Subscribe to Updates
Get the latest creative news from FooBar about art, design and business.
Author: kannadanewsnow09
ನವದೆಹಲಿ/ಶ್ರೀನಗರ: ತಾವು ಪ್ರಧಾನಿಗಳಾದ 28 ವರ್ಷಗಳ ನಂತರ ಮಾಜಿ ಪ್ರಧಾನಿಗಳಾದ ಹೆಚ್.ಡಿ.ದೇವೇಗೌಡರು ಕಣಿವೆ ರಾಜ್ಯ ಕಾಶ್ಮೀರಕ್ಕೆ ಭೇಟಿ ನೀಡಿ ದೇಶದ ಕೊನೆಯ ಭಾಗದಲ್ಲಿರುವ ಉರಿ ಜಲವಿದ್ಯುತ್ ಘಟಕವನ್ನು ಖುದ್ದು ವೀಕ್ಷಿಸಿದರು. ಬುಧವಾರವೇ ಶ್ರೀನಗರಕ್ಕೆ ಆಗಮಿಸಿದ್ದ ಮಾಜಿ ಪ್ರಧಾನಿಗಳು, 28 ವರ್ಷಗಳ ನಂತರ ಇದೇ ಮೊದಲ ಬಾರಿಗೆ ಕಣಿವೆ ರಾಜ್ಯಕ್ಕೆ ಭೇಟಿ ನೀಡಿದ್ದಾರೆ. ಗುರುವಾರ ಬೆಳಗ್ಗೆಯೇ ಶ್ರೀನಗರದಿಂದ ಬಾರಮುಲ್ಲಾಕ್ಕೆ ರೈಲಿನಲ್ಲಿ ಪ್ರಯಾಣ ಮಾಡಿ; ತಾವು ಪ್ರಧಾನಿಗಳಾಗಿದ್ದ ಸಂದರ್ಭದಲ್ಲಿ ಈ ರೇಲ್ವೆ ಮಾರ್ಗಕ್ಕೆ ಮಂಜೂರಾತಿ ನೀಡಿದ್ದನ್ನು ನೆನಪು ಮಾಡಿಕೊಂಡರು. ಬಾರಾಮುಲ್ಲಾದಿಂದ ಉರಿಗೆ ತೆರಳಿದ ಅವರು; ಅಲ್ಲಿನ ರಾಷ್ಟ್ರೀಯ ಜಲವಿದ್ಯುತ್ ಉತ್ಪಾದನಾ ಘಟಕ (National Hydroelectric Power Corporation Private Limited- NHPC) ಕ್ಕೆ ಭೇಟಿ ಕೊಟ್ಟರು. 480 ಮೆಗಾವ್ಯಾಟ್ ಸಾಮರ್ಥ್ಯದ ಈ ವಿದ್ಯುತ್ ಘಟಕವೂ ದೇವೇಗೌಡರು ಪ್ರಧಾನಿಯಾಗಿದ್ದಾಗಲೇ ಉದ್ಘಾಟನೆ ಆಗಿತ್ತು. ಈ ವಿದ್ಯುತ್ ಉತ್ಪಾದನಾ ಘಟಕವೂ ಉರಿಯ ಝಿಲಂ ನದಿ ದಂಡೆಯಲ್ಲಿ, ಭಾರತ – ಪಾಕಿಸ್ತಾನದ ನಡುವಿನ ನಿಯಂತ್ರಣ ರೇಖೆಗೆ (LOC) ಅತಿ ಸಮೀಪದಲ್ಲಿದೆ.…
ಬೆಂಗಳೂರು: ನಮ್ಮ ಮೆಟ್ರೋ ರೈಲು ಹಳಿಯ ಮೇಲೆಯೇ ಮರದ ಕೊಂಬೆಯೊಂದು ಮುರಿದು ಬಿದ್ದ ಪರಿಣಾಮ, ಕೆಲ ಕಾಲ ನೇರಳೆ ಮಾರ್ಗದಲ್ಲಿ ರೈಲು ಸಂಚಾರ ಸ್ಥಗಿತಗೊಂಡು, ಆ ಬಳಿಕ ಮತ್ತೆ ಪುನರಾರಂಭಗೊಂಡಿರುವುದಾಗಿ ತಿಳಿದು ಬಂದಿದೆ. ಈ ಕುರಿತಂತೆ ಬಿಎಂಆರ್ ಸಿಎಲ್ ಮಾಹಿತಿ ನೀಡಿದ್ದು, ಸುಮಾರು ಸಂಜೆ 04 .51 ಗಂಟೆಗೆ ಮೆಟ್ರೋ ರೈಲು ಸೆಟ್ #23 ನೇರಳೆ ಮಾರ್ಗದಲ್ಲಿ – ಕಬ್ಬನ್ ಪಾರ್ಕ್ ಅಪ್ ರಾಂಪ್ನಲ್ಲಿ ಮರದ ಕೊಂಬೆಯು ವಾಕ್ವೇ ನಡುವೆ ಬಿದ್ದು ಚಲಿಸುವ ರೈಲಿಗೆ ಅಡ್ಡಿಯಾಗಿದ್ದ ಕಾರಣ ಎಚ್ಚರಿಕೆಯಿಂದ ಚಲಿಸಲಾಯಿತು ಎಂದು ತಿಳಿಸಿದೆ. ಮರದ ಕೊಂಬೆಯನ್ನು ತೆರವುಗೊಳಿಸಿ, 17:05 ಗಂಟೆಗೆ ರೈಲು ಸೇವೆ ಎಂದಿನಂತೆ ಪುನರಾರಂಭವಾಯಿತು ಎಂಬುದಾಗಿ ಬಿಎಂಆರ್ ಸಿಎಲ್ ಮಾಹಿತಿ ನೀಡಿದೆ. https://kannadanewsnow.com/kannada/reliance-jio-to-offer-100gb-cloud-storage-free-of-cost-to-its-customers/ https://kannadanewsnow.com/kannada/trai-to-issue-new-rules-your-sim-card-will-be-closed-if-you-make-this-mistake-trai-new-rules/ https://kannadanewsnow.com/kannada/good-news-for-property-sales-buyers-anywhere-registration-system-to-be-implemented-across-the-state-from-september-2/
ಮುಂಬೈ : ರಿಲಯನ್ಸ್ ಜಿಯೋ ತನ್ನ ಗ್ರಾಹಕರಿಗೆ ಬಂಪರ್ ಆಫರ್ ತಂದಿದೆ. ಶೀಘ್ರದಲ್ಲೇ ಕಂಪನಿಯು ತನ್ನ ಗ್ರಾಹಕರಿಗೆ 100 ಜಿಬಿ ತನಕ ಉಚಿತ ಕ್ಲೌಡ್ ಸಂಗ್ರಹವನ್ನು ನೀಡುತ್ತದೆ. ಫೋಟೋಗಳು, ವಿಡಿಯೋಗಳು ಅಥವಾ ಡಾಕ್ಯುಮೆಂಟ್ಗಳು ಇಂಥವನ್ನು ಸಂಗ್ರಹಿಸಬಹುದು. ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ನ 47ನೇ ವಾರ್ಷಿಕ ಸಾಮಾನ್ಯ ಸಭೆಯಲ್ಲಿ ಗುರುವಾರ ಷೇರುದಾರರನ್ನು ಉದ್ದೇಶಿಸಿ ಮಾತನಾಡಿದ ಕಂಪನಿಯ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ಮುಕೇಶ್ ಅಂಬಾನಿ ಈ ಮಾಹಿತಿಯನ್ನು ನೀಡಿದ್ದಾರೆ. ಕೆಲವು ಜಿಬಿಯಷ್ಟು ಸಂಗ್ರಹವನ್ನು ಉಚಿತವಾಗಿ ನೀಡಿದ ನಂತರ ಗೂಗಲ್ ಮತ್ತು ಇತರ ಕಂಪನಿಗಳು ಕ್ಲೌಡ್ ಸಂಗ್ರಹಣೆಗೆ ಶುಲ್ಕ ವಿಧಿಸುತ್ತವೆ. ಅಲ್ಲದೆ, ಜಿಯೋ ಬ್ರೈನ್ ಶೀಘ್ರದಲ್ಲೇ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ ಪ್ರಾರಂಭಿಸಲು ತಯಾರಿ ನಡೆಸುತ್ತಿದೆ. ಕನೆಕ್ಟೆಡ್ ಇಂಟೆಲಿಜೆನ್ಸ್ ವಿಶ್ವ ದರ್ಜೆಯ ಮೂಲಸೌಕರ್ಯದೊಂದಿಗೆ ಬರುತ್ತದೆ. ಕಂಪನಿಯು ಇದನ್ನು “ಎಐ ಎವೆರಿವೇರ್ ಫಾರ್ ಎವರಿಒನ್” ಎಂಬ ಥೀಮ್ ಮೇಲೆ ಪ್ರಾರಂಭಿಸುತ್ತದೆ. ಜಿಯೋ ಸಂಪೂರ್ಣ ಎಐ ಅನ್ನು ಒಳಗೊಂಡ ಪರಿಕರಗಳು ಮತ್ತು ಪ್ಲಾಟ್ಫಾರ್ಮ್ಗಳ ಸಮಗ್ರ ಸೂಟ್ ಅನ್ನು ಅಭಿವೃದ್ಧಿಪಡಿಸುತ್ತಿದೆ – ಇದನ್ನು…
ಕಾರವಾರ: ಜಿಲ್ಲೆಯ ಜಿಲ್ಲಾ ಕಾರಾಗೃಹದಲ್ಲಿ ಕೈದಿಗಳ ನಡುವೆ ಗಲಾಟೆಯಾಗಿದೆ. ನಾಲ್ವರು ಕೈದಿಗಳು ಹೊಡೆದಾಡಿಕೊಂಡಿದ್ದು, ಓರ್ವನ ಸ್ಥಿತಿ ಗಂಭೀರಗೊಂಡಿರುವುದಾಗಿ ತಿಳಿದು ಬಂದಿದೆ. ಕಾರವಾರದ ಜಿಲ್ಲಾ ಕಾರಾಗೃಹದಲ್ಲಿನ ಕೈದಿಗಳ ನಡುವೆ ಗಲಾಟೆಯಾಗಿದೆ. ಜೈಲಿನಲ್ಲಿ ನಾಲ್ವರು ಕೈದಿಗಳ ನಡುವೆ ಗಲಾಟೆಯಾಗಿದ್ದು, ಓರ್ವನ ಸ್ಥಿತಿ ಗಂಭೀರವಾಗಿದೆ. ನಾಲ್ವರು ಕೈದಿಗಳ ನಡುವಿನ ಗಲಾಟೆಯಲ್ಲಿ ಓರ್ವ ಕೈದಿಯ ತೆಲೆಗೆ ಗಂಭೀರ ಗಾಯವಾಗಿದ್ದು, ರಕ್ತಸ್ತ್ರಾವ ಉಂಟಾಗಿದ್ದು, ಆತನನ್ನು ಆಸ್ಪತ್ರೆಗೆ ಸೇರಿಸಿ, ಚಿಕಿತ್ಸೆ ಕೊಡಿಸಲಾಗುತ್ತಿದೆ. ಈ ವಿಷಯ ತಿಳಿದು ಕಾರವಾರ ಜಿಲ್ಲಾ ಕಾರಾಗೃಹಕ್ಕೆ ಎಎಸ್ ಪಿ ಜಯಕುಮಾರ್ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಕೈದಿಗಳ ನಡುವೆ ಗಲಾಟೆ ಯಾವ ಕಾರಣಕ್ಕೆ ಆಗಿದೆ ಎನ್ನುವ ಬಗ್ಗೆ ತಿಳಿದು ಬರಬೇಕಿದೆ. https://kannadanewsnow.com/kannada/big-relief-for-dk-shivakumar-hc-dismisses-cbis-plea/ https://kannadanewsnow.com/kannada/good-news-for-property-sales-buyers-anywhere-registration-system-to-be-implemented-across-the-state-from-september-2/ https://kannadanewsnow.com/kannada/breaking-jio-introduces-ai-cloud-welcome-offer-for-users-announces-100gb-storage-for-free/
ಬೆಂಗಳೂರು: ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಿರುದ್ಧದ ಭ್ರಷ್ಟಾಚಾರ ಪ್ರಕರಣದ ತನಿಖೆಗೆ ನೀಡಿದ್ದ ಅನುಮತಿಯನ್ನು ಹಿಂತೆಗೆದುಕೊಳ್ಳುವ ರಾಜ್ಯ ಕಾಂಗ್ರೆಸ್ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿ ಸಿಬಿಐ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ಗುರುವಾರ ‘ನಿರ್ವಹಿಸಲು ಸಾಧ್ಯವಿಲ್ಲ’ ಎಂದು ಹೇಳಿದೆ. ಈ ಮೂಲಕ ಸಿಬಿಐ ಸಲ್ಲಿಸಿದ್ದಂತ ಅರ್ಜಿಯನ್ನು ವಜಾಗೊಳಿಸಿದೆ. ಶಿವಕುಮಾರ್ ಅವರ ಅಕ್ರಮ ಆಸ್ತಿಗಳ ತನಿಖೆಗೆ ನೀಡಿದ್ದ ಅನುಮತಿಯನ್ನು ಹಿಂತೆಗೆದುಕೊಳ್ಳುವ ಕಾಂಗ್ರೆಸ್ ಸರ್ಕಾರದ 2023ರ ನವೆಂಬರ್ 28ರ ನಿರ್ಧಾರ ಮತ್ತು 2023ರ ಡಿಸೆಂಬರ್ 26ರಂದು ಕರ್ನಾಟಕ ಲೋಕಾಯುಕ್ತಕ್ಕೆ ತನಿಖೆಗೆ ಒಪ್ಪಿಸಿದ್ದ ರಾಜ್ಯ ಸರ್ಕಾರದ ಆದೇಶವನ್ನು ಪ್ರಶ್ನಿಸಿ ಸಿಬಿಐ ಸಲ್ಲಿಸಿದ್ದ ತೀರ್ಪನ್ನು ನ್ಯಾಯಮೂರ್ತಿಗಳಾದ ಕೆ.ಸೋಮಶೇಖರ್ ಮತ್ತು ಉಮೇಶ್ ಅಡಿಗ ಅವರನ್ನೊಳಗೊಂಡ ನ್ಯಾಯಪೀಠ ಆಗಸ್ಟ್ 12ರಂದು ಕಾಯ್ದಿರಿಸಿತ್ತು. ಅಕ್ರಮ ಆಸ್ತಿ ಗಳಿಕೆ ಪ್ರಕರಣದ ತನಿಖೆಗೆ ಸಹಕರಿಸಲು ರಾಜ್ಯ ಕಾಂಗ್ರೆಸ್ ಅಧ್ಯಕ್ಷರೂ ಆಗಿರುವ ಶಿವಕುಮಾರ್ ಆಗಸ್ಟ್ 22 ರಂದು ಕರ್ನಾಟಕ ಲೋಕಾಯುಕ್ತ ಪೊಲೀಸರ ಮುಂದೆ ಹಾಜರಾಗಿದ್ದರು. ಸಿಬಿಐ ಮತ್ತು ಲೋಕಾಯುಕ್ತ ಪೊಲೀಸರು ದೀರ್ಘಕಾಲದ ವಿಚಾರಣೆ ನಡೆಸುವ ಮೂಲಕ ತಮಗೆ ಕಿರುಕುಳ ನೀಡುತ್ತಿದ್ದಾರೆ…
ಬೆಂಗಳೂರು: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಪುತ್ರ ರಾಹುಲ್ ಖರ್ಗೆ ಅವರ ಸಿದ್ಧಾರ್ಥ ವಿಹಾರ ಟ್ರಸ್ಟ್ ಗೆ ಏರೋಸ್ಪೇಸ್ ಪಾರ್ಕಿನಲ್ಲಿ 5 ಎಕರೆ ಸಿ.ಎ. ನಿವೇಶನ ಕೊಟ್ಟಿದ್ದಕ್ಕೆ ಎಗರಾಡುತ್ತಿರುವ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಸತ್ಯ ಹರಿಶ್ಚಂದ್ರರೇನಲ್ಲ. 2006ರಲ್ಲಿ ಮೈಸೂರಿನ ಹೆಬ್ಬಾಳದಲ್ಲಿ 2 ಎಕರೆ ಜಾಗ ಪಡೆದುಕೊಂಡಿರುವ ಅವರು 18 ವರ್ಷಗಳಾದರೂ ಅಲ್ಲಿ ಏನೂ ಮಾಡದೆ ಕಾಟಾಚಾರಕ್ಕೆ ಒಂದು ಶೆಡ್ ಹಾಕಿಕೊಂಡು ಕೂತಿರುವ ಆಸಾಮಿ. ಅವರೊಬ್ಬ ಶೆಡ್ ಗಿರಾಕಿಯೇ ವಿನಾ ರಾಹುಲ್ ಖರ್ಗೆ ಅವರಂತೆ ಉದ್ಯಮಶೀಲರಲ್ಲ. ಇಂಥವರು ನಮಗೆ ಪಾಠ ಮಾಡಲು ಬರುತ್ತಾರೆ’ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಗುರುವಾರ ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಎರಡು ಗಂಟೆ ಕಾಲ ದಾಖಲೆ ಸಮೇತ ಮಾತನಾಡಿದ ಅವರು, `ರಾಹುಲ್ ಖರ್ಗೆ ಎರಡು ಬಾರಿ ಯುಪಿಎಸ್ಸಿ ಪರೀಕ್ಷೆ ಪಾಸು ಮಾಡಿದ್ದಾರೆ; ಎಂಜಿನಿಯರಿಂಗ್ ಪದವೀಧರರು. ಡಿಆರ್ ಡಿಓ ಪ್ರಶಸ್ತಿ ಪುರಸ್ಕೃತರಾಗಿದ್ದಾರೆ. ಇಂಥ ಅರ್ಹರಿಗೆ…
ಬೆಂಗಳೂರು: ಡಿಸಿಎಂ ಡಿ.ಕೆ ಶಿವಕುಮಾರ್ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ ಸಂಬಂಧ ರಾಜ್ಯ ಸರ್ಕಾರ ಸಿಬಿಐಗೆ ನೀಡಿದ್ದಂತ ಅನುಮತಿಯನ್ನು ಹಿಂಪಡೆದಿದ್ದು ಪ್ರಶ್ನಿಸಿ, ಹೈಕೋರ್ಟ್ ಗೆ ಅರ್ಜಿ ಸಲ್ಲಿಸಲಾಗಿತ್ತು. ಇಂತಹ ಸಿಬಿಐ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಈ ಮೂಲಕ ಉಪ ಮುಖ್ಯಮಂತ್ರಿ ಡಿ.ಕೆ ಶಿವುಕಮಾರ್ ಗೆ ಬಿಗ್ ರಿಲೀಫ್ ನೀಡಿದೆ. ಡಿ.ಕೆ ಶಿವಕುಮಾರ್ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣದ ಸಂಬಂಧ ಹಿಂದಿನ ಸರ್ಕಾರವು ಸಿಬಿಐ ತನಿಖೆಗೆ ವಹಿಸಿ ಅನುಮತಿ ನೀಡಲಾಗಿತ್ತು. ಆದರೇ ಹಾಲಿ ಕಾಂಗ್ರೆಸ್ ಸರ್ಕಾರವು ಇದನ್ನು ಹಿಂಪಡೆಯಲಾಗಿತ್ತು. ಇದನ್ನು ಪ್ರಶ್ನಿಸಿ ಹೈಕೋರ್ಟ್ ಗೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹಾಗೂ ಸಿಬಿಐ ರಿಟ್ ಅರ್ಜಿ ಸಲ್ಲಿಸಿತ್ತು. ಇಂತಹ ಅರ್ಜಿಯ ವಿಚಾರಣೆ ನಡೆಸಿದಂತ ಹೈಕೋರ್ಟ್ ನ್ಯಾಯಪೀಠವು ಇಂದು ರಾಜ್ಯ ಸರ್ಕಾರ ಹಾಗೂ ಸಿಬಿಐ ನಡುವಿನ ವಿಚಾರವಾಗಿದೆ. ಸುಪ್ರೀಂ ಕೋರ್ಟ್ ನಲ್ಲಿ ವಿಚಾರಣೆ ಸೂಕ್ತವೆಂದು ತಿಳಿಸುವ ಮೂಲಕ ಅರ್ಜಿಯನ್ನು ವಜಾಗೊಳಿಸಿದೆ. ಈ ಮೂಲಕ ಡಿಸಿಎಂ ಡಿ.ಕೆ ಶಿವಕುಮಾರ್ ಗೆ…
ನವದೆಹಲಿ: ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ನ 47 ನೇ ವಾರ್ಷಿಕ ಸಾಮಾನ್ಯ ಸಭೆಯಲ್ಲಿ (Annual General Meeting -AGM) ಭಾರತದ ಅತ್ಯಂತ ಶ್ರೀಮಂತ ವ್ಯಕ್ತಿ ಮತ್ತು ಕೈಗಾರಿಕೋದ್ಯಮಿ ಮುಖೇಶ್ ಅಂಬಾನಿ ಗುರುವಾರ ಜಿಯೋ ಗ್ರಾಹಕರಿಗೆ ಅನೇಕ ಕೃತಕ ಬುದ್ಧಿಮತ್ತೆ (Artificial Intelligence -AI) ಉತ್ಪನ್ನಗಳನ್ನು ಘೋಷಿಸಿದರು. ಇಡೀ ಎಐ ಜೀವನಚಕ್ರವನ್ನು ವ್ಯಾಪಿಸುವ ಸಾಧನಗಳು ಮತ್ತು ಪ್ಲಾಟ್ಫಾರ್ಮ್ಗಳ ಸೂಟ್ ‘ಜಿಯೋ ಬ್ರೈನ್’ ಅನ್ನು ಅಂಬಾನಿ ಘೋಷಿಸಿದರು. ಕಂಪನಿಯು ಗುಜರಾತ್ನ ಜಾಮ್ನಗರದಲ್ಲಿ ಗಿಗಾವ್ಯಾಟ್ ಪ್ರಮಾಣದ ಎಐ-ಸಿದ್ಧ ಡೇಟಾ ಕೇಂದ್ರಗಳನ್ನು ಸ್ಥಾಪಿಸಲು ಯೋಜಿಸುತ್ತಿದೆ. ಇದು ಕಂಪನಿಯ ಹಸಿರು ಇಂಧನ ವ್ಯವಸ್ಥೆಯಿಂದ ಚಾಲಿತವಾಗಿರುತ್ತದೆ ಎಂದು ಅಂಬಾನಿ ಷೇರುದಾರರನ್ನುದ್ದೇಶಿಸಿ ಮಾಡಿದ ಎಜಿಎಂ ಭಾಷಣದಲ್ಲಿ ತಿಳಿಸಿದ್ದಾರೆ. “ಕೃತಕ ಬುದ್ಧಿಮತ್ತೆ (ಎಐ) ಅಳವಡಿಕೆಯನ್ನು ಸುಗಮಗೊಳಿಸಲು, ಜಿಯೋ ಸಂಪೂರ್ಣ ಎಐ ಜೀವನಚಕ್ರವನ್ನು ವ್ಯಾಪಿಸುವ ಸಾಧನಗಳು ಮತ್ತು ಪ್ಲಾಟ್ಫಾರ್ಮ್ಗಳ ಸಮಗ್ರ ಸೂಟ್ ಅನ್ನು ಅಭಿವೃದ್ಧಿಪಡಿಸುತ್ತಿದೆ. ನಾವು ಇದನ್ನು ಜಿಯೋ ಬ್ರೈನ್ ಎಂದು ಕರೆಯುತ್ತೇವೆ” ಎಂದು ಅಂಬಾನಿ ಹೇಳಿದರು. “ದೇಶಾದ್ಯಂತ ನಮ್ಮ ಕ್ಯಾಪ್ಟಿವ್ ಸ್ಥಳಗಳಲ್ಲಿ ಅನೇಕ ಎಐ…
ನವದೆಹಲಿ: ಬ್ಲೂ-ಚಿಪ್ ಷೇರುಗಳು ಮತ್ತು ಸೂಚ್ಯಂಕ ಹೆವಿವೇಯ್ಟ್ ರಿಲಯನ್ಸ್ ಇಂಡಸ್ಟ್ರೀಸ್ನಲ್ಲಿ ದೃಢವಾದ ಖರೀದಿಯ ಮಧ್ಯೆ ಈಕ್ವಿಟಿ ಬೆಂಚ್ಮಾರ್ಕ್ ಸೂಚ್ಯಂಕಗಳು ಗುರುವಾರ ದಾಖಲೆಯ ಗರಿಷ್ಠ ಮಟ್ಟವನ್ನು ತಲುಪಿದವು. 30 ಷೇರುಗಳ ಬಿಎಸ್ಇ ಸೆನ್ಸೆಕ್ಸ್ ಸಾರ್ವಕಾಲಿಕ ಗರಿಷ್ಠ 82,285.83 ಕ್ಕೆ ತಲುಪಿತು ಆದರೆ 349.05 ಪಾಯಿಂಟ್ಗಳು ಅಥವಾ ಶೇಕಡಾ 0.43 ರಷ್ಟು ಏರಿಕೆಯಾಗಿ 82,134.61 ಕ್ಕೆ ಕೊನೆಗೊಂಡಿತು. ಎನ್ಎಸ್ಇ ನಿಫ್ಟಿ ಸೂಚ್ಯಂಕವು ಫ್ಲಾಟ್ ಟಿಪ್ಪಣಿಯಲ್ಲಿ ಪ್ರಾರಂಭವಾಯಿತು ಮತ್ತು ಹೊಸ ಗರಿಷ್ಠ 25,192.90 ಕ್ಕೆ ಏರಿತು. ಇದು 99.60 ಪಾಯಿಂಟ್ ಅಥವಾ ಶೇಕಡಾ 0.40 ರಷ್ಟು ಏರಿಕೆ ಕಂಡು 25,151.95 ಕ್ಕೆ ತಲುಪಿದೆ. ಇಂದು ಸತತ 11 ನೇ ದಿನ ನಿಫ್ಟಿ ಹಸಿರು ಬಣ್ಣದಲ್ಲಿ ಕೊನೆಗೊಂಡಿತು. ವಲಯವಾರು, ನಿಫ್ಟಿ ತೈಲ ಮತ್ತು ಅನಿಲ ಸೂಚ್ಯಂಕವು ಶೇಕಡಾ 0.94 ರಷ್ಟು ಏರಿಕೆ ಕಂಡರೆ, ಎಫ್ಎಂಸಿಜಿ (0.72 ಶೇಕಡಾ) ಮತ್ತು ಆಟೋ (0.54 ಶೇಕಡಾ) ನಂತರದ ಸ್ಥಾನಗಳಲ್ಲಿವೆ. 12 ಬ್ಯಾಂಕಿಂಗ್ ಷೇರುಗಳನ್ನು ಒಳಗೊಂಡ ಬ್ಯಾಂಕಿಂಗ್ ವಲಯವನ್ನು ಟ್ರ್ಯಾಕ್ ಮಾಡುವ…
ಬೆಂಗಳೂರು: ಸಿಎಂ ಸಿದ್ಧರಾಮಯ್ಯ ವಿರುದ್ಧ ರಾಜ್ಯಪಾಲರು ಮುಡಾ ಹಗಣದಲ್ಲಿ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದನ್ನು ಪ್ರಶ್ನಿಸಿ ಸಲ್ಲಿಸಿದ್ದಂತ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ಆಗಸ್ಟ್.31ಕ್ಕೆ ಮುಂದೂಡಿದೆ. ಅಲ್ಲದೇ ಮಧ್ಯಂತರ ಆದೇಶವನ್ನು ಮುಂದುವರೆಸಿದೆ. ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ವಿರುದ್ಧದ ಪ್ರಾಸಿಕ್ಯೂಷನ್ ಅನುಮತಿ ಪ್ರಶ್ನಿಸಿ ಹೈಕೋರ್ಟ್ ನಲ್ಲಿ ಸಲ್ಲಿಸಿದ್ದಂತ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ನಾಗಪ್ರಸನ್ನ ಅವರನ್ನೊಳಗೊಂಡಂತ ನ್ಯಾಯಪೀಠದಲ್ಲಿ ನಡೆಸಲಾಯಿತು. ಹೈಕೋರ್ಟ್ ನ್ಯಾಯಪೀಠದ ಮುಂದೆ ರಾಜ್ಯಪಾಲರು ತರಾತುರಿಯಲ್ಲಿ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ಬಗ್ಗೆ ಸಿಎಂ ಪರ ವಕೀಲ ಅಭಿಷೇಕ್ ಮನು ಸಿಂಘ್ವಿ ಅವರು ಮನವರಿಕೆ ಮಾಡಿಕೊಟ್ಟರು. ಇದಷ್ಟೇ ಅಲ್ಲದೇ ಶಶಿಕಲಾ ಜೊಲ್ಲೆ, ಹೆಚ್.ಡಿ ಕುಮಾರಸ್ವಾಮಿ ಸೇರಿದಂತೆ ವಿವಿಧ ರಾಜಕೀಯ ನಾಯಕರ ವಿರುದ್ಧದ ಪ್ರಾಸಿಕ್ಯೂಷನ್ ಗೆ ಅನುಮತಿ ಕೋರಿ ರಾಜ್ಯಪಾಲರಿಗೆ ಅರ್ಜಿ ಸಲ್ಲಿಸಿದ್ದರೂ ಈವರೆಗೆ ಯಾವುದೇ ಉತ್ತರ ನೀಡಿಲ್ಲ. ಆದರೇ ಸಿದ್ಧರಾಮಯ್ಯ ವಿರುದ್ಧದ ಮುಡಾ ಹಗರಣದಲ್ಲಿ ಅನುಮತಿ ಕೋರಿದ ಕೆಲವೇ ದಿನಗಳಲ್ಲಿ ನೀಡಲಾಗಿದೆ ಎಂಬುದಾಗಿ ವಾದಿಸಿದರು. ಈ ವಾದವನ್ನು ಆಲಿಸಿದ ನಂತ್ರ ಹೈಕೋರ್ಟ್, ಪ್ರತಿವಾದಿಗಳ ವಾದವನ್ನು ಆಲಿಸುವುದಕ್ಕೆ…