Author: ವಸಂತ ಬಿ ಈಶ್ವರಗೆರೆ

ವಸಂತ ಬಿ ಈಶ್ವರಗೆರೆ (Vasantha B Eshwaragere) ಅವರು ಕರ್ನಾಟಕದ ಪತ್ರಕರ್ತರು ಮತ್ತು ಕವಿ. ಉದಯ ನ್ಯೂಸ್, ಟಿವಿ5 ಕನ್ನಡ ಸೇರಿದಂತೆ ವಿವಿಧ ಸುದ್ದಿ ಮಾಧ್ಯಮಗಳಲ್ಲಿ ಸುಮಾರು 15 ವರ್ಷಗಳ ಅನುಭವವನ್ನು ಹೊಂದಿದ್ದಾರೆ. ಪ್ರಸ್ತುತ ಅವರು Kannada News Now ಡಿಜಿಡಿಲ್‌ ಮಾಧ್ಯಮದಲ್ಲಿ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರು ತಾಜಾ ಸುದ್ದಿ, ಸಾಹಿತ್ಯ, ಸಾಮಾಜಿಕ ವರದಿಗಾರಿಕೆ, ನ್ಯಾಯಾಂಗ ಸಂಬಂಧಿತ ವರದಿ ಮತ್ತು ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ಸುದ್ದಿಗಳ ವರದಿಯಲ್ಲಿ ಸಕ್ರಿಯರಾಗಿದ್ದಾರೆ. ಗುಡವಿ ಪಕ್ಷಿಧಾಮದಂತಹ ಪ್ರವಾಸಿ ತಾಣಗಳ ಕುರಿತು ಲೇಖನಗಳನ್ನು ಬರೆದಿದ್ದಾರೆ.

ಕೇರಳ: ಕೇರಳ ಹೈಕೋರ್ಟ್ ಭಾರತೀಯ ನಾಗರಿಕ ಸುರಕ್ಷಾ ಸಂಹಿತಾ (BNSS), 2023 ರ ಸೆಕ್ಷನ್ 107 ರ ಅಡಿಯಲ್ಲಿ ಬ್ಯಾಂಕ್ ಖಾತೆಯನ್ನು ಜಪ್ತಿ ಮಾಡಬಹುದು. ಇದು ನ್ಯಾಯವ್ಯಾಪ್ತಿಯ ಮ್ಯಾಜಿಸ್ಟ್ರೇಟ್ ಆದೇಶದ ಮೇರೆಗೆ ಮಾತ್ರ ಮತ್ತು ಪೊಲೀಸರು ಒಗ್ಗಟ್ಟಿನಿಂದ ಹಾಗೆ ಮಾಡಲು ಸಾಧ್ಯವಿಲ್ಲ ಎಂದು ಅಭಿಪ್ರಾಯಪಟ್ಟಿದೆ. ಸೆಕ್ಷನ್ 107 BNSS ಒಂದು ಹೊಸ ನಿಬಂಧನೆಯಾಗಿದ್ದು, ಇದು “ಅಪರಾಧದ ಆದಾಯ”ವನ್ನು ಜಪ್ತಿ ಮಾಡಲು ಒದಗಿಸುತ್ತದೆ. ನ್ಯಾಯಮೂರ್ತಿ ವಿ.ಜಿ. ಅರುಣ್ ಅವರು ಹೆಡ್‌ಸ್ಟಾರ್ ಗ್ಲೋಬಲ್ ಪ್ರೈವೇಟ್ ಲಿಮಿಟೆಡ್ ಸಲ್ಲಿಸಿದ ಅರ್ಜಿಯನ್ನು ಪರಿಗಣಿಸುತ್ತಿದ್ದರು, ಸ್ಪೆಜಿಯಾ ಆರ್ಗಾನಿಕ್ ಕಾಂಡಿಮೆಂಟ್ಸ್ ಪ್ರೈವೇಟ್ ಲಿಮಿಟೆಡ್ ಒಳಗೊಂಡ ವಂಚನೆ ಪ್ರಕರಣಕ್ಕೆ ಸಂಬಂಧಿಸಿದ ಹಣವನ್ನು ತನ್ನ ಖಾತೆಗೆ ವರ್ಗಾಯಿಸಲಾಗಿದೆ ಎಂಬ ಆರೋಪದ ನಂತರ ಕಲಾಮಸ್ಸೆರಿ ಪೊಲೀಸರು ಅವರ ಖಾತೆಯನ್ನು ಸ್ಥಗಿತಗೊಳಿಸಿದ್ದರು. ಅರ್ಜಿದಾರರು ಈ ವ್ಯವಹಾರವು ನಿಯಮಿತ ವ್ಯವಹಾರದ ಭಾಗವಾಗಿದ್ದು, ಅವರು ಯಾವುದೇ ಅಪರಾಧ ಎಸಗಿಲ್ಲ ಎಂದು ವಾದಿಸಿದರು. ಬಿಎನ್‌ಎಸ್‌ಎಸ್‌ನ ಸೆಕ್ಷನ್ 94 ಅಥವಾ 106 ರ ಅಡಿಯಲ್ಲಿ ಖಾತೆಯನ್ನು ಸ್ಥಗಿತಗೊಳಿಸಲು ಪೊಲೀಸರಿಗೆ ಯಾವುದೇ ಅಧಿಕಾರವಿಲ್ಲ…

Read More

ಬೆಂಗಳೂರು: ರಾಜ್ಯದಲ್ಲಿ ಜನಸಂಖ್ಯೆಗೆ ಅನುಗುಣವಾಗಿ ನಿಗದಿಪಡಿಸಿದ ರಕ್ತ ಸಂಗ್ರಹಣೆಯ ಗುರಿಗಿಂತ ಶೇ 124 ರಷ್ಟು ಪ್ರಗತಿ ಸಾಧಿಸಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.  ಬೆಂಗಳೂರಿನ ಶೇಷಾದ್ರಿಪುರಂ ಕಾಲೇಜಿನಲ್ಲಿ ಇಂದು ವಿಶ್ವ ರಕ್ತದಾನಿಗಳ ದಿನಾಚರಣೆಯಲ್ಲಿ ಪಾಲ್ಗೊಂಡು ಸಚಿವರು ಮಾತನಾಡುತ್ತಿದ್ದರು. ರಾಜ್ಯದ ಒಟ್ಟು ಜನಸಂಖ್ಯೆಯಲ್ಲಿ ಶೇಖಡ 1ರಷ್ಟು ಜನರಿಗೆ ರಕ್ತದ ಅವಶ್ಯಕತೆ ಇದ್ದು ಅದಕ್ಕೆ ಅನುಗುಣವಾಗಿ 2024-25ರಲ್ಲಿ 8,15,402 ರಕ್ತದ ಯುನಿಟ್ ಗಳನ್ನು ಸಂಗ್ರಹಿಸುವ ಗುರಿ ನಿಗದಿಪಡಿಸಲಾಗಿತ್ತು. ಸದರಿ ಸಾಲಿನಲ್ಲಿ 10,11,073 ರಕ್ತದ ಯುನಿಟ್‌ಗಳನ್ನು ಸಂಗ್ರಹಿಸುವ ಮೂಲಕ ಶೇ.124%ರಷ್ಟು ಪ್ರಗತಿ ಸಾಧಿಸಲಾಗಿದೆ. ರಕ್ತದಾನಿಯಗಳ ದಿನಾಚರಣೆಯನ್ನು ಆಚರಿಸುವ ಮೂಲಕ ರಕ್ತದಾನಕ್ಕೆ ಪ್ರೋತ್ಸಾಹಿಸಲಾಗುತ್ತಿದೆ. 1 ಯುನಿಟ್ ರಕ್ತವು 4 ಜೀವಗಳನ್ನು ಉಳಿಸಬಹುದು. ಹೀಗಾಗಿ ನಮ್ಮ ಯುವಕ ಯುವತಿಯರು ರಕ್ತದಾನಕ್ಕೆ ಮುಂದಾಗಬೇಕು ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದರು. ರಾಜ್ಯ ಸರ್ಕಾರದಿಂದ ರಕ್ತ ಸಂಗ್ರಹಣೆಗೆ ಉತ್ತಮ ವ್ಯವಸ್ಥೆ ಕಲ್ಪಿಸಲು ಕ್ರಮಗಳನ್ನ ತೆಗೆದುಕೊಳ್ಳಲಾಗಿದೆ. ತಾಯಂದಿರ ಸಾವುಗಳನ್ನು ತಡೆಯುವಲ್ಲಿ ರಕ್ತದ ಪಾತ್ರ ಪ್ರಮುಖವಾಗಿದೆ. ತಾಲೂಕು ಸರ್ಕಾರಿ ಆಸ್ಪತ್ರೆಗಳಲ್ಲಿ ಪ್ಲಾಸ್ಮಾ…

Read More

ದಾವಣಗೆರೆ: ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗೆಲ್ಲಾ ಬಡವರ ಬದುಕಿಗಾಗಿ ಕಾರ್ಯಕ್ರಮಗಳನ್ನು ರೂಪಿಸಿಕೊಂಡು ಬಂದಿದೆ. ಸಮಾಜದಲ್ಲಿ ಪುಟಾಣಿ ಮಕ್ಕಳಿಂದ ಹಿರಿಯ ನಾಗರೀಕರವರೆಗೆ, ಯುವಕರಿಂದ ಮಹಿಳೆಯರವರೆಗೆ ಎಲ್ಲರಿಗೂ ಕಾರ್ಯಕ್ರಮ ನೀಡಿರುವುದು ಕಾಂಗ್ರೆಸ್ ಸರ್ಕಾರ ಮಾತ್ರ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ದಾವಣಗೆರೆ ಜಿಲ್ಲಾ ವ್ಯಾಪ್ತಿ ಯ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ, ಉದ್ಘಾಟನೆ ಕಾರ್ಯಕ್ರಮದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಮಾತನಾಡಿದರು. “ಇಂದು ಭೂ ಗ್ಯಾರಂಟಿ ಯೋಜನೆ ಮೂಲಕ ಹಟ್ಟಿ, ತಾಂಡಾಗಳ ಸಾವಿರಾರು ಜನರಿಗೆ ಭೂಮಿ ಹಕ್ಕು ಪತ್ರ ನೀಡಿದ್ದೇವೆ. ಈ ಹಿಂದೆ ಬೇರೆ ಯಾವುದೇ ಸರ್ಕಾರ ಇಂತಹ ಕಾರ್ಯಕ್ರಮ ಮಾಡಿರಲಿಲ್ಲ. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗೆಲ್ಲಾ ಬಡವರ ಬದುಕಿಗಾಗಿ, ಬಡವರ ಹೊಟ್ಟೆ ತುಂಬಿಸಲು ಕಾರ್ಯಕ್ರಮ ರೂಪಿಸುತ್ತಾ ಬಂದಿದೆ. ಬಿಜೆಪಿಯವರು ಅಧಿಕಾರ ನಡೆಸಿದ್ದಾರೆ. ಆದರೆ ಅವರು ಭಾವನೆ ಮೇಲೆ ರಾಜಕಾರಣ ಮಾಡಿದ್ದಾರೆ. ನಾವು ಜನರ ಬದುಕು ಕಟ್ಟಲು ರಾಜಕೀಯ ಮಾಡಿದ್ದೇವೆ. ನಮ್ಮ ಸರ್ಕಾರ ಕೊಟ್ಟಿರುವ ಕೊಡುಗೆಗಳಿಗೆ ನಿಮ್ಮ ಕಣ್ಣುಗಳೇ ಸಾಕ್ಷಿ” ಎಂದು ತಿಳಿಸಿದರು. “ಅಧಿಕಾರ…

Read More

ಶ್ರೀ ಅಶ್ವತ್ಥ ನಾರಾಯಣ ಸ್ವಾಮಿಯನ್ನು ಪೂಜಿಸೋಣ. ರಾಜವೃಕ್ಷದ ಕೆಳಗೆ ನಾರಾಯಣನನ್ನು ಸ್ಮರಿಸುವುದರಿಂದ ಮಾಡಬಹುದಾದ ಪರಿಹಾರ ಇದು. ಈ ಮಂತ್ರವು ಶಿವನು ರಾಮನಿಗೆ ನೀಡಿದ ಮಂತ್ರವಾಗಿದೆ. ಅರಣ್ಯ ಕಾಂಡದಲ್ಲಿ ರಾಮನ ಸಂತೋಷದ ಜೀವನವನ್ನು ಮರಳಿ ಪಡೆಯಲು ಶಿವನು ನೀಡಿದ ಮಂತ್ರ ಇದು. ನಮ್ಮ ಜೀವನದಲ್ಲೂ ಸಂತೋಷವನ್ನು ನೀಡಬಲ್ಲ ಮಂತ್ರ ಇದು. ಆ ಶಕ್ತಿಶಾಲಿ ಮಂತ್ರ ಯಾವುದು? ಈ ಪೋಸ್ಟ್ ಮೂಲಕ, ಈ ಮಂತ್ರವನ್ನು ಹೇಗೆ ಜಪಿಸುವುದು ಎಂಬುದರ ಕುರಿತು ಆಧ್ಯಾತ್ಮಿಕ ಮಾಹಿತಿಯನ್ನು ನಾವು ಕಲಿಯಲಿದ್ದೇವೆ. ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ. ನಿಮ್ಮ ಸಮಸ್ಯೆಗಳಾದ ಆರೋಗ್ಯ, ಸಂತಾನ,…

Read More

ಶಿವಮೊಗ್ಗ: ಜಿಲ್ಲೆಯಲ್ಲಿ ಗುತ್ತಿಗೆದಾರರೊಬ್ಬರಿಂದ 30,000 ಲಂಚ ಸ್ವೀಕರಿಸುತ್ತಿದ್ದಂತ ಸಂದರ್ಭದಲ್ಲಿ ಜೆಇ ಒಬ್ಬರು ಲೋಕಾಯುಕ್ತ ಬಲೆಗೆ ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದಿದ್ದಾರೆ. ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲ್ಲೂಕಿನ ಶಿರಾಳಕೊಪ್ಪದ ಗ್ರಾಮೀಣಾಭಿವೃದ್ಧಿ ಇಲಾಖೆಯ ಜೆಇ ಪುರುಷೋತ್ತಮ್ ಎಂಬುವರೇ ಲೋಕಾಯುಕ್ತ ಬಲೆಗೆ ಬಿದ್ದ ಅಧಿಕಾರಿಯಾಗಿದ್ದಾರೆ. ರಸ್ತೆ ಕಾಮಗಾರಿ ಬಿಲ್ ಮಂಜೂರಾತಿಗಾಗಿ ಶೇ.3ರಷ್ಟು ಲಂಚಕ್ಕೆ ಗುತ್ತಿಗಾರ ಲಿಂಗರಾಜುಗೆ ಬೇಡಿಕೆ ಇಟ್ಟಿದ್ದರು. 77.59 ಲಕ್ಷ ವೆಚ್ಚದ ಕಾಮಗಾರಿ ನಡೆಸಿದ್ದಂತ ಗುತ್ತಿಗೆದಾರ ಲಿಂಗರಾಜು ಈಗಾಗಲೇ ಬಿಲ್ ಮಂಜೂರಾತಿಗಾಗಿ 1.63 ಲಕ್ಷ ಲಂಚವನ್ನು ಜೆಇ ಪುರುಷೋತ್ತಮ್ ಗೆ ನೀಡಿದ್ದರು. ಉಳಿದ 70,000 ರೂ ಲಂಚದ ಹಣ ನೀಡುವಂತೆ ಗುತ್ತಿಗೆದಾರ ಲಿಂಗರಾಜುಗೆ ಜೆಇ ಪುರುಷೋತ್ತಮ್ ಒತ್ತಾಯಿಸಿದ್ದರು. ಈ ಸಂಬಂಧ ಗುತ್ತಿಗೆದಾರ ಲಿಂಗರಾಜು ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು. ಇಂದು 70,000 ಉಳಿದ ಲಂಚದ ಹಣದಲ್ಲಿ 30,000 ಹಣವನ್ನು ಶಿಕಾರಿಪುರ ರಸ್ತೆಯ ಲಕ್ಷ್ಮೀ ಮೆಡಿಕಲ್ಸ್ ಬಳಿಯಲ್ಲಿ ಗುತ್ತಿಗೆದಾರರಿಂದ ಪಡೆಯುತ್ತಿದ್ದ ವೇಳೆಯಲ್ಲಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಲೋಕಾಯುಕ್ತ ಡಿವೈಎಸ್ಪಿ ಚಂದ್ರಶೇಖರ್ ನೇತೃತ್ವದಲ್ಲಿ ಈ ದಾಳಿಯನ್ನು ನಡೆಸಲಾಗಿದೆ.…

Read More

ಬೆಂಗಳೂರು: ಮುಂದಿನ 7 ದಿನ ರಾಜ್ಯದ ಕರಾವಳಿ ಮತ್ತು ಮಲೆನಾಡಿನ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವಂತ ಹವಾಮಾನ ಇಲಾಖೆಯು ಮುಂದಿನ 7 ದಿನ ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆಯು ತಿಳಿಸಿದೆ. ನಾಗರಿಕರು ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸಿ, ಸುರಕ್ಷಿತರಾಗಿರಿ ಎಂದಿದೆ. https://twitter.com/KarnatakaVarthe/status/1934569299139821912 ಇಂದು ಭಾರೀ ಮಳೆಯ ಹಿನ್ನಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಾಧ್ಯಂತ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿತ್ತು. ಮಲೆನಾಡು ಭಾಗದ ಚಿಕ್ಕಮಗಳೂರು ಜಿಲ್ಲೆಯಾಧ್ಯಂತವೂ ಶಾಲೆಗಳಿಗೆ ರಜೆ ನೀಡಲಾಗಿತ್ತು. ಶಿವಮೊಗ್ಗ ಜಿಲ್ಲೆಯ ಹೊಸನಗರ ಹಾಗೂ ಸಾಗರ ತಾಲ್ಲೂಕಿನ ಶಾಲಾ-ಕಾಲೇಜುಗಳಿಗೆ ತಹಶೀಲ್ದಾರ್ ರಜೆ ಘೋಷಣೆ ಮಾಡಿದ್ದರು. https://kannadanewsnow.com/kannada/from-july-1-the-approval-of-building-plans-within-the-bbmp-area-requires-e-account/ https://kannadanewsnow.com/kannada/case-registered-against-three-in-sadanand-murder-case-in-sagar-what-is-in-the-fir/

Read More

ಶಿವಮೊಗ್ಗ: ಕಾಂತಾರ ಚಾಪ್ಟರ್ -1ರ ಚಿತ್ರೀಕರಣಕ್ಕೆ ಮತ್ತೆ ಸಂಕಷ್ಟ ಎದುರಾಗಿದೆ. ಚಿತ್ರೀಕರಣದ ವೇಳೆಯಲ್ಲಿ ದೋಣಿ ಮುಗುಚಿ 30 ಜನರು ನೀರಿಗೆ ಬಿದ್ದ ಘಟನೆ ಸಂಬಂಧ 3 ದಿನಗಳಲ್ಲಿ ಉತ್ತರಿಸುವಂತೆ ಹೊಸನಗರ ತಹಶೀಲ್ದಾರ್ ನೋಟಿಸ್ ನೀಡಿದ್ದಾರೆ. ಈ ಸಂಬಂಧ ಹೊಸನಗರ ತಹಶೀಲ್ದಾರ್ ರಶ್ಮಿ ಅವರು ಚಿತ್ರತಂಡಕ್ಕೆ ನೋಟಿಸ್ ಜಾರಿ ಮಾಡಿದ್ದು, ದಿನಾಂಕ 15-06-2025ರಂದು ದೋಣಿ ಮುಗುಚಿ 30 ಜನರು ನೀರಿಗೆ ಬಿದ್ದಿರುವಂತ ಘಟನೆ ಸಂಬಂಧ ಸ್ಷಷ್ಟನೆ ನೀಡುವಂತೆ ಸೂಚಿಸಿದ್ದಾರೆ. ಇನ್ನೂ ಘಟನೆಯ ಸಂಬಂಧ ಕಾಂತಾರ ಚಾಪ್ಟರ್-1 ಚಿತ್ರತಂಡವು ಮೂರು ದಿನಗಳಲ್ಲಿ ತಹಶೀಲ್ದಾರರ ನೋಟಿಸ್ ಗೆ ಉತ್ತರಿಸುವಂತೆ ಸೂಚಿಸಿದ್ದಾರೆ. ಈ ಹಿನ್ನಲೆಯಲ್ಲಿ ಈಗ ಕಾಂತಾರಾ ಚಾಪ್ಟರ್ -1 ಚಿತ್ರತಂಡಕ್ಕೆ ಮತ್ತೊಂದು ಸಂಕಷ್ಟ ಎದುರಾದಂತೆ ಆಗಿದೆ. ಅಂದಹಾಗೇ ನೀರಲ್ಲಿ ಬೋಡ್ ಬಳಸಿ ಚಿತ್ರೀಕರಿಸಿದಂತ ಆರೋಪ ಕಾಂತಾರ ಚಾಪ್ಟರ್-1 ಚಿತ್ರತಂಡದ ಮೇಲಿದೆ. ಈ ರೀತಿಯ ಚಿತ್ರೀಕರಣಕ್ಕೆ ತಹಶೀಲ್ದಾರ್, ಜಿಲ್ಲಾಡಳಿತದ ಅನುಮತಿಯನ್ನು ಪಡೆಯಬೇಕಿತ್ತು. ಆದರೇ ಚಿತ್ರತಂಡವು ಅನುಮತಿ ಪಡೆಯದೇ ಚಿತ್ರೀಕರಣ ನಡೆಸಿದ್ದಂತ ವೇಳೆಯಲ್ಲಿ ಈ ಘಟನೆ ನಡೆದಿದೆ. https://kannadanewsnow.com/kannada/today-103-unauthorized-bike-taxi-seizures-in-bangalore-rto-additional-commissioner-information/…

Read More

ಬೆಂಗಳೂರು: ರಾಜ್ಯಾಧ್ಯಂತ ಬೈಕ್ ಟ್ಯಾಕ್ಸಿ ಸೇವೆಗಳನ್ನು ರದ್ದುಗೊಳಿಸಿ ಹೈಕೋರ್ಟ್ ಆದೇಶಿಸಿತ್ತು. ಇಂದಿನಿಂದ ರಾಜ್ಯದಲ್ಲಿ ಅನಧಿಕೃತ ಬೈಕ್ ಟ್ಯಾಕ್ಸಿ ಸೇವೆಗಳ ಸಂಚಾರಕ್ಕೆ ಬ್ರೇಕ್ ಹಾಕಲಾಗಿತ್ತು. ಇದರ ನಡುವೆ ಸಂಚರಿಸುತ್ತಿದ್ದಂತ 103 ಬೈಕ್ ಟ್ಯಾಕ್ಸಿಗಳನ್ನು ಸಾರಿಗೆ ಇಲಾಖೆಯಿಂದ ಸೀಜ್ ಮಾಡಲಾಗಿದೆ. ಈ ಕುರಿತಂತೆ ಮಾಹಿತಿ ಹಂಚಿಕೊಂಡಿರುವಂತ ಆರ್ ಟಿ ಓ ಅಡಿಷನಲ್ ಕಮೀಷನರ್ ಮಲ್ಲಿಕಾರ್ಜುನ ಅವರು, ಹೈಕೋರ್ಟ್ ಇಂದಿನಿಂದ ಬೈಕ್ ಟ್ಯಾಕ್ಸಿ ಸಂಚಾರವನ್ನು ನಿಷೇಧಿಸಿತ್ತು. ಹೀಗಿದ್ದರೂ ಅನಧಿಕೃತವಾಗಿ ನಗರದಲ್ಲಿ ಸಂಚರಿಸುತ್ತಿದ್ದಂತ 103 ಬೈಕ್ ಟ್ಯಾಕ್ಸಿಗಳನ್ನು ಸೀಜ್ ಮಾಡಿರುವುದಾಗಿ ತಿಳಿಸಿದ್ದಾರೆ. ಕರ್ನಾಟಕ ಹೈಕೋರ್ಟ್ ಬೈಕ್ ಟ್ಯಾಕ್ಸಿ ಸೇವೆ ಅನಧಿಕೃತ ಎಂಬುದಾಗಿ ಆದೇಶಿಸಿದೆ. ಕಾನೂನಡಿ ಬೈಕ್ ಟ್ಯಾಕ್ಸಿ ಸಂಚಾರಕ್ಕೆ ಅವಕಾಶವಿಲ್ಲ ಎಂದು ಹೇಳಿದೆ. ಹೀಗಾಗಿ ರಾಜ್ಯದಲ್ಲಿ ಬೈಕ್ ಟ್ಯಾಕ್ಸಿ ಸಂಚಾರದ ವಿರುದ್ಧ ಕಾರ್ಯಾಚರಣೆ ಆರಂಭಿಸಿದ್ದೇವೆ ಎಂದರು. ವೈಟ್ ಬೋರ್ಡ್ ವಾಹನವನ್ನು ಕಮರ್ಷಿಯಲ್ ಸೇವೆಗೆ ಬಳಸಲು ಅವಕಾಶವಿಲ್ಲ. ವೈಟ್ ಬೋರ್ಟ್ ಬೈಕ್ ಅಲ್ಲದೇ ಕಾರನ್ನು ಬಳಸುವಂತಿಲ್ಲ. ಈ ಹಿಂದಯೇ ಸಾರಿಗೆ ಇಲಾಖೆ ಬೈಕ್ ಟ್ಯಾಕ್ಸಿಗಳಿಗೆ ಅನುಮತಿ ನೀಡಿಲ್ಲ. ಒಂದು…

Read More

ಬೆಂಗಳೂರು: ನಗರದಲ್ಲಿ Rapido ಬೈಕ್ ಸವಾರ ಯುವತಿಯ ಮೇಲೆ ಹಲ್ಲೆ ಮಾಡಿದ ಪ್ರಕರಣಕ್ಕೆ ಈಗ ಬಿಗ್ ಟ್ವಿಸ್ಟ್ ಸಿಕ್ಕಿದೆ. ಮೊದಲು ಸವಾರ ಹಲ್ಲೆ ಮಾಡಿದ್ದಲ್ಲ, ಯುವತಿಯೇ ಎಂಬುದಾಗಿ ತಿಳಿದು ಬಂದಿದೆ. ಬೆಂಗಳೂರಿನ ಜಯನಗರ ಠಾಣೆ ವ್ಯಾಪ್ತಿಯಲ್ಲಿ Rapido ಬೈಕ್ ಸವಾರ ಯುವತಿಯ ಮೇಲೆ ಹಲ್ಲೆ ಮಾಡಿದ ಸಂಬಂಧ ಕೇಸ್ ದಾಖಲಾಗಿತ್ತು. ಯುವತಿ ನೀಡಿದಂತ ದೂರಿನ ಹಿನ್ನಲೆಯಲ್ಲಿ ಬೈಕ್ ಟ್ಯಾಕ್ಸಿ ಚಾಲಕ ಸುಹಾಸ್ ವಿರುದ್ಧ ಬಿಎನ್ಎಸ್ ಕಾಯ್ದೆಯ 352, 115(2), 79ರಡಿ ಕೇಸ್ ದಾಖಲಾಗಿದೆ. ಇದೀಗ ಈ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಈ ಘಟನೆಯ ವೀಡಿಯೋ ವೈರಲ್ ಆಗಿದ್ದು, ಸಿಸಿಟಿವಿ ಕ್ಯಾಮರಾದಲ್ಲಿ ದಾಖಲಾದಂತ ದೃಶ್ಯಾವಳಿಯಲ್ಲಿ ಯುವತಿಯ ಕಳ್ಳಾಟ ಬಯಲಾಗಿದೆ. ಸಿಸಿಟಿವಿಯಲ್ಲಿ ಯುವತಿ ಹಲ್ಲೆ ಮಾಡ್ತಿರೋ ದೃಶ್ಯ ಸೆರೆಯಾಗಿದೆ. ಆದರೇ ಯುವತಿ Rapido ಬೈಕ್ ಸವಾರನೇ ತಮ್ಮ ಮೇಲೆ ಹಲ್ಲೆ ಮಾಡಿದ್ದಾನೆ ಎಂಬುದಾಗಿ ಆರೋಪಿಸಿದ್ದಳು. ಸಿಸಿಟಿವಿ ದೃಶ್ಯಾವಳಿಯಲ್ಲಿ ಕೆಳಗೆ ಇಳಿದ ತಕ್ಷಣವೇ ಸುಹಾಸ್ ಮೇಲೆ ಯುವತಿ ಶ್ರೇಯಾ ಹಲ್ಲೆ ಮಾಡಿರೋದು ದಾಖಲಾಗಿದೆ. ಮಾತಿಗೆ ಮಾತು…

Read More

ಹುಬ್ಬಳ್ಳಿ: ನೈಋತ್ಯ ರೈಲ್ವೆಯು ಕಾರ್ಯಾಚರಣೆಯ ಕಾರಣಗಳಿಂದ ಹಾಗೂ ಮುಂಬರುವ ರಥಯಾತ್ರೆ ಉತ್ಸವದ ಹಿನ್ನೆಲೆಯಲ್ಲಿ ಕೆಲವು ಸಾಪ್ತಾಹಿಕ ವಿಶೇಷ ಎಕ್ಸ್‌ಪ್ರೆಸ್ ರೈಲುಗಳ ಸೇವೆಗಳನ್ನು ತಾತ್ಕಾಲಿಕವಾಗಿ ರದ್ದುಗೊಳಿಸಿದೆ. ಎ) ಕೇಂದ್ರ ರೈಲ್ವೆಯಲ್ಲಿನ ಕಾರ್ಯಾಚರಣೆಯ ನಿರ್ಬಂಧಗಳಿಂದಾಗಿ ಈ ಕೆಳಗಿನ ರೈಲುಗಳ ಸಂಚಾರವನ್ನು ರದ್ದುಗೊಳಿಸಲಾಗಿದೆ. ರೈಲು ಸಂಖ್ಯೆ 07315 ಎಸ್ಎಸ್ಎಸ್ ಹುಬ್ಬಳ್ಳಿ – ಮುಜಾಫರ್‌ಪುರ ಸಾಪ್ತಾಹಿಕ ವಿಶೇಷ ಎಕ್ಸ್‌ಪ್ರೆಸ್ ರೈಲು 30.06.2025 ರಂದು ಹಾಗೂ ರೈಲು ಸಂಖ್ಯೆ 07316 ಮುಜಾಫರ್‌ಪುರ – ಎಸ್ಎಸ್ಎಸ್ ಹುಬ್ಬಳ್ಳಿ ಸಾಪ್ತಾಹಿಕ ವಿಶೇಷ ಎಕ್ಸ್‌ಪ್ರೆಸ್ ರೈಲು 03.07.2025 ರಂದು ರಂದು ಪ್ರಾರಂಭವಾಗುವ ಪ್ರಯಾಣಗಳನ್ನು ರದ್ದುಗೊಳಿಸಲಾಗಿದೆ. ರೈಲು ಸಂಖ್ಯೆ 06281 ಮೈಸೂರು – ಅಜ್ಮೀರ್ ಸಾಪ್ತಾಹಿಕ ವಿಶೇಷ ಎಕ್ಸ್‌ಪ್ರೆಸ್ ರೈಲು 21.06.2025 ಮತ್ತು 28.06.2025 ರಂದು ಹಾಗೂ ರೈಲು ಸಂಖ್ಯೆ 06282 ಅಜ್ಮೀರ್ – ಮೈಸೂರು ಸಾಪ್ತಾಹಿಕ ವಿಶೇಷ ಎಕ್ಸ್‌ಪ್ರೆಸ್ ರೈಲು 23.06.2025 ಮತ್ತು 30.06.2025 ರಂದು ಪ್ರಾರಂಭವಾಗುವ ಪ್ರಯಾಣಗಳನ್ನು ರದ್ದುಗೊಳಿಸಲಾಗಿದೆ. ಬಿ) ರಥಯಾತ್ರೆ ಉತ್ಸವದ ಹಿನ್ನೆಲೆಯಲ್ಲಿ ಉಂಟಾಗುವ ನಿರ್ಬಂಧಗಳಿಂದಾಗಿ ಈ ಕೆಳಗಿನ ರೈಲುಗಳ…

Read More