Subscribe to Updates
Get the latest creative news from FooBar about art, design and business.
Author: kannadanewsnow09
ತುಮಕೂರು: ಇಲ್ಲಿನ ಸಿದ್ದಗಂಗಾ ಮಠಕ್ಕೆ ಎಕ್ಕ ಚಿತ್ರತಂಡ ಭೇಟಿ ನೀಡಿದ್ದ ವೇಳೆಯಲ್ಲಿ ಮಹಾ ಯಡವಟ್ಟು ಉಂಟಾಗಿದೆ. ಬೌನ್ಸರ್ ಕಾರು ಮಹಿಳೆಯೊಬ್ಬರಿಗೆ ಡಿಕ್ಕಿಯಾದ ಪರಿಣಾಮ ಆಕೆಯ ಕಾಲಿಗೆ ಗಂಭೀರವಾಗಿ ಗಾಯವಾಗಿದೆ. ಹೀಗಿದ್ದರೂ ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸದೇ ಅಮಾನುಷರಂತೆ ತೆರಳಿರೋ ಆರೋಪ ಕೇಳಿ ಬಂದಿದೆ. ನಟ ಯುವರಾಜ್ ಕುಮಾರ್ ಅವರ ಎಕ್ಕ ಚಿತ್ರತಂಡವು ತುಮಕೂರಿನ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿದೆ. ಈ ವೇಳೆಯಲ್ಲಿ ಬೌನ್ಸರ್ ಕಾರು ಅಲ್ಲಿಯೇ ಇದ್ದಂತ ದಾರಿಯಲ್ಲಿನ ಮಹಿಳೆಯೊಬ್ಬರಿಗೆ ಡಿಕ್ಕಿಯಾಗಿದೆ. ಈ ಅಪಘಾತದಲ್ಲಿ ಮಹಿಳೆಯ ಕಾಲಿಗೆ ಗಂಭೀರ ಪೆಟ್ಟಾಗಿದೆ. ಆ ಮಳಿಗೆ ಗಾಯವಾಗಿ ನರಳಾಡುತ್ತ ತಮ್ಮನ್ನು ಆಸ್ಪತ್ರೆಗೆ ಸೇರಿಸುವಂತೆ ಕೋರಿಕೊಂಡರೂ ಗಮನಸಿದೇ ಎಕ್ಕ ಚಿತ್ರತಂಡ ಸ್ಥಳದಿಂದ ತೆರಳಿದ್ದಾಗಿ ಹೇಳಲಾಗುತ್ತಿದೆ. ಅಂದಹಾಗೇ ಸಿದ್ದಗಂಗಾ ಮಠಕ್ಕೆ ಶಾಲೆಗೆ ಬಿಟ್ಟು ಹೋಗೋದಕ್ಕೆ ಮಹಿಳೆ ಬಂದಿದ್ದರು. ತಮ್ಮ ಮಗುವನ್ನು ಶಾಲೆಗೆ ಬಿಟ್ಟು ವಾಪಾಸ್ ಆಗುತ್ತಿದಂತ ವೇಳೆಯಲ್ಲಿ ಎಕ್ಕ ಚಿತ್ರತಂಡ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿತ್ತು. ಈ ಸಂದರ್ಭದಲ್ಲೇ ಬೌನ್ಸರ್ ಕಾರು ಮಹಿಳೆಗೆ ಡಿಕ್ಕಿಯಾಗಿದೆ. ಈ ಡಿಕ್ಕಿಯಲ್ಲಿ ಬಳ್ಳಾರಿ…
ಮುಂಬೈ: ಇಲ್ಲಿನ ಅಮೇರಿಕಾ ರಾಯಭಾರ ಕಚೇರಿಗೆ ಬಾಂಬ್ ಬೆದರಿಕೆ ಕರೆ ಬಂದಿದೆ. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಪೊಲೀಸರು ತಪಾಸಣೆ ನಡೆಸುತ್ತಿದ್ದಾರೆ. ಮುಂಬೈನಲ್ಲಿರುವಂತ ಅಮೇರಿಕಾ ರಾಯಭಾರ ಕಚೇರಿಗೆ ಕಚೇರಿಯನ್ನು ಸ್ಪೋಟಿಸುವುದಾಗಿ ಬಾಂಬ್ ಬೆದರಿಕೆ ಕರೆ ಮಾಡಲಾಗಿದೆ. ಈ ಕೂಡಲೇ ಪೊಲೀಸರು ಅಲರ್ಟ್ ಆಗಿದ್ದು, ಬಾಂಬ್ ನಿಷ್ಕ್ರೀಯ ದಳ, ಪತ್ತೆಯ ಶ್ವಾನ ದಳದಿಂದ ಸ್ಥಳದಲ್ಲಿ ಶೋಧ ಕಾರ್ಯಾಚರಣೆ ನಡೆಸಲಾಗುತ್ತಿದೆ. ಬಾಂಬ್ ಬೆದರಿಕೆ ಕರೆ ಬಗ್ಗೆ ಮುಂಬೈನ ಬಿಕೆಸಿ ಪೊಲೀಸ್ ಠಾಣೆಗೆ ಮಾಹಿತಿ ನೀಡಲಾಗಿದೆ. ಸ್ಥಳಕ್ಕೆ ಪೊಲೀಸರು, ಶ್ವಾನದಳದಿಂದ ಭೇಟಿ ನೀಡಿ, ಬಾಂಬ್ ಪತ್ತೆ ಕಾರ್ಯದಲ್ಲಿ ತೊಡಗಿದ್ದಾರೆ. https://kannadanewsnow.com/kannada/invitation-to-apply-for-admission-to-6th-grade-in-jawahar-navodaya-vidyalayas-july-29-is-the-last-date/ https://kannadanewsnow.com/kannada/breaking-mobile-attendance-is-mandatory-for-doctors-and-staff-at-all-health-centers-in-the-state-dinesh-gundu-rao/
ಬೆಂಗಳೂರು: ಶಿಕ್ಷಣ ಸಚಿವಾಲಯದ ಅಧೀನ ಸ್ವಾಯತ್ತ ಸಂಸ್ಥೆ, ಕೇಂದ್ರ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ವಿಭಾಗದ ವತಿಯಿಂದ ಜವಾಹರ ನವೋದಯ ವಿದ್ಯಾಲಯಗಳಲ್ಲಿ 2026-27ನೇ ಸಾಲಿಗೆ ಆಯ್ಕೆ ಪರೀಕ್ಷೆಯ ಮೂಲಕ 6ನೇ ತರಗತಿಗೆ ಪ್ರವೇಶಕ್ಕಾಗಿ ಅರ್ಹ ವಿದ್ಯಾರ್ಥಿಗಳಿಂದ ಆನ್ಲೈಸನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು 2025 ನೇ ಜುಲೈ 29 ಕೊನೆಯ ದಿನಾಂಕವಾಗಿದೆ. ಅರ್ಜಿ ಸಲ್ಲಿಸಬಯಸುವ ವಿದ್ಯಾರ್ಥಿಗಳು ಕಾರ್ಯನಿರ್ವಹಿಸುತ್ತಿರುವ ಸಂಬಂಧಿಸಿದ ಜವಾಹರ ನವೋದಯ ವಿದ್ಯಾಲಯಗಳ ಆಯಾ ಜಿಲ್ಲೆಯ ನಿವಾಸಿಗಳು ಆಗಿರಬೇಕು ಮತ್ತು 2025-26 ನೇ ಶೈಕ್ಷಣಿಕ ವರ್ಷದಲ್ಲಿ ಅದೇ ಜಿಲ್ಲೆಯ ಸರ್ಕಾರಿ/ ಸರ್ಕಾರದಿಂದ ಮಾನ್ಯತೆ ಪಡೆದಿರುವ ಶಾಲೆಯಲ್ಲಿ 5ನೇ ತರಗತಿಯಲ್ಲಿ ಓದುತ್ತಿರಬೇಕು. ವಿದ್ಯಾರ್ಥಿಯು 3 ಮತ್ತು 4 ನೇ ತರಗತಿಯ ಪೂರ್ಣ ಶೈಕ್ಷಣಿಕ ವರ್ಷವನ್ನು ಸರ್ಕಾರಿ/ಸರ್ಕಾರದಿಂದ ಮಾನ್ಯತೆ ಪಡೆದಿರುವ ಶಾಲೆಯಲ್ಲಿ ಪೂರ್ಣಾವಧಿ ಶಾಲಾ ಶಿಕ್ಷಣ ಪಡೆದು ತೇರ್ಗಡ ಹೊಂದಿರಬೇಕು. ದಿನಾಂಕ:01-05-2014 ರಿಂದ ದಿನಾಂಕ: 31-07-2016 ಮಧ್ಯೆ ಜನಿಸಿದವರಾಗಿರಬೇಕು. ಪ್ರತಿ ಜಿಲ್ಲೆಯಲ್ಲಿ ಸಹ ಶಿಕ್ಷಣ ವಸತಿ ಶಾಲೆಗಳು, ಬಾಲಕ ಮತ್ತು ಬಾಲಕಿಯರಿಗೆ…
ಉತ್ತರ ಕನ್ನಡ: ಜಿಲ್ಲೆಯಲ್ಲಿ ರಾಜ್ಯದಲ್ಲೇ ಶಿಕ್ಷಣಕ್ಕಾಗಿ ಕೆಸರಲ್ಲಿ ನಡಿಗೆಯ ಮನಕಲಕುವಂತ ಮಕ್ಕಳ ಕತೆಯೊಂದಿದೆ. ದಿನಂಪ್ರತಿ ಆ ಶಾಲಾ ಮಕ್ಕಳು ತೆರಳೋದಕನ್ನು ಕಂಡರೇ ಎಂತವರಿಗೂ ಇದೇನಪ್ಪ ಈ ಕಾಲದಲ್ಲೂ ಹೀಗೊಂದು ರಸ್ತೆ ಇದ್ಯಾ ಅನ್ನಿಸುತ್ತದೆ. ಅದು ಎಲ್ಲಿ? ಏನು ಎನ್ನುವ ಬಗ್ಗೆ ಕೇಬಲ್ ನಾಗೇಶ್ ಎನ್ನುವವರ ವರದಿಯನ್ನು ಒಳಗೊಂಡ ಪತ್ರಿಕೆಯ ಸುದ್ದಿಯನ್ನು ಈ ಕೆಳಗೆ ಯಥಾವತ್ತಾಗಿ ಪ್ರಕಟಿಸಲಾಗಿದೆ ಓದಿ. ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲ್ಲೂಕಿನ ಕಿರವತ್ತಿ ಗ್ರಾಮ ಪಂಚಾಯತ್ ವ್ಯಾಪ್ತಿಯ ದೊಡ್ಡ ಯಲವಳ್ಳಿ ಶಾಲೆಗೆ ಸಣ್ಣ ಯಲವಳ್ಳಿ ಗ್ರಾಮದ ಮಕ್ಕಳು ವಿದ್ಯೆ ಕಲಿಯಲು ಹೋಗಬೇಕೆಂದರೆ ಕೆಸರಿನಲ್ಲಿ ಹೆಜ್ಜೆ ಹಾಕಲೇಬೇಕು, ಸಮವಸ್ತ್ರ ರಾಡಿಯಾಗಲೇಬೇಕು ಎಂಬ ನಿಯಮ ಇನ್ನೂ ಮುಂದುವರೆದಿದೆ. ಈ ಶೋಷಣೆಗೆ ಸಮಾದ ಮತ್ತು ಸರ್ಕಾರ ತಲೆ ತಗ್ಗಿಸಬೇಕು ಸಣ್ಣ ಯಲವಳ್ಳಿಯಲ್ಲಿ ಸುಮಾರು 35 ಕುಟುಂಬಗಳು ವಾಸಿಸುತ್ತಿದ್ದು ಕೃಷಿ ಹೈನುಗಾರಿಕೆ ನಂಬಿ ಜೀವನ ಸಾಗಿಸುತ್ತಿದ್ದಾರೆ. ನಮ್ಮ ಪಾಡು ಹೀಗಾಗಿದೆ ಮಕ್ಕಳಾದರು ವಿದ್ಯೆ ಕಲಿಯಲಿ ಎಂಬ ಮಹದಾಸೆಯಿಂದ ಕೂಲಿನಾಲಿ ಮಾಡಿ ಮಕ್ಕಳನ್ನು ಶಾಲೆಗೆ ಕಳಿಸಲಾಗುತ್ತಿದೆ.…
ಬೆಂಗಳೂರು: DCET-25 ಕ್ಕೆ ಆನ್ ಲೈನ್ ಅರ್ಜಿ ಸಲ್ಲಿಕೆ ವೇಳೆ ತಪ್ಪು ಮಾಹಿತಿ ನಮೂದಿಸಿದ್ದರೆ ಅದನ್ನು ಸರಿಪಡಿಸಿಕೊಳ್ಳಲು KEA ಕಚೇರಿಗೆ ಜೂನ್ 18 ಅಥವಾ 19ರಂದು ಖುದ್ದು ಹಾಜರಾಗಬೇಕು ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ಸೂಚಿಸಿದ್ದಾರೆ. ಅಭ್ಯರ್ಥಿಗಳು ಡಿಸಿಇಟಿ-2025ಕ್ಕೆ ಸಲ್ಲಿಸಿದ ಅರ್ಜಿ ಪ್ರತಿ, ಪ್ರವೇಶ ಪತ್ರ, ಪರಿಶೀಲನಾ ಪತ್ರ ಮತ್ತು ಅಗತ್ಯವಾದ ಎಲ್ಲಾ ಮೂಲ ದಾಖಲೆಗಳು ಮತ್ತು ಎಲ್ಲಾ ಪ್ರಮಾಣ ಪತ್ರಗಳ ಎರಡು ಸೆಟ್ ಜೆರಾಕ್ಸ್ ಪ್ರತಿಗಳೊಂದಿಗೆ ಹಾಜರಾಗಬೇಕು. ಪರಿಶೀಲನೆಗೆ ಹಾಜರಾಗುವ ಮೊದಲು 16-06-2025 ರಂದು ಸ್ಲಾಟ್ ಬುಕಿಂಗ್ ಮಾಡಿರಬೇಕು. ನಿಗದಿತ ಸಮಯದಲ್ಲಿ ದಾಖಲೆಗಳನ್ನು ಸಲ್ಲಿಸದೇ ಇರುವವರು, ದಾಖಲೆಗಳು / ಕ್ಷೇಮುಗಳು / ಡಿಪ್ಲೊಮಾ ಪರೀಕ್ಷೆಯ ಅಂಕಗಳು / ವೃತ್ತಿನಿರತ ಕ್ಷೇಮುಗಳನ್ನು ಸರಿಯಾಗಿ ನಮೂದಿಸದವರು ಈ ಅಂತಿಮ ಅವಕಾಶವನ್ನು ಬಳಸಿಕೊಳ್ಳಬಹುದು. ಎಲ್ಲಾ ಮಾಹಿತಿ ಸರಿ ಇರುವವರು ಕೆಇಎ ಕಚೇರಿಗೆ ಬರುವ ಅಗತ್ಯವಿಲ್ಲ. https://twitter.com/KEA_karnataka/status/1934207937477558753 ದಾಖಲೆಗಳ ಪರಿಶೀಲನೆಗೆ ಹಾಜರಾದ ನಂತರ ಅನೇಕರಿಗೆ ತಮ್ಮ ತಪ್ಪುಗಳು ಅರಿವಿಗೆ ಬಂದಿದ್ದು ಅಂತಹವರು ಕೂಡ ಬರಬಹುದು.…
ಮಹಾರಾಷ್ಟ್ರ: ರಾಜ್ಯದಲ್ಲಿ ನಿರಂತವಾಗಿ ಮಳೆಯಾಗುತ್ತಿದೆ. ಈ ಮಳೆಯ ಪರಿಣಾಮವಾಗಿ ಇಂದ್ರಯಾಣಿ ನದಿಗೆ ನಿರ್ಮಿಸಲಾದ ಸೇತುವೆ ಕುಸಿತಗೊಂಡಿದೆ. ಈ ಕಾರಣದಿಂದಾಗಿ ಆರು ಮಂದಿ ಸಾವನ್ನಪ್ಪಿದ್ದರೇ, 25 ರಿಂದ 30 ಪ್ರವಾಸಿಗರು ನೀರಲ್ಲಿ ಕೊಚ್ಚಿ ಹೋಗಿದ್ದಾರೆ. ಭಾನುವಾರದ ಇಂದು ಭಾರೀ ಸಂಖ್ಯೆಯ ಪ್ರವಾಸಿಗರು ಇಂದ್ರಯಾಣಿ ಸೇತುವೆ ಬಳಿ ಜಮಾಯಿಸಿದ್ದರು. ಈ ವೇಳೆ ಸೇತುವೆ ಕುಸಿತಗೊಂಡು ಭಾರಿ ದುರಂತ ಸಂಭವಿಸಿದೆ. ಇಂದುವರೆಗೆ 6 ಪ್ರವಾಸಿಗರ ಮೃತದೇಹ ಪತ್ತೆಯಾಗಿದ್ದು, ಉಳಿದವರ ಪತ್ತೆಗಾಗಿ ಶೋಧ ಕಾರ್ಯಾಚರಣೆ ನಡೆಸಲಾಗುತ್ತಿದೆ. https://twitter.com/ians_india/status/1934203511404998791 ಮಹಾರಾಷ್ಟ್ರದ ಪುಣೆಯ ಮಾವಲ್ ತಾಲ್ಲೂಕಿನ ಕುಂದಮಾಲದಲ್ಲಿ ಇಂದ್ರಯಾಣಿ ನದಿಗೆ ಅಡ್ಡಲಾಗಿ ನಿರ್ಮಿಸಲಾಗಿದ್ದ ಸೇತುವೆ ಕುಸಿದು 25–30 ಪ್ರವಾಸಿಗರು ನದಿಗೆ ಬಿದ್ದ ಘಟನೆ ನಡೆದಿದೆ. ಭಾರೀ ಮಳೆಯಿಂದಾಗಿ ನೀರಿನ ಮಟ್ಟ ಏರಿದೆ. ಸ್ಥಳೀಯ ಪೊಲೀಸರು, ಅಗ್ನಿಶಾಮಕ ದಳ ಮತ್ತು ಎನ್ಡಿಆರ್ಎಫ್ ತಂಡಗಳು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ಆರಂಭಿಸಿವೆ. https://kannadanewsnow.com/kannada/tomorrow-is-the-funeral-of-former-gujarat-chief-minister-vijay-rupani/ https://kannadanewsnow.com/kannada/breaking-mobile-attendance-is-mandatory-for-doctors-and-staff-at-all-health-centers-in-the-state-dinesh-gundu-rao/
ನವದೆಹಲಿ: ಅಹಮದಾಬಾದ್ ನಲ್ಲಿ ನಡೆದಂತ ವಿಮಾನ ದುರಂತದಲ್ಲಿ ಗುಜರಾತ್ ಮಾಜಿ ಸಿಎಂ ವಿಜಯ್ ರೂಪಾನಿ ಮೃತರಾಗಿದ್ದರು. ಇಂತಹ ಅವರ ಅಂತ್ಯಕ್ರಿಯೆಯನ್ನು ನಾಳೆ ಕುಟುಂಬಸ್ಥರು ನೆರವೇರಿಸುತ್ತಿರುವುದಾಗಿ ತಿಳಿದು ಬಂದಿದೆ. ಗುಜರಾತಿನ ಅಹಮದಾಬಾದ್ ವಿಮಾನ ನಿಲ್ದಾಣದ ಬಳಿಯಲ್ಲಿ ಏರ್ ಇಂಡಿಯಾ ವಿಮಾನ ಪತನದಲ್ಲಿ ಗುಜರಾತ್ ಮಾಜಿ ಸಿಎಂ ವಿಜಯ್ ರೂಪಾನಿ ಸಾವನ್ನಪ್ಪಿದ್ದರು. ಅವರ ಡಿಎನ್ಎ ಪರೀಕ್ಷೆ ನಡೆಸಿದ್ದಂತ ಸಂದರ್ಭದಲ್ಲಿ, ವಿಜಯ್ ರೂಪಾನಿ ಗುರುತು ಪತ್ತೆಯಾಗಿತ್ತು. ಇದೀಗ ಆಸ್ಪತ್ರೆಯ ವೈದ್ಯರು ಕುಟುಂಬಸ್ಥರಿಗೆ ಗುಜರಾತ್ ಮಾಜಿ ಸಿಎಂ ವಿಜಯ್ ರೂಪಾನಿ ಮೃತದೇಹವನ್ನು ಹಸ್ತಾಂತರಿಸಿದ್ದಾರೆ. ಹೀಗಾಗಿ ನಾಳೆ ಅವರ ಅಂತ್ಯಕ್ರಿಯೆಯನ್ನು ಕುಟುಂಬಸ್ಥರು ನೆರವೇರಿಸುತ್ತಿರುವುದಾಗಿ ತಿಳಿದು ಬಂದಿದೆ. https://twitter.com/ANI/status/1934152108317585661 ಜೂನ್ 12 ರಂದು ಅಹಮದಾಬಾದ್ನಲ್ಲಿ ನಡೆದ ಏರ್ ಇಂಡಿಯಾ ಅಪಘಾತದಲ್ಲಿ ಗುಜರಾತ್ನ ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾನಿ ಪ್ರಾಣ ಕಳೆದುಕೊಂಡರು. ಇಂದು, ಬೆಳಿಗ್ಗೆ 11:10 ರ ಸುಮಾರಿಗೆ, ಅವರ ಡಿಎನ್ಎ ಹೊಂದಾಣಿಕೆಯಾಗಿದೆ. ಅವರು ಹಲವಾರು ವರ್ಷಗಳ ಕಾಲ ರಾಜ್ಯದ ಜನರಿಗಾಗಿ ಕೆಲಸ ಮಾಡಿದರು…” ಎಂದು ಗುಜರಾತ್ ಗೃಹ ಸಚಿವ ಹರ್ಷ್…
ಉತ್ತರ ಪ್ರದೇಶ: ಜೂನ್ 15, ಭಾನುವಾರ ಮಧ್ಯಾಹ್ನ ಉತ್ತರ ಪ್ರದೇಶದ ಮಥುರಾ ಜಿಲ್ಲೆಯಲ್ಲಿ ಸ್ಥಳಾಂತರ ಪ್ರಕ್ರಿಯೆಯ ಸಮಯದಲ್ಲಿ ಕುಸಿದ ಆರು ಮನೆಗಳ ಅವಶೇಷಗಳೊಳಗೆ ಒಬ್ಬರು ಸಾವನ್ನಪ್ಪಿದ್ದು, 12 ಕ್ಕೂ ಹೆಚ್ಚು ಜನರು ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಶಹಗಂಜ್ನ ಮಸಾನಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಕಾರ್ಮಿಕರು ಈ ಪ್ರದೇಶದಲ್ಲಿ ಅಗೆಯುತ್ತಿದ್ದಾಗ ಈ ಕುಸಿತ ಸಂಭವಿಸಿದೆ. ಇದು ಹತ್ತಿರದ ಮನೆಗಳ ಅಡಿಪಾಯವನ್ನು ದುರ್ಬಲಗೊಳಿಸಿದೆ ಎಂದು ಶಂಕಿಸಲಾಗಿದೆ. ಪ್ರಾಥಮಿಕ ಮಾಹಿತಿಯ ಪ್ರಕಾರ ಆರು ಮನೆಗಳು ಕುಸಿದುಬಿದ್ದು, ಜನನಿಬಿಡ ಪ್ರದೇಶದಲ್ಲಿ ಅವ್ಯವಸ್ಥೆ ಉಂಟಾಗಿದೆ. ಕುಸಿತದ ಸ್ಥಳದಲ್ಲಿ ಪ್ರಸ್ತುತ ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆಗಳು ನಡೆಯುತ್ತಿದ್ದು, ಸ್ಥಳೀಯ ಆಡಳಿತ, ಎಸ್ಡಿಆರ್ಎಫ್ ಮತ್ತು ಎನ್ಡಿಆರ್ಎಫ್, ಅಗ್ನಿಶಾಮಕ ಇಲಾಖೆ, ಆಂಬ್ಯುಲೆನ್ಸ್ಗಳು ಮತ್ತು ಸ್ಥಳೀಯ ಪೊಲೀಸರ ತಂಡಗಳು ಸ್ಥಳದಲ್ಲಿವೆ. ಪರಿಹಾರ ಕಾರ್ಯದ ನಂತರ, ತನಿಖಾ ಸಂಸ್ಥೆಗಳು ಕುಸಿತಕ್ಕೆ ನಿಖರವಾದ ಕಾರಣವನ್ನು ತನಿಖೆ ಮಾಡುತ್ತವೆ. https://twitter.com/ANI/status/1934156090536522222 ಶ್ಲೋಕ್ ಕುಮಾರ್ ಮಾತನಾಡಿ, ಗೋವಿಂದ ನಗರ ಪೊಲೀಸ್ ಠಾಣೆ ವ್ಯಾಪ್ತಿಯ ಮಸಾನಿ ಪ್ರದೇಶದಲ್ಲಿ,…
ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ಐದು ತಿಂಗಳು ಕಂತು ಕಟ್ಟಿಲ್ಲವೆಂದು ಮನೆಯಿಂದ ಮೈಕ್ರೋ ಫೈನಾನ್ಸ್ ಕಂಪನಿ ಸಿಬ್ಬಂದಿ ಹೊರ ಹಾಕಿದ್ದಾರೆ. ವಿಜಯಪುರದ ರಹಮತ್ ನಗರದ ಮುನಿರಾಜು ಕುಟುಂಬ ಈಗ ಬೀದಿಪಾಲಾಗಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ವಿಜಯಪುರದ ಮುನಿರಾಜು ಬೀದಿಯಲ್ಲಿ ನಿಂತು ಕಣ್ಣೀರಿಡುತ್ತಿದ್ದಾರೆ. 2021ರಲ್ಲಿ ಎಸ್ ಬಿ ಎಸ್ ಪಿ ಮೈಕ್ರೋ ಫೈನಾನ್ಸ್ ನಿಂದ 21 ಲಕ್ಷ ಸಾಲ ಪಡೆದಿದ್ದರು. ಅಂದಿನಿಂದ ಪ್ರತಿ ತಿಂಗಳು ಕಂತು ಕಟ್ಟುತ್ತಿದ್ದರು. 2025ರ ಜನವರಿಯಿಂದ ಇದುವರೆಗೆ ಐದು ತಿಂಗಳ ಕಂತು ಕಟ್ಟಲು ಸಾಧ್ಯವಾಗಿರಲಿಲ್ಲ. ಈ ಕಾರಣದಿಂದ ಪಡೆದ ಸಾಲದ ಕಂತಿನ ಹಣವನ್ನು ಕಟ್ಟಿಲ್ಲವೆಂದು ಕುಟುಂಬವನ್ನು ಬೀದಿಗೆ ತಳ್ಳಿ ಮೈಕ್ರೋ ಫೈನಾನ್ಸ್ ಕಂಪನಿಯೊಂದು ಬೀಗ ಹಾಕಿದ ಘಟನೆ ನಡೆದಿದೆ. ಮನೆಯಲ್ಲಿದ್ದಂತ ವಸ್ತುಗಳನ್ನು ಎತ್ತಿಕೊಳ್ಳಲು ಬಿಡದೇ ಬೀಗ ಹಾಕಿ ಸೀಲ್ ಜಡಿದು ಅಮಾನವೀಯವಾಗಿ ನಡೆದುಕೊಂಡಿದೆ. ಯಾವುದೇ ನೋಟಿಸ್ ನೀಡದೇ ಏಕಾಏಕಿ ಮನೆಯಿಂದ ಹೊರಹಾಕಿದ್ದಾರೆ ಎಂಬುದಾಗಿ ಕುಟುಂಬಸ್ಥರು ಆರೋಪಿಸುತ್ತಿದ್ದಾರೆ. ಇಬ್ಬರು ಹೆಣ್ಣುಮಕ್ಕಳ ಜೊತೆ ಬೀದಿಯಲ್ಲಿ ಮುನಿರಾಜು ಕಣ್ಣೀರಿಡುತ್ತಿದ್ದಾರೆ. https://kannadanewsnow.com/kannada/breaking-mobile-attendance-is-mandatory-for-doctors-and-staff-at-all-health-centers-in-the-state-dinesh-gundu-rao/
ಬೆಂಗಳೂರು: ವಿದೇಶಿ ಪ್ರಜೆಗಳಿಗೆ ಸಂಬಂಧಿಸಿದ ಲೆಕ್ಕಪರಿಶೋಧನೆ ಮತ್ತು ಪರಿಶೀಲನೆ ಕುರಿತು ಶೈಕ್ಷಣಿಕ ಮತ್ತು ವೈದ್ಯಕೀಯ ಸೇರಿದಂತೆ ಸಂಬಂಧಿಸಿದ ಎಲ್ಲಾ ಸಂಸ್ಥೆಗಳಿಗೆ ಸುತ್ತೋಲೆ ಅಥವಾ ಅಧಿಸೂಚನೆಯನ್ನು ಹೊರಡಿಸುವಂತೆ ಕರ್ನಾಟಕ ಹೈಕೋರ್ಟ್ ಗೃಹ ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ (ACS) ಅವರನ್ನು ಕೇಳಿದೆ. ಭಾರತದಲ್ಲಿ ವಾಸಿಸುವ ವಿದೇಶಿ ಪ್ರಜೆಗಳ ಅನುಸರಣೆಯನ್ನು ಮೇಲ್ವಿಚಾರಣೆ ಮಾಡಲು, ನಿಯಂತ್ರಿಸಲು ಮತ್ತು ಜಾರಿಗೊಳಿಸಲು ಬಹು ಅಧಿಕಾರಿಗಳನ್ನು ಒಳಗೊಂಡ ಸಮಗ್ರ, ಸಂಘಟಿತ ಮತ್ತು ಪಾರದರ್ಶಕ ಕಾರ್ಯವಿಧಾನದ ತುರ್ತು ಅವಶ್ಯಕತೆಯಿದೆ ಎಂದು ಗಮನಿಸಿ, ಜೂನ್ 18 ರೊಳಗೆ ACS ಗೆ ಅಂತಹ ಸುತ್ತೋಲೆ/ಅಧಿಸೂಚನೆಯನ್ನು ಹೊರಡಿಸುವಂತೆ ನ್ಯಾಯಾಲಯವು ಈ ಮಧ್ಯಂತರ ಆದೇಶವನ್ನು ನೀಡಿದೆ. “ವಿದೇಶಿ ಪ್ರಜೆಗಳು ತಮ್ಮ ವೀಸಾದಿಂದ ಅನುಮತಿಸಲಾದ ಅವಧಿಯನ್ನು ಮೀರಿ ಭಾರತದಲ್ಲಿ ಉಳಿಯುವ ವಿದ್ಯಮಾನವು ಗಮನಾರ್ಹ ಕಳವಳವಾಗಿ ಹೊರಹೊಮ್ಮಿದೆ. ಅಂತಹ ಮಿತಿಮೀರಿದ ವಾಸ್ತವ್ಯಗಳು ರಾಷ್ಟ್ರೀಯ ಭದ್ರತೆಗೆ ಬೆದರಿಕೆಗಳು, ಸ್ಥಳೀಯ ಆಡಳಿತ ಮತ್ತು ಕಾನೂನು ಜಾರಿಯ ಮೇಲಿನ ಒತ್ತಡ, ಸಾರ್ವಜನಿಕ ಆರೋಗ್ಯ ಟ್ರ್ಯಾಕಿಂಗ್ನಲ್ಲಿನ ಸವಾಲುಗಳು ಮತ್ತು ಅನೌಪಚಾರಿಕ ಉದ್ಯೋಗ ವಲಯಗಳಲ್ಲಿನ ಶೋಷಣೆ ಸೇರಿದಂತೆ…