Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ಪ್ಯಾರೀಸ್ ಒಲಂಪಿಕ್ಸ್ ನಲ್ಲಿ ಭಾರತವನ್ನು ಪ್ರತಿನಿಧಿಸುತ್ತಿರುವ ಒಂಬತ್ತು ಮಂದಿ ಕ್ರೀಡಾಪಟುಗಳಿಗೆ ತಲಾ ಐದು ಲಕ್ಷ ರೂಪಾಯಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಜೂರು ಮಾಡಿದ್ದಾರೆ. ಕರ್ನಾಟಕ ಒಲಂಪಿಕ್ ಅಸೋಸಿಯೇಷನ್ ಅಧ್ಯಕ್ಷರು ಮತ್ತು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಆಗಿರುವ ಡಾ.ಕೆ.ಗೋವಿಂದರಾಜು ಅವರು ರಾಜ್ಯದ ಕ್ರೀಡಾಪಟುಗಳಿಗೆ ಪ್ರೋತ್ಸಾಹದಾಯವಾಗಿ ತಲಾ 5 ಲಕ್ಷ ರೂಪಾಯಿ ಮಂಜೂರು ಮಾಡುವಂತೆ ಮನವಿ ಮಾಡಿದ್ದರು. ಈ ಮನವಿಗೆ ಸ್ಪಂದಿಸಿದ ಮುಖ್ಯಮಂತ್ರಿಗಳು ಹಣ ಮಂಜೂರು ಮಾಡಿದ್ದಾರೆ. ಜುಲೈ 26 ರಿಂದ ಆಗಸ್ಟ್ 11ರ ವರೆಗೆ ಪ್ಯಾರೀಸ್ ನಲ್ಲಿ ಒಲಂಪಿಕ್ ಕ್ರೀಡಾಕೂಟ ನಡೆಯಲಿದೆ. ಈ ಕ್ರೀಡಾಕೂಟದಲ್ಲಿ ರಾಜ್ಯದ ಪರವಾಗಿ ಮಹಿಳಾ ಡಬಲ್ಸ್ ಬ್ಯಾಡ್ಮಿಂಟನ್ ನಲ್ಲಿ ಕುಮಾರಿ ಅಶ್ವಿನಿ ಪೊನ್ನಪ್ಪ, ಮಹಿಳಾ ಗಾಲ್ಫ್ ನಲ್ಲಿ ಕುಮಾರಿ ಅದಿತಿ ಅಶೋಕ್, ಮಹಿಳಾ ಫ್ರೀಸ್ಟೈಲ್ ಈಜು ಸ್ಫರ್ಧೆಯಲ್ಲಿ ಕುಮಾರಿ ಧಿನಿಧಿ ದೇಸಿಂಗೂ , ಮಿಕ್ಸೆಡ್ ರಿಲೇ ಓಟದಲ್ಲಿ ಎಂ.ಆರ್.ಪೂವಮ್ಮ, ಟೇಬಲ್ ಟೆನ್ನಿಸ್ ನಲ್ಲಿ ಕುಮಾರಿ ಅರ್ಚನಾ ಕಾಮತ್, ಪುರುಷರ ಈಜು ಸ್ಫರ್ಧೆಯಲ್ಲಿ ಶ್ರೀಹರಿ ನಟರಾಜ್, ಪುರುಷರ ಟೆನ್ನಿಸ್…
ಬೆಂಗಳೂರು : ಕರ್ನಾಟಕ ವಿದ್ಯುತ್ ನಿಗಮ ನಿಯಮಿತ (ಕೆಪಿಸಿಲ್) ವು ತ್ಯಾಜ್ಯದಿಂದ ವಿದ್ಯುತ್ ಉತ್ಪಾದಿಸುವ ಮೂಲಕ ಬೆಂಗಳೂರಿನಲ್ಲಿ ಖಾಸಗಿಯವರಿಗೂ ಸಾಧ್ಯವಾಗದ ಕಾರ್ಯವನ್ನು ಮಾಡಿದೆ ಎಂದು ಇಂಧನ ಇಲಾಖೆ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಗೌರವ್ ಗುಪ್ತಾ ಹೇಳಿದ್ದಾರೆ. ನಗರದ ಜ್ಞಾನಜ್ಯೋತಿ ಸಭಾಂಗಣದಲ್ಲಿ ಶನಿವಾರ ಕೆಪಿಸಿಎಲ್ ನ 55ನೇ ಸಂಸ್ಥಾಪನಾ ದಿನಾಚರಣೆ ಉದ್ಘಾಟಿಸಿ ಮಾತನಾಡಿ, “ಬಿಬಿಎಂಪಿ ವ್ಯಾಪ್ತಿಯಲ್ಲಿ ಉತ್ಪಾದನೆಯಾಗುವ ತ್ಯಾಜ್ಯದಿಂದ ವಿದ್ಯುತ್ ಉತ್ಪಾದನೆ ಮಾಡುವ ಸಂಬಂಧ ಏಳೆಂಟು ಖಾಸಗಿ ಕಂಪನಿಗಳ ಜತೆ ಮಾತುಕತೆ ನಡೆಸಲಾಗಿತ್ತಾದರೂ ಯೋಜನೆ ಜಾರಿಗೊಳಿಸಲು ಅವರಿಂದ ಸಾಧ್ಯವಾಗಲಿಲ್ಲ. ಆದರೆ, ಕೆಪಿಸಿಎಲ್ ಈ ಕಾರ್ಯದಲ್ಲಿ ಯಶಸ್ವಿಯಾಗಿದೆ. ಬಿಡದಿಯಲ್ಲಿ ತ್ಯಾಜ್ಯದಿಂದ ವಿದ್ಯುತ್ ಉತ್ಪಾದಿಸುವ ಘಟಕದಲ್ಲಿ ಉತ್ಪಾದನೆ ಪ್ರಾಯೋಗಿಕವಾಗಿ ಆರಂಭವಾಗಿದೆ. ಈ ಸಾಧನೆಯ ಯಶಸ್ಸು ಕೆಪಿಸಿಎಲ್ ನ ಇಂಜಿನಿಯರ್ ಗಳು ಮತ್ತು ಸಿಬ್ಬಂದಿಗೆ ಸಲ್ಲಬೇಕು”, ಎಂದರು. “ಪ್ರಸ್ತುತ ರಾಜ್ಯದಲ್ಲಿ32 ಸಾವಿರ ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆಯಾಗುತ್ತಿದ್ದು, ಇದನ್ನು ಮುಂದಿನ ಏಳು ವರ್ಷಗಳಲ್ಲಿ 60 ಸಾವಿರ ಮೆಗಾವ್ಯಾಟ್ ಗೆ ಹೆಚ್ಚಿಸುವ ಬಗ್ಗೆ ಮುಖ್ಯಮಂತ್ರಿಯವರು ಬಜೆಟ್ ಭಾಷಣದಲ್ಲಿ ಘೋಷಿಸಿದ್ದಾರೆ.…
ಮೈಸೂರು: ಮುಡಾ ಹಗರಣದ ಅಕ್ರಮದ ಬೆನ್ನಲ್ಲೇ ಸಿಎಂ ಸಿದ್ಧರಾಮಯ್ಯ ಅವರ ಪತ್ನಿ ಪಾರ್ವತಿಗೆ ಸೇರಿದ ಜಮೀನು ನಮ್ಮದು. ಮೋಸದಿಂದ ಜಮೀನನ್ನು ತಮ್ಮ ಚಿಕ್ಕಪ್ಪ ಮಾರಾಟ ಮಾಡಿದ್ದಾರೆ ಅಂತ ಮೂಲ ಜಮೀನಿನ ಮಾಲೀಕರಿಂದ ಜಿಲ್ಲಾಧಿಕಾರಿಗಳಿಗೆ ದೂರು ನೀಡಲಾಗಿದೆ. ಇಂದು ಮೈಸೂರಿನ ಜಿಲ್ಲಾಧಿಕಾರಿಯವರ ಕಚೇರಿಗೆ ಭೇಟಿ ನೀಡಿದಂತ ಮೂಲ ಮಾಲೀಕರಾದ ಜವರಯ್ಯ ಅವರ ಕುಟುಂಬಸ್ಥರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿರವರಿಗೆ ಸೇರಿದ ಎನ್ನಲಾದ ದೇವನೂರು ಜಮೀನು ತಮ್ಮದು. ನಮ್ಮ ಚಿಕ್ಕಪ್ಪ ಮೋಸದಿಂದ ಸಿಎಂ ಸಿದ್ಧರಾಮಯ್ಯ ಅವರ ಪತ್ನಿಗೆ ಮಾರಾಟ ಮಾಡಿದ್ದಾರೆ ಅಂತ ದೂರು ನೀಡಿದ್ದಾರೆ. ಇನ್ನೂ ಮೂಲ ಮಾಲೀಕರಾದ ಜವರ ರವರ ಕುಟುಂಬಸ್ಥರು ಜಿಲ್ಲಾಧಿಕಾರಿಗಳನ್ನು ಭೇಟಿ ಮಾಡಿ ಅವರ ಕುಟುಂಬಸ್ಥರಿಗೆ ಆಗಿರು ಅನ್ಯಾಯವನ್ನು ಸರಿಪಡಿಸಿ ನ್ಯಾಯ ಒದಗಿಸುವಂತೆ ಮಾಜಿ ಸಚಿವರ ಎನ್. ಮಹೇಶ್ ರವರ ನೇತೃತ್ವದಲ್ಲಿ ಮನವಿ ಸಲ್ಲಿಸಲಾಗಿದೆ. ಈ ಸಂದರ್ಭದಲ್ಲಿ ಮೈಸೂರು ಜಿಲ್ಲಾಧ್ಯಕ್ಷ ಎಲ್. ನಾಗೇಂದ್ರ, ಶಾಸಕ ಶ್ರೀವತ್ಸ ಮುಂತಾದವರು ಉಪಸ್ಥಿತರಿದ್ದರು. https://kannadanewsnow.com/kannada/lkg-ukg-school-to-start-250-anganwadi-selection-formal-launch-from-july-22-minister-laxmi-hebbalkar/ https://kannadanewsnow.com/kannada/viral-video-baby-born-with-32-teeth-video-of-a-baby-laughing-goes-viral/
ನವದೆಹಲಿ: ಬಿಹಾರ ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ತನಿಖಾ ದಳ (ಸಿಬಿಐ) ಶನಿವಾರ ಇನ್ನೂ ಮೂವರನ್ನು ಬಂಧಿಸಿದೆ. ಬಂಧಿತ ಮೂವರು ಆರೋಪಿಗಳಲ್ಲಿ ಇಬ್ಬರು ‘ಸಾಲ್ವರ್ ಗ್ಯಾಂಗ್’ ನ ಭಾಗವಾಗಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ. ಏತನ್ಮಧ್ಯೆ, ಒಬ್ಬರು ಪ್ರಕರಣದ ಪ್ರಮುಖ ಆರೋಪಿಯ ಸಹಚರರಾಗಿದ್ದಾರೆ ಎಂಬುದಾಗಿ ತಿಳಿದು ಬಂದಿದೆ. ರಾಂಚಿಯ ರಾಜೇಂದ್ರ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ (ರಿಮ್ಸ್) ನಲ್ಲಿ ಮೊದಲ ವರ್ಷದ ಎಂಬಿಬಿಎಸ್ ವಿದ್ಯಾರ್ಥಿನಿ ಸುರಭಿ ಕುಮಾರಿಯನ್ನು ಬಂಧಿಸಿದ ಒಂದು ದಿನದ ನಂತರ ಈ ಬಂಧನಗಳು ನಡೆದಿವೆ. ಮೇ 5 ರಂದು ನೀಟ್-ಯುಜಿ ಪರೀಕ್ಷೆಯ ದಿನದಂದು ಕದ್ದ ಪರೀಕ್ಷಾ ಪತ್ರಿಕೆಯನ್ನು ಪರಿಹರಿಸುವಲ್ಲಿ ಭಾಗಿಯಾಗಿರುವ ಬಗ್ಗೆ ಕುಮಾರಿಯನ್ನು ಎರಡು ದಿನಗಳ ಕಾಲ ವಿಚಾರಣೆ ನಡೆಸಲಾಯಿತು. ಘಟನೆಯ ನಂತರ ವ್ಯಾಪಕ ಆಕ್ರೋಶಕ್ಕೆ ಪ್ರತಿಕ್ರಿಯೆಯಾಗಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಪ್ರಶ್ನೆ ಪತ್ರಿಕೆ ಸೋರಿಕೆಯಲ್ಲಿ ಭಾಗಿಯಾಗಿರುವವರ ವಿರುದ್ಧ ಭಾರಿ ದಬ್ಬಾಳಿಕೆಯನ್ನು ಪ್ರಾರಂಭಿಸಿದೆ. ಜೆಮ್ಷೆಡ್ಪುರದ ನ್ಯಾಷನಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿಯ 2017 ರ…
ಬೆಂಗಳೂರು: ಶೈಕ್ಷಣಿಕ ಸಂಸ್ಥೆಗಳು ಶೇ. 25 ರಷ್ಟು ಸೇವಾ ಶುಲ್ಕ ಪಾವತಿಸಿ ಒಂದು ಬಾರಿ ಪರಿಹಾರ ಯೋಜನೆಯ ಲಾಭ ಪಡೆಯುವಂತ ಅವಕಾಶವನ್ನು ಬಿಬಿಎಂಪಿ ನೀಡಿದೆ. ಈ ಮೂಲಕ ಬೆಂಗಳೂರಿನ ಶೈಕ್ಷಣಿಕ ಸಂಸ್ಥೆಗಳಿಗೆ ಬಿಬಿಎಂಪಿ ಗುಡ್ ನ್ಯೂಸ್ ನೀಡಿದೆ. ಈ ಕುರಿತಂತೆ ಮಾಹಿತಿ ಹಂಚಿಕೊಂಡಿರುವಂತ ಬಿಬಿಎಂಪಿ ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್ ಅವರು, ಬಿಬಿಎಂಪಿ ವ್ಯಾಪ್ತಿಯಲ್ಲಿ ಬರುವ ಶೈಕ್ಷಣಿಕ ಸಂಸ್ಥೆಗಳಿಗೆ ಒಂದು ಪರಿಹಾರ ಯೋಜನೆಯಡಿ ಶೇ. 25 ರಷ್ಟು ಸೇವಾ ಶುಲ್ಕವನ್ನು ಪಾವತಿಸಬೇಕಾಗಿದ್ದು, ಈ ಯೋಜನೆ ಜುಲೈ 31ಕ್ಕೆ ಮುಗಿಯಲಿದ್ದು, ಈ ಕೂಡಲೆ ಎಲ್ಲರೂ ಬಾಕಿ ಇರುವ ಸೇವಾ ಶುಲ್ಕವನ್ನು ಪಾವತಿಸಲು ಶೈಕ್ಷಣಿಕ ಸಂಸ್ಥೆಗಳ ಮುಖ್ಯಸ್ಥರು ಹಾಗೂ ಪ್ರತಿನಿಧಿಗಳಿಗೆ ಸೂಚನೆ ನೀಡಿದರು. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬಾಕಿ ಆಸ್ತಿ ತೆರಿಗೆದಾರರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಒಂದು ಬಾರಿ ಪರಿಹಾರ ಯೋಜನೆಯ ಕುರಿತು ವೈದ್ಯಕೀಯ ಕಾಲೇಜು, ಇಂಜಿನಿಯರಿಂಗ್ ಕಾಲೇಜು ಸೇರಿದಂತೆ ಇನ್ನಿತರೆ ಶೈಕ್ಷಣಿಕ ಸಂಸ್ಥೆಗಳ ಜೊತೆ ಇಂದು ಟೌನ್ ಹಾಲ್ ನಲ್ಲಿ ನಡೆದ…
ಬೆಂಗಳೂರು: ಬಿಬಿಎಂಪಿ(ಜಾಹೀರಾತು) ಉಪವಿಧಿಗಳು, 2024ರ ಕರಡು ಅಧಿಸೂಚನೆಗೆ ಸಂಬಂಧಿಸಿದಂತೆ ಸಾರ್ವಜನಿಕರಿಂದ ಆಕ್ಷೇಪಣೆ/ಸಲಹೆಗಳಿಗೆ ಆಹ್ವಾನಿಸಲಾಗಿದೆ. 30 ದಿನಗಳ ಕಾಲ ಆಕ್ಷೇಪಣೆ ಸಲ್ಲಿಸಲು ಅವಕಾಶ ನೀಡಲಾಗಿದೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಅಧಿನಿಯಮ, 2020ರ (2020ರ ಕರ್ನಾಟಕ ಅಧಿನಿಯಮ 53)ರ ಕಲಂ 157 ಹಾಗೂ 319ನೇ ಪ್ರಕರಣಗಳೊಂದಿಗೆ ಓದಿಕೊಂಡು 318ನೇ ಪ್ರಕರಣದ ಮೂಲಕ ಪ್ರದತ್ತವಾದ ಅಧಿಕಾರದ ಮೇರೆಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಜಾಹೀರಾತು) ಉಪವಿಧಿಗಳು, 2024ರ ಕರಡು ಅಧಿಸೂಚನೆಗೆ ಸರ್ಕಾರವು ಅನುಮೋದನೆ ನೀಡಿರುತ್ತದೆ. ಮುಂದುವರಿದು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಜಾಹೀರಾತು) ಉಪವಿಧಿಗಳು, 2024ರ ಕರಡು ಆವೃತ್ತಿಯನ್ನು ದಿನಾಂಕ:19.07.2024 ರಂದು ಕರ್ನಾಟಕ ರಾಜ್ಯ ಪತ್ರದಲ್ಲಿ ಅಧಿಸೂಚನೆಯನ್ನು ಹೊರಡಿಸಲಾಗಿರುತ್ತದೆ. ಸದರಿ ಅಧಿಸೂಚನೆಯ ದಿನಾಂಕದಿಂದ 30 ದಿನಗಳ ಒಳಗಾಗಿ ಪ್ರಸ್ತಾವಿತ ಉಪವಿಧಿಗಳಿಗೆ ಸಂಬಂಧಿಸಿದಂತೆ ಸಾರ್ವಜನಿಕರು ಆಕ್ಷೇಪಣೆ/ಸಲಹೆಗಳು ಇದ್ದಲ್ಲಿ, ಮುಖ್ಯ ಆಯುಕ್ತರು, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ, ನರಸಿಂಹರಾಜ ಚೌಕ, ಬೆಂಗಳೂರು-560002 ರವರಿಗೆ ಸಲ್ಲಿಸಲು ಜಾಹೀರಾತು ವಿಭಾಗದ ಉಪ ಆಯುಕ್ತರು ಕೋರಿರುತ್ತಾರೆ. https://kannadanewsnow.com/kannada/14-year-old-kerala-boy-tests-positive-for-nipah-virus-govt-gears-up-to-impose-lockdown/ https://kannadanewsnow.com/kannada/viral-video-baby-born-with-32-teeth-video-of-a-baby-laughing-goes-viral/
ಕೇರಳ: ಇಲ್ಲಿನ ಮಲಪ್ಪುರಂ ಜಿಲ್ಲೆಯ 14 ವರ್ಷದ ಬಾಲಕನಿಗೆ ನಿಪಾಹ್ ವೈರಸ್ ಇರುವುದು ಪತ್ತೆಯಾಗಿದೆ ಎಂದು ಕೇರಳ ಆರೋಗ್ಯ ಇಲಾಖೆ ಶನಿವಾರ ದೃಢಪಡಿಸಿದೆ. 2018ರಿಂದೀಚೆಗೆ ಕೇರಳದಲ್ಲಿ ನಿಪಾಹ್ ವೈರಸ್ ಪ್ರಕರಣಗಳು ದಾಖಲಾಗುತ್ತಿರುವುದು ಇದು ಐದನೇ ಬಾರಿ. ಈ ವೈರಸ್ ಈಗಾಗಲೇ ರಾಜ್ಯದಲ್ಲಿ 17 ಜನರನ್ನು ಬಲಿ ತೆಗೆದುಕೊಂಡಿದೆ. ಮಲಪ್ಪುರಂನ ಪಾಂಡಿಕ್ಕಾಡ್ ನಿವಾಸಿ ಬಾಲಕನ ಸ್ಥಿತಿ ಗಂಭೀರವಾಗಿದ್ದು, ಕೋಝಿಕೋಡ್ನ ಖಾಸಗಿ ಆಸ್ಪತ್ರೆಯಲ್ಲಿ ಲೈಫ್ ಸಪೋರ್ಟ್ನಲ್ಲಿದ್ದಾನೆ ಎಂದು ಆರೋಗ್ಯ ಸಚಿವೆ ವೀಣಾ ಜಾರ್ಜ್ ಮಲಪ್ಪುರಂನಲ್ಲಿ ಮಾಧ್ಯಮಗಳಿಗೆ ತಿಳಿಸಿದ್ದಾರೆ. ಕೇರಳದ ಪ್ರಯೋಗಾಲಯದಲ್ಲಿ ನಡೆಸಿದ ಪರೀಕ್ಷೆಗಳಲ್ಲಿ ನಿಪಾಹ್ ಇರುವುದು ದೃಢಪಟ್ಟಿದೆ. ಕೋಯಿಕ್ಕೋಡ್ನ ವೈರಾಲಜಿ ಲ್ಯಾಬ್ನಲ್ಲಿ ಪರೀಕ್ಷಿಸಿದ ಮಾದರಿಗಳಲ್ಲಿ ನಿಪಾಹ್ ಇರುವುದು ದೃಢಪಟ್ಟಿದೆ. ಆದರೆ ಜೈವಿಕ ಸುರಕ್ಷತಾ ನಾಲ್ಕನೇ ಹಂತದ ಪ್ರಯೋಗಾಲಯವನ್ನು ಹೊಂದಿರುವ ಎನ್ಐವಿ-ಪುಣೆಯಿಂದ ಅಂತಿಮ ದೃಢೀಕರಣ ಬರಬೇಕು. ಮಾದರಿಗಳನ್ನು ಎನ್ಐವಿ-ಪುಣೆಗೆ ಕಳುಹಿಸಲಾಗಿದೆ” ಎಂದು ಅವರು ಹೇಳಿದರು. ಪರಿಸ್ಥಿತಿಯನ್ನು ಮೇಲ್ವಿಚಾರಣೆ ಮಾಡಲು ಮಲಪ್ಪುರಂ ಜಿಲ್ಲೆಯಲ್ಲಿ ಈಗಾಗಲೇ ನಿಯಂತ್ರಣ ಕೊಠಡಿಯನ್ನು ತೆರೆಯಲಾಗಿದೆ ಎಂದು ಆರೋಗ್ಯ ಸಚಿವರು ಹೇಳಿದರು. “ಎನ್ಐವಿ-ಪುಣೆಯಿಂದ ದೃಢೀಕರಣ…
ಮೈಸೂರು: ಮುಡಾ ಅಕ್ರಮ ಹಗರಣಕ್ಕೆ ಈಗ ಮತ್ತೊಂದು ಬಿಗ್ ಟ್ವಿಸ್ಟ್ ಸಿಕ್ಕಿದೆ. ಚಿಕ್ಕಪ್ಪ ತಮ್ಮ ಜಮೀನನ್ನು ಮೋಸದಿಂದ ಮಾರಾಟ ಮಾಡಿದ್ದಾರೆ ಅಂತ ಅಣ್ಣನ ಮಕ್ಕಳೇ ಚಿಕ್ಕಪ್ಪನ ವಿರುದ್ಧ ದೂರು ನೀಡಿದ್ದಾರೆ. ಅಲ್ಲದೇ ಸಿಎಂ ಸಿದ್ಧರಾಮಯ್ಯ ಪತ್ನಿಗೆ ಮೋಸದಿಂದ ಜಮೀನು ಮಾರಾಟ ಮಾಡಿರುವಂತ ಗಂಭೀರ ಆರೋಪವನ್ನು ಮಾಡಿದ್ದಾರೆ. ಇಂದು ಮೈಸೂರಿನ ಅಪರ ಜಿಲ್ಲಾಧಿಕಾರಿಗಳನ್ನು ಶಿವರಾಜ್ ಗೆ ಮಲ್ಲಯ್ಯನ ಮಗ ಜವರಯ್ಯ ಹಾಗೂ ಮೈಲಾರಯ್ಯ ಅವರ ಪುತ್ರ ಮಂಜುನಾಥ್ ದೂರು ನೀಡಿದ್ದಾರೆ. ಅದರಲ್ಲಿ ಸಿಎಂ ಪತ್ನಿ ಸಹೋದರ ಮಲ್ಲಿಕಾರ್ಜುನ ಸ್ವಾಮಿ ಅವರು ಮೋಸದಿಂದ ನಮ್ಮ ಜಮೀನು ಮಾರಾಟ ಮಾಡಿದ್ದಾರೆ ಎಂಬುದಾಗಿ ಮಲ್ಲಯ್ಯನ ಅವರ ಪುತ್ರ ಜವರಯ್ಯ, ಮೈಲಾರಯ್ಯ ಅವರ ಪುತ್ರ ಮಂಜುನಾಥ್ ಎಂಬುವರು ದೂರು ನೀಡಿದ್ದಾರೆ. ಮುಖ್ಯಮಂತ್ರಿ ಸಿದ್ಧರಾಮಯ್ಯ ಪತ್ನಿ ಸಹೋದರ ಮಲ್ಲಿಕಾರ್ಜುನ ಸ್ವಾಮಿ ಅವರು ಚಿಕ್ಕಪ್ಪ ಅನ್ಯಾಯ ಮಾಡಿ ನಮ್ಮ ಜಮೀನನ್ನು ಮಾರಾಟ ಮಾಡಿದ್ದಾರೆ. ಸಿಎಂ ಪತ್ನಿ ಹೆಸರಲ್ಲಿರುವ ಜಮೀನು ನಮ್ಮದೆಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಅಲ್ಲದೇ ಜಮೀನಿನ ಮೂಲ ಮಾಲೀಕರು ನಾವು. ನಮಗೆ…
ನಾಳೆ ಹುಣ್ಣಿಮೆ. ಸಂಜೆ 7 ಗಂಟೆಗೆ ಚಂದ್ರನನ್ನು ನೋಡಿ ಈ 1 ಸಾಲಿನ ಮಂತ್ರವನ್ನು ಹೇಳಿ, ನಿಮ್ಮ ಕುಟುಂಬಕ್ಕೆ ಸುಖ ಸಂತೋಷ ಸಿಗಲಿದೆ ಎಲ್ಲಾ ರೀತಿಯ ಸೌಕರ್ಯ, ಐಶ್ವರ್ಯ ಮತ್ತು ಸಂತೋಷ ಸಿಗುತ್ತದೆ. ಆದಿ ಪೌರ್ಣಮಿಯಂದು ಪಠಿಸಬೇಕಾದ ಚಂದ್ರ ಮಂತ್ರ. ಈ ಪೋಸ್ಟ್ ಮೂಲಕ ನಾಳಿನ ಆದಿ ಪೌರ್ಣಮಿಯ ಆಧ್ಯಾತ್ಮಿಕ ಸಂಕ್ಷಿಪ್ತ ಮಾಹಿತಿಯನ್ನು ನಾವು ತಿಳಿಯಲಿದ್ದೇವೆ, ಇನ್ನೂ ಏನೇನು ವಿಶೇಷತೆಗಳಿವೆ ಮತ್ತು ಆ ವಿಶೇಷ ದಿನಗಳಲ್ಲಿ ಯಾವ ಆಚರಣೆಗಳನ್ನು ಮಾಡಲಾಗುತ್ತದೆ ಮತ್ತು ನಮ್ಮ ಕಷ್ಟಗಳು ಪರಿಹಾರವಾಗುತ್ತವೆ. ಈ ಆಧ್ಯಾತ್ಮಿಕ ಮಾಹಿತಿಯು ಖಂಡಿತವಾಗಿಯೂ ಎಲ್ಲರಿಗೂ ಉಪಯುಕ್ತವಾಗಿರುತ್ತದೆ. ನಾಳೆ ಆದಿಮಠದ ಪೌರ್ಣಮಿ, ಆದಿತಾಬಸು, ಸಮೂಹ ಪೂರ್ಣಿಮೆ, ಹಯಗ್ರೀವರ ಜಯಂತಿ, ಈ ಎಲ್ಲ ವಿಶೇಷತೆಗಳು ನಾಳೆ ಸೇರಿದೆ. ಅಂಬಾಳನ್ನು ಪೂಜಿಸಲು ಆದಿ ಪೌರ್ಣಮಿ ಅತ್ಯಂತ ಪ್ರಶಸ್ತವಾದ ದಿನವಾಗಿದೆ. ಹಾಗಾಗಿ ದೇವಿಯನ್ನು ಸ್ಮರಿಸಿ ಮನೆಯ ಮುಂದಿನ ದೇವಸ್ಥಾನಕ್ಕೆ ತೆರಳಿ ಅಂಬಾಲಿಗೆ ದೀಪ ಹಚ್ಚಿ ಪೂಜೆ ಸಲ್ಲಿಸಿ. ಈ ದಿನವನ್ನು ಏಕೆ ಆಚರಿಸಲಾಗುತ್ತದೆ? ಹರಿ ಮತ್ತು ಶಿವ ಒಂದೇ.…
ಚಿತ್ರದುರ್ಗ: ಬಿಜೆಪಿಯವರು ತಮ್ಮ ಕಾಲದಲ್ಲಿ ನಡೆದ ಹಗರಣಗಳನ್ನು ಮುಚ್ಚಿಹಾಕಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದರು. ಅವರು ಇಂದು ಚಿತ್ರದುರ್ಗದಲ್ಲಿ ಮಾಧ್ಯಮದವರೊಂದಿಗೆ ಮಾತನಾಡುತ್ತಾ, ಕಾಂಗ್ರೆಸ್ ಸರ್ಕಾರ ಬಿಜೆಪಿ ಸರ್ಕಾರದ ಹಿಂದಿನ ಹಗರಣಗಳನ್ನು ಬೆಳಕಿಗೆ ತರುತ್ತಿದೆ ಎಂಬ ವಿರೋಧ ಪಕ್ಷಗಳ ಹೇಳಿಕೆಗೆ ಪ್ರತಿಕ್ರಿಯೆ ನೀಡಿದರು. ಹಾಗಾದರೆ ಅವುಗಳು ಹಗರಣಗಳಲ್ಲವೇ? ಹಗರಣಗಳು ಎಂದು ಅವರು ಒಪ್ಪುತ್ತಾರೆಯೇ ಎಂದು ಪ್ರಶ್ನಿಸಿದ ಮುಖ್ಯಮಂತ್ರಿಗಳು ಇವುಗಳ ಬಗ್ಗೆ ತನಿಖೆ ನಡೆಯುತ್ತಿವೆ. ಅವುಗಳನ್ನು ಉಲ್ಲೇಖ ಮಾಡಿದ್ದು ಏಕೆಂದರೆ ಅವರ ಕಾಲದಲ್ಲಿ ಜಾರಿ ನಿರ್ದೇಶನಾಲಯ ಮಧ್ಯ ಪ್ರವೇಶ ಮಾಡಲಿಲ್ಲ. ಭೋವಿ ಅಭಿವೃದ್ಧಿ ನಿಗಮದಲ್ಲಿ 60 ಕೋಟಿ ರೂ.ಗಳನ್ನು ನುಂಗಿಹಾಕಿದ್ದಾರೆ. ದೇವರಾಜ ಅರಸ್ ಟ್ರಕ್ ಟರ್ಮಿನಲ್ ನಲ್ಲಿ 47 ಕೋಟಿ ರೂ.ಗಳಿಗೂ ಹೆಚ್ಚು ಹಣ ತಿಂದು ಜೈಲಿಗೆ ಹೋದವರು ಯಾವ ಪಕ್ಷವರು ? ಇದನ್ನೆಲ್ಲಾ ಹೇಳಬಾರದೆ? ಎಂದು ಪ್ರಶ್ನಿಸಿದ ಸಿಎಂ, ಈ ಹಗರಣಗಳ ಬಗ್ಗೆ ತನಿಖೆ ನಡೆಯುತ್ತಿದೆ. ತಪ್ಪಿತಸ್ಥರ ಮೇಲೆ ಕಾನೂನು ಕ್ರಮ ಆಗುತ್ತದೆ ಎಂದು ತಿರುಗೇಟು ನೀಡಿದರು. ಬೆದರಿಸುತ್ತಿಲ್ಲ, ವಸ್ತುಸ್ಥಿತಿಯನ್ನು ಮುಂದಿಟ್ಟಿದ್ದೇನೆ…