Subscribe to Updates
Get the latest creative news from FooBar about art, design and business.
Author: kannadanewsnow09
ಮಂಡ್ಯ: ಜಿಲ್ಲೆಯ ಏಕೈಕ ಸರ್ಕಾರಿ ಸ್ವಾಮ್ಯದ ಸಕ್ಕರೆ ಕಾರ್ಖಾನೆಯಾದ “ಮೈಶುಗರ್” ಖಾಸಗೀಕರಣ ಮಾಡಲಾಗುತ್ತಿದೆ ಎಂದು ಕೆಲವು ಪಟ್ಟಭದ್ರ ಹಿತಾಸಕ್ತಿಗಳು ಅಪಪ್ರಚಾರ ಮಾಡುತ್ತಿವೆ ಎಂದು ವಿಧಾನ ಪರಿಷತ್ ಶಾಸಕರಾದ ದಿನೇಶ ಗೂಳಿಗೌಡ ಹೇಳಿದ್ದಾರೆ. ಈ ಕುರಿತು ಮಾಧ್ಯಮ ಪ್ರಕಟಣೆ ನೀಡಿರುವ ಅವರು, ಅಪ ಪ್ರಚಾರಕ್ಕೆ ಸಾರ್ವಜನಿಕರಾಗಲೀ, ರೈತರಾಗಲೀ ಅಪ ಪ್ರಚಾರಕ್ಕೆ ಕಿವಿಗೊಡಬಾರದು. ಯಾವುದೇ ಕಾರಣಕ್ಕೂ ಇದನ್ನು ಖಾಸಗೀಕರಣ ಮಾಡುವುದಿಲ್ಲ. ನಮ್ಮ ಸರ್ಕಾರ ರೈತರ ಹಿತ ಕಾಯಲು ಬದ್ಧವಿದೆ ಎಂದು ಹೇಳಿದ್ದಾರೆ. ಈ ಕಾರ್ಖಾನೆ ಸಂಪೂರ್ಣವಾಗಿ ನಷ್ಟದಲ್ಲಿದ್ದಿದ್ದಲ್ಲದೆ, ಮುಚ್ಚಿ ಹೋಗುವ ಹಂತದಲ್ಲಿತ್ತು. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಚಲುವರಾಯಸ್ವಾಮಿ, ಶಾಸಕರಾದ ರವಿಕುಮಾರ್ ಗಣಿಗ ಹಾಗೂ ನಾನುಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ಬಳಿ ಈ ಕಾರ್ಖಾನೆಯ ಪುನಶ್ಚೇತನಕ್ಕಾಗಿ ಮನವಿ ಮಾಡಿದ್ದೆವು. ಕಳೆದ ವರ್ಷ ಕಾರ್ಖಾನೆಗೆ 50 ಕೋಟಿ ರೂಪಾಯಿಯನ್ನು ಕಾರ್ಖಾನೆಯ ಕಾರ್ಯಗಳಿಗೆ ಬಿಡುಗಡೆ ಮಾಡಿಸಲು ಯಶಸ್ವಿಯಾಗಿದ್ದೆವು. ಪರಿಣಾಮ ಕಾರ್ಖಾನೆ ಕಳೆದ ಹಂಗಾಮಿನಲ್ಲಿ 2 ಲಕ್ಷ…
ಕನಕಪುರ: “ಭೂ ವ್ಯಾಜ್ಯಗಳಿಂದಾಗಿ ಜನ ಪೊಲೀಸ್ ಠಾಣೆಗೆ ಹೋಗಬಾರದು, ಬಡವರು ಲಂಚ ನೀಡುವುದನ್ನು ತಪ್ಪಿಸಬೇಕು ಎಂಬ ಉದ್ದೇಶದಿಂದ ನಮ್ಮ ಸರ್ಕಾರ ಮರು ಭೂ ಮಾಪನ ಕಾರ್ಯಕ್ರಮವನ್ನು ಪ್ರಾಯೋಗಿಕವಾಗಿ ಮಾಡಿದ್ದು, ಮುಂದೆ ಇಡೀ ತಾಲೂಕಿಗೆ ಕಾರ್ಯಕ್ರಮ ವಿಸ್ತರಣೆ ಮಾಡಲಾಗುವುದು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಕನಕಪುರದ ಉಯ್ಯಂಬಳ್ಳಿ ಹೋಬಳಿಯ ದೊಡ್ಡಆಲಹಳ್ಳಿಯಲ್ಲಿ ಭಾನುವಾರ ನಡೆದ ಬಾಗಿಲಿಗೆ ಬಂತು ಸರ್ಕಾರ, ಸೇವೆಗೆ ಇರಲಿ ಸಹಕಾರ ಹಾಗೂ ಮರು ಭೂ ಮಾಪನ ಯೋಜನೆಯಡಿ ರೈತರಿಗೆ ಜಮೀನಿನ ಆರ್ ಟಿಸಿ ದಾಖಲೆ ನೀಡುವ ಕಾರ್ಯಕ್ರಮದಲ್ಲಿ ಶಿವಕುಮಾರ್ ಅವರು ಭಾಗವಹಿಸಿ ಮಾತನಾಡಿದರು. “ನೂರಾರು ವರ್ಷಗಳ ಹಿಂದೆ ಬ್ರಿಟೀಷರು ಈ ಭಾಗದಲ್ಲಿ ಭೂ ಮಾಪನ ಮಾಡಿದ್ದರು. ಆನಂತರ ಮಾಡಿರಲಿಲ್ಲ. ಈಗ ಹೊಸ ಮಾದರಿಯಲ್ಲಿ ಭೂ ಮಾಪನ ಮಾಡಲಾಗುತ್ತಿದೆ. ನಮ್ಮ ಸರ್ಕಾರ ಈ ಕಾರ್ಯಕ್ರಮ ರೂಪಿಸಿದೆ. ಇದು ಮುಂದಿನ ತಲೆಮಾರಿಗೂ ಬಹಳ ಉಪಯೋಗವಾಗಲಿದೆ” ಎಂದು ತಿಳಿಸಿದರು. “ಡಿ.ಕೆ. ಸುರೇಶ್ ಹಾಗೂ ಕೃಷ್ಣ ಭೈರೇಗೌಡರು ಚರ್ಚಿಸಿ ನನ್ನ ಗ್ರಾಮದಿಂದಲೇ ಈ ಯೋಜನೆ ಆರಂಭಿಸಿದ್ದಾರೆ. ಇದು…
ಶಿವಮೊಗ್ಗ: ಜಿಲ್ಲೆಯ ಸಾಗರ ತಾಲ್ಲೂಕಿನ ಉಳ್ಳೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷರಾಗಿ ತಿರುಮಲೇಶ್ ಹಾಗೂ ಉಪಾಧ್ಯಕ್ಷರಾಗಿ ಬಾಳೆಗುಂಡಿ ರಾಮಚಂದ್ರಪ್ಪ ಅವರು ಆಯ್ಕೆಯಾಗಿದ್ದಾರೆ. ಇಂದು ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕು ಉಳ್ಳೂರು ಗ್ರಾಮದಲ್ಲಿರುವಂತ ಪ್ರಾಥಮಕಿ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಅಧ್ಯಕ್ಷರು ಹಾಗೂ ಉಪಾಧ್ಯಕ್ಷರ ಆಯ್ಕೆಗಾಗಿ ಚುನಾವಣೆ ನಡೆಯಿತು. ಇಂದಿನ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಉಳ್ಳೂರು ಗ್ರಾಮ ಪಂಚಾಯ್ತಿ ಹಾಲಿ ಉಪಾಧ್ಯಕ್ಷ ತಿರುಮಲೇಶ್ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಇನ್ನೂ ಉಪಾಧ್ಯಕ್ಷರಾಗಿ ಬಾಳೆಗುಂಡಿ ರಾಮಚಂದ್ರ ಆಯ್ಕೆಯಾಗಿದ್ದಾರೆ. ಅಂದಹಾಗೇ ಉಳ್ಳೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಸ್ಥಾನದ ರೇಸ್ ನಲ್ಲಿ ಕೃಷ್ಣಮೂರ್ತಿ ಕೂಡ ಇದ್ದರು. ಆದರೇ ಕೊನೆಯ ಕ್ಷಣದಲ್ಲಿ ಸೈಲೆಂಟ್ ಆಗಿದ್ದೇ ಹಲವು ಅನುಮಾನಗಳಿಗೂ ಕಾರಣವಾಗಿದೆ. ಬಲ್ಲ ಮೂಲಗಳ ಮಾಹಿತಿಯ ಪ್ರಕಾರ ವೆಂಕಪ್ಪಗೌಡರ ಮಗ ಕೃಷ್ಣಮೂರ್ತಿ ಅವರು, ಭೀಮನಕೋಣೆಯಲ್ಲಿನ ಪಿ.ಎಲ್.ಡಿ ಬ್ಯಾಂಕ್ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧೆ ಮಾಡುತ್ತಿದ್ದು, ಅಲ್ಲಿ ಗೆಲುವು ಸಾಧಿಸುವ ನಿರೀಕ್ಷೆ ಇದೆಯಂತೆ. ಹೀಗಾಗಿಯೇ ಇಂದಿನ ಚುನಾವಣೆಯ ಕಣದಿಂದ…
ಉತ್ತರಾಖಂಡ: ಉತ್ತರಾಖಾಂಡದ ಪೌರಿ ಎಂಬಲ್ಲಿ ಬಸ್ ಒಂದು ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ ಐವರು ಸಾವನ್ನಪ್ಪಿ, 17ಕ್ಕೂ ಹೆಚ್ಚು ಜನರು ಗಾಯಗೊಂಡಿರುವಂತ ಭೀಕರ ದುರ್ಘಟನೆ ಸಂಭವಿಸಿದೆ. ಉತ್ತರಾಖಂಡದ ಪೌರಿ ಜಿಲ್ಲೆಯಲ್ಲಿ ಬಸ್ 100 ಮೀಟರ್ ಆಳದ ಕಮರಿಗೆ ಬಿದ್ದ ಪರಿಣಾಮ ಐವರು ಸಾವನ್ನಪ್ಪಿದ್ದು, 17 ಮಂದಿ ಗಾಯಗೊಂಡಿದ್ದಾರೆ. ಅವರನ್ನು ಸಮೀಪದ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. https://twitter.com/PTI_News/status/1878406275291062587 ಅಪಘಾತದ ನಂತರ, ಪೌರಿಯ ಜಿಲ್ಲಾ ನಿಯಂತ್ರಣ ಕೊಠಡಿ ಎಸ್ಡಿಆರ್ಎಫ್ಗೆ ಮಾಹಿತಿ ನೀಡಿತು. ನಂತರ ತಂಡವನ್ನು ಅಪಘಾತದ ಸ್ಥಳಕ್ಕೆ ಕರೆದೊಯ್ಯಲಾಯಿತು. ಅಪಘಾತದ ಬಗ್ಗೆ ಹೆಚ್ಚಿನ ವಿವರಗಳನ್ನು ನೀಡಿದ ಎಸ್ಡಿಆರ್ಎಫ್, ಅಪಘಾತ ಸಂಭವಿಸಿದಾಗ ಬಸ್ ಪೌರಿಯಿಂದ ದಹಚೋರಿಗೆ ಪ್ರಯಾಣಿಸುತ್ತಿತ್ತು ಎಂದು ಹೇಳಿದರು. ಪೌರಿ ಪೊಲೀಸರು ಮತ್ತು ಸ್ಥಳೀಯ ಜನರು ಅಪಘಾತದ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಸಿದರು. ಪರಿಣಾಮವಾಗಿ, ಒಟ್ಟು 18 ಗಾಯಾಳುಗಳನ್ನು ಹೊರತೆಗೆದು ಆಸ್ಪತ್ರೆಗೆ ಸಾಗಿಸಲಾಗಿದೆ ಎಂದು ಎಸ್ಡಿಆರ್ಎಫ್ ತಿಳಿಸಿದೆ. ಪೌರಿ ಗರ್ವಾಲ್ ಜಿಲ್ಲಾ ಮ್ಯಾಜಿಸ್ಟ್ರೇಟ್ ಆಶಿಶ್ ಚೌಹಾಣ್ ಅವರು ಅಪಘಾತದ ಬಗ್ಗೆ ಮಾಹಿತಿ ನೀಡಿದ್ದು, “ಬಸ್…
ಮದನಪಲ್ಲಿ: ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾದ ಪರಿಣಾಮ, ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿ, ಓರ್ವ ಗಂಭೀರವಾಗಿ ಗಾಯಗೊಂಡಿರುವಂತ ಘಟನೆ ನಡೆದಿದೆ. ಇಡಿಯೋಸ್ ಹಾಗೂ ಮಹೀಂದ್ರಾ ಎಕ್ಸ್ ಯುವಿ ಕಾರುಗಳ ನಡುವೆ ಭೀಕರ ಅಫಘಾತ ಉಂಟಾಗಿದೆ. ಈ ಅಪಘಾತದಲ್ಲಿ ಇಡಿಯೋಸ್ ಕಾರಿನಲ್ಲಿದ್ದಂತ ಆಂಧ್ರದ ಶಿವಕುಮಾರ್ ಹಾಗೂ ಪ್ರಕಾಶ್ ಎಂಬುವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಗಂಭೀರವಾಗಿ ಗಾಯಗೊಂಡಿದ್ದಾರೆ. ಇನ್ನೂ ಎಕ್ಸ್ ಯುವಿನಲ್ಲಿದ್ದಂತ ನಾಲ್ವರಿಗೆ ಗಾಯವಾಗಿದೆ. ಅವರನ್ನು ಮದನಪಲ್ಲಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ರಾಯಲ್ಪಾಡು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. https://kannadanewsnow.com/kannada/shocking-police-job-recruitment-exam-munnabhai-mbbs-is-a-candidate-who-copied-like-a-movie/ https://kannadanewsnow.com/kannada/i-wanted-to-put-a-bullet-through-kapil-devs-head-yograj-singh/
ಬೆಂಗಳೂರು: ಕರ್ನಾಟಕ ಚಲನಚಿತ್ರ ನಟರಾದ ಹಿರಿಯ ಹಾಸ್ಯನಟ ಸರಿಗಮ ವಿಜಿ ( Actor Viji ) ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವುದಾಗಿ ತಿಳಿದು ಬಂದಿದೆ. ಇದೀಗ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿರುವುದಾಗಿ ಹೇಳಲಾಗುತ್ತಿದೆ. ಕನ್ನಡದ ಹಲವು ಚಿತ್ರಗಳಲ್ಲಿ ಹಾಸ್ಯನಟರಾಗಿ ಅಭಿನಯಿಸಿ, ನೋಡುಗರನ್ನು ರಂಚಿಸುವ ಮೂಲಕ ಹಾಸ್ಯ ಚಕ್ರವರ್ತಿ ಎಂಬುದಾಗಿಯೇ ಕರೆಸಿಕೊಂಡಿದ್ದವರು ಸರಿಗಮ ವಿಜಿ ಅವರು. ಸ್ಯಾಂಡಲ್ ವುಡ್ ಹಿರಿಯ ಕಲಾವಿದ, ಹಾಸ್ಯ ಚಕ್ರವರ್ತಿ ಸರಿಗಮ ವಿಜಿ ಅವರ ಆರೋಗ್ಯದಲ್ಲಿ ಏರುಪೇರು ಉಂಟಾಗಿದ್ದು, ಬೆಂಗಳೂರಿನ ಮಣಿಪಾಲ್ ಹಾಸ್ಪಿಟಲ್ ಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವುದಾಗಿ ಕುಟುಂಬಸ್ಥರು ತಿಳಿಸಿದ್ದಾರೆ. ಇನ್ನೂ ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವಂತ ಸ್ಯಾಂಡಲ್ ವುಡ್ ಹಾಸ್ಯನಟ ವಿಜಿ ಅವರ ಸ್ಥಿತಿ ಗಂಭೀರಗೊಂಡಿರುವುದಾಗಿ ತಿಳಿದು ಬಂದಿದೆ. ಅವರಿಗೆ ಐಸಿಯುನಲ್ಲಿ ವೈದ್ಯರು ಚಿಕಿತ್ಸೆ ಮುಂದುವರೆಸಿದ್ದಾರೆ. https://kannadanewsnow.com/kannada/shocking-police-job-recruitment-exam-munnabhai-mbbs-is-a-candidate-who-copied-like-a-movie/ https://kannadanewsnow.com/kannada/i-wanted-to-put-a-bullet-through-kapil-devs-head-yograj-singh/
ಬೆಂಗಳೂರು: ಬೆಂಗಳೂರು -ಮೈಸೂರು ಮೂಲಸೌಕರ್ಯ ಕಾರಿಡಾರ್ (NICE) ಯೋಜನೆಗಾಗಿ ವಶಪಡಿಸಿಕೊಂಡ ಭೂಮಿಗೆ ವರ್ಷಗಳೇ ಕಳೆದಿದ್ದರೂ ಈವರೆಗೆ ಭೂಮಿ ಕಳೆದುಕೊಂಡ ರೈತರಿಗೆ ಪರಿಹಾರ ನೀಡದ ಬಗ್ಗೆ ಸುಪ್ರೀಂ ಕೋರ್ಟ್ ತರಾಟೆಗೆ ತೆಗೆದುಕೊಂಡಿದೆ. ಆ ಬಗ್ಗೆ ರಾಜ್ಯ ಸರಕಾರ ಏನು ಕ್ರಮ ಕೈಗೊಂಡಿದೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಪ್ರಶ್ನಿಸಿದ್ದಾರೆ. ಪಕ್ಷದ ರಾಜ್ಯದ ಕಚೇರಿ ಜೆಪಿ ಭವನದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಕೇಂದ್ರ ಸಚಿವರು; ನೈಸ್ ಯೋಜನೆ ಹೆಸರಿನಲ್ಲಿ ರೈತರ ಭೂಮಿಯನ್ನು ಲೂಟಿ ಹೊಡೆಯಲಾಗಿದೆ. ಅಧಿಕಾರಿಗಳು, ಕೆಐಎಡಿಬಿ ಅಧಿಕಾರಿಗಳು, ಕಾಂಗ್ರೆಸ್ ನಾಯಕರು ಎಲ್ಲಾ ಸೇರಿ ರೈತರ ಭೂಮಿಯನ್ನು ಕೊಳ್ಳೆ ಹೊಡೆದಿದ್ದಾರೆ. 22 ವರ್ಷಗಳೇ ಕಳೆದರೂ ಭೂಮಿ ಕಳೆದುಕೊಂಡ ರೈತರಿಗೆ ಪರಿಹಾರ ಕೊಡದ ಅಧಿಕಾರಿಗಳ ಉದಾಸೀನತೆ, ಗಾಢನಿದ್ರೆಯ ಬಗ್ಗೆ ಸುಪ್ರೀಂ ಕೋರ್ಟ್ ಕಿಡಿಕಾರಿದೆ. ಆದರೂ ಈ ರಾಜ್ಯ ಸರ್ಕಾರ ರೈತರ ಹಿತ ಮರೆತು ಗಾಢನಿದ್ರೆಯಲ್ಲಿದೆ. ರಸ್ತೆ ಮಾಡುತ್ತೇವೆ ಎಂದು ಹೇಳಿ ರೈತರ ಭೂಮಿಯನ್ನು ಕಿತ್ತುಕೊಳ್ಳಲಾಗಿದೆ. ಟಿ.ಬಿ.ಜಯಚಂದ್ರ ಅವರ ನೇತೃತ್ವದ ಸದನ ಸಮಿತಿ ಇಡೀ ಯೋಜನೆಯನ್ನೇ…
ಬೆಂಗಳೂರು: ಜೆಡಿಎಸ್ ರಾಜ್ಯಾಧ್ಯಕ್ಷರ ಆಯ್ಕೆಯನ್ನು ಮುಂದಿನ ಏಪ್ರಿಲ್ ತಿಂಗಳ ಒಳಗೆ ಚುನಾವಣೆ ಮೂಲಕ ನಡೆಸುವ ನಿರ್ಧಾರವನ್ನು ಜೆಡಿಎಸ್ ಕೈಗೊಂಡಿದೆ ಎಂದು ಕೇಂದ್ರ ಸಚಿವರು ಹಾಗೂ ಪಕ್ಷದ ರಾಜ್ಯಾಧ್ಯಕ್ಷರಾದ ಹೆಚ್.ಡಿ.ಕುಮಾರಸ್ವಾಮಿ ತಿಳಿಸಿದರು. ಆದರೆ, ರಾಜ್ಯಾಧ್ಯಕ್ಷ ಸ್ಥಾನಕ್ಕೆ ಯಾರನ್ನು ಆಯ್ಕೆ ಮಾಡಬೇಕು ಎಂಬ ಬಗ್ಗೆ ಈ ಸಭೆಯಲ್ಲಿ ಚರ್ಚೆ ಆಗಿಲ್ಲ ಎಂದು ಸಚಿವರು ಹೇಳಿದರು. ಜತೆಗೆ; ಪಕ್ಷದ ದ್ವೈವಾರ್ಷಿಕ ಸಾಂಸ್ಥಿಕ ಚುನಾವಣೆ, ಸದಸ್ಯತ್ವ ಅಭಿಯಾನವನ್ನು ಚುರುಕುಗೊಳಿಸುವುದು, ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆ ತಯಾರಿ ಹಾಗೂ ಪಕ್ಷ ಸಂಘಟನೆ ವಿಷಯಗಳ ಸಭೆಯಲ್ಲಿ ಮಹತ್ವದ ನಿರ್ಧಾರಗಳನ್ನು ಮಾಡಲಾಗಿದೆ ಎಂದು ಅವರು ಹೇಳಿದರು. ಮುಖಂಡರ ಸಭೆಯ ನಂತರ ಸಚಿವರು ಮಾಧ್ಯಮಗಳ ಜತೆ ಮಾತನಾಡಿದರು. ಮುಂದಿನ ಏಪ್ರಿಲ್ ಒಳಗೆ ರಾಜ್ಯದ ಘಟಕದ ಅಧ್ಯಕ್ಷ ಸ್ಥಾನವನ್ನು ಚುನಾವಣೆ ಮೂಲಕ ಆಯ್ಕೆ ಮಾಡುವ ತೀರ್ಮಾನ ಆಗಿದೆ. ಪಕ್ಷದ ಸಂಘಟನೆ ಬಗ್ಗೆ ಪಕ್ಷದ ನಾಯಕರಿಗೆ ಕಠಿಣವಾಗಿಯೇ ಹೇಳಿದ್ದೇನೆ. ಯಾರು ಪ್ರಾಮಾಣಿಕವಾಗಿ ಪಕ್ಷದ ಸಂಘಟನೆಗೆ ದುಡಿಯುತ್ತಾರೋ ಅಂಥವರಿಗೆ ಆದ್ಯತೆ ಕೊಡುತ್ತೇವೆ. ನಾನು ಕೂಡ ಪಕ್ಷ…
ಢಾಕಾ: ಗಡಿ ಉದ್ವಿಗ್ನತೆಗೆ ಸಂಬಂಧಿಸಿದಂತೆ ಬಾಂಗ್ಲಾದೇಶದ ವಿದೇಶಾಂಗ ಸಚಿವಾಲಯ ಭಾನುವಾರ ಭಾರತೀಯ ಹೈಕಮಿಷನರ್ ಪ್ರಣಯ್ ವರ್ಮಾ ಅವರಿಗೆ ಸಮನ್ಸ್ ಜಾರಿ ಮಾಡಿದೆ. ದ್ವಿಪಕ್ಷೀಯ ಒಪ್ಪಂದವನ್ನು ಉಲ್ಲಂಘಿಸಿ ಭಾರತ-ಬಾಂಗ್ಲಾ ಗಡಿಯುದ್ದಕ್ಕೂ ಐದು ಸ್ಥಳಗಳಲ್ಲಿ ಬೇಲಿಗಳನ್ನು ನಿರ್ಮಿಸಲು ಭಾರತ ಪ್ರಯತ್ನಿಸುತ್ತಿದೆ ಎಂದು ಢಾಕಾ ಆರೋಪಿಸಿದ ಕೆಲವೇ ಗಂಟೆಗಳ ನಂತರ ಈ ಬೆಳವಣಿಗೆ ಸಂಭವಿಸಿದೆ. ವರ್ಮಾ ಮಧ್ಯಾಹ್ನ 3:00 ರ ಸುಮಾರಿಗೆ ಸಚಿವಾಲಯವನ್ನು ಪ್ರವೇಶಿಸುತ್ತಿರುವುದು ಕಂಡುಬಂದಿದೆ. ವಿದೇಶಾಂಗ ಕಾರ್ಯದರ್ಶಿ ಜಶಿಮ್ ಉದ್ದೀನ್ ಅವರೊಂದಿಗಿನ ಅವರ ಸಭೆ ಸುಮಾರು 45 ನಿಮಿಷಗಳ ಕಾಲ ನಡೆಯಿತು. ಚರ್ಚೆಗಳಿಗೆ ಸಂಬಂಧಿಸಿದಂತೆ ಮಧ್ಯಂತರ ಸರ್ಕಾರದಿಂದ ಯಾವುದೇ ಅಧಿಕೃತ ಹೇಳಿಕೆ ಬಿಡುಗಡೆಯಾಗದಿದ್ದರೂ, ರಾಯಭಾರಿಯನ್ನು ಕರೆಸಲಾಗಿದೆ ಎಂದು ಅಧಿಕಾರಿಗಳು ದೃಢಪಡಿಸಿದ್ದಾರೆ. https://kannadanewsnow.com/kannada/kiadb-karmakanda-complaint-filed-with-governor-seeking-direction-for-probe-against-balappa-handigunda/ https://kannadanewsnow.com/kannada/shocking-police-job-recruitment-exam-munnabhai-mbbs-is-a-candidate-who-copied-like-a-movie/
ಬೆಂಗಳೂರು: ಹಿಂದಿನ ಸರ್ಕಾರದ ಅವಧಿಯಲ್ಲಿ ‘ಪೇ ಸಿಎಂ ಸೇ ಸಿಎಂ’ ಘೋಷಣೆ ಮೂಲಕ ಭ್ರಷ್ಟಾಚಾರ ಪ್ರಕರಣಗಳ ವಿರುದ್ಧ ಮೆಗಾ ಅಭಿಯಾನ ಕೈಗೊಂಡು ಆಡಳಿತಕ್ಕೆ ಬಂದಿರುವ ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರಕ್ಕೆ ಇದೀಗ ‘ಹಂದಿಗುಂದ ಪ್ರಕರಣ’ ಸವಾಲಾಗಿ ಪರಿಣಮಿಸಿದೆ. ಭ್ರಷ್ಟಾಚಾರ ವಿರುದ್ಧ ದೇಶವ್ಯಾಪಿ ಕಾನೂನು ಹೋರಾಟ ನಡೆಸುತ್ತಿರುವ ‘ಸಿಟಿಜನ್ ರೈಟ್ಸ್ ಫೌಂಡೇಶನ್’ ಕೆಎಎಸ್ ಅಧಿಕಾರಿ ಬಾಳಪ್ಪ ಹಂದಿಗುಂದ ವಿರುದ್ದದ ಭ್ರಷ್ಟಾಚಾರ ಆರೋಪದಲ್ಲಿ ಸಿದ್ದರಾಮಯ್ಯ ಸರ್ಕಾರದ ಲೋಪವನ್ನೇ ಎತ್ತಿ ಹಿಡಿದಿದೆ. ಈ ಸಂಬಂಧ ರಾಜ್ಯಪಾಲರಿಗೆ ದೂರು ನೀಡಿ KIADB ಕರ್ಮಕಾಂಡದ ತನಿಖೆಗೆ ರೋಚಕತೆ ತುಂಬಿದೆ. ಕೆಐಎಡಿಬಿಯಲ್ಲಿ ಪ್ರಸ್ತುತ ವಿಶೇಷ ಭೂಸ್ವಾಧೀನ ಅಧಿಕಾರಿಯಾಗಿರುವ KAS ಅಧಿಕಾರಿ ಬಾಲಪ್ಪ ಹಂದಿಗುಂದ ವಿರುದ್ಧ ಬೆಂಗಳೂರಿನ ದೇವನಹಳ್ಳಿ ಸುತ್ತಮುತ್ತ ಅಕ್ರಮವಾಗಿ ಭೂಸ್ವಾಧೀನ ಮಾಡಿರುವ ಹಾಗೂ ಪರಿಹಾರ ಹಂಚಿಕೆಯಲ್ಲಿನ ಅಕ್ರಮಗಳ ವಿರುದ್ಧ ಗಂಭೀರ ಆರೋಪ ಕೇಳಿಬಂದಿವೆ. ಈ ಬಗ್ಗೆ ನ್ಯಾಯಾಲಯದ ಉಸ್ತುವಾರಿಯಲ್ಲಿ ಉನ್ನತಮಟ್ಟದ ತನಿಖೆಗೆ ಕೋರಿ ಸಿಟಿಜನ್ ರೈಟ್ಸ್ ಫೌಂಡೇಶನ್ (Citizen Rights Foundation) ಅಧ್ಯಕ್ಷ ಕೆ.ಎ.ಪಾಲ್ (K.A. Paul)…














