Author: kannadanewsnow09

ದಾವಣಗೆರೆ : ದಾವಣಗೆರೆ ಜಿಲ್ಲೆಯಲ್ಲಿ ಅಕ್ಟೋಬರ್ 11 ಮತ್ತು 12 ರಂದು ಆಯುಧ ಪೂಜೆ ಮತ್ತು ವಿಜಯ ದಶಮಿ ಹಬ್ಬ ಆಚರಿಸಲಿದ್ದು. ಈ ವೇಳೆ ಕಾನೂನು ಸುವ್ಯವಸ್ಥೆ ಮತ್ತು ಸಾರ್ವಜನಿಕ ಶಾಂತಿ ಕಾಪಾಡುವ ಮುನ್ನೆಚ್ಚರಿಕೆ ಕ್ರಮವಾಗಿ ಅಕ್ಟೋಬರ್ 12 ರ ಬೆಳಿಗ್ಗೆ 6 ರಿಂದ ಮಧ್ಯರಾತ್ರಿ 12 ಗಂಟೆವರೆಗೆ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಮದ್ಯ ಮಾರಾಟ ನಿಷೇಧಿಸಿ ಮದ್ಯದಂಗಡಿ ಮುಚ್ಚಲು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ ಆದೇಶಿಸಿದ್ದಾರೆ. ಹೈಸ್ಕೂಲ್ ಮೈದಾನದಲ್ಲಿ ಆಯುಧ ಪೂಜೆ, ವಿಜಯದಶಮಿಯ ಹೂ, ಇತರೆ ವಸ್ತುಗಳ ಮಾರಾಟಕ್ಕೆ ಅವಕಾಶ ಆಯುಧಪೂಜೆ ಹಾಗೂ ವಿಜಯದಶಮಿ ಸಲುವಾಗಿ ಬಾಳೆಕಂಬ, ಹೂ, ಹಣ್ಣು ಮಾವಿನ ತೋರಣ, ಬೂದು ಗುಂಬಳ ಕಾಯಿ, ಕಾಚಿಕಡ್ಡಿ ಹಾಗೂ ಸಗಣಿ ಗುರ್ಜಿಗಳನ್ನು ಮಾರಾಟ ಮಾಡುವುದರಿಂದ ನಗರಾದ್ಯಂತ ಸಂಚಾರ ವ್ಯವಸ್ಥೆಗೆ ಹಾಗೂ ಸಾರ್ವಜನಿಕರಿಗೆ, ತೊಂದರೆಯಾಗುತ್ತಿರುವ ಕಾರಣ ಅಕ್ಟೋಬರ್ 10 ರಿಂದ 12 ರವರೆಗೆ ಹೈಸ್ಕೂಲ್ ಮೈದಾನದಲ್ಲಿ ತಾತ್ಕಾಲಿಕವಾಗಿ ನಿರ್ಮಿಸಲಾಗಿರುವ ಕೆ.ಎಸ್.ಆರ್.ಟಿ.ಸಿ ಹಾಗೂ ಖಾಸಗಿ ಬಸ್ ನಿಲ್ದಾಣದಲ್ಲಿ ಮಾತ್ರವೇ…

Read More

ಬೆಂಗಳೂರು: ರಾಜ್ಯದ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ಉಚಿತ ವಿದ್ಯುತ್ ಸೌಲಭ್ಯ ಕಲ್ಪಿಸುವುದಾಗಿ ಸರ್ಕಾರ ಆದೇಶಿಸಿತ್ತು. ಅದರಂತೆ ಜಾರಿಗೊಳಿಸಿ ಆದೇಶ ಕೂಡ ಮಾಡಿದೆ. ಆದರೇ ಕೆಲ ಪ್ರಾಂಶುಪಾಲರು ವರ್ಗಾವಣೆಯಾದ ನಂತ್ರ ಉಂಟಾಗಿರುವ ಸಮಸ್ಯೆ ಬಗ್ಗೆ ಶಾಲಾ ಶಿಕ್ಷಣ ಇಲಾಖೆಯಿಂದ ಹಾಲಿ ಹೆಚ್.ಎಂಗಳಿಗೆ ಮಹತ್ವದ ಸೂಚನೆಯನ್ನು ಹೊರಡಿಸಿದೆ. ರಾಜ್ಯದ ಎಲ್ಲಾ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ಉಚಿತವಾಗಿ ವಿದ್ಯುತ್ ಸೌಲಭ್ಯವನ್ನು ಒದಗಿಸುವ ಸಂಬಂಧ ವಿದ್ಯುನ್ಮಾನ ನಾಗರಿಕ ಸೇವಾ ವಿತರಣಾ ನಿರ್ದೇಶನಾಲಯದಿಂದ ಅಭಿವೃದ್ಧಿಪಡಿಸಲಾಗಿರುವ ತಂತ್ರಾಂಶವನ್ನು ಬಳಸಿಕೊಂಡು ಮುಖ್ಯೋಪಾಧ್ಯಾಯರುಗಳು ತಮ್ಮ ಶಾಲೆಯ ವಿದ್ಯುತ್ ಸಂಪರ್ಕದ ವಿವರವನ್ನು ಆನ್‌-ಲೈನ್‌ನಲ್ಲಿ ದಾಖಲಿಸಲು ಉಲ್ಲೇಖ(1)ರಲ್ಲಿ ಸುತ್ತೋಲೆ ಹೊರಡಿಸಲಾಗಿರುತ್ತದೆ. ಈ ಕುರಿತು ಆನ್‌-ಲೈನ್‌ನಲ್ಲಿ ಅರ್ಜಿ ಸಲ್ಲಿಸುವ ಸಂದರ್ಭದಲ್ಲಿ ಈ ಮುಂಚೆ ಕಾರ್ಯ ನಿರ್ವಹಿಸುತ್ತಿದ್ದ ಶಾಲಾ ಮುಖ್ಯೋಪಾಧ್ಯಾಯರ ಮೊಬೈಲ್ ಸಂಖ್ಯೆಗೆ OTP One Time Password) ಸ್ವೀಕೃತಿಯಾಗುತ್ತಿರುವ ಬಗ್ಗೆ ಪ್ರಸ್ತುತ ಕಾರ್ಯ ನಿರ್ವಹಿಸುತ್ತಿರುವ ಶಾಲಾ ಮುಖ್ಯೋಪಾಧ್ಯಾಯರುಗಳಿಂದ ದೂರುಗಳು ಬರುತ್ತಿರುವುದು ಈ ಕಛೇರಿ ಗಮನಕ್ಕೆ ಬಂದಿರುತ್ತದೆ. ಈ ಬಗ್ಗೆ ಸ್ಯಾಟ್ಸ್ (SATS)…

Read More

ಬೆಂಗಳೂರು: ರಾಜ್ಯದಲ್ಲಿ ಬಹುಕೋಟಿ ಹಣ ವರ್ಗಾವಣೆ ಅವ್ಯವಹಾರವೆಂದೇ ಕರೆಯಲಾಗುತ್ತಿರುವಂತ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ ಸಂಬಂಧ ಇಡಿಯಿಂದ ದೂರು ದಾಖಲಿಸಿಕೊಳ್ಳಲಾಗಿತ್ತು. ಈ ಬಳಿಕ ಜಾರಿ ನಿರ್ದೇಶನಾಲದಯದ ಅಧಿಕಾರಿಗಳಿಂದ ಕೋರ್ಟ್ ಗೆ ಪ್ರಾಸಿಕ್ಯೂಷನ್ ದೂರು, ಅಂದರೆ ಪ್ರಕರಣ ಸಂಬಂಧ ವರದಿಯನ್ನು ಸಲ್ಲಿಸಿದೆ. ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿ ಮಾಹಿತಿ ಹಂಚಿಕೊಂಡಿರುವಂತ ಇಡಿಯು, ಕರ್ನಾಟಕ ಮಹರ್ಷಿ ವಾಲ್ಮೀಕಿ ಎಸ್ಟಿ ಅಭಿವೃದ್ಧಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಸಂಸದರು ಮತ್ತು ಶಾಸಕರ ವಿಶೇಷ ನ್ಯಾಯಾಲಯದಲ್ಲಿ ಜಾರಿ ನಿರ್ದೇಶನಾಲಯ ಪ್ರಾಸಿಕ್ಯೂಷನ್ ದೂರು (Prosecution Complaint – PC) ದಾಖಲಿಸಿದೆ. ಗೌರವಾನ್ವಿತ ನ್ಯಾಯಾಲಯವು ಪಿಸಿಯನ್ನು ಗಮನಕ್ಕೆ ತೆಗೆದುಕೊಂಡಿದೆ ಎಂದು ತಿಳಿಸಿದೆ. https://twitter.com/dir_ed/status/1843977188007461301?t=rBZyE3bssPyR91wV3PLTvw&s=08 https://kannadanewsnow.com/kannada/udupi-lakhs-of-rupees-have-been-deposited-by-changing-atm-cards-cheating-case-registered/ https://kannadanewsnow.com/kannada/important-information-for-property-owners-in-bengaluru-follow-this-step-view-e-khata-online/ https://kannadanewsnow.com/kannada/demu-special-train-to-run-between-arasikere-and-mysuru-on-the-occasion-of-dasara-festival/

Read More

ಬೆಂಗಳೂರು: ರಾಜ್ಯ ಸರ್ಕಾರದಿಂದ ರಾಜ್ಯಾಧ್ಯಂತ ಇ-ಖಾತಾ ವ್ಯವಸ್ಥೆಯನ್ನು ಜಾರಿಗೊಳಿಸಿದೆ. ಸಿಲಿಕಾನ್ ಸಿಟಿಯಲ್ಲೂ ಬಿಬಿಎಂಪಿ ವ್ಯಾಪ್ತಿಯಲ್ಲಿ ಆಸ್ತಿ ಮಾಲೀಕರಿಗೆ ಇ-ಖಾತಾ ತಂತ್ತಾಂಶ ವ್ಯವಸ್ಥೆಯನ್ನು ಜಾರಿಗೊಳಿಸಿದೆ. ಈಗ ಕುಳಿತಲ್ಲೇ ಬೆಂಗಳೂರಿನ ಆಸ್ತಿ ಮಾಲೀಕರು ತಮ್ಮ ಡ್ರಾಫ್ಟ್ ಇ-ಖಾತಾವನ್ನು ವೀಕ್ಷಿಸಬಹುದಾಗಿದೆ. ಅದು ಹೇಗೆ ಅಂತ ಮುಂದೆ ಓದಿ. ಈ ಕುರಿತಂತೆ ಬಿಬಿಎಂಪಿಯಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಬಿಬಿಎಂಪಿ ಇ-ಆಸ್ತಿ ವ್ಯವಸ್ಥೆಯಲ್ಲಿ ನಿಮ್ಮ ಡ್ರಾಫ್ಟ್ ಇ-ಖಾತಾ ಅನ್ನು ಆನ್ ಲೈನ್ ನಲ್ಲಿ ನೋಡುವುದಕ್ಕೆ ಅವಕಾಶ ಮಾಡಿಕೊಡಲಾಗಿದೆ. ನೀವು ಕುಳಿತಲ್ಲೇ ನಿಮ್ಮ ಡ್ರಾಫ್ಟ್ ಇ-ಖಾತಾ ನೋಡಲು ಈ ಕೆಳಗಿನ ಹಂತಗಳನ್ನು ಅನುಸರಿಸಿ, ವೀಕ್ಷಿಸಿ ಎಂದು ತಿಳಿಸಿದೆ. ಈ ಹಂತ ಅನುಸರಿಸಿ, ಕುಳಿತಲ್ಲೇ ‘ಆನ್ ಲೈನ್’ ಮೂಲಕ ನಿಮ್ಮ ‘ಇ-ಖಾತಾ’ ವೀಕ್ಷಿಸಿ (1) ಎಲ್ಲಾ ಕರಡು ಇ-ಖಾತಾಗಳನ್ನು(ಸುಮಾರು 22 ಲಕ್ಷ) ವಾರ್ಡ್ ವಾರು BBMPeAasthi.karnataka.gov.in ಆನ್‌ಲೈನ್‌ನಲ್ಲಿ ಬಿಡುಗಡೆ ಮಾಡಲಾಗಿದೆ. (2) ನಿಮ್ಮ ಸ್ವತ್ತಿನ ಆಸ್ತಿ ತೆರಿಗೆಯ ರಶೀದಿಯಿಂದ ನಿಮ್ಮ ವಾರ್ಡ್ ಹೆಸರು ಮತ್ತು ಸಂಖ್ಯೆಯನ್ನು ನೀವು ತಿಳಿದುಕೊಳ್ಳಬಹುದು. (3)…

Read More

ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಕೇಸ್ ಸಂಬಂಧ ಬೆಂಗಳೂರಿನ 57ನೇ ಸಿಸಿಹೆಚ್ ನ್ಯಾಯಾಲಯದಲ್ಲಿ ನಟ ದರ್ಶನ್ ಸಲ್ಲಿಸಿದ್ದಂತ ಜಾಮೀನು ಅರ್ಜಿಯ ವಿಚಾರಣೆ ನಡೆಸಿತು. ನಟ ದರ್ಶನ್ ಪರ ವಕೀಲರ ವಾದಕ್ಕೆ ಪ್ರತಿವಾದ ಸಲ್ಲಿಸಿದಂತ ಎಸ್ ಪಿಪಿ ಪ್ರಸನ್ನ ಕುಮಾರ್ ಅವರ ವಾದವನ್ನು ಆಲಿಸಿದಂತ ನ್ಯಾಯಪೀಠವು, ನಾಳೆಗೆ ಜಾಮೀನು ಅರ್ಜಿಯ ವಿಚಾರಣೆಯನ್ನು ಮುಂದೂಡಿಕೆ ಮಾಡಿದೆ. ಈ ಮೂಲಕ ನಟ ದರ್ಶನ್ ಗೆ ಇಂದು ಶಾಕ್ ಆಗಿದೆ. ಜೈಲೇ ಗತಿ ಎನ್ನುವಂತೆ ಆಗಿದೆ. ಇಂದು ಬೆಂಗಳೂರಿನ 57ನೇ ಸಿಸಿಹೆಚ್ ನ್ಯಾಯಾಲಯದಲ್ಲಿ ನಟ ದರ್ಶನ್ ಅವರು ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ಜಾಮೀನು ನೀಡುವಂತೆ ಸಲ್ಲಿಸಿದ್ದಂತ ಅರ್ಜಿಯ ವಿಚಾರಣೆ ನಡೆಸಲಾಯಿತು. ಎಸ್ ಪಿಪಿ ಪ್ರಸನ್ನ ಕುಮಾರ್ ಅವರು ಇಂದು ವಾದ ಮುಂದುವರೆಸುತ್ತಾ, ರಿಮ್ಯಾಂಡ್ ಅರ್ಜಿಯೊಂದಿಕೆ ಕೇಸ್ ಡೈರಿಯನ್ನೂ ಹಾಜರುಪಡಿಸಲಾಗಿದೆ. ಮ್ಯಾಜಿಸ್ಟ್ರೇಟ್ ಕೂಡ ಕೇಸ್ ಡೈರಿ ಪರಿಶೀಲಿಸಲಾಗಿದೆ. ಬಂಧನದ ಕಾರಣಗಳ್ನು ಹೇಳಿಲ್ಲವೆಂದ ಕೆಲ ಆರೋಪಿಗಳು ಹೇಳಿದ್ದಾರೆ. ಆದರೇ ಕೋರ್ಟ್ ಅವಗಾಹನೆಗೆ ತರಲಾಗಿದೆ ಎಂದರು. ಕೇಸ್ ಡೈರಿ ಕೋರ್ಟ್ ಗೆ ಹಾಜರುಪಡಿಸಲಾಗಿದೆ.…

Read More

ಬೆಂಗಳೂರು: ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯ 110 ಹಳ್ಳಿಗಳಿಗೆ ಕುಡಿಯುವ ನೀರು ಪೂರೈಸುವ ಬಹುನಿರೀಕ್ಷಿತ ಕಾವೇರಿ 5ನೇ ಹಂತದ ಯೋಜನೆಯನ್ನು ಅಕ್ಟೋಬರ್‌ 16ಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ಲೋಕಾರ್ಪಣೆ ಮಾಡಲಿದ್ದಾರೆ. ಈ ಮೂಲಕ ಬೆಂಗಳೂರಿನ 110 ಹಳ್ಳಿಗಳ ಜನರಿಗೆ ಕಾವೇರಿ ನದಿ ನೀರು ಕುಡಿಯೋದಕ್ಕೆ ಸರಬರಾಜು ಮಾಡಿ, ಸಿಗುವಂತೆ ಆಗಲಿದೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 110 ಹಳ್ಳಿಗಳಿಗೆ ಕುಡಿಯುವ ನೀರು ಸರಬರಾಜಾಗುವ ಕಾವೇರಿ ಐದನೇ ಹಂತದ ಯೋಜನೆ ಇದೇ ಅ.16ಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್ ಅವರಿಂದ ಲೋಕಾರ್ಪಣೆಗೊಳ್ಳಲಿದೆ. ಜೈಕಾ(ಜಪಾನ್ ಇಂಟರ್ ನ್ಯಾಷನಲ್ ಕೋ ಅಪರೇಶನ್ ಏಜೆನ್ಸಿ) ಸಹಭಾಗಿತ್ವದಲ್ಲಿ 4336 ಕೋಟಿ ರೂ.ವೆಚ್ಚದಲ್ಲಿ ಈ ಯೋಜನೆ ಕೈಗೆತ್ತಿಕೊಳ್ಳಲಾಗಿದೆ. https://twitter.com/KarnatakaVarthe/status/1843969954338771115 ಬೆಂಗಳೂರಿಗೆ ಹೊಸದಾಗಿ ಸೇರ್ಪಡೆಯಾದ ಹಳ್ಳಿಗಳಿಗೆ ಸಮರ್ಪಕ ನೀರನ್ನು ಒದಗಿಸುವ ಹಾಗೂ ಬೆಂಗಳೂರಿನ ದೂರದೃಷ್ಟಿಯನ್ನಿಟ್ಟುಕೊಂಡು ಮಹತ್ವದ ನಿರ್ಧಾರವನ್ನು 2014ರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರಕಾರ ಈ ಯೋಜನೆ ರೂಪಿಸಿ ಚಾಲನೆ ನೀಡಿದ್ದನ್ನು ಸ್ಮರಿಸಬಹುದು.…

Read More

ನವದೆಹಲಿ: ಹರಿಯಾಣದಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಗೆದ್ದ ದೇಶದ ಅತ್ಯಂತ ಶ್ರೀಮಂತ ಮಹಿಳೆ ಸಾವಿತ್ರಿ ಜಿಂದಾಲ್ ಅವರು ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಮತ್ತು ತ್ರಿಪುರಾದ ಮಾಜಿ ಮುಖ್ಯಮಂತ್ರಿ ಬಿಪ್ಲಬ್ ದೇಬ್ ಅವರನ್ನು ಭೇಟಿಯಾದ ನಂತರ ಬಿಜೆಪಿಗೆ ಬೆಂಬಲ ನೀಡಲು ಒಪ್ಪಿಕೊಂಡಿದ್ದಾರೆ. ಅವರು ಮತ್ತು ಈಗಾಗಲೇ ತಮ್ಮ ಬೆಂಬಲವನ್ನು ಘೋಷಿಸಿರುವ ಇತರ ಇಬ್ಬರು ಸ್ವತಂತ್ರರೊಂದಿಗೆ, ರಾಜ್ಯ ವಿಧಾನಸಭೆಯಲ್ಲಿ ಬಿಜೆಪಿಯ ಸಂಖ್ಯೆ 51 ಕ್ಕೆ ತಲುಪಿದೆ. ಬಿಜೆಪಿಯ ಕುರುಕ್ಷೇತ್ರ ಸಂಸದ ನವೀನ್ ಜಿಂದಾಲ್ ಅವರ ತಾಯಿ ಸಾವಿತ್ರಿ ಜಿಂದಾಲ್ ಅವರು ಬಿಜೆಪಿಯ ಕಮಲ್ ಗುಪ್ತಾ ವಿರುದ್ಧ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. 2013 ರಲ್ಲಿ ಭೂಪಿಂದರ್ ಹೂಡಾ ಅವರ ಸರ್ಕಾರದ ಭಾಗವಾಗಿದ್ದ 74 ವರ್ಷದ ಸೋನಿಯಾ ಗಾಂಧಿ, ಮಾರ್ಚ್ನಲ್ಲಿ ಅವರ ಮಗ ಪಕ್ಷಾಂತರಗೊಂಡಾಗ ಕಾಂಗ್ರೆಸ್ನಿಂದ ಬೇರ್ಪಟ್ಟರು. ಇದಕ್ಕೂ ಮುನ್ನ ಸ್ವತಂತ್ರ ಶಾಸಕರಾದ ದೇವೇಂದರ್ ಕಡ್ಯಾನ್ ಮತ್ತು ರಾಜೇಶ್ ಜೂನ್ ಅವರು ಕೇಂದ್ರ ಸಚಿವ ಮತ್ತು ಹರಿಯಾಣ ಉಸ್ತುವಾರಿ ಧರ್ಮೇಂದ್ರ ಪ್ರಧಾನ್ ಅವರ ಮನೆಯಲ್ಲಿ…

Read More

ಬೆಂಗಳೂರು: ಮಹಿಳೆಯರ ಸ್ವಾವಲಂಬಿ ಬದುಕಿಗೆ ಉತ್ತೇಜನ ನೀಡಲು ರಾಜ್ಯಾದ್ಯಂತ ಮಹಿಳೆಯರೇ ನಡೆಸುವ 50 ʼಅಕ್ಕ ಕೆಫೆ – ಬೇಕರಿʼ ತೆರೆಯಲು ಯೋಜನೆ ರೂಪಿಸಲಾಗಿದೆ ಎಂದು ವೈದ್ಯಕೀಯ ಶಿಕ್ಷಣ ಮತ್ತು ಕೌಶಲಾಭಿವೃದ್ಧಿ ಹಾಗೂ ಜೀವನೋಪಾಯ ಇಲಾಖೆ ಸಚಿವರಾದ ಡಾ. ಶರಣಪ್ರಕಾಶ್‌ ಪಾಟೀಲ್‌ ತಿಳಿಸಿದ್ದಾರೆ. ಮಂಗಳವಾರ ದೇವನಹಳ್ಳಿಯಲ್ಲಿ “ಅಕ್ಕ ಕೆಫೆ” ಉದ್ಘಾಟನೆ ಮಾಡಿ ಭಾಷಣ ಮಾಡಿದ ಸಚಿವ ಡಾ.ಪಾಟೀಲ್, ನಗರ ಮತ್ತು ಗ್ರಾಮೀಣ ಪ್ರದೇಶಗಳ ಮಹಿಳೆಯರಿಗೆ ಸ್ವಾವಲಂಬನೆ ಮತ್ತು ಉದ್ಯಮಶೀಲತೆ ಉತ್ತೇಜಿಸುವ ಯೋಜನೆ ಇದಾಗಿದೆ. ಇದು ಪರಿವರ್ತನೆಯ ಸಾಮರ್ಥ್ಯವನ್ನು ಹೊಂದಿದೆ. “ಅಕ್ಕ ಕೆಫೆ ಮಹಿಳೆಯರನ್ನು ಸಬಲೀಕರಣಗೊಳಿಸುವ ಮೂಲಕ, ವಿಶೇಷವಾಗಿ ಗ್ರಾಮೀಣ ಪ್ರದೇಶಗಳಲ್ಲಿ ಮತ್ತು ಉದ್ಯಮಶೀಲತೆಗೆ ಆದ್ಯತೆ ನೀಡಲಿದೆ. ಕರ್ನಾಟಕದ ಸಾಮಾಜಿಕ-ಆರ್ಥಿಕ ಕ್ಷೇತ್ರದ ಮೇಲೆ ಶಾಶ್ವತವಾದ ಪರಿಣಾಮವನ್ನು ಬೀರುತ್ತದೆ” ಎಂದು ಸಚಿವರು ಹೇಳಿದರು. 2024-25ರ ಬಜೆಟ್‌ನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪರಿಚಯಿಸಿದ ಅಕ್ಕ ಕೆಫೆಯು ಮಹಿಳೆಯರಿಗೆ ಸುಸ್ಥಿರ ಜೀವನೋಪಾಯವನ್ನು ಸೃಷ್ಟಿಸುವ ಗುರಿಯನ್ನು ಹೊಂದಿದೆ. ಇದು ನಿರ್ದಿಷ್ಟವಾಗಿ ಮಹಿಳಾ ಉದ್ಯಮಿಗಳನ್ನು ಬೆಂಬಲಿಸುತ್ತದೆ, ವಿಶೇಷವಾಗಿ ಸ್ವ-ಸಹಾಯ ಗುಂಪುಗಳಿಂದ (SHGs),…

Read More

ತುಮಕೂರು: ಜಿಲ್ಲೆಯಲ್ಲಿ ಘೋರ ಘಟನೆಯೊಂದು ನಡೆದಿದೆ. ಶಾಲೆಯ ಬಳಿಯಲ್ಲೇ ಸಿಕ್ಕಂತ ಜಿಲೆಟಿನ್ ಕಡ್ಡಿಗಳನ್ನು ಅದರ ಬಗ್ಗೆ ತಿಳಿಯದೇ ವಿದ್ಯಾರ್ಥಿಗಳು ಮುಟ್ಟಿದ ನಂತ್ರ ಸ್ಪೋಟಗೊಂಡ ಪರಿಣಾಮ, ವಿದ್ಯಾರ್ಥಿ ಕೈಬೆರಳುಗಳು ಛಿದ್ರಛಿದ್ರಗೊಂಡಿರುವಂತ ಘಟನೆ ನಡೆದಿದೆ. ತುಮಕೂರು ಜಿಲ್ಲೆಯ ಗುಬ್ಬಿ ತಾಲ್ಲೂಕಿನ ಸಿಎಸ್ ಪುರ ಹೋಬಳಿಯ ಇಡಗೂರು ಗ್ರಾಮದ ಸರ್ಕಾರಿ ಶಾಲಾ ಕಾಂಪೌಂಡ್ ನಿರ್ಮಾಣಕ್ಕೆ ಅವಶ್ಯ ಜಲ್ಲಿ ಕಲ್ಲುಗಳ ನಡುವೆ ಉಳಿದಿದ್ದ ಜೀವಂತ ಜೆಲಟಿನ್ ಕಡ್ಡಿ ಬಗ್ಗೆ ಅರಿಯದ ವಿದ್ಯಾರ್ಥಿಯೊಬ್ಬ ಕುತೂಹಲದಲ್ಲಿ ಜೆಲಟಿನ್ ಕಡ್ಡಿ ಮುಟ್ಟಿ ಸ್ಫೋಟ ಉಂಟಾಗಿ ವಿದ್ಯಾರ್ಥಿ ಕೈ ಬೆರಳುಗಳು ತುಂಡಾಗಿ ಆಸ್ಪತ್ರೆಗೆ ದಾಖಲಾದ ಆತಂಕದ ಘಟನೆ ನಡೆದಿದೆ. ಇಡಗೂರು ಸರ್ಕಾರಿ ಪ್ರೌಢಶಾಲೆಯಲ್ಲಿ ದಸರಾ ರಜೆ ಹಿನ್ನಲೆ ಹತ್ತನೇ ತರಗತಿಯ ವಿದ್ಯಾರ್ಥಿಗಳು ಸ್ಪೆಷಲ್ ಕ್ಲಾಸ್ ಗಾಗಿ ಆಗಮಿಸುತ್ತಿದ್ದ ಸಮಯದಲ್ಲಿ ಇಡಗೂರು ಗ್ರಾಮದ ವಿದ್ಯಾರ್ಥಿ ಮೋನಿಶ್ ಗೌಡ(15) ಕಲ್ಲು ಬಂಡೆ ಚೂರುಗಳ ಮಧ್ಯೆ ಕಂಡ ವೈರ್ ಸಹಿತ ಇದ್ದ ಜೆಲಟಿನ್ ಕಡ್ಡಿ ಕಂಡು ಕುತೂಹಲದಿಂದ ತೆಗೆದುಕೊಂಡು ಶಾಲಾ ಆವರಣದಲ್ಲಿ ತೆರಳಿದ ನಂತರ ಬಿಸಿಯಾದ ಅನುಭವಕ್ಕೆ…

Read More

ಬೆಂಗಳೂರು: ದ್ವಿತೀಯ PUC ಪ್ರಾಯೋಗಿಕ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳ ಯಾದೃಚ್ಛಿಕರಿಸುವ ಕ್ರಮಕ್ಕೆ ಶಾಲಾ ಪರೀಕ್ಷೆ ಮಂಡಳಿ ಬ್ರೇಕ್ ಹಾಕಿದೆ. ಈ ಮೂಲಕ ದ್ವಿತೀಯ PUC ಪ್ರಾಯೋಗಿಕ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳನ್ನು ಯಾದೃಚ್ಛಿಕರೀಸುವ ಕ್ರಮವನ್ನು ತಕ್ಷಣದಿಂದ ಜಾರಿಗೆ ಬರುವಂತೆ ತಡೆ ಹಿಡಿಯಲಾಗಿದೆ. ಇಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಅಧ್ಯಕ್ಷರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, 2025ನೇ ಸಾಲಿನ ದ್ವಿತೀಯ ಪಿಯುಸಿ ಪ್ರಾಯೋಗಿಕ ಪರೀಕ್ಷೆಗೆ ವಿದ್ಯಾರ್ಥಿಗಳನ್ನು ಯಾದೃಚ್ಛೀಕರಿಸುವ ಬಗ್ಗೆ ಅಗತ್ಯ ಕ್ರಮ ಕೈಗೊಳ್ಳುವ ಸಲುವಾಗಿ ದಿನಾಂಕ 01-10-2024 ಮತ್ತು 05-10-2024ರಂದು ಮಂಡಳಿಯಿಂದ ಸುತ್ತೋಲೆ ಹೊರಡಿಸಲಾಗಿತ್ತು ಎಂದಿದ್ದಾರೆ. ದಿನಾಂಕ 01-10-2024 ಮತ್ತು 05-10-2024ರಂದು ಮಂಡಳಿಯು ಹೊರಡಿಸಿದ್ದಂತ ಸುತ್ತೋಲೆಯನ್ನು ಪ್ರಾಥಮಿಕ, ಪ್ರೌಢ ಶಿಕ್ಷಣ ಮತ್ತು ಸಾಕ್ಷರತಾ ಇಲಾಖಾ ಸಚಿವ ಮಧು ಎಸ್ ಬಂಗಾರಪ್ಪ ಅವರ ಸೂಚನೆಯಂತೆ ಸದರಿ ಪ್ರಕ್ರಿಯೆಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ತಡೆಹಿಡಿಯಲಾಗಿದೆ ಎಂದು ತಿಳಿಸಿದ್ದಾರೆ. https://kannadanewsnow.com/kannada/udupi-lakhs-of-rupees-have-been-deposited-by-changing-atm-cards-cheating-case-registered/ https://kannadanewsnow.com/kannada/demu-special-train-to-run-between-arasikere-and-mysuru-on-the-occasion-of-dasara-festival/

Read More