Subscribe to Updates
Get the latest creative news from FooBar about art, design and business.
Author: ವಸಂತ ಬಿ ಈಶ್ವರಗೆರೆ
ವಸಂತ ಬಿ ಈಶ್ವರಗೆರೆ (Vasantha B Eshwaragere) ಅವರು ಕರ್ನಾಟಕದ ಪತ್ರಕರ್ತರು ಮತ್ತು ಕವಿ. ಉದಯ ನ್ಯೂಸ್, ಟಿವಿ5 ಕನ್ನಡ ಸೇರಿದಂತೆ ವಿವಿಧ ಸುದ್ದಿ ಮಾಧ್ಯಮಗಳಲ್ಲಿ ಸುಮಾರು 15 ವರ್ಷಗಳ ಅನುಭವವನ್ನು ಹೊಂದಿದ್ದಾರೆ. ಪ್ರಸ್ತುತ ಅವರು Kannada News Now ಡಿಜಿಡಿಲ್ ಮಾಧ್ಯಮದಲ್ಲಿ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರು ತಾಜಾ ಸುದ್ದಿ, ಸಾಹಿತ್ಯ, ಸಾಮಾಜಿಕ ವರದಿಗಾರಿಕೆ, ನ್ಯಾಯಾಂಗ ಸಂಬಂಧಿತ ವರದಿ ಮತ್ತು ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ಸುದ್ದಿಗಳ ವರದಿಯಲ್ಲಿ ಸಕ್ರಿಯರಾಗಿದ್ದಾರೆ. ಗುಡವಿ ಪಕ್ಷಿಧಾಮದಂತಹ ಪ್ರವಾಸಿ ತಾಣಗಳ ಕುರಿತು ಲೇಖನಗಳನ್ನು ಬರೆದಿದ್ದಾರೆ.
ಬೆಂಗಳೂರು: ಚಿನ್ನಸ್ವಾಮಿ ಸ್ಟೇಡಿಯಂ ಬಳಿ ನಡೆದಿದ್ದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ನಮ್ಮ ರಾಜೀನಾಮೆ ಕೇಳುವ ಮೊದಲು ಇಂತಹದ್ದೇ ಅವಘಡಗಳು ನಡೆದಿದ್ದ ಸಂದರ್ಭದಲ್ಲಿ ರಾಜೀನಾಮೆ ನೀಡಿದ್ದ ಬಿಜೆಪಿ ನಾಯಕರ ಪಟ್ಟಿಯನ್ನು ಬಿಡುಗಡೆ ಮಾಡುವಂತೆ ರಾಜ್ಯದ ಬಿಜೆಪಿ ನಾಯಕರಿಗೆ ಮನವಿಯನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ಮಾಡಿದ್ದಾರೆ. ಈ ಕುರಿತಂತೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವಂತ ಅವರು, ಚಿನ್ನಸ್ವಾಮಿ ಸ್ಟೇಡಿಯಂ ಬಳಿ ನಡೆದಿರುವುದು ಒಂದು ಅಪಘಾತ. ಒಂದು ಜವಾಬ್ದಾರಿಯುತ ಸರ್ಕಾರವಾಗಿ ಆ ಘಟನೆಯ ಹೊಣೆಯನ್ನು ನಾವು ಹೊತ್ತಿದ್ದೇವೆ. ಬೆಂಗಳೂರು ನಗರ ಪೊಲೀಸ್ ಕಮಿಷನರ್ ಸೇರಿದಂತೆ ಹಿರಿಯ ಪೊಲೀಸ್ ಅಧಿಕಾರಿಗಳನ್ನು ಅಮಾನತುಗೊಳಿಸಿದ್ದೇವೆ, ರಾಜ್ಯ ಗುಪ್ತಚರ ಇಲಾಖೆಯ ಮುಖ್ಯಸ್ಥರನ್ನು ವರ್ಗಾವಣೆ ಮಾಡಿದ್ದೇವೆ. ನನ್ನ ರಾಜಕೀಯ ಕಾರ್ಯದರ್ಶಿಯನ್ನು ಸೇವೆಯಿಂದ ಬಿಡುಗಡೆಗೊಳಿಸಿದ್ದೇನೆ. ಈ ಪ್ರಕರಣದ ಸಮಗ್ರ ತನಿಖೆಗೆ ನಿವೃತ್ತ ನ್ಯಾಯಾಧೀಶರಾದ ಜಾನ್ ಮೈಕೆಲ್ ಕುನ್ಹಾ ಅವರ ನೇತೃತ್ವದಲ್ಲಿ ಏಕಸದಸ್ಯ ಆಯೋಗವನ್ನೂ ರಚಿಸಿದ್ದೇವೆ ಎಂದು ತಿಳಿಸಿದ್ದಾರೆ. ಇಷ್ಟೆಲ್ಲ ಕ್ರಮಕೈಗೊಂಡ ನಂತರವೂ ರಾಜ್ಯದ ಬಿಜೆಪಿ ನಾಯಕರು ಪ್ರತಿಭಟನೆ ನಡೆಸುತ್ತಿರುವುದು ರಾಜಕೀಯ ದುರುದ್ದೇಶದಿಂದ ಹೊರತು ಜನರ ಬಗೆಗಿನ ಕಾಳಜಿಯಿಂದ ಅಲ್ಲ…
ಬೆಂಗಳೂರು : ಪ್ಲಾಸ್ಟಿಕ್ ತ್ಯಾಜ್ಯ ಜನ-ಜಾನುವಾರುಗಳ ಆರೋಗ್ಯಕ್ಕೆ ಕಂಟಕವಾಗಿದ್ದು, ಪರಿಸರಕ್ಕೂ ಮಾರಕವಾಗಿದೆ. ಏಕಬಳಕೆ ಪ್ಲಾಸ್ಟಿಕ್ ನಿರ್ಮೂಲನೆ ಕಾನೂನಿನಿಂದ ಮಾತ್ರ ಸಾಧ್ಯವಿಲ್ಲ. ಇದಕ್ಕೆ ಜನರ ಇಚ್ಛಾಶಕ್ತಿ ಅಗತ್ಯ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಅಭಿಪ್ರಾಯಪಟ್ಟಿದ್ದಾರೆ. ಬೆಂಗಳೂರಿನಲ್ಲಿಂದು ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ಆಯೋಜಿಸಿದ್ದ ವಿಶ್ವ ಪರಿಸರ ದಿನದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಈಬಾರಿಯ ವಿಶ್ವ ಪರಿಸರ ದಿನದ ಧ್ಯೇಯ ವಾಕ್ಯ ಪ್ಲಾಸ್ಟಿಕ್ ತ್ಯಾಜ್ಯ ಕೊನೆಗಾಣಿಸೋಣ ಎಂಬುದಾಗಿದ್ದು. ಏಕ ಬಳಕೆ ಪ್ಲಾಸ್ಟಿಕ್ ಬಳಕೆ ಮಾಡದಂತೆ ನಾವೆಲ್ಲರೂ ಸಂಕಲ್ಪ ಮಾಡಬೇಕು ಎಂದರು. ಬೆಂಗಳೂರು ನಗರದ ಹಸಿರು ಹೊದಿಕೆ ವೃದ್ಧಿಗೆ ಕ್ರಮ: ನಿವೃತ್ತರ ಸ್ವರ್ಗ, ಉದ್ಯಾನ ನಗರಿ ಎಂದು ಖ್ಯಾತವಾಗಿದ್ದ ಬೆಂಗಳೂರು ಇಂದು ಕಾಂಕ್ರೀಟ್ ಕಾಡಾಗುತ್ತಿದೆ. ಹೀಗಾಗಿ ಬೆಂಗಳೂರಿನಲ್ಲಿ ಶ್ವಾಸ ತಾಣ ಉಳಿಸಲು ಹೆಸರುಘಟ್ಟ ಹುಲ್ಲುಗಾವಲಿನ 5678 ಎಕರೆ ಪ್ರದೇಶವನ್ನು ಸಂರಕ್ಷಿತ ಹುಲ್ಲುಗಾವಲು ಎಂದು ಘೋಷಿಸಲಾಗಿದೆ ಎಂದರು. ಬೆಂಗಳೂರು ಉತ್ತರದ ಯಲಹಂಕ ಬಳಿ 153 ಎಕರೆ ಭೂಮಿಯಲ್ಲಿ ಬೃಹತ್…
ಬೆಂಗಳೂರು: ಭಾರತ ಸರ್ಕಾರವು ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಯೋಜನೆಯಡಿ ಅರ್ಹ ಸಣ್ಣ ಇಡುವಳಿದಾರ ರೈತರಿಗೆ ಒಂದು ವರ್ಷಕ್ಕೆ 3000 ರೂ.ನಂತೆ ಎರಡು ಕಂತುಗಳಲ್ಲಿ ರೂ.6000 ನೀಡಲಾಗುತ್ತದೆ. ಈ ಬಗ್ಗೆ ಕೃಷಿ ಇಲಾಖೆಯಿಂದ ಮಾಹಿತಿ ನೀಡಲಾಗಿದ್ದು, ರಾಜ್ಯದಲ್ಲಿ ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯನ್ನು ಜಾರಿಗೊಳಿಸಿದ್ದು, ಒಂದು ವರ್ಷಕ್ಕೆ ರೂ. 6000/-ಗಳನ್ನು ಪ್ರತಿ ನಾಲ್ಕು ತಿಂಗಳಿಗೊಮ್ಮೆ 3 ಕಂತುಗಳಲ್ಲಿ ನೀಡಲಾಗುತ್ತಿದೆ. ಸಾಗುವಳಿ ಭೂಮಿ ಹೊಂದಿರುವ ಎಲ್ಲಾ ಅರ್ಹ ರೈತರು ಬಾಕಿಯಿರುವ ಇ-ಕೆವೈಸಿ ಮಾಡಿಸಿ ಬ್ಯಾಂಕ್ ಖಾತೆಗೆ ಆಧಾರ್ ಜೋಡಣೆ ಮಾಡಿಸಿಕೊಂಡು ಈ ಯೋಜನೆಯ ಸದುಪಯೋಗ ಪಡೆದುಕೊಳ್ಳುವಂತೆ ತಿಳಿಸಿದೆ. ರೈತರು ತಮ್ಮ ಆಧಾರ್ ಕಾರ್ಡ್ ಹಾಗೂ ಆಧಾರ್ ಕಾರ್ಡ್ನಲ್ಲಿ ನೋಂದಾಯಿಸಿರುವ ಮೊಬೈಲ್ ನೊಂದಿಗೆ ಹತ್ತಿರದ ಸಾಮಾನ್ಯ ಸೇವಾ ಕೇಂದ್ರ ಅಥವಾ ಗ್ರಾಮ ಒನ್ ಕೇಂದ್ರಗಳಿಗೆ ಭೇಟಿ ನೀಡಿ ಇ-ಕೆವೈಸಿ ಮಾಡಿಸುವುದು. ಹಾಗೂ ಈಗಾಗಲೇ ಕೃಷಿ ಇಲಾಖೆಯಿಂದ ತಮ್ಮ ಗ್ರಾಮಗಳಿಗೆ ಗ್ರಾಮ ನೋಡಲ್ ಅಧಿಕಾರಿಗಳನ್ನು ನಿಯೋಜಿಸಲಾಗಿದ್ದು ಕೇಂದ್ರ…
ಬಳ್ಳಾರಿ: ಈ ಬಾರಿ ಬಜೆಟ್ ನಲ್ಲಿ ಶಾಲಾ ಶಿಕ್ಷಣ ಇಲಾಖೆಗೆ 41 ಸಾವಿರ ಕೋಟಿ ರೂ. ಅನುದಾನ ನೀಡಲಾಗಿದೆ. 1008 ಶಾಲೆಗಳಲ್ಲಿ ಎಲ್.ಕೆ.ಜಿ ಮತ್ತು ಯು.ಕೆ.ಜಿ ತರಗತಿ ಪ್ರಾರಂಭಿಸಲಾಗಿದೆ ಎಂಬುದಾಗಿ ಶಾಲಾ ಶಿಕ್ಷಣ ಸಚಿವ ಮಧು ಎಸ್ ಬಂಗಾರಪ್ಪ ತಿಳಿಸಿದ್ದಾರೆ. ರಾಜ್ಯದಲ್ಲಿ ಶಾಲೆಗಳ ಶಿಥಿಲ ಕೊಠಡಿಗಳ ದುರಸ್ತಿಗೆ ಕ್ರಮ ವಹಿಸಲಾಗುತ್ತಿದೆ ಎಂದು ತಿಳಿಸಿದರು. ರಾಜ್ಯದಲ್ಲಿ ಕರ್ನಾಟಕ ಪಬ್ಲಿಕ್ ಶಾಲೆಗಳು ಸಾಕಷ್ಟು ಪ್ರಭಾವ ಬೀರುತ್ತಿವೆ. ಈ ಶಾಲೆಗಳಲ್ಲಿ ಗುಣಮಟ್ಟ ಶಿಕ್ಷಣ ಲಭಿಸುತ್ತಿದ್ದು, ದಾಖಲಾತಿಗೆ ಬೇಡಿಕೆ ಹೆಚ್ಚುತ್ತಿದೆ. ಮಕ್ಕಳ ಭವಿಷ್ಯಕ್ಕೆ ಎಲ್ಲಾ ಸೌಲಭ್ಯ ನೀಡಲು ನಮ್ಮ ಸರ್ಕಾರ ಬದ್ಧವಾಗಿದೆ. ವಿದ್ಯಾರ್ಥಿಗಳು ಪರೀಕ್ಷೆಗಳಿಗೆ ಭಯಭೀತರಾಗಬಾರದು. ಈ ಹಿಂದೆ ಅವಕಾಶದ ಕೊರತೆಯಿಂದ ವಿದ್ಯಾರ್ಥಿಗಳು ಅನುತ್ತೀರ್ಣರಾಗುತ್ತಿದ್ದರು. ಈಗ ಎಲ್ಲಾ ರೀತಿಯ ಅನುವು ಮಾಡಿಕೊಡಲಾಗುತ್ತಿದೆ ಎಂದರು. ಕಲ್ಯಾಣ ಕರ್ನಾಟಕ ಭಾಗದ ಶಾಲೆಯ ಮಕ್ಕಳನ್ನು ಮುಂಚೂಣಿಗೆ ತರಲು ರಾಜ್ಯ ಸರ್ಕಾರ ಸಾಕಷ್ಟು ಕೆಲಸ ಮಾಡುತ್ತಿದೆ. ವಿಶೇಷ ಅನುದಾನ ನೀಡಲಾಗಿದೆ. ಶಿಕ್ಷಕರ ನೇಮಕಾತಿಯಲ್ಲಿ ಹೆಚ್ಚಿನ ಶಿಕ್ಷಕರನ್ನು ಇಲ್ಲಿಗೆ ನೀಡಲಾಗುತ್ತಿದೆ ಎಂದು ಹೇಳಿದ ಸಚಿವ…
ಬಳ್ಳಾರಿ: ರಾಜ್ಯದ ಶಾಲೆಗಳಲ್ಲಿ ಖಾಲಿ ಇರುವಂತ 13,000 ಶಿಕ್ಷಕರ ಹುದ್ದೆಗಳ ನೇಮಕಾತಿಗೆ ಶೀಘ್ರವೇ ನೇಮಕಾತಿ ಅಧಿಸೂಚನೆ ಹೊರಡಿಸುವುದಾಗಿ ಶಾಲಾ ಶಿಕ್ಷಣ ಸಚಿವ ಮಧು ಎಸ್ ಬಂಗಾರಪ್ಪ ತಿಳಿಸಿದ್ದಾರೆ. ಸೋಮವಾರ, ನಗರದ ಬಿಪಿಎಸ್ಸಿ ಸಭಾಂಗಣದಲ್ಲಿ ಏರ್ಪಡಿಸಿದ್ದ ಸುದ್ದಿಗೋಷ್ಠಿಯನ್ನುದ್ದೇಶಿಸಿ ಅವರು ಮಾತನಾಡಿದರು. ರಾಜ್ಯದಲ್ಲಿ ಶಿಕ್ಷಣದ ಗುಣಮಟ್ಟ ಕಾಪಾಡುವಲ್ಲಿ ನಮ್ಮ ಸರ್ಕಾರವು ಬದ್ಧವಾಗಿದೆ. ಶಿಕ್ಷಣ ಇಲಾಖೆಯ ಎಲ್ಲಾ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ವಿಶೇಷ ಜವಾಬ್ದಾರಿ ವಹಿಸಲಾಗಿದ್ದು, ಶಾಲಾ ಸಮಯ ಹೊರತುಪಡಿಸಿ, ಸಂಜೆ ಸಮಯದಲ್ಲೂ ಮಕ್ಕಳಿಗೆ ವಿಶೇಷ ತರಗತಿಗಳ ಮೂಲಕ ಅಭ್ಯಾಸಿಸಲು ಮಾರ್ಗದರ್ಶನ ಮಾಡುತ್ತಿದ್ದಾರೆ ಎಂದರು. ಪರೀಕ್ಷಾ ಪಾವಿತ್ರ್ಯತೆ ಕಾಪಾಡಲು ಪರೀಕ್ಷಾ ಕೇಂದ್ರಗಳಲ್ಲಿ ಸಿಸಿಟಿವಿ ಕ್ಯಾಮೆರಾ, ವೆಬ್ ಕಾಸ್ಟಿಂಗ್ ಮಾಡಲಾಗುತ್ತಿದೆ. ಪರೀಕ್ಷೆಯಲ್ಲಿ ಅನುತ್ತೀರ್ಣರಾದ ಮಕ್ಕಳಿಗೆ ಪರೀಕ್ಷೆ ಎದುರಿಸಲು ಮೂರು ಬಾರಿ ಅವಕಾಶ ನೀಡಲಾಗಿದೆ. ಇಲ್ಲಿಯೂ ಉತ್ತೀರ್ಣರಾಗದಿದ್ದರೆ ಅಂತಹ ಮಕ್ಕಳಿಗೆ ಶಾಲೆಗಳಲ್ಲಿ ಪುನಃ ಪ್ರವೇಶಾತಿ ಪಡೆಯಲು ಅವಕಾಶ ನೀಡಲಾಗಿದೆ. ಅಲ್ಲಿಯೂ ಸಹ ಎಲ್ಲಾ ಮಕ್ಕಳಂತೆ ಬಟ್ಟೆ, ಪುಸ್ತಕ, ಶೂ ಹಾಗೂ ಇತರೆ ಸೌಲಭಗಳನ್ನು ಸಹ ನೀಡಲಾಗುತ್ತಿದೆ ಎಂದು ತಿಳಿಸಿದರು.…
ಬೆಂಗಳೂರು: ರಾಜ್ಯದಲ್ಲಿ ಕ್ಯಾನ್ಸರ್ ಪೀಡಿದ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ಎನ್ನುವಂತೆ ಸರ್ಕಾರಿ ವಸತಿ ಶಾಲೆ ಆರಂಭಕ್ಕೆ ಸರ್ಕಾರ ನಿರ್ಧರಿಸಿರುವುದಾಗಿ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ರಾಜ್ಯದಲ್ಲಿ ಕ್ಯಾನ್ಸರ್ನಿಂದ ಬಳಲುತ್ತಿರುವ 3,500 ವಿದ್ಯಾರ್ಥಿಗಳನ್ನು ಗುರುತಿಸಲಾಗಿದೆ. ಅವರಿಗೆ ಶಿಕ್ಷಣದೊಂದಿಗೆ ನಿರಂತರವಾಗಿ ಚಿಕಿತ್ಸೆ ಹಾಗೂ ವೈದ್ಯಕೀಯ ಸೌಲಭ್ಯ ಕಲ್ಪಿಸಲು ಬೆಂಗಳೂರಿನ ಕಿದ್ವಾಯಿ ಆಸ್ಪತ್ರೆಯ ಪರಿಸರದಲ್ಲಿ ವಸತಿಯುತ ಶಾಲೆ (ಕ್ಯಾನ್ಸರ್ ರೆಸಿಡೆನ್ಸಿಯಲ್ ಸ್ಕೂಲ್) ಆರಂಭಿಸಲು ನಿರ್ಧರಿಸಲಾಗಿದೆ ಎಂದು ಶಾಲಾ ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ಅವರು ತಿಳಿಸಿದ್ದಾರೆ. https://twitter.com/KarnatakaVarthe/status/1934595121150107929 https://kannadanewsnow.com/kannada/kantara-chapter-1-faces-difficulties-again-tahsildar-issues-notice-3-day-deadline-for-response/ https://kannadanewsnow.com/kannada/case-registered-against-three-in-sadanand-murder-case-in-sagar-what-is-in-the-fir/
ಬೆಂಗಳೂರು: ರಾಜ್ಯದ ಎಲ್ಲ ಆರೋಗ್ಯ ಕೇಂದ್ರಗಳಲ್ಲಿ ವೈದ್ಯರು ಸೇರಿದಂತೆ ಸಿಬ್ಬಂದಿಗೆ ಮೊಬೈಲ್ ಆಧಾರಿತ ಹಾಜರಾತಿ ವ್ಯವಸ್ಥೆಯನ್ನು ಜುಲೈ 1 ರಿಂದ ಜಾರಿ ಮಾಡಲಾಗುತ್ತಿದೆ. ಇದರಿಂದ ವೈದ್ಯರ ಗೈರಿನ ಬಗ್ಗೆ ಸಾರ್ವಜನಿಕರ ದೂರುಗಳು ಕಡಿಮೆಯಾಗುವ ನಿರೀಕ್ಷೆಯಿದೆ ಎಂದು ಆರೋಗ್ಯ ಸಚಿವರಾದ ದಿನೇಶ್ ಗುಂಡೂರಾವ್ ಅವರು ತಿಳಿಸಿದ್ದಾರೆ. https://twitter.com/KarnatakaVarthe/status/1934594226978738620 ಈ ಕುರಿತಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿ ಹೊರಡಿಸಿದ್ದು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಪ್ರಸ್ತುತ ಬಳಸಲ್ಪಡುತ್ತಿರುವ ಹಾಜರಾತಿ ನಿರ್ವಹಣಾ ವ್ಯವಸ್ಥೆಯು ಮೀಸಲಾದ ಹಾರ್ಡ್ವೇ ಸಾಧನಗಳ ಮೂಲಕ ಆಧಾರ್ ಆಧಾರಿತ ಬಯೋಮೆಟ್ರಿಕ್ ಪ್ರಮಾಣೀಕರಣವನ್ನು ಅವಲಂಭಿಸಿದೆ. ಹಾರ್ಡ್ ಸಾಧನಗಳಿಗೆ ಆಗಾಗ್ಗೆ ನಿರ್ವಹಣೆ, ದುರಸ್ತಿ ಮತ್ತು ಆವರ್ತಕ ಬದಲಾವಣೆಗಳ ಅಗತ್ಯವಿದ್ದು, ಇದು ಇಲಾಖೆಗೆ ಗಣನೀಯ ಪುನರಾವರ್ತಿತ ವೆಚ್ಚಗಳಿಗೆ ಕಾರಣವಾಗಿದೆ. ಬಯೋಮೆಟ್ರಿಕ್ ಸಾಧನಗಳ ಸ್ಥಿರ ಸ್ವರೂಪದಿಂದಾಗಿ ಹಾಜರಾತಿ ಗುರುತಿಸುವಿಕೆಯನ್ನು ನಿರ್ದಿಷ್ಟ ಸ್ಥಳಗಳಿಗೆ ಸೀಮಿತಗೊಳಿಸಿದೆ. ಕ್ಷೇತ್ರ ಸಿಬ್ಬಂದಿ ಮತ್ತು ದೂರದ ಪ್ರದೇಶಗಳಲ್ಲಿ ಕೆಲಸ ಮಾಡುವವರಿಗೆ ಅಸಮರ್ಥತೆಗಳನ್ನು ಸೃಷ್ಟಿಸುತ್ತದೆ. ಈ ವ್ಯವಸ್ಥೆಯ ಸೀಮಿತ…
ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ ಕಟ್ಟಡ ನಕ್ಷೆ ಮಂಜೂರಾತಿ ಕೋರಿ ಅರ್ಜಿ ಸಲ್ಲಿಸುವವರಿಗೆ ಜುಲೈ 1 ರಿಂದ ಇ-ಖಾತಾ ಕಡ್ಡಾಯವಾಗಿರುತ್ತದೆ. ಸೂಕ್ತ ದಾಖಲೆಗಳೊಂದಿಗೆ ಆನ್ಲೈನ್ https://bbmp.karnataka.gov.in/newkhata/ ಮೂಲಕ ಅರ್ಜಿ ಸಲ್ಲಿಸಿ ಇ – ಖಾತಾ ಪಡೆದುಕೊಳ್ಳಬಹುದು. https://twitter.com/KarnatakaVarthe/status/1934588801411633657 ಬಿಬಿಎಂಪಿ ವ್ಯಾಪ್ತಿಯಲ್ಲಿ ಈಗಾಗಲೇ ಇಒಡಿಬಿ-ಒಬಿಪಿಎಸ್ (EoDB-OBPS) ತಂತ್ರಾಂಶದ ಮೂಲಕ ಕಟ್ಟಡ ನಕ್ಷೆ ಮಂಜೂರಾತಿಯನ್ನು ಆನ್ಲೈನ್ ನಲ್ಲಿ ನೀಡಲಾಗುತ್ತಿರುತ್ತದೆ. ಪಾಲಿಕೆಯ ಕಂದಾಯ ವಿಭಾಗದಿಂದ ಇ-ಆಸ್ತಿ ತಂತ್ರಾಂಶವನ್ನು ಜಾರಿ ಮಾಡಲಾಗಿದ್ದು, ಪಾಲಿಕೆ ವ್ಯಾಪ್ತಿಯಲ್ಲಿನ ಸ್ವತ್ತುಗಳಿಗೆ ಈಗಾಗಲೇ ಇ-ಖಾತಾ ನೀಡಲಾಗುತ್ತಿರುತ್ತದೆ. ಇಂತಹ ಸ್ವತ್ತುಗಳ ದತ್ತಾಂಶವು ಇ-ಆಸ್ತಿ ತಂತ್ರಾಂಶದಲ್ಲಿ ಲಭ್ಯವಿರುತ್ತದೆ. ಪಾಲಿಕೆಯ ನಗರ ಯೋಜನಾ ವಿಭಾಗದಿಂದ ನಕ್ಷೆ ಮಂಜೂರಾತಿ ನೀಡುತ್ತಿರುವ ಇಒಡಿಬಿ-ಒಬಿಪಿಎಸ್ ಆನ್ ಲೈನ್ ತಂತ್ರಾಂಶವನ್ನು ಪಾಲಿಕೆಯ ಕಂದಾಯ ವಿಭಾಗದಿಂದ ಇ-ಖಾತಾ ನೀಡುತ್ತಿರುವ ಇ-ಆಸ್ತಿ ತಂತ್ರಾಂಶದೊಂದಿಗೆ ಏಕೀಕರಣಗೊಳಿಸಲು ಕ್ರಮ ಜರುಗಿಸಲಾಗಿದೆ. ನಿವೇಶನ /ಸ್ವತ್ತಿನ ಕಂದಾಯ ದಾಖಲಾತಿಗಳ ಪರಿಶೀಲನಾ ತಂತ್ರಾಂಶದಲ್ಲಿ ಸ್ವಯಂಚಾಲಿತವಾಗಿ ಕೈಗೊಳ್ಳಲು ದಿನಾಂಕ: 01-07-2025 ರಿಂದ ಸ್ವತ್ತಿನ ಇ-ಖಾತಾ/ಇಪಿಐಡಿ ಸಂಖ್ಯೆಯನ್ನು ಆನ್ಲೈನ್ ತಂತ್ರಾಂಶದಲ್ಲಿ ನಮೂದಿಸುವುದು ಹಾಗೂ ಇ-ಖಾತಾ ಸಲ್ಲಿಸುವುದು ಅವಶ್ಯವಿರುತ್ತದೆ.…
ಬೆಂಗಳೂರು: ರಾಜ್ಯ ಸರ್ಕಾರದಿಂದ ಪಿಎಸ್ಐ ನೇಮಕಾತಿ ಹಗರಣದಲ್ಲಿ ಕರ್ತವ್ಯಲೋಪವೆಸಗಿರುವ ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿತ್ತು. ಇದೀಗ ಅಮಾನತನ್ನು ಸರ್ಕಾರ ತೆರವುಗೊಳಿಸಿ ಆದೇಶಿಸಿದೆ. ಈ ಸಂಬಂಧ ಡೈರೆಕ್ಟರ್ ಜನರಲ್ ಮತ್ತು ಇನ್ಸ್ ಪೆಕ್ಟರ್ ಜನರಲ್ ಆಫ್ ಪೊಲೀಸ್ ಪರವಾಗಿ ಡಿಐಜಿಪಿ(ಆಡಳಿತದ ಕಾರ್ತಿಕ್ ರೆಡ್ಡಿ ಆದೇಶ ಹೊರಡಿಸಿದ್ದಾರೆ. ಅದರಲ್ಲಿ ಕೆಎಸ್ ಪಿ (ಡಿಪಿ) ನಿಯಮಗಳು 1965/89ರ ನಿಯಮ-5ರನ್ವಯ ಇಲಾಖಾ ವಿಚಾರಣೆಯನ್ನು ಬಾಕಿ ಇರಿಸಿ ಸೇವೆಯಿಂದ ಅಮಾನತ್ತಿನಲ್ಲಿರಿಸಿರುವುದನ್ನು ತಕ್ಷಣದಿಂದ ಜಾರಿಗೆ ಬರುವಂತೆ ತೆರವುಗೊಳಿಸಿರುವುದಾಗಿ ಹೇಳಿದ್ದಾರೆ. ಇನ್ನೂ ಅಮಾನತುಗೊಂಡಿದ್ದಂತ ಡಿವೈಎಸ್ಪಿ ಮಲ್ಲಿಕಾರ್ಜುನ ಸಾಲಿ, ಸಶಸ್ತ್ರ ವಿಭಾಗದ ಡಿವೈಎಸ್ಪಿ ಶಾಂತಕುಮಾರ್, ಸಹಾಯಕ ಕಮಾಂಡೆಂಟ್ ವೈಜ್ಯನಾಥ್ ಕಲ್ಯಾಣಿ ರೇವೂರ ಹಾಗೂ ಪಿಐ ಆನಂದ ಮೇತ್ರಿ ಎಂಬುವರನ್ನು ಕಾರ್ಯಕಾರ್ಯೇತರ ಹುದ್ದೆಗೆ ಸ್ಥಳ ನಿಯುಕ್ತಿಗೊಳಿಸಿ ಆದೇಶಿಸಿದ್ದಾರೆ. ಅಂದಹಾಗೇ ಡಿವೈಎಸ್ಪಿ ಮಲ್ಲಿಕಾರ್ಜುನ ಸಾಲಿ ಅವರನ್ನು ಬೆಂಗಳೂರಿನ ಐಎಸ್ ಡಿಗೆ ಸ್ಥಳ ನಿಯುಕ್ತಿಗೊಳಿಸಿದ್ದರೇ, ಶಾಂತಕುಮಾರ್ ಅವರನ್ನು ಹಾಸನದ ಪಿಟಿಎಸ್ ಗೆ, ವೈಜ್ಯನಾಥ್ ಕಲ್ಯಾಣಿ ರೇವೂರ ಅವರನ್ನು ಮಂಗಳೂರಿನ ಕೆ ಎಸ್ ಆರ್ ಪಿ ಯ 7ನೇ ಪಡೆಗೆ ಹಾಗೂ…
ಶಿವಮೊಗ್ಗ: ಜಿಲ್ಲೆಯ ಸಾಗರ ತಾಲೂಕಿನಲ್ಲಿ ಭಾರೀ ಮಳೆಯಾಗುತ್ತಿದೆ. ಈ ಕಾರಣದಿಂದಾಗಿ ಅಲ್ಲಲ್ಲಿ ಮಳೆಹಾನಿ ಪ್ರಕರಣಗಳು ವರದಿಯಾಗುತ್ತಿವೆ. ಈ ಹಿನ್ನಲೆಯಲ್ಲಿ ಸಾಗರ ತಾಲ್ಲೂಕಿನ ಅಧಿಕಾರಿಗಳು, ಸಿಬ್ಬಂದಿಗಳು ಕರ್ತವ್ಯಕ್ಕೆ ರಜೆ ಹಾಕದೆ ನೆರೆ ಪ್ರದೇಶಗಳಿಗೆ ಭೇಟಿ ನೀಡಿ ಅಗತ್ಯ ಕ್ರಮ ಕೈಗೊಳ್ಳುವಂತೆ ಶಾಸಕ ಗೋಪಾಲಕೃಷ್ಣ ಬೇಳೂರು ಅವರ ಆಪ್ತ ಕಾರ್ಯದರ್ಶಿ ಶ್ರೀನಿವಾಸ್ ಮೂರ್ತಿ ಸೂಚಿಸಿದ್ದಾರೆ. ಇಂದು ಶಿವಮೊಗ್ಗ ಜಿಲ್ಲೆಯ ಸಾಗರ ನಗರದ ಪ್ರವಾಸಿ ಮಂದಿರದಲ್ಲಿ ಶಾಸಕ ಗೋಪಾಲಕೃಷ್ಣ ಬೇಳೂರು ಅವರ ಅನುಪಸ್ಥಿತಿಯಲ್ಲಿ ಅಧಿಕಾರಿಗಳ ಸಭೆ ನಡೆಸಿ ಮಳೆಹಾನಿ ಕುರಿತು ಮಾಹಿತಿ ಪಡೆದರು. ಈ ವೇಳೆ ಅಧಿಕಾರಿಗಳಿಗೆ ಮಳೆಗಾಲದಲ್ಲಿ ಸಾಂಕ್ರಾಮಿಕ ಕಾಯಿಲೆಗಳು ಹರಡುವ ಸಾಧ್ಯತೆ ಇರುವುದರಿಂದ ಆರೋಗ್ಯ ಇಲಾಖೆ ಹೆಚ್ಚು ಜಾಗೃತೆ ವಹಿಸಬೇಕು. ಡೆಂಗ್ಯೂ ಪ್ರಕರಣಗಳು ಸಾಗರ ತಾಲ್ಲೂಕಿನಲ್ಲಿ ಹೆಚ್ಚಳವಾಗದಂತೆ ಅಗತ್ಯ ಮುಂಜಾಗ್ರತಾ ಕ್ರಮ ವಹಿಸಲು ಸೂಚಿಸಿದರು. ಸಾಗರ ತಾಲ್ಲೂಕಿನಲ್ಲಿ ಶಿಥಿಲಗೊಂಡಿರುವ ಶಾಲೆಗಳ ಬಗ್ಗೆ ಹೆಚ್ಚು ಗಮನ ಹರಿಸಿ, ಕೆಲವು ಪ್ರದೇಶಗಳಲ್ಲಿ ಮಕ್ಕಳು ಕಾಲುಸಂಕ ದಾಟಿಕೊಂಡು ಶಾಲೆಗೆ ಹೋಗುತ್ತಾರೆ. ಅಂತಹ ಸ್ಥಳಗಳ ಬಗ್ಗೆ ಹೆಚ್ಚಿನ ಗಮನ…













