Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ಕೆಸೆಟ್ 2023ರ ಪರೀಕ್ಷೆಯ ನಂತ್ರ, ಅಭ್ಯರ್ಥಿಗಳ ದಾಖಲಾತಿ ಪರಿಶೀಲನೆ ನಡೆಸಲಾಗಿತ್ತು. ಯಾರೆಲ್ಲ ಅಭ್ಯರ್ಥಿಗಳು ಉತ್ತೀರ್ಣರಾದ ಬಳಿಕ, ದಾಖಲಾತಿ ಪರೀಶಿಲನೆ ಹಾಜರಾಗಿದ್ದಾರೋ, ಅವರೆಲ್ಲರಿಗೂ ಪೋಸ್ಟ್ ಮೂಲಕ ಮನೆಗೆ ಪ್ರಮಾಣ ಪತ್ರವನ್ನು ರವಾನಿಸಲಾಗುತ್ತದೆ. ಈ ಬಗ್ಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಲಾಗಿದೆ. ಅದರಲ್ಲಿ ದಿನಾಂಕ:11.07.2024 ರಿಂದ 22.07.2014 ರವರೆಗೆ ಜರುಗಿದ ಸೆಟ್-2023 ದಾಖಲಾತಿ ಪರಿಶೀಲನೆಗೆ ಆನಿವಾರ್ಯ ಕಾರಣಗಳಿಂದ ಹಾಜರಾಗದ ತಾತ್ಕಾಲಿಕ ಪಟ್ಟಿಯಲ್ಲಿ ಅರ್ಹರಾದ ಅಭ್ಯರ್ಥಿಗಳಿಗೆ ದಾಖಲಾತಿ ಪರಿಶೀಲನೆಗಾಗಿ ದಿನಾಂಕ:31.07.2024ರಂದು ಕೊನೆಯ ಅವಕಾಶವನ್ನು ನೀಡಲಾಗಿದೆ ಎಂದಿದೆ. ಮುಂದುವರೆದು, ದಾಖಲಾತಿ ಪರಿಶೀಲನೆ ಸಂಪೂರ್ಣಗೊಂಡು ಪ್ರಮಾಣಪತ್ರ ಪಡೆಯದಿರುವ ಅಭ್ಯರ್ಥಿಗಳು ದಿನಾಂಕ:31.07.2024ರಂದು ಪ್ರಮಾಣ ಪತ್ರ ಪಡೆದುಕೊಳ್ಳಲು ಕೊನೆಯ ಅವಕಾಶವಾಗಿದೆ. ದಾಖಲಾತಿ ಪರಿಶೀಲನೆಯಾಗಿದ್ದು ಪ್ರಮಾಣ ಪತ್ರವನ್ನು ದಿನಾಂಕ:31.07.2024ರಂದು ಖುದ್ದು ಹಾಜರಾಗಿ ಪಡೆಯದಿದ್ದಲ್ಲಿ ಮುಂದಿನ ದಿನಗಳಲ್ಲಿ ಪೋಸ್ಟ್ ಮೂಲಕ ಕಳುಹಿಸಲಾಗುವುದು ಅಂತ ಕೆಇಎ ಕಾರ್ಯನಿರ್ವಾಹ ನಿರ್ದೇಶಕರು ತಿಳಿಸಿದ್ದಾರೆ. https://kannadanewsnow.com/kannada/good-news-for-rural-people-of-the-state-property-measurement-inside-and-outside-the-grama-thana-will-be-allowed/ https://kannadanewsnow.com/kannada/nita-ambani-re-elected-unopposed-as-member-of-international-olympic-committee/
ಬೆಂಗಳೂರು: ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ಹಾಗೂ ಮುಡಾ ಹಗರಣದ ತಪ್ಪಿತಸ್ಥರಿಗೆ ಶಿಕ್ಷೆಯಾಗುವವರೆಗೂ ಅಹೋರಾತ್ರಿ ಧರಣಿ ಮಾಡಲಾಗುವುದು. ದಲಿತರ ಹಣ ವಾಪಸ್ ಬರಬೇಕು, ದಲಿತರಿಗೆ ನ್ಯಾಯ ದೊರೆಯಬೇಕು. ಅಲ್ಲಿಯವರೆಗೂ ಹೋರಾಟ ಮಾಡುತ್ತೇವೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ತಿಳಿಸಿದರು. ಸದನದ ಹೊರಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಲೂಟಿಯಾದ ಹಣ ಮರಳಿ ಸರ್ಕಾರದ ಖಜಾನೆಗೆ ಬರಬೇಕು. ಇದಕ್ಕಾಗಿ ಹಗಲು ರಾತ್ರಿ ಧರಣಿ ಮಾಡಿ ಸಿಎಂ ಸಿದ್ದರಾಮಯ್ಯ ಅವರನ್ನು ಪ್ರಶ್ನೆ ಮಾಡುತ್ತೇವೆ. ರಾತ್ರಿ ಧರಣಿ ಮಾಡುವವರಿಗೆ ಊಟ ಬೇಕಾ ಎಂದು ಸ್ಪೀಕರ್ ಕೇಳಿದ್ದಾರೆ. ಮಾತನಾಡಲು ಅವಕಾಶ ನೀಡದವರ ಊಟ, ದಲಿತರ ಹಣ ಕೊಳ್ಳೆ ಹೊಡೆದವರ ಊಟ ಬೇಡ ಎಂದು ತಿರಸ್ಕಾರ ಮಾಡಿದ್ದೇವೆ. ರಾತ್ರಿ ಪೂರ್ತಿ ವಿಧಾನಸಭೆ ಹಾಗೂ ವಿಧಾನಪರಿಷತ್ ನಲ್ಲಿ ಧರಣಿ ಮಾಡುತ್ತೇವೆ. ನಾಳೆ ಕೂಡ ಧರಣಿ ಮುಂದುವರಿಯಲಿದೆ. ಎರಡೂ ಹಗರಣಗಳಲ್ಲಿ ಭಾಗಿಯಾದ ತಪ್ಪಿತಸ್ಥರಿಗೆ ಶಿಕ್ಷೆಯಾಗುವವರೆಗೂ ಧರಣಿ ಮಾಡಲಾಗುವುದು ಎಂದು ತಿಳಿಸಿದರು. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಎರಡು ದೊಡ್ಡ ಹಗರಣ ನಡೆದಿದೆ. ಮುಡಾ…
ಪ್ಯಾರಿಸ್ : ರಿಲಯನ್ಸ್ ಫೌಂಡೇಷನ್ ಅಧ್ಯಕ್ಷೆಯೂ ಆದಂಥ ನೀತಾ ಅಂಬಾನಿ ಅವರ ಮೇಲೆ ಅಂತಾರಾಷ್ಟ್ರೀಯ ಒಲಿಂಪಿಕ್ ಸಮಿತಿಯು ಮತ್ತೊಮ್ಮೆವಿಶ್ವಾಸವನ್ನು ವ್ಯಕ್ತಪಡಿಸಿದೆ. ಐಒಸಿ ಸದಸ್ಯರಾಗಿ ಅವರು ಅವಿರೋಧವಾಗಿ ಮರು ಆಯ್ಕೆಯಾಗಿದ್ದಾರೆ. ಒಟ್ಟು 93 ಮತದಾರರು ಮತ ಚಲಾಯಿಸಿದ್ದು, ಎಲ್ಲ 93 ಮತಗಳು ನೀತಾ ಅಂಬಾನಿ ಪರವಾಗಿ ಅಂದರೆ ಶೇಕಡಾ ನೂರರಷ್ಟು ಮತಗಳು ಅವರಿಗೆ ಬಂದಿವೆ. ಅಂದಹಾಗೆ 2016ನೇ ಇಸವಿಯಲ್ಲಿ ರಿಯೊ ಡಿ ಜನೈರೊ ಒಲಿಂಪಿಕ್ಸ್ನಲ್ಲಿ ಮೊದಲ ಬಾರಿಗೆ ನೀತಾ ಅಂಬಾನಿ ಐಒಸಿ ಸದಸ್ಯೆಯಾಗಿ ಆಯ್ಕೆಯಾದರು. ನೀತಾ ಅವರು ರಿಲಯನ್ಸ್ ಫೌಂಡೇಷನ್ನ ಸಂಸ್ಥಾಪಕರು ಸಹ ಆಗಿದ್ದಾರೆ. ತಮ್ಮ ಮರು ಆಯ್ಕೆ ಬಗ್ಗೆ ಮಾತನಾಡಿದ ನೀತಾ ಅಂಬಾನಿ, “ಅಂತಾರಾಷ್ಟ್ರೀಯ ಒಲಿಂಪಿಕ್ ಸಮಿತಿಯ ಸದಸ್ಯೆ ಆಗಿ ಮತ್ತೆ ನನ್ನನ್ನು ಚುನಾಯಿಸಿರುವುದಕ್ಕೆ ಅಪಾರವಾದ ಗೌರವವಿದೆ. ನನ್ನ ಮೇಲಿನ ನಂಬಿಕೆ ಮತ್ತು ವಿಶ್ವಾಸಕ್ಕಾಗಿ ಐಒಸಿ ಅಧ್ಯಕ್ಷರಾದ ಬ್ಯಾಚ್ ಮತ್ತು ನನ್ನ ಎಲ್ಲ ಸಹೋದ್ಯೋಗಿಗಳಿಗೆ ಧನ್ಯವಾದ ಹೇಳಲು ಬಯಸುತ್ತೇನೆ. ಈ ಮರುಚುನಾವಣೆಯು ನನಗೆ ವೈಯಕ್ತಿಕ ಮೈಲುಗಲ್ಲು ಮಾತ್ರವಲ್ಲ, ಜಾಗತಿಕ ಕ್ರೀಡಾ ಕ್ಷೇತ್ರದಲ್ಲಿ…
ಬೆಂಗಳೂರು: ರಾಜ್ಯದ ಎಲ್ಲಾ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳಿಗೆ ಉಚಿತ ವಿದ್ಯುತ್ ಸೌಲಭ್ಯವನ್ನು ಸರ್ಕಾರ ಘೋಷಣೆ ಮಾಡಿತ್ತು. ಈ ಬಗ್ಗೆ ಶಿಕ್ಷಣ ಇಲಾಖೆಯಿಂದ ಮಹತ್ವದ ಆದೇಶವನ್ನು ಹೊರಡಿಸಲಾಗಿದೆ. ಈ ಕುರಿತಂತೆ ಶಿಕ್ಷಣ ಇಲಾಖೆಯ ಆಯುಕ್ತರಿಂದ ಆದೇಶ ಹೊರಡಿಸಲಾಗಿದ್ದು, ರಾಜ್ಯದ ಎಲ್ಲಾ ಸರ್ಕಾರಿ ಶಾಲೆಗಳು ಮತ್ತು ಪದವಿ ಪೂರ್ವ ಕಾಲೇಜುಗಳಲ್ಲಿ ಉಚಿತ ವಿದ್ಯುತ್ ಮತ್ತು ನೀರಿನ ಸೌಲಭ್ಯವನ್ನು ಒದಗಿಸಲು ನಮ್ಮ ಸರ್ಕಾರವು ನಿರ್ಧರಿಸಿದೆ. ಇದರಿಂದ ರಾಜ್ಯದ 46,829 ಸರ್ಕಾರಿ ಶಾಲೆಗಳು ಮತ್ತು 1,234 ಪದವಿ ಪೂರ್ವ ಕಾಲೇಜುಗಳಿಗೆ ಅನುಕೂಲವಾಗಲಿದೆ. ಈ ಉದ್ದೇಶಕ್ಕಾಗಿ ಒಟ್ಟು 25 ಕೋಟಿ ರೂ. ವೆಚ್ಚವಾಗಲಿದೆ ಎಂದಿದ್ದಾರೆ. ಮುಂದುವರೆದು ಶಾಲೆಗಳು ಶಿಕ್ಷಣಕ್ಕೆ ಪ್ರಥಮ ವೇದಿಕೆಯಾಗಿದ್ದು, ರಾಜ್ಯದ ಬಡ, ಮಧ್ಯಮ ವರ್ಗದ ಕುಟುಂಬಗಳ ಮಕ್ಕಳು ವಿದ್ಯಾಭ್ಯಾಸ ಪಡೆಯಲು ಸರ್ಕಾರಿ ಶಾಲೆಗಳು ಪ್ರಮುಖ ಪಾತ್ರವಹಿಸುತ್ತಿದ್ದು, ಸರ್ಕಾರಿ ಶಾಲೆಗಳ ಉನ್ನತೀಕರಣ ಹಾಗೂ ಅವುಗಳ ಸಂರಕ್ಷಣೆ ನಮ್ಮೆಲ್ಲರ ಹೊಣೆಯಾಗಿರುವ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವು “ಗೃಹ ಜ್ಯೋತಿ” ಯೋಜನೆಯಡಿ ವಿದ್ಯುಚ್ಛಕ್ತಿಯನ್ನು ಉಚಿತವಾಗಿ ಒದಗಿಸುತ್ತಿರುವ ರೀತಿಯಲ್ಲಿಯೇ ರಾಜ್ಯದ…
ಅನ್ಯ ದೇವತೆಗಳನ್ನು ಪೂಜಿಸುವುದಕ್ಕಿಂತ ಕುಲದೇವತೆಯನ್ನು ಪೂಜಿಸಿದರೆ ನಮ್ಮ ಬದುಕು ಹಸನಾಗುತ್ತದೆ ಎನ್ನುತ್ತಾರೆ. ಅದಕ್ಕಾಗಿ ಬೇರೆ ದೇವತೆಗಳನ್ನು ಪೂಜಿಸಬಾರದೇ ಎಂದು ಕೇಳಿದರೆ ಹಾಗಲ್ಲ. ವಾಕ್ಯ ಸಿದ್ದಿ, ಮಂತ್ರಸಿದ್ದಿ ಯಂತ್ರ ಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕ್ಕೈಕ ಜೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ 9686268564 ಇಷ್ಟ ಪಟ್ಟವರು ನೀಮ್ಮಂತೇ ಆಗಲು, ಪ್ರೀತಿಯಲ್ಲಿ ಮೋಸ ಹೋಗಿದ್ದರೆ ಮದುವೆ ವಿಳಂಬ, ಸತಿ ಪತಿ ಕಲಹ, ಸಂತಾನ, ಅತ್ತೆ ಸೋಸೆ ಕಲಹ, ಶತ್ರು ಭಾದೆ, ಅನಾರೋಗ್ಯ, ಸಾಲದ ಭಾದೆ, ಮನೆಯಲ್ಲಿ ಅಶಾಂತಿ, ಬೀಜೀನೇಸ್ಸ ನಲ್ಲಿ ನಷ್ಟ , ಕೋರ್ಟ್ ಕೇಸ್, ಎಷ್ಟೇ ಪ್ರಯತ್ನ ಜೀವನದಲ್ಲಿ ಏಳಿಗೆ ಅಭಿವೃದ್ಧಿ ಆಗದೆ ನೋಂದಿದ್ದರೆ ಇನ್ನೂ ನಿಮ್ಮ ಸಮಸ್ಯೆ ಯಾವುದೇ ಇರಲಿ ಎಷ್ಟೇ ಕಠಿಣವಾಗಿರಲಿ ಕೇವಲ 2 ದಿನದಲ್ಲಿ ಪರಿಹಾರ ಶತಃಸಿದ್ದ ವಿದ್ವಾನ್ ವಿದ್ಯಾಧರ್ ತಂತ್ರಿ 9686268564. ಇಂತಹ ಕುಲದೇವರ ಆರಾಧನೆಯಿಂದ ನಾವು ಇತರ ದೇವತೆಗಳ ಕೃಪೆಯನ್ನೂ ಪಡೆಯಬಹುದು. ಕುಲದೇವತೆಯನ್ನು ಪೂಜಿಸದೆ ಅನ್ಯದೇವತೆಗಳನ್ನು ಪೂಜಿಸಿದರೂ ಪ್ರಯೋಜನವಾಗುವುದಿಲ್ಲ. ಅಂತಹ ಕುಲದೇವತೆಯನ್ನು ನಾವು ಯಾವುದೇ ರೀತಿಯಲ್ಲಿ…
ಬೆಂಗಳೂರು : ಆಸ್ಟರಿಯಾ ಏರೋಸ್ಪೇಸ್ ಎಂಬುದು ಸಂಪೂರ್ಣವಾಗಿ ಎಲ್ಲವನ್ನೂ ದೇಶೀಯವಾಗಿ ಸಿದ್ಧಪಡಿಸಿ, ಉತ್ಪಾದನೆ ಮಾಡುತ್ತಿರುವ ಡ್ರೋನ್ ತಂತ್ರಜ್ಞಾನ ಕಂಪನಿ. ಅದು ಅತ್ಯಾಧುನಿಕ ನವೀನ ಬಗೆಯ ಕ್ಲೌಡ್ ಪ್ಲಾಟ್ ಫಾರ್ಮ್ ಅನ್ನು ಪರಿಚಯಿಸುತ್ತಿದ್ದು, ಆ ಪ್ಲಾಟ್ ಫಾರ್ಮ್ ಹೆಸರು ಸ್ಕೈಡೆಕ್. ಇದೀಗ ಅದನ್ನು ಸೆಲ್ಫ್ ಸರ್ವೀಸ್ SaaS ಸಲ್ಯೂಷನ್ ಆಗಿ ನೀಡುತ್ತಿದೆ. ಉದ್ಯಮಗಳಿಗೆ ಡ್ರೋನ್ ದತ್ತಾಂಶ ನಿರ್ವಹಣೆಯನ್ನು ಸುವ್ಯವಸ್ಥಿತ ಮಾಡುವುದಕ್ಕೆ ಸ್ಕೈಡೆಕ್ ಪ್ಲಾಟ್ ಫಾರ್ಮ್ ಬಲ ತುಂಬುತ್ತದೆ. ಡ್ರೋನ್ ಡೇಟಾದ ಬಳಕೆದಾರರು ಹಾಗೂ ಸೇವಾ ಪೂರೈಕೆದಾರರು ಇಬ್ಬರಿಗೂ ಇದು ಸಮಗ್ರ ಸಾಫ್ಟ್ ವೇರ್ ಪ್ಲಾಟ್ ಫಾರ್ಮ್ ರೀತಿಯಲ್ಲಿ ಸೇವೆ ಒದಗಿಸುತ್ತದೆ. ಆ ಮೂಲಕ ಅವರ ಡಿಜಿಟಲ್ ರೂಪಾಂತರ ಪ್ರಯಾಣವನ್ನು ಸರಳಗೊಳಿಸುತ್ತದೆ ಮತ್ತು ಡ್ರೋನ್ ನಿಂದ ಡೇಟಾ ಚಾಲಿತ ಒಳನೋಟಗಳನ್ನು ಸಕ್ರಿಯಗೊಳಿಸುತ್ತದೆ. ಜಿಐಎಸ್ ನಂಥ ಉದ್ಯಮಗಳು ನಿರ್ಮಾಣ, ತೈಲ ಹಾಗೂ ಅನಿಲ, ಕೃಷಿ ಕ್ಷೇತ್ರಗಳಲ್ಲಿ ತೊಡಗಿಕೊಂಡಿವೆ. ಸ್ಕೈಡೆಕ್ ಇಂಥವುಗಳಿಗೆ ತಂತ್ರಜ್ಞಾನದ ದೃಷ್ಟಿಯಿಂದ ಆಧುನಿಕವಾದ ಸಲಕರಣೆಗಳು ಮತ್ತು ವಿಶ್ಲೇಷಣೆಗಳನ್ನು ಒದಗಿಸುತ್ತದೆ. ಅದರೊಂದಿಗೆ ಡ್ರೋನ್ ಡೇಟಾವನ್ನು ಬಳಸಿಕೊಂಡು,…
ಬೆಂಗಳೂರು: ನಾಳೆ, ನಾಡಿದ್ದು ವಿಧಾನ ಪರಿಷತ್ತಿನಲ್ಲಿ ಕೆಲ ಮಹತ್ವದ ವಿಧೇಯಕಗಳನ್ನು ಕಾಂಗ್ರೆಸ್ ಸರ್ಕಾರ ಮಂಡನೆ ಮಾಡಲಾಗುತ್ತಿದೆ. ಈ ಬಗ್ಗೆ ಮಹತ್ವದ ಚರ್ಚೆ ಕೂಡ ನಡೆಯಲಿದೆ. ಈ ಹಿನ್ನಲೆಯಲ್ಲಿ ಸದನದ ಸದಸ್ಯರಿಗೆ ಕಡ್ಡಾಯವಾಗಿ ಹಾಜರಿರುವಂತೆ ಪಕ್ಷದಿಂದ ವಿಪ್ ಜಾರಿಗೊಳಿಸಲಾಗಿದೆ. ಈ ಕುರಿತಂತೆ ವಿಧಾನಪರಿಷತ್ ಸದಸ್ಯರಿಗೆ ಮುಖ್ಯ ಸಚೇತಕ ಸಲೀಂ ಅಹ್ಮದ್ ಅವರು ಪತ್ರ ಬರೆದಿದ್ದಾರೆ. ಅದರಲ್ಲಿ ವಿಧಾನ ಪರಿಷತ್ತಿನ ಅಧಿವೇಶನದಲ್ಲಿ ಮಹತ್ವದ ವಿಧೇಯಕಗಳು ಚರ್ಚೆಗೆ ಬರಲಿದ್ದಾವೆ ಅಂತ ಹೇಳಿದ್ದಾರೆ. ದಿನಾಂಕ 25-07-2024 ಹಾಗೂ 26-07-2024ರಂದು ಅಧಿವೇಶನದ ಪ್ರಾರಂಭದಿಂದ ಮುಗಿಯುವವರೆಗೂ ತಾವುಗಳು ವಿಧಾನ ಪರಿಷತ್ ಕಲಾಪಗಳ ಸಂದರ್ಭದಲ್ಲಿ ಕಡ್ಡಾಯವಾಗಿ ಸನದಲ್ಲಿ ಹಾಜರಿರಲು ವಿಪ್ ನೀಡಲಾಗಿದೆ ಅಂತ ತಿಳಿಸಿದ್ದಾರೆ. https://kannadanewsnow.com/kannada/railways-recruited-5-02-lakh-candidates-between-2014-and-2024-130581-post-covid/ https://kannadanewsnow.com/kannada/cm-siddaramaiah-likely-to-meet-governor-in-a-few-minutes-discuss-current-developments-report-likely/
ನವದೆಹಲಿ: ಭಾರತೀಯ ರೈಲ್ವೆಯಿಂದ 2014-2024ರ ಅವಧಿಯಲ್ಲಿ ರೈಲ್ವೆಯಲ್ಲಿ 5.02 ಲಕ್ಷ ಅಭ್ಯರ್ಥಿಗಳನ್ನು ನೇಮಕ ಮಾಡಲಾಗಿದೆ. ಕೋವಿಡ್ -19 ಕಾರಣದಿಂದಾಗಿ ವಿಧಿಸಲಾದ ನಿರ್ಬಂಧಗಳನ್ನು ಸಡಿಲಿಸಿದ ನಂತರ ಕಂಪ್ಯೂಟರ್ ಆಧಾರಿತ ಪರೀಕ್ಷೆಗಳ ಮೂಲಕ 1,30,581 ಅಭ್ಯರ್ಥಿಗಳನ್ನು ನೇಮಕ ಮಾಡಲಾಗಿದೆ. ಈ ಕುರಿತಂತೆ ಭಾರತೀಯ ರೈಲ್ವೆಯಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ರೈಲ್ವೆಯಲ್ಲಿ ಖಾಲಿ ಹುದ್ದೆಗಳ ಸಂಖ್ಯೆ ಮತ್ತು ಭರ್ತಿ ಮಾಡುವುದು ಅದರ ಗಾತ್ರ, ಪ್ರಾದೇಶಿಕ ವಿತರಣೆ ಮತ್ತು ಕಾರ್ಯಾಚರಣೆಯ ನಿರ್ಣಾಯಕತೆಯನ್ನು ಪರಿಗಣಿಸಿ ನಿರಂತರ ಪ್ರಕ್ರಿಯೆಗಳಾಗಿವೆ. ನಿಯಮಿತ ಕಾರ್ಯಾಚರಣೆಗಳು, ತಂತ್ರಜ್ಞಾನದಲ್ಲಿನ ಬದಲಾವಣೆಗಳು, ಯಾಂತ್ರೀಕರಣಗಳು ಮತ್ತು ನವೀನ ಅಭ್ಯಾಸಗಳನ್ನು ಪೂರೈಸಲು ಸಾಕಷ್ಟು ಮತ್ತು ಸೂಕ್ತ ಮಾನವಶಕ್ತಿಯನ್ನು ಒದಗಿಸಲಾಗುತ್ತದೆ. ಕಾರ್ಯಾಚರಣೆ ಮತ್ತು ತಾಂತ್ರಿಕ ಅವಶ್ಯಕತೆಗಳಿಗೆ ಅನುಗುಣವಾಗಿ ರೈಲ್ವೆ ನೇಮಕಾತಿ ಏಜೆನ್ಸಿಗಳೊಂದಿಗೆ ಇಂಡೆಂಟ್ಗಳನ್ನು ನಿಯೋಜಿಸುವ ಮೂಲಕ ಖಾಲಿ ಹುದ್ದೆಗಳನ್ನು ಪ್ರಾಥಮಿಕವಾಗಿ ಭರ್ತಿ ಮಾಡಲಾಗುತ್ತದೆ ಎಂದಿದೆ. ಕೋವಿಡ್ -19 ಕಾರಣದಿಂದಾಗಿ ವಿಧಿಸಲಾದ ನಿರ್ಬಂಧಗಳನ್ನು ಸಡಿಲಿಸಿದ ನಂತರ, 2.37 ಕೋಟಿಗೂ ಹೆಚ್ಚು ಅಭ್ಯರ್ಥಿಗಳನ್ನು ಒಳಗೊಂಡ ಎರಡು ಪ್ರಮುಖ ಪರೀಕ್ಷೆಗಳನ್ನು ಯಶಸ್ವಿಯಾಗಿ ನಡೆಸಲಾಗಿದೆ. 1. 26…
ಬೆಂಗಳೂರು: ನಗರದಲ್ಲಿ ದಿನೇ ದಿನೇ ಡೆಂಗ್ಯೂ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿವೆ. ಡೆಂಗ್ಯೂಗೆ ಕಾರಣವಾಗಿರುವಂತ ಸೊಳ್ಳೆ ನಿಯಂತ್ರಣಕ್ಕಾಗಿ, ಸೊಳ್ಳೆ ಹೆಚ್ಚಿರುವಂತ ಬೆಂಗಳೂರಿನ ಏರಿಯಾ ಜನರಿಗೆ ಬಿಬಿಎಂಪಿಯಿಂದಲೇ ಡೀಟ್ ಕ್ರೀಮ್, ನೀಮ್ ಆಯಿಲ್ ವಿತರಣೆ ಮಾಡಲಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ಡೆಂಘೀ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಆಯಾ ವಲಯಗಳಲ್ಲಿ ಸೂಕ್ತ ಕ್ರಮಗಳನ್ನು ಕೈಗೊಳ್ಳಲು ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್ ರವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಬಿಬಿಎಂಪಿಯ ವಿವಿಧ ವಿಷಯಗಳಿಗೆ ಸಂಬಂಧಿಸಿದಂತೆ ಬಿ.ಎಸ್.ಡಬ್ಲ್ಯೂ.ಎಂ.ಎಲ್ ನಲ್ಲಿ ನಡೆದ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ನಗರದಲ್ಲಿ ಪ್ರತಿನಿತ್ಯ ಸರಾಸರಿ 150 ರಿಂದ 160 ಡೆಂಘೀ ಪ್ರಕರಣಗಳು ಕಂಡುಬರುತ್ತಿದ್ದು, ಜುಲೈ 1 ರಿಂದ ನಿನ್ನೆಯವರೆಗೆ 3304 ಪ್ರಕರಣಗಳು ವರದಿಯಾಗಿವೆ. ಈ ಸಂಬಂಧ ಎಲ್ಲಾ ವಲಯಗಳಲ್ಲಿ ಡೆಂಘೀ ನಿಯಂತ್ರಣಕ್ಕಾಗಿ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಲು ಸೂಚಿಸಲಾಯಿತು. ವಲಯ ಆಯುಕ್ತರು ಡೆಂಘೀ ನಿಯಂತ್ರಿಸುವ ಸಂಬಂಧ ಆರೋಗ್ಯ ವಿಭಾಗದ ಅಧಿಕಾರಿಗಳ ಜೊತೆ ಪ್ರತಿನಿತ್ಯ ಸಭೆ ನಡೆಸಿ ಮೇಲ್ವಿಚಾರಣೆ ಮಾಡಬೇಕು. ಆಯಾ ವಲಯ ವ್ಯಾಪ್ತಿಯಲ್ಲಿ ಹೆಚ್ಚು ಡೆಂಘೀ ಪ್ರಕರಣಗಳು ಕಂಡುಬರುವ…
ಬೆಂಗಳೂರು: ರಾಜ್ಯದ ರೈತರಿಗೆ ಗುಡ್ ನ್ಯೂಸ್ ಎನ್ನುವಂತೆ ಮಂಜೂರಾದ ಜಮೀನುಗಳ ಪೋಡಿ, ದುರಸ್ತಿ ಪಾರದರ್ಶಕತೆಗೆ ನೂತನ ತಂತ್ರಾಂಶವನ್ನು ಅಭಿವೃದ್ಧಿ ಪಡಿಸಲಾಗಿದೆ. ಈ ಬಗ್ಗೆ ಕಂದಾಯ ಸಚಿವ ಕೃಷ್ಣಭೈರೇಗೌಡ ಮಾಹಿತಿ ನೀಡಿದ್ದು, ರೈತರಿಗಾಗುತ್ತಿರುವಂತ ತೊಂದರೆಗಳನ್ನು ನಿವಾರಿಸುವ ಸಲುವಾಗಿ ಸರ್ಕಾರ ಪಹಣಿ ತಿದ್ದುಪಡಿ ಮತ್ತು ಪೌತಿ ಖಾತೆ ಇತ್ಯಾದಿಗಳ ಇತ್ಯರ್ಥಕ್ಕಾಗಿ ಕಂದಾಯ ಅದಾಲತ್ ಗಳನ್ನು ನಡೆಸುತ್ತಿದೆ ಎಂದರು. ರಾಜ್ಯದ ರೈತರಿಗೆ ಮಂಜೂರಾದ ಜಮೀನುಗಳ ಪೋಡಿ, ದುರಸ್ತಿ ಕಾರ್ಯವನ್ನು ಆನ್ ಲೈನ್ ಮುಖಾಂತರ ನಿರ್ವಹಿಸಲು ಹೊಸ ತಂತ್ರಾಂಶಗಳನ್ನು ಅಭಿವೃದ್ಧಿ ಪಡಿಸಲಾಗುತ್ತಿದೆ ಎಂಬುದಾಗಿ ಹೇಳುವ ಮೂಲಕ, ಗುಡ್ ನ್ಯೂಸ್ ನೀಡಿದ್ದಾರೆ. https://twitter.com/KarnatakaVarthe/status/1816092459551838215 https://kannadanewsnow.com/kannada/muda-scam-bjp-jds-members-stage-dharna-in-assembly/ https://kannadanewsnow.com/kannada/cm-siddaramaiah-likely-to-meet-governor-in-a-few-minutes-discuss-current-developments-report-likely/