Subscribe to Updates
Get the latest creative news from FooBar about art, design and business.
Author: kannadanewsnow09
ಶಿವಮೊಗ್ಗ : ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯು 2024-25ನೇ ಶೈಕ್ಷಣಿಕ ಸಾಲಿಗೆ ಡಿಪ್ಲೋಮಾ ಕಾಲೇಜುಗಳಲ್ಲಿ ಅತಿಥಿ ಉಪನ್ಯಾಸಕರನ್ನು ಆನ್ಲೈನ್ ಕೌನ್ಸಲಿಂಗ್ ಮುಖಾಂತರ ಆಯ್ಕೆ ಮಾಡಿಕೊಳ್ಳಲಾಗುತ್ತಿದ್ದು, ಆಸಕ್ತಿಯುಳ್ಳ ಅಭ್ಯರ್ಥಿಗಳು ಸೆ.6ರೊಳಗಾಗಿ ಅರ್ಜಿ ಸಲ್ಲಿಸುವಂತೆ ಸರ್ಕಾರಿ ಮಹಿಳಾ ವಸತಿ ಪಾಲಿಟೆಕ್ನಿಕ್ ಕಾಲೇಜಿನ ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ಹೆಚ್ಚಿನ ಮಾಹಿತಿಗಾಗಿ ಸರ್ಕಾರಿ ಮಹಿಳಾ ವಸತಿ ಪಾಲಿಟೆಕ್ನಿಕ್ ಕಾಲೇಜಿನ ಪ್ರಾಚಾರ್ಯರನ್ನು ದೂ.ಸಂ.: 08182-950365/ 950366 ಗಳನ್ನು ಸಂಪರ್ಕಿಸುವುದು. https://kannadanewsnow.com/kannada/hc-arrested-for-trying-to-sell-stolen-gold-jewellery/ https://kannadanewsnow.com/kannada/ramesh-babu-writes-to-cm-seeking-sit-probe-into-irregularities-in-distribution-of-sarees-under-bhagyalakshmi-scheme/ https://kannadanewsnow.com/kannada/keralas-hema-committee-to-form-model-committee-actors-and-actresses-meet-cm-siddaramaiah/
ಮೈಸೂರು: ಕಳ್ಳರು ಮನೆಗಳ್ಳತನ ಮಾಡಿ, ಕದ್ದಿದ್ದಂತ ಚಿನ್ನಾಭರಣದಲ್ಲಿ ಪಾಲು ಪಡೆದಿದ್ದಂತ ಹೆಡ್ ಕಾನ್ಸ್ ಸ್ಟೇಬಲ್ ಒಬ್ಬರು, ಮಾರಾಟ ಮಾಡಲು ಯತ್ನಿಸಿ ಪೊಲೀಸರಿಗೆ ಸಿಕ್ಕಿಬಿದ್ದು, ಬಂಧನಕ್ಕೆ ಒಳಗಾಗಿರುವಂತ ಘಟನೆ ಮೈಸೂರಿನ ಮಂಡಿ ಠಾಣೆಯಲ್ಲಿ ನಡೆದಿದೆ. ಮೈಸೂರಿನ ಮಂಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ವಿವಿಧ ಮನೆಗಳ್ಳತನ ಪ್ರಕರಣಗಳು ನಡೆದಿದ್ದವು. ಈ ಕಳ್ಳತನ ಪ್ರಕರಣದಲ್ಲಿ ಕಳ್ಳರಾದಂತ ನಜರುಲ್ಲಾ ಬಾಬು, ಆಲಿ ಎಂಬುವರು ಭಾಗಿಯಾಗಿದ್ದಂತ ಮಾಹಿತಿ ಪೊಲೀಸರಿಗೆ ಸಿಕ್ಕಿತ್ತು. ಅವರನ್ನು ಪೊಲೀಸರು ಬಂಧಿಸಿದ್ದರು. ಪೊಲೀಸರು ಬಂಧಿಸಿದ್ದಂತ ಮನೆಗಳ್ಳರಾದಂತ ನಜರುಲ್ಲಾ ಬಾಬು ಹಾಗೂ ಆಲಿ ತಾವು ಕದ್ದಿದ್ದಂತ 400 ಗ್ರಾಂ ಚಿನ್ನಾಭರಣದಲ್ಲಿ 300 ಗ್ರಾಂ ಅನ್ನು ಅಶೋಕಪುರಂ ಠಾಣೆಯ ಹೆಡ್ ಕಾನ್ ಸ್ಟೇಬಲ್ ರಾಜು ಎಂಬುವರಿಗೆ ಕೊಟ್ಟಿರುವುದಾಗಿ ಮಾಹಿತಿ ನೀಡಿದ್ದರು. ಈ ಮಾಹಿತಿ ಆಧರಿಸಿ ಅಶೋಕಪುರಂ ಹೆಡ್ ಕಾನ್ ಸ್ಟೇಬಲ್ ರಾಜು ಅವರ ಮೇಲೆ ಮಂಡಿ ಠಾಣೆಯ ಪೊಲೀಸರು ಕಣ್ಣಿಟ್ಟಿದ್ದರು. ಇಂದು ಮನೆಗಳ್ಳರಿಂದ ಪಡೆದಿದ್ದಂತ 100 ಗ್ರಾಂ ಚಿನ್ನಾಭರಣ ಮಾರಾಟಕ್ಕೆ ಯತ್ನಿಸಿದಂತ ವೇಳೆಯಲ್ಲಿ ಹೆಡ್ ಕಾನ್ ಸ್ಟೇಬಲ್ ರಾಜುನನ್ನು…
ಬೆಂಗಳೂರು: ಉತ್ತಮ ಶಿಕ್ಷಕರ ಆಯ್ಕೆ ವಿಚಾರದಲ್ಲಿ ಸರಕಾರಕ್ಕೆ ದೂರು ಕೊಟ್ಟದ್ದು ಯಾರು? ಎಸ್ಡಿಪಿಐ ನವರು ದೂರು ಕೊಟ್ಟಿದ್ದಾರೆ. ಎಸ್ಡಿಪಿಐ ಕೇಳಿ ಈ ಸರಕಾರ ನಡೆಯುತ್ತದೆಯೇ ಎಂದು ವಿಧಾನ ಪರಿಷತ್ತಿನ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಪ್ರಶ್ನಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು ಪ್ರಶ್ನೆಗೆ ಉತ್ತರಿಸಿದರು. ಯಾರನ್ನೋ ಓಲೈಕೆ ಮಾಡುವ ಕಾರಣಕ್ಕೆ ಇವತ್ತು ಪ್ರಶಸ್ತಿ ತಡೆಹಿಡಿಯುವ ಕ್ರಮ ಕೈಗೊಂಡಿದ್ದು ಸರಿಯಲ್ಲ. ಶಾಲೆಗಳು ಪವಿತ್ರ ಸ್ಥಳಗಳು. ಮಕ್ಕಳ ಮನಸ್ಸಿನಲ್ಲಿ ಇಂಥ ಕುಚೋದ್ಯತನ ಹುಟ್ಟುಹಾಕುವ ಕೆಲಸ ಮಾಡಬಾರದು ಎಂದು ತಿಳಿಸಿದರು. ಹನುಮಾನ್ ವಿಚಾರದಲ್ಲೂ ಎಸ್ಡಿಪಿಐ ದೂರು ನೀಡಿತ್ತು. ನೀವು ಆದೇಶ ಮಾಡಿಬಿಟ್ಟಿರಿ. ಆದೇಶ ಮಾಡಲು ನಿಮಗೆ ಅಧಿಕಾರ ಕೊಟ್ಟಿದ್ದು ಯಾರು ಎಂದು ಕೇಳಿದರು. ಒಬ್ಬ ತಹಶೀಲ್ದಾರರಿಗೆ ಅದನ್ನು ಮಾಡಲು ಅಧಿಕಾರ ಇದೆಯೇ ಎಂದು ಪ್ರಶ್ನೆ ಮುಂದಿಟ್ಟರು. ಮತ್ತೆ ಆದೇಶ ವಾಪಸ್ ಪಡೆದಿರಿ. ಯಾಕೆ ಎಂದರಲ್ಲದೆ, ಅಲ್ಲಿ ಶಾಂತಿ ಕದಡುವ ವಾತಾವರಣ ಸೃಷ್ಟಿ ಆಗುತ್ತಿತ್ತು.…
ಬೆಂಗಳೂರು: ಅಶ್ವಿನಿ ಪುನೀತ್ ರಾಜ್ ಕುಮಾರ್ ಬಗ್ಗೆ ಡೀಫ್ ಪೇಕ್ ವೀಡಿಯೋ, ಪೋಟೋಗಳನ್ನು ಎಡಿಟ್ ಮಾಡಿ ಅವಹೇಳನಕಾರಿ ಟ್ರೋಲ್ ಮಾಡಿದವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಅವರ ಅಭಿಮಾನಿಗಳ ಸಂಘದಿಂದ ಫಿಲ್ಮಂ ಚೇಂಬರ್ ಅಧ್ಯಕ್ಷರಿಗೆ ದೂರು ನೀಡಲಾಗಿದೆ. ಇಂದು ಫಿಲ್ಮಂ ಚೇಂಬರ್ ಅಧ್ಯಕ್ಷ ಎನ್ ಎಂ ಸುರೇಶ್ ಅವರನ್ನು ಭೇಟಿಯಾಗಿರುವಂತ ರಾಜವಂಶ ಅಭಿಮಾನಿಗಳ ಸಂಘದ ಅಧ್ಯಕ್ಷರು, ಸದಸ್ಯರು ಕಿಡಿಗೇಡಿಗಳು ನಕಲಿ ಖಾತೆಯ ಮೂಲಕ ಅಶ್ವಿನಿ ಪುನೀತ್ ರಾಜ್ ಕುಮಾರ್ ಫೇಕ್ ವೀಡಿಯೋ ಹರಿ ಬಿಟ್ಟಿದ್ದಾರೆ. ಇವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಮನವಿ ಮಾಡಲಾಗಿದೆ. ನಕಲಿ ಫೇಸ್ ಬುಕ್ ಖಾತೆಯಿಂದ ವೀಡಿಯೋ ವೈರಲ್ ಆಗಿದೆ. ರಾಜ್ ಕುಟುಂಬ, ನಟ ನಟಿಯರ ಪೋಟೋ, ವೀಡಿಯೋ ವೈರಲ್ ಮಾಡಲಾಗುತ್ತಿದೆ. ಕೂಡಲೇ ಕ್ರಮವಹಿಸಿ ಕಿಡಿಗೇಡಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಮನವಿ ಪತ್ರದಲ್ಲಿ ಆಗ್ರಹಿಸಲಾಗಿದೆ. ಇದೇ ಸಂದರ್ಭದಲ್ಲಿ ಸೋಷಿಯಲ್ ಮೀಡಿಯಾಗಳಿಗೆ ಆಧಾರ್ ಲಿಂಕ್ ಕಡ್ಡಾಯ ಮಾಡುವಂತೆಯೂ ಕೇಂದ್ರ ಸರ್ಕಾರಕ್ಕೆ ರಾಜವಂಶ ಅಭಿಮಾನಿಗಳ ಸಂಘದಿಂದ ಒತ್ತಾಯಿಸಲಾಯಿತು. https://kannadanewsnow.com/kannada/two-students-killed-in-road-accident-between-school-and-government-bus-in-raichur/ https://kannadanewsnow.com/kannada/ramesh-babu-writes-to-cm-seeking-sit-probe-into-irregularities-in-distribution-of-sarees-under-bhagyalakshmi-scheme/ https://kannadanewsnow.com/kannada/keralas-hema-committee-to-form-model-committee-actors-and-actresses-meet-cm-siddaramaiah/
ಬೆಂಗಳೂರು: ರಾಜ್ಯ ಸರ್ಕಾರದ ಭಾಗ್ಯಲಕ್ಷ್ಮಿ ಯೋಜನೆಯಲ್ಲಿ 2010-11ನೇ ಸಾಲಿನಲ್ಲಿ ಸೀರೆ ವಿತರಣೆ ಸಂಬಂಧ ನಡೆದಿರುವ ಸುಮಾರು 23ಕೋಟಿ ರೂಪಾಯಿ ಅವ್ಯವಹಾರವನ್ನು SIT ತನಿಖೆಗೆ ಕೋರಿ ಮಾಜಿ ವಿಧಾನ ಪರಿಷತ್ ಸದಸ್ಯ ಹಾಗೂ ಕೆಪಿಸಿಸಿ ಮಾಧ್ಯಮ ಮತ್ತು ಸಂವಹನ ವಿಭಾಗದ ಅಧ್ಯಕ್ಷ ರಮೇಶ್ ಬಾಬು ಪತ್ರ ಬರೆದು ಆಗ್ರಹಿಸಿದ್ದಾರೆ. ಈ ಕುರಿತಂತೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಪತ್ರ ಬರೆದಿರುವಂತ ಅವರು, ಕರ್ನಾಟಕದಲ್ಲಿ ಸರ್ಕಾರಿ ಆದೇಶ ಸಂಖ್ಯೆ – ಮಮಇ- 99 ಮಮಆ 2006ರ ಅನ್ವಯ ಭಾಗ್ಯಲಕ್ಷ್ಮಿ ಯೋಜನೆಯನ್ನು ಜಾರಿಗೊಳಿಸಲಾಗಿತ್ತು. ಮಹಿಳಾ ಮತ್ತು ಮಕ್ಕಳ ಕಲ್ಯಾಣ ವತಿಯಿಂದ 2011ನೇ ಸಾಲಿನಲ್ಲಿ ಭಾಗ್ಯಲಕ್ಷ್ಮಿ ಯೋಜನೆಯ ಫಲಾನುಭವಿಗಳಿಗೆ ಅಂದಿನ ಬಿಜೆಪಿ ಸರ್ಕಾರ ಸೀರೆ ವಿತರಿಸುವ ಕಾರ್ಯಕ್ರಮವನ್ನು ಜಾರಿಗೊಳಿಸಿ, ಸುಮಾರು 10,68,996 ಸೀರೆಗಳನ್ನು ಸರ್ಕಾರದಿಂದ ಕೊಳ್ಳಲಾಗಿರುತ್ತದೆ. ಕರ್ನಾಟಕದ ನೇಕಾರರನ್ನು ಹಾಗೂ ಸೀರೆ ಉತ್ಪಾದನೆಯ ಸಹಕಾರ ಸಂಘಗಳನ್ನು ನಿರ್ಲಕ್ಷ್ಯ ಮಾಡಿ ಗುಜರಾತಿನ ಸೂರತ್ ನಿಂದ ಮಾರುಕಟ್ಟೆ ದರಕ್ಕಿಂತ ಹೆಚ್ಚಿನ ದರವನ್ನು ನೀಡಿ ಸೀರೆಗಳನ್ನು ಕೊಳ್ಳಲಾಗಿರುತ್ತದೆ. ಈ ವಹಿವಾಟಿನಲ್ಲಿ ಅಂದಿನ ಬಿಜೆಪಿಯ …
ರಾಯಚೂರು: ಜಿಲ್ಲೆಯ ಶಾಲಾ ಬಸ್ ಹಾಗೂ ಸರ್ಕಾರಿ ಬಸ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಇಬ್ಬರು ವಿದ್ಯಾರ್ಥಿಗಳು ಧಾರುಣವಾಗಿ ಸಾವನ್ನಪ್ಪಿರುವಂತ ಘಟನೆ ನಡೆದಿದೆ. ಅಲ್ಲದೇ 40ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವಂತ ಘಟನೆ ನಡೆದಿದೆ. ರಾಯಚೂರು ಜಿಲ್ಲೆಯ ಮಾನ್ವಿ ತಾಲ್ಲೂಕಿನ ಕಪಗಲ್ ಬಳಿಯಲ್ಲಿ ಶಾಲಾ ಹಾಗೂ ಸರ್ಕಾರಿ ಬಸ್ ನಡುವೆ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ ವಿದ್ಯಾರ್ಥಿಗಳಾದಂತ ಸಮರ್ಥ(7) ಹಾಗೂ ಶ್ರೀಕಾಂತ್(12) ಎಂಬುವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಈ ಅಪಘಾತದಲ್ಲಿ 40ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದು ಅವರನ್ನು ರಿಮ್ಸ್ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಶಾಲಾ ಬಸ್ಸಿನಲ್ಲಿದ್ದಂತ 17ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಂಭೀರ ಗಾಯವಾಗಿದ್ದರೇ, ನಾಲ್ವರ ಕಾಲು ತುಂಡಾಗಿದೆ. 23 ಜನರಿಗೆ ಸಣ್ಣಪುಟ್ಟ ಗಾಯವಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸರ್ಕಾರಿ ಬಸ್ಸಿನಲ್ಲಿದ್ದಂತ 17 ಜನರಿಗೆ ಗಾಯವಾಗಿದೆ. ಕೆ ಎಸ್ ಆರ್ ಟಿಸಿಯಿಂದ ಮೃತ ಇಬ್ಬರು ವಿದ್ಯಾರ್ಥಿಗಳ ಕುಟುಂಬಕ್ಕೆ ತಲಾ 5 ಲಕ್ಷ ಪರಿಹಾರ, ಗಾಯಗೊಂಡಿರುವಂತವರಿಗೆ 3 ಲಕ್ಷ ಪರಿಹಾರ ನೀಡುವುದಾಗಿ ತಿಳಿಸಿದೆ. ಈ ಘಟನೆ ಶಾಲಾ ಬಸ್…
ಬೆಂಗಳೂರು: ನಾನು ಗುಣಮುಖವಾಗುವ ಹಾದಿಯಲ್ಲಿ ಇದ್ದೇನೆ. ತಮ್ಮೆಲ್ಲರ ಆಶೀರ್ವಾದ ಹಾರೈಕೆ ಅಗತ್ಯವಿದೆ ಎಂಬುದಾಗಿ ರಾಜಾಜಿನಗರ ಕ್ಷೇತ್ರದ ಬಿಜೆಪಿ ಶಾಸಕ ಎಸ್.ಸುರೇಶ್ ಕುಮಾರ್ ಹೇಳಿದ್ದಾರೆ. ಈ ಕುರಿತಂತೆ ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಮಾಡಿ ಮಾಹಿತಿ ಹಂಚಿಕೊಂಡಿರುವಂತ ಅವರು, ನನ್ನ ಎಲ್ಲಾ ಗೆಳೆಯರಿಗೆ, ಹಿತೈಷಿಗಳಿಗೆ ನಿಮ್ಮ ಸುರೇಶ್ ಕುಮಾರ್ ಮಾಡುವ ಹೃದಯಪೂರ್ವಕ ನಮಸ್ಕಾರಗಳು. ನಿನ್ನೆ ರಾತ್ರಿ ಯಿಂದ ನನ್ನ ಆರೋಗ್ಯದ ಕುರಿತು ಮಾಧ್ಯಮಗಳಲ್ಲಿ ಬಂದ ಕೆಲವು ಸುದ್ಧಿಯ ಹಿನ್ನೆಲೆಯಲ್ಲಿ ಬಹಳಷ್ಟು ಜನ ತಮ್ಮ ಆತಂಕ ವ್ಯಕ್ತಪಡಿಸಿ ನನ್ನ ಆರೋಗ್ಯ ಸುಧಾರಿಸಲೆಂದು ಹಾರೈಸಿದ್ದಾರೆ. ಅವರೆಲ್ಲರಿಗೂ ನನ್ನ ಕೃತಜ್ಞತೆಗಳು. ನಿಜ. ನನ್ನ ಆರೋಗ್ಯ ಕಳೆದ ಆಗಸ್ಟ್.20 ರಿಂದ ತೀವ್ರ ಸಮಸ್ಯೆಗೆ ಒಳಗಾಗಿತ್ತು. ಆಗಸ್ಟ್.15 ರವರೆಗೆ ನಮ್ಮ ಕ್ಷೇತ್ರದಲ್ಲಿ ಸುಮಾರು 3 ಕಡೆ ಜನಸ್ಪಂದನ, ಆಗಸ್ಟ್ 14 ರಂದು ಮಧ್ಯರಾತ್ರಿ ರಾಷ್ಟ್ರಧ್ವಜ ಹಾರಿಸುವ ಭರ್ಜರಿ ಕಾರ್ಯಕ್ರಮ, ನಮ್ಮ ಕ್ಷೇತ್ರದ ಪ್ರೌಢಶಾಲಾ ಮಕ್ಕಳಿಗಾಗಿ ಆಯೋಜಿಸಿದ ಅತ್ಯಂತ ಯಶಸ್ವಿ ಆಶು ಭಾಷಣ ಸ್ಪರ್ಧೆ, ಆಗಸ್ಟ್ 15 ರಂದು ಬೆಳಗ್ಗೆ ಯಿಂದ ಸಂಜೆಯವರೆಗೂ ಸ್ವಾತಂತ್ರ್ಯ ದಿನಾಚರಣೆಯ…
ಮಂಡ್ಯ: ಜಿಲ್ಲೆಯಲ್ಲಿ ರೈತರೊಬ್ಬರಿಂದ 10,000 ಲಂಚವನ್ನು ಪಡೆಯುತ್ತಿದ್ದಾಗ ತಹಶೀಲ್ದಾರ್ ಕಚೇರಿಯ ಎಫ್ ಡಿಎ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಮಂಡ್ಯ ತಹಶೀಲ್ದಾರ್ ಕಚೇರಿಯ ಲಂಚಾವತಾರ ಬಯಲಾಗಿದೆ. ಮರಕಾಡುದೊಡ್ಡಿ ಗ್ರಾಮದ ರೈತ ಮೋಹನ್ ಎಂಬುವರು ಭೂಮಿ ಶಾಖೆಯ ಎಫ್ ಡಿಎ ತಿಪ್ಪೇಸ್ವಾಮಿ ಲಂಚಕ್ಕೆ ಬೇಡಿಕೆ ಇಟ್ಟಿದ್ದಾಗೆ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು. ಇಂದು ಮಂಡ್ಯ ತಹಶೀಲ್ದಾರ್ ಕಚೇರಿಯ ಮೇಲೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದು, ಭೂಮಿ ಶಾಖೆಯ ಎಫ್ ಡಿಎ ತಿಪ್ಪೇಸ್ವಾಮಿಯನ್ನು ಲಂಚ ಪಡೆಯುತ್ತಿದ್ದಾಗ ರೆಡ್ ಹ್ಯಾಂಡ್ ಆಗಿಯೇ ಬಲೆಗೆ ಕೆಡವಿದ್ದಾರೆ. ಲೋಕಾಯುಕ್ತ ಸಿಪಿಐ ಬ್ಯಾಟರಾಯನಗೌಡ ನೇತೃತ್ವದಲ್ಲಿ ಈ ದಾಳಿಯನ್ನು ನಡೆಸಲಾಗಿದೆ. ಹೆಚ್ಚಿನ ವಿಚಾರಣೆಗಾಗಿ ಮಂಡ್ಯ ತಹಶೀಲ್ದಾರ್ ಕಚೇರಿಯ ಭೂಮಿ ಶಾಖೆಯ ಎಫ್ ಡಿಎ ತಿಪ್ಪೇಸ್ವಾಮಿ ವಶಕ್ಕೆ ಪಡೆದು, ವಿಚಾರಣೆ ನಡೆಸುತ್ತಿದ್ದಾರೆ. ವರದಿ: ಗಿರೀಶ್ ರಾಜ್, ಮಂಡ್ಯ https://kannadanewsnow.com/kannada/shocking-incident-in-uttara-kannada-miscreants-throw-one-day-old-baby-in-bushes/ https://kannadanewsnow.com/kannada/special-programme-at-awareness-centres-in-september-priyank-kharge/ https://kannadanewsnow.com/kannada/bbreaking-wrestler-vinesh-phogat-bajrang-punia-join-congress-joining-congress/
ಬೆಂಗಳೂರು: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ ಮಕ್ಕಳು ಓದುವುದರಲ್ಲಿ ಮತ್ತು ಕಲಿಕೆಯಲ್ಲಿ ತೊಡಗಿಸಿಕೊಳ್ಳಲು ಆರಂಭಿಸಲಾಗಿರುವ ಓದುವ ಬೆಳಕು ಕಾರ್ಯಕ್ರಮದಡಿ ಸೆಪ್ಟೆಂಬರ್ ತಿಂಗಳಿನಲ್ಲಿ ಶಿಕ್ಷಕರ ದಿನ, ಅಜ್ಜಿ ತಾತಂದಿರ ದಿನ, ಪ್ರಜಾಪ್ರಭುತ್ವ ದಿನ ಸೇರಿದಂತೆ ಹಲವು ವೈವಿಧ್ಯಮಯ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ಗ್ರಾಮೀಣ ಮಕ್ಕಳನ್ನು ವ್ಯವಸ್ಥಿತವಾಗಿ ಕಲಿಕಾ ಕ್ಷೇತ್ರಕ್ಕೆ ಮರಳಿ ತರುವ ಹಾಗೂ ನಿರಂತರತೆಯನ್ನು ಕಾಪಾಡುವ ಗುರಿಯನ್ನು ಹೊಂದಲಾಗಿದ್ದು, ಗ್ರಾಮ ಪಂಚಾಯತಿಗಳ ಅರಿವು ಕೇಂದ್ರಗಳನ್ನು ಗ್ರಾಮೀಣ ಜ್ಞಾನ ಕೇಂದ್ರಗಳನ್ನಾಗಿಸಲು ಕ್ರಮ ಕೈಗೊಳ್ಳಲಾಗಿದೆಯಲ್ಲದೆ ಓದುವ ಬೆಳಕು ಕಾರ್ಯಕ್ರಮದಡಿ ಅರಿವು ಕೇಂದ್ರಗಳಲ್ಲಿ ಹಲವಾರು ಅಭಿಯಾನಗಳ ಮೂಲಕ ಪ್ರತಿ ತಿಂಗಳು ಉಪಯುಕ್ತ ಚಟುವಟಿಕೆಯನ್ನು ಆಯೋಜಿಸಲಾಗುತ್ತಿದೆ ಎಂದೂ ಸಚಿವರು ಹೇಳಿದ್ದಾರೆ. ತಮ್ಮ ಜೀವನದಲ್ಲಿ ಸ್ಫೂರ್ತಿ ತುಂಬಿದ ವಿವಿಧ ಶಿಕ್ಷಕರ ಕುರಿತು ಪ್ರಬಂಧ ಬರೆಯುವುದು ಸೇರಿದಂತೆ ಸೆ.5ರಂದು ಶಿಕ್ಷಕರ ದಿನದ ಅಂಗವಾಗಿ ಮಕ್ಕಳಿಗೆ ವಿವಿಧ ಕಾರ್ಯಕ್ರಮಗಳನ್ನು ನಡೆಸಲಾಗುತ್ತಿದೆ, ಸೆಪ್ಟೆಂಬರ್ 8ರಂದು ಅಂತರ ರಾಷ್ಟ್ರೀಯ ಅಜ್ಜಿ-ತಾತಂದಿರ…
ಉತ್ತರ ಕನ್ನಡ: ಜಿಲ್ಲೆಯಲ್ಲಿ ಮನಕಲಕುವ ಘಟನೆಯೊಂದು ವರದಿಯಾಗಿದೆ. ಟಾಯ್ಲೆಟ್ ಬಳಿಯಲ್ಲೇ ಒಂದು ದಿನದ ನವಜಾತ ಶಿಶುವನ್ನು ಪೊದೆಯಲ್ಲಿ ಬಿಸಾಕಿ ಹೋಗಿರುವಂತ ಘಟನೆ ನಡೆದಿದೆ. ಉತ್ತರ ಕನ್ನಡ ಜಿಲ್ಲೆಯ ಕಾರವಾರದ ವಿಜಯನಗರ ಜೋಪಡಿ ಬಳಿಯಲ್ಲಿರುವಂತ ಟಾಯ್ಲೆಟ್ ಬಳಿಯಲ್ಲಿ ಒಂದು ದಿನದ ನವಜಾತ ಶಿಶುವನ್ನು ಬಿಸಾಕಿ ಹೋಗಿರುವುದು ಪತ್ತೆಯಾಗಿದೆ. ಕರುಳು ಬಳ್ಳಿಯನ್ನೂ ಕತ್ತರಿಸಿದೇ ಹೆಣ್ಣು ಶಿಶುವನ್ನು ಕಾರವಾರದ ವಿಜಯನಗರ ಟಾಯ್ಲೆಟ್ ಬಳಿಯ ಪೊದೆಯಲ್ಲಿ ಬಿಸಾಕಿ ದುಷ್ಕರ್ಮಿಗಳು ಹೋಗಿರುವುದಾಗಿ ತಿಳಿದು ಬಂದಿದೆ. ವಿಷಯ ತಿಳಿದು ಸ್ಥಳಕ್ಕೆ ಆರೋಗ್ಯ ಇಲಾಖೆಯ ಅಧಿಕಾರಿಗಳು, ಪೊಲೀಸರು ಭೇಟಿ ನೀಡಿ, ಪರಿಶೀಲಿಸಿ, ಪ್ರಕರಣ ದಾಖಲಿಸಿಕೊಂಡು ದುಷ್ಕರ್ಮಿಗಳ ಪತ್ತೆಗೆ ಬಲೆ ಬೀಸಿದ್ದಾರೆ. https://kannadanewsnow.com/kannada/good-news-for-those-going-home-for-gowri-ganesha-diwali-dussehra-these-special-trains-will-run/ https://kannadanewsnow.com/kannada/bbreaking-wrestler-vinesh-phogat-bajrang-punia-join-congress-joining-congress/ https://kannadanewsnow.com/kannada/big-news-muslim-rule-in-this-country-after-19-years-world-war-baba-vanga-shocking-predictions/