Subscribe to Updates
Get the latest creative news from FooBar about art, design and business.
Author: ವಸಂತ ಬಿ ಈಶ್ವರಗೆರೆ
ವಸಂತ ಬಿ ಈಶ್ವರಗೆರೆ (Vasantha B Eshwaragere) ಅವರು ಕರ್ನಾಟಕದ ಪತ್ರಕರ್ತರು ಮತ್ತು ಕವಿ. ಉದಯ ನ್ಯೂಸ್, ಟಿವಿ5 ಕನ್ನಡ ಸೇರಿದಂತೆ ವಿವಿಧ ಸುದ್ದಿ ಮಾಧ್ಯಮಗಳಲ್ಲಿ ಸುಮಾರು 15 ವರ್ಷಗಳ ಅನುಭವವನ್ನು ಹೊಂದಿದ್ದಾರೆ. ಪ್ರಸ್ತುತ ಅವರು Kannada News Now ಡಿಜಿಡಿಲ್ ಮಾಧ್ಯಮದಲ್ಲಿ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರು ತಾಜಾ ಸುದ್ದಿ, ಸಾಹಿತ್ಯ, ಸಾಮಾಜಿಕ ವರದಿಗಾರಿಕೆ, ನ್ಯಾಯಾಂಗ ಸಂಬಂಧಿತ ವರದಿ ಮತ್ತು ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ಸುದ್ದಿಗಳ ವರದಿಯಲ್ಲಿ ಸಕ್ರಿಯರಾಗಿದ್ದಾರೆ. ಗುಡವಿ ಪಕ್ಷಿಧಾಮದಂತಹ ಪ್ರವಾಸಿ ತಾಣಗಳ ಕುರಿತು ಲೇಖನಗಳನ್ನು ಬರೆದಿದ್ದಾರೆ.
ಗುಜರಾತ್: ಜೂನ್.12ರಂದು ಅಹಮದಾಬಾದಿನ ವಿಮಾನ ನಿಲ್ದಾಣದ ಸಮೀಪದಲ್ಲೇ ಏರ್ ಇಂಡಿಯಾ ವಿಮಾನ ಪತನಗೊಂಡಿತ್ತು. ಈ ದುರಂತದಲ್ಲಿ ಓರ್ವ ಪ್ರಯಾಣಿಕ ಹೊರತುಪಡಿಸಿ 241 ಮಂದಿ ಸಾವನ್ನಪ್ಪಿದ್ದರು. ಈ ದುರಂತದಲ್ಲಿ ಬಚಾವ್ ಆಗಿ ಬಂದಂತ ಪ್ರಯಾಣಿಕರ ಮತ್ತೊಂದು ಭಯಾನಕ ವೀಡಿಯೋ ವೈರಲ್ ಆಗಿದೆ. ಅಹಮದಾಬಾದ್ನ ಏರ್ ಇಂಡಿಯಾ ವಿಮಾನ ಅಪಘಾತ ಸ್ಥಳದಿಂದ ಹೊಸ ವೀಡಿಯೊ ಹೊರಬಿದ್ದಿದ್ದು, ಅಪಘಾತದಲ್ಲಿ ಬದುಕುಳಿದ ಏಕೈಕ ವ್ಯಕ್ತಿ ವಿಶ್ವಾಸ್, ಅಪಘಾತ ಸ್ಥಳದಿಂದ ನಡೆದುಕೊಂಡು ಹೋಗುತ್ತಿರುವುದನ್ನು ಇದು ತೋರಿಸುತ್ತದೆ. ಆ ವೀಡಿಯೋ ಕೆಳಗಿದೆ ನೋಡಿ. https://twitter.com/TheGemsofX/status/1934460917225492849 ಅಂದಹಾಗೇ ಗುಜರಾತಿನ ಅಹಮದಾಬಾದಿನಲ್ಲಿ ನಡೆದಂತ ಏರ್ ಇಂಡಿಯಾ ವಿಮಾನ ಪತನ ದುರಂತದಲ್ಲಿ 241 ಮಂದಿ ಸಾವನ್ನಪ್ಪಿದ್ದಾರೆ. ಈ ದುರಂತದ ಬಳಿಕ ಈವರೆಗೆ 99 ಮೃತದೇಹಗಳ ಡಿಎನ್ಎ ಮ್ಯಾಚ್ ಆಗಿದ್ದು, ಕೆಲ ಮೃತದೇಹಗಳನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಗಿದೆ. ಇನ್ನೂ ಹಲವರ ಡಿಎನ್ಎ ಪರಿಶೀಲನೆಯನ್ನು ಮಾಡಲಾಗುತ್ತಿದೆ. https://kannadanewsnow.com/kannada/attention-bengaluru-citizens-on-june-19th-there-will-be-a-disruption-in-the-supply-of-cauvery-water-in-these-areas-of-the-city/ https://kannadanewsnow.com/kannada/case-registered-against-three-in-sadanand-murder-case-in-sagar-what-is-in-the-fir/
ಬೆಂಗಳೂರು: ಬೃಹತ್ ಬೆಂಗಳೂರು ನಗರದ ಜನತೆಗೆ ಯಾವುದೇ ಅಡತಡೆಯಿಲ್ಲದೇ ನೀರನ್ನು ಸರಬರಾಜು ಮಾಡುವ ಸದುದ್ದೇಶದಿಂದ ಟಿ.ಕೆ. ಹಳ್ಳಿಯಲ್ಲಿ ಕಾವೇರಿ 5ನೇ ಹಂತದ ಕೊಳವೆ ಮಾರ್ಗಕ್ಕೆ ಹೊಸ 3000 ಮಿ.ಮೀ. ವ್ಯಾಸ ಕೊಳವೆ ಮಾರ್ಗದ ಜೋಡಣೆ, ಕರ್ನಾಟಕ ವಿದ್ಯುತ್ ಪ್ರಸರಣ ನಿಗಮವು ಸೂಚಿಸಿರುವ ವಿದ್ಯುತ್ ಸ್ಥಾವರಗಳ ವಾರ್ಷಿಕ ನಿರ್ವಹಣೆ, ತುರ್ತು ಕಾಮಗಾರಿ ಮತ್ತು ವಿವಿಧ ವಾರ್ಷಿಕ/ನಿಯಮಿತ ತುರ್ತು ನಿರ್ವಹಣಾ ಕಾಮಗಾರಿಗಳನ್ನು ಶೀಘ್ರವಾಗಿ ಕೈಗೆತ್ತಿಕೊಳ್ಳಬೇಕಾಗಿರುತ್ತದೆ. ಆದ್ದರಿಂದ ತುರ್ತು ನಿರ್ವಹಣಾ ಕಾಮಗಾರಿಗಳನ್ನ ಕೈಗೊಳ್ಳುವ ಸಲುವಾಗಿ ದಿನಾಂಕ: 19-06-2025 ರ ಗುರುವಾರ ಬೆಳಿಗ್ಗೆ 6-00 ಗಂಟೆಯಿಂದ ದಿನಾಂಕ: 20-06-2025 ಶುಕ್ರವಾರದ ಬೆಳಿಗ್ಗೆ 6-0 ಗಂಟೆಯವರೆಗೆ ಒಟ್ಟು 24 ಗಂಟೆಗಳ ಕಾವೇರಿ ನೀರು ಸರಬರಾಜು ಯೋಜನೆಯ ಹಂತ-1 ರಿಂದ ಹಂತ – 5 ರ ಎಲ್ಲಾ ಜಲರೇಚಕ ಯಂತ್ರಾಗಾರಗಳನು ಸ್ಥಗಿತಗೊಳಿಸಲು ಸಕ್ಷಮ ಪ್ರಾಧಿಕಾರದಿಂದ ಅನುಮತಿ ದೊರೆತಿರುತ್ತದೆ. ಈ ಹಿನ್ನಲೆಯಲ್ಲಿ, 24 ಗಂಟೆಗಳ ಕಾಲ ಕಾವೇರಿ ನೀರು ಸರಬರಾಜು ಯೋಜನೆಯ ಹಂತ-1 ರಿಂದ ಹಂತ-5ರವರೆಗಿನ ಜಲರೇಚಕ ಯಂತ್ರಾಗಾರಗಳನ್ನು ಸ್ಥಗಿತಗೊಳಿಸಲಾಗುವುದು. ಇದರಿಂದಾಗಿ…
ಬೆಂಗಳೂರು: ಪವನ ವಿದ್ಯುತ್ ಉತ್ಪಾದನೆಯಲ್ಲಿ ಕರ್ನಾಟಕಕ್ಕೆ ಮೊದಲ ಸ್ಥಾನ ಲಭಿಸಿದೆ. ಬರೋಬ್ಬರಿ 1331.48 ಮೆಗಾವ್ಯಾಟ್ ಪವನ ವಿದ್ಯುತ್ ಸಾಮರ್ಥ್ಯ ಸಾಧಿಸಿದ ಮೊದಲ ರಾಜ್ಯ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಬೆಂಗಳೂರಿನಲ್ಲಿ ಭಾನುವಾರ ಆಯೋಜಿಸಿದ್ದ ‘ಗ್ಲೋಬಲ್ ವಿಂಡ್ ಡೇ’ 2025 “ಪವನ್-ಉರ್ಜಾ: ಪವರಿಂಗ್ ದಿ ಫ್ಯೂಚರ್ ಆಫ್ ಇಂಡಿಯಾ” ಸಮಾರಂಭದಲ್ಲಿ ಕೇಂದ್ರ ನವ ಮತ್ತು ನವೀಕರಿಸಬಹುದಾದ ಇಂಧನ ಸಚಿವ ಪ್ರಲ್ಹಾದ್ ಜೋಶಿ ಅವರಿಂದ ಇಂಧನ ಸಚಿವ ಕೆ.ಜೆ.ಜಾರ್ಜ್ ಅವರು ಪ್ರಶಸ್ತಿ ಸ್ವೀಕರಿಸಿದರು. https://twitter.com/KarnatakaVarthe/status/1934568439244624169 2024-25ನೇ ಸಾಲಿನಲ್ಲಿ ಪವನ ವಿದ್ಯುತ್ ವಲಯಕ್ಕೆ 1331.48 ಮೆ.ವ್ಯಾ. ಸಾಮರ್ಥ್ಯ ಸೇಪರ್ಡೆಗೊಳಿಸಿರುವ ರಾಜ್ಯ ಪ್ರಥಮ ಸ್ಥಾನದಲ್ಲಿದ್ದರೆ, 1136.37 ಮೆ.ವ್ಯಾ. ಸಾಮರ್ಥ್ಯವನ್ನು ಸೇರ್ಪಡೆಗೊಳಿಸಿರುವ ತಮಿಳುನಾಡು ಎರಡನೇ ಸ್ಥಾನದಲ್ಲಿದೆ. 954.74 ಮೆ.ವ್ಯಾ ಸೇರ್ಪಡೆಗೊಳಿಸಿರುವ ಗುಜರಾತ್ ಮೂರನೇ ಸ್ಥಾನದಲ್ಲಿದೆ. ಕಳೆದ ಸಾಲಿನಲ್ಲಿ ಗುಜರಾತ್ ಮೊದಲ ಸ್ಥಾನ, ಕರ್ನಾಟಕ ಎರಡನೇ ಸ್ಥಾನ ಹಾಗೂ ತಮಿಳುನಾಡು ಮೂರನೇ ಸ್ಥಾನದಲ್ಲಿತ್ತು. ಪ್ರಸಕ್ತ ಸಾಲಿನಲ್ಲಿ ಈ ಎರಡೂ ರಾಜ್ಯಗಳನ್ನು ಹಿಂದಿಕ್ಕಿ ಕರ್ನಾಟಕ ಅಗ್ರ ಸ್ಥಾನಕ್ಕೇರಿದೆ. ವಿಶ್ವ ಪವನ ದಿನದ ಕಾರ್ಯಕ್ರಮದಲ್ಲಿ…
ನವದೆಹಲಿ: ಅಹಮದಾಬಾದ್ ನಲ್ಲಿ ಏರ್ ಇಂಡಿಯಾ ವಿಮಾನ ಪತನಗೊಂಡು 241 ಮಂದಿ ಸಾವನ್ನಪ್ಪಿದ್ದರು. ಈ ಘಟನೆಯ ಬೆನ್ನಲ್ಲೇ ಮತ್ತೊಂದು ಏರ್ ಇಂಡಿಯಾ ವಿಮಾನದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದೆ. ಜ್ಯೂರಿಚ್ ನಿಂದ ದೆಹಲಿಗೆ ಹೊರಟಿದ್ದಂತ ಏರ್ ಇಂಡಿಯಾ ವಿಮಾನದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದೆ. ಈ ಹಿನ್ನಲೆಯಲ್ಲಿ ಏರ್ ಇಂಡಿಯಾ ವಿಮಾನವನ್ನು ಜ್ಯೂರಿಚ್ ನಲ್ಲೇ ಲ್ಯಾಂಡಿಂಗ್ ಮಾಡಲಾಗಿದೆ. ಸ್ವಿಟ್ಜರ್ಲೆಂಡಿನ ಜ್ಯೂರಿಚ್ ನಿಂದ ದೆಹಲಿಗೆ ತೆರಳುತ್ತಿದ್ದಂತ ಏರ್ ಇಂಡಿಯಾ ವಿಮಾನ ಇದಾಗಿದೆ. ವಿಮಾನದಲ್ಲಿ ತಾಂತ್ರಿಕ ದೋಷದ ಕಾರಣ ಜ್ಯೂರಿಚ್ ನಲ್ಲೇ ಸೇಫ್ ಲ್ಯಾಂಡಿಂಗ್ ಮಾಡಿರುವುದಾಗಿ ತಿಳಿದು ಬಂದಿದೆ. https://kannadanewsnow.com/kannada/from-today-google-pay-phone-pay-is-faster-what-changes-are-there-here-are-the-details/ https://kannadanewsnow.com/kannada/breaking-a-woman-who-questioned-rash-driving-in-bengaluru-was-attacked-by-a-cab-driver/
ನವದೆಹಲಿ: ಇಂದಿನಿಂದ ಗೂಗಲ್ ಪೇ, ಪೋನ್ ಪೇ ಮೂಲಕ ನೀವು ಮತ್ತಷ್ಟು ವೇಗವಾಗಿ ಹಣವನ್ನು ಕಳುಹಿಸಬಹುದಾಗಿದೆ. ಹಾಗಾದ್ರೇ ಏನೆಲ್ಲಾ ಬದಲಾವಣೆ ಎನ್ನುವ ಬಗ್ಗೆ ಮುಂದೆ ಓದಿ. ಭಾರತೀಯ ರಾಷ್ಟ್ರೀಯ ಪಾವತಿ ನಿಗಮ( NPCI) ಸಿಸ್ಟಮ್ ಅಪ್ ಗ್ರೇಡ್ ಮಾಡಲು ಆರಂಭಿಸಿದೆ. ಹೀಗಾಗಿ ಯುಪಿಐ ವಹಿವಾಟುಗಳನ್ನು ಪೂರ್ಣಗೊಳಿಸಲು ತೆಗೆದುಕೊಳ್ಳುವ ಸಮಯ ಇಂದಿನಿಂದ ಕಡಿಮೆಗೊಳಿಸಲಾಗಿದೆ. ಈ ಹಿಂದೆ ಏಪ್ರಿಲ್ 26, 2025ರಂದೇ ಸುತ್ತೋಲೆಯಲ್ಲಿ ಎಲ್ಲ ಸದಸ್ಯ ಬ್ಯಾಂಕ್, ಪೋನ್ ಪೇ, ಗೂಗಲ್ ಪೇ ಹಾಗೂ ಪೇಟಿಯಂ ಪ್ಲಾಟ್ ಫಾರ್ಮ್ ಗಳಿಗೆ ತಮ್ಮ ಸಿಸ್ಟಮ್ ಅಪ್ ಗ್ರೇಡ್ ಗೆ ಸೂಚಿಸಲಾಗಿತ್ತು. ಅದರಂತೆ ಮಾಡಲಾಗಿದ್ದು, ಹಣ ವರ್ಗಾವಣೆ, ಪರಿಶೀಲನೆ ಮತ್ತು ರಿವರ್ಸಲ್ ಗಳು ಸೇರಿದಂತೆ ವಿವಿಧ ವಹಿವಾಟಿಗೆ 30 ಸೆಕೆಂಡ್ ತೆಗೆದುಕೊಳ್ಳುತ್ತಿದ್ದಂತ ಸಮಯವು ಈಗ 10 ರಿಂದ 15 ಸೆಕೆಂಡುಗಳಲ್ಲಿ ಮುಗಿಯಲಿದೆ. ಇನ್ನೂ ಮೊಬೈಲ್ ಸಂಖ್ಯೆ ಅಥವಾ ಯುಪಿಐ ಐಡಿಗಳನ್ನು 10 ಸೆಕೆಂಡ್ ಗಳಲ್ಲಿ ಪರಿಶೀಲಿಸಬಹುದು. ಅದೇಗೆಂದರೇ ನೀವು ಅಂಗಡಿಗೆ ಹೋಗಿ ವಸ್ತು ಖರೀದಿಸಿ ಕ್ಯೂ ಆರ್…
ಶಿವಮೊಗ್ಗ : ತೋಟಗಾರಿಕೆ ಇಲಾಖೆಯ ವಿವಿಧ ಯೋಜನೆಗಳಡಿ ಅರ್ಹ ಫಲಾನುಭವಿಗಳಿಗೆ ಸೌಲಭ್ಯಗಳನ್ನು ನೀಡಲು ಅರ್ಜಿ ಆಹ್ವಾನಿಸಲಾಗಿದೆ ಎಂದು ಭದ್ರಾವತಿ ತಾಲ್ಲೂಕಿನ ಹಿರಿಯ ಸಹಾಯಕ ತೋಟಗಾರಿಕಾ ನಿರ್ದೇಶಕರು ತಿಳಿಸಿದ್ದಾರೆ. ರಾಷ್ಟಿçÃಯ ತೋಟಗಾರಿಕೆ ಮಿಷನ್ ಯೋಜನೆಯಡಿ ಕಂದು ಬಾಳೆ, ಅಂಗಾAಶ ಬಾಳೆ, ತರಕಾರಿ, ಕಾಳುಮೆಣಸು, ಗೋಡಂಬಿ, ಹೂವಿನ ಬೆಳೆಗಳು ಪ್ರದೇಶ ವಿಸ್ತರಣೆ, ಕೃಷಿಹೊಂಡ, ಕಳೆ ಚಾಪೆ, ಮಿನಿ ಟ್ರಾಕ್ಟರ್ ಫಾರ್ಮ್ ಗೇಟ್, ಪ್ರಾಥಮಿಕ ಸಂಸ್ಕಾರಣಾ ಘಟಕ, ಪ್ಯಾಕ್ಹೌಸ್, ಸಮಗ್ರ ಪೀಡೆ ನಿರ್ವಹಣೆ ಮತ್ತು ರಾಜ್ಯದೊಳಗೆ ಹಮ್ಮಿಕೊಳ್ಳುವ ತರಬೇತಿ ಕಾರ್ಯಕ್ರಮಗಳು ಹಾಗೂ ರಾಷ್ಟಿçÃಯ ಖಾದ್ಯ ತೈಲ ಅಭಿಯಾನ-ತಾಳೆ ಬೆಳೆ ಯೋಜನೆಯಡಿ ಪ್ರದೇಶ ವಿಸ್ತರಣೆ(ಸ್ವದೇಶಿ ಮತ್ತು ವಿದೇಶಿ ತಳಿಗಳು) ಅಂತರ ಬೆಳೆ, ತಾಳೆ ಹಣ್ಣು ಕೊಯ್ಯಲು ಸಹಾಯಧನ ಕಾರ್ಯಕ್ರಮಗಳಿಗೆ ಸಹಾಯಧನ ಕೋರಿ ಅರ್ಜಿಯನ್ನು ಆಹ್ವಾನಿಸಲಾಗಿದೆ. ಕೇಂದ್ರ ಪುರಸ್ಕೃತ ಪ್ರಧಾನ ಮಂತ್ರಿ ಕೃಷಿ ಸಿಂಚಾಯಿ ಯೋಜನೆಯಡಿ ಹಣ್ಣಿನ ಬೆಳೆಗಳು, ತರಕಾರಿ ಮತ್ತು ತೋಟದ ಬೆಳೆಗಳಿಗೆ ಹಾನಿ ನೀರಾವರಿ ಮತ್ತು ತುಂತುರು ನೀರಾವರಿ ಅಳವಡಿಸಿಕೊಳ್ಳಲು ಹಾಗೂ ಸಮಗ್ರ ತೋಟಗಾರಿಕೆ ಅಭಿವೃದ್ದಿ…
ಶಿವಮೊಗ್ಗ: ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಶಿವಮೊಗ್ಗದಲ್ಲಿ 2025-26 ನೇ ಸಾಲಿನ ಶೈಕ್ಷಣಿಕ ವರ್ಷಕ್ಕೆ ಖಾಸಗಿ ಕೃಷಿ ಕಾಲೇಜುಗಳ ಸಂಯೋಜನೆಗಾಗಿ ಕರ್ನಾಟಕದ ಸೊಸೈಟಿ ನೋಂದಣಿ ಕಾಯ್ದೆಯಡಿಯಲ್ಲಿ ನೋಂದಾಯಿಸಲಾದ ಮಂಡಳಿಗಳು/ಸೊಸೈಟಿಗಳು/ಟ್ರಸ್ಟ್ಗಳಿAದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಖಾಸಗಿ ಕಾಲೇಜುಗಳ ಸ್ಥಾಪಿಸಲು ಆಸಕ್ತ ಸಂಸ್ಥೆಗಳು ಬಿ.ಎಸ್ಸಿ. (ಹಾನರ್ಸ್), ಕೃಷಿ, ಬಿ.ಟೆಕ್. ಕೃಷಿ ಇಂಜಿನಿಯರಿAಗ್, ಬಿ.ಟೆಕ್. ಕೃಷಿ ಬಯೋಟೆಕ್ನಾಲಜಿ, ಬಿ.ಟೆಕ್. ಫುಡ್ ಟೆಕ್ನಾಲಜಿ, ಬಿಎಸ್ಸಿ (ಹಾರ್ಸ್) ಅರಣ್ಯ, ಬಿ.ಎಸ್ಸಿ. (ಹಾನರ್ಸ್), ಕಮೂನಿಟಿ ವಿಜ್ಞಾನ, ಬಿ.ಎಸ್ಸಿ. (ಹಾನರ್ಸ್), ಫುಡ್ ನ್ಯೂಟ್ರೀಶನ್ ಮತ್ತು ಡೈಯಟಿಕ್ಸ್, ಬಿ.ಎಸ್ಸಿ. (ಹಾನರ್ಸ್), ತೋಟಗಾರಿಕೆ ಮತ್ತು ಬಿ.ಎಸ್ಸಿ. (ಹಾನರ್ಸ್), ರೇಷ್ಮೆ ಕೃಷಿ ಪದವಿಯ ವಿಷಯಗಳನ್ನು ಪ್ರಾರಂಭಿಸಲು ಅರ್ಜಿ ಸಲ್ಲಿಸಬಹುದು. ಈ ಸಂಬಂಧ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕಾ ವಿಜ್ಞಾನಗಳ ವಿಶ್ವವಿದ್ಯಾಲಯವು ಅಫಿಲಿಯೇಶ್ಗಾಗಿ ಕನಿಷ್ಟ ಮಾನದಂಡಗಳನ್ನು (ksnuahs-msacr 2025) www.ushs.edu.in ಜಾಲತಾಣದಲ್ಲಿ ಪ್ರಕಟಿಸಿದೆ. ಅಧಿಸೂಚಿಸಿದ ಮಾನದಂಡಗಳAತೆ ಶಿವಮೊಗ್ಗ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯವು 2025-26…
ಬೆಂಗಳೂರು: ನಗರದ ಹಲವು ಶಾಲೆಗಳಿಗೆ ಇ-ಮೇಲ್ ಮೂಲಕ ದುಷ್ಕರ್ಮಿಗಳಿಂದ ಬಾಂಬ್ ಬೆದರಿಕೆ ಹಾಕಲಾಗಿದೆ. ಹೈದರಾಬಾದ್ ಅತ್ಯಾಚಾರ ಕೇಸ್ ಗೆ ನ್ಯಾಯಬೇಕು ಎಂಬುದಾಗಿ ಬಾಂಬ್ ಬೆದರಿಕೆ ಇ-ಮೇಲ್ ನಲ್ಲಿ ಒತ್ತಾಯಿಸಲಾಗಿದೆ. ಈ ಸಂಬಂಧ ನಗರದ ಹಲವು ಶಾಲೆಗಳಿಗೆ ಬಾಂಬ್ ಬೆದರಿಕೆ ಇ-ಮೇಲ್ ಹಾಕಲಾಗಿದ್ದು, ಹೈದರಾಬಾದ್ ಕೇಸ್ ಗೆ ನ್ಯಾಯಕೊಡಿಸಿ. ಇಲ್ಲದೇ ಇದ್ದರೇ ಬಾಂಬ್ ಸ್ಫೋಟಿಸುತ್ತೇವೆ ಎಂಬುದಾಗಿ ಬೆದರಿಕೆ ಹಾಕಲಾಗಿದೆ. ಬೆಂಗಳೂರಿನ ರಾಜ ರಾಜೇಶ್ವರಿ ನಗರ, ಕುಂಬಳಗೋಡು, ಕಲಾಸಿಪಾಳ್ಯದಲ್ಲಿನ ಖಾಸಗಿ ಶಾಲೆಗಳಿಗೆ ಶಾಲೆಗಳನ್ನು ಸ್ಪೋಟಿಸುವುದಾಗಿ ಇ-ಮೇಲ್ ಮೂಲಕ ಬೆದರಿಕೆ ಹಾಕಲಾಗಿದೆ. https://kannadanewsnow.com/kannada/big-news-kuws-chairman-vinay-kulakarni-urged-the-chief-minister-to-remove-him-from-the-position/ https://kannadanewsnow.com/kannada/breaking-a-woman-who-questioned-rash-driving-in-bengaluru-was-attacked-by-a-cab-driver/
ಕೆಎನ್ಎನ್ ಸ್ಪೋರ್ಟ್ಸ್ ಡೆಸ್ಕ್: ಅಂತರರಾಷ್ಟ್ರೀಯ ಕ್ರಿಕೆಟ್ ಮಂಡಳಿ (International Cricket Council – ICC) ಮಹಿಳಾ ಕ್ರಿಕೆಟ್ ವಿಶ್ವಕಪ್ನ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಈ ಪಂದ್ಯಾವಳಿ ಭಾರತ ಮತ್ತು ಶ್ರೀಲಂಕಾದಲ್ಲಿ ನಡೆಯಲಿದ್ದು, ಸೆಪ್ಟೆಂಬರ್ 30 ರಂದು ಪ್ರಾರಂಭವಾಗಲಿದ್ದು, ಅಂತಿಮ ಪಂದ್ಯ ನವೆಂಬರ್ 2 ರಂದು ಕೊಲಂಬೊ ಅಥವಾ ಬೆಂಗಳೂರಿನಲ್ಲಿ ನಡೆಯಲಿದೆ. ಆತಿಥೇಯ ಭಾರತ ತಂಡವು 2025 ರ ಐಸಿಸಿ ಮಹಿಳಾ ವಿಶ್ವಕಪ್ನ ( ICC Women’s World Cup 2025 ) ಮೊದಲ ಪಂದ್ಯವನ್ನು ಆಡಲಿದೆ. ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಅವರು ಶ್ರೀಲಂಕಾ ವಿರುದ್ಧ ಸೆಣಸಲಿದ್ದಾರೆ. ಮರುದಿನ, ಆಸ್ಟ್ರೇಲಿಯಾ ಇಂದೋರ್ನ ಹೋಳ್ಕರ್ ಕ್ರೀಡಾಂಗಣದಲ್ಲಿ ನ್ಯೂಜಿಲೆಂಡ್ ವಿರುದ್ಧ ಸೆಣಸಲಿದೆ. 2025 ರ ಐಸಿಸಿ ಮಹಿಳಾ ವಿಶ್ವಕಪ್ನಲ್ಲಿ ಬಹುನಿರೀಕ್ಷಿತ ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯ ಅಕ್ಟೋಬರ್ 5 ರಂದು ಕೊಲಂಬೊದಲ್ಲಿ ನಡೆಯಲಿದೆ. 2025 ರ ಐಸಿಸಿ ಚಾಂಪಿಯನ್ಸ್ ಟ್ರೋಫಿಗೆ ಮುಂಚಿತವಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಮತ್ತು ಪಾಕಿಸ್ತಾನ ಕ್ರಿಕೆಟ್ ಮಂಡಳಿ…
ಕಲಬುರ್ಗಿ: ಜಿಲ್ಲೆಯಲ್ಲಿ ಕೋರ್ಟ್ ನ ಚೇಂಬರ್ ನಲ್ಲಿದ್ದಂತ ಮೂರನೇ ಹಿರಿಯ ಶ್ರೇಣಿಯ ನ್ಯಾಯಾಧೀಶರು ಹೃದಯಾಘಾತದಿಂದ ಸಾವನ್ನಪ್ಪಿರುವಂತ ಘಟನೆ ನಡೆದಿದೆ. ಕಲಬುರ್ಗಿ ಜಿಲ್ಲಾ ನ್ಯಾಯಾಲಯದ ಕೋರ್ಚ್ ಚೇಂಬರ್ ನಲ್ಲಿದ್ದಾಗಲೇ ಮೂರನೇ ಹಿರಿಯ ಶ್ರೇಣಿಯ ನ್ಯಾಯಾಧೀಶರಾದಂತ ವಿಶ್ವನಾಥ ಮುಗುಟಿ(44) ಎಂಬುವರಿಗೆ ಎದೆನೋವು ಕಾಣಿಸಿಕೊಂಡಿದೆ. ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತು. ಆದರೇ ಅವರು ಮಾರ್ಗ ಮಧ್ಯದಲ್ಲೇ ಸಾವನ್ನಪ್ಪಿರುವುದಾಗಿ ವೈದ್ಯರು ಖಚಿತ ಪಡಿಸಿದ್ದಾರೆ. ಅಂದಹಾಗೇ ಇಂದು ಎಂದಿನಂತೆ ಕೋರ್ಟ್ ಗೆ ನಗು ನಗುತ್ತಲೇ ನ್ಯಾಯಮೂರ್ತಿ ವಿಶ್ವನಾಥ್ ಮುಗುಟಿ ಅವರು ಆಗಮಿಸಿದ್ದರು. ತಮ್ಮ ಚೇಂಬರ್ ನಲ್ಲಿ ಕುಳಿತು ಕೆಲಸ ನಿರ್ವಹಿಸುತ್ತಿದ್ದರು. ಈ ವೇಳೆಯಲ್ಲಿ ಎದೆನೋವು ಕಾಣಿಸಿಕೊಂಡಿತ್ತು. ಕೂಡಲೇ ಚಾಲಕ, ಕಚೇರಿ ಸಿಬ್ಬಂದಿ ಸಹಾಯದಿಂದ ಕಲಬುರ್ಗಿಯ ಜಯದೇವ ಹದ್ರೋಗ ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೇ ಆ ವೇಳೆಗಾಗಲೇ ನ್ಯಾಯಾಧೀಶರು ಮೃತಪಟ್ಟಿದ್ದರು. ಕಲಬುರ್ಗಿ ಜಿಲ್ಲಾ ನ್ಯಾಯಾಲಯದ ನ್ಯಾಯಮೂರ್ತಿ ವಿಶ್ವನಾಥ್ ಮುಗುಟಿ ಅವರ ನಿಧನಕ್ಕೆ ಜಿಲ್ಲಾ ವಕೀಲರ ಸಂಘ ಹಾಗೂ ನ್ಯಾಯಮೂರ್ತಿಗಳು ಸಂತಾಪ ಸೂಚಿಸಿದ್ದಾರೆ. https://kannadanewsnow.com/kannada/mysuru-honey-trap-case-five-accused-including-a-police-constable-arrested/ https://kannadanewsnow.com/kannada/big-news-kuws-chairman-vinay-kulakarni-urged-the-chief-minister-to-remove-him-from-the-position/













