಳಿತಾರೂಢ ಸರ್ಕಾರವೇ ಕಾರಣ ಎಂದು ಠಾಕ್ರೆ…
ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ ಯಶಸ್ವಿಯಾಗಿ ಮುಕ್ತಾಯವಾಗಿದೆ. ಹೀಗಾಗಿ ನಾಡಿನಿಂದ ಕಾಡಿನತ್ತ ಕ್ಯಾಪ್ಟನ್ ಅಭಿಮನ್ಯು ಅಂಡ್ ಟೀಂ ಹೊರಟಿದೆ. ಕಳೆದ ಒಂದುವರೆ ತಿಂಗಳಿಂದ ಅರಮನೆ ಆವರಣದಲ್ಲಿ ಮೈಸೂರು ದಸರಾಗಾಗಿ ಗಜಪಡೆ ಬೀಡು ಬಿಟ್ಟಿತ್ತು. ಜಂಬೂಸವಾರಿ ಮೆರವಣಿಗೆಯಲ್ಲಿ ತಮಗೆ ವಹಿಸಿದ ಜವಾಬ್ದಾರಿಯನ್ನು ಸಮರ್ಥವಾಗಿ ಗಜಪಡೆ ನಿಭಾಯಿಸಿತು. ಜಂಬೂಸವಾರಿ ಮೆರವಣಿಗೆ ಮುಗಿದ ಎರಡು ದಿನಗಳ ಬಳಿಕ ಸ್ವಸ್ಥಾನದತ್ತ ಗಜಪಡೆ ಹೊರಟಿದೆ. ಅರಮನೆ ಅಂಗಳದಲ್ಲಿ ಕ್ಯಾಪ್ಟನ್ ಅಭಿಮನ್ಯು ಅಂಡ್ ಟೀಂನ 14 ಆನೆಗಳಿಗೆ ಸಾಂಪ್ರದಾಯಿಕವಾಗಿ ಪೂಜೆ ಸಲ್ಲಿಕೆ ಮಾಡಲಾಯಿತು. ಅರ್ಚಕ ಪ್ರಹ್ಲಾದ್ ರಾವ್ ರಿಂದ ಆನೆಗಳಿಗೆ ಪೂಜೆ ನೆರವೇರಿಸಲಾಯಿತು. ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು. ಆನೆಗಳಿಗೆ ಪ್ರಿಯವಾದ ಬೆಲ್ಲ, ಕಬ್ಬು, ತೆಂಗು, ಬಾಳೆಹಣ್ಣು ನೀಡಿ ಸತ್ಕಾರ ಮಾಡಲಾಯಿತು. ಅರಮನೆ ಅಂಗಳದಲ್ಲಿ ಎಲ್ಲಾ ಆನೆಗಳನ್ನು ಸಾಲಾಗಿ ನಿಲ್ಲಿಸಿ ಪೂಜೆ ಸಲ್ಲಿಕೆ ಮಾಡಲಾಯಿತು. ಪೂಜೆಯ ಬಳಿಕ ಲಾರಿಗಳ ಮೂಲಕ ಸ್ವಸ್ಥಾನದತ್ತ ಕ್ಯಾಪ್ಟನ್ ಅಭಿಮನ್ಯು ಟೀಂ ತೆರಳುತ್ತಿದೆ. ಲಾರಿಯನ್ನೇರಲು ಕೊಂಚ ಪ್ರತಿರೋಧವನ್ನು ಏಕಲವ್ಯ ತೋರಿದನು. ಆದರೇ ಮಾವುತರು…
ಬೆಂಗಳೂರು: ನಾನು ಬೌದ್ಧ ಧರ್ಮ ಸ್ವೀಕರಿಸುವುದಾಗಿ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಹಾಗೂ ಸಮಾಜ ಕಲ್ಯಾಣ ಸಚಿವ ಡಾ.ಹೆಚ್.ಸಿ ಮಹದೇವಪ್ಪ ಅವರು ಘೋಷಿಸಿದ್ದಾರೆ. ಈ ಕುರಿತಂತೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ನಾನು ಸ್ವಾತಂತ್ರ್ಯ, ಸಮಾನತೆ ಮತ್ತು ಭ್ರಾತೃತ್ವವನ್ನು ಬೋಧಿಸುವ ಧರ್ಮವನ್ನು ಇಷ್ಟಪಡುತ್ತೇನೆ, ಏಕೆಂದರೆ ವ್ಯಕ್ತಿಯ ಬೆಳವಣಿಗೆಗೆ ಕರುಣೆ, ಸಮಾನತೆ ಮತ್ತು ಸ್ವಾತಂತ್ರ್ಯ ಅತ್ಯಂತ ಮುಖ್ಯ ಎಂದಿದ್ದಾರೆ. ನನ್ನ ಅನುಭವದಲ್ಲಿ ಜಾತಿ ಶ್ರೇಷ್ಠತೆಯ ರೋಗದಿಂದ ಬಳಲುತ್ತಿರುವ ಹಿಂದೂ ಧರ್ಮವು ಸುಧಾರಣೆ ಆಗುವ ಯಾವ ಲಕ್ಷಣವೂ Star ಕಾಣುತ್ತಿಲ್ಲ. ಹೀಗಾಗಿ ನಾನು ಸಮಾನತೆ ಮತ್ತು ಶಾಂತಿಯ ರೂಪಕವಾದ ಬೌದ್ಧ ಧರ್ಮವನ್ನು ಸ್ವೀಕರಿಸುತ್ತೇನೆ ಮತ್ತು ಮುಂದೆ ಎಲ್ಲರೂ ಭಾರತದ ಮೂಲ ಧರ್ಮವಾಗಿದ್ದ ಬೌದ್ಧ ಧರ್ಮದ ಪ್ರಚಾರ ಮಾಡಬೇಕೆಂದು ಬಯಸುತ್ತೇನೆ ಎಂದು ಹೇಳಿ ತನ್ನ 3.5 ಲಕ್ಷ ಅನುಯಾಯಿಗಳೊಂದಿಗೆ ಬೌದ್ಧ ಧರ್ಮ ಸ್ವೀಕರಿಸಿದ ಧಮ್ಮ ಚಕ್ರ ಪರಿವರ್ತನಾ ದಿನದಂದು ಎಲ್ಲರಿಗೂ ನನ್ನ ಆತ್ಮೀಯ ಶುಭಾಶಯಗಳು ಎಂಬುದಾಗಿ ತಿಳಿಸಿದ್ದಾರೆ. https://twitter.com/CMahadevappa/status/1845727827523465429 https://kannadanewsnow.com/kannada/minister-laxmi-hebbalkar-clarifies-that-money-will-be-credited-to-the-accounts-of-grihalakshmi-beneficiaries-for-one-month/ https://kannadanewsnow.com/kannada/breaking-atishi-meets-pm-modi-for-the-first-time-after-taking-over-as-delhi-cm/
ಬೆಂಗಳೂರು: ಕೆಐಎಡಿಬಿ ಭೂ ಹಗರಣದಲ್ಲಿ ಸೈಟನ್ನು ಪ್ರಿಯಾಂಕ್ ಖರ್ಗೆ ಹಿಂದಿರುಗಿರಿಸೋದು ನ್ಯಾಯಕ್ಕೆ ಸಿಕ್ಕ ಮತ್ತೊಂದು ಗೆಲುವಾಗಿದೆ. ಪ್ರಿಯಾಂಕ್ ಖರ್ಗೆ ಅವರೇ ನಿಮ್ಮ ರಾಜೀನಾಮೆ ಯಾವಾಗ ಎಂಬುದಾಗಿ ವಿಧಾನ ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಆಗ್ರಹಿಸಿದ್ದಾರೆ. ಇಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಪ್ರಿಯಾಂಕ್ ಖರ್ಗೆ ಅವರು ಕೆಐಎಡಿಬಿ ಭೂ ಹಗರಣದಲ್ಲಿ ಸೈಟುಗಳನ್ನು ಸರ್ಕಾರಕ್ಕೆ ಹಿಂದಿರುಗಿಸಿರುವುದು, ಸಿದ್ಧರಾಮಯ್ಯ ಅವರ ಮುಡಾ ಹಗರಣದ ನಂತ್ರ ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರದ ಮತ್ತೊಂದು ಘಟನೆಯಾಗಿದೆ. ಇದು ನ್ಯಾಯಕ್ಕೆ ಸಿಕ್ಕ ಮತ್ತೊಂದು ಗೆಲುವು ಎಂದು ಪರಿಗಣಿಸಲಾಗಿದ್ದು, ಕಾಂಗ್ರೆಸ್ ಸರ್ಕಾರದ ಹಗರಣಗಳ ವಿರುದ್ಧ ನಮ್ಮ ಹೋರಾಟ ಸಫಲವಾಗಿದೆ ಎಂದಿದ್ದಾರೆ. ಒಂದು ಕಡೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಮುಡಾ ಹಗರಣ, ಮತ್ತೊಂದು ಕಡೆಯಲ್ಲಿ ಪ್ರಿಯಾಂಕ್ ಖರ್ಗೆ ಅವರ ಕೆಐಎಡಿಬಿ ಹಗರಣ. ಈ ಎರಡೂ ಪ್ರಕರಣಗಳು ಕಾನೂನಿನ ಮುಂದೆ ತಲಬಾಗಿವೆ ಎಂಬುದಾಗಿ ಅಭಿಪ್ರಾಯ ಪಟ್ಟಿದ್ದಾರೆ. ಪ್ರಿಯಾಂಕ್ ಖರ್ಗೆ ಅವರೇ ನಿಮ್ಮ ರಾಜೀನಾಮೆ ಯಾವಾಗ.? ಎಂ.ಬಿ ಪಾಟೀಲ್ ಅವರೇ ಇದನ್ನು ಬೆಳಕಿಗೆ ತಂದ ನನ್ನನ್ನು…
ಮುಂಬೈ: ಎನ್ಸಿಪಿ ಮುಖಂಡ ಮತ್ತು ಮಹಾರಾಷ್ಟ್ರದ ಮಾಜಿ ಸಚಿವ ಬಾಬಾ ಸಿದ್ದಿಕಿ ಅವರು ಶನಿವಾರ ರಾತ್ರಿ ಮುಂಬೈನ ಬಾಂದ್ರಾ ಪೂರ್ವ ಪ್ರದೇಶದಲ್ಲಿ ಮೂವರಿಂದ ಗುಂಡು ಹಾರಿಸಲ್ಪಟ್ಟ ನಂತರ ಆಸ್ಪತ್ರೆಯಲ್ಲಿ ನಿಧನರಾದರು. ಈ ಸಂಬಂಧ ಈಗಾಗಲೇ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು. ಇದೀಗ ಮೂರನೇ ಆರೋಪಿಯನ್ನು ಬಂಧಿಸಿರುವುದಾಗಿ ತಿಳಿದು ಬಂದಿದೆ. ಬಾಬಾ ಸಿದ್ದೀಕ್ ಕೊಲೆ ಪ್ರಕರಣದಲ್ಲಿ ಶುಭಂ ಲೋಂಕರ್ ಅವರ ಸಹೋದರ ಪ್ರವೀಣ್ ಲೋಂಕರ್ (28) ಅವರನ್ನು ಪೊಲೀಸರು ಬಂಧಿಸಿದ್ದಾರೆ. ಶುಭಂ ಲೋಂಕರ್ ಅವರೊಂದಿಗೆ ಧರ್ಮರಾಜ್ ಕಶ್ಯಪ್ ಮತ್ತು ಶಿವಕುಮಾರ್ ಗೌತಮ್ ಅವರನ್ನು ಸಂಚಿನಲ್ಲಿ ಸೇರಿಸಿದ ಪಿತೂರಿಗಾರರಲ್ಲಿ ಈತನೂ ಒಬ್ಬ. ಹೆಚ್ಚಿನ ತನಿಖೆ ನಡೆಯುತ್ತಿದೆ ಎಂಬುದಾಗಿ ಮುಂಬೈ ಪೊಲೀಸರು ತಿಳಿಸಿದ್ದಾರೆ. ಬಾಬಾ ಸಿದ್ದೀಕ್ ಯಾರು? ಬಾಬಾ ಸಿದ್ದಿಕಿ ಹದಿಹರೆಯದವರಾಗಿದ್ದಾಗ ಕಾಂಗ್ರೆಸ್ ಪಕ್ಷಕ್ಕೆ ಸೇರಿದರು ಮತ್ತು ಮುಂಬೈನ ಬಾಂದ್ರಾ ಪಶ್ಚಿಮ ಕ್ಷೇತ್ರದಿಂದ ಮೂರು ಬಾರಿ ಶಾಸಕರಾಗಿ ಸೇವೆ ಸಲ್ಲಿಸಿದರು. ಪಕ್ಷದೊಂದಿಗೆ 48 ವರ್ಷಗಳ ನಂತರ, ಅವರು ಕಾಂಗ್ರೆಸ್ ತೊರೆದು ಫೆಬ್ರವರಿ 2023 ರಲ್ಲಿ ಅಜಿತ್…