Subscribe to Updates
Get the latest creative news from FooBar about art, design and business.
Author: kannadanewsnow09
ಶಿವಮೊಗ್ಗ: ಶಿವಮೊಗ್ಗ ಮಹಾನಗರಪಾಲಿಕೆ ವತಿಯಿಂದ ಆಲ್ಕೊಳ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜಾಗುವ ಫೀಡರ್ ಎ.ಎಫ್-8 ರಲ್ಲಿ ಭೂಗತ ಕೇಬಲ್ ಕಾಮಗಾರಿ ನಡೆಯತ್ತಿರುವುದರಿಂದ ಜ.12 ರಂದು ಬೆಳ್ಳಿಗೆ 9 ಗಂಟೆಯಿಂದ ಸಂಜೆ 5.30 ವರೆಗೆ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ. ಲಕ್ಷ್ಮೀಪುರ ಬಡಾವಣೆ, ಎನ್ಎಂಸಿ ಕಾಂಪೌAಡ್, ಎಸ್ಆರ್ಎಸ್ ಶಾಮಿಯಾನ, ಕೆಂಚಪ್ಪ ಬಡಾವಣೆ, ಸೂಡಾ ಕಛೇರಿ, ಪೊಲೀಸ್ ಚೌಕಿ, ವಿನೋಬನಗರ ಮುಖ್ಯ ರಸ್ತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸಬೇಕೆಂದು ನಗರ ಉಪ ವಿಭಾಗ-3ರ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ತಿಳಿಸಿದ್ದಾರೆ. https://kannadanewsnow.com/kannada/sslc-ii-puc-exam-1-final-schedule-announced-heres-all-you-need-to-know/ https://kannadanewsnow.com/kannada/himachal-man-stunned-by-rs-2-billion-electricity-bill-previous-charge-was/
ತುಮಕೂರು: ಸ್ನೇಹಿತರೊಂದಿಗೆ ಕ್ಷುಲ್ಲಕ ಕಾರಣಕ್ಕಾಗಿ ಜಗಳ ಆಡಿಕೊಂಡು 7ನೇ ತರಗತಿ ವಿದ್ಯಾರ್ಥಿಯೊಬ್ಬ ನೇಣುಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವಂತ ಘಟನೆ ತುಮಕೂರಲ್ಲಿ ನಡೆದಿದೆ. ತುಮಕೂರಿನ ವಿಜಯನಗರದ 2ನೇ ಮುಖ್ಯ ರಸ್ತೆಯಲ್ಲಿರುವಂತ ಬಿಜೆಪಿ ಕಾರ್ಯಕರ್ತೆ ಶಕುಂತಲಾ ನಟರಾಜ್ ಎಂಬುವರ ಪುತ್ರ ತ್ರಿಶಾಲ್(13) ಎಂಬುವರೇ ಆತ್ಮಹತ್ಯೆಗೆ ಶರಣಾದಂತ ವಿದ್ಯಾರ್ಥಿಯಾಗಿದ್ದಾನೆ. ತ್ರಿಶಾಲ್ ಅವರು ವಿಶಾಲ್ ಸರ್ವೋದಯ ಶಾಲೆಯಲ್ಲಿ 7ನೇ ತರಗತಿ ವ್ಯಾಸಂಗ ಮಾಡುತ್ತಿದ್ದರು. ತಾಯಿ ಶಕುಂತಲಾ ಜೊತೆಗೆ ಬಾಡಿಗೆ ಮನೆಯಲ್ಲಿ ವಾಸವಿದ್ದರು. ಇಂದು ಬೆಳಗ್ಗೆ ಮನೆಯಲ್ಲಿ ಯಾರು ಇಲ್ಲದ ಸಂದರ್ಭದಲ್ಲಿ ತ್ರಿಶಾಲ್ ನೇಣಿಗೆ ಶರಣಾಗಿದ್ದಾನೆ. ಸಾವಿಗೂ ಮುನ್ನ ಡೆತ್ ನೋಟ್ ಬರೆದಿದ್ದು, ಪಾರಿವಾಳ ಬೆಟ್ಟಿಂಗ್ ವಿಚಾರಕ್ಕೆ ಸ್ನೇಹಿತರ ನಡುವೆ ಗಲಾಟೆಯಾಗಿತ್ತು. ಅದೇ ವಿಚಾರಕ್ಕೆ ತಾನು ಮನನೊಂದು ಆತ್ಮಹತ್ಯೆಗೆ ಶರಣಾಗುತ್ತಿರುವುದಾಗಿ ತಿಳಿಸಿದ್ದಾನೆ. ಘಟನಾ ಸ್ಥಳಕ್ಕೆ ಜಯನಗರ ಠಾಣೆಯ ಪೊಲೀಸರು ಆಗಮಿಸಿ, ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. https://kannadanewsnow.com/kannada/sslc-ii-puc-exam-1-final-schedule-announced-heres-all-you-need-to-know/ https://kannadanewsnow.com/kannada/himachal-man-stunned-by-rs-2-billion-electricity-bill-previous-charge-was/
ಬೆಂಗಳೂರು: ಈಗಾಗಲೇ ಎಸ್ ಎಸ್ ಎಲ್ ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆ-1ಕ್ಕೆ ( SSLC and PUC Exam-1 ) ತಾತ್ಕಾಲಿಕ ವೇಳಾಪಟ್ಟಿಯನ್ನು ಪ್ರಕಟಿಸಲಾಗಿತ್ತು. ಇಂದು ಶಾಲಾ ಶಿಕ್ಷಣ ಇಲಾಖೆಯಿಂದ ಅಂತಿಮ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ. ಇಂದು ಪತ್ರಿಕಾ ಪ್ರಕಟಣೆಯಲ್ಲಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಅಧ್ಯಕ್ಷರು ಮಾಹಿತಿ ನೀಡಿದ್ದಾರೆ. ಅದರಲ್ಲಿ 2024-25ನೇ ಸಾಲಿನ ಎಸ್ ಎಸ್ ಎಲ್ ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆ-1ರ ಅಂತಿಮ ವೇಳಾಪಟ್ಟಿಯನ್ನು ಮಂಡಳಿಯ ಜಾಲತಾಣದಲ್ಲಿ ಪ್ರಕಟಿಸಿರುವುದಾಗಿ ತಿಳಿಸಿದ್ದಾರೆ. ಇನ್ನೂ ದಿನಾಂಕ 10-01-2025ರ ಇಂದು ಎಸ್ ಎಸ್ ಎಲ್ ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆ-1ರ ಅಂತಿಮ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದ್ದು, ರಾಜ್ಯದ ಎಲ್ಲಾ ಪ್ರೌಢ ಶಾಲಾ ಮುಖ್ಯ ಶಿಕ್ಷಕರು ಹಾಗೂ ಪದವಿಪೂರ್ವ ಕಾಲೇಜುಗಳ ಪ್ರಾಂಶುಪಾಲರು ತಮ್ಮ ಶಾಲಾ, ಕಾಲೇಜುಗಳ ಪ್ರಕಟಣಾ ಫಲಕದಲ್ಲಿ ಪ್ರಕಟಿಸಿ, ವಿದ್ಯಾರ್ಥಿಗಳಿಗೆ ಮಾಹಿತಿ ನೀಡುವಂತೆ ಸೂಚಿಸಿದ್ದಾರೆ. ಹೀಗಿದೆ ಎಸ್ ಎಸ್ ಎಲ್ ಸಿ ಪರೀಕ್ಷೆ-1ರ ಅಂತಿಮ ವೇಳಾಪಟ್ಟಿ ಹೀಗಿದೆ…
ಬೆಂಗಳೂರು: ಸರ್ಕಾರಿ ಕೆರೆಯ ಜಮೀನನ್ನು ಒತ್ತುವರಿ ಮಾಡಿ ಶೌಚಾಲಯ ಮತ್ತು ಮನೆಗಳನ್ನು ನಿರ್ಮಾಣ ಮಾಡಿದ್ದ 3 ಆರೋಪಿಗಳಿಗೆ 1 ವರ್ಷ ಕಾರಾಗೃಹ ಶಿಕ್ಷೆ ವಿಧಿಸಿ ಕರ್ನಾಟಕ ಭೂ ಕಬಳಿಕೆ ನಿಷೇಧ ವಿಶೇಷ ನ್ಯಾಯಾಲಯವು ಆದೇಶಿಸಿದೆ. ಬೆಂಗಳೂರು ನಗರ ಜಿಲ್ಲೆ, ಆನೇಕಲ್ ತಾಲ್ಲೂಕು, ಅತ್ತಿಬೆಲೆ ಹೋಬಳಿ, ಹೆಬ್ಬಗೋಡಿ ಗ್ರಾಮದ ಸರ್ವೇ ನಂ.159 ರ 32 ಎಕರೆ 13 ಗುಂಟೆ ಸರ್ಕಾರಿ ಕೆರೆಯ ಜಮೀನನ್ನು ಆರೋಪಿಗಳಾದ ಎ1- ಕೃಷ್ಣಪ್ಪ, ಎ2- ನಂಜಪ್ಪ, ಎ3- ರಾಮಯ್ಯ, ಎ4- ಎಂ.ವೆಂಕಟೇಶ್, ಎ5- ಹೆಚ್.ಎಂ.ಸುಬ್ಬಣ್ಣ, ಎ6- ಲಕ್ಷ್ಮೀದೇವಿ, ಎ7- ಪಿಳ್ಳಪ್ಪ ರವರುಗಳು ಅನಧಿಕೃತವಾಗಿ ಒತ್ತುವರಿ ಮಾಡಿಕೊಂಡು ಶೌಚಾಲಯ ಮತ್ತು ವಾಸದ ಮನೆಗಳನ್ನು ನಿರ್ಮಾಣ ಮಾಡಿದ್ದು, ಸದರಿ ರವರ ವಿರುದ್ಧ ಬಿಎಂಟಿಎಫ್ ಪೊಲೀಸ್ ಠಾಣೆ ಮೊ.ಸಂ: 19/2012 : 192(ಎ) ಕೆ.ಎಲ್.ಆರ್ ಆಕ್ಟ್ ರೀತ್ಯಾ ದಿನಾಂಕ: 22-02-2012 ಪ್ರಕರಣ ದಾಖಲಾಗಿ ಬಿಎಂಟಿಎಫ್ ಪೊಲೀಸ್ ಠಾಣೆಯಲ್ಲಿ ತನಿಖೆ ಕೈಗೊಳ್ಳಲಾಗಿತ್ತು. ಸದರಿ ಪ್ರಕರಣದಲ್ಲಿ ತನಿಖೆಯನ್ನು ಕೈಗೊಂಡು ಸಾಕ್ಷಾಧಾರಗಳನ್ನು ಮತ್ತು ದಾಖಲಾತಿಗಳನ್ನು ಸಂಗ್ರಹಿಸಿ ಆರೋಪಿಗಳ ವಿರುದ್ಧ…
ಬೆಂಗಳೂರು : ಇಂಡಿಯನ್ ಕೌನ್ಸಿಲ್ ಆಫ್ ಮೆಡಿಕಲ್ ರಿಸರ್ಚ್ (ICMR) ದಕ್ಷಿಣ ಭಾರತದಲ್ಲಿ ಮೊದಲ ಸಾಂಕ್ರಾಮಿಕ ರೋಗ ಸಂಶೋಧನೆ ಮತ್ತು ರೋಗನಿರ್ಣಯ ಪ್ರಯೋಗಾಲಯಗಳನ್ನು (IRDLs) ಸ್ಥಾಪಿಸಲು ಬೆಂಗಳೂರು ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆಯನ್ನು (BMC&RI) ಆಯ್ಕೆ ಮಾಡಿದೆ. ದಕ್ಷಿಣ ಭಾರತದಲ್ಲಿ ಮೊದಲ ಬಾರಿಗೆ ಈ ರೀತಿಯ ಕೇಂದ್ರ ಬೆಂಗಳೂರಿನಲ್ಲಿ ಆರಂಭವಾಗಲಿದ್ದು, ಇದರಿಂದ ರಾಜ್ಯದಲ್ಲಿ ಸಂಶೋಧನೆ ಕ್ಷೇತ್ರಕ್ಕೆ ನೆರವಾಗಲಿದೆ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಸಚಿವ ಡಾ.ಶರಣ ಪ್ರಕಾಶ್ ಪಾಟೀಲ್ ಸಂತಸ ವ್ಯಕ್ತಪಡಿಸಿದ್ದಾರೆ. ಪ್ರಯೋಗಾಲಯದ ಪ್ರಯೋಜನಗಳು ಕೇಂದ್ರ ಸರ್ಕಾರವು ವಿವಿಧ ರಾಜ್ಯಗಳ ವೈದ್ಯಕೀಯ ಕಾಲೇಜುಗಳಲ್ಲಿ ಸಾಂಕ್ರಾಮಿಕ ರೋಗ ಸಂಶೋಧನೆ ಮತ್ತು ರೋಗನಿರ್ಣಯ ಪ್ರಯೋಗಾಲಯಗಳನ್ನು (IRDLs) ಸ್ಥಾಪಿಸಲು ಮುಂದಾಗಿದೆ. ಬ್ಯಾಕ್ಟೀರಿಯಾಲಜಿ, ಮೈಕಾಲಜಿ ಮತ್ತು ಪ್ಯಾರಾಸಿಟಾಲಜಿಗೆ ಸಂಬಂಧಿಸಿದಂತೆ ವೈರಸ್ ಸಂಶೋಧನೆ ಮತ್ತು ರೋಗನಿರ್ಣಯ ಪ್ರಯೋಗಾಲಯಗಳಿಗೆ (VRDLs) ಆದ್ಯತೆ ನೀಡಲಾಗುತ್ತಿದೆ. ರೋಗ ನಿರ್ಣಯದ ಬಗ್ಗೆ ಹೆಚ್ಚಿನ ಸಂಶೋಧನೆ ನಡೆಸಲು ಇದರಿಂದ ಸಾಧ್ಯವಾಗಲಿದೆ, ಈ ನಿಟ್ಟಿನಲ್ಲಿ ನಮ್ಮಲಿನ ಸಾಮರ್ಥ್ಯಗಳನ್ನು ಅಭಿವೃದ್ಧಿ ಪಡಿಸುವ ಗುರಿಯನ್ನು…
ಬೆಂಗಳೂರು: ಅಂತರ ನಿಗಮ ವರ್ಗಾವಣೆಗೆ ಅರ್ಜಿ ಸಲ್ಲಿಸಿದ್ದಂತ ಸಾರಿಗೆ ನೌಕರರಿಗೆ ಇಲಾಖೆಯಿಂದ ಗುಡ್ ನ್ಯೂಸ್ ನೀಡಲಾಗಿದೆ. ಇದೀಗ ಕೌನ್ಸಿಲಿಂಗ್ ಮೂಲಕ ವರ್ಗಾವಣೆ ಮಾಡಲು ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಕೆ ಎಸ್ ಆರ್ ಟಿಸಿ ವ್ಯವಸ್ಥಾಪಕ ನಿರ್ದೇಶಕರು ಮಾಹಿತಿ ನೀಡಿದ್ದು, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ಬೆಂ.ಮ.ಸಾ.ಸಂಸ್ಥೆ, ಕ.ಕ.ರ.ಸಾ.ಸಂಸ್ಥೆ ಮತ್ತು ವಾ.ಕ.ರ.ಸಾ.ಸಂಸ್ಥೆಗಳ ದರ್ಜೆ-3 ಮೇಲ್ವಿಚಾರಕೇತರ ಮತ್ತು ದರ್ಜೆ-4 ರ ನೌಕರರು ಅಂತರ ನಿಗಮ ಸಾಮಾನ್ಯ ವರ್ಗಾವಣೆಗೆ ಕೋರಿಕೆ ಮೇರೆಗೆ 1,252 ನೌಕರರು ಅಂತರ ನಿಗಮ ವರ್ಗಾವಣೆಗೊಂಡಿರುತ್ತಾರೆ. ಸದರಿ ಅಂತರ ನಿಗಮ ವರ್ಗಾವಣೆ ಆದೇಶವನ್ನು ksrtc.karnataka.gov.in ವೆಬ್ಸೈಟ್ನಲ್ಲಿ ದಿನಾಂಕ:30.12.2024 ರಂದು ಪ್ರಕಟಿಸಲಾಗಿದೆ ಎಂದಿದ್ದಾರೆ. ಸದರಿ ವರ್ಗಾವಣೆ ಪ್ರಕ್ರಿಯೆಯನ್ನು ಪಾರದರ್ಶಕವಾಗಿ ಕೈಗೊಳ್ಳಲಾಗಿದ್ದು, ವರ್ಗಾವಣೆಯಾಗಿರುವ ನಿಗಮ/ಸಂಸ್ಥೆಗಳಲ್ಲಿನ ಸೇವಾ ಜೇಷ್ಠತೆ ಹಾಗೂ ಖಾಲಿ ಹುದ್ದೆಗಳಿಗನುಗುಣವಾಗಿ ಕೌನ್ಸಲಿಂಗ್ ಮೂಲಕ ವಿಭಾಗಗಳಿಗೆ ಹಂಚಿಕೆ ಮಾಡಲಾಗುವುದು. ಕೌನ್ಸಲಿಂಗ್ ದಿನಾಂಕ: 15.01.2025 ರಿಂದ 25.01.2025 ರವರೆಗೆ ವೆಬ್ಸೈಟ್ www.ksrtc.org/transfer ನಲ್ಲಿ ನಡೆಸಲಾಗುವುದು. ಒಮ್ಮೆ ಆದ್ಯತೆ ಸಲ್ಲಿಸಿದ ನಂತರ ಯಾವುದೇ…
ಬೆಳಗಾವಿ: ಆ ಗ್ರಾಮಸ್ಥರಿಗಿದ್ದಂತ ಕಂದಾಯ ಭೂಮಿಯನ್ನು 11ಎ ನಕ್ಷೆ ಮಂಜೂರಾತಿಯ ನಿಯಮವನ್ನು ಉಲ್ಲಂಘಿಸಿ, ಸರಿಯಾಗಿ ಮಂಜೂರಾತಿ ಪರಿಶೀಲಿಸದೇ ನಿರ್ಲಕ್ಷ್ಯವನ್ನು ಕಂದಾಯ ಇಲಾಖೆಯ ಅಧಿಕಾರಿಗಳು ತೋರಿದ್ದರು. ಈ ಹಿನ್ನಲೆಯಲ್ಲಿ ಕಂದಾಯ ಇಲಾಖೆಯ ಆಯುಕ್ತರು ಮೂವರು ಅಧಿಕಾರಿಗಳನ್ನು ಅಮಾನತುಗೊಳಿಸಿ ಆದೇಶಿಸಿದ್ದಾರೆ. ಈ ಸಂಬಂಧ ಭೂ ಮಾಪನ ಕಂದಾಯ ವ್ಯವಸ್ಥೆ ಮತ್ತು ಭೂ ದಾಖಲೆಗಳ ಇಲಾಖೆಯ ಆಯುಕ್ತ ಜೆ.ಮಂಜುನಾಥ್ ಆದೇಶಿಸಿದ್ದಾರೆ. ಬೆಳಗಾವಿಯ ಹುನಗುಂದ ಗ್ರಾಮದ ಸರ್ವೆ ನಂ.3ರಲ್ಲಿ 508 ಎಕರೆ 20 ಗುಂಜೆ ಜಮೀನಿಗೆ 11ಎ ನಕ್ಷೆ ಮಾಡಿಕೊಡಲು ನಿರ್ಲಕ್ಷ್ಯವನ್ನು ವಹಿಸಿದ್ದ ಬಗ್ಗೆ ದೂರು ನೀಡಲಾಗಿತ್ತು. ಹುನಗುಂದ ಗ್ರಾಮಸ್ಥರು ಕಂದಾಯ ಇಲಾಖೆಯ ಆಯುಕ್ತರಿಗೆ ದೂರು ನೀಡಿದ್ದರು. 11ಎ ನಕ್ಷೆ ಮಂಜೂರಾತಿಯಲ್ಲಿ ಕಂದಾಯ ಇಲಾಖೆಯ ಅಧಿಕಾರಿಗಳು ತೋರಿದಂತ ನಿರ್ಲಕ್ಷ್ಯದಿಂದ ಭೂಮಿಯನ್ನು ಕಳೆದುಕೊಳ್ಳುವ ಹಂತಕ್ಕೆ ಹುನಗುಂದ ಗ್ರಾಮಸ್ಥರು ಬಂದು ನಿಂತಿದ್ದರು. ಹೀಗಾಗಿ ನಕಲಿ ದಾಖಲೆ ಸೃಷ್ಠಿಸಿ ನೀಡಿದ್ದರೂ ಕಂದಾಯ ಇಲಾಖೆಯ ಅಧಿಕಾರಿಗಳು ಕ್ರಮ ವಹಿಸುತ್ತಿಲ್ಲ. ಸೂಕ್ತ ರೀತಿಯಲ್ಲಿ ಅವರ ವಿರುದ್ಧ ಕ್ರಮಕ್ಕೆ ಮನವಿಯನ್ನು ಕಂದಾಯ ಇಲಾಖೆ ಆಯುಕ್ತರಿಗೆ ಮಾಡಿದ್ದರು.…
ಬೆಂಗಳೂರು : 20 ವರ್ಷಗಳಿಂದ ನೀವೇ ಮುಡಾ ಸದಸ್ಯರಾಗಿದ್ದೀರಿ. ಆದ್ರೂ ಯಾಕಿಂಗಾಯ್ತು. ಇಷ್ಟೆಲ್ಲಾ ಅವ್ಯವಸ್ಥೆ ಯಾಕಾಯ್ತು ಎಂದು ಬಿಜೆಪಿ-ಜೆಡಿಎಸ್-ಕಾಂಗ್ರೆಸ್ ಶಾಸಕರುಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಶ್ನಿಸಿದರು. ಗೃಹ ಕಚೇರಿ ಕೃಷ್ಣದಲ್ಲಿ ಮೈಸೂರು ಅಭಿವೃದ್ಧಿ ಸಂಬಂಧ ಜಿಲ್ಲೆಯ ಶಾಸಕರು, ಸಂಸದರು, ವಿಧಾನ ಪರಿಷತ್ ಸದಸ್ಯರುಗಳ ಜೊತೆ ನಡೆದ ಸಭೆಯಲ್ಲಿ ಮೇಲಿನಂತೆ ಪ್ರಶ್ನಿಸಿದರು. ಮೈಸೂರಿನ ಖಾಸಗಿ ಬಡಾವಣೆಗಳಲ್ಲಿನ ಮೂಲಭೂತ ಸವಲತ್ತುಗಳ ಕೊರತೆ, ಕಳಪೆ ನಿರ್ವಹಣೆ, ನೀರು-ಒಳಚರಂಡಿ ವ್ಯವಸ್ಥೆ ಸರಿಯಾಗಿ ಇಲ್ಲದಿರುವ ಬಗ್ಗೆ ಶಾಸಕರು ಮುಖ್ಯಮಂತ್ರಿಗಳ ಗಮನಕ್ಕೆ ತಂದರು. ಈ ಬಗ್ಗೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿಗಳು, ಅಲ್ರೀ ಎಲ್ಲಾ ಪಕ್ಷದ ಶಾಸಕರು ನೀವುಗಳೇ ಸುಮಾರು 20 ವರ್ಷಗಳಿಂದ ಮುಡಾ ಸದಸ್ಯರಿದ್ದೀರಿ. ನೀವುಗಳು ಸದಸ್ಯರಾಗಿದ್ದೂ ಯಾಕಿಂಗಾಯ್ತು? ಯಾಕೆ ಅವ್ಯವಸ್ಥೆ ಆಗಲು ಬಿಟ್ಟಿದ್ದೀರಿ ಎಂದು ಮುಖ್ಯಮಂತ್ರಿಗಳು ಕೇಳಿದರು. ಹೊಸ ಬಡಾವಣೆ ಮಾಡುವಾಗ ವಿದ್ಯುತ್ ಸಂಪರ್ಕ, ರಸ್ತೆ, ಒಳಚರಂಡಿ ಇತ್ಯಾದಿ ಸೌಲಭ್ಯಗಳನ್ನು ಕಲ್ಪಿಸುವುದು ಬಡಾವಣೆ ಅಭಿವೃದ್ಧಿ ಮಾಡುವವರ ಜವಾಬ್ದಾರಿ. ಬಳಿಕ ಅದನ್ನು ನಗರ ಸ್ಥಳೀಯ ಸಂಸ್ಥೆಗೆ ಹಸ್ತಾಂತರಿಸಬೇಕಾಗಿತ್ತು. ಆದರೆ ಇಂತಹ ಸುಮಾರು…
ಬೆಂಗಳೂರು: ನಟ ದರ್ಶನ್ ನ್ಯಾಯಾಂಗ ವ್ಯಾಪ್ತಿಯನ್ನು ಬಿಟ್ಟು ಬೇರೆಡೆಗೆ ತೆರಳದಂತೆ ಷರತ್ತು ವಿಧಿಸಿ ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ಜಾಮೀನು ನೀಡಿತ್ತು. ಇಂದು ನಟ ದರ್ಶನ್ ಗೆ ಕೊಂಚ ರಿಲೀಫ್ ಎನ್ನುವಂತೆ ಐದು ದಿನಗಳ ಕಾಲ ಮೈಸೂರಿಗೆ ತೆರಳೋದಕ್ಕೆ ಕೋರ್ಟ್ ಅನುಮತಿ ನೀಡಿದೆ. ಇಂದು ಬೆಂಗಳೂರಿನ ಸಿಸಿಹೆಚ್ 57ನೇ ನ್ಯಾಯಾಲಯದಲ್ಲಿ ಮೈಸೂರಿಗೆ ತೆರಳೋದಕ್ಕೆ ಅವಕಾಶ ನೀಡುವಂತೆ ನಟ ದರ್ಶನ್ ಅವರು ಸಲ್ಲಿಸಿದ್ದಂತ ಅರ್ಜಿಯ ವಿಚಾರಣೆ ನಡೆಸಲಾಯಿತು. ಮೈಸೂರಿನ ದೇವಸ್ಥಾನಗಳಿಗೆ ತೆರಳು ಕೋರ್ಟ್ ನಟ ದರ್ಶನ್ ಅವರಿಗೆ ಅನುಮತಿ ನೀಡಿದೆ. ಜನವರಿ.12ರಿಂದ 5 ದಿನಗಳ ಕಾಲ ಮೈಸೂರಿಗೆ ತೆರಳಲು ಕೋರ್ಟ್ ಅನುಮತಿ ನೀಡಿದೆ. ಇನ್ನೂ ಆರೋಪಿ ಪವಿತ್ರಾ ಗೌಡ ಅವರ ರಾಜರಾಜೇಶ್ವರಿ ನಗರದಲ್ಲಿರುವಂತ ರೆಡ್ ಕಾರ್ಪೆಂಟ್ ಶೋರೂಂಗೆ ಮುಂಬೈ, ದೆಹಲಿಗೆ ವ್ಯವಹಾರಿಕ ಉದ್ದೇಶಕ್ಕೆ ತೆರಳಿ ವಸ್ತುಗಳನ್ನು ಖರೀದಿಸಿ ತರಲು ಕೋರ್ಟ್ ಅನುಮತಿ ನೀಡಿದೆ. ರೆಡ್ ಕಾರ್ಪೆಟ್ ಶೋರೂಂಗೆ ಐಟಂ ತರಲು ಅವಕಾಶವನ್ನು ನೀಡಿದೆ. https://kannadanewsnow.com/kannada/rate-fixed-for-everything-in-the-state-union-minister-hdk/ https://kannadanewsnow.com/kannada/himachal-man-stunned-by-rs-2-billion-electricity-bill-previous-charge-was/
ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರಕಾರದಲ್ಲಿ ಪ್ರತಿಯೊಂದಕ್ಕೆ ರೇಟ್ ಕಾರ್ಡ್ ಫಿಕ್ಸ್ ಆಗಿದೆ . ಕಂದಾಯ ಇಲಾಖೆಯಲ್ಲಿ ಎಲ್ಲಾ ಪೋಸ್ಟ್ ಗಳಿಗೂ ರೇಟ್ ನಿಗದಿ ಮಾಡಲಾಗಿದೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ನೇರ ಆರೋಪ ಮಾಡಿದರು. ಬೆಂಗಳೂರಿನಲ್ಲಿ ಶನಿವಾರ ಬೆಳಗ್ಗೆ ಮಾಧ್ಯಮಗಳು ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದ ಸಚಿವರು, 60% ಕಮೀಷನ್ ಆರೋಪವನ್ನು ಪುನರುಚ್ಚರಿಸಿದರು. 60% ಕಮೀಷನ್ ಆರೋಪಕ್ಕೆ ಕುಮಾರಸ್ವಾಮಿ ದಾಖಲೆ ಕೊಡಲಿ ಎಂದು ಹೇಳುತ್ತಿದ್ದಾರೆ. ಕಾಂಗ್ರೆಸ್ ಪಕ್ಷದ ಮುಖಂಡರು, ಗುತ್ತಿಗೆದಾರರೇ ಪರ್ಸಂಟೇಜ್ ಆರೋಪ ಮಾಡುತ್ತಿದ್ದಾರೆ. ಅವರನ್ನು ಪರ್ಸಂಟೇಜ್ ಕೇಳದಿದ್ದರೆ ಅವರು ಯಾಕೆ ಆರೋಪ ಮಾಡುತ್ತಿದ್ದರು. ಸರ್ಕಾರ ಅವರನ್ನೇ ಕೇಳಿ ದಾಖಲೆ ಪಡೆದುಕೊಳ್ಳಬೇಕು ಎಂದರು ಕೇಂದ್ರ ಸಚಿವರು. ಸಿದ್ದರಾಮಯ್ಯ ಅವರು ಮಹಾನ್ ನಾಯಕರು. ಪೇ ಸಿಎಂ ಅಂತ ಪೋಸ್ಟರ್ ಅಂಟಿಸಲು ಹೋಗಿದ್ದರು. ಅವರು ಇಲ್ಲಿಯವರೆಗೆ ಯಾವ ದಾಖಲೆ ಇಟ್ಟಿದ್ದಾರೆ ಜನರ ಮುಂದೆ. ಕೆಂಪಣ್ಣ ಹೇಳಿದರು ಕೆಂಪಣ್ಣ ಹೇಳಿದರು ಎಂದು ಸಿದ್ದರಾಮಯ್ಯ ಹೇಳುತ್ತಾರೆ. ಆದರೆ, ಕೆಂಪಣ್ಣ ಅವರಿಂದ ಸಿದ್ದರಾಮಯ್ಯ ಅವರು ದಾಖಲೆ ಪಡೆದುಕೊಳ್ಳಬೇಕಿತ್ತಲ್ಲವೇ? ಈಗ ಕಂಟ್ರಾಕ್ಟರ್…











