Subscribe to Updates
Get the latest creative news from FooBar about art, design and business.
Author: kannadanewsnow09
ಕೆಎನ್ಎನ್ ಡಿಜಿಟಲ್ ಡೆಸ್ಕ್: ಓಪನ್ಎಐ, ಕಂಪನಿಯ ಅತ್ಯಂತ ಸಮರ್ಥ ಕೃತಕ ಬುದ್ಧಿಮತ್ತೆ (artificial intelligence -AI)) ಕೋಡಿಂಗ್ ಏಜೆಂಟ್ ಕೋಡೆಕ್ಸ್ ಅನ್ನು ಬಿಡುಗಡೆ ಮಾಡುವುದಾಗಿ ಘೋಷಿಸಿತು. ಚಾಟ್ಜಿಪಿಟಿ ಪ್ರೊ, ಎಂಟರ್ಪ್ರೈಸ್ ಮತ್ತು ತಂಡದ ಚಂದಾದಾರರಿಗೆ ಲಭ್ಯವಿರುವ ಈ ಸಾಫ್ಟ್ವೇರ್ ಎಂಜಿನಿಯರಿಂಗ್ ಏಜೆಂಟ್ ಕ್ಲೌಡ್ನಲ್ಲಿ ಕಾರ್ಯನಿರ್ವಹಿಸುತ್ತದೆ ಮತ್ತು ಎಂಜಿನಿಯರ್ಗಳಿಗೆ “ವರ್ಚುವಲ್ ಸಹೋದ್ಯೋಗಿ” ಯಾಗಿ ಕಾರ್ಯನಿರ್ವಹಿಸಬಹುದು, ಕೋಡ್ ಬರೆಯಲು, ದೋಷಗಳನ್ನು ಸರಿಪಡಿಸಲು ಅವರಿಗೆ ಸಹಾಯ ಮಾಡುತ್ತದೆ – ಎಲ್ಲವೂ ಅಸಾಧಾರಣ ವೇಗದಲ್ಲಿ. ಓಪನ್ಎಐ ಸಿಇಒ ಸ್ಯಾಮ್ ಆಲ್ಟ್ಮನ್ ಸಾಮಾಜಿಕ ಮಾಧ್ಯಮಕ್ಕೆ ಇತ್ತೀಚಿನ o3 ತಾರ್ಕಿಕ ಮಾದರಿಯಿಂದ ನಡೆಸಲ್ಪಡುವ ಉತ್ಪನ್ನದ ಸಂಶೋಧನಾ ಪೂರ್ವವೀಕ್ಷಣೆಯನ್ನು ಘೋಷಿಸಿದರು. ಇಂದು ನಾವು ಕೋಡೆಕ್ಸ್ ಅನ್ನು ಪರಿಚಯಿಸುತ್ತಿದ್ದೇವೆ. ಇದು ಕ್ಲೌಡ್ನಲ್ಲಿ ಚಲಿಸುವ ಮತ್ತು ನಿಮಗಾಗಿ ಕಾರ್ಯಗಳನ್ನು ಮಾಡುವ ಸಾಫ್ಟ್ವೇರ್ ಎಂಜಿನಿಯರಿಂಗ್ ಏಜೆಂಟ್ ಆಗಿದೆ. ದೋಷವನ್ನು ಸರಿಪಡಿಸುವ ಹೊಸ ವೈಶಿಷ್ಟ್ಯವನ್ನು ಬರೆಯುವಂತಹವು. ನೀವು ಅನೇಕ ಕಾರ್ಯಗಳನ್ನು ಸಮಾನಾಂತರವಾಗಿ ಚಲಾಯಿಸಬಹುದು ಎಂದು ಆಲ್ಟ್ಮನ್ X (ಹಿಂದೆ ಟ್ವಿಟರ್) ನಲ್ಲಿ ಬರೆದಿದ್ದಾರೆ. https://twitter.com/sama/status/1923398457747787817 ಓಪನ್ಎಐ ಪ್ರಕಾರ,…
ಬೆಂಗಳೂರು: 2025ರ ಮೇಲೆ ತಿಂಗಳಲ್ಲಿ ನಡೆಯಲಿರುವಂತ ಎಸ್ ಎಸ್ ಎಲ್ ಸಿ ಪರೀಕ್ಷೆ-2ಕ್ಕೆ ಹಾಜರಾಗುತ್ತಿರುವಂತ ವಿದ್ಯಾರ್ಥಿಗಳಿಗೆ ಅಂತಿಮ ಪ್ರವೇಶ ಪತ್ರವನ್ನು ಬಿಡುಗಡೆ ಮಾಡಲಾಗಿದೆ. ಈ ಸಂಬಂಧ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯು ಸುತ್ತೋಲೆ ಹೊರಡಿಸಿದ್ದು, 2025ರ ಮೇ ಮಾಹೆಯಲ್ಲಿ ನಡೆಯುವ ಎಸ್.ಎಸ್.ಎಲ್.ಸಿ ಪರೀಕ್ಷೆ-2ಕ್ಕೆ ಹಾಜರಾಗುತ್ತಿರುವ 2025ರ ಪರೀಕ್ಷೆ-1ಕ್ಕೆ ಗೈರು ಹಾಜರಾದ / ಪೂರ್ಣಗೊಳಿಸಲಾಗಿಲ್ಲದ [Not Completed] / ಹಿಂದಿನ ಸಾಲಿನಲ್ಲಿ ಅನುತ್ತೀರ್ಣರಾದ ಹಾಗೂ ಫಲಿತಾಂಶ ಉತ್ತಮಪಡಿಸಿಕೊಳ್ಳುವ ಅಭ್ಯರ್ಥಿಗಳ ಅಂತಿಮ ಪ್ರವೇಶ ಪತ್ರಗಳನ್ನು ದಿನಾಂಕ:16.05.2025 ರಂದು ಮಂಡಳಿಯ ಜಾಲತಾಣದ ಶಾಲಾ ಲಾಗಿನ್ನಲ್ಲಿ ಅಪ್ಲೋಡ್ ಮಾಡಲಾಗುವುದು. ಶಾಲಾ ಮುಖ್ಯೋಪಾಧ್ಯಾಯರು ವಿದ್ಯಾರ್ಥಿಗಳ ಪ್ರವೇಶ ಪತ್ರಗಳನ್ನು ಮಂಡಳಿಯ ಜಾಲತಾಣದ ಶಾಲಾ ಲಾಗಿನ್ ಮೂಲಕ ಡೌನ್ಲೋಡ್ ಮಾಡಿಕೊಂಡು ವಿದ್ಯಾರ್ಥಿಗಳಿಗೆ ಸಕಾಲದಲ್ಲಿ ವಿತರಿಸುವುದು. ಒಂದು ವೇಳೆ ಏನಾದರೂ ವ್ಯತ್ಯಯಗಳು ಕಂಡು ಬಂದಲ್ಲಿ ಕೂಡಲೇ ಮಂಡಳಿಯ ಸಂಬಂಧಿಸಿದ ಪರಿಶೀಲನಾ ಶಾಖೆಯ ಶಾಖಾಧಿಕಾರಿಗಳ ಗಮನಕ್ಕೆ ತಂದು ಸರಿಪಡಿಸಿಕೊಂಡು ವಿದ್ಯಾರ್ಥಿಗಳಿಗೆ ಸಕಾಲದಲ್ಲಿ ವಿತರಿಸುವುದು. ತಮ್ಮ ಶಾಲೆಯ ಮುಖಾಂತರ ನೋಂದಾಯಿಸಿದ ವಿದ್ಯಾರ್ಥಿಗಳ ಸಂಖ್ಯೆಗೆ…
ನವದೆಹಲಿ: ಕರ್ನಾಟಕಕ್ಕೆ ಹೆಚ್ಚಿನ ಎಲೆಕ್ಟ್ರಿಕ್ ಬಸ್ ನೀಡಲು ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರನ್ನು ಭೇಟಿಯಾದಂತ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಮನವಿ ಮಾಡಿದ್ದಾರೆ. ದೆಹಲಿಯಲ್ಲಿ ಕೇಂದ್ರ ಬೃಹತ್ ಕೈಗಾರಿಕಾ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರನ್ನು ಭೇಟಿಯಾದಂತ ಅವರು, ಈ ಕೆಳಗಿನ ಅಂಶಗಳನ್ನು ಮನವರಿಕೆ ಮಾಡಿಕೊಟ್ಟರು. 1. PM e Drive ಯೋಜನೆಯಡಿಯಲ್ಲಿ GCC ಮಾದರಿಯಲ್ಲಿ ಅತೀ ಹೆಚ್ಚು ಎಲೆಕ್ಟ್ರಿಕ್ ಬಸ್ಸುಗಳನ್ನು ಬಿ.ಎಂ.ಟಿ.ಸಿ ಗೆ ಒದಗಿಸುವುದು. ಬೆಂಗಳೂರು ನಗರವು ವೇಗವಾಗಿ ಬೆಳೆಯುತ್ತಿದ್ದು, ಸಾರ್ವಜನಿಕರಿಗೆ ಸಮಗ್ರ ಸಾರಿಗೆ ಸೌಲಭ್ಯದೊಂದಿಗೆ last mile connectivity ಮತ್ತು ಮಾಲಿನ್ಯ ತಗ್ಗಿಸಲು ಅನುವಾಗುವಂತೆ ಎಲೆಕ್ಟ್ರಿಕ್ ಬಸ್ಸುಗಳನ್ನು ಅತ್ಯಧಿಕ ಸಂಖ್ಯೆಯಲ್ಲಿ ಒದಗಿಸುವುದು. 2. ಎಲೆಕ್ಟ್ರಿಕ್ ಬಸ್ ಘಟಕ ಮತ್ತು ಚಾರ್ಜಿಂಗ್ ಸ್ಟೇಷನ್ ಗಳನ್ನು ಸ್ಥಾಪಿಸಲು ಆರ್ಥಿಕ ಅನುದಾನ ನೀಡುವುದು ಮತ್ತು ಸದರಿ ಬಸ್ಸು ಗಳಿಗೆ ಚಾಲಕರನ್ನು ಖಾಸಗಿಯವರು ಒದಗಿಸುತ್ತಿದ್ದು, ಸಂಸ್ಥೆಯ ಚಾಲಕರನ್ನೇ ಉಪಯೋಗಿಸಿಕೊಳ್ಳಲು ಅವಕಾಶ ಮಾಡಿಕೊಡುವುದು. 3. GST ಸುಧಾರಣೆಯ ಮೂಲಕ ಕೈಗೆಟುಕುವಿಕೆಯನ್ನು ಸಬಲೀಕರಣಗೊಳಿಸುವುದು: ಪ್ರಸ್ತುತ, ಯೋಜನೆಯಡಿಯಲ್ಲಿ…
ಬೆಂಗಳೂರು: ಬಳ್ಳಾರಿ ಜನರ ಸಮಸ್ಯೆ ಆಲಿಸದ ಜಮೀರ್ ವಿರುದ್ಧ ಆಕ್ರೋಶ ವ್ಯಕ್ತವಾಗಿದೆ. ಬೇಜವಾಬ್ದಾರಿ ಉಸ್ತುವಾರಿ ಸಚಿವರ ಬದಲಾವಣೆ ಪಟ್ಟು ಹಿಡಿಯಲಾಗಿದೆ ಎಂಬುದಾಗಿ ಜೆಡಿಎಸ್ ಕಿಡಿಕಾರಿದೆ. ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದು, ಬಳ್ಳಾರಿ ಉಸ್ತುವಾರಿ ಸಚಿವ ಜಮೀರ್ ಅಹ್ಮದ್ ಖಾನ್ ವಿರುದ್ಧ ಜಿಲ್ಲೆಯ ಮತದಾರರ ಆಕ್ರೋಶದ ಕಟ್ಟೆ ಒಡೆದಿದೆ. ಸೂಟು ಬೂಟು ತೊಟ್ಟು, ಪಟಾಲಂ ಕಟ್ಟಿಕೊಂಡು ಪ್ರತಿ ದಿನ ರೀಲ್ಸ್ ಮಾಡಿಕೊಂಡು ಬಿಲ್ಡಪ್ ಕೊಡುತ್ತಿರುವ, ಬೇಜವಾಬ್ದಾರಿ ಮಂತ್ರಿ ಜಮೀರ್ ವಿರುದ್ಧ ಬಳ್ಳಾರಿ ಜನರು ಸಿಡಿದೆದ್ದಿದ್ದಾರೆ ಎಂದು ತಿಳಿಸಿದೆ. ರೈತರು, ಜನರ ಸಮಸ್ಯೆಗಳನ್ನು ಆಲಿಸುತ್ತಿಲ್ಲ, ಅಹವಾಲುಗಳನ್ನು ಸ್ವೀಕರಿಸುತ್ತಿಲ್ಲ ಎಂದು ಖುದ್ದು ಸಿಎಂ ಸಿದ್ಧರಾಮಯ್ಯ ಬಳಿಯೇ ಸಾರ್ವಜನಿಕರು ಅಳಲು ತೋಡಿಕೊಂಡಿದ್ದಾರೆ. ಬಳ್ಳಾರಿ ಜಿಲ್ಲೆಯ ಉಸ್ತುವಾರಿ ಮಂತ್ರಿ ಜಮೀರ್ ಬದಲಾವಣೆ ಆಗಬೇಕು ಎಂದು ಜನರು ಆಗ್ರಹಿಸಿರುವುದು ಅದಕ್ಷ ಕಾಂಗ್ರೆಸ್ ಸರ್ಕಾರದ ದುರಾಡಳಿತಕ್ಕೆ ಸಾಕ್ಷಿ ಎಂಬುದಾಗಿ ವೀಡಿಯೋ ಸಹಿತ ಎಕ್ಸ್ ನಲ್ಲಿ ಪೋಸ್ಟ್ ಮಾಡಿದೆ. https://twitter.com/JanataDal_S/status/1923736482780676199 https://kannadanewsnow.com/kannada/alert-public-beware-if-you-make-this-mistake-fraudsters-will-use-a-sim-card-in-your-name/ https://kannadanewsnow.com/kannada/union-minister-hdk-met-transport-minister-ramalinga-reddy-petition-for-approval-to-purchase-electric-buses/
ನವದೆಹಲಿ: ಕೇಂದ್ರ ಬೃಹತ್ ಕೈಗಾರಿಕಾ ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರನ್ನು ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ದೆಹಲಿಯಲ್ಲಿ ಭೇಟಿಯಾದರು. ಈ ವೇಳೆ ಸಾರಿಗೆ ಸಂಸ್ಥೆಗಳಿಗೆ ಹೆಚ್ಚಿನ ಎಲೆಕ್ಟ್ರಿಕ್ ಬಸ್ಸುಗಳನ್ನು ನೀಡಲು ಮನವಿ ಮಾಡಿದರು. PM e-Drive ಯೋಜನೆಯಡಿಯಲ್ಲಿ , ಕೇಂದ್ರ ಸರ್ಕಾರದ ಭಾರೀ ಕೈಗಾರಿಕೆ ಸಚಿವಾಲಯದ ಸಚಿವ ಹೆಚ್.ಡಿ.ಕುಮಾರ್ ಸ್ವಾಮಿರವರನ್ನು ಭೇಟಿಯಾಗಿ ಈ ಕೆಳಕಂಡ ಅಂಶಗಳ ಬಗ್ಗೆ ಅವರ ಗಮನಕ್ಕೆ ತಂದು ಅನುಮತಿ ನೀಡುವಂತೆ ಕೋರಲಾಯಿತು. 1. PM e Drive ಯೋಜನೆಯಡಿಯಲ್ಲಿ GCC ಮಾದರಿಯಲ್ಲಿ ಅತೀ ಹೆಚ್ಚು ಎಲೆಕ್ಟ್ರಿಕ್ ಬಸ್ಸುಗಳನ್ನು ಬಿ.ಎಂ.ಟಿ.ಸಿ ಗೆ ಒದಗಿಸುವುದು. ಬೆಂಗಳೂರು ನಗರವು ವೇಗವಾಗಿ ಬೆಳೆಯುತ್ತಿದ್ದು, ಸಾರ್ವಜನಿಕರಿಗೆ ಸಮಗ್ರ ಸಾರಿಗೆ ಸೌಲಭ್ಯದೊಂದಿಗೆ last mile connectivity ಮತ್ತು ಮಾಲಿನ್ಯ ತಗ್ಗಿಸಲು ಅನುವಾಗುವಂತೆ ಎಲೆಕ್ಟ್ರಿಕ್ ಬಸ್ಸುಗಳನ್ನು ಅತ್ಯಧಿಕ ಸಂಖ್ಯೆಯಲ್ಲಿ ಒದಗಿಸುವುದು. 2. ಎಲೆಕ್ಟ್ರಿಕ್ ಬಸ್ ಘಟಕ ಮತ್ತು ಚಾರ್ಜಿಂಗ್ ಸ್ಟೇಷನ್ ಗಳನ್ನು ಸ್ಥಾಪಿಸಲು ಆರ್ಥಿಕ ಅನುದಾನ ನೀಡುವುದು ಮತ್ತು ಸದರಿ ಬಸ್ಸು ಗಳಿಗೆ ಚಾಲಕರನ್ನು ಖಾಸಗಿಯವರು…
ಬೆಂಗಳೂರು: ಸರ್ಕಾರಿ ಆಸ್ಪತ್ರೆಯಲ್ಲೇ ಉಚಿತವಾಗಿ ಔಷಧಿ ವಿತರಣೆ ಮಾಡುತ್ತಿರುವಾಗ, ತನ್ನ ಆವರಣದಲ್ಲೇ ದುಡ್ಡಿಗೆ ಔಷಧಿ ಮಾರಾಟ ಮಾಡುತ್ತಿದ್ದಂತ ಜನೌಷಧಿ ಕೇಂದ್ರಗಳನ್ನು ಬಂದ್ ಮಾಡುವಂತೆ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ. ಈ ಕುರಿತಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿನ ಸಮುದಾಯ ಆರೋಗ್ಯ ಕೇಂದ್ರ, ತಾಲ್ಲೂಕು ಆಸ್ಪತ್ರೆ ಹಾಗೂ ಎಲ್ಲಾ ಜಿಲ್ಲಾ ಆಸ್ಪತ್ರೆಗಳಲ್ಲಿ ಸುಮೂರು 200 ಜನೌಷಧಿ ಮಳಿಗೆಗಳನ್ನು ಸ್ಥಾಪಿಸಲು ಸರ್ಕಾರದ ಅನುಮತಿ ನೀಡಿ ಆದೇಶಿಸಲಾಗಿರುತ್ತದೆ ಎಂದು ತಿಳಿಸಿದೆ. ಸರ್ಕಾರಿ ಆಸ್ಪತ್ರೆಯಲ್ಲಿನ ವೈದ್ಯರುಗಳು ಬ್ರಾಂಡೆಡ್ ಔಷಧಿಗಳನ್ನು ರೋಗಿಗಳಿಗೆ ಸಲಹಾ ಚೀಟಿ (Prescription) ರೂಪದಲ್ಲಿ ನೀಡುವುದನ್ನು ನಿಷೇಧಿಸಲಾಗಿದೆ ಹಾಗೂ ಆರೋಗ್ಯ ಸಂಸ್ಥೆಗಳಲ್ಲಿ ಲಭ್ಯವಿರದ ಔಷಧಿಗಳನ್ನು ಸಂಬಂಧಿಸಿದ ವೈದ್ಯರುಗಳು, ರೋಗಿಗಳಿಗೆ ನೀಡುವ ಸಲಹಾ ಚೀಟಿ (Prescription) ಗಳನ್ನು Generic ಹೆಸರಿನಲ್ಲಿ ಬರೆಯಲು ಕಡ್ಡಾಯವಾಗಿ ಸೂಚಿಸಿದೆ. ಈ ಔಷಧಿಗಳನ್ನು ಆರೋಗ್ಯ ಸಂಸ್ಥೆಯ ಆವರಣದಲ್ಲಿ ಸ್ಥಾಪಿಸಿರುವ ಜನೌಷಧಿ ಮಳಿಗೆಯಲ್ಲಿ ಕಡಿಮೆ ದರದಲ್ಲಿ ಔಷಧಿ…
ಶಿವಮೊಗ್ಗ : 2025-26 ನೇ ಸಾಲಿನ ಸಮಾಜ ಕಲ್ಯಾಣ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವ್ಯಾಪ್ತಿಯ ಕವಶಿಸಸಂ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಮೊರಾರ್ಜಿ ದೇಸಾಯಿ/ ಅಟಲ್ ಬಿಹಾರಿ ವಾಜಪೇಯಿ ವಸತಿ ವಿಜ್ಞಾನ ಪದವಿಪೂರ್ವ ಕಾಲೇಜುಗಳಿಗೆ ಪ್ರಥಮ ಪಿ.ಯು.ಸಿ. ದಾಖಲಾತಿಗಾಗಿ ಅರ್ಜಿ ಆಹ್ವಾನಿಸಿಲಾಗಿದ್ದು, ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು ಮೇ 20ರವರೆಗೆ ವಿಸ್ತರಿಸಲಾಗಿದೆ. 2024-25 ನೇ ಸಾಲಿನಲ್ಲಿ ಉತ್ತೀರ್ಣರಾದ ಆಸಕ್ತ ಪರಿಶಿಷ್ಟ ಜಾತಿ/ ಪರಿಶಿಷ್ಟ ವರ್ಗ/ ಹಿಂದುಳಿದ ವರ್ಗದ ವಿದ್ಯಾರ್ಥಿಗಳು ಆಯಾ ಮೊರಾರ್ಜಿ ದೇಸಾಯಿ/ ಅಟಲ್ ಬಿಹಾರಿ ವಾಜಪೇಯಿ ವಸತಿ ವಿಜ್ಞಾನ ಪದವಿ ಪೂರ್ವ ಕಾಲೇಜುಗಳಿಗೆ ತೆರಳಿ 02 ಭಾವಚಿತ್ರ, ಎಸ್.ಎಸ್.ಎಲ್.ಸಿ ಪ್ರಾವಿಷನಲ್ ಅಂಕಪಟ್ಟಿ, ಎಸ್ಎಟಿಎಸ್ ನಂಬರ್ ಆಧಾರ್ ಕಾರ್ಡ್ ನಕಲು ಪ್ರತಿ, ಚಾಲ್ತಿಯಲ್ಲಿರುವ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ನಕಲು ಪ್ರತಿ, ಪೋಷಕರ ಮತ್ತು ಹಿಂದಿನ ಶಾಲೆಯ ಮುಖ್ಯೋಪಾಧ್ಯಾಯರ ಮೊಬೈಲ್ ಸಂಖ್ಯೆ, ವಿಶೇಷ ಪ್ರಮಾಣ ಪತ್ರ (ಇದ್ದಲ್ಲಿ) ಇವುಗಳೊಂದಿಗೆ ಮೇ 20 ರೊಳಗಾಗಿ…
ಶಿವಮೊಗ್ಗ : ಶಿವಮೊಗ್ಗದ ವಿಷ್ಣುಮೂರ್ತಿ ಕೇಕುಡ ಬಿನ್ ಶ್ರೀನಿವಾಸ ಕೇಕುಡ ಎಂಬುವವರು ಮ್ಯಾನೇಜರ್, ಕೆನರಾ ಬ್ಯಾಂಕ್, ಶಿವಮೂರ್ತಿ ಸರ್ಕಲ್, ಶಿವಮೊಗ್ಗ ಹಾಗೂ ಮ್ಯಾನೇಜರ್, ಕೆನರಾ ಬ್ಯಾಂಕ್, ಕಾನ್ಕಾರ್ಡ್ ಡಿವಿಷನ್, ಬೆಂಗಳೂರು ಇವರುಗಳ ವಿರುದ್ದ ಕ್ರೆಡಿಟ್ ಕಾರ್ಡ್ ಸಂಬAಧ ಸೇವಾ ನ್ಯೂನತೆ ಕುರಿತು ವಕೀಲರ ಮೂಲಕ ಸಲ್ಲಿಸಿದ ದೂರನ್ನು ಆಲಿಸಿದ ಜಿಲ್ಲಾ ಗ್ರಾಹಕರ ವ್ಯಾಜ್ಯಗಳ ಪರಿಹಾರ ಆಯೋಗವು ಕೆನರಾ ಬ್ಯಾಂಕ್ ದೂರುದಾರರಿಗೆ ಸೂಕ್ತ ಪರಿಹಾರ ನೀಡುವಂತೆ ತೀರ್ಪು ನೀಡಿದೆ. ದೂರುದಾರರು ಏಪ್ರಿಲ್-2024 ರಂದು ತಮ್ಮ ಕೆನರಾ ಬ್ಯಾಂಕ್ ಸೇವಿಂಗ್ಸ್ ಅಕೌಂಟ್ ಕ್ರೆಡಿಟ್ ಕಾರ್ಡ್ ಹ್ಯಾಕ್ ಆಗಿ ಒಟ್ಟು ರೂ. 1.29 ಲಕ್ಷ ಕಡಿತಗೊಂಡಿದ್ದು, ಈ ಬಗ್ಗೆ ಬ್ಯಾಂಕ್ಗೆ ಸರಿಪಡಿಸುವಂತೆ ಹಲವಾರು ಬಾರಿ ದೂರು ನೀಡಿದರೂ ಕ್ರಮ ಕೈಗೊಳ್ಳದೇ ತಮ್ಮ ಎಸ್.ಬಿ.ಖಾತೆಗೆ ಮೊತ್ತವನ್ನು ಮರುಜಮೆ ಮಾಡಿಲ್ಲವೆಂದು ಆಯೋಗಕ್ಕೆ ದೂರು ನೀಡಿರುತ್ತಾರೆ. ಆಯೋಗವು ದೂರನ್ನು ಪರಿಶೀಲಿಸಿ ನೀಡಿದ ನೋಟಿಸ್ಗೆ ಎದುರುದಾರರು ವಕೀಲರ ಮೂಲಕ ಹಾಜರಾಗಿ ದೂರುದಾರರೇ ತಮ್ಮ ಓ.ಟಿ.ಪಿ ಅಥವಾ ಲಿಂಕ್ನ್ನು ಶೇರ್ ಮಾಡಿರುವುದರಿಂದ ಈ…
ಬೆಂಗಳೂರು: ಸರ್ಕಾರಿ ಆಸ್ಪತ್ರೆಯಲ್ಲೇ ಉಚಿತವಾಗಿ ಔಷಧಿ ವಿತರಣೆ ಮಾಡುತ್ತಿರುವಾಗ, ತನ್ನ ಆವರಣದಲ್ಲೇ ದುಡ್ಡಿಗೆ ಔಷಧಿ ಮಾರಾಟ ಮಾಡುತ್ತಿದ್ದಂತ ಜನೌಷಧ ಮಳಿಗೆ ಬಂದ್ ಗೆ ರಾಜ್ಯ ಸರ್ಕಾರ ಆದೇಶಿಸಿದೆ. ಈ ಮೂಲಕ ಸರ್ಕಾರಿ ಆಸ್ಪತ್ರೆ ಆವರಣದಲ್ಲಿರುವ ಜನೌಷಧ ಕೇಂದ್ರಗಳನ್ನು ಬಂದ್ ಮಾಡುವಂತೆ ಆದೇಶಿಸಿದೆ. ಈ ಕುರಿತಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿನ ಸಮುದಾಯ ಆರೋಗ್ಯ ಕೇಂದ್ರ, ತಾಲ್ಲೂಕು ಆಸ್ಪತ್ರೆ ಹಾಗೂ ಎಲ್ಲಾ ಜಿಲ್ಲಾ ಆಸ್ಪತ್ರೆಗಳಲ್ಲಿ ಸುಮೂರು 200 ಜನೌಷಧಿ ಮಳಿಗೆಗಳನ್ನು ಸ್ಥಾಪಿಸಲು ಸರ್ಕಾರದ ಅನುಮತಿ ನೀಡಿ ಆದೇಶಿಸಲಾಗಿರುತ್ತದೆ ಎಂದು ತಿಳಿಸಿದೆ. ಸರ್ಕಾರಿ ಆಸ್ಪತ್ರೆಯಲ್ಲಿನ ವೈದ್ಯರುಗಳು ಬ್ರಾಂಡೆಡ್ ಔಷಧಿಗಳನ್ನು ರೋಗಿಗಳಿಗೆ ಸಲಹಾ ಚೀಟಿ (Prescription) ರೂಪದಲ್ಲಿ ನೀಡುವುದನ್ನು ನಿಷೇಧಿಸಲಾಗಿದೆ ಹಾಗೂ ಆರೋಗ್ಯ ಸಂಸ್ಥೆಗಳಲ್ಲಿ ಲಭ್ಯವಿರದ ಔಷಧಿಗಳನ್ನು ಸಂಬಂಧಿಸಿದ ವೈದ್ಯರುಗಳು, ರೋಗಿಗಳಿಗೆ ನೀಡುವ ಸಲಹಾ ಚೀಟಿ (Prescription) ಗಳನ್ನು Generic ಹೆಸರಿನಲ್ಲಿ ಬರೆಯಲು ಕಡ್ಡಾಯವಾಗಿ ಸೂಚಿಸಿದೆ. ಈ ಔಷಧಿಗಳನ್ನು ಆರೋಗ್ಯ…
ಬೆಂಗಳೂರು : “ಪಕ್ಷದ ಮುಖಂಡರ ಒತ್ತಾಯದ ಮೇರೆಗೆ ಬೆಂಗಳೂರು ಸಹಕಾರ ಹಾಲು ಒಕ್ಕೂಟದ (ಬಮೂಲ್) ಕನಕಪುರ ನಿರ್ದೇಶಕ ಸ್ಥಾನಕ್ಕೆ ಸ್ಪರ್ಧಿಸಿದ್ದೇನೆ” ಎಂದು ನಿಕಟಪೂರ್ವ ಸಂಸದ ಡಿ.ಕೆ.ಸುರೇಶ್ ಅವರು ತಿಳಿಸಿದರು. ಬಮೂಲ್ ಕಚೇರಿಯಲ್ಲಿ ಶನಿವಾರ ನಾಮಪತ್ರ ಸಲ್ಲಿಕೆ ನಂತರ ಹಾಗೂ ಅದಕ್ಕೂ ಮುನ್ನ ತಮ್ಮ ಸದಾಶಿವನಗರ ನಿವಾಸದಲ್ಲಿ ಡಿ.ಕೆ. ಸುರೇಶ್ ಅವರು ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯೆ ನೀಡಿದರು. “ಬೆಂಗಳೂರು ಸಹಕಾರ ಹಾಲು ಒಕ್ಕೂಟದ ಚುನಾವಣೆಯಲ್ಲಿ ಎಲ್ಲಾ ಹಿರಿಯ ನಾಯಕರು, ಶಾಸಕರು ಹಾಗೂ ಹಾಲು ಉತ್ಪಾದಕರ ಸಲಹೆ ಹಾಗೂ ಪಕ್ಷದ ನಾಯಕರ ಸೂಚನೆ ಮೇರೆಗೆ ಇಂದು ಜಿಲ್ಲಾ ಮುಖಂಡರ ಸಮ್ಮುಖದಲ್ಲಿ ಕನಕಪುರ ಕ್ಷೇತ್ರದ ನಿರ್ದೇಶಕ ಸ್ಥಾನಕ್ಕೆ ಅರ್ಜಿ ಸಲ್ಲಿಸಿದ್ದೇನೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಹಾಗೂ ರಾಮನಗರ ಜಿಲ್ಲೆಯ ಮುಖಂಡರ ತೀರ್ಮಾನ ಹಾಗೂ ಸಹಕಾರದೊಂದಿಗೆ ನಾಮಪತ್ರ ಸಲ್ಲಿಸಲಾಗಿದೆ” ಎಂದು ತಿಳಿಸಿದರು. ವಿಶ್ರಾಂತಿ ಅವಧಿ ಮುಗಿಸಿದ ಮೇಲೆ ಕೆಎಂಎಫ್ ಅಧ್ಯಕ್ಷ ಸ್ಥಾನಕ್ಕೆ ಸುರೇಶ್ ಕಣ್ಣಿಟ್ಟಿದ್ದಾರೆ ಎಂದು ಕೇಳಿದಾಗ, “ಸಧ್ಯಕ್ಕೆ ಕೆಎಂಎಫ್ ವಿಚಾರ ಚರ್ಚೆಯಲ್ಲಿಲ್ಲ. ಕಳೆದ 10 ವರ್ಷಗಳಿಂದ…