Subscribe to Updates
Get the latest creative news from FooBar about art, design and business.
Author: kannadanewsnow09
ಬಳ್ಳಾರಿ: ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ರಾಜಾತಿಥ್ಯದ ನಂತ್ರ, ನಟ ದರ್ಶನ್ ಅವರನ್ನು ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಲಾಗಿತ್ತು. ಅವರನ್ನು ಬಳ್ಳಾರಿ ಜೈಲಿಗೆ ಶಿಪ್ಟ್ ಮಾಡಿದ ಮೂರು ದಿನಗಳ ಬಳಿಕ ಅವರ ಪತ್ನಿ ವಿಜಯಲಕ್ಷ್ಮೀ ಭೇಟಿಯಾದರು. ಪತ್ನಿ, ಪುತ್ರನನ್ನು ಕಂಡಂತ ನಟ ದರ್ಶನ್ ಭಾವುಕರಾಗಿದ್ದಲ್ಲದೇ, ಮಗನನ್ನು ತಬ್ಬಿ ಕಣ್ಣೀರಿಟ್ಟರು ಎಂಬುದಾಗಿ ತಿಳಿದು ಬಂದಿದೆ. ರೇಣುಕಾಸ್ವಾಮಿ ಕೊಲೆ ಕೇಸಲ್ಲಿ ನಟ ದರ್ಶನ್ ಜೈಲುಪಾಲಾಗಿದ್ದಾರೆ. ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ರಾಜಾತಿಥ್ಯದ ಪೋಟೋ ವೈರಲ್ ಆದ ಬಳಿಕ, ನಟ ದರ್ಶನ್ ಅಂಡ್ ಗ್ಯಾಂಗ್ ಆರೋಪಿಗಳನ್ನು ಒಂದೊಂದು ಜೈಲಿಗೆ ಶಿಫ್ಟ್ ಮಾಡಲಾಗಿತ್ತು. ನಟ ದರ್ಶನ್ ಅವರನ್ನು ಬಳ್ಳಾರಿ ಜೈಲಿಗೆ ಶಿಫ್ಟ್ ಮಾಡಲಾಗಿತ್ತು. ಇಂದು ಮೂರು ದಿನಗಳ ಬಳಿಕ ನಟ ದರ್ಶನ್ ಅವರನ್ನು ಅವರ ಪತ್ನಿ ವಿಜಯಲಕ್ಷ್ಮೀ ಹಾಗು ಪುತ್ರ ಭೇಟಿಯಾದರು. ಪತ್ನಿ, ಪುತ್ರನನ್ನು ಕಂಡಂತ ನಟ ದರ್ಶನ್ ಭಾವುಕರಾದರು ಎಂಬುದಾಗಿ ತಿಳಿದು ಬಂದಿದೆ. ಅಲ್ಲದೇ ಪುತ್ರನನ್ನು ಬಿಗಿದಪ್ಪಿದಂತ ನಟ ದರ್ಶನ್, ಕಣ್ಣೀರಿಟ್ಟರು ಎಂಬುದಾಗಿ ಹೇಳಲಾಗುತ್ತಿದೆ.…
ಬೆಂಗಳೂರು : “ರಾಜ್ಯಪಾಲರ ಹುದ್ದೆ ಸಾಂವಿಧಾನ ನೀಡಿರುವ ಪೀಠ. ರಾಜ್ಯಪಾಲರ ಕಚೇರಿ ಒಂದು ರಾಜಕೀಯ ಪಕ್ಷದ ಕಚೇರಿ ಆಗಬಾರದು. ಸಂವಿಧಾನಿಕವಾಗಿ ಈ ಹುದ್ದೆಗೆ ಇರುವ ಘನತೆದೆ ಧಕ್ಕೆ ಬರುವಂತೆ ನಡೆದುಕೊಳ್ಳಬಾರದು ಎಂಬುದು ನಮ್ಮ ಅಭಿಲಾಷೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ರಾಜ್ಯಪಾಲರ ಪಕ್ಷಪಾತ ಧೋರಣೆ ಖಂಡಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ಕಾಂಗ್ರೆಸ್ ಪಕ್ಷ ಶನಿವಾರ ರಾಜಭವನ ಚಲೋ ಪ್ರತಿಭಟನೆ ಹಮ್ಮಿಕೊಂಡಿತ್ತು. ಮೊದಲು ವಿಧಾನಸೌಧದ ಆವರಣದಲ್ಲಿರುವ ಗಾಂಧಿ ಪ್ರತಿಮೆ ಬಳಿ ಪ್ರತಿಭಟನೆ ನಡೆಸಿದ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸಿ ರಾಜ್ಯಾಪಾಲರ ವಿರುದ್ಧ ಘೋಷಣೆ ಕೂಗಿದರು. ನಂತರ ಕಾಲ್ನಡಿಗೆ ಮೂಲಕ ರಾಜಭವನಕ್ಕೆ ತೆರಳಿದ ಕಾಂಗ್ರೆಸ್ ಪಕ್ಷದ ನಿಯೋಗವು ಲೋಕಾಯುಕ್ತ ಎಸ್ ಐಟಿ ಕುಮಾರಸ್ವಾಮಿ, ಶಶಿಕಲಾ ಜೊಲ್ಲೆ, ಮುರುಗೇಶ್ ನಿರಾಣಿ ಮತ್ತು ಜನಾರ್ಧನ ರೆಡ್ಡಿ ಅವರ ವಿಚಾರಣೆಗೆ ಅನುಮತಿ ನೀಡಿ ಎಂದು ಸಲ್ಲಿಸಿರುವ ಮನವಿಗೆ ಅನುಮತಿ ನೀಡಬೇಕು ಎಂದು ಮನವಿ ಮಾಡಿದರು. ನಂತರ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದ ಡಿಸಿಎಂ…
ಬೆಂಗಳೂರು: ರಾಜಭವನವನ್ನು ಬಿಜೆಪಿ ಕಚೇರಿ ಎನ್ನುವುದಾದರೆ ವಿಧಾನಸೌಧವನ್ನು ಕಾಂಗ್ರೆಸ್ ಕಚೇರಿ ಎನ್ನಬೇಕಾಗುತ್ತದೆ. ಆಡಳಿತ ನಡೆಸುವ ಸರ್ಕಾರವೇ ಪ್ರತಿಭಟನೆಗೆ ಕೂರುತ್ತಿದೆ ಎಂದರೆ ಇದು ಸರ್ಕಾರದ ಸಂಪೂರ್ಣ ವೈಫಲ್ಯ ಎಂದು ಪ್ರತಿಪಕ್ಷ ಆರ್.ಅಶೋಕ ಟೀಕಿಸಿದರು. ಬಿಜೆಪಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಅಧಿಕಾರ ದುರುಪಯೋಗಪಡಿಸಿಕೊಳ್ಳುತ್ತಿದೆ. ಆಡಳಿತ ನಡೆಸುವವರೇ ಪ್ರತಿಭಟನೆ ಮಾಡುತ್ತಾರೆ ಎಂದರೆ ಸರ್ಕಾರ ವಿಫಲವಾಗಿದೆ ಎಂದರ್ಥ. ವಿಧಾನಸೌಧವನ್ನು ಕಾಂಗ್ರೆಸ್ ಕಚೇರಿ ಮಾಡಿಕೊಂಡು, ಅದರಂತೆ ಸರ್ಕಾರ ನಡೆಸಲಾಗುತ್ತಿದೆ ಎಂದರೆ ಅದನ್ನು ಒಪ್ಪಿಕೊಳ್ಳುತ್ತಾರಾ? ರಾಜಭವನ ಎಂದರೆ ಸಂವಿಧಾನದತ್ತ ಅಧಿಕಾರ. ರಾಜಭವನವನ್ನು ಬಿಜೆಪಿ ಕಚೇರಿ ಎನ್ನುವುದಾದರೆ, ವಿಧಾನಸೌಧವನ್ನು ಕಾಂಗ್ರೆಸ್ ಕಚೇರಿ ಎಂದು ನಾವು ಹೇಳುತ್ತೇವೆ ಎಂದರು. ರಾಜ್ಯಪಾಲರು ಪರಿಶೀಲಿಸಿ ತನಿಖೆಗೆ ಅನುಮತಿ ನೀಡಿದ್ದಾರೆ. 75 ವರ್ಷಗಳ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಹೀಗೆ ನಡೆದಿದೆ ಎಂಬಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವರ್ತಿಸುತ್ತಿದ್ದಾರೆ. ಈ ಹಿಂದೆ ಬಿ.ಎಸ್.ಯಡಿಯೂರಪ್ಪ, ಜನಾರ್ದನ ರೆಡ್ಡಿ ಅವರ ವಿರುದ್ಧದ ತನಿಖೆಗೂ ಆಗಿನ ರಾಜ್ಯಪಾಲರು ಅನುಮತಿ ನೀಡಿದ್ದರು. ಆಗ ರಾಜಭವನ ಕಾಂಗ್ರೆಸ್ ಕಚೇರಿಯಾಗಿತ್ತೇ? ಕಾಂಗ್ರೆಸ್ ನಾಯಕರು ಕಿವಿಯ…
ಬೆಂಗಳೂರು: ಕಕರಸಾ ನಿಗಮದಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುತ್ತಿರುವ ಮತ್ತು ಅನುಕಂಪದ ಆಧಾರದಡಿಯಲ್ಲಿ ನೇಮಕಾತಿ ಆದೇಶ ಪತ್ರವನ್ನು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ವಿತರಿಸಿದರು. ಕಕರಸಾ ನಿಗಮದಲ್ಲಿ ದಿನಾಂಕ:31.08.2024 ರಂದು ಸನ್ಮಾನ್ಯ ಸಾರಿಗೆ ಮತ್ತು ಮುಜರಾಯಿ ಸಚಿವರಾದ ರಾಮಲಿಂಗಾರೆಡ್ಡಿ ರವರ ಅಧ್ಯಕ್ಷತೆಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಮೃತ ನೌಕರರ ಅವಲಂಬಿತರಿಗೆ ಅನುಕಂಪದ ಆಧಾರದಡಿಯಲ್ಲಿ ನೇಮಕಾತಿ ಆದೇಶ ಪತ್ರವನ್ನು ವಿತರಿಸಲಾಯಿತು. ಸಚಿವರು ನೆರೆದಿದ್ದ ಅಭ್ಯರ್ಥಿಗಳು ಮತ್ತು ಕುಟುಂಬದವರಿಗೆ ಶುಭ ಕೋರಿ, ನಿಗಮದ ಬಗ್ಗೆ ಹಿತ ನುಡಿಗಳನ್ನು ನುಡಿದರು. ನಿಗಮದಲ್ಲಿ ಅನುಕಂಪದ ಆಧಾರದ ಮೇಲೆ ನೌಕರಿಗಾಗಿ ನಿರೀಕ್ಷಣೆಯಲ್ಲಿದ್ದ ಮೃತಾವಲಂಬಿತ ಅಭ್ಯರ್ಥಿಗಳ ಪೈಕಿ ಅರ್ಹತೆಯನುಸಾರ ಹಾಗೂ ಖಾಲಿ ಹುದ್ದೆಗಳ ಲಭ್ಯತೆಗನುಗುಣವಾಗಿ ಸುಮಾರು 141 ಮೃತಾವಲಂಬಿತರನ್ನು ಕಳೆದ ಜನವರಿ-2023 ರಿಂದ ಆಗಸ್ಟ್-2024 ರ ಅವಧಿಯಲ್ಲಿ ದರ್ಜೆ-3 (ಮೇಲ್ವಿಚಾರಕೇತರ) ಮತ್ತು ದರ್ಜೆ-4ರ ಖಾಲಿ ಹುದ್ದೆಗಳಿಗೆ ನೇಮಕ ಮಾಡಲಾಗಿದೆ. ನಿಗಮದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಚಾಲಕ, ನಿರ್ವಾಹಕ ಹಾಗೂ ತಾಂತ್ರಿಕ ಹುದ್ದೆಗಳು ಖಾಲಿ ಇದ್ದು, ಇವುಗಳನ್ನು ಮೃತಾವಲಂಬಿತರುಗಳು ಆಯ್ಕೆ ಮಾಡಿಕೊಳ್ಳದೇ…
ಬೆಂಗಳೂರು: ಬಿಎಂಟಿಸಿ ಬಸ್ ಪಾಸ್ ಅನ್ನು ಮೊಬೈಲ್ ನಲ್ಲೇ ಖರೀದಿಸುವ ವ್ಯವಸ್ಥೆಯನ್ನು ಜಾರಿಗೊಳಿಸಲಾಗುತ್ತಿದೆ. ಸೆ.15ರಿಂದ ಈ ವ್ಯವಸ್ಥೆ ಜಾರಿಗೊಳ್ಳಲಿದೆ. ಹೀಗಾಗಿ ಕೆಲ ಪ್ರಯಾಣಿಕರು ಆತಂಕಕ್ಕೂ ಒಳಗಾಗಿದ್ದರು. ಆದರೇ ಆತಂಕ ಬೇಡ. ಬಿಎಂಟಿಸಿ ಪ್ರಯಾಣಿಕರಿಗೆ ಡಿಜಿಟಲ್ ಜೊತೆಗೆ ಪೂರ್ವ ಮುದ್ರಿತ ಬಸ್ ಬಾಸ್ ಕೂಡ ಲಭ್ಯವಿದೆ ಎಂಬುದಾಗಿ ಬಿಎಂಟಿಸಿ ಸ್ಪಷ್ಟ ಪಡಿಸಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ಈ ಹಿಂದೆ ತಿಳಿಸಿರುವಂತೆ, 2024 ರ ಸೆಪ್ಟೆಂಬರ್ 15 ರಿಂದ ನಮ್ಮ ಬಿ.ಎಂ.ಟಿ.ಸಿ ಮೊಬೈಲ್ ಅಪ್ಲಿಕೇಶನ್ ಮೂಲಕ ದೈನಂದಿನ, ಸಾಪ್ತಾಹಿಕ ಮತ್ತು ಮಾಸಿಕ ಬಸ್ ಪಾಸ್ಗಳು ಡಿಜಿಟಲ್ ಮೋಡ್ನಲ್ಲಿ ಲಭ್ಯವಿರುತ್ತವೆ ಎಂದು ಘೋಷಿಸಲು ಹರ್ಷಿಸುತ್ತದೆ. ಈ ಉಪಕ್ರಮವು ನಮ್ಮ ನಿರಂತರ ಪ್ರಯತ್ನಗಳ ಭಾಗವಾಗಿದ್ದು, ಕಾಗದರಹಿತ ವಹಿವಾಟುಗಳನ್ನು ಉತ್ತೇಜಿಸಲು ಮತ್ತು ನಮ್ಮ ಮೌಲ್ಯಯುತ ಪ್ರಯಾಣಿಕರಿಗೆ ಅನುಕೂಲವನ್ನು ಹೆಚ್ಚಿಸಲು ಸಹಾಯವಾಗಿದೆ ಎಂದಿದೆ. ಈ ಸಂಬಂಧ ಸಾರ್ವಜನಿಕ ಪ್ರಯಾಣಿಕರಿಂದ ಪೂರ್ವ ಮುದ್ರಿತ ಪಾಸುಗಳ ವಿತರಣೆಗಾಗಿ ಬೇಡಿಕೆ ಸ್ವೀಕರಿಸಿದ್ದು, ಅವರ ಬೇಡಿಕೆಗೆ ಸ್ಪಂದಿಸಿ…
ಬೆಂಗಳೂರು: ರಾಜ್ಯ ಸರ್ಕಾರ ಜಾರಿಗೆ ತಂದಿರುವಂತ ಮಹತ್ವಾಕಾಂಕ್ಷೆಯ ಗ್ಯಾರಂಟಿ ಯೋಜನೆಗಳಲ್ಲಿ ಗೃಹಲಕ್ಷ್ಮಿ ಯೋಜನೆ ಜಾರಿಗೊಂಡು ಇಂದಿಗೆ ವರ್ಷದ ಸಂಭ್ರಮವಾಗಿದೆ. ಇಂತಹ ಯೋಜನೆಗೆ ಮನೆಯ ಯಜಮಾನಿಯರಿಗೆ 25 ಸಾವಿರ ಕೋಟಿ ಜಮೆ ಮಾಡಲಾಗಿದೆ. ಈ ಕುರಿತಂತೆ ಡಿಸಿಎಂ ಡಿ.ಕೆ ಶಿವಕುಮಾರ್ ಮಾಹಿತಿ ಹಂಚಿಕೊಂಡಿದ್ದರು, ಬಡವರ ಪಾಲಿನ ನಂದಾದೀಪವಾದ ʼಗೃಹಲಕ್ಷ್ಮಿʼ ಯೋಜನೆಗೆ ವರ್ಷ ತುಂಬಿದೆ. ಈ ಒಂದು ವರ್ಷದಲ್ಲಿ ಮನೆಯ ಯಜಮಾನಿಯರಿಗೆ ₹25,248 ಕೋಟಿ ಜಮೆ ಮಾಡಲಾಗಿದೆ. ಇದರಿಂದಾಗಿ ಮಹಿಳೆಯರು ಆರ್ಥಿಕ ಸಬಲರಾಗಿದ್ದು ಮಾತ್ರವಲ್ಲದೇ, ಕುಟುಂಬ ನಿರ್ವಹಣೆಗೂ ಸಹಕಾರಿಯಾಗಿದೆ ಎಂದು ತಿಳಿಸಿದ್ದಾರೆ. https://twitter.com/KarnatakaVarthe/status/1829810388709318851 ಅಂದಹಾಗೇ ಗೃಹಲಕ್ಷ್ಮಿ ಯೋಜನೆಯ ಅಡಿಯಲ್ಲಿ ಮನೆಯ ಯಜಮಾನಿ ಮಹಿಳೆಯರಿಗೆ ಪ್ರತಿ ತಿಂಗಳು ರೂ.2000 ನೀಡಲಾಗುತ್ತಿದೆ. ಈ ಯೋಜನೆಯಿಂದ ಬಂದಂತ ಹಣದಿಂದ ಯಜಮಾನಿ ಮಹಿಳೆಯರು ಕೆಲವರು ಟಿವಿ ಖರೀದಿಸಿದ್ದರೇ, ಮತ್ತೆ ಕೆಲವರು ಫ್ರಿಡ್ಜ್ ಖರೀದಿಸಿದ್ದಾರೆ. ಮಗದೊಬ್ಬರು ಅಂಗಡಿಯನ್ನೇ ಹಾಕಿದ್ದಾರೆ. ಇದಕ್ಕೆ ಮೀರಿದಂತೆ ಮಹಾತಾಯಿಯೊಬ್ಬರು ಇಡೀ ಊರಿಗೆ ಹೋಳಿಗೆ ಊಟ ಹಾಕಿಸಿ, ಸಂಭ್ರಮಿಸಿದ್ದರು. https://kannadanewsnow.com/kannada/breaking-hc-adjourns-hearing-on-cm-siddaramaiahs-bail-plea-till-2-30-pm/ https://kannadanewsnow.com/kannada/man-attempts-suicide-by-consuming-poison-in-court-fearing-jail-term-in-davangere/
ನವದೆಹಲಿ: ಮಲಯಾಳಂ ಚಿತ್ರೋದ್ಯಮದಲ್ಲಿ ಲೈಂಗಿಕ ಕಿರುಕುಳದ ಪ್ರಕರಣಗಳ ಬಗ್ಗೆ ಪ್ರತಿಕ್ರಿಯಿಸಿದ ನಟಿ ರಾಧಿಕಾ ಶರತ್ ಕುಮಾರ್, ಇಂತಹ ಘಟನೆಗಳು ಇತರ ಚಲನಚಿತ್ರೋದ್ಯಮಗಳಲ್ಲಿಯೂ ಚಾಲ್ತಿಯಲ್ಲಿವೆ ಎಂದು ಒತ್ತಿ ಹೇಳಿದರು. ಅವರು ಸುದ್ದಿ ವಾಹಿನಿಯೊಂದಿಗೆ ಮಾತನಾಡುವಾಗ, ಚಲನಚಿತ್ರ ಸೆಟ್ನಲ್ಲಿ ಪುರುಷರ ಗುಂಪು ಮಹಿಳಾ ನಟಿಯ ನಗ್ನ ವೀಡಿಯೊವನ್ನು ನೋಡುತ್ತಿರುವುದನ್ನು ನೋಡಿದ ಘಟನೆಯನ್ನು ಬಹಿರಂಗಪಡಿಸಿದರು. ಅದನ್ನು ಅವರು ತಮ್ಮ ವ್ಯಾನಿಟಿ ವ್ಯಾನ್ನಲ್ಲಿ ಗುಪ್ತ ಕ್ಯಾಮೆರಾದಿಂದ ರೆಕಾರ್ಡ್ ಮಾಡಿದ್ದರು. ತಮಿಳು, ತೆಲುಗು, ಮಲಯಾಳಂ ಮತ್ತು ಕನ್ನಡ ಚಿತ್ರರಂಗದಲ್ಲಿ ಕೆಲಸ ಮಾಡಿರುವ ರಾಧಿಕಾ ಈ ಘಟನೆಯ ಬಗ್ಗೆ ಏಷ್ಯಾನೆಟ್ ನ್ಯೂಸ್ನ ‘ನಮಸ್ತೆ ಕೇರಳ’ ಜೊತೆ ಮಾತನಾಡಿದ್ದಾರೆ. ಅವರು ಸೆಟ್ಗಳಲ್ಲಿನ ನಡವಳಿಕೆಯನ್ನು ಕರೆದು ಅದರ ಬಗ್ಗೆ ಮತ್ತಷ್ಟು ವಿಚಾರಿಸಿದರು. ಆದರೆ ಅವರು “ಅದನ್ನು ಪರಿಶೀಲಿಸುತ್ತಾರೆ” ಎಂದು ಅವರಿಗೆ ತಿಳಿಸಲಾಯಿತು ಎಂದು ಅವರು ಹೇಳಿದರು. ಮಲಯಾಳಂ ಚಿತ್ರೋದ್ಯಮದಲ್ಲಿ ಲೈಂಗಿಕ ಕಿರುಕುಳದ ಪ್ರಕರಣಗಳ ಬಗ್ಗೆ ಪ್ರತಿಕ್ರಿಯಿಸಿದ ನಟಿ ರಾಧಿಕಾ ಶರತ್ ಕುಮಾರ್, ಇಂತಹ ಘಟನೆಗಳು ಇತರ ಚಲನಚಿತ್ರೋದ್ಯಮಗಳಲ್ಲಿಯೂ ಚಾಲ್ತಿಯಲ್ಲಿವೆ ಎಂದು ಒತ್ತಿ ಹೇಳಿದರು.…
ದಾವಣಗೆರೆ: ಪ್ರಕರಣವೊಂದರಲ್ಲಿ ಜೈಲು ಶಿಕ್ಷೆಯ ಭಯದಿಂದಾಗಿ ಆರೋಪಿಯೊಬ್ಬ ನ್ಯಾಯಾಲಯದ ಆವರಣದಲ್ಲೇ ವಿಷ ಸೇವಿಸಿ ಅಸ್ವಸ್ಥಗೊಂಡು ಆಸ್ಪತ್ರೆಗೆ ದಾಖಲಾಗಿರುವಂತ ಘಟನೆ ನಡೆದಿದೆ. ಇಂದು ಕೌಟುಂಬಿಕ ದೌರ್ಜನ್ಯ ಪ್ರಕರಣವೊಂದರಲ್ಲಿ ವಿಚಾರಣೆಗೆ ಆರೋಪಿಯಾಗಿದ್ದಂತ ಫಜಲ್ ಆಲಿ ಎಂಬಾತ ದಾವಣಗೆರೆಯ ಹರಿಹರದ 2ನೇ ಹೆಚ್ಚುವರಿ ಜೆಎಂಎಫ್ ಸಿ ನ್ಯಾಯಾಲಯಕ್ಕೆ ಹಾಜರಾಗಿದ್ದರು. ಜೈಲು ಶಿಕ್ಷೆಯ ಭಯದಲ್ಲಿದ್ದಂತ ಆರೋಪಿ, ನ್ಯಾಯಾಧೀಶರ ಮುಂದೆಯೇ ವಿಷ ಸೇವಿಸಿ ಆಸ್ವಸ್ಥಗೊಂಡಿದ್ದಾರೆ. ಕೂಡಲೇ ಅವರನ್ನು ಸಮೀಪದ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗಾಗಿ ದಾವಣಗೆರೆ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. https://kannadanewsnow.com/kannada/russian-helicopter-with-19-passengers-three-crew-members-goes-missing-in-kamchatka-peninsula/ https://kannadanewsnow.com/kannada/breaking-hc-adjourns-hearing-on-cm-siddaramaiahs-bail-plea-till-2-30-pm/
ಮಾಸ್ಕೋ: ಮೂವರು ಸಿಬ್ಬಂದಿ ಮತ್ತು 19 ಪ್ರಯಾಣಿಕರನ್ನು ಹೊತ್ತ ರಷ್ಯಾದ ಹೆಲಿಕಾಪ್ಟರ್ ದೂರದ ಪೂರ್ವ ಪರ್ಯಾಯ ದ್ವೀಪವಾದ ಕಮ್ಚಾಟ್ಕಾದಲ್ಲಿ ಶನಿವಾರ ಕಾಣೆಯಾಗಿದೆ ಎಂದು ಫೆಡರಲ್ ವಾಯು ಸಾರಿಗೆ ಏಜೆನ್ಸಿಯ ಪ್ರಾಥಮಿಕ ಅಂಕಿಅಂಶಗಳನ್ನು ಉಲ್ಲೇಖಿಸಿ ವರದಿಗಳು ತಿಳಿಸಿವೆ. ಎಂಐ -8 ಟಿ ಹೆಲಿಕಾಪ್ಟರ್ ವಾಚ್ಕಾಜೆಟ್ಸ್ ಜ್ವಾಲಾಮುಖಿಯ ಬಳಿಯ ನೆಲೆಯಿಂದ ಹೊರಟಿತು ಮತ್ತು ಸಿಬ್ಬಂದಿ 04:00 ಜಿಎಂಟಿ (ಭಾರತೀಯ ಸಮಯ ಬೆಳಿಗ್ಗೆ 9:30) ನಿಗದಿತ ಸಮಯಕ್ಕೆ ವರದಿ ಮಾಡಲು ವಿಫಲರಾದರು. ಎಂಐ-8 1960ರ ದಶಕದಲ್ಲಿ ವಿನ್ಯಾಸಗೊಳಿಸಲಾದ ಎರಡು ಎಂಜಿನ್ ಹೆಲಿಕಾಪ್ಟರ್ ಆಗಿದೆ. ಇದನ್ನು ರಷ್ಯಾದಲ್ಲಿ ವ್ಯಾಪಕವಾಗಿ ಬಳಸಲಾಗುತ್ತದೆ, ಅಲ್ಲಿ ಅಪಘಾತಗಳು ಆಗಾಗ್ಗೆ ಸಂಭವಿಸುತ್ತಿವೆ. https://kannadanewsnow.com/kannada/breaking-hc-adjourns-hearing-on-cm-siddaramaiahs-bail-plea-till-2-30-pm/ https://kannadanewsnow.com/kannada/visa-partners-with-skill-india-to-skill-20000-youth-for-tourism-industry/
ಬೆಂಗಳೂರು : ಸೆಪ್ಟೆಂಬರ್ 2 ರಿಂದ 1-5 ನಮೂನೆ ಪೋಡಿ ದುರಸ್ಥಿ ಕಾರ್ಯವನ್ನು ಅಭಿಯಾನ ಮಾದರಿಯಲ್ಲಿ ರಾಜ್ಯಾದ್ಯಂತ ಜಾರಿಗೊಳಿಸಬೇಕು ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಎಲ್ಲಾ ಜಿಲ್ಲಾಧಿಕಾರಿಗಳು ಹಾಗೂ ತಹಶೀಲ್ದಾರರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು. ದಶಕಗಳಿಂದ ಬಾಕಿ ಉಳಿದಿರುವ ಪೋಡಿ ದುರಸ್ಥಿ ಕಾರ್ಯಕ್ಕೆ ಚುರುಕು ನೀಡುವ ಸಂಬಂಧ ವಿಕಾಸಸೌಧದಲ್ಲಿ ಶುಕ್ರವಾರ ಎಲ್ಲಾ ಜಿಲ್ಲಾಧಿಕಾರಿಗಳು, ತಹಶೀಲ್ದಾರರು, ಕಂದಾಯ ನಿರೀಕ್ಷಕರೂ ಸೇರಿ ಇಲಾಖೆಯ ಎಲ್ಲಾ ಅಧಿಕಾರಿಗಳ ಜೊತೆಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಸಚಿವ ಕೃಷ್ಣ ಬೈರೇಗೌಡ ಅವರು ಸಭೆ ನಡೆಸಿದರು. “ರಾಜ್ಯದಲ್ಲಿ ಸುಮಾರು 10 ಲಕ್ಷ ರೈತರಿಗೆ ಹತ್ತಾರು ವರ್ಷಗಳ ಹಿಂದೆ ಸರ್ಕಾರಿ ಜಮೀನು ಅಕ್ರಮ ಸಕ್ರಮದಡಿ ಮಂಜೂರಾಗಿದ್ದರೂ ಸಹ, ಪೋಡಿ ದುರಸ್ಥಿ ಆಗದೆ ಬಾಕಿ ಉಳಿದಿದೆ. ಲಕ್ಷಾಂತರ ರೈತರು ಅನೇಕ ವರ್ಷಗಳಿಂದ ಪ್ರಯತ್ನ ಮಾಡುತ್ತಿದ್ದರೂ ಸಹ, ಕೆಲವೇ ಕೆಲವರಿಗೆ ಮಾತ್ರ ಪೋಡಿ ದುರಸ್ಥಿಯಾಗಿದ್ದು ಬಹುತೇಕರಿಗೆ ಆಗಿರುವುದಿಲ್ಲ. ಇದರಿಂದಾಗಿ ಹಲವು ರೈತರು ತೀವ್ರ ತೊಂದರೆಗೆ ಸಿಲುಕಿದ್ದು, ಅಧಿಕಾರಿಗಳು ಸೆಪ್ಟೆಂಬರ್ 2 ರಿಂದ ಅಭಿಯಾನ ಮಾದರಿಯಲ್ಲಿ…