Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ಮುಡಾ ಹಗರಣ ಸಂಬಂಧ ಸಿದ್ಧರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿದ್ದನ್ನು ಪ್ರಶ್ನಿಸಿ ಸಲ್ಲಿಸಿದ್ದಂತ ಅರ್ಜಿಯನ್ನು ಹೈಕೋರ್ಟ್ ಇಂದು ವಿಚಾರಣೆ ನಡೆಸಿತು. ಸಿಎಂ ಪರ ವಕೀಲ ಅಭಿಷೇಕ್ ಮನು ಸಿಂಘ್ವಿ ವಾದ ಆಲಿಸಿದಂತ ನ್ಯಾಯಪೀಠವು ಆಗಸ್ಟ್.31ಕ್ಕೆ ವಿಚಾರಣೆಯನ್ನು ಮುಂದೂಡಿದೆ. ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ವಿರುದ್ಧದ ಪ್ರಾಸಿಕ್ಯೂಷನ್ ಅನುಮತಿ ಪ್ರಶ್ನಿಸಿ ಹೈಕೋರ್ಟ್ ನಲ್ಲಿ ಸಲ್ಲಿಸಿದ್ದಂತ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿ ನಾಗಪ್ರಸನ್ನ ಅವರನ್ನೊಳಗೊಂಡಂತ ನ್ಯಾಯಪೀಠದಲ್ಲಿ ನಡೆಸಲಾಯಿತು. ಹೈಕೋರ್ಟ್ ನ್ಯಾಯಪೀಠದ ಮುಂದೆ ರಾಜ್ಯಪಾಲರು ತರಾತುರಿಯಲ್ಲಿ ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವ ಬಗ್ಗೆ ಸಿಎಂ ಪರ ವಕೀಲ ಅಭಿಷೇಕ್ ಮನು ಸಿಂಘ್ವಿ ಅವರು ಮನವರಿಕೆ ಮಾಡಿಕೊಟ್ಟರು. ಇದಷ್ಟೇ ಅಲ್ಲದೇ ಶಶಿಕಲಾ ಜೊಲ್ಲೆ, ಹೆಚ್.ಡಿ ಕುಮಾರಸ್ವಾಮಿ ಸೇರಿದಂತೆ ವಿವಿಧ ರಾಜಕೀಯ ನಾಯಕರ ವಿರುದ್ಧದ ಪ್ರಾಸಿಕ್ಯೂಷನ್ ಗೆ ಅನುಮತಿ ಕೋರಿ ರಾಜ್ಯಪಾಲರಿಗೆ ಅರ್ಜಿ ಸಲ್ಲಿಸಿದ್ದರೂ ಈವರೆಗೆ ಯಾವುದೇ ಉತ್ತರ ನೀಡಿಲ್ಲ. ಆದರೇ ಸಿದ್ಧರಾಮಯ್ಯ ವಿರುದ್ಧದ ಮುಡಾ ಹಗರಣದಲ್ಲಿ ಅನುಮತಿ ಕೋರಿದ ಕೆಲವೇ ದಿನಗಳಲ್ಲಿ ನೀಡಲಾಗಿದೆ ಎಂಬುದಾಗಿ ವಾದಿಸಿದರು.…
ಬೆಂಗಳೂರು: ಸರ್ಕಾರದ ಸಹಯೋಗದಲ್ಲಿ ನಡೆಯುತ್ತಿರುವ ಸಫಲ್ ಸೆಮಿಕಂಡಕ್ಟರ್ ಆಧಾರಿತ 200ಕ್ಕೂ ಹೆಚ್ಚು ಆವಿಷ್ಕಾರಗಳಿಗೆ ಉತ್ತೇಜನ ನೀಡಿದೆ. ಇದೊಂದು ವಿಶಿಷ್ಟ ಮಾದರಿಯಾಗಿದ್ದು, ಗುಜರಾತ್ ಮತ್ತು ತಮಿಳುನಾಡು ರಾಜ್ಯಗಳು ಈಗ ನಮ್ಮ ರಾಜ್ಯದ ಮಾದರಿಯನ್ನೇ ಅಳವಡಿಸಿಕೊಳ್ಳಲು ಮುಂದಾಗಿವೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. https://twitter.com/KarnatakaVarthe/status/1829087011552002467 ಪ್ರಸ್ತುತ, ಭಾರತವು ಜಾಗತಿಕವಾಗಿ ಅರೆವಾಹಕಗಳ ಎರಡನೇ ಅತಿದೊಡ್ಡ ಗ್ರಾಹಕವಾಗಿದೆ. ಸೆಮಿಕಾನ್ನಲ್ಲಿ 2026 ರ ವೇಳೆಗೆ ನಮ್ಮ ಮಾರುಕಟ್ಟೆ ಗಾತ್ರವು 64 ಶತಕೋಟಿ ಡಾಲರ್ ಆಗುವ ನಿರೀಕ್ಷೆಯಿದೆ. ಅದರಲ್ಲೂ ನಮ್ಮ ಎಲೆಕ್ಟ್ರಾನಿಕ್ ಮಾರುಕಟ್ಟೆಯಾದ 5G, 6G, ಮತ್ತು IOT ನಂತಹ ತಂತ್ರಜ್ಞಾನಗಳು ಮತ್ತು ಅಂತರ್ಜಾಲದ ಒಳಹೊಕ್ಕುಗಳ ತ್ವರಿತ ಅಳವಡಿಕೆಯಿಂದಾಗಿ 2025 ರೊಳಗೆ ಬಳಕೆಯು 400 ಶತಕೋಟಿ ಡಾಲರ್ ಆಗಿರಲಿದೆ. ಕರ್ನಾಟಕವು ಭವಿಷ್ಯದ ಬೆಳವಣಿಗೆಗೆ ಸಿದ್ಧವಾಗಿದ್ದು, ಅದರಲ್ಲೂ ಎರಡು ಪ್ರಮುಖ ವಿಷಯಗಳಾದ ಕೌಶಲ್ಯ ಮತ್ತು ನಾವೀನ್ಯತೆಗೆ ಹೆಚ್ಚು ಆದ್ಯತೆ ನೀಡಲಾಗುತ್ತಿದೆ. ಇದು ಕೇವಲ ನಮ್ಮ ಬೇಡಿಕೆಯಲ್ಲ, ಅವಶ್ಯಕತೆಯಾಗಿದೆ. ಏಕೆಂದರೆ 70 ಪ್ರತಿಶತ ವಿನ್ಯಾಸ ಪ್ರತಿಭೆಗಳು ಕರ್ನಾಟಕದಲ್ಲಿದ್ದು, ನಾವಿನ್ಯತೆಯ ಅಭಿವೃದ್ಧಿಗೆ ನಮ್ಮ…
ಬೆಂಗಳೂರು: 2013-14ನೇ ಸಾಲಿನಿಂದ 2021-22ರವರೆಗೆ 5 ಸಾವಿರ ಟನ್ ತುಪ್ಪವನ್ನು ತಿರುಪತಿ ದೇವಸ್ಥಾನಕ್ಕೆ ಸರಬರಾಜು ಮಾಡಲಾಗಿದೆ. ಪ್ರಸಕ್ತ ಸಾಲಿನಲ್ಲಿ ಆರಂಭಿಕವಾಗಿ 350 ಟನ್ ತುಪ್ಪವನ್ನು ಸರಬರಾಜು ಮಾಡಲು ಟೆಂಡರ್ ಮೂಲಕ ಬೇಡಿಕೆ ಬಂದಿದೆ. ಬೇಡಿಕೆಗೆ ಅನುಗುಣವಾಗಿ ಹಸುವಿನ ತುಪ್ಪವನ್ನು ಟ್ಯಾಂಕರ್ ಮೂಲಕ ಸರಬರಾಜು ಮಾಡಲಾಗುತ್ತದೆ ಎಂದು ಕೆಎಂಎಫ್ ತಿಳಿಸಿದೆ. ತಿರುಪತಿ ತಿರುಮಲ ದೇವಸ್ಥಾನದ ಪ್ರಸಾದಕ್ಕೆ ನಮ್ಮ ನಂದಿನಿ ತುಪ್ಪವನ್ನು ಸರಬರಾಜು ಮಾಡಲಾಗುತ್ತಿದ್ದು, ತುಪ್ಪದ ಟ್ಯಾಂಕರ್ ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಗೃಹ ಕಚೇರಿ ಕೃಷ್ಣದಲ್ಲಿ ಚಾಲನೆ ನೀಡಿದರು. KMF ಅಧ್ಯಕ್ಷರಾದ ಭೀಮಾನಾಯಕ್ ಮತ್ತು KMF MD ಜಗದೀಶ್ ಸೇರಿ ಹಲವು ಪ್ರಮುಖರು ಉಪಸ್ಥಿತರಿದ್ದರು. ಕರ್ನಾಟಕ ಸಹಕಾರ ಹಾಲು ಉತ್ಪಾದಕರ ಮಹಾಮಂಡಳವು ಕಳೆದ 05 ದಶಕಗಳಿಂದಲೂ ತನ್ನ ಸದಸ್ಯ ಹಾಲು ಒಕ್ಕೂಟಗಳ ಮೂಲಕ ರಾಜ್ಯದ 24 ಲಕ್ಷಕ್ಕೂ ಹೆಚ್ಚು ಹೈನುಗಾರರಿಂದ ಹಾಲನ್ನು ಖರೀದಿಸಿ, ಸಂಸ್ಕರಿಸಿ, “ಗೋವಿನಿಂದ ಗ್ರಾಹಕರವರೆಗೆ” ಎಂಬ ಶೀರ್ಷಿಕೆಯನ್ನು ಹೊತ್ತು “ನಂದಿನಿ” ಬ್ಯಾಂಡಿನಲ್ಲಿ ಉತ್ಕೃಷ್ಟ ಗುಣಮಟ್ಟದ ವಿವಿಧ ಮಾದರಿಯ ಹಾಲು ಮತ್ತು…
ಮುಂಬೈ : ಜಿಯೋ ಬ್ರೈನ್ ನಿಂದ ಶೀಘ್ರದಲ್ಲೇ ಆರ್ಟಿಫಿಷಿಯಲ್ ಇಂಟೆಲಿಜೆನ್ಸ್ (ಕೃತಕ ಬುದ್ಧಿಮತ್ತೆ) ಪ್ರಾರಂಭಿಸಲು ತಯಾರಿ ನಡೆಸುತ್ತಿದೆ. ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್ನ 47 ನೇ ವಾರ್ಷಿಕ ಸಾಮಾನ್ಯ ಸಭೆಯಲ್ಲಿ ಗುರುವಾರ ಷೇರುದಾರರನ್ನು ಉದ್ದೇಶಿಸಿ ಮಾತನಾಡಿದ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ಮುಕೇಶ್ ಅಂಬಾನಿ ಈ ಮಾಹಿತಿಯನ್ನು ನೀಡಿದ್ದಾರೆ. ಕನೆಕ್ಟೆಡ್ ಇಂಟೆಲಿಜೆನ್ಸ್ ವಿಶ್ವ ದರ್ಜೆಯ ಮೂಲಸೌಕರ್ಯದೊಂದಿಗೆ ಬರುತ್ತದೆ. ಕಂಪನಿಯು “ಎಐ ಎವೆರಿವೇರ್ ಫಾರ್ ಎವರಿಒನ್” ಎಂಬ ಥೀಮ್ ಮೇಲೆ ಇದನ್ನು ಪ್ರಾರಂಭಿಸುತ್ತದೆ. ಸಂಪೂರ್ಣ ಎಐ ಅನ್ನು ಒಳಗೊಂಡಿರುವ ಉಪಕರಣಗಳು ಮತ್ತು ಪ್ಲಾಟ್ಫಾರ್ಮ್ಗಳ ಸಮಗ್ರ ಸೂಟ್ ಅನ್ನು ಅಭಿವೃದ್ಧಿಪಡಿಸುತ್ತಿದೆ – ಇದನ್ನು ‘ಜಿಯೋ ಬ್ರೈನ್’ ಎಂದು ಕರೆಯಲಾಗುತ್ತದೆ. “ರಿಲಯನ್ಸ್ ಜಿಯೋ ಬ್ರೈನ್ ಅನ್ನು ಗಟ್ಟಿಗೊಳಿಸುವ ಮೂಲಕ ನಾವು ಶಕ್ತಿಯುತ ಎಐ ಸೇವೆಗಳ ಪ್ಲಾಟ್ ಫಾರ್ಮ್ ರೂಪಿಸುತ್ತೇವೆ ಎಂಬುದಾಗಿ ನಾನು ಭಾವಿಸುತ್ತೇನೆ,” ಎಂದು ಅಂಬಾನಿ ಹೇಳಿದರು. ನಾವು ಜಾಮ್ನಗರದಲ್ಲಿ ಗಿಗಾವ್ಯಾಟ್-ಪ್ರಮಾಣದ ಎಐ- ಸಿದ್ಧ ಡೇಟಾ ಕೇಂದ್ರವನ್ನು ಸ್ಥಾಪಿಸಲು ಯೋಜಿಸಿದ್ದೇವೆ, ಇದು ಸಂಪೂರ್ಣವಾಗಿ ರಿಲಯನ್ಸ್ನ ಹಸಿರು ಶಕ್ತಿಯಿಂದ…
ಬೆಂಗಳೂರು : ಕೇಂದ್ರದ ಉದ್ದೇಶಿತ ವಖ್ಫ್ ಕಾಯ್ದೆ ತಿದ್ದುಪಡಿ ಪ್ರಸ್ತಾವಕ್ಕೆ ರಾಜ್ಯ ವಖ್ಫ್ ಬೋರ್ಡ್ ವಿರೋಧ ವ್ಯಕ್ತ ಪಡಿಸಿದೆ. ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್, ರಾಜ್ಯ ವಖ್ಫ್ ಬೋರ್ಡ್ ಅಧ್ಯಕ್ಷ ಅನ್ವರ್ ಬಾಷಾ ನೇತೃತ್ವದಲ್ಲಿ ನಡೆದ ವಖ್ಫ್ ಬೋರ್ಡ್ ಆಡಳಿತ ಮಂಡಳಿ ಸಭೆಯಲ್ಲಿ ತಿದ್ದುಪಡಿ ಕಾಯ್ದೆ ಗೆ ವಿರೋಧ ಪಡಿಸಿ ನಿರ್ಣಯ ಕೈಗೊಳ್ಳಲಾಯಿತು. ನಂತರ ಸಚಿವ ಜಮೀರ್ ಅಹಮದ್ ಖಾನ್ ಹಾಗೂ ಮುಖ್ಯಮಂತ್ರಿ ಯವರ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್ ನೇತೃತ್ವದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಈ ಕುರಿತು ನಿರ್ಣಯದ ಪ್ರತಿ ನೀಡಿ ಕೇಂದ್ರಕ್ಕೆ ತಿದ್ದುಪಡಿ ಕಾಯ್ದೆ ವಿರೋಧಿಸಿ ಪತ್ರ ಬರೆಯಲು ಮನವಿ ಮಾಡಿತು. ಕೇಂದ್ರ ಸರ್ಕಾರ ರಚನೆ ಮಾಡಿರುವ ಜಂಟಿ ಸಲಹಾ ಸಮಿತಿ ಗೂ ಯಾವುದೇ ರೀತಿಯ ಮಾಹಿತಿ ಕೊಡುವುದಿಲ್ಲ. ನಮ್ಮದು ಸ್ವಾಯತ್ತ ಸಂಸ್ಥೆ ಯಾಗಿದ್ದು, ಉದ್ದೇಶಿತ ತಿದ್ದುಪಡಿ ಕಾಯ್ದೆ ಸಮುದಾಯದ ಹಿತಾ ಸಕ್ತಿ ಗೆ ವಿರುದ್ದ ವಾಗಿದೆ. ಇದರ ಹಿಂದಿನ ಉದ್ದೇಶ ಬೇರೆ ಇದೆ ಎಂದು…
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ವಿರುದ್ಧ ‘ಶಿವಲಿಂಗದ ಮೇಲೆ ಚೇಳು’ ಹೇಳಿಕೆ ನೀಡಿದ್ದಕ್ಕಾಗಿ ಕಾಂಗ್ರೆಸ್ ಸಂಸದ ಶಶಿ ತರೂರ್ ವಿರುದ್ಧದ ಮಾನನಷ್ಟ ಮೊಕದ್ದಮೆಯನ್ನು ರದ್ದುಗೊಳಿಸಲು ದೆಹಲಿ ಹೈಕೋರ್ಟ್ ನಿರಾಕರಿಸಿದೆ. ಬೆಂಗಳೂರು ಸಾಹಿತ್ಯ ಉತ್ಸವದಲ್ಲಿ ಮಾತನಾಡಿದ ತರೂರ್, ಪ್ರಧಾನಿ ನರೇಂದ್ರ ಮೋದಿ ಅವರನ್ನು ಶಿವಲಿಂಗದ ಮೇಲೆ ಕುಳಿತಿರುವ ಚೇಳಿಗೆ ಹೋಲಿಸಿದ್ದರು. ಆರ್ಎಸ್ಎಸ್ ನಾಯಕರೊಬ್ಬರು ಪ್ರಧಾನಿ ನರೇಂದ್ರ ಮೋದಿಯವರನ್ನು ಶಿವಲಿಂಗದ ಮೇಲೆ ಕುಳಿತಿರುವ ಚೇಳಿಗೆ ಹೋಲಿಸಿದ್ದಾರೆ ಎಂದು ತರೂರ್ ಹೇಳಿದ್ದಾರೆ. “ಮೋದಿ ಶಿವಲಿಂಗದ ಮೇಲೆ ಕುಳಿತಿರುವ ಚೇಳಿನಂತೆ. ನೀವು ಅವನನ್ನು ನಿಮ್ಮ ಕೈಯಿಂದ ತೆಗೆದುಹಾಕಲು ಸಾಧ್ಯವಿಲ್ಲ ಮತ್ತು ನೀವು ಅದನ್ನು ‘ಚಪ್ಪಲಿ’ (ಚಪ್ಪಲಿ) ಯಿಂದ ಹೊಡೆಯಲು ಸಾಧ್ಯವಿಲ್ಲ” ಎಂದು ತರೂರ್ 2012 ರಲ್ಲಿ ಆರ್ಎಸ್ಎಸ್ ಸದಸ್ಯರೊಬ್ಬರು ಪತ್ರಕರ್ತರೊಬ್ಬರಿಗೆ ಹೇಳಿದ್ದನ್ನು ನೆನಪಿಸಿಕೊಂಡರು. ಮೋದಿಯನ್ನು ನಿಗ್ರಹಿಸಲು ತಮ್ಮ ಅಸಮರ್ಥತೆಯ ಬಗ್ಗೆ ಹತಾಶೆಯನ್ನು ವ್ಯಕ್ತಪಡಿಸಿದ ‘ದಿ ಕಾರವಾನ್’ ನ ಪತ್ರಕರ್ತ ವಿನೋದ್ ಜೋಸ್ಗೆ ಅನಾಮಧೇಯ ಆರ್ಎಸ್ಎಸ್ ಮೂಲವು ವ್ಯಕ್ತಪಡಿಸಿದ ಅಸಾಧಾರಣ ಆಕರ್ಷಕ ರೂಪಕವಿದೆ ಎಂದು ಅವರು ಹೇಳಿದರು. https://kannadanewsnow.com/kannada/state-lacks-rs-80000-crore-in-last-five-years-siddaramaiah/…
ಬೆಂಗಳೂರು : ರಾಜ್ಯಕ್ಕೆ ಕಳೆದ ಐದು ವರ್ಷಗಳಿಂದ ವಿಶೇಷ ಅನುದಾನ ಹಾಗೂ ತೆರಿಗೆ ಹಂಚಿಕೆಯಲ್ಲಿ 80,000 ಕೋಟಿ ಅನುದಾನ ಕಡಿಮೆಯಾಗಿದೆ. ಇದನ್ನು ಸರಿಪಡಿಸಬೇಕೆಂದು 16ನೇ ಹಣಕಾಸು ಆಯೋಗವನ್ನು ಕೋರಲಾಗಿದ್ದು, ಆಯೋಗವು ಸಕಾರಾತ್ಮಕವಾಗಿ ಸ್ಪಂದಿಸಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ತಾಜ್ ವೆಸ್ಟೆಂಡ್ ಹೋಟೆಲ್ ಬಳಿ ಮಾಧ್ಯಮದವರೊಂದಿಗೆ ಮಾತನಾಡಿದರು. ಡಿವಿಸಿಬಲ್ ಪೂಲ್ ಗೆ ಸೆಸ್ ಮತ್ತು ಸರ್ಜಾಜ್ ನ್ನು ಸೇರಿಸಬೇಕೆಂದು ಹಾಗೂ ಭಾರತ ಸರ್ಕಾರಕ್ಕೆ ಬರುವ ತೆರಿಗೆಯೇತರ ಆದಾಯವನ್ನೂ ಸಹ ಡಿವಿಸಿಬಲ್ ಪೂಲ್ ಗೆ ಸೇರಿಸಬೇಕೆಂದು ಕೋರಲಾಗಿದೆ. ಕಲ್ಯಾಣ ಕರ್ನಾಟಕ ಪ್ರದೇಶಕ್ಕೆ ರಾಜ್ಯ ಸರ್ಕಾರ ಪ್ರತಿ ವರ್ಷ 5000 ಕೋಟಿ ಯಂತೆ ಐದು ವರ್ಷಕ್ಕೆ 25,000 ಕೋಟಿ ರೂ. ಖರ್ಚು ಮಾಡಲಾಗುತ್ತಿದ್ದು, ಕೇಂದ್ರ ಸರ್ಕಾರವೂ ಇದಕ್ಕೆ ಅನುರೂಪದ ಅನುದಾನ ನೀಡಬೇಕೆಂದು ಕೋರಲಾಗಿದೆ. ಬೆಂಗಳೂರು ಅಭಿವೃದ್ಧಿಗೆ ಸುಮಾರು 55,000 ಕೋಟಿ ರೂ. ವೆಚ್ಚವಾಗಲಿದ್ದು, ಈ ಮೊತ್ತದ ಅರ್ಧದಷ್ಟಾದರೂ ಅನುದಾನ ನೀಡಬೇಕೆಂದು ಕೋರಲಾಗಿದೆ ಎಂದರು. ಪಶ್ಚಿಮ ಘಟ್ಟ ವಿಪತ್ತು ನಿರ್ವಹಣೆಗೆ ಹೆಚ್ಚಿನ ಅನುದಾನ ನೀಡಲು…
ಬೆಂಗಳೂರು: ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 16ನೇ ಹಣಕಾಸು ಆಯೋಗದ ಅಧ್ಯಕ್ಷರು ಹಾಗೂ ಸದಸ್ಯರೊಂದಿಗಿನ ಸಭೆಯಲ್ಲಿ ನಡೆಸಿದರು. ದಿನಾಂಕ 29-08-2024ರಂದು ಹೋಟೆಲ್ ತಾಜ್ ವೆಸ್ಟೆಂಡ್ ಹೋಟೆಲ್ ನಲ್ಲಿ ನಡೆಸಿದರು. ಆ ಸಭೆಯ ಪ್ರಮುಖ ಹೈಲೈಟ್ಸ್ ಮುಂದೆ ಓದಿ. 1. ಕರ್ನಾಟಕ ಸರ್ಕಾರದ ಪರವಾಗಿ ನಾನು 16ನೇ ಹಣಕಾಸು ಆಯೋಗದ ಅಧ್ಯಕ್ಷ ಡಾ.ಅರವಿಂದ ಪನಗಾರಿಯಾ ಅವರನ್ನು ಹಾರ್ದಿಕವಾಗಿ ಸ್ವಾಗತಿಸುತ್ತೇನೆ, ಇದೇ ರೀತಿ ಆಯೋಗದ ಗೌರವಾನ್ವಿತ ಸದಸ್ಯರಾದ ಶ್ರೀ.ಅಜಯ್ ನಾರಾಯಣ ಝಾ, ಶ್ರೀಮತಿ ಅನ್ನಿ ಜಾರ್ಜ್ ಮ್ಯಾಥ್ಯೂ, ಡಾ.ಮನೋಜ್ ಪಾಂಡಾ ಮತ್ತು ಡಾ.ಸೌಮ್ಯ ಕಾಂತಿ ಘೋಷ್ ಅವರನ್ನು ಸ್ವಾಗತಿಸುತ್ತೇನೆ. 2. ರಾಜ್ಯಕ್ಕೆ ಭೇಟಿ ನೀಡಿರುವುದಕ್ಕಾಗಿ ನಾನು ಹಣಕಾಸು ಆಯೋಗಕ್ಕೆ ಅಭಾರಿಯಾಗಿದ್ದೇನೆ. ಇಂದಿನ ಮಹತ್ವದ ಈ ಸಭೆಯಲ್ಲಿ ನಡೆಯುವ ಚರ್ಚೆಗಳಿಂದ ನಾವು ಎದುರಿಸುತ್ತಿರುವ ಹಲವು ಸವಾಲುಗಳಿಗೆ ಉತ್ತರ ಕಂಡು ಕೊಳ್ಳಲು ಹಾಗೂ ದೇಶದ ಪೂರ್ಣ ಸಾಮರ್ಥ್ಯವನ್ನು ಅರಿಯಲು ಸಾಧ್ಯವಾಗಲಿದೆ ಎಂಬ ವಿಶ್ವಾಸ ನನಗಿದೆ. 3. ಪ್ರಧಾನಿಯವರು ತಿಳಿಸಿರುವ ʻಸಹಕಾರಿ ಒಕ್ಕೂಟʼ ವನ್ನು ಉತ್ತೇಜಿಸಲು ನಮ್ಮ ದೇಶದ ಸಂವಿಧಾನದಲ್ಲಿ…
ಬೆಂಗಳೂರು : ಕೋಲಾರದ ಸಾಮಾನ್ಯ ಬಡ ಕುಟುಂಬದ ಗೃಹಿಣಿ ಜಯಸುಧಾ ಜೀವನ ನಡೆಸಲು ಕಷ್ಟವಾಗುತಿತ್ತು. ಆಕೆಗೆ ಮೂರು ಬೆಳೆದು ನಿಂತ ಮಕ್ಕಳಿದ್ದರು. ನಿತ್ಯದ ಬದುಕಿನ ಅಗತ್ಯಗಳನ್ನು ಪೂರೈಸಿಕೊಳ್ಳಲು ಜಯಸುಧಾ ಅವರಿಗೆ ಸಾಧ್ಯವಾಗುತ್ತಿರಲಿಲ್ಲ. ಹೀಗಿರಲಾಗಿ ಭರವಸೆಯನ್ನೇ ಕಳೆದುಕೊಂಡಿದ್ದ ಜಯಸುಧಾ ಅವರಿಗೆ ಹೇಗೋ ಸರ್ಕಾರದ “ಸ್ವಾವಲಂಭನೆ” ಯೋಜನೆಯ ಪರಿಚಯವಾಗುತ್ತದೆ. ಈ ಯೋಜನೆಯಡಿಯಲ್ಲಿ ಸ್ವಸಹಾಯ ಗುಂಪುಗಳಲ್ಲಿನ ಮಹಿಳೆಯರ ಉದಮಶೀಲತೆಯ ಉತ್ಸಾಹವನ್ನು ಪೋಷಿಸುವ ಅವಕಾಶಗಳಿಗೆ ಆಕೆ ತೆರೆದುಕೊಂಡರು. ಕರ್ನಾಟಕ ರಾಷ್ಟೀಯ ಜೀವನೋಪಾಯ ಇಲಾಖೆಯ ಈ ಯೋಜನೆಯು ಜಯಸುಧಾ ಅವರ ಬದುಕನ್ನೇ ಬದಲಿಸಿಬಿಟ್ಟಿದೆ. ಆಕೆ ಅಡುಗೆ ಹಾಗೂ ಆರೋಗ್ಯ ಸಂಬಂಧಿಸಿದ ಉತ್ಪನ್ನಗಳನ್ನು ತಯಾರಿಸಿ ಮಾರಾಟ ಮಾಡಲು ತೊಡಗಿದರು. ಇದೀಗ ಜಯಸುಧಾ ವಾರ್ಷಿಕ ಎರಡು ಲಕ್ಷ ರೂಪಾಯಿಗಳಷ್ಟು ವಹಿವಾಟು ನಡೆಸುತ್ತಿದ್ದಾರೆ. ಎರಡು ದಿನಗಳ ಕಾಲ ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ನಡೆದ “ ಉದ್ಯಮಶೀಲ ಮಹಿಳೆಯರ ರಾಷ್ಟ್ರ ಮಟ್ಟದ ಸಮಾವೇಶದಲ್ಲಿ ಜಯಸುಧಾ ಅವರಂತೆ ಸುಮಾರು 150 ಮಹಿಳೆಯರು ತಮ್ಮ ಯಶೋಗಾಥೆಯುನ್ನು ಹೇಳಿಕೊಂಡರು. ಸಮಾವೇಶವನ್ನು ಉದ್ಘಾಟಿಸಿದ ಕೌಶಲ್ಯಾಭಿವೃದ್ಧಿ, ಜೀವನೋಪಾಯ ಮತ್ತು ವೈಧ್ಯಕ್ಷೀಯ…
ನವದೆಹಲಿ: ಟ್ರಾನ್ಸ್ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ, 2019 ರ ಅಡಿಯಲ್ಲಿ ಜಿಲ್ಲಾ ಮ್ಯಾಜಿಸ್ಟ್ರೇಟ್ ನೀಡಿದ ಗುರುತಿನ ಪ್ರಮಾಣಪತ್ರವನ್ನು ಪ್ಯಾನ್ ಕಾರ್ಡ್ಗೆ ಅರ್ಜಿ ಸಲ್ಲಿಸಲು ಮಾನ್ಯ ದಾಖಲೆಗಳಾಗಿ ಪರಿಗಣಿಸಬಹುದು ಎಂದು ಕೇಂದ್ರವು ಸುಪ್ರೀಂ ಕೋರ್ಟ್ಗೆ ತಿಳಿಸಿದೆ. ನ್ಯಾಯಮೂರ್ತಿಗಳಾದ ಸುಧಾಂಶು ಧುಲಿಯಾ ಮತ್ತು ಅಹ್ಸಾನುದ್ದೀನ್ ಅಮಾನುಲ್ಲಾ ಅವರ ನ್ಯಾಯಪೀಠವು ಕೇಂದ್ರವು ಈ ಮನವಿಯನ್ನು ತಾತ್ವಿಕವಾಗಿ ಸ್ವೀಕರಿಸಿದೆ ಮತ್ತು ಹೆಚ್ಚಿನ ಸ್ಪಷ್ಟತೆಯನ್ನು ತರಲು ಇದನ್ನು ನಿಯಮಗಳಲ್ಲಿ ಸೇರಿಸಲು ಪರಿಗಣಿಸಬಹುದು ಎಂದು ಗಮನಿಸಿದೆ. ಬಿಹಾರ ಮೂಲದ ಸಾಮಾಜಿಕ ಕಾರ್ಯಕರ್ತೆ ರೇಷ್ಮಾ ಪ್ರಸಾದ್ ಸಲ್ಲಿಸಿದ್ದ ಅರ್ಜಿಗೆ ಪ್ರತಿಕ್ರಿಯೆ ನೀಡುವಂತೆ ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರಕ್ಕೆ ಸೂಚಿಸಿತ್ತು. ಆಧಾರ್ ಕಾರ್ಡ್ಗಳಿಗೆ ಲಭ್ಯವಿರುವಂತೆ ಪ್ಯಾನ್ ಕಾರ್ಡ್ಗಳಲ್ಲಿ ಪ್ರತ್ಯೇಕ ತೃತೀಯ ಲಿಂಗಿ ವರ್ಗದ ಆಯ್ಕೆಯನ್ನು ರಚಿಸಲು ಉನ್ನತ ನ್ಯಾಯಾಲಯದಿಂದ ಕೇಂದ್ರಕ್ಕೆ ನಿರ್ದೇಶನ ನೀಡುವಂತೆ ಅರ್ಜಿಯಲ್ಲಿ ಕೋರಲಾಗಿತ್ತು, ಇದರಿಂದ ತೃತೀಯ ಲಿಂಗಿಗಳು ನಿಖರವಾದ ಗುರುತಿನ ಪುರಾವೆಗಳನ್ನು ಪಡೆಯಲು ಅದನ್ನು ಆಧಾರ್ನೊಂದಿಗೆ ಲಿಂಕ್ ಮಾಡಬಹುದು. ಟ್ರಾನ್ಸ್ಜೆಂಡರ್ ಸಮುದಾಯಕ್ಕೆ ಸೇರಿದ ಪ್ರಸಾದ್, ಪ್ಯಾನ್ ಕಾರ್ಡ್ಗೆ ‘ಮೂರನೇ…